Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಕುಸುಮ-ಸಿ ಯೋಜನೆಯಡಿ ಕೃಷಿ ಫೀಡರ್ ಗಳ ಸೌರೀಕರಣ ಕಾರ್ಯವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಮುಖಂಡರು ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, “ಕುಸುಮ್-ಸಿ ಯೋಜನೆ ಮೂಲಕ ಕೃಷಿಗೆ ವಿದ್ಯುತ್ ಒದಗಿಸುವ ಉಪ ಕೇಂದ್ರಗಳನ್ನು ಸೌರೀಕರಣಗೊಳಿಸಿ 2500 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸುವ ಗುರಿಯೊಂದಿಗೆ ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ನೀಡಲು ಕ್ರಮ ವಹಿಸಲಾಗುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಅದರೆ ಶೇ. 80 ರಷ್ಟು ಸಬ್ಸಿಡಿಯೊಂದಿಗೆ ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಒದಗಿಸುತ್ತಿದ್ದೇವೆ. ಇದು ಕೃಷಿ ಕ್ಷೇತ್ರಕ್ಕೆ ಇಂಧನ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆ,” ಎಂದು ತಿಳಿಸಿದರು. “ನಾಡಿನ ಜನರಿಗೆ ಹಾಗೂ ರೈತರರಿಗೆ ವಿದ್ಯುತ್ ನೀಡುವ ಮೂಲಕ ಇಂಧನ ಇಲಾಖೆ…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ 26ನೇ ಕಂತಿನ ತಲಾ 2000 ರೂ. ಹಣ ಫಲಾನುಭವಿಗಳ ಖಾತೆಗೆ ಯಶಸ್ವಿಯಾಗಿ ಜಮೆಯಾಗಿದ್ದು, ಇದರೊಂದಿಗೆ ಪ್ರತಿ ಮನೆಯ ಯಜಮಾನಿಗೆ ಈವರೆಗೆ ಒಟ್ಟು 52,000 ರೂ. ಪಾವತಿಯಾದಂತಾಗಿದೆ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರವು ತನ್ನ ಐದೂ ಗ್ಯಾರಂಟಿ ಯೋಜನೆಗಳ ಮೂಲಕ ಬರೋಬ್ಬರಿ 1 ಲಕ್ಷದ 20 ಸಾವಿರದ 433 ಕೋಟಿ ರೂಪಾಯಿಗೂ ಅಧಿಕ ಹಣವನ್ನು ನೇರವಾಗಿ ಮತ್ತು ಪಾರದರ್ಶಕವಾಗಿ ಜನರ ಖಾತೆಗೆ ವರ್ಗಾಯಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ಶಾಸಕ ದಿನೇಶ್ ಗೂಳಿಗೌಡ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1,24,10,629 ಮಹಿಳೆಯರು ನೋಂದಣಿಯಾಗಿದ್ದಾರೆ. ಈ ಯೋಜನೆಗಾಗಿ ಸರ್ಕಾರವು ಇದುವರೆಗೆ ಒಟ್ಟು 62,345.34 ಕೋಟಿ ರೂ. ವೆಚ್ಚ ಮಾಡಿದೆ. 26 ಕಂತುಗಳ ಹಣ ಯಶಸ್ವಿಯಾಗಿ ಪಾವತಿಯಾಗಿದ್ದು, 27ನೇ ಕಂತಿನ ಅನುದಾನವನ್ನು ಸಹ…
ಮೈಸೂರು: ಮೈಸೂರು ಮತ್ತು ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಬೈಪಾಸ್ ನಡುವೆ ನಡೆಯುತ್ತಿದ್ದ ರಸ್ತೆ ಕೆಳಸೇತುವೆ (RUB) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಹಿಂದೆ ಫೆಬ್ರವರಿ 11, 14, 28 ಹಾಗೂ ಮಾರ್ಚ್ 02, 05, 07, 21, 24 ರಂದು ಭಾಗಶಃ ರದ್ದುಗೊಳಿಸಲಾಗಿದ್ದ ಈ ಕೆಳಗಿನ ರೈಲು ಸೇವೆಗಳನ್ನು ಇದೀಗ ಫೆಬ್ರವರಿ 28 ಮತ್ತು ಮಾರ್ಚ್ 02 ರಂದು ಪುನರಾರಂಭಿಸಲಿವೆ. 1. ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಈ ಮೊದಲು ಬೆಳಗುಳ ಮತ್ತು ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದ್ದ ಈ ರೈಲನ್ನು ಈಗ ಪೂರ್ಣವಾಗಿ ಮರುಸ್ಥಾಪಿಸಲಾಗಿದೆ. ಇದು ಫೆಬ್ರವರಿ 28 ಮತ್ತು ಮಾರ್ಚ್ 02 ರಂದು ಅರಸೀಕೆರೆಯಿಂದ ಮೈಸೂರಿನವರೆಗೆ ಎಂದಿನಂತೆ ಸಂಚರಿಸಲಿದೆ. 2. ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ಫೆಬ್ರವರಿ 28 ಮತ್ತು ಮಾರ್ಚ್ 02 ರಂದು ಮೈಸೂರು ಮತ್ತು ಬೆಳಗುಳ ನಡುವೆ ಭಾಗಶಃ ರದ್ದಾಗಿದ್ದ ಈ ರೈಲು, ಈಗ ನಿಗದಿತ ವೇಳಾಪಟ್ಟಿಯಂತೆ ಮೈಸೂರಿನಿಂದಲೇ ತನ್ನ…
ಶಿವಮೊಗ್ಗ : ರಾಷ್ಟಿಯ ಜನಗಣತಿ ಮನೆಪಟ್ಟಿ ತಯಾರಿಸಲು ನೇಮಕ ಮಾಡಿಕೊಳ್ಳಲು ಉದ್ದೇಶಿಸಿರುವ ಕೆಲವು ಶಿಕ್ಷಕರನ್ನು ಕೈಬಿಡುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಾಗರ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶ್, ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ರಾಷ್ಟಿಯ ಜನಗಣತಿಗೆ ಸಂಬAಧಿಸಿದAತೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಾಗ ಒಂದಷ್ಟು ನಿಯಮವನ್ನು ಪಾಲನೆ ಮಾಡಲು ಸಂಘ ಮನವಿ ಮಾಡುತ್ತದೆ. ನಿವೃತ್ತಿ ಅಂಚಿನಲ್ಲಿರುವ ೫೫ ವರ್ಷಕ್ಕೂ ಮೇಲ್ಪಟ್ಟವರು ತೀವೃ ಸ್ವರಪದ ಕಾಯಿಲೆ ಇದ್ದು ಅದಕ್ಕೆ ಚಿಕಿತ್ಸೆ ಪಡೆಯುತ್ತಿರುವವರನ್ನು ನೇಮಿಸದಂತೆ ಮನವಿ ಮಾಡಿದರು. ಗರ್ಭೀಣಿ ಶಿಕ್ಷಕಿಯರನ್ನು, ಎರಡು ವರ್ಷದ ಮಕ್ಕಳನ್ನು ಹೊಂದಿರುವ, ಅಂಗವಿಕಲ ನೌಕರರು, ಅಂಗವಿಕಲ ಮಕ್ಕಳು ಇರುವ ಶಿಕ್ಷಕರನ್ನು ಜನಗಣತಿಯಿಂದ ಕೈಬಿಡಬೇಕು. ಇದರಿಂದ ಶಿಕ್ಷಕರಿಗೆ ಕುಟುಂಬದ ಜೊತೆ ಇರಲು ಅವಕಾಶವಾಗುತ್ತದೆ. ಬ್ಲಾಕ್ ವಿಂಗಡಣೆ ಮಾಡುವಾಗ ಅಯಾ ಕ್ಷಸ್ಟರ್ನ ಸಿ.ಆರ್.ಪಿ., ಇಸಿಓಗಳ ನೆರವಿನೊಂದಿಗೆ ಗಣತಿದಾರರಿಗೆ…
ಶಿವಮೊಗ್ಗ: ಸಾಗರ ನಗರದಲ್ಲಿ ನಿರ್ಮಿಸಿರುವಂತ ನೂತನ ಅರಣ್ಯ ಇಲಾಖೆ ನೌಕರರ ಸಮುದಾಯ ಭವನವಾಗಿರುವಂತ ವನಸಿರಿಯನ್ನು ಶಿವಮೊಗ್ಗ ಸಿಸಿಎಫ್ ಡಾ.ಹನುಮಂತಪ್ಪ.ಕೆ.ಟಿ ಅವರು ಉದ್ಘಾಟಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಹೊಸನಗರ ರಸ್ತೆಯ ರಾಮನಗರದಲ್ಲಿ ಸಾಮಾಜಿಕ ಅರಣ್ಯ ವಲಯ ಕಚೇರಿಯ ಹಿಂಭಾಗದಲ್ಲಿ ಅರಣ್ಯ ಇಲಾಖೆ ನೌಕರರ ಒಕ್ಕೂಟ ಸಂಘದಿಂದ ವನಸಿರಿ ಎನ್ನುವಂತ ಸಮುದಾಯ ಭವನ ನಿರ್ಮಿಸಲಾಗಿತ್ತು. ಈ ನೂತನ ಸಮುದಾಯ ಭವನವನ್ನು ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಹನುಮಂತಪ್ಪ.ಕೆಟಿ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಕೆಂಚಪ್ಪನವರ್ ಭಾಗಿಯಾಗಿದ್ದರೇ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಫಯಾಜುದ್ದೀನ್ ವಹಿಸಿದ್ದರು. ಅಂದಹಾಗೇ ಅರಣ್ಯ ಇಲಾಖೆ ನೌಕರರಿಂದ ನಿರ್ಮಾಣವಾದಂತ ಸಮುದಾಯ ಭವನ ಇದಾಗಿದೆ. ಇಂತಹ ಸಾಗರದ ರಾಮನಗರದಲ್ಲಿ ನಿರ್ಮಿಸಿರುವಂತ ವನಸಿರಿ ಎನ್ನುವಂತ ಅರಣ್ಯ ಇಲಾಖೆಯ ನೌಕರರ ಸಮುದಾಯ ಭವನವನ್ನು ಇಂದು ಶಿವಮೊಗ್ಗ ಎಸಿಎಫ್ ಡಾ.ಕೆ.ಟಿ ಹನುಮಂತಪ್ಪ ಉದ್ಘಾಟಿಸುವ ಮೂಲಕ, ನೌಕರರ ಬಳಕೆಗಾಗಿ ಲೋಕಾರ್ಪಣೆಗೊಳಿಸಿದರು.…
ಹುಣ್ಣಿಮೆಯ ದಿನವನ್ನು ಭಗವಾನ್ ಚಂದ್ರನ ಪ್ರಾಬಲ್ಯದ ದಿನವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಹುಣ್ಣಿಮೆಯ ದಿನದಂದು ದೈವಿಕ ಶಕ್ತಿಗಳ ಶಕ್ತಿ ಹೆಚ್ಚಾಗಿರುತ್ತದೆ ಮತ್ತು ಯಾವುದೇ ದುಷ್ಟ ಶಕ್ತಿಗಳು ನಮಗೆ ಹಾನಿ ಮಾಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತದೆ. ಮತ್ತು ಅದಕ್ಕಾಗಿಯೇ ಹೋಳಿಹುಣ್ಣಿಮೆಯ ದಿನದಂದು ಎಲ್ಲಾ ದೇವಾಲಯಗಳಲ್ಲಿ ವಿಶೇಷ ಅಭಿಷೇಕಗಳು ಮತ್ತು ಪೂಜೆಗಳನ್ನು ಮಾಡಲಾಗುತ್ತದೆ. ಅಂತಹ ಹುಣ್ಣಿಮೆಯ ದಿನದಂದು ಚಂದ್ರಗ್ರಹಣ ಸಂಭವಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರಿಗೆ ಮಾರ್ಚ್ 3ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಿದವರು ಮಾರ್ಚ್ 2 ಮತ್ತು 3 ರಂದು ಕೆಇಎ ಗೆ ಬಂದು ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂದೂ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.. 4ನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು 7 ಲಕ್ಷ ರೂಪಾಯಿ ಕಾಷನ್ ಡೆಪಾಸಿಟ್ ಅನ್ನು ಮಾ.2ರಿಂದ 4ರೊಳಗೆ ಕಟ್ಟಬೇಕು. ಅಂತಹವರಿಗೆ ಮಾ.4ರಿಂದ 6ರವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಮಾ. 6ರಂದು ಸಂಜೆ ತಾತ್ಕಾಲಿಕ ಫಲಿತಾಂಶ ಹಾಗೂ ಮಾ.7ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಮಾ.9ರಿಂದ 11ರೊಳಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬೇಕು. ಮಾ.12ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ. ಇದುವರೆಗೂ ಯಾರಿಗೆ ಸೀಟು ಹಂಚಿಕೆಯಾಗಿಲ್ಲವೊ ಅಂತಹವರಿಗೆ ಮಾತ್ರ…
ಬೆಂಗಳೂರು: ರಾಜ್ಯದ ವಿವಿಧ ನಿಗಮ-ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರನ್ನು ಮುಂದುವರೆಸಿ ಆದೇಶವನ್ನು ಸರ್ಕಾರ ಮಾಡಿತ್ತು. ಆದರೇ ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರಾಗಿದ್ದಂತ ಯೋಗೇಶ್ ಬಾಬು ಅವರನ್ನು ಮುಂದುವರೆಸಿ ಆದೇಶಿಸಿರಲಿಲ್ಲ. ಹೀಗಾಗಿ ಯೋಗೇಶ್ ಬಾಬು ಅವರನ್ನು ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷರಾಗಿ ಮುಂದುವರೆಸಿ ಆದೇಶ ಹೊರಡಿಸುವಂತೆ ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿರುವಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ದಿನಾಂಕ 28-02-2024ರಂದು ವಿವಿಧ ಪ್ರಾಧಿಕಾರ, ನಿಗಮ ಮಂಡಳಿಯ ಅಧ್ಯಕ್ಷರನ್ನು, ಪದಾಧಿಕಾರಿಗಳು ಹಾಗೂ ಮುಖಂಡರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು. ದಿನಾಂಕ 07-02-2026ರಂದು ಆದೇಶ ಪಟ್ಟಿಯಲ್ಲಿ ಕೆಲವರಿಗೆ ರಾಜ್ಯ ಸಚಿವ ಸ್ಥಾನ ಮಾನ ನೀಡಿ ಮುಂದಿನ ಆದೇಶದವರೆಗೆ ಮುಂದುವರೆಸಲು ಆದೇಶ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಆ ಆದೇಶದಲ್ಲಿ ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಮುಂದಿನ ಆದೇಶದವರೆಗೆ ಮುಂದುವರೆಸಲು ಆದೇಶ ಮಾಡಿದ್ದು, ಇದರಲ್ಲಿ ಕಾಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳನ್ನು ಮತ್ತು ಯೋಜನಾ…
ಬೆಂಗಳೂರು: “ಕರ್ನಾಟಕ ರಾಜ್ಯ ಸಂಶೋಧನೆಗೆ, ನೂತನ ಆವಿಷ್ಕಾರಗಳಿಗೆ, ಉದ್ಯೋಗಗಳಿಗೆ ಹಾಗೂ ಪ್ರತಿಭಾವಂತರಿಗೆ ಕಾಯಕ ಭೂಮಿಯಾಗಿದೆ. ಕರ್ನಾಟಕವು 875 ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಹೊಂದಿದೆ. ಡಿಜಿಟಲ್ ಮಾಧ್ಯಮ ಕಂಪನಿಗಳಿಗೆ ನೆಲೆಯಾಗಿ ನಮ್ಮ ರಾಜ್ಯ ರೂಪುಗೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಲಲಿತ್ ಅಶೋಕದಲ್ಲಿ ಶುಕ್ರವಾರ ನಡೆದ ಬೆಂಗಳೂರು ಜಿಎಎಫ್ ಎಕ್ಸ್ ಸಮ್ಮಿಟ್ ನಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಆರೆಂಜ್ ಎಕಾನಮಿ ಬಗ್ಗೆ ಪ್ರಧಾನಮಂತ್ರಿಯವರು ಈಗ ಮಾತನಾಡಿದ್ದಾರೆ. ಆದರೆ ಇದರ ಬಗ್ಗೆ ನಾವು 2016 ರಲ್ಲಿಯೇ ನೀತಿ ರೂಪಿಸಿದ್ದೆವು. ಈ ಕ್ಷೇತ್ರದ ಬೆಳವಣಿಗೆಗೆ ಪೂರವಾಗಿ ನಮ್ಮ ಸರ್ಕಾರ ಕೆಲಸ ಮಾಡಿದೆ” ಎಂದು ಹೇಳಿದರು. ಪ್ರತಿವರ್ಷ 1.50 ಲಕ್ಷ ಯುವ ಹಾಗೂ ಪ್ರತಿಭಾವಂತ ಐಟಿ ಉದ್ಯೋಗಿಗಳು ಕರ್ನಾಟಕದಿಂದ ಹೊರಹೊಮ್ಮುತ್ತಿದ್ದಾರೆ. ಇಡೀ ಜಗತ್ತೇ ನಮ್ಮಕಡೆ ನೋಡುತ್ತಿದೆ. ನಮ್ಮ ರಾಜ್ಯವು ಈಗಾಗಲೇ ಏಷ್ಯಾದ ಅತ್ಯಂತ ಬಲಿಷ್ಠ ತಂತ್ರಜ್ಞಾನ ವ್ಯವಸ್ಥೆ ಹೊಂದಿರುವ ರಾಜ್ಯವಾಗಿದೆ” ಎಂದು ಹೇಳಿದರು. 2028 ರ ವೇಳೆಗೆ ಸುಮಾರು 50,000 ವಿದ್ಯಾರ್ಥಿಗಳಿಗೆ…
ಬೆಂಗಳೂರು: “ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗುರುವಾರದಂದು ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ ನಿಮ್ಮ ಪರವಾಗಿ ಮನವಿ ಮಾಡುತ್ತಾರಂತೆ ಎಂದು ಕೇಳಿದಾಗ, “ದಯವಿಟ್ಟು ಬೇಡ ಎಂದು ಮನವಿ ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಇದ್ದರೆ, ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರೆ, ಅಧಿಕಾರ, ಹುದ್ದೆ ಬೇಕು ಎಂದರೆ ಹೋಗಿ ಮನವಿ ಮಾಡಿಕೊಳ್ಳಿ. ನನ್ನ ವಿಚಾರಕ್ಕೆ ಹೋಗುವುದು ಬೇಡ” ಎಂದು ತಿಳಿಸಿದರು. ಯಾವ ಶಕ್ತಿ ಪ್ರದರ್ಶನ ಇಲ್ಲ: ಬಾಲಕೃಷ್ಣ ಅವರ ಜನ್ಮದಿನದ ಹೆಸರಿನಲ್ಲಿ 40ಕ್ಕೂ ಹೆಚ್ಚು ಶಾಸಕರು ಸೇರಿದ್ದು, ಶಕ್ತಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಯಾವ ಶಕ್ತಿ ಪ್ರದರ್ಶನವೂ ಇಲ್ಲ. ಕೆಲವರು ವಿಶ್ರಾಂತಿ, ಅಧ್ಯಯನಕ್ಕೆ ವಿದೇಶಕ್ಕೆ ಹೋಗುತ್ತಾರೆ. ಕೆಲವರು ದೆಹಲಿಗೆ ಹೋದರೆ, ಮತ್ತೆ ಕೆಲವರು ಭೋಜನ ಕೂಟ ಸೇರುತ್ತಾರೆ. ಅವರ ವೈಯಕ್ತಿಕ…














