Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಮಾರಿಕಾಂಬ ಜಾತ್ರೆಯ ಪ್ರಯುಕ್ತ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ ಕಾರ್ಯವು ನೆಹರು ಮೈದಾನದಲ್ಲಿ ನಡೆಯುತ್ತಿದೆ. ಟೆಂಡರ್ ಪಡೆದಿರೋದು ದುಬಾರಿ ದರವಾದರೂ, ಅಮ್ಯೂಸ್ಮೆಂಟ್ ಆಟಕ್ಕೆ ಯಾವುದೇ ದುಬಾರಿ ದರ ನಿಗದಿ ಪಡಿಸೋದಿಲ್ಲ ಎಂಬುದಾಗಿ ಅಮ್ಯೂಸ್ ಮೆಂಟ್ ಪಾರ್ಕ್ ಕಮಿಟಿಯ ಅಧ್ಯಕ್ಷ, ಉದ್ಯಮಿ ಹಾಗೂ ಟೆಂಡರ್ ಪಡೆದ ಲಿಂಗರಾಜು ಸ್ಪಷ್ಟ ಪಡಿಸಿದ್ದಾರೆ. ಇಂದು ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಣರಾಜ್ಯೋತ್ಸವವನ್ನು ನೆಹರೂ ಮೈದಾನದಲ್ಲಿ ಮಾಡುವುದಾಗಿ ಸಾಗರ ತಾಲ್ಲೂಕು ಆಡಳಿತ ತಿಳಿಸಿದೆ. ಅದಕ್ಕೆ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣದ ತಯಾರಿ ಅಡ್ಡಿಯಾಗಬಾರದು ಎನ್ನುವ ಕಾರಣಕ್ಕೆ ಬಿಡಲು ಒಪ್ಪಿಕೊಳ್ಳಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನೆಹರೂ ಮೈದಾನದಲ್ಲಿ ನಡೆಸಲು ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದರು. ಸಾಗರದ ಮಾರಿಕಾಂಬ ದೇವಿ ಜಾತ್ರೆಯ ಪ್ರಯುಕ್ತ ಅಮ್ಯೂಸ್ ಮೆಂಟ್ ಟೆಂಡರ್ ಅನ್ನು ತಾನು ಪಡೆದಿದ್ದೇನೆ. ಅದು ದುಬಾರಿಯಾಗಿದೆ. ಅದರಂತೆ ದುಬಾರಿ ಬೆಲೆಯನ್ನು ನಿಗದಿ ಪಡಿಸಲಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೇ ಅದು ಸತ್ಯಕ್ಕೆ ದೂರವಾದದ್ದು. ಸುಳ್ಳು ಮಾತ್ರವೇ. ಸಾಗರದ ಜನರು ಯಾರು…
ಶಿವಮೊಗ್ಗ: ನಾಗರಾಜ್ ಗುಡ್ಡೇಮನೆ ಅವರ ಅರಮನೆ ವೃದ್ಧಾಶ್ರಮದಿಂದ ಹೊರ ತಂದಿರುವಂತ 2026ರ ಕ್ಯಾಲೆಂಡರ್ ಅನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಸ್ವಗೃಹದಲ್ಲಿ ಬಿಡುಗಡೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಶಾಸಕ ಗೋಪಾಲಕೃಷ್ಣ ನಿವಾಸದಲ್ಲಿ ನಾಗರಾಜ್ ಗುಡ್ಡೇಮನೆ ನಡೆಸುತ್ತಿರುವಂತ ಅರಮನೆ ವೃದ್ಧಾಶ್ರಮದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಇಂದು ಕುಟುಂಬಗಳು ಹೊಡೆದು ಹೋಗುತ್ತಿವೆ. ಸಿಂಗಲ್ ಫ್ಯಾಮಿಲಿ ಲೈಫ್ ಹೆಚ್ಚಾಗಿದೆ. ಮಕ್ಕಳೊಂದಿಗೆ, ಸೊಸೆಯೊಂದಿಗೆ ಹಿರಿಯ ನಾಗರೀಕರು ಹೊಂದಾಣಿಕೆ ಮಾಡಿಕೊಳ್ಳುವುದೇ ಕಷ್ಟವಾಗಿದೆ. ಹೀಗಾಗಿ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಇದು ಖೇದಕರ ಸಂಗತಿಯಾಗಿದೆ ಎಂದರು. ಅರಮನೆ ವೃದ್ಧಾಶ್ರಮದ ಎಲ್ಲಿದೆ? ಏನೆಲ್ಲಾ ಸೌಲಭ್ಯಗಳಿವೆ? ಸಾಮಾಜಿಕ ಸೇವಕರಾದಂತ ನಾಗರಾಜ್ ಗುಡ್ಡೇಮನೆ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲ್ಲೂಕಿನ ಮೂಸವಳ್ಳಿ ಬಳಿಯಲ್ಲಿ ಅರಮನೆ ಎನ್ನುವಂತ ವೃದ್ಧಾಶ್ರಮವನ್ನು ಆರಂಭಿಸಿದ್ದಾರೆ. ಮಕ್ಕಳಿಂದ ದೂರವಾಗಿ ತಮ್ಮ ವಯೋಕಾಲದಲ್ಲಿ ಬದುಕುವಂತ ವೃದ್ಧರಿಗಾಗಿ ಈ ಆಶ್ರಮವನ್ನು ನಿರ್ಮಿಸಲಾಗಿದೆ. ಎಲ್ಲಾ ರೀತಿಯ ಸೌಲಭ್ಯವನ್ನು ಅರಮನೆ ವೃದ್ಧಾಶ್ರಮ ಒಳಗೊಂಡಿದೆ. ಮಕ್ಕಳು ವಿವಿಧ ಕಾರಣದಿಂದಾಗಿ ತಮ್ಮ…
ಶಿವಮೊಗ್ಗ: ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಸಿಗಂದೂರು ಜಾತ್ರಾ ಮಹೋತ್ಸವ ನಡೆಯಲಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಮೂಲಸ್ಥಾನದಲ್ಲಿ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಲಿವೆ. ಜಾತ್ರೆಯ ಪ್ರಯುಕ್ತ ಸಿಗಂದೂರು ಸೇತುವೆ, ದೇವಸ್ಥಾನವನ್ನು ತಳಿರು ತೋರಣ, ಬಗೆ ಬಗೆಯ ಹೂಗಳಿಂದ ಸಿಂಗರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರಿನಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ತೂಗು ಸೇತುವೆಯ ಬಳಿಕ ಮೊದಲ ಮಕರ ಸಂಕ್ರಾಂತಿ ಜಾತ್ರೆ ನಾಳೆ ನಡೆಯಲಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಿಗೆ ಲಕ್ಷಾಂತರ ಭಕ್ತರ ದಂಡೇ ಹರಿದು ಬರುವ ನಿರೀಕ್ಷೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ಇದೆ. ಮಕರ ಸಂಕ್ರಾಂತಿಯ ಪ್ರಯುಕ್ತ ನಡೆಯುವಂತ ಜಾತ್ರಾ ಮಹೋತ್ಸವಕ್ಕೆ ಸಿಗಂದೂರು ತೂಗುಸೇತುವೆಯನ್ನು ಮಾವಿನ ತೋರಣದಿಂದ ಅಲಂಕರಿಸಲಾಗಿದೆ. ದಾರಿಯುದ್ಧಕ್ಕೂ ಭಕ್ತರನ್ನು ತಳಿರು ತೋರಣಗಳು ಸ್ವಾಗತಿಸುತ್ತವೆ. ದೇವಸ್ಥಾನದ ಆವರಣದಲ್ಲಿ ವಿಶೇಷ ರೀತಿಯಲ್ಲಿ ಬಗೆ ಬಗೆಯ ಹೂವುಗಳಿಂದ ಸಿಂಗರಿಸಲಾಗಿದೆ.…
ನವದೆಹಲಿ: ಭಾರತ ಸೇರಿದಂತೆ ವಿಶ್ವದಾದ್ಯಂತ ಎಕ್ಸ್ ಡೌನ್ ಆಗಿದೆ. ಹೀಗಾಗಿ ಬಳಕೆದಾರರು ಪೋಸ್ಟ್, ವೀಡಿಯೋ, ಪೋಟೋ ಮಾಡೋದಕ್ಕೆ ಪರದಾಡುವಂತೆ ಆಗಿದೆ ಎಂಬುದಾಗಿ ತಿಳಿದು ಬಂದಿದೆ. Downdetector.com ಪ್ರಕಾರ, ಮಂಗಳವಾರ ಪ್ರಪಂಚದಾದ್ಯಂತ ಸಾವಿರಾರು ಬಳಕೆದಾರರಿಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ X ಕಾರ್ಯನಿರ್ವಹಿಸಲಿಲ್ಲ, ಅವರು ಸ್ಥಗಿತಗೊಂಡಿದ್ದಾರೆ ಎಂದು ವರದಿ ಮಾಡಿದ್ದಾರೆ.
ಬೆಂಗಳೂರು: ಕಾಲೇಜುಗಳು ಹಾಗೂ ವಿವಿಯಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರು ರಚಿಸಿದ ಸಮಿತಿಯು ಮಂಗಳವಾರ *ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆಸಿತು. ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ನಡೆದ ಸಭೆಯಲ್ಲಿ ಸಮಿತಿಯು, ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಕುರಿತು ಸಾಧಕ ಬಾಧಕಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಸಿತು. ಕಾಲೇಜುಗಳು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಅಗತ್ಯತೆ, ಪ್ರಸ್ತುತತೆ, ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳು, ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಮಿತಿಯು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಬೇಕಾದರೆ ಚುನಾವಣೆ ನಡೆಸುವುದು ಅತ್ಯಗತ್ಯ ಎಂಬ ಅಭಿಪ್ರಾಯವನ್ನು ಸಮಿತಿಯ ಸದಸ್ಯರು ಸಭೆಯಲ್ಲಿ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಚುನಾವಣೆಗಳನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವುದು, ಶೈಕ್ಷಣಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ನಡೆಸಬೇಕು.ಯಾವುದೇ ಕಾರಣಕ್ಕೂ ಏಕಪಕ್ಷಿಯಾಗಿ ನಿರ್ಧಾರ ತೆಗೆದುಕೊಳ್ಳುದೆ, ಎಲ್ಲರ ಅಭಿಪ್ರಾಯವನ್ನು ಕ್ರೋಢಿಕರಿಸಿಕೊಂಡು ಅಂತಿಮ…
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ನಾಳೆಯಿಂದ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ ನಡೆಯಲಿದೆ. ಜನವರಿ 14ರ ನಾಳೆಯಿಂದ ಜನವರಿ.26ರವರೆಗೆ ನಡೆಯಲಿದೆ. ಈ ಕುರಿತಂತೆ ತೋಟಗಾರಿಕಾ ಇಲಾಖೆಯಿಂದ ಮಾಹಿತಿ ನೀಡಿದ್ದು, ಜನವರಿ.14ರಿಂದ 26ರವರೆಗೆ ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. 3.2 ಕೋಟಿದಿಂದ ಆಯೋಜಿಸಲಾಗಿದೆ. 35 ಲಕ್ಷಕ್ಕೂ ಹೆಚ್ಚು ಪ್ರದರ್ಶನಕ್ಕೆ ಹೂವುಗಳನ್ನು ಬಳಕೆ ಮಾಡಲಾಗಿದೆ. 136 ಉದ್ಯಾನದಲ್ಲಿ ಸಿಸಿಟಿವಿ ಸುರಕ್ಷತೆಗಾಗಿ ಅಳವಡಿಸಲಾಗಿದೆ ಎಂದಿದೆ. ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ವಯಸ್ಕರಿಗೆ 80 ರೂಪಾಯಿ, ರಜಾ ದಿನಗಳಲ್ಲಿ 100 ರುಪಾಯಿ ಹಾಗೂ ಮಕ್ಕಳಿಗೆ 30 ರೂಪಾಯಿ ನಿಗದಿ ಪಡಿಸಲಾಗಿದೆ. ಸಮವಸ್ತ್ರ ಧರಿಸಿ ಬರುವ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದೆ. ನಾಳೆಯಿಂದ ಆರಂಭಗೊಳ್ಳುತ್ತಿರುವಂತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವು ಬೆಳಗ್ಗೆ 6ರಿಂದ ಸಂಜೆ 7ರವರೆಗೆ ಇರಲಿದೆ. ಟಿಕೆಟ್ ಗಳನ್ನು ಲಾಲ್ ಬಾಗ್ ಗೇಟ್ ನಲ್ಲಿನ ಟಿಕೆಟ್ ಕೌಂಟರ್ ನಲ್ಲಿ ಖರೀದಿಸಬಹುದಾಗಿ ಎಂದಿದೆ. https://twitter.com/KarnatakaVarthe/status/2011009341835657249
ಬೆಂಗಳೂರು: ನಾಳೆಯಿಂದ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭಗೊಳ್ಳಲಿದೆ. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು–ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಜ.14ರಿಂದ 26ರವರೆಗೆ ನಡೆಯಲಿದೆ. ಈ ಪ್ರದರ್ಶನಕ್ಕೆ ಪೂರಕವಾಗಿ ವಿವಿಧ ಪುಷ್ಪಾಧಾರಿತ ಕಲೆಗಳ (ಇಕೆಬಾನ, ಜಾನೂರ್, ಥಾಯ್ ಆರ್ಟ್, ತರಕಾರಿ ಕೆತ್ತನೆ, ಪುಷ್ಪ ರಂಗೋಲಿ) ಪ್ರದರ್ಶನ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತರು ಹಾಗೂ ಪ್ರದರ್ಶಕರು ಜನವರಿ 14ರೊಳಗಾಗಿ ಅರ್ಜಿ ಸಲ್ಲಿಸಿ. ತೋಟಗಾರಿಕೆ ಅಪರ ನಿರ್ದೇಶಕರ ಕಚೇರಿ (ಯೋಜನೆ), ಲಾಲ್ಬಾಗ್, ಬೆಂಗಳೂರು ಇವರಿಂದ ಅರ್ಜಿಯನ್ನು ಪಡೆಯಬಹುದು. https://twitter.com/KarnatakaVarthe/status/2011018509590118645
ಕೇರಳ: ಕೇರಳದಲ್ಲಿ ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಕೇರಳ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಯ್ಯಪ್ಪ ಮಾಲಾಧಾರಿಗಳ ಮೇಲೆ ಕೇರಳ ಪೊಲೀಸರು ಲಾಠಿ ಚಾರ್ಜ್ ಮಾಡಿರೋ ಆರೋಪ ಕೇಳಿ ಬಂದಿದೆ. ಇದಷ್ಟೇ ಅಲ್ಲದೇ ಕರ್ನಾಟಕ ನೋಂದಣಿ ವಾಹನಗಳಿಗೆ ಪ್ರವೇಶವನ್ನು ಪೊಲೀಸರು ನೀಡಿಲ್ಲ. ಎರಿಮಲೆಯಲ್ಲೇ ರಾಜ್ಯದ ವಾಹನಗಳನ್ನು ಕೇರಳ ಪೊಲೀಸರು ತಡೆದಿದ್ದಾರೆ ಎನ್ನಲಾಗಿದೆ. ಶಬರಿಮಲೆಯಿಂದ 60 ಕಿಲೋಮೀಟರ್ ದೂರದಲ್ಲೇ ಪೊಲೀಸರು ಕರ್ನಾಟಕದ ವಾಹನಗಳ್ನು ತಡೆದಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಕೇರಳಕ್ಕೆ ತೆರಳಿದ್ದಂತ ಅಯ್ಯಪ್ಪ ಮಾಲಾಧಾರಿಗಳನ್ನು ಪೊಲೀಸರು ತಡೆದಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಶಬರಿಮಲೆಗೆ ತೆರಳಿರುವ ನೂರಾರು ಭಕ್ತರು ರಸ್ತೆಯಲ್ಲೇ ಅಡುಗೆ ಮಾಡಿ, ಊಟ ಮಾಡಿ, ಕೇರಳ ಪೊಲೀಸರ ನಡೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್ ಸಂಪರ್ಕಕ್ಕೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಹೊಂದಿರುವ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಅನ್ನು ಬಿಡುಗಡೆಮಾಡಿದೆ. ಈ ಡಿಜಿಟಲ್ ವೇದಿಕೆ ರಾಜ್ಯಾದ್ಯಂತ ಇವಿ ಮೂಲಸೌಕರ್ಯದ ಅಭಿವೃದ್ಧಿಗೆ ವೇಗ ನೀಡುವ ಜೊತೆಗೆ ಸ್ವಚ್ಛ ಚಲನಶೀಲತೆಯನ್ನು ಉತ್ತೇಜಿಸುವ ಗುರಿ ಹೊಂದಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇತ್ತೀಚೆಗೆ ಬೆಸ್ಕಾಂ ನಿಗಮ ಕಚೇರಿಯಲ್ಲಿ ಈ ವಿಶಿಷ್ಟ ಪೋರ್ಟಲ್ಗೆ ಚಾಲನೆ ನೀಡಿದರು. ಖಾಸಗಿ ಭೂಮಾಲೀಕರು, ಸರ್ಕಾರಿ ಇಲಾಖೆಗಳು, ಖಾಸಗಿ ಸಂಸ್ಥೆಗಳು ಹಾಗೂ ಚಾರ್ಜ್ ಸ್ಟೇಷನ್ ಆಪರೇಟರ್ಗಳು ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಬೆಸ್ಕಾಂನಿಂದ ವಿದ್ಯುತ್ ಸಂಪರ್ಕವನ್ನು ತ್ವರಿತವಾಗಿ ಪಡೆಯಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಪೋರ್ಟಲ್ ನಲ್ಲಿ ಕಲ್ಪಿಸಲಾಗಿದೆ. ನಗರ ಹಾಗೂ ಹೆದ್ದಾರಿ ಪ್ರದೇಶಗಳಲ್ಲಿ ಸಾರ್ವಜನಿಕ ಇವಿ ಮೂಲಸೌಕರ್ಯಗಳನ್ನು ಅತ್ಯಂತ ತ್ವರಿತಗತಿಯಲ್ಲಿ…
ಶಿವಮೊಗ್ಗ: ಪಂಚ ಗ್ಯಾರಂಟಿ ಯೋಜನೆಗಳಿಂದ ಶಿವಮೊಗ್ಗ ಜಿಲ್ಲೆಗೆ 3023.95 ಕೋಟಿ ರೂ.ಹಣವನ್ನು ಕಾಂಗ್ರೆಸ್ ಸರ್ಕಾರ ವೆಚ್ಚ ಮಾಡುವ ಮುಖಾಂತರ ಜಿಲ್ಲೆಯ ಜನತೆಗೆ ಬದುಕಿನ ಗ್ಯಾರಂಟಿಯನ್ನು ನೀಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣ ವ್ಯಯಿಸಿದೆ. ಇದರಿಂದ ರಾಜ್ಯದ ತಲಾದಾಯ ಕೂಡ ಹೆಚ್ಚಲು ಸಹಕಾರಿಯಾಯಿತು ಎಂದರು. 2013-14ರಲ್ಲಿ ರಾಜ್ಯದ ತಲಾದಾಯ 1,05,000 ರೂ.ಗಳಷ್ಟಿತ್ತು. ಕಳೆದ ಮೂರು ತಿಂಗಳ ಹಿಂದೆ ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ರಾಜ್ಯದ ತಲಾದಾಯ 2,04,485 ರೂ.ಗಳಿಗೆ ಏರಿಕೆಯಾಗಿದೆ. ಇದಕ್ಕೆ ಗ್ಯಾರಂಟಿಗಳೇ ಪ್ರಮುಖ ಕಾರಣ. ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಭರವಸೆ, ಭದ್ರತೆ ಮತ್ತು ಗೌರವವನ್ನು ತರಲು ನೆರವಾಗಿವೆ. ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ…














