Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಫೆ.3ರಿಂದ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಆರಂಭಗೊಳ್ಳಲಿದೆ. ಈ ಜಾತ್ರೆಗೆ ಅಮ್ಯೂಸ್ಮೆಂಟ್ ಪಾರ್ಕ್ ಅತ್ಯಂತ ಆಕರ್ಷಣೆಯಲ್ಲಿ ಒಂದು. ಇದರ ಟಿಕೆಟ್ ದರವನ್ನು ಟೆಂಡರ್ ಹಿಡಿದವರು, ಉದ್ಯಮಿ ಲಿಂಗರಾಜು ರಿವೀಲ್ ಮಾಡಿದ್ದಾರೆ. ಹಾಗಾದರೆ ಎಷ್ಟು ಟಿಕೆಟ್ ದರ ಅನ್ನೋ ಬಗ್ಗೆ ಮುಂದೆ ಓದಿ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಟೆಂಡರ್ ದಾರ, ಉದ್ಯಮಿ ಡಿ.ಹೆಚ್.ಲಿಂಗರಾಜು ಅವರು, ಮಾರಿಕಾಂಬ ಜಾತ್ರೆಯ ಪ್ರಯುಕ್ತ ಅಮ್ಯೂಸ್ಮೆಂಟ್ ಪಾರ್ಕ್ ಟೆಂಡರ್ 1.34 ಕೋಟಿಗೆ ಹಿಡಿಯಲಾಗಿರುವುದೇ ಬಹು ಚರ್ಚೆಯಾಗುತ್ತಿದೆ. ಕಾರಣ ಅಷ್ಟೇ ದುಬಾರಿಯಾದ ದರವನ್ನು ಅಮ್ಯೂಸ್ಮೆಂಟ್ ಪಾರ್ಕ್ ಟಿಕೆಟ್ ದರ ನಿಗದಿ ಪಡಿಸಲಾಗುತ್ತದೆ ಅಂತ. ಆದರೇ ನಾವು ಜನಸಾಮಾನ್ಯರ ಪರವಾಗಿದ್ದೇವೆ. ಯಾವುದೇ ಕಾರಣಕ್ಕೂ ದುಬಾರಿ ದರ ನಿಗದಿ ಮಾಡೋದಿಲ್ಲ ಎಂದರು. ಸಾಮಾನ್ಯರಿಗೆ ಕೈಗೆಟುಕುವ ರೀತಿಯ ದರ ಎನ್ನುವಂತೆ ಕಳೆದ ಬಾರಿಗಿಂತ ಸ್ವಲ್ಪವೇ ಹೆಚ್ಚಿಗೆ ಮಾಡಲಾಗಿದೆ. ದೊಡ್ಡವರಿಗೆ ರೂ.100, ಮಕ್ಕಳಿಗೆ ರೂ.80 ಟಿಕೆಟ್ ದರ ನಿಗದಿ ಪಡಿಸಲಾಗಿದೆ.…
ಶಿವಮೊಗ್ಗ: ಇಂದು ಸಾಗರಕ್ಕೆ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ವಿ.ಮನೋಹರ್, ನಟ ಸೃಜನ್ ಲೋಕೇಶ್ ಆಗಮಿಸಲಿದ್ದಾರೆ. ಅಲ್ಲದೇ ಜೀ ಕನ್ನಡದ ಸರಿಗಮಪ ಖ್ಯಾತಿಯ ಬಾಳು ಬೆಳಗುಂದಿ, ಜ್ಞಾನೇಶ್ ಕೂಡ ಆಗಮಿಸಲಿದ್ದು, ನಿಮ್ಮನ್ನು ಹಾಡಿ ರಂಜಿಸಲಿದ್ದಾರೆ. ಹೌದು.. ಇಂದು ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದ ಸಾಂಸ್ಕೃತಿಕ ಸಂಜೆ ಹಾಗೂ ರಾಜ್ಯ ಮಟ್ಟದ ಸಹ್ಯಾದ್ರಿ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಈ ಎಲ್ಲರೂ ಇರಲಿದ್ದಾ ಅಂತ ಸುದ್ದಿ ಸಹ್ಯಾದ್ರಿಯ ಪ್ರಧಾನ ಸಂಪಾದಕ ರಾಘವೇಂದ್ರ ತಾಳಗುಪ್ಪ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎನ್ನುವಂತೆ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದಿಂದ ಸಾಂಸ್ಕೃತಿಕ ಸಂಜೆ ಹಾಗೂ ರಾಜ್ಯ ಮಟ್ಟದ ಸಹ್ಯಾದ್ರಿ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಚಲನಚಿತ್ರ ಸಂಗೀತ ನಿರ್ದೇಶಕ ವಿ.ಮನೋಹರ್ ಭಾಗವಹಿಸಲಿದ್ದಾರೆ. ಅಲ್ಲದೇ ಸ್ಯಾಂಡಲ್ ವುಡ್ ಖ್ಯಾತ ನಟ, ನಿರೂಪಕ ಸೃಜನ್ ಲೋಕೇಶ್ ಕೂಡ ಜೊತೆಗಿರಲಿದ್ದಾರೆ ಎಂದು ಹೇಳಿದ್ದಾರೆ. ಇಂದು ಸಂಜೆ 4.30ರಿಂದ ಸಾಗರದ…
ಶಿವಮೊಗ್ಗ: ಜಿಲ್ಲೆಯ ಸಾಗರದ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದಿಂದ ಇಂದು ಸಾಂಸ್ಕೃತಿಕ ಸಂಜೆ ಹಾಗೂ ರಾಜ್ಯ ಮಟ್ಟದ ಸಹ್ಯಾದ್ರಿ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಪ್ರಧಾನ ಸಂಪಾದಕ ರಾಘವೇಂದ್ರ ತಾಳಗುಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎನ್ನುವಂತೆ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದಿಂದ ಸಾಂಸ್ಕೃತಿಕ ಸಂಜೆ ಹಾಗೂ ರಾಜ್ಯ ಮಟ್ಟದ ಸಹ್ಯಾದ್ರಿ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಚಲನಚಿತ್ರ ಸಂಗೀತ ನಿರ್ದೇಶಕ ವಿ.ಮನೋಹರ್ ಭಾಗವಹಿಸಲಿದ್ದಾರೆ. ಅಲ್ಲದೇ ಸ್ಯಾಂಡಲ್ ವುಡ್ ಖ್ಯಾತ ನಟ, ನಿರೂಪಕ ಸೃಜನ್ ಲೋಕೇಶ್ ಕೂಡ ಜೊತೆಗಿರಲಿದ್ದಾರೆ ಎಂದು ಹೇಳಿದ್ದಾರೆ. ಇಂದು ಸಂಜೆ 4.30ರಿಂದ ಸಾಗರದ ಗಾಂಧಿನಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಜಿ ಕನ್ನಡದ ಸರಿಗಮಪ ಖ್ಯಾತಿ ಹಾಗೂ ಉತ್ತರ ಕರ್ನಾಟಕದ ಅತ್ಯಂತ ಜನಪ್ರಿಯ ಹಾಡುಗಾರ ಬಾಳು ಬೆಳಗುಂದಿ, ಜ್ಞಾನೇಶ ಅವರುಗಳು ಜನರನ್ನು ಹಾಡಿ ರಂಜಿಸಲ…
ಬೆಂಗಳೂರು: ರಾಜ್ಯದ ನಾಲ್ಕು ನಿಮಗಳ ಸಾರಿಗೆ ಬಸ್ಸು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತ ಜಾಹೀರಾತನ್ನು ನಿಷೇಧಿಸಿ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಆ ಮೂಲಕ ತಂಬಾಕು ಉತ್ನನ್ನಗಳ ಸೇವನೆಯ ಜಾಹೀರಾತಿಗೆ ಬ್ರೇಕ್ ಹಾಕಿದ್ದಾರೆ. ಇಂದು ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ, ಈ ಕೂಡಲೇ ಜಾರಿಗೆ ಬರುವಂತೆ, ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ/ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪುಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸೂಚಿಸುತ್ತಿದ್ದೇನೆ ಎಂದಿದ್ದಾರೆ. ಮುಂದುವರೆದು, ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡುವುದು ಎಂಬುದಾಗಿ ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಆದೇಶ ಮಾಡಿದ್ದಾರೆ.…
ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವಂತ ಬರೋಬ್ಬರಿ 2000 ಬೋಧಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದು, ಆಡಳಿತ ಇಲಾಖೆಯ ಕಡತವನ್ನು ಪರಿಶೀಲಿಸಲಾಗಿ 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ-124ರ ಘೋಷಣೆಯಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಎದುರಾಗಿ ಆಡಳಿತ ಇಲಾಖೆ ಪ್ರಸ್ತಾಪಿಸಿದಂತೆ 2000 ಬೋಧಕ ಹುದ್ದೆಗಳ ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿಸಿದೆ ಎಂದಿದ್ದಾರೆ. ಹೀಗಿವೆ ಖಾಲಿ ಹುದ್ದೆಗಳ ವಿವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು- 826 ಹುದ್ದೆಗಳು ಸರ್ಕಾರಿ ಪಾಲಿಟೆಕ್ನಿಕ್ – 941 ಹುದ್ದೆಗಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು- 186 ಹುದ್ದೆಗಳು ಯುವಿಸಿಇ ವಿಶ್ವವಿದ್ಯಾಲಯ – 47 ಹುದ್ದೆಗಳು ಒಟ್ಟಾರೆಯಾಗಿ 2000…
ಮುಂಬೈ: ಬಾರಾಮತಿಯಲ್ಲಿ ನಡೆದ ದುರದೃಷ್ಟಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಪವಾರ್ ನಿಧನರಾದ ನಂತರ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಮುಂದಿನ ಉಪಮುಖ್ಯಮಂತ್ರಿಯಾಗಲಿದ್ದಾರೆ. ಪ್ರಫುಲ್ ಪಟೇಲ್ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಜಿತ್ ಪವಾರ್ ಮಹಾರಾಷ್ಟ್ರದ ಅತ್ಯಂತ ದೀರ್ಘಾವಧಿಯ ಉಪಮುಖ್ಯಮಂತ್ರಿಯಾಗಿದ್ದರು ಮತ್ತು ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಹಣಕಾಸು, ಯೋಜನೆ ಮತ್ತು ಅಬಕಾರಿ ಇಲಾಖೆಗಳನ್ನು ಹೊಂದಿದ್ದರು. ಮೂಲಗಳ ಪ್ರಕಾರ ಇಂದು ಮಧ್ಯಾಹ್ನ 2 ಗಂಟೆಗೆ ಎನ್ಸಿಪಿಯ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಇದರಲ್ಲಿ ಸುನೇತ್ರಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಇದರ ನಂತರ, ಸುನೇತ್ರಾ ಅವರು ಸಂಜೆ 5 ಗಂಟೆ ಸುಮಾರಿಗೆ ಮುಂಬೈನ ರಾಜಭವನದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಪ್ರಮಾಣವಚನ ಸಮಾರಂಭಕ್ಕೆ ರಾಜಭವನದಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಪಕ್ಷದ ಭವಿಷ್ಯದ ಬಗ್ಗೆ ಚರ್ಚಿಸಲು ಎನ್ಸಿಪಿಯ ಹಿರಿಯ ನಾಯಕರು ಸುನೇತ್ರಾ ಅವರನ್ನು ಭೇಟಿಯಾದ ಒಂದು ದಿನದ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ಈ ಸಂಬಂಧ ಫೆಬ್ರವರಿ.5ರಂದು ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯನ್ನು ನಡೆಸಲಿದ್ದಾರೆ. ಫೆಬ್ರವರಿ.5ರಂದು ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯನ್ನು ನಡಸಲಿದ್ದಾರೆ. ಈ ಸಭೆಯಲ್ಲಿ ಬಜೆಟ್ ಪೂರ್ವ ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸಲಿರುವಂತ ಅವರು, ಯಾವ ಕ್ಷೇತ್ರಕ್ಕೆ ಎಷ್ಟು ನೀಡುವುದು ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸಲಿದ್ದಾರೆ. ಈ ಪೂರ್ವಭಾವಿ ಸಭೆಯ ನಂತ್ರ ಸಿಎಂ ಸಿದ್ಧರಾಮಯ್ಯ ಅವರು ಎಲ್ಲಾ ಇಲಾಖೆಯ ಮುಖ್ಯಸ್ಥರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ. ಅಲ್ಲಿನ ಮಾಹಿತಿಗಳನ್ನು ಆಧರಿಸಿ, ಬಜೆಟ್ ಮಂಡನೆಯನ್ನು ಅಂತಿಮಗೊಳಿಸಲಿದ್ದಾರೆ. ಅಂದಹಾಗೇ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಈ ಹಿಂದೆ 16 ಬಾರಿ ಬಜೆಟ್ ಮಂಡಿಸಿದ್ದಾರೆ. ಇದೀಗ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡನೆಗೆ ಸಿದ್ಧಗೊಂಡಿದ್ದಾರೆ.
ಕ್ಯಾನ್ಸರ್ ರಾತ್ರೋರಾತ್ರಿ ಬೆಳವಣಿಗೆಯಾಗುವುದಿಲ್ಲ. ಇದು ಕ್ರಮೇಣ ಬೆಳೆಯುತ್ತದೆ ಮತ್ತು ಅನೇಕ ಜನರು ಗಮನಿಸಲು ವಿಫಲವಾಗುವ ಮುಂಚಿನ ಎಚ್ಚರಿಕೆ ಸಂಕೇತಗಳನ್ನು ಕಳುಹಿಸುತ್ತದೆ. ಪ್ರತಿ ವರ್ಷ, ಈ ಚಿಹ್ನೆಗಳನ್ನು ನಿರ್ಲಕ್ಷಿಸುವುದರಿಂದ ಅಥವಾ ತಪ್ಪಾಗಿ ಅರ್ಥೈಸಿಕೊಳ್ಳುವುದರಿಂದ ಸಾವಿರಾರು ಜೀವಗಳು ಕಳೆದುಹೋಗುತ್ತವೆ. ವಿವರಿಸಲಾಗದ ಆಯಾಸ, ಹಠಾತ್ ತೂಕ ನಷ್ಟ, ನಿರಂತರ ನೋವು, ಚರ್ಮದಲ್ಲಿನ ಬದಲಾವಣೆಗಳು ಅಥವಾ ಜೀರ್ಣಕ್ರಿಯೆಯ ಅಕ್ರಮಗಳಂತಹ ಲಕ್ಷಣಗಳನ್ನು ಗುರುತಿಸುವುದು ಜೀವಗಳನ್ನು ಉಳಿಸಬಹುದು. ನಿಮ್ಮ ದೇಹದ ಬಗ್ಗೆ ಗಮನ ಹರಿಸುವುದು ಮತ್ತು ವೈದ್ಯಕೀಯ ಸಲಹೆಯನ್ನು ಮೊದಲೇ ಪಡೆಯುವುದು ಸಮಯೋಚಿತ ಪತ್ತೆ ಮತ್ತು ಪರಿಣಾಮಕಾರಿ ಚಿಕಿತ್ಸೆಗೆ ಅನುವು ಮಾಡಿಕೊಡುತ್ತದೆ. ಈ ಸೂಕ್ಷ್ಮ ಸಂಕೇತಗಳನ್ನು ಆಲಿಸುವುದು ತೊಡಕುಗಳನ್ನು ತಡೆಗಟ್ಟುವಲ್ಲಿ ಮತ್ತು ದೀರ್ಘಕಾಲದವರೆಗೆ ನಿಮ್ಮ ಆರೋಗ್ಯವನ್ನು ರಕ್ಷಿಸುವಲ್ಲಿ ಮೊದಲ ಹೆಜ್ಜೆಯಾಗಿದೆ. ಹಿಮೋಗ್ಲೋಬಿನ್ನಲ್ಲಿನ ವಿವರಿಸಲಾಗದ ಕುಸಿತ ಹಿಮೋಗ್ಲೋಬಿನ್ನಲ್ಲಿನ ಹಠಾತ್ ಅಥವಾ ವಿವರಿಸಲಾಗದ ಕುಸಿತವು ಗಂಭೀರ ಆಧಾರವಾಗಿರುವ ಆರೋಗ್ಯ ಸಮಸ್ಯೆಗಳನ್ನು ಸೂಚಿಸುತ್ತದೆ. ಸ್ಪಷ್ಟ ಕಾರಣವಿಲ್ಲದೆ ರಕ್ತಹೀನತೆ ಕೆಲವೊಮ್ಮೆ ಕೆಲವು ರೀತಿಯ ಕ್ಯಾನ್ಸರ್ನ ಆರಂಭಿಕ ಸೂಚಕವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಿಮೋಗ್ಲೋಬಿನ್ ಮಟ್ಟವನ್ನು…
ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-20 ರವರೆಗೆ ಶಾಲಾ ಅವಧಿ ನಿಗಧಿಪಡಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31-10-2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್…
ಇತ್ತೀಚಿನ ದಿನಗಳಲ್ಲಿ, ನಮಗೆ ಅಗತ್ಯವಿರುವ ಹೆಚ್ಚಿನವು ನಮ್ಮ ಫೋನ್ಗಳೊಳಗೆ ಇವೆ. ಆದ್ದರಿಂದ ಭೌತಿಕ ಆಧಾರ್ ಕಾರ್ಡ್ ಅನ್ನು ಎಲ್ಲೆಡೆ ಕೊಂಡೊಯ್ಯುವುದು ಸ್ವಲ್ಪ ಹಳೆಯ ಶೈಲಿಯಂತೆ ಭಾಸವಾಗಬಹುದು ಮತ್ತು ಕೆಲವೊಮ್ಮೆ ಅಪಾಯಕಾರಿಯೂ ಆಗಿರಬಹುದು. ಅದಕ್ಕಾಗಿಯೇ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು ಇ-ಆಧಾರ್ ಅನ್ನು ಹೊರತಂದಿದೆ. ಇದು ನಿಮ್ಮ ಆಧಾರ್ನ ಡಿಜಿಟಲ್ ಆವೃತ್ತಿಯಾಗಿದ್ದು, UIDAI ನಿಂದ ಅಧಿಕೃತವಾಗಿ ನೀಡಲ್ಪಟ್ಟಿದೆ ಮತ್ತು ಡಿಜಿಟಲ್ ಸಹಿ ಮಾಡಲ್ಪಟ್ಟಿದೆ ಮತ್ತು ಇದು ಭೌತಿಕ ಕಾರ್ಡ್ನಂತೆಯೇ ಕಾನೂನು ಮೌಲ್ಯವನ್ನು ಹೊಂದಿದೆ. ನೀವು ಬ್ಯಾಂಕ್ ಖಾತೆಯನ್ನು ತೆರೆಯುತ್ತಿರಲಿ, ಪ್ರಯಾಣ ಮಾಡುವಾಗ ನಿಮ್ಮ ಗುರುತನ್ನು ದೃಢೀಕರಿಸುತ್ತಿರಲಿ ಅಥವಾ ಸರ್ಕಾರಿ ದಾಖಲೆಗಳೊಂದಿಗೆ ವ್ಯವಹರಿಸುತ್ತಿರಲಿ, ಇ-ಆಧಾರ್ ಜೀವನವನ್ನು ಗಮನಾರ್ಹವಾಗಿ ಸುಲಭಗೊಳಿಸುತ್ತದೆ. ನೀವು ಇನ್ನೂ ಅದನ್ನು ಡೌನ್ಲೋಡ್ ಮಾಡದಿದ್ದರೆ, ಒಳ್ಳೆಯ ಸುದ್ದಿ ಎಂದರೆ ಪ್ರಕ್ರಿಯೆಯು ತ್ವರಿತ, ಉಚಿತ ಮತ್ತು ಸಾಕಷ್ಟು ಸರಳವಾಗಿದೆ. ಇ-ಆಧಾರ್ ಅಂದ್ರೆ ಏನು? ಇ-ಆಧಾರ್ ಮೂಲಭೂತವಾಗಿ ನಿಮ್ಮ ಆಧಾರ್ ಕಾರ್ಡ್ನ ಸುರಕ್ಷಿತ ಪಿಡಿಎಫ್ ಪ್ರತಿಯಾಗಿದೆ. ಇದು ಭೌತಿಕ ಆವೃತ್ತಿಯಲ್ಲಿ ನೀವು ಕಂಡುಕೊಳ್ಳುವ ಎಲ್ಲವನ್ನೂ ಒಳಗೊಂಡಿದೆ,…














