Author: kannadanewsnow09

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 451ರಲ್ಲಿ “ಕೃತಕ ಬುದ್ಧಿಮತ್ತೆ (ಎಐ) ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಹಾಗೂ ಮುಖ ಚಹರೆ ಗುರುತಿಸುವ ಅಪ್ಲಿಕೇಶನ್‌ಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಎಲ್ಲಾ ಇಲಾಖೆಗಳಲ್ಲಿ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜೆಂಟ್ ಸಿಸ್ಟಮ್ (ಕರ್ತವ್ಯ ಕೆ.ಎ.ಎ.ಎಂ.ಎಸ್) ಅನ್ನು ಜಾರಿಗೆ ತರಲಾಗುವುದು” ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ ಎಂದಿದ್ದಾರೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಎಲ್ಲಾ ಸಿಬ್ಬಂದಿಗೆ ಕರ್ತವ್ಯ (KAAMS) ಮೊಬೈಲ್ ಅಪ್ಲಿಕೇಶನ್ ಮೂಲಕ ಹಾಜರಾತಿಯನ್ನು ನಿರ್ವಹಿಸಲು ಪ್ರಸ್ತಾಪಿಸಲಾಗಿದ್ದು, ರಾಜ್ಯ ಸರ್ಕಾರಿ ನೌಕರರು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನೋಡ್ ಮಾಡಿಕೊಳ್ಳಬಹುದು…

Read More

ಶಿವಮೊಗ್ಗ: ಸಾಗರ ತಾಲ್ಲೂಕಿನ ಆನಂದಪುರದ ಶ್ರೀ ಕಡ್ಲೆಹಂಕ್ಲು ಮಾರಿಕಾಂಬ ಜಾತ್ರಾ ಮಹೋತ್ಸವವನ್ನು ಮಾರ್ಚ್.10ರಿಂದ 16ರವರೆಗೆ ನಡೆಸಲಾಗುತ್ತಿದೆ. ಜಾತ್ರಾ ಸಮಿತಿಯಲ್ಲಿ ಅನುಭವಿಗಳಿದ್ದು, ಉತ್ತಮವಾಗಿ ನಡೆಸುತ್ತಾರೆ. ಆನಂದಪುರ ಮಾರಿ ಜಾತ್ರೆಯಲ್ಲಿ ಯಾವುದೇ ಕಾರಣಕ್ಕೂ ಸಾಗರದ ಮಾರಿ ಜಾತ್ರೆಯಲ್ಲಿ ರಾಜಕೀಯ ಬೆರೆಸಿದಂತೆ ಮಾಡೋದಕ್ಕೆ ಬಿಡೋದಿಲ್ಲ. ನಾವು ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡೋದು ಇಲ್ಲ ಎಂಬುದಾಗಿ ಬಿಜೆಪಿ ಮುಖಂಡ, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ರತ್ನಾಕರ ಹೊನಗೋಡು ತಿಳಿಸಿದರು. ಶಿವಮೊಗ್ಗದ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರತಿ ಮೂರು ವರ್ಷ ಆನಂದಪುರ ಮಾರಿಕಾಂಬ ಜಾತ್ರೆಯನ್ನು ಮಾಡಲಾಗುತ್ತಿದೆ. ಪ್ರತಿ ಬಾರಿಯೂ ನೀಟಾಗಿ ಜಾತ್ರೆ ಮಾಡಿಕೊಂಡು ಬಂದಿದ್ದಾರೆ. ಆನಂದಪುರದ ಅಕ್ಕ ಪಕ್ಕದ ಹಳ್ಳಿಯ ಜನರು ಸಮಿತಿಯಲ್ಲಿ ಇದ್ದಾರೆ. ಈಗಾಗಲೇ ಎರಡು ಮೂರು ಬಾರಿ ಸಭೆ ನಡೆಸಿ ಚರ್ಚಿಸಲಾಗಿದೆ. ಆನಂದಪುರದ ಮಾರಿಜಾತ್ರೆಗೆ ಗ್ರಾಮ ಪಂಚಾಯ್ತಿಗಳಿಂದಲೂ ಸೂಕ್ತ ಬೆಂಬಲ ನೀಡಿದ್ದಾರೆ ಎಂದರು. ಆನಂದಪುರದ ಪಂಚಾಯ್ತಿಯಿಂದ ಒಳ್ಳೆಯ ನಿರ್ಧಾರ ಕೈಗೊಳ್ಳಲಾಗಿದೆ. ಸಾಗರದ ಮಾರಿಕಾಂಬ ಜಾತ್ರೆಯಲ್ಲಿ ಫ್ಲೆಕ್ಸ್…

Read More

ಚಿತ್ರದುರ್ಗ: ರಾಜ್ಯದ ಇತಿಹಾಸದಲ್ಲೇ ಬಹುದೊಡ್ಡ ಗೋಲ್ಮಾಲ್ ಎನ್ನುವಂತೆ ಒಂದೇ ದಿನದಲ್ಲಿ ಅರ್ಜಿ ಪಡೆದು, ಷೇರು ಕಟ್ಟಿಸಿಕೊಂಡು ಬರೋಬ್ಬರಿ 5,000ಕ್ಕೂ ಹೆಚ್ಚು ಷೇರುಗಳನ್ನು ಅಂಗೀಕರಿಸಿರುವಂತದ್ದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಹಿರಿಯೂರು ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘ ನಿಯಮಿತವಿದೆ. ಸಹಕಾರ ಸಂಘಗಳ ಅಡಿಯಲ್ಲಿ ಬರುವಂತ ಇದರಲ್ಲಿ ನಿಯಮಗಳನ್ನೇ ಗಾಳಿಗೆ ತೂರಿ ಷೇರು ಹಾಕಿಸಿಕೊಂಡಿರೋದಾಗಿ ಆರೋಪಿಸಲಾಗಿದೆ. ಈ ಸಂಬಂಧ ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯರಾದಂತ ಬಿ.ಸಿರಿಯಪ್ಪ ಎಂಬುವರು ಚಿತ್ರದುರ್ಗದ ಸಹಕಾರ ಸಂಘಗಳ ಉಪನಿಬಂಧಕರಿಗೆ ನೀಡಿದ್ದಾರೆ. ಅದರಲ್ಲಿ ದಿನಾಂಕ 04-12-2025ರಂದು ಸುಮಾರು 3000 ದಿಂದ 3,500 ಅರ್ಜಿಗಳನ್ನು ದಿನಾಂಕ 08-02-2026ರಂದು ನಡವಳಿ ಪುಸ್ತಕದಲ್ಲಿ ಒಂದೇ ದಿನದಲ್ಲಿ ಬರೆದು, ಇಷ್ಟು ಅರ್ಜಿಗಳನ್ನು ದಾಖಲೆ ಸಮೇತ ಕ್ರೂಢೀಕರಿಸಿರುವುದು ಅಸಾಧ್ಯವಾಗಿದೆ. ಆದ್ದರಿಂದ ಅಂತಹ ಅರ್ಜಿಗಳನ್ನು ದಾಖಲೆಗಳು ಇಲ್ಲದೇ ಹಾಗೂ ಆ ದಿನಾಂಕಕ್ಕೆ ಹಣ ಪಾವತಿಸದೇ ಷೇರು ಅರ್ಜಿಗಳನ್ನು ಅಂಗೀಕರಿಸಿರುತ್ತಾರೆ ಎಂಬುದಾಗಿ ಆರೋಪಿಸಿದ್ದಾರೆ. ಈ ಷೇರು ಅರ್ಜಿಯಲ್ಲಿ ಸಿರಿಯಪ್ಪ ಮತ್ತು…

Read More

ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮದ ಧಾರಣಾ ಸಾಮರ್ಥ್ಯವನ್ನು (Eco-Tourism carrying capacity) ವೈಜ್ಞಾನಿಕವಾಗಿ ನಿಗದಿ ಪಡಿಸಲು ರಚಿಸಲಾಗಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಾಂತ್ರಿಕ ಸಮಿತಿ ನೀಡಿರುವ ಪ್ರಾಥಮಿಕ ವರದಿಯ ಪರಾಮರ್ಶೆ ನಡೆಸಿದರು. ಹೆಗ್ಗಡ ದೇವನಕೋಟೆಯಲ್ಲಿ ರೈತರೂ ಸೇರಿದಂತೆ ಸಾವಿರಾರು ಸ್ಥಳೀಯರು, ರೆಸಾರ್ಟ್ ಸಿಬ್ಬಂದಿ ಪ್ರತಿಭಟನೆ ನಡೆಸಿ ಸಫಾರಿ ನಿಲ್ಲಿಸಿರುವುದರಿಂದ ತಮ್ಮ ಜೀವನೋಪಾಯಕ್ಕೆ ಅಡ್ಡಿಯಾಗಿದ್ದು, ಸಫಾರಿ ಪುನಾರಂಭಿಸಬೇಕು ಎಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಮಾಧ್ಯಮಗಳಲ್ಲಿ…

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 451ರಲ್ಲಿ “ಕೃತಕ ಬುದ್ಧಿಮತ್ತೆ (ಎಐ) ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಹಾಗೂ ಮುಖ ಚಹರೆ ಗುರುತಿಸುವ ಅಪ್ಲಿಕೇಶನ್‌ಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಎಲ್ಲಾ ಇಲಾಖೆಗಳಲ್ಲಿ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜೆಂಟ್ ಸಿಸ್ಟಮ್ (ಕರ್ತವ್ಯ ಕೆ.ಎ.ಎ.ಎಂ.ಎಸ್) ಅನ್ನು ಜಾರಿಗೆ ತರಲಾಗುವುದು” ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ ಎಂದಿದ್ದಾರೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಎಲ್ಲಾ ಸಿಬ್ಬಂದಿಗೆ ಕರ್ತವ್ಯ (KAAMS) ಮೊಬೈಲ್ ಅಪ್ಲಿಕೇಶನ್ ಮೂಲಕ ಹಾಜರಾತಿಯನ್ನು ನಿರ್ವಹಿಸಲು ಪ್ರಸ್ತಾಪಿಸಲಾಗಿದ್ದು, ರಾಜ್ಯ ಸರ್ಕಾರಿ ನೌಕರರು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನೋಡ್ ಮಾಡಿಕೊಳ್ಳಬಹುದು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರ ಹಿಂಬಾಕಿ ವೇತನ, ವೇತನ ಪರಿಷ್ಕರಣೆಯನ್ನು ಮಾಡಿ ಅಧಿಕೃತ ಆದೇಶ ಮಾಡಿದೆ. ಇದರ ನಡುವೆಯೂ ನಾಳೆ ಬೆಂಗಳೂರು ಚಲೋ ಫಿಕ್ಸ್ ಆಗಿದೆ. ಇಂದು ನಿಗದಿಯಂತೆ ಬೆಂಗಳೂರು ಚಲೋ ನಡೆಯಲಿದೆ ಎಂಬುದಾಗಿ ಸಾರಿಗೆ ನೌಕರರ ಮುಖಂಡ ಜಗದೀಶ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಸಾರಿಗೆ ನೌಕರರ ಮುಖಂಡ ಜಗದೀಶ್ ಮಾಹಿತಿ ನೀಡಿದ್ದು, ನಮಗೆ ಇನ್ನೂ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಇಂದು 5ರಿಂದ 10 ಸಾವಿರ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಸೇರಲಿದ್ದಾರೆ. ರಾಜ್ಯ ಸರ್ಕಾರವು 38 ತಿಂಗಳ ಹಿಂಬಾಕಿ ಕೊಡಲೇಬೇಕು ಎಂದು ಆಗ್ರಹಿಸಿದರು. 2024ರಿಂದ ವೇತನ ಪರಿಷ್ಕರಣೆ ಆಗಬೇಕೆನ್ನುವುದು ನಮ್ಮ ಕನಸಾಗಿತ್ತು. ಕಾರ್ಮಿಕ ಮುಖಂಡ ದಿವಂಗತ ಅನಂತ ಸುಬ್ಬರಾವ್ ಅವರ ಕನಸು ಕೂಡ ಇದೇ ಆಗಿತ್ತು. ಸರ್ಕಾರದ ನಿರ್ಧಾರದಿಂದ ಸಿಬ್ಬಂದಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಲಿದೆ. ಮುಷ್ಕರದ ಬಗ್ಗೆ ಇಂದು ಸಂಜೆ 4 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಿದ್ದು, 2026ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗೆ ದಿನಾಂಕ 21-02-2026ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-03-2026 ಆಗಿದೆ. ಅರ್ಜಿ ಶುಲ್ಕ ಪಾವಲತಿಸಲು ಕೊನೆಯ ದಿನಾಂಕ 23-03-2026 ಆಗಿದೆ. ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ http://www.kpsc.kar.nic.in ಭೇಟಿ ನೀಡುವಂತೆ ತಿಳಿಸಿದೆ. ಸರ್ಕಾರಿ ನೌಕರರು, ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿವಿ, ಪ್ರಾಧಿಕಾರಗಳ ಖಾಯಂ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಗ್ರೂಪ್-ಡಿ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದಿದೆ. https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/

Read More

ಬೆಂಗಳೂರು : ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (As a one time messure) 5 ವರ್ಷಗಳ ಸಡಿಲಿಕೆ ನೀಡಿ ಸರ್ಕಾರವು 2026 ನೇ ಜನವರಿ 29 ರಂದು ಆದೇಶ ಹೊರಡಿಸಿದೆ. ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳು ಮನವಿ ಸಲ್ಲಿಸಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿರುತ್ತಾರೆ. ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಕೆ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/

Read More

ಬೆಂಗಳೂರು: ರಾಜ್ಯ ಸರ್ಕಾರವು ಸಾರಿಗೆ ನೌಕರರ ಒತ್ತಾಯಕ್ಕೆ ಮಣಿದಿದೆ. ಇಂದು 26 ತಿಂಗಳ ಹಿಂಬಾಗಿ ನೀಡಲು ನಿರ್ಧರಿಸಿದೆ. ಅಲ್ಲದೇ ಮಾರ್ಚ್.1, 2025ರಿಂದ ವೇತನ ಹೆಚ್ಚಿಸಲು ನಿರ್ಧರಾವನ್ನು ಕೈಗೊಂಡು ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದ್ದು, ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ 1950ರ ಸೆಕ್ಷನ್ 34(1)ರನ್ವಯ ದಿನಾಂಕ:01.03.2023ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಕಿಂಕೋ ಅಧಿಕಾರಿಗಳ/ ನೌಕರರು ದಿನಾಂಕ:31.12.2019ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇಕಡ 15 ರಷ್ಟು ಹೆಚ್ಚಿಸಿ ದಿನಾಂಕ:01.03.2023ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಿಸಿ ಆದೇಶಿಸಲಾಗಿತ್ತು ಎಂದಿದೆ. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಇವರು ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ಮೂಲವೇತನವನ್ನು ಪರಿಷ್ಕರಿಸಲು ಹಾಗೂ ಉನ್ನತ ವೇತನ ಶ್ರೇಣಿ,…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದೇ ಹೊತ್ತಿನಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲ ನಿವಾರಣೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಲು ಶಿಕ್ಷಣ ಇಲಾಖೆಯಿಂದ 080 23310076, 080 23310075 ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಕರೆ ಮಾಡಿ, ಪರೀಕ್ಷೆ ಬಗೆಗಿನ ಗೊಂದಲ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂಬುದಾಗಿ ತಿಳಿಸಿದೆ. https://twitter.com/KarnatakaVarthe/status/2024113999554527537 ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಏ.7ಕ್ಕೆ, SSLC ಪರೀಕ್ಷೆ-1ರದ್ದು ಏ.24ಕ್ಕೆ ಪ್ರಕಟ ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 28-02-2026ರಿಂದ ಆರಂಭಗೊಂಡು, 17-03-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರದ್ದು ದಿನಾಂಕ 18-03-2026ರಿಂದ ಆರಂಭಗೊಂಡು, 02-04-2026ಕ್ಕೆ ಮುಕ್ತಾಯಗೊಳ್ಳಲಿದೆ. ಈ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ನಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ…

Read More