Subscribe to Updates
Get the latest creative news from FooBar about art, design and business.
Author: kannadanewsnow09
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿಬಂದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನನ್ನು (PA) ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆಯ ವಿವರ: ಬುಧವಾರ ತಡಸಂಜೆ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ. ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ಅವರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಸರಣಿ ಗುಂಡಿನ ದಾಳಿ ನಡೆಸಿದ್ದಾರೆ. ಮೂರು ಸುತ್ತು ಗುಂಡಿನ ದಾಳಿ: ದಾಳಿಕೋರರು ಸುಮಾರು ಮೂರು ಸುತ್ತು ಗುಂಡು ಹಾರಿಸಿದ್ದು, ಚಂದ್ರನಾಥ್ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿಗೂ ಗಾಯ: ಈ ದಾಳಿಯ ವೇಳೆ ಅಲ್ಲಿದ್ದ ಓರ್ವ ಭದ್ರತಾ ಸಿಬ್ಬಂದಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳ: ವರದಿಗಳ ಪ್ರಕಾರ, ಸುವೇಂದು ಅಧಿಕಾರಿ ಅವರು ತಮ್ಮ ಮನೆಯ ಸಮೀಪದಲ್ಲಿದ್ದಾಗಲೇ ಈ ದಾಳಿ ನಡೆದಿದೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತೆ ನೆತ್ತರು ಹರಿದಿದೆ. ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರನ್ನೇ ಸೋಲಿಸಿ ಅಬ್ಬರಿಸಿದ್ದ ಬಿಜೆಪಿ ನಾಯಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆಯ ವಿವರ ಪಶ್ಚಿಮ ಬಂಗಾಳದ ಹೈ ಪ್ರೊಫೈಲ್ ಕ್ಷೇತ್ರಗಳಲ್ಲಿ ಒಂದಾದ ನಂದಿಗ್ರಾಮ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಸುವೇಂದು ಅಧಿಕಾರಿ ಅವರ ನೆರಳಿನಂತೆ ಗುರುತಿಸಿಕೊಂಡಿದ್ದ ಚಂದ್ರನಾಥ್ ಅವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ಮುಸುಕುಧಾರಿಗಳಾಗಿ ಬಂದ ದುಷ್ಕರ್ಮಿಗಳು ಅತ್ಯಂತ ಹತ್ತಿರದಿಂದ ಗುಂಡಿನ ದಾಳಿ ನಡೆಸಿದ್ದು, ಚಂದ್ರನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು: ಟಾರ್ಗೆಟ್ ಕಿಲ್ಲಿಂಗ್: ಸುವೇಂದು ಅಧಿಕಾರಿ ಅವರ ರಾಜಕೀಯ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಆಪ್ತನನ್ನೇ ಗುರಿಯಾಗಿಸಿ ಕೊಲೆ ಮಾಡಲಾಗಿದೆ. ರಾಜಕೀಯ ಸಂಘರ್ಷ: ಈ ಹತ್ಯೆಯ ಹಿಂದೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.…
ಶಿವಮೊಗ್ಗ: ಅರಣ್ಯ ಇಲಾಖೆಯ ಸಿಬ್ಬಂದಿ ಕಣ್ಣಿದ್ದೂ ಕುರುಡಾದರೇ ಅಥವಾ ಇದು ವ್ಯವಸ್ಥಿತ ಕರ್ಮಕಾಂಡವೇ? ಇಂತಹದೊಂದು ಪ್ರಶ್ನೆ ಮೂಡುವಂತೆ ಸಾಗರ ತಾಲ್ಲೂಕಿನ ಮಾಲ್ವೆಯಲ್ಲಿ ಸಾರ್ವಜನಿಕರು ಬೆಳೆಸಿದ ಗ್ರಾಮ ಅರಣ್ಯದ ಮರಗಳನ್ನು ಅಕ್ರಮವಾಗಿ ಲೂಟಿ ಮಾಡಿರುವ ಘಟನೆ ಬಟಾಬಯಲಾಗಿದೆ. 30 ವರ್ಷಗಳ ಗ್ರಾಮಸ್ಥರ ಶ್ರಮಕ್ಕೆ ಕನ್ನ ಸಾಗರ ತಾಲ್ಲೂಕಿನ ಮಾಲ್ವೆ ಗ್ರಾಮದ ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಸುಮಾರು 30 ವರ್ಷಗಳ ಹಿಂದೆ ಗ್ರಾಮ ಅರಣ್ಯ ಸಮಿತಿಯ ವತಿಯಿಂದ ಹೈಬ್ರಿಡ್ ಅಕೇಶಿಯಾ ಮರಗಳನ್ನು ನೆಡಲಾಗಿತ್ತು. ಗ್ರಾಮಸ್ಥರು ಮಕ್ಕಳಂತೆ ಸಲಹಿದ ಈ ಮರಗಳು ಇಂದು ಬೃಹತ್ ಗಾತ್ರದ ಹೆಮ್ಮರಗಳಾಗಿ ಬೆಳೆದು ನಿಂತಿವೆ. ಆದರೆ, ಈ ಬೆಲೆಬಾಳುವ ಸಂಪತ್ತಿನ ಮೇಲೆ ಕಣ್ಣಿಟ್ಟ ಟಿಂಬರ್ ಕಾಂಟ್ರಾಕ್ಟರ್ ಒಬ್ಬರು, ಕಳೆದ ಕೆಲವು ದಿನಗಳಿಂದ ರಾಜಾರೋಷವಾಗಿ ಮರಗಳನ್ನು ಕಡಿದು ಲಕ್ಷಾಂತರ ರೂಪಾಯಿ ಮೌಲ್ಯದ ನಾಟಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬಯಲಾದ ಲೂಟಿ ಗ್ರಾಮದ ನಿವಾಸಿ ಕೃಷ್ಣ ಅವರು ತಮ್ಮ ತೋಟಕ್ಕೆ ನೀರು ಬಿಡಲು ಹೋದಾಗ…
ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ಡಾ. ಕೆ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರವು ಹಿಂಪಡೆದಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್)’ ಹುದ್ದೆಗೆ ಮರುನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಬೆಳವಣಿಗೆಯು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿವಾದದ ಹಿನ್ನೆಲೆ ಮತ್ತು ಕಾರಣ ಕಳೆದ ಜನವರಿ ತಿಂಗಳಲ್ಲಿ ವೈರಲ್ ಆಗಿದ್ದ ವಿವಾದಾತ್ಮಕ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿಯನ್ನು ಸರ್ಕಾರ ಅಮಾನತುಗೊಳಿಸಿತ್ತು. ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರದ ಆದೇಶದ ಮೇರೆಗೆ ಅವರನ್ನು 2026ರ ಜನವರಿಯಲ್ಲಿ ಅಮಾನತುಗೊಳಿಸಿ, ತನಿಖೆಗೆ ಆದೇಶಿಸಲಾಗಿತ್ತು. ಆದರೆ, ಇದೀಗ ಅವರ ಅಮಾನತು ಅವಧಿಯನ್ನು ರದ್ದುಗೊಳಿಸಿ…
ಮಂಡ್ಯ : ಮದ್ದೂರು ನಗರದ ಚನ್ನೆಗೌಡನದೊಡ್ಡಿಯಲ್ಲಿ ಮೂವರು ಮುಸ್ಲಿಂ ಯುವಕರು ರೈಲ್ವೆ ಗೇಟ್ ಮೆನ್ ಗೆ ಚಾಕು ಇರಿದಿರುವ ಘಟನೆ ಬುಧವಾರ ಸಂಜೆ ಜರುಗಿದೆ. ಕುಮಾರ್ (36) ಗಾಯಗೊಂಡ ನೌಕರ ನಾಗಿದ್ದು, ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ರಾಜ್ಯ ರಾಣಿ (20659) ರೈಲಿನಲ್ಲಿ ನಾಲ್ವರು ಮುಸ್ಲಿಂ ಯುವಕರು ಪ್ರಯಾಣಿಸುವ ವೇಳೆ ಪ್ರಯಾಣಿಕರ ನಡುವೆ ಜಗಳ ಉಂಟಾಗಿದೆ. ಇದೇ ವೇಳೆ ಮುಸ್ಲಿಂ ಯುವಕರು ಚೈನ್ ಎಳೆದು ರೈಲಿನಿಂದ ಇಳಿದು ಪರಾರಿಯಾಗುವ ವೇಳೆ ರೈಲ್ವೆ ಗೆಟ್ ಮೆನ್ ಕುಮಾರ್ ಯುವಕರನ್ನು ಪ್ರಶ್ನೆ ಮಾಡಲು ಹೋದಾಗ ಏಕಾಏಕಿ ಕುಮಾರ್ ಅವರ ಮೇಲೆ ಚಾಕಗಳಿಂದ ನಾಲ್ಕೈದು ಕಡೆಗೆ ಹಲ್ಲೆ ಮಾಡಿದ್ದಾರೆ. ತಕ್ಷಣವೇ ಸ್ಥಳೀಯರು ಆರೋಪಿಗಳಾದ ಶೋಯಿಬ್, ವಾಸೀಂ, ಸೌಬಾನ್ ಕರೋಶಿ ಹಿಡಿದು ಹಲ್ಲೆ ನಡೆಸಿ ಪೋಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/media-legend-cnn-founder-ted-turner-no-more/ https://kannadanewsnow.com/kannada/dmk-lashes-out-at-congress-for-joining-hands-with-tvk-in-tamil-nadu-accuses-it-of-betrayal/
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಶಕಗಳಿಂದ ಜೊತೆಗಿದ್ದ ಡಿಎಂಕೆ ಮೈತ್ರಿಕೂಟದಿಂದ ಹೊರಬಂದಿರುವ ಕಾಂಗ್ರೆಸ್, ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಕಾಂಗ್ರೆಸ್ನ ಈ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಡಿಎಂಕೆ, ರಾಹುಲ್ ಗಾಂಧಿ ಅವರ ಈ ನಿರ್ಧಾರವು ಮತದಾರರಿಗೆ ಮತ್ತು ಜನಾದೇಶಕ್ಕೆ ಬಗೆದ ದ್ರೋಹ ಎಂದು ವಾಗ್ದಾಳಿ ನಡೆಸಿದೆ. ಪ್ರಮುಖ ಮುಖ್ಯಾಂಶಗಳು: ಟಿವಿಕೆ ಅತಿ ದೊಡ್ಡ ಪಕ್ಷ: 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಇದು ಬಹುಮತದ (118 ಸ್ಥಾನಗಳು) ಸಂಖ್ಯೆಗಿಂತ ಕಡಿಮೆಯಾಗಿದೆ. ಕಾಂಗ್ರೆಸ್ ಬೆಂಬಲ: 5 ಶಾಸಕರನ್ನು ಹೊಂದಿರುವ ಕಾಂಗ್ರೆಸ್, ಟಿವಿಎನ್ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದು, ಇದರಿಂದ ಮೈತ್ರಿಕೂಟದ ಒಟ್ಟು ಬಲ 113ಕ್ಕೆ ತಲುಪಿದೆ. ಡಿಎಂಕೆ ಆಕ್ರೋಶ: ಡಿಎಂಕೆ ನಾಯಕರು ಕಾಂಗ್ರೆಸ್ನ ಈ ಕ್ರಮವನ್ನು ‘ಬೆನ್ನಿಗೆ ಚುಚ್ಚಿದ ಕೆಲಸ’ (Act of…
ಅಟ್ಲಾಂಟಾ: ಜಗತ್ತಿನ ಮೊದಲ 24 ಗಂಟೆಗಳ ಸುದ್ದಿ ವಾಹಿನಿ ‘CNN’ (ಸಿಎನ್ಎನ್) ಸ್ಥಾಪಿಸುವ ಮೂಲಕ ಟೆಲಿವಿಷನ್ ಸುದ್ದಿ ಪ್ರಸಾರ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದ್ದ ಮಾಧ್ಯಮ ಮೊಗಲ್ ಮತ್ತು ಲೋಕೋಪಕಾರಿ ಟೆಡ್ ಟರ್ನರ್ (87) ಅವರು ಬುಧವಾರ ನಿಧನರಾದರು. ಟರ್ನರ್ ಎಂಟರ್ಪ್ರೈಸಸ್ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಅವರು ತಮ್ಮ ಕುಟುಂಬದವರ ಸಮ್ಮುಖದಲ್ಲಿ ಶಾಂತಿಯುತವಾಗಿ ಕೊನೆಯುಸಿರೆಳೆದಿದ್ದಾರೆ. ‘ದ ಮೌತ್ ಆಫ್ ದ ಸೌತ್’: ಮಾಧ್ಯಮ ಸಾಮ್ರಾಜ್ಯದ ನಿರ್ಮಾತೃ ಓಹಿಯೋದಲ್ಲಿ ಜನಿಸಿ ಅಟ್ಲಾಂಟಾವನ್ನು ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡಿದ್ದ ಟರ್ನರ್, ತಮ್ಮ ನೇರ ನುಡಿಯ ಸ್ವಭಾವದಿಂದಾಗಿ ‘ದ ಮೌತ್ ಆಫ್ ದ ಸೌತ್’ ಎಂದೇ ಖ್ಯಾತರಾಗಿದ್ದರು. ಕೇವಲ ಸುದ್ದಿ ವಾಹಿನಿ ಮಾತ್ರವಲ್ಲದೆ, ಕೇಬಲ್ ಟಿವಿಯ ಮೊದಲ ‘ಸೂಪರ್ ಸ್ಟೇಷನ್’, ಚಲನಚಿತ್ರ ಮತ್ತು ಕಾರ್ಟೂನ್ ಚಾನೆಲ್ಗಳು ಹಾಗೂ ‘ಅಟ್ಲಾಂಟಾ ಬ್ರೇವ್ಸ್’ ನಂತಹ ಕ್ರೀಡಾ ತಂಡಗಳನ್ನು ಒಳಗೊಂಡ ಬೃಹತ್ ಮಾಧ್ಯಮ ಸಾಮ್ರಾಜ್ಯವನ್ನು ಅವರು ಕಟ್ಟಿದ್ದರು. ಪರಿಸರ ಪ್ರೇಮಿ ಮತ್ತು ಲೋಕೋಪಕಾರಿ ಟೆಡ್ ಟರ್ನರ್ ಕೇವಲ ಉದ್ಯಮಿಯಾಗಿರದೆ, ಬಹುಮುಖ ವ್ಯಕ್ತಿತ್ವದವರಾಗಿದ್ದರು: ಪರಿಸರ…
ಯಸಳೂರು: ಪ್ರವಾಸಿಗರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಹುತಾತ್ಮ ಅರ್ಜುನನ ಸ್ಮಾರಕ ಸ್ಥಳಕ್ಕೆ ಹೋಗಲು ಈಗ ನಿರ್ಮಿಸಿರುವ ಕಚ್ಚಾ ರಸ್ತೆಯಲ್ಲಿ ಪಕ್ಕಾ ರಸ್ತೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಉದ್ಘಾಟನೆ ನೆರವೇರಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಮಾರಕ ಪ್ರದೇಶ ಆನೆ ಸಂಚರಿಸುವ ಸ್ಥಳವಾಗಿದ್ದು, ಇಲ್ಲಿಗೆ ಬರುವ ಪ್ರವಾಸಿಗರ ಸುರಕ್ಷತೆಯೂ ನಮಗೆ ಪ್ರಥಮ ಆದ್ಯತೆಯಾಗಿದೆ ಎಂದರು. ಅರ್ಜುನ ಆನೆಯ ಗುಣಗಾನ: 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತು ಗಜ ಗಾಂಭೀರ್ಯದಿಂದ ಹೆಜ್ಜೆಹಾಕಿದ್ದ ಅರ್ಜುನ, ಅರಣ್ಯ ಇಲಾಖೆಯ ನೆಚ್ಚಿನ ಆನೆಯಾಗಿತ್ತು. ಯಾವುದೇ ಪುಂಡಾನೆ ಸೆರೆ ಕಾರ್ಯಾಚರಣೆ ಅಥವಾ ಹುಲಿ ಸೆರೆ ಕಾರ್ಯಾಚರಣೆ ಎಂದೊಡನೆ ಮೊದಲು ನೆನಪಿಗೆ ಬರುತ್ತಿದ್ದುದೇ ಆರ್ಜುನ ಎಂದರು. ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಇದೇ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ರಾಜ-ರಾಣಿ ಎಕ್ಸ್ಪ್ರೆಸ್ ರೈಲಿನಲ್ಲಿ ಸೀಟು ಹಂಚಿಕೆ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಇಬ್ಬರು ಪ್ರಯಾಣಿಕರಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಜಗಳ ಬಿಡಿಸಲು ಹೋದವರ ಮೇಲೆ ದಾಳಿ ರೈಲಿನಲ್ಲಿ ಸೀಟಿನ ವಿಚಾರವಾಗಿ ಆರೋಪಿಗಳು ಮತ್ತು ಇತರ ಪ್ರಯಾಣಿಕರ ಮಧ್ಯೆ ತೀವ್ರ ಗಲಾಟೆ ನಡೆಯುತ್ತಿತ್ತು. ಈ ವೇಳೆ ಪ್ರಯಾಣಿಕ ಶಿವಕುಮಾರ್ ಅವರು “ಏಕೆ ಜಗಳ ಮಾಡುತ್ತೀರಿ?” ಎಂದು ಪ್ರಶ್ನಿಸಿ ಗಲಾಟೆ ಸರಿಪಡಿಸಲು ಮುಂದಾಗಿದ್ದಾರೆ. ಇದರಿಂದ ಕೆರಳಿದ ಆರೋಪಿಗಳು ಏಕಾಏಕಿ ಶಿವಕುಮಾರ್ ಅವರ ಮೇಲೆ ಮುಗಿಬಿದ್ದಿದ್ದಾರೆ. ಚಾಕುವಿನಿಂದ ಇರಿದ ದುಷ್ಕರ್ಮಿಗಳು ಗಲಾಟೆ ನಡೆಸುತ್ತಿದ್ದ ಸುಭಾನ್ ಖುರೇಷಿ, ಶೋಯಬ್ ಮತ್ತು ವಾಸಿನ್ ಎಂಬುವವರು ಈ ಕೃತ್ಯ ಎಸಗಿದ್ದಾರೆ. ಮೊದಲು ಸುಭಾನ್ ಖುರೇಷಿ ಎಂಬಾತ ಶಿವಕುಮಾರ್ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ತದನಂತರ ಮತ್ತೊಬ್ಬ ಆರೋಪಿ ಶೋಯಬ್ ಕೂಡ ಶಿವಕುಮಾರ್ ಅವರ ಮೇಲೆ ಚಾಕು ದಾಳಿ ನಡೆಸಿದ್ದಾನೆ. ದಾಳಿಯ ವೇಳೆ ಶಿವಕುಮಾರ್ ಅವರೊಂದಿಗೆ ಇದ್ದ ಕುಮಾರ್ ಎಂಬುವವರಿಗೂ…
ದುಬಾರೆ : ಜಗತ್ತಿನಲ್ಲಿ ಅತಿ ಹೆಚ್ಚು ಸುಳ್ಳು ಹೇಳುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ದುಬಾರೆಯಲ್ಲಿಂದು ನೂತನ ತೂಗು ಸೇತುವೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರು ಶೃಂಗೇರಿ ಶಾಸಕ ಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ನುಡಿದಂತೆ ನಡೆಯಲಿಲ್ಲ ಎಂದರು. ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ ಪಕ್ಷ ಅದನ್ನು ಈಡೇರಿಸಿತೇ, ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಹೇಳಿದ ಬಿಜೆಪಿ ಅದನ್ನಾದರೂ ಈಡೇರಿಸಿತೆ. ಬರಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ವಂಚಿಸುತ್ತಿದೆ ಎಂದರು. ಶೃಂಗೇರಿ ವಿಧಾನಸಭಾ ಕ್ಷೇತ್ರದ ವಿಧಾನಸಭೆ ಚುನಾವಣೆ ನಡೆದ 3 ವರ್ಷ ಆಗಿದೆ. ಈಗ ಅಂಚೆ ಮತಗಳ ಎಣಿಕೆಯಲ್ಲಿ ಗೆದ್ದಿರುವುದಾಗಿ ಬಿಜೆಪಿ ಹೇಳಿಕೊಳ್ಳುತ್ತಿದೆ. ಇದು ಮತ ಡಕಾಯಿತಿಯಲ್ಲದೆ ಬೇರೇನೂ ಅಲ್ಲ,…














