Author: kannadanewsnow09

ಕೆಎನ್ಎನ್ ಡಿಜಿಟಲ್ ಡೆಸ್ಕ್: ಡಾಕ್ಟರ್ ಇಲ್ಲದ ಕಾಲದಲ್ಲಿ ನಮ್ಮ ಪೂರ್ವಿಕರು ಪಾಲನೆ ಮಾಡಿದ ಆರೋಗ್ಯದ ಗುಟ್ಟು. ಆಯುರ್ವೇದದ ಈ ದಿನಚರಿ ಪಾಲನೆ ಮಾಡಿದವರು ನೂರಾರು ವರ್ಷ ಕಾಯಿಲೆ ಇಲ್ಲದೇ ಬದುಕಿದರು. ನೂರರ ಸಮೀಪದಲ್ಲೂ ಗಟ್ಟಿಯಾಗಿ ಆರೋಗ್ಯವಂತರಾಗಿದ್ದರು. ಆಯುರ್ವೇದದ ಪ್ರಕಾರ ದಿನಚರಿ (Daily Routine) ಎಂದರೆ ಕೇವಲ ಕೆಲಸ ಮಾಡುವುದಲ್ಲ, ಅದು ಪ್ರಕೃತಿಯೊಂದಿಗೆ ನಮ್ಮ ದೇಹವನ್ನು ಹೊಂದಿಸಿಕೊಳ್ಳುವ ವಿಧಾನವಾಗಿದೆ. ಆಯುರ್ವೇದದ ಪ್ರಕಾರ ನಿಮ್ಮ ದಿನವನ್ನು ಹೇಗೆ ಕಳೆಯಬೇಕು ಎಂಬ ಮಾಹಿತಿ ಇಲ್ಲಿದೆ: ​1. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು (Early Morning) ​ಸೂರ್ಯೋದಯಕ್ಕೆ ಸುಮಾರು 1.5 ಗಂಟೆಗಳ ಮೊದಲು (ಅಂದರೆ ಬೆಳಿಗ್ಗೆ 4:30 ರಿಂದ 5:30 ರ ನಡುವೆ) ಏಳುವುದು ಅತ್ಯುತ್ತಮ. ಈ ಸಮಯದಲ್ಲಿ ವಾತಾವರಣವು ಶುದ್ಧವಾಗಿರುತ್ತದೆ ಮತ್ತು ಮನಸ್ಸು ಶಾಂತವಾಗಿರುತ್ತದೆ. ​2. ಮುಖ ಪ್ರಕ್ಷಾಲನ ಮತ್ತು ಹಲ್ಲುಜ್ಜುವುದು ​ಕಣ್ಣುಗಳು: ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಿ. ​ಹಲ್ಲುಜ್ಜುವುದು: ಕಹಿ ಅಥವಾ ಒಗರು ರುಚಿಯ ಗಿಡಮೂಲಿಕೆಗಳ ಪುಡಿ ಅಥವಾ ಪೇಸ್ಟ್ ಬಳಸಿ. ​ನಾಲಿಗೆ ಸ್ವಚ್ಛತೆ: ನಾಲಿಗೆಯ ಮೇಲಿರುವ ಬಿಳಿ…

Read More

ಬೆಂಗಳೂರು: ರಾಜ್ಯದ ಜನತೆಗೆ ಉಪಯುಕ್ತ ಮಾಹಿತಿ ಎನ್ನುವಂತೆ ಯಾವುದೇ ಗ್ರಾಮ ಪಂಚಾಯ್ತಿಗಳಲ್ಲಿ ನೀವು ಯಾವುದೇ ರೀತಿಯ ಅರ್ಜಿ ಸಲ್ಲಿಕೆ ಮಾಡಿದರೇ, ಆ ಅರ್ಜಿಗೆ ಸಂಬಂಧಿಸಿದಂತೆ ಕಡ್ಡಾಯವಾಗಿ ಸಂಬಂಧಿಸಿದಂತ ಅಧಿಕಾರಿಗಳು ಈ ಕರ್ತವ್ಯ ನಿರ್ವಹಿಸಬೇಕಾಗಿದೆ. ಅದು ಏನು ಅಂತ ಮುಂದಿದೆ ಮಾಹಿತಿ ಓದಿ… 1. ಗ್ರಾಮ ಪಂಚಾಯತ್ ಯಾವುದೇ ಅರ್ಜಿಯನ್ನು ಸ್ವೀಕರಿಸುವುದು ಕಡ್ಡಾಯ ಕರ್ತವ್ಯವಾಗಿದ್ದು “ನಮಗೆ ಸಂಬಂಧ ಇಲ್ಲ” ಎಂದು ತಿರಸ್ಕರಿಸುವುದು ಕಾನೂನುಬಾಹಿರ — (ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ, 1993, ಸೆಕ್ಷನ್ 58; ವ್ಯಾಖ್ಯಾನ “ಗ್ರಾಮ ಪಂಚಾಯತ್” ಸೆಕ್ಷನ್ 2(15)). 2. ಅರ್ಜಿ ಸ್ವೀಕರಿಸಿದ ದಿನಾಂಕದೊಂದಿಗೆ ಅರ್ಜಿದಾರನಿಗೆ ಸ್ವೀಕೃತಿ/ನಕಲು ಸಹಿ ನೀಡಿ ಹಿಂತಿರುಗಿಸಬೇಕು — (ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್‌ಗಳ ತೆರಿಗೆಗಳು, ದರಗಳು ಮತ್ತು ಶುಲ್ಕಗಳು) ನಿಯಮಗಳು, 2021, ನಿಯಮ 5). 3. ಅರ್ಜಿ ಸ್ವೀಕರಣೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಥವಾ ಕಾರ್ಯದರ್ಶಿಯೇ ಕಾನೂನುಬದ್ಧವಾಗಿ ಜವಾಬ್ದಾರರು — (ಕರ್ನಾಟಕ ಗ್ರಾಮ…

Read More

ಬೆಂಗಳೂರು: ರಾಜ್ಯದಲ್ಲಿ ಶಾಲಾ ದಾಖಲಾತಿಯಲ್ಲಿ ಜಾತಿ ತಿದ್ದುಪಡಿ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ.  ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಶಾಲಾ ದಾಖಲಾತಿಯಲ್ಲಿ ಜಾತಿಯನ್ನು ತಿದ್ದುಪಡಿ ಮಾಡುವ ಬಗ್ಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ ಪಂಗಡದ ಜಾತಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯು ಆಡಳಿತ ಇಲಾಖೆಯಾಗಿದ್ದು ಮತ್ತು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಹಾಗೂ ಇತರ ಹಿಂದುಳಿದ ವರ್ಗಗಳ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ ಕಾಯ್ದೆಯಂತೆ ಜಾತಿ ಪಮಾಣ ಪತ್ರಗಳನ್ನು ನೀಡಲಾಗುತ್ತಿರುವುದರಿಂದ ಈ ಬಗ್ಗೆ ಸ್ಪಷ್ಟಿಕರಣ. ನೀಡಲು ಸಮಾಜ ಕಲ್ಯಾಣ ಇಲಾಖೆ ಸೂಕ್ತ ಪ್ರಾಧಿಕಾರವಾಗಿರುತ್ತದೆ ಎಂದು ತಿಳಿಸಿ ಮಾರ್ಗದರ್ಶನ ಹಾಗೂ ಸ್ಪಷ್ಟಿಕರಣ ನೀಡುವಂತೆ ಕೋರಲಾಗಿರುತ್ತದೆ ಎಂದು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ರವರು ತಿಳಿಸಿರುತ್ತಾರೆ ಎಂದಿದ್ದಾರೆ. ಮುಂದುವರೆದಂತೆ, ಈ ಕೆಳಕಂಡ ಆದೇಶ ಮತ್ತು ಸುತ್ತೋಲೆಗಳಲ್ಲಿ ಜಾತಿ ತಿದ್ದುಪಡಿ ಕುರಿತು ಮಾರ್ಗದರ್ಶನ ನೀಡಿರುವ ಕುರಿತು ತಿಳಿಸಿರುತ್ತಾರೆ. ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ:- ಇಡಿ…

Read More

ಶಿವಮೊಗ್ಗ : ಜನವರಿ.21, 2026ರಂದು ರಾಜ್ಯ ಸುರಭಿ ಶ್ರೀ ಪ್ರಶಸ್ತಿಯನ್ನು ಬೆಳಿಗ್ಗೆ 10-30ಕ್ಕೆ ಸಾಗರದ ಸಿಗಂದೂರು ರಸ್ತೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಸ್.ಜಿ.ರಾಮಚಂದ್ರ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸುರಭಿ ವಾಣಿ ಪತ್ರಿಕೆಯ 12ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನದ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕಾಶಿ ಮಹಾಪೀಠದ ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದರು ಸಾನಿಧ್ಯ ವಹಿಸಲಿದ್ದಾರೆ ಎಂದರು. ಕಡೆನಂದಿಹಳ್ಳಿಮಠದ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು, ತೊಗರ್ಸಿ ಮಠದ ಶ್ರೀ ಗುರುಬಸವ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿರುವರು. ಸಂಸದ ಬಿ.ವೈ.ರಾಘವೇಂದ್ರ ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದ, ಶಾಸಕ ಗೋಪಾಲಕೃಷ್ಣ ಬೇಳೂರು ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮಾಜಿ ಸಚಿವ ಹರತಾಳು ಹಾಲಪ್ಪ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಮಲ್ಲಿಕಾರ್ಜುನ ಹಕ್ರೆ, ಎಂ.ಎಸ್.ಅರುಣಕುಮಾರ್…

Read More

ಶಿವಮೊಗ್ಗ : ಬರುವ ಏಪ್ರಿಲ್ ನಂತರ ಮನೆಗಳಿಂದ ಪ್ಲಾಸ್ಟಿಕ್ ಸಂಗ್ರಹ ಮಾಡಲು ಪ್ರತ್ಯೇಕ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಹಸಿಕಸ ಮತ್ತು ಒಣಕಸ ಸಂಗ್ರಹಣೆ ಜೊತೆಗೆ ಪ್ರತ್ಯೇಕವಾಗಿ ಪ್ಲಾಸ್ಟಿಕ್ ಕಸ ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದು ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪುರಭವನದಲ್ಲಿ ಶನಿವಾರ ನಗರಸಭೆ ವತಿಯಿಂದ 2026-27ನೇ ಸಾಲಿನ ಆಯವ್ಯಯ ತಯಾರಿಸುವ ಕುರಿತು ಕರೆಯಲಾಗಿದ್ದ ಸಾರ್ವಜನಿಕರೊಂದಿಗಿನ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಪ್ಲಾಸ್ಟಿಕ್ ಸಂಗ್ರಹಣೆ ನಿರ್ವಹಣೆ ಸವಾಲಿನಂತಾಗಿದೆ. ಮೊದಲ ಬಾರಿಗೆ ದಾವಣಗೆರೆ ದಾಲ್ಮಿಯ ಸಿಮೆಂಟ್ ಕಂಪನಿಗೆ ನಗರಸಭೆಯಿಂದ 26 ಟನ್ ಕಸವನ್ನು ಕೆ.ಜಿ.ಗೆ ಒಂದು ಪೈಸೆಯಂತೆ ಕಳಿಸಲಾಗಿದೆ. ಅಲ್ಲಿ ಪ್ಲಾಸ್ಟಿಕನ್ನು ಇಟ್ಟಿಗೆ ತಯಾರಿಸಲು ಉಪಯೋಗಿಸುತ್ತಾರೆ. ಒಂದರ್ಥದಲ್ಲಿ ನಮಗೆ ಪ್ಲಾಸ್ಟಿಕ್ ವಿಲೇವಾರಿಗೆ ಇದ್ದ ಆತಂಕ ದೂರವಾಗಿದೆ. ಸಂಗಳ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪ್ಲಾಸ್ಟಿಕ್ ಸಂಗ್ರಹಣೆಯನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ಬೇರೆಬೇರೆ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ ಎಂದು ಹೇಳಿದರು. ಸಾಗರ ನಗರವ್ಯಾಪ್ತಿಯಲ್ಲಿ ದಿನದ 24 ಗಂಟೆ ನೀರು…

Read More

ಚಿಕ್ಕಮಗಳೂರು: ಜಿಲ್ಲೆಯ ಪ್ರತಿಷ್ಠೆಯ ಕಣವಾಗಿದ್ದ ಇಲ್ಲಿನ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ NDA ತ್ರಿಕೂಟ ಕ್ಲೀನ್ ಸ್ವೀಪ್ ಮಾಡಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಿದೆ. 13 ನಿರ್ದೇಶಕರಲ್ಲಿ 11 ಬಿಜೆಪಿ, ಜೆಡಿಎಸ್ 2ರಲ್ಲಿ ಗೆಲುವು ಲಭಿಸಿದೆ. ಹಾಲಿ ಕಾಂಗ್ರೆಸ್ ಶಾಸಕ ಕಡೂರಿನ ಕೆ.ಎಸ್.ಆನಂದ್ ಗೆ ಸೋಲಾಗಿದೆ. ಐವರು ಕಾಂಗ್ರೆಸ್ ಶಾಸಕರಿದ್ದರೂ ಕಾಂಗ್ರೆಸ್ ಶಾಸಕರು ಸೋಲು ಕಂಡಿದ್ದಾರೆ. ಚಿಕ್ಕಮಗಳಊರು ವ್ಯವಸಾಯೋತ್ಪನ್ನ ಸಹಕಾರ ಸಂಘದಿಂದ ಸ್ಪರ್ಧಿಸಿದ್ದ ಕಡೂರು ಶಾಸಕ ಕೆ.ಎಸ್.ಆನಂದ್, ಕೊಪ್ಪ ಬಿಜೆಪಿ ಮುಖಂಡ ದಿನೇಶ್ ಹೊಸೂರು ಎದುರು ಸೋಲು ಕಂಡಿದ್ದಾರೆ. ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿಗೂ ಸೋಲುಂಡಿದ್ದಾರೆ. ಪ್ರಾಥಮಿಕ ಕೃಷಿ, ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗಳ ಸಹಕಾರ ಸಂಘದಿಂದ ಎಂ.ಪಿ ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾರಿಗೆ ಎಷ್ಟು ಮತ ? ಭೋಜೇಗೌಡ -30 ಗೆಲುವು Ct ರವಿ -27 ಗೆಲುವು ನಿರಂಜನ್ -05 ಸೋಲು ಪ್ರಜ್ವಲ್ -05 ಸತೀಶ್ -06 ರವೀಂದ್ರ -00 Invalid-01 ಆನಂದ್-03 ಸೋಲು ದಿನೇಶ್-04 ಗೆಲುವು T L…

Read More

ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಗೆ (ನಗರಸಭೆ ಹಾಗೂ ಪುರಸಭೆ), ಒಟ್ಟು 03 ನಗರ ಸ್ಥಳೀಯ ಸಂಸ್ಥೆಗಳ ನಗರಸಭೆ ಹೆಬ್ಬಗೋಡಿ. ಜಿಗಣಿ ಮತ್ತು ಚಂದಾಪುರ ಪುರಸಭೆ ಮತಕ್ಷೇತ್ರದ ಚುನಾವಣೆ ನಡೆಯಲಿದ್ದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 9 ರಿಂದ ಜನವರಿ 22 2026 ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನವರಿ 23 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜನವರಿ 27 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾವಾಗಿರುತ್ತದೆ. ಮತದಾನವು ಅಗತ್ಯವಾದಲ್ಲಿ ಫೆಬ್ರವರಿ 4 ರಂದು ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ವರೆಗೆ ನಡೆಯಲಿದೆ. ಅಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 4 ರಿಂದ ಮತಗಳ ಎಣಿಕೆ ಕಾರ್ಯವು ನಡೆಯಲಿದೆ. ಫೆಬ್ರವರಿ 5 ರಂದು ಚುನಾವಣೆಯು ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಚುನಾವಣಾ ಅಧಿಕಾರಿಗಳು…

Read More

ಬೆಂಗಳೂರು: ಬಿ.ಜೆ.ಪಿ ಯ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುತ್ತಾ, ತಾವು ಅಖಂಡ‌‌ ಪಾಂಡಿತ್ಯವನ್ನು ಪ್ರದರ್ಶಿಸುತ್ತಿರುವುದಾಗಿ ಭ್ರಮೆಯಲ್ಲಿರುವ, ತಮ್ಮ‌ ದುರಾಡಳಿತದ ವರದಿಯನ್ನೇ ಜಗಜಾಹ್ಹೀರು ಮಾಡಿಕೊಳ್ಳುತ್ತಿರುವ ಮಹಾನ್ ದಡ್ಡರೇ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಾಗ್ಧಾಳಿ ನಡೆಸಿದ್ದಾರೆ. ಇಂದು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದಿನಪತ್ರಿಕೆಯ ಹೆಡ್ ಲೈನ್ ನೋಡಿ, ಅದನ್ನೇ ವರದಿಯ ಸಾರಾಂಶವೆಂದು ತಿಳಿದು ಟ್ಟೀಟ್ ಮಾಡುವ ಅಜ್ಞಾನಿಗಳಿಗೆ ಏನೆಂದು ಹೇಳಬೇಕೋ ತಿಳಿಯದಾಗಿದೆ ಎಂದು ಹೇಳಿದ್ದಾರೆ. ದಿನಪತ್ರಿಕೆ ವರದಿಯ ತುಣಕನ್ನು ಅಡಕಗೊಳಿಸಿದ್ದು, ಅದರಲ್ಲಿ ತಮ್ಮ ಅಧಿಕಾರಾವಧಿಯ ಕರ್ಮಕಾಂಡವನ್ನು ಬರೆದಿದ್ದಾರೆ ಓದಿ ಅರ್ಥಮಾಡಿಕೊಳ್ಳಿ. ಅರ್ಥವಾಗದಿದ್ದರೆ ದಿನಪತ್ರಿಕೆ ಓದಿ ಅರ್ಥ ತಿಳಿಸುವಂತೆ ಟ್ಟೀಟ್ ಮೂಲಕ ಜಾಹೀರಾತು ನೀಡಿ ಎಂದಿದ್ದಾರೆ. ✅ ಬಿ.ಜೆ.ಪಿಯ ಅವಧಿಯಲ್ಲಿ 2020 ರಲ್ಲಿ ವೇತನ ಪರಿಷ್ಕರಣೆ ಮಾಡಬೇಕಾಗಿದ್ದನ್ನು 2023 ರಲ್ಲಿ ಮಾಡಲಾಗಿದೆ ಅದರ ಕೀರ್ತಿ ತಮ್ಮದು. ✅ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಿ 38 ತಿಂಗಳುಗಳ ಬಾಕಿ ಹಣ ಪಾವತಿ ಮಾಡದೇ, ಅದಕ್ಕಾಗಿ ಯಾವುದೇ ಹಣ…

Read More

ಬೆಂಗಳೂರು: ಮಾನ್ಯ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ದಿನಾಂಕ 17-12-2026ರಂದು, ನ್ಯಾಯಾಲಯದ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಮತ್ತು ನಿರಂತರವಾಗಿ ಉಲ್ಲಂಘಿಸಿದ ಕಾರಣ, ವಿಠಲ್ ಗೌಡ ಅವರ ವಿರುದ್ಧ 30 ದಿನಗಳ ಸಿವಿಲ್ ಕಾರಾಗೃಹ ಶಿಕ್ಷೆ ವಿಧಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ, ಅದರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ಕುರಿತು ಅಪವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಅಥವಾ ಪ್ರಕಟಿಸಬಾರದು ಎಂಬಂತೆ ನ್ಯಾಯಾಲಯ ನೀಡಿದ್ದ ಸ್ಪಷ್ಟ ನಿಷೇಧಾಜ್ಞೆ (ಇಂಜಕ್ಷನ್ ಆದೇಶ) ಇದ್ದರೂ, ಆರೋಪಿತ ವಿಟ್ಟಲ್ ಗೌಡ ಅವರು ಅದನ್ನು ಉಲ್ಲಂಘಿಸಿ ಪುನಃಪುನಃ ಹೇಳಿಕೆಗಳನ್ನು ನೀಡಿರುವುದು ನ್ಯಾಯಾಲಯದ ಗಮನಕ್ಕೆ ಬಂದಿದೆ. ನ್ಯಾಯಾಲಯದ ಆದೇಶಗಳ ಬಗ್ಗೆ ಸಂಪೂರ್ಣ ಅರಿವು ಇದ್ದರೂ, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕೃತ, ಕೃತಕ ಹಾಗೂ ಸುಳ್ಳು ಕಥನಗಳನ್ನು ಆಧರಿಸಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕುಟುಂಬ ಹಾಗೂ ಸಂಸ್ಥೆಗಳ ವಿರುದ್ಧ ಆರೋಪಿತರು ಹೇಳಿಕೆಗಳನ್ನು ನೀಡಿದ್ದು…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ನಿಮ್ಮ ಎಲ್ಲಾ ರೀತಿಯ ಅನಾರೋಗ್ಯ ಸಮಸ್ಯೆಗೆ ತಪಾಸಣೆಗೆ ಒಳಪಟ್ಟು, ಚಿಕಿತ್ಸೆ ಪಡೆಯಲು ಇದೊಂದು ಸದಾವಕಾಶವಾಗಿದೆ. ಈ ಕುರಿತಂತೆ ಶಿಬಿರದ ಸಂಚಾಲಕ ಶಿವಕುಮಾರ ಈ ಉಳವಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 19-01-2026ರಂದು ಉಳವಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿರುವುದಾಗಿ ತಿಳಿಸಿದ್ದಾರೆ. ಗ್ರಾಮ ಪಂಚಾಯ್ತಿ ದೂಗೂರು ಹಾಗೂ ಉಳವಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಹಕಾರದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಶಿರಸಿಯ ಆಸ್ಮಿತೆ ಫೌಂಡೇಶನ್, ಶಿವಮೊಗ್ಗದ ಮಲೆನಾಡು ಕ್ಯಾನ್ಸರ್ ಆಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸುತ್ತಿರುವುದಾಗಿ ಹೇಳಿದ್ದಾರೆ. ಏನೆಲ್ಲ ತಪಾಸಣೆ ಗೊತ್ತಾ? ರಕ್ತದೊತ್ತಡ, ಮಧು ಮೇಹ ಪರೀಕ್ಷೆ, ಸಾಮಾನ್ಯ ಆರೋಗ್ಯ ತಪಾಸಣೆ, ಬಾಯಿ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತದೆ. ಇದಷ್ಟೇ ಅಲ್ಲದೇ ನುರಿತ ಮಹಿಳಾ ವೈದ್ಯರಿಂದ ಸ್ತನ ಆರೋಗ್ಯ,…

Read More