Author: kannadanewsnow09

ನವದೆಹಲಿ : 2027 ರ ಜನಗಣತಿಯ ಮೊದಲ ಹಂತ – ಮನೆ ಪಟ್ಟಿ ಕಾರ್ಯಾಚರಣೆಗಳು – ಈ ವರ್ಷ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವು ನಿರ್ದಿಷ್ಟಪಡಿಸಿದ 30 ದಿನಗಳ ಅವಧಿಯಲ್ಲಿ ನಡೆಯಲಿದೆ ಎಂದು ಸರ್ಕಾರಿ ಅಧಿಸೂಚನೆ ಬುಧವಾರ ತಿಳಿಸಿದೆ. 30 ದಿನಗಳ ಮನೆ ಪಟ್ಟಿ ಕಾರ್ಯಾಚರಣೆಗಳು ಪ್ರಾರಂಭವಾಗುವ ಮೊದಲು 15 ದಿನಗಳ ಅವಧಿಯಲ್ಲಿ ಸ್ವಯಂ ಎಣಿಕೆ ಮಾಡುವ ಆಯ್ಕೆಯೂ ಇರುತ್ತದೆ ಎಂದು ಗೃಹ ಸಚಿವಾಲಯ (ಎಂಎಚ್‌ಎ) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. 2021 ರಲ್ಲಿ ನಡೆಯಬೇಕಿದ್ದ ದಶಕದ ವ್ಯಾಯಾಮವನ್ನು COVID-19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಯಿತು. ದೇಶದ ಜನಸಂಖ್ಯೆಯ ಸಂಖ್ಯೆಯನ್ನು ನೀಡುವ ಬೃಹತ್ ವ್ಯಾಯಾಮವನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು – ಮನೆ ಪಟ್ಟಿ ಮತ್ತು ವಸತಿ ಜನಗಣತಿ ಏಪ್ರಿಲ್ ನಿಂದ ಸೆಪ್ಟೆಂಬರ್, 2026 ರವರೆಗೆ; ಮತ್ತು ಫೆಬ್ರವರಿ 2027 ರಲ್ಲಿ ಜನಸಂಖ್ಯಾ ಎಣಿಕೆ (PE). ಮನೆಪಟ್ಟಿ ಮತ್ತು…

Read More

ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್, ಕರ್ನಾಟಕ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಬಾಬು, ಮುನಿಯಪ್ಪ ಮೊದಲಾದ ಕಾನೂನು ತಜ್ಞರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿತ್ತು. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ಸಂಸದ ಅಭಿಷೇಕ್ ಮನು ಸಿಂಘ್ವಿ ಹಾಗೂ ಸಲ್ಮಾನ್ ಖುರ್ಷಿದ್ ಅವರು ಕರ್ನಾಟಕದ ಈ ನಾಯಕರ ಜೊತೆ ಇಡೀ ದಿನ ಸರಣಿ ಸಭೆಗಳನ್ನು ನಡೆಸಿದರು. ದೇಶದ ಎಲ್ಲೆಡೆ ಕಾನೂನು ಘಟಕಗಳನ್ನು ಬಲಗೊಳಿಸಬೇಕು,…

Read More

ಬೆಂಗಳೂರು: ಕುಡಿಯುವ ನೀರಿನ ಮಾಲಿನ್ಯವನ್ನು ಸರಬರಾಜಿಗೂ ಮುನ್ನ ಪತ್ತೆಹಚ್ಚಲು, ಜೈವಿಕ ಮೇಲ್ವಿಚಾರಣೆಯ ಮೇಲೆ ಕೇಂದ್ರೀಕರಿಸಿದ ಸುಧಾರಿತ ನೀರಿನ ತಂತ್ರಜ್ಞಾನ ಪರಿಹಾರಗಳ ಮೇಲೆ ಕೆಲಸ ಮಾಡುವ ಸಿಂಗಾಪುರ ಮೂಲದ (ಜ್ವೆಕ್) ZWEEC ತಂಡವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಸಮಾಲೋಚನೆ ನಡೆಸಿದರು. ನೀರಿನ ಸುರಕ್ಷತೆ ಮತ್ತು ಪರಿಸರ ಮೇಲ್ವಿಚಾರಣೆಯನ್ನು ಬಲಪಡಿಸಲು ಸ್ವಯಂಚಾಲಿತ ಮತ್ತು ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳನ್ನು ಬಳಸುವುದರ ಮೇಲೆ ಈ ವಿಧಾನವು ಕೇಂದ್ರೀಕರಿಸುತ್ತದೆ. ಕರ್ನಾಟಕದ ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆಗೆ ಸಿಂಗಾಪುರ ತಂತ್ರಜ್ಞಾನ ಹೇಗೆ ಪ್ರಸ್ತುತವಾಗಬಹುದು ಎಂಬುದನ್ನು ಸಚಿವರು ದರಲ್ಲದೆ, ಸಂಸ್ಥೆ ವಿವರಿಸಿದ ಪರಿಹಾರಗಳನ್ನು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸಹಭಾಗಿತ್ವದಲ್ಲಿ ವಿವರವಾಗಿ ಮೌಲ್ಯಮಾಪನ ಮಾಡಲಾಗುವುದು ಮತ್ತು ಈ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲು ಮಾದರಿ ಯೋಜನೆಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಲ…

Read More

ಮಂಡ್ಯ : ಮದ್ದೂರು ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ರಮೇಶ್ (35) ಎಂಬುವರೇ ಆತ್ಮಹತ್ಯೆ ಮಾಡಿಕೊಂಡಿರುವ ಪೇದೆಯಾಗಿದ್ದು, ನಗರದ ಪೊಲೀಸ್ ಠಾಣೆಯ ಹಿಂದೆ ಇರುವ ವಿಶ್ರಾಂತಿ ಗೃಹದಲ್ಲಿರುವ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಂಗಳವಾರ ರಾತ್ರಿ 10 ಘಂಟೆಗೆ ಪೊಲೀಸ್ ಪೇದೆಯೊಬ್ಬರು ವಿಶ್ರಾಂತಿ ಗೃಹಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮೃತರ ಪತ್ನಿ ಪುಷ್ಪಲತಾ ಎಂಬುವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ರಮೇಶ್ ಅವರಿಗೆ ಪೇದೆಯಾದ ಮಹೇಶ್ ಎಂಬುವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಎಷ್ಟೋ ಬಾರಿ ಗಲಾಟೆ ಕೂಡಾ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತ ಪೇದೆ ರಮೇಶ್ ಹಾಗೂ ದೂರು ದಾಖಲಾಗಿರುವ ಮಹೇಶ್ ಇಬ್ಬರೂ ನಗರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಹಾಗೂ ಇಬ್ಬರೂ ಪೊಲೀಸ್ ಠಾಣೆಯ…

Read More

ಒಮ್ಮೆ ಕಾರ್ತಿವೀರ್ಯಾರ್ಜುನ, ಶಿವ ಮಹಿಮೆಯನ್ನು ಕುರಿತು ಹೇಳುತ್ತಾ,ಹಿಂದೆ ಶ್ರೀ ರಾಮನು ರಾವಣನನ್ನು ಸಂಹರಿಸುವುದಕ್ಕಾಗಿ ಸಮುದ್ರದ ಮೇಲೆ ಸೇತುವೆಯನ್ನು ಕಟ್ಟಿದ ಸ್ಥಳದಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡಿ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…

Read More

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ ದಾನಪ್ಪ ಎಂಬುವರು ಪತ್ರವನ್ನು ಬರೆದಿರುವುದನ್ನು ಉಲ್ಲೇಖಿಸಿದ್ದಾರೆ. ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿರುವುದಾಗಿ ತಿಳಿಸಿದ್ದಾರೆ. ಈ ಪತ್ರದ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮ ವಹಿಸುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ…

Read More

ನವದೆಹಲಿ: ಏಪ್ರಿಲ್.1, 2026ರಿಂದ 2027ರ ಜನಗಣತಿಯ ಆರಂಭದ ಭಾಗವಾಗಿ ಮನೆಗಳ ಪಟ್ಟಿ ಮಾಡುವಿಕೆ ಶುರುವಾಗಲಿದೆ ಎಂಬುದಾಗಿ ಕೇಂದ್ರ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ. ಈ ಕುರಿತಂತೆ ಕೇಂದ್ರ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, 2027 ರ ಭಾರತದ ಜನಗಣತಿಯ ಹಂತ I ಅಂದರೆ ಮನೆಪಟ್ಟಿ ಮತ್ತು ವಸತಿ ಗಣತಿ (HLO) ಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮನೆಪಟ್ಟಿ ಕಾರ್ಯಾಚರಣೆಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1 ಏಪ್ರಿಲ್ 2026 ರಿಂದ 30 ಸೆಪ್ಟೆಂಬರ್ 2026 ರವರೆಗೆ, ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶವು ನಿರ್ದಿಷ್ಟಪಡಿಸಿದ 30 ದಿನಗಳ ಅವಧಿಯಲ್ಲಿ ನಡೆಸಲಾಗುವುದು ಎಂದಿದೆ. ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶವು ಸೂಚಿಸಿದ ವೇಳಾಪಟ್ಟಿಯ ಪ್ರಕಾರ, ಮನೆ-ಮನೆಗೆ ಮನೆಪಟ್ಟಿ ಪ್ರಾರಂಭವಾಗುವ ಮೊದಲು 15 ದಿನಗಳ ಅವಧಿಗೆ ಸ್ವಯಂ-ಗಣತಿಗೆ ಅವಕಾಶ ಲಭ್ಯವಿರುತ್ತದೆ ಎಂದು ಹೇಳಿದೆ. https://twitter.com/CensusIndia2027/status/2008901659741782526 https://kannadanewsnow.com/kannada/father-pushes-minor-daughter-into-prostitution-pocso-case-filed-against-12-people-including-father-arrests-made/ https://kannadanewsnow.com/kannada/i-will-remain-in-politics-as-long-as-i-have-the-blessings-of-the-people-cm-siddaramaiah/

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ತಂದೆಯೇ ಅಪ್ರಾಪ್ತೆಯನ್ನು ವೇಶ್ಯಾವಾಟಿಕೆ ತಳ್ಳಿದಂತ ಹೃದಯ ವಿದ್ರಾವಕ ಘಟನೆ ನಡೆದಿದೆ. ಹಣಕ್ಕಾಗಿ ಅಪ್ರಾಪ್ತೆಯ ತಂದೆ, ಅಜ್ಜಿ ವೇಶ್ಯಾವಾಟಿಕೆಗೆ ಬಾಲಕಿಯನ್ನು ದೂಡಿದ್ದಾರೆ. ಈ ಸಂಬಂಧ ದಾಖಲಾದಂತ ಪೋಕ್ಸೋ ಕೇಸ್ ಅಡಿಯಲ್ಲಿ ಅಪ್ರಾಪ್ತೆಯ ತಂದೆ ಸೇರಿದಂತೆ ಬರೋಬ್ಬರಿ 12 ಮಂದಿಯನ್ನು ಬೀರೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಳೆದ ಡಿಸೆಂಬರ್.29ರಂದು ಅಪ್ರಾಪ್ತೆ ಬೀರೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತಾರೆ. ದೂರಿನಲ್ಲಿ ನನ್ನ ತಾಯಿ 6 ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪಿಯುಸಿ ವ್ಯಾಸಂಗದ ವೇಳೆಯಲ್ಲಿ ನನಗೆ ಓದೋದಕ್ಕೆ ಇಷ್ಟವಿಲ್ಲದ ಕಾರಣ, ತಂದೆ ಗಿರೀಶ್ ಜೊತೆಗೆ ಬೀರೂರು ಸಮೀಪದ ನಾಗವಂಗಲದಲ್ಲಿ ವಾಸವಾಗಿರುತ್ತೇನೆ. ನನ್ನ ಅಜ್ಜಿ ನಾಗರತ್ನಮ್ಮ ಬೀರೂರಲ್ಲಿ ಇರುತ್ತಾರೆ. ಅವರಿಗೆ ನಾರಾಯಣಸ್ವಾಮಿ ಎಂಬುವವರು ಪರಿಚಯವಿರುತ್ತದೆ ಎಂದಿದ್ದಾರೆ. ದಿನಾಂಕ 21-12-2025ರಂದು ಮಂಗಳೂರಿನ ಭರತ್ ಶೆಟ್ಟಿ ಎಂಬುವರ ಮನೆಗೆ ತಂದೆ ಗಿರೀಶ್ ಕರೆದೊಯ್ದ ನಂತ್ರ, ಅಪ್ರಾಪ್ತೆಯ ಮೇಲೆ ನಿರಂತರವಾಗಿ ದಿನಾಂಕ 26-12-2025ರವರೆಗೆ ಹಲವಾರು ಮಂದಿ ಅತ್ಯಾಚಾರ ಎಸಗಿದ್ದಾರೆ. ಅದರಲ್ಲೂ ಅಪ್ರಾಪ್ತೆ ಮುಟ್ಟಾಗಿ ನೋವಿನಿಂದ ನರಳುತ್ತಿದ್ದಂತ ಸಂದರ್ಭದಲ್ಲೇ…

Read More

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಾಮೆಂಟ್ ಮಾಡಿದ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಜಯಲಕ್ಷ್ಮೀಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದಂತ ಪ್ರಕರಣಕ್ಕೆ ಸಂಬಂಧಿಸಿದಂತ ಇಂದು ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆಯ ಬೀಳಗಿ ಮೂಲದ ಧರಿಯಪ್ಪ ಎಂಬುದಾಗಿ ತಿಳಿದು ಬಂದಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಧರಿಯಪ್ಪ ಬಂಧನದ ಬಳಿಕ, ಅಶ್ಲೀಲ ಕಾಮೆಂಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/i-will-remain-in-politics-as-long-as-i-have-the-blessings-of-the-people-cm-siddaramaiah/ https://kannadanewsnow.com/kannada/call-for-applications-for-kuwj-annual-awards/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಎಂಡಿ ವ್ಯಾಸಂಗ ಮಾಡುತ್ತಿದ್ದಂತ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಶಿವಮೊಗ್ಗದ ಸಿಮ್ಸ್ ಹಾಸ್ಟೆಲ್ ನಲ್ಲಿ ಎಂ.ಡಿ ವ್ಯಾಸಂಗ ಮಾಡುತ್ತಿದ್ದಂತ ಸಂದೀಪ್ ರಾಜ್(27) ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿಯಾಗಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ತರಬೇತಿ ವೈದ್ಯನಾಗಿ ಸೇವೆಯನ್ನು ಮೃತ ಸಂದೀಪ್ ರಾಜ್ ಸಲ್ಲಿಸುತ್ತಿದ್ದರು. ಶಿವಮೊಗ್ಗ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಡಿ ರೇಡಿಯಾಲಜಿ ವ್ಯಾಸಂಗ ಮಾಡುತ್ತಿದ್ದನು. ಇಂದು ಸಿಮ್ಸ್ ನ ಕಾಲೇಜು ಭದ್ರಾ ಹಾಸ್ಟೆಲ್ ನ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಸಂದೀಪ್ ರಾಜ್ ತುಮಕೂರಿನ ಮಧುಗಿರಿ ಮೂಲದವರು ಎನ್ನಲಾಗುತ್ತಿದೆ. ಎಂಬಿಬಿಎಸ್ ಮುಗಿಸಿದ ಬಳಿಕ ಎಂಡಿ ವ್ಯಾಸಂಗ ಮಾಡುತ್ತಿದ್ದಂತ ಸಂದೀಪ್ ರಾಜ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದಕ್ಕಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. https://kannadanewsnow.com/kannada/i-will-remain-in-politics-as-long-as-i-have-the-blessings-of-the-people-cm-siddaramaiah/ https://kannadanewsnow.com/kannada/kpcl-622-posts-recruitment-re-examination-final-result-announced/

Read More