Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸಾಗರ ನಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿರುವುದರಿಂದ, ನಾಳೆ ಮಾರ್ಚ್ 14, ಶನಿವಾರದಂದು ಸಾಗರ ನಗರದ ವಿವಿಧ ಪ್ರದೇಶಗಳಲ್ಲಿ ದಿನವಿಡೀ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ವಿದ್ಯುತ್ ವ್ಯತ್ಯಯದ ಸಮಯ: ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಸಾಗರ ಟೌನ್ ಫೀಡರ್ ವ್ಯಾಪ್ತಿಗೆ ಒಳಪಡುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ: ವಿನೋಬ ನಗರ ಮತ್ತು ನೆಹರೂ ನಗರ. ಜೋಸೆಫ್ ನಗರ ಹಾಗೂ ಅರಳಿಕೊಪ್ಪ. ಜನ್ನತ್ ಗಲ್ಲಿ ಮತ್ತು ಸಿಗಂದೂರು ಮಾರ್ಕೆಟ್ ರಸ್ತೆ. ಬಿ.ಹೆಚ್ ರಸ್ತೆ ಹಾಗೂ ಅಶೋಕ ರಸ್ತೆ. ಕೃಷ್ಣ ಗ್ಯಾರೇಜ್ ಮತ್ತು ಎಲ್.ಐ.ಸಿ ಆಫೀಸ್ ಹತ್ತಿರದ ಪ್ರದೇಶಗಳು. ಸಹಾಯವಾಣಿ: ವಿದ್ಯುತ್ ಅಡಚಣೆಗೆ ಸಂಬಂಧಿಸಿದ ದೂರುಗಳಿಗಾಗಿ ಗ್ರಾಹಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು: ದೂರವಾಣಿ: 08183-226098 ಮೊಬೈಲ್: 8277880742 ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಈ ಕಾಮಗಾರಿಗೆ…
ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ.! ಸ್ತ್ರೀ ಶಾಪ ಯಾವ ರೂಪದಲ್ಲಿ ಬರುತ್ತದೆ, ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಸಂಪೂರ್ಣ ಮಾಹಿತಿ ಮುಂದೆ ಓದಿ.! ಹೆಣ್ಣು ಒಂದು ಕುಟುಂಬದ ಕಣ್ಣು ಎನ್ನುತ್ತಾರೆ, ಹೆಣ್ಣನ್ನು ಮನೆಯ ನಂದಾದೀಪ ಎಂದು ಕರೆಯುತ್ತಾರೆ, ಮನೆಯ ಮಹಾಲಕ್ಷ್ಮಿ , ಹೆಣ್ಣು ಜೀವನದಲ್ಲಿ ಬರುವುದೇ ಸೌಭಾಗ್ಯ ಎನ್ನುತ್ತಾರೆ. ಹೆಣ್ಣು ಮಕ್ಕಳು ತಾಯಿಯಾಗಿ, ಮಡದಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ, ಸಹೋದರಿ ರೂಪದಲ್ಲಿ ಬದುಕಿನಲ್ಲಿ ಬರುತ್ತಾರೆ. ಈ ರೀತಿ ಒಂದು ಹೆಣ್ಣು ನಿಮ್ಮ ಜೀವನದಲ್ಲಿ ಬರಬೇಕು ಎಂದರೆ ಅದಕ್ಕೆ ಋಣ ಇರಬೇಕು, ಅದೃಷ್ಟ ಇರಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ,…
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಗೌರವ ಸಂಭಾವನೆ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ತಾಂತ್ರಿಕ ಸಿಬ್ಬಂದಿ ಹಾಗೂ ಇತರೆ ನೌಕರರ ವೇತನಕ್ಕಾಗಿ ಒಟ್ಟು 95.73 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಸುದ್ದಿಯ ವಿವರ: 2025-26ನೇ ಸಾಲಿಗೆ ಅನ್ವಯವಾಗುವಂತೆ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಆದೇಶದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ: ಯಾರಿಗೆ ಅನ್ವಯ?: ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಕಿಯೋನಿಕ್ಸ್ (KEONICS) ಮತ್ತು ಇತರೆ ಸಂಸ್ಥೆಗಳ ಮೂಲಕ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪ್ಯೂಟರ್ ಪ್ರೋಗ್ರಾಮರ್ಸ್, ಸಿಸ್ಟಂ ಅಡ್ಮಿನ್, ಗ್ರೂಪ್-ಸಿ ಸಿಬ್ಬಂದಿ, ಡಿ.ಇ.ಓ (DEO), ವಾಹನ ಚಾಲಕರು ಹಾಗೂ ಗ್ರೂಪ್-ಡಿ ವೃಂದದ ನೌಕರರ ಸಂಭಾವನೆಗಾಗಿ ಈ ಹಣ ಬಳಕೆಯಾಗಲಿದೆ. ಅನುದಾನದ ಮೊತ್ತ: ಒಟ್ಟು 95,73,000 ರೂ. (ತೊಂಬತ್ತೈದು ಲಕ್ಷದ ಎಪ್ಪತ್ಮೂರು ಸಾವಿರ ರೂಪಾಯಿ) ಗಳನ್ನು ಪುನರ್ವಿನಿಯೋಗದ (Re-appropriation) ಮೂಲಕ ಒದಗಿಸಲು ಸರ್ಕಾರ ಮಂಜೂರಾತಿ ನೀಡಿದೆ. ಕಟ್ಟುನಿಟ್ಟಿನ ಸೂಚನೆ:…
ಶಿವಮೊಗ್ಗ: ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಒಳ್ಳೆಯ ಕೆಲಸ ಡಂಗೂರ ಸಾರಿಕೊಂಡು ಹೋಗಲು ಬರುವುದಿಲ್ಲ. ಇಂತಹ ಮಾದರಿ ಕೆಲಸಗಳನ್ನು ಜನತೆಗೆ ತಿಳಿಸುವ ಪ್ರಾಮಾಣಿಕ ಕೆಲಸವನ್ನು ಮಾಧ್ಯಮಗಳು ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದು ಪೌರಾಯುಕ್ತ ಎಚ್.ಕೆ.ನಾಗಪ್ಪ ಹೇಳಿದರು. ಇಂದು ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ತಾಲ್ಲೂಕು ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಮಾಧ್ಯಮಗಳು ಇಲ್ಲದೆ ಹೋಗಿದ್ದರೆ ಬಹುತೇಕ ವಿಷಯಗಳು ಜಗತ್ತಿಗೆ ಗೊತ್ತಾಗುತ್ತಲೇ ಇರಲಿಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಮಾಧ್ಯಮ ರಂಗ ಅತ್ಯಂತ ಪರಿಣಾಮಕಾರಿಯಾಗಿ ನಮ್ಮ ದೇಶದಲ್ಲಿ ಕೆಲಸ ಮಾಡುತ್ತಿದೆ ಎಂದರು. ಒಳ್ಳೆಯದ್ದು, ಕೆಟ್ಟದನ್ನು ತಿಳಿಸುವುದರಿಂದ ಆಯಾ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ತಮ್ಮ ತಪ್ಪುಒಪ್ಪುಗಳನ್ನು ತಿದ್ದಿಕೊಳ್ಳಲು ಸಹಾಯವಾಗುತ್ತದೆ. ಅನೇಕ ಸಂದರ್ಭದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸುತ್ತಾರೆಯೆ ವಿನಃ ಕರ್ತವ್ಯವನ್ನು ಮರೆತು ಬಿಡುತ್ತಾರೆ. ಅಂತಹ ಕರ್ತವ್ಯವನ್ನು ನೆನಪಿಸುವ ಕೆಲಸ ಮಾಧ್ಯಮಗಳು ಮಾಡುತ್ತಿವೆ. ಸಾಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಒಂದು ತಂಡವಾಗಿ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದರು.…
ಬೆಂಗಳೂರು: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಉತ್ತಮ ನಡತೆ ತೋರಿದ ಒಟ್ಟು 31 ಜೀವಾವಧಿ ಶಿಕ್ಷಾ ಬಂದಿಗಳನ್ನು ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ಕರ್ನಾಟಕ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಭಾರತ ಸಂವಿಧಾನದ ಅನುಚ್ಛೇದ 161ರ ಅಡಿಯಲ್ಲಿ ಘನತೆವೆತ್ತ ರಾಜ್ಯಪಾಲರು ನೀಡಿದ ಅನುಮೋದನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಏನಿದೆ?: ಬಿಡುಗಡೆಯ ಪ್ರಕ್ರಿಯೆ: ಒಟ್ಟು 54 ಪ್ರಕರಣಗಳನ್ನು ಪರಿಶೀಲಿಸಿದ ಎಲ್ಸಿಆರ್ (LCR) ಸಮಿತಿಯು 31 ಬಂದಿಗಳ ಬಿಡುಗಡೆಗೆ ಶಿಫಾರಸ್ಸು ಮಾಡಿತ್ತು. ಈ ಪೈಕಿ ಒಬ್ಬ ಮಹಿಳಾ ಬಂದಿ ಪೆರೋಲ್ ರಜೆಯಲ್ಲಿದ್ದಾಗ ಮೃತಪಟ್ಟ ಕಾರಣ, ಅವರನ್ನು ಹೊರತುಪಡಿಸಿ ಉಳಿದ 30 ಬಂದಿಗಳನ್ನು ಬಿಡುಗಡೆ ಮಾಡಲಾಗಿದೆ. ಕಾರಾಗೃಹವಾರು ವಿವರ: ಬಿಡುಗಡೆ ಹೊಂದಿದ ಬಂದಿಗಳ ವಿವರ ಈ ಕೆಳಗಿನಂತಿದೆ: ಬೆಂಗಳೂರು ಕೇಂದ್ರ ಕಾರಾಗೃಹ: 14 ಬಂದಿಗಳು. ವಿಜಯಪುರ ಕೇಂದ್ರ ಕಾರಾಗೃಹ: 05 ಬಂದಿಗಳು. ಬಳ್ಳಾರಿ ಕೇಂದ್ರ ಕಾರಾಗೃಹ: 03 ಬಂದಿಗಳು. ಮೈಸೂರು, ಬೆಳಗಾವಿ ಮತ್ತು ಕಲಬುರಗಿ: ತಲಾ 02 ಬಂದಿಗಳು. ಶಿವಮೊಗ್ಗ (ಪುರುಷ),…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮಂಡ್ಯದ ಮೈಶುಗರ್ ಕಾರ್ಖಾನೆಯ ಆಧುನೀಕರಣ ಹಾಗೂ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಸಂಪುಟ ಹಸಿರು ನಿಶಾನೆ ತೋರಿಸಿದೆ. ಮೈಶುಗರ್ ಕಾರ್ಖಾನೆಗೆ ನವಚೈತನ್ಯ: ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಮೈಶುಗರ್ ಕಾರ್ಖಾನೆಯ ದುರಸ್ತಿ ಮತ್ತು ಆಧುನೀಕರಣಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ. ಹೊಸ ಯಂತ್ರೋಪಕರಣ: ಕಾರ್ಖಾನೆಯಲ್ಲಿ ಪ್ರತಿ ದಿನ 5,000 ಟನ್ (5000 TCD) ಕಬ್ಬು ನುರಿಯುವ ಸಾಮರ್ಥ್ಯದ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗುವುದು. ಅನುದಾನ: ಈ ಇಡೀ ಯೋಜನೆಯ ಕಾಮಗಾರಿಗಾಗಿ ಒಟ್ಟು 60 ಕೋಟಿ ರೂಪಾಯಿ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ. ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ (KHB ಸೂರ್ಯಸಿಟಿ) ಬೃಹತ್ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಂಪುಟ ಅಸ್ತು ಎಂದಿದೆ. ಬೃಹತ್ ವೆಚ್ಚ: ಸುಮಾರು 813 ಕೋಟಿ ರೂಪಾಯಿ ವೆಚ್ಚದಲ್ಲಿ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಯುದ್ಧ ಸದೃಶ ಪರಿಸ್ಥಿತಿಯಿಂದಾಗಿ ದೇಶಾದ್ಯಂತ ಉಂಟಾಗಿರುವ ಅಡುಗೆ ಅನಿಲ (LPG) ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಇಲಾಖೆಯ ಉನ್ನತ ಅಧಿಕಾರಿಗಳಿಗೆ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಅಡುಗೆ ಅನಿಲದ ಕೊರತೆಯಿಂದಾಗಿ ಸೌದೆಯ ಬೇಡಿಕೆ ಹೆಚ್ಚಾಗುತ್ತಿದ್ದು, ಇದನ್ನು ಬಳಸಿಕೊಂಡು ಅರಣ್ಯ ನಾಶವಾಗದಂತೆ ತಡೆಯಲು ಸಚಿವರು ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ: ಮರಗಳ ರಕ್ಷಣೆಗೆ ಆದ್ಯತೆ: ಅರಣ್ಯ ಪ್ರದೇಶ, ಅರಣ್ಯದ ಅಂಚು ಮಾತ್ರವಲ್ಲದೆ ಇಲಾಖೆಯ ನೆಡುತೋಪುಗಳು, ಸರ್ಕಾರಿ ಜಮೀನು ಮತ್ತು ರಸ್ತೆ ಬದಿಯ ಮರಗಳಿಗೆ ಕೊಡಲಿ ಪೆಟ್ಟು ಬೀಳುವ ಅಪಾಯವಿದೆ. ಇದನ್ನು ತಡೆಯಲು ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಗಸ್ತು ಹೆಚ್ಚಳ: ಇಲಾಖೆಯ ಎಲ್ಲಾ ವೃತ್ತ ಮತ್ತು ವಲಯಗಳಲ್ಲಿ ತಕ್ಷಣವೇ ಸೂಕ್ತ ಗಸ್ತು ಹಾಗೂ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಅಕ್ರಮ ಮರ ಕಡಿತಕ್ಕೆ ಅವಕಾಶ…
ಟೆಹ್ರಾನ್: ಇರಾನ್ನ ನೂತನ ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡಿರುವ ಮೊಜ್ತಬಾ ಅವರು ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸುವಂತಹ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ಹರ್ಮುಜ್ ಜಲಸಂಧಿಯಲ್ಲಿ ಯಾವುದೇ ಕಾರಣಕ್ಕೂ ಹಡಗುಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯ ಮುಖ್ಯಾಂಶಗಳು: ಸರ್ವೋಚ್ಚ ನಾಯಕರಾದ ಬಳಿಕ ಇಂದು ತಮ್ಮ ಮೊದಲ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡಿದ್ದಾರೆ: ಸಂಚಾರಕ್ಕೆ ತಡೆ: ಆಯಕಟ್ಟಿನ ಪ್ರದೇಶವಾದ ಹರ್ಮುಜ್ ಜಲಸಂಧಿಯ ಮಾರ್ಗದಲ್ಲಿ ಹಡಗುಗಳ ಸಂಚಾರವನ್ನು ಸಂಪೂರ್ಣವಾಗಿ ತಡೆಯುವುದಾಗಿ ಅವರು ಪ್ರತಿಜ್ಞೆ ಮಾಡಿದ್ದಾರೆ. ಪ್ರತೀಕಾರದ ಎಚ್ಚರಿಕೆ: ಇತ್ತೀಚೆಗೆ ಮಿನಾಬ್ನಲ್ಲಿ ನಡೆದ ಶಾಲಾ ಮಕ್ಕಳ ಹತ್ಯೆಯನ್ನು ಉಲ್ಲೇಖಿಸಿದ ಅವರು, ಈ ಕೃತ್ಯಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದು ಖಚಿತ ಎಂದು ಗುಡುಗಿದ್ದಾರೆ. ಕಠಿಣ ನಿಲುವು: ಅಂತರಾಷ್ಟ್ರೀಯ ಒತ್ತಡಗಳ ನಡುವೆಯೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬ ಧಾಟಿಯಲ್ಲಿ ಮೊಜ್ತಬಾ ಮಾತನಾಡಿದ್ದಾರೆ. ಜಾಗತಿಕ ಪರಿಣಾಮ: ವಿಶ್ವದ ಪ್ರಮುಖ ತೈಲ ಸಾಗಾಣಿಕೆಯ ಮಾರ್ಗವಾಗಿರುವ ಹರ್ಮುಜ್ ಜಲಸಂಧಿಯನ್ನು ಬಂದ್ ಮಾಡುವ…
ವಿಜಯನಗರ: ಪರೀಕ್ಷೆ ಮುಗಿಸಿ ತಾತನ ಜೊತೆ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದು, ತಾತ ಮತ್ತು ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. ಘಟನೆಯ ವಿವರ: ಕೂಡ್ಲಿಗಿ ಪಟ್ಟಣದ ಅಂಬೇಡ್ಕರ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸೃಷ್ಠಿ(14) ಮತ್ತು ಆಕೆಯ ತಾತ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಸೃಷ್ಠಿ ಇಂದು ತನ್ನ ಶಾಲೆಯ ಪರೀಕ್ಷೆಯನ್ನು ಮುಗಿಸಿ ತಾತನ ಜೊತೆ ಬೈಕ್ನಲ್ಲಿ ಕರ್ನಾರಹಟ್ಟಿಗೆ ತೆರಳುತ್ತಿದ್ದಳು. ಈ ವೇಳೆ ಕ್ಯಾಸನಕೆರೆ ಬಳಿ ಹೆದ್ದಾರಿಯಲ್ಲಿ ರೈತರು ರಾಗಿ ಒಣಗಿಸಲು ಹಾಕಿದ್ದರು. ರಾಗಿಯ ಮೇಲೆ ಬೈಕ್ ಚಲಿಸಿದ ಪರಿಣಾಮ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಲಾರಿ ಹರಿದು ಸಾವು: ಬೈಕ್ನಿಂದ ಕೆಳಕ್ಕೆ ಬಿದ್ದ ಸೃಷ್ಠಿಯ ತಲೆಯ ಮೇಲೆ ವೇಗವಾಗಿ ಬಂದ ಲಾರಿ ಹರಿದಿದೆ. ಘಟನೆಯ ತೀವ್ರತೆಗೆ ತಾತ ಮತ್ತು ಮೊಮ್ಮಗಳು ಇಬ್ಬರೂ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಹೆದ್ದಾರಿಯಲ್ಲಿ…
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನಗಳ ಕಳ್ಳತನ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದು, ಇದು ರೈತಾಪಿ ವರ್ಗದವರಲ್ಲಿ ತೀವ್ರ ಆತಂಕ ಮೂಡಿಸಿದೆ. ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳ ಸಾಕು ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಇದೀಗ ಶಿವಮೊಗ್ಗ ಜಿಲ್ಲಾ ಪೊಲೀಸರು ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಕಳ್ಳರ ಜಾಲಕ್ಕೆ ಬ್ರೇಕ್ ಹಾಕಲು ಪೊಲೀಸರ ‘ಮಾಸ್ಟರ್ ಪ್ಲಾನ್’ ದನಗಳ ಕಳ್ಳತನವನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಸಾಗರ ಗ್ರಾಮಾಂತರ ಪೊಲೀಸರು ಸಮರ ಸಾರಿದ್ದಾರೆ. ಈ ನಿಟ್ಟಿನಲ್ಲಿ “ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸರೊಂದಿಗೆ ಕೈಜೋಡಿಸಿ” ಎನ್ನುವ ಘೋಷವಾಕ್ಯದೊಂದಿಗೆ ಸಾರ್ವಜನಿಕರಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ಪಾಲಿಸಲು ಆದೇಶಿಸಿದ್ದಾರೆ: ನಿಮ್ಮ ಪ್ರಾಣಿಗಳ ರಕ್ಷಣೆ ನಿಮ್ಮ ಹೊಣೆ: ರಾತ್ರಿ ಸಮಯದಲ್ಲಿ ಎತ್ತು, ಆಕಳು ಮತ್ತು ಎಮ್ಮೆಗಳನ್ನು ಯಾವುದೇ ಕಾರಣಕ್ಕೂ ರಸ್ತೆಯ ಬದಿಯಲ್ಲಿ ಅಥವಾ ಬಯಲು ಪ್ರದೇಶದಲ್ಲಿ ಬಿಡಬಾರದು. ಅವುಗಳನ್ನು ಮನೆಯ ಆವರಣದಲ್ಲಿಯೇ ಕಟ್ಟಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. 112 ಸಹಾಯವಾಣಿ…














