Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಹಾಗೂ ಮಾನವೀಯ ಮೈಲಿಗಲ್ಲಾಗುವ ಮಹತ್ವಾಕಾಂಕ್ಷಿ “ಕುಸುಮ ಸಂಜೀವಿನಿ” ಯೋಜನೆಗೆ ಇಂದು ಅಧಿಕೃತವಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು. ಬೆಂಗಳೂರಿನ ನೆಹರು ತಾರಾಲಯದ ಸಿ.ವಿ. ವಿಶ್ವೇಶ್ವರ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅತ್ಯಾಧುನಿಕ ರೋಗ ನಿರೋಧಕ (Prophylaxis) ಚಿಕಿತ್ಸೆ ಹಾಗೂ ರೋಗಿಗಳ ತುರ್ತು ಸಂಚಾರಕ್ಕಾಗಿ ಮೀಸಲಾದ ಉಚಿತ 108 ಅಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಲಾಯಿತು. ರಕ್ತಸ್ರಾವ ಉಂಟಾದ ನಂತರ ಚಿಕಿತ್ಸೆ ನೀಡುವ ಬದಲಾಗಿ, ರಕ್ತಸ್ರಾವವಾಗುವುದನ್ನೇ ತಡೆಯುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು, “ದೀರ್ಘಕಾಲದ ರಕ್ತ ಹೆಪ್ಪುಗಟ್ಟುವಿಕೆಯ ಅಸ್ವಸ್ಥತೆಯಿಂದ ಬಳಲುತ್ತಿರುವ ಹಿಮೋಫಿಲಿಯಾ ರೋಗಿಗಳಿಗೆ ಶಾಶ್ವತ ಪರಿಹಾರ ಮತ್ತು ಘನತೆಯ ಬದುಕು ಒದಗಿಸುವುದು ಈ ಯೋಜನೆಯ ಧ್ಯೇಯೋದ್ದೇಶವಾಗಿದೆ” ಎಂದರು. ಹಿಮೋಫಿಲಿಯಾ ರೋಗಿಗಳು ಅನುಭವಿಸುತ್ತಿರುವ ದೈಹಿಕ ಮತ್ತು ಮಾನಸಿಕ ಸಂಕಷ್ಟದ ಬಗ್ಗೆ ಆಳವಾದ ಕಾಳಜಿ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿಗಳು, “ಸಣ್ಣ ಏಟುಗಳಾದರೂ ಜೀವಭಯದ…

Read More

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಸೇವಾ ನಿರತ ಮತ್ತು ಸೇವಾ ನಿರತರಲ್ಲದ ಅಭ್ಯರ್ಥಿಗಳ ಸೀಟು ಹಂಚಿಕೆಯ ಫಲಿತಾಂಶ ಇದಾಗಿದೆ. ಅಂತಿಮ ಫಲಿತಾಂಶವನ್ನು ಫೆ.26ರಂದು ಪ್ರಕಟಿಸಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸೀಟು ಹಂಚಿಕೆಯಾದವರು ಮಾರ್ಚ್‌ 3ರೊಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಮಾರ್ಚ್ 4ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Read More

ಬೆಂಗಳೂರು: ಗ್ರೇಟರ್ ಬೆಂಗಳೂರು ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾಗಿ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಅವರನ್ನು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತಮ್ಮ ನೇಮಕದ ಆದೇಶ ಪತ್ರವನ್ನು ರಮೇಶ್ ಗೌಡ ಅವರು ಬುಧವಾರ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರಿಂದ ಸ್ವೀಕರಿಸಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪಶ್ಚಿಮ, ಮತ್ತು ಪೂರ್ವ ಐದು ಭಾಗಗಳಾಗಿ ವಿಂಗಡಿಸಿದ್ದು, ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪಕ್ಷದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ರಮೇಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಕ್ಷದ ಸಂಘಟನೆ ಐದು ವಿಭಾಗವಾರು ಪಾಲಿಕೆಗಳನ್ನು ವ್ಯವಸ್ಥಿತವಾಗಿ ಮುನ್ನಡೆಸುವ ಹಿನ್ನೆಲೆಯಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಿದೆ. ಆದ್ದರಿಂದ ನೀವು ಈ ಐದು ಕ್ಷೇತ್ರಗಳ ಅಧ್ಯಕ್ಷರುಗಳ ಕರ್ತವ್ಯ ನಿರ್ವಹಣೆಯಲ್ಲಿ ಏನಾದರೂ ಪಕ್ಷಕ್ಕೆ ಹಾನಿಯಾಗುವ ಘಟನೆಗಳು ಜರುಗಿದಲ್ಲಿ ಅದನ್ನು ಸರಿಪಡಿಸುವ ಜವಾಬ್ದಾರಿ…

Read More

ಬೆಂಗಳೂರು: ರಾಜ್ಯದಾದ್ಯಂತ ಸ್ಥಾಪಿಸಲಾಗಿರುವ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ನಿರ್ವಹಣೆ ಪ್ರಯೋಗಾಲಯಗಳ ಮೂಲಕ ನೀರಿನ ಗುಣಮಟ್ಟ ಪರೀಕ್ಷೆಗಳನ್ನು ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದ್ದು, ರಾಜ್ಯ ಸರ್ಕಾರ 2024-25 ನೇ ಸಾಲಿನಲ್ಲಿ 23.52 ಕೋಟಿ ರೂ. ಮತ್ತು ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆವಿಗೂ 28.85 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಯಡಿ ನೀರಿನ ಗುಣಮಟ್ಟ ಮೇಲ್ವಿಚಾರಣೆ ಮತ್ತು ಕಣ್ಗಾವಲು ಕಾರ್ಯಕ್ರಮಕ್ಕೆ ಶೇ. 2ರಷ್ಟು ಅನುದಾನ ಬಿಡುಗಡೆಗೊಳಿಸಬೇಕಾಗಿದ್ದು, ಕಳೆದ ವರ್ಷ ಹಾಗೂ ಪ್ರಸಕ್ತ ವರ್ಷ ಕೇಂದ್ರ ಸರ್ಕಾರ ತನ್ನ ಪಾಲಿನ ಅನುದಾನ ಬಿಡುಗಡೆಗೊಳಿಸದೇ ಇದ್ದರೂ, ಗ್ರಾಮೀಣ ಜನರಿಗೆ ಶುದ್ಧ ನೀರು ಸರಬರಾಜು ಮಾಡಬೇಕೆಂಬ ಸಂಕಲ್ಪದಿಂದ ರಾಜ್ಯ ಸರ್ಕಾರವೇ ಈ ವೆಚ್ಚವನ್ನು ಭರಿಸಿದೆ ಎಂದೂ ಸಚಿವರು ಹೇಳಿದ್ದಾರೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ನೀರು ಸರಬರಾಜು ಮಾಡಲು ಕಾಲ-ಕಾಲಕ್ಕೆ…

Read More

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ತುಂಬಬೇಕು ಎಂದು ಕೆಲಸ ಮಾಡುತ್ತಿದೆ. ಯುವಕರು ಧೈರ್ಯವಾಗಿರಿ. ನಾವು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿಮಗೆ ಸಂದೇಶವನ್ನು ನೀಡುತ್ತೇವೆ. ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ, ಮಾಡುತ್ತೇವೆ, ಇದಕ್ಕೆ ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅಭಯ ನೀಡಿದರು. ನಗರದ ನೆಹರೂ ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಯುವಕರ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ. ಅವರ ಸಮಯದಲ್ಲಿ ಬಹಳಷ್ಟು ಹಗರಣಗಳಾದವು. ನಮಗೆ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಇದು ನಮ್ಮ ಆದ್ಯತೆ” ಎಂದು ಹೇಳಿದರು. “ಹುದ್ದೆಗಳ ಭರ್ತಿ ಕುರಿತು ಯೋಜನೆ ತಯಾರಿಸಿದ್ದೇವೆ. ಕೆಪಿಎಸ್‌ ಸಿ ಸೇರಿದಂತೆ ಬೇರೆ…

Read More

ಬೆಂಗಳೂರು: ಕರ್ನಾಟಕದ ತಂತ್ರಜ್ಞಾನ ದೂರದೃಷ್ಟಿಗೆ ಜಾಗತಿಕ ಮಟ್ಟದಲ್ಲಿ ಭಾರಿ ಮನ್ನಣೆ ದೊರೆತಿದೆ. ವಿಶ್ವದ ಅತ್ಯಂತ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ 34 ಖ್ಯಾತ ವಿಜ್ಞಾನಿಗಳು, ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಅವರಿಗೆ ಅಧಿಕೃತವಾಗಿ ಪತ್ರ ಬರೆದಿದ್ದು, ರಾಜ್ಯದ ‘ಕ್ವಾಂಟಮ್ ಮೆಟೀರಿಯಲ್ ಇನ್ನೋವೇಶನ್ ನೆಟ್‌ವರ್ಕ್’ (Q-MINt) ಯೋಜನೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಐಸಿಟಿಎಸ್-ಟಿಐಎಫ್ಆರ್ (ICTS-TIFR) ನಲ್ಲಿ ನಡೆದ ‘ಫ್ರಾಂಟಿಯರ್ಸ್ ಇನ್ ಕ್ವಾಂಟಮ್ ಕಂಡೆನ್ಸ್ಡ್ ಮ್ಯಾಟರ್ ಫಿಸಿಕ್ಸ್’ (FQCMP) ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ, ಜಾಗತಿಕ ವಿಜ್ಞಾನಿಗಳ ಸಮುದಾಯವು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಾಂಟಮ್ ಸಿಟಿ’ ಕಾರ್ಯಕ್ರಮದ ಪ್ರಮುಖ ಭಾಗವಾಗಿ ಕ್ಯೂ-ಮಿಂಟ್ (Q-MINt) ಸ್ಥಾಪಿಸುವ ದೂರದೃಷ್ಟಿಯ ಕ್ರಮವನ್ನು ಶ್ಲಾಘಿಸಿದೆ. ಕಂಪ್ಯೂಟಿಂಗ್, ಸಂವಹನ ಮತ್ತು ಸೆನ್ಸಿಂಗ್ ಕ್ಷೇತ್ರಗಳಲ್ಲಿ ಮುಂದಿನ ಪೀಳಿಗೆಯ ತಂತ್ರಜ್ಞಾನಗಳ ಆವಿಷ್ಕಾರಕ್ಕೆ ನವೀನ ಕ್ವಾಂಟಮ್ ವಸ್ತುಗಳು ಅತ್ಯಂತ ನಿರ್ಣಾಯಕ ಅಡಿಪಾಯವಾಗಿವೆ ಎಂದು ವಿಜ್ಞಾನಿಗಳು ತಮ್ಮ ಜಂಟಿ ಪತ್ರದಲ್ಲಿ ಹೇಳಿದ್ದಾರೆ. ವಿಶ್ವದ ಪ್ರಮುಖ ವಿಜ್ಞಾನಿಗಳ ಬೆಂಬಲವನ್ನು ಮಾನ್ಯ ಸಚಿವರಾದ ಎನ್.ಎಸ್. ಭೋಸರಾಜು ಅವರು ಸ್ವಾಗತಿಸಿದ್ದಾರೆ. “ಕರ್ನಾಟಕ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿಯೇ ಅರಾಜಕತೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್‌ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ! ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ. ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್‌ 11 ರಿಂದ ಒಪಿಡಿ ಬಂದ್‌. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್‌ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಆಗಿದೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ. ಒಳಮೀಸಲಾತಿಯಿಂದ ಆಗಿರುವ ಅನ್ಯಾಯ ವಿರುದ್ಧ ಎಸ್ಸಿ ಬಲಗೈ ಸಮುದಾಯ ಪ್ರತಿಭಟನೆ ಅಂತ ತಿಳಿಸಿದ್ದಾರೆ. ಬಿಡದಿ ಟೌನ್‌ಶಿಪ್‌ ಯೋಜನೆ, ಸೆಣಬು ಸಬ್ಸಿಡಿ ಬಂದ್‌, ಕಬ್ಬು ಬಿಲ್‌…

Read More

ಶಿವಮೊಗ್ಗ: ತಮ್ಮ ಖಾಸಗಿ ಜಮೀನಿನಲ್ಲಿದ್ದಂತ ಕಾಡು ಜಾತಿ, ಅಕೇಶಿಯಾ ಸೇರಿದಂತೆ ಇತರೆ ಮರಗಳನ್ನು ಕಡಿತಲೆ ಮಾಡಿದ್ದ ಕಾರಣದಿಂದ ಸಾಗರ ಎಸಿಎಫ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರೈತರೊಬ್ಬರು ಸಾಗರ ಡಿಎಫ್ಓಗೆ ದೂರು ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಡಿಎಫ್ಓ ಕಚೇರಿ ಮುಂದೆ ದೊಂಬೆ ಗ್ರಾಮದ ನಿವಾಸಿಯಾದಂತ ವಿನಾಯಕ.ಕೆ ಎಂಬುವರು ದಂಪತಿ ಸಹಿತ ಪ್ರತಿಭಟನೆ ನಡೆಸಿದರು. ಅಲ್ಲದೇ ಸಾಗರದ ಎಸಿಎಫ್ ರವಿ ಅವರು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರೋದಕ್ಕೆ ಆಕ್ರೋಶವನ್ನು ಹೊರ ಹಾಕಿದರು. ಎಸಿಎಫ್ ರವಿ ವಿರುದ್ಧ ಸಾಗರ ಡಿಎಫ್ಓಗೆ ರೈತ ದಂಪತಿಗಳು ದೂರು ಈ ವೇಳೆ ಮಾತನಾಡಿದಂತ ಅವರು, ದೊಂಬೆ ಗ್ರಾಮದ ಸರ್ವೆ ನಂ.35ರಲ್ಲಿ 16 ಎಕರೆ ಸ್ವಂತ ಜಾಗವಿದೆ. ಅದರಲ್ಲಿ ಕೃಷಿ ಚಟುವಟಿಕೆ ಮಾಡುವ ಕಾರಣ ಜೆಸಿಬಿ ಹಾಗೂ ಕೆಲಸಗಾರರ ಸಹಾಯದಿಂದ ಸ್ವಚ್ಛಗೊಳಿಸುವಂತ ಕಾರ್ಯ ನಡೆಸಲಾಗುತ್ತಿತ್ತು. ಇಲ್ಲಿದೆ ಪರಿಶೀಲನೆಗಾಗಿ ಬಂದಂತ ಸಾಗರ ಎಸಿಎಫ್ ರವಿ ಅವರು, ಏ ಬಟ್ಟಾ ನೀನು ಯಾವುದೇ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯು ಉತ್ತಮ ಕೆಲಸದ ಮೂಲಕ ರಾಷ್ಟ್ರ ಮಟ್ಟದಲ್ಲಿ ಜನಮನ್ನಣೆ ಪಡೆದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಅಲ್ಲದೇ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 1,600 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆ, ಗೃಹರಕ್ಷಕ ದಳ, ಪೌರರಕ್ಷಣೆ ಮತ್ತು ಎಸ್‌ಡಿಆರ್‌ಎಫ್‌ ಅಧಿಕಾರಿ, ಸಿಬ್ಬಂದಿಗಳಿಗೆ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಹಾಗೂ 40 ಹೊಸ ಅಗ್ನಿಶಾಮಕ ಜಲ ವಾಹನಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು. ಇಲಾಖೆಯು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿ, ರಾಜ್ಯಕ್ಕೆ ಗೌರವ ಸಂಪಾದನೆ ಮಾಡಿರುದನ್ನು ರಾಜ್ಯ ಸರ್ಕಾರ ಮತ್ತು ಜನಸಮುದಾಯ ಗಮನಿಸಿದೆ ಎಂದು ಹೇಳಿದರು. ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಶಿಸ್ತಿನ ಸಿಪಾಯಿಗಳು. ಪೊಲೀಸ್ ಇಲಾಖೆಯ ಜೊತೆಜೊತೆಯಾಗಿ ಅಷ್ಟೇ ಶಿಸ್ತನ್ನು ಕಾಪಾಡಿಕೊಂಡು…

Read More

ಬೆಂಗಳೂರು : ಸ್ವಯಂ ಚಾಲಿತ ಮ್ಯುಟೇಷನ್ಗೆ ಚಾಲನೆ ನೀಡುವ ಮೂಲಕ ಜನಪರ ಮತ್ತು ಸರಳ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೇ ತಲುಪಿಸಬೇಕು ಎಂಬ ಸರ್ಕಾರದ ಉದ್ದೇಶ ಈಡೇರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಮಂಗಳವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಯಂ ಚಾಲಿತ ಮ್ಯುಟೇಶನ್ಗೆ ಚಾಲನೆ ನೀಡಿ ಮಾತನಾಡಿದ ಅವರು, “ಕಂದಾಯ ಇಲಾಖೆಯನ್ನು ಜನಪರಗೊಳಿಸಬೇಕು, ಆಡಳಿತದಲ್ಲಿ ಸುಧಾರಣೆ ಮತ್ತು ಸರಳೀಕರಣಗೊಳಿಸಬೇಕು ಎಂಬ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದಿಂದ ಹೆಜ್ಜೆ ಹೆಜ್ಜೆಗೂ ಹಲವಾರು ಬದಲಾವಣೆಗಳನ್ನು ತರಲಾಗುತ್ತಿದೆ. ಆ ಬದಲಾವಣಾ ಪರ್ವದ ಮತ್ತೊಂದು ಮಹತ್ವದ ಹೆಜ್ಜೆಯೇ ಸ್ವಯಂ ಚಾಲಿತ ಮ್ಯುಟೇಶನ್ ಗೆ ಚಾಲನೆ. ಈ ಸೇವೆಯನ್ನು ಒಂದು ತಿಂಗಳಿನಿಂದ ಮಂಡ್ಯದಲ್ಲಿ ಅನುಷ್ಠಾನಗೊಳಿಸಿ ಸಾಧಕ ಪರಿಶೀಲಿಸಿ ಇಂದಿನಿಂದ ಶೇ.98 ರಷ್ಟು ಎಲ್ಲಾ ಖಾತೆ ಬದಲಾವಣೆಗಳೂ ಸ್ವಯಂ ಚಾಲಿತಗೊಳ್ಳಲು ಮುನ್ನುಡಿ ಇಟ್ಟಿದ್ದೇವೆ” ಎಂದು ಸಂತಸ ವ್ಯಕ್ತಪಡಿಸಿದರು. “ಖಾತೆ ಬದಲಾವಣೆ ಕಂದಾಯ ಇಲಾಖೆಯ ಮೂಲ ಜವಾಬ್ದಾರಿಗಳಲ್ಲೊಂದು. ಈ ಹಿಂದೆ ಶಾನುಬೋಗರು ಮಾಡುತ್ತಿದ್ದ ಕೆಲಸವನ್ನು ಈಗ ಭೂಮಿ ತಂತ್ರಾಂಶದ ಮೂಲಕ ಮಾಡಲಾಗುತ್ತಿದೆ.…

Read More