Author: kannadanewsnow09

ಹುಬ್ಬಳ್ಳಿ: ಜಿಲ್ಲೆಯಲ್ಲಿ ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಬಡವರಿಗೆ ವಸತಿ ಹಂಚಿಕೆಗೆ ಚಾಲನೆ ನೀಡುವಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಹಾಕಲಾಗಿದ್ದಂತ ಕಟೌಟ್ ಬಿದ್ದು ವ್ಯಕ್ತಿಯೊಬ್ಬ ಗಾಯಗೊಂಡಿದ್ದಾರೆ. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಂತ ವ್ಯಕ್ತಿಯೊಬ್ಬರು ಕಟೌಟ್ ಮುರಿದು ಬಿದ್ದು ಗಾಯಗೊಂಡಿದ್ದರು. ಈ ವಿಷಯ ತಿಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯವನ್ನು ವಿಚಾರಿಸಿದರು. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 1458000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ…

Read More

ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆಗೆ ನಿಂದನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಿಂತಾಮಣಿ ಚಿಂತಾಮಣಿಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪೌರಾಯುಕ್ತೆಗೆ ನಿಂದನೆ, ಧಮ್ಕಿ ಪ್ರಕರಣದಲ್ಲಿ ಜಾಮೀನು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಚಿಂತಾಮಣಿಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕಾಂತರಾಜ.ಎಸ್.ವಿ ಅವರನ್ನು ಮೊದಲು ಆದೇಶ ಕಾಯ್ದಿರಿಸಿದ್ದರು. ಆ ಬಳಿಕ ಇದೀಗ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಶಿಡ್ಲಘಟ್ಟ ಪೌರಾಯುಕ್ತೆ ನಿಂದನೆ ಆರೋಪಿ ರಾಜೀವ್ ಗೌಡ ಪರವಾಗಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ವಾದಿಸಿದ್ದರು. ದೂರುದಾರೆ ಪರ ಪಿಪಿ ಸುಮಶಾಂತಾ ಮೇರಿ ವಾದವನ್ನು ಮಂಡಿಸಿದ್ದರು. ಈ ವಾದ-ಪ್ರತಿವಾದವನ್ನು ಆಲಿಸಿರುವಂತ ಚಿಂತಾಮಣಿಯ 2ನೇ ಹೆಚ್ಚುವರಿ ನ್ಯಾಯಾಲಯ ನ್ಯಾಯಮೂರ್ತಿ ಎಸ್.ವಿ ಕಾಂತರಾಜ ಅವರು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು…

Read More

ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆಗೆ ನಿಂದನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪೌರಾಯುಕ್ತೆಗೆ ನಿಂದನೆ, ಧಮ್ಕಿ ಪ್ರಕರಣದಲ್ಲಿ ಜಾಮೀನು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಚಿಕ್ಕಬಳ್ಳಾಪುರದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕಾಂತರಾಜ.ಎಸ್.ವಿ ಅವರನ್ನು ಮೊದಲು ಆದೇಶ ಕಾಯ್ದಿರಿಸಿದ್ದರು. ಶಿಡ್ಲಘಟ್ಟ ಪೌರಾಯುಕ್ತೆ ನಿಂದನೆ ಆರೋಪಿ ರಾಜೀವ್ ಗೌಡ ಪರವಾಗಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ವಾದಿಸಿದ್ದರು. ದೂರುದಾರೆ ಪರ ಪಿಪಿ ಸುಮಶಾಂತಾ ಮೇರಿ ವಾದವನ್ನು ಮಂಡಿಸಿದ್ದರು. ಈ ವಾದ-ಪ್ರತಿವಾದವನ್ನು ಆಲಿಸಿರುವಂತ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಿಗ್ ಶಾಕ್ ನೀಡಿದ್ದಾರೆ. https://kannadanewsnow.com/kannada/youth-killed-in-hit-and-run-in-bengaluru-swiggy-delivery-boy-dies-on-the-spot/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/

Read More

ಶಿವಮೊಗ್ಗ : ಮುಖ್ಯಮಂತ್ರಿಗಳು ಸಾಗರದ ಮಾರಿಕಾಂಬಾ ಜಾತ್ರೆಗೆ 2 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ. ಶಾಸಕರು ಅನುದಾನಕ್ಕಾಗಿ ಮನವಿ ಮಾಡಿದ್ದು ಹೌದು. ಆದರೆ ಹಣಕಾಸು ಇಲಾಖೆಗೆ ನಗರಸಭೆಯಿಂದ ಅರ್ಜಿ ಹೋದಾಗ ಶಾಸಕರಿಗೆ ಮಂಜೂರು ಮಾಡಲು ಉದ್ದೇಶಿಸಿರುವ 50 ಕೋಟಿಯಲ್ಲಿಯೇ ಹಣ ಹೊಂದಿಸಿಕೊಳ್ಳಿ. ಹೆಚ್ಚುವರಿಯಾಗಿ 2 ಕೋಟಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಶಾಸಕರ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಸಾಗರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ಹೆಸರು ಪ್ರಸ್ತಾಪಿಸದೇ ಅವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾರಿಜಾತ್ರೆಗೆ ಒಂದು ರೂಪಾಯಿ ಸಹ ವಿಶೇಷ ಅನುದಾನ ಬಂದಿಲ್ಲ. ನಮ್ಮ ಶಾಸಕರಾದ ಹರತಾಳು ಹಾಲಪ್ಪ ಅವರ ಅವಧಿಯಲ್ಲಿ ಮಂಜೂರಾದ ಎಲ್ಲಾ ಅನುದಾನಗಳನ್ನು ನಾವು ದಾಖಲೆ ಸಮೇತ ಪ್ರದರ್ಶನ ಮಾಡಿ ಮಾತನಾಡುತ್ತೇವೆ. ಕಾಂಗ್ರೇಸ್‌ನವರು ದಾಖಲೆ ಇರಿಸಿಕೊಂಡು ಏಕೆ ಮಾತನಾಡುವುದಿಲ್ಲ ಎಂದು…

Read More

ಬೆಂಗಳೂರು: ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಟಾಟಾ ಏಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲದ ಗುಂಡೇನಹಳ್ಳಿ ಗೇಟ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಮನೆಗೆ ದಿನಸಿ ಖರೀದಿಸಿ ಬೈಕ್ ನಲ್ಲಿ ತಾಯಿ-ಮಗ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 45 ವರ್ಷದ ಶೈಲಜಾ, 26 ವರ್ಷದ ಪ್ರಜ್ವಲ್ ಸಾವನ್ನಪ್ಪಿದ್ದಾರೆ. ದಿನಸಿಯನ್ನು ಖರೀದಿಸಿ ಮನೆಗೆ ಡಿಯೋ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/ https://kannadanewsnow.com/kannada/fire-suspected-to-have-started-at-reddy-model-house-in-bellary-due-to-cigarette-spark-sp-information/

Read More

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಗಲಾಟೆ ಬಳಿಕ ಮತ್ತೊಂದು ಘಟನೆ ಎನ್ನುವಂತೆ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ನಿನ್ನೆ ಬಿದ್ದಿತ್ತು. ಆದರೇ ಇದೊಂದು ಸಿಗರೇಟ್ ನಿಂದ ಬೆಂಕಿ ತಗುಲಿರುವಂತ ಶಂಕೆ ಇರುವುದಾಗಿ ಎಸ್ಪಿ ತಿಳಿಸಿದ್ದಾರೆ. ಅಲ್ಲದೇ ಈ ಸಂಬಂಧ 8 ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನಾ ಡಿ ಪನ್ನೇಕರ್ ಅವರು, ರೆಡ್ಡಿ ಮಾಡೆಲ್ ಹೌಸ್ ಗೆ ರೀಲ್ಸ್, ಪೋಟೋ ಶೂಟ್ ಗೆ ಹುಡುಗರು ಬಂದಿದ್ದರೆಂಬ ಮಾಹಿತಿ ಇದೆ. ಪೋಟೋ ಶೂಟ್ ಗೆ ಮನೆಯ ಮೊದಲ ಮಹಡಿಗೆ ಹೋಗಿದ್ರು. ಈ ವೇಳೆ ಸಿಗರೇಟ್ ಕಿಡಿಯಿಂದ ಮಾಡೆಲ್ ಗೆ ಬೆಂಕಿ ಬಿದ್ದಿರುವಂತ ಸಾಧ್ಯತೆ ಇದೆ. ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು. ಬಳ್ಳಾರಿಯ ರೆಡ್ಡಿ ಮಾಡೆಲ್ ಹೌಸ್ ನಲ್ಲಿ ಸ್ಥಳ ಪರಿಶೀಲನೆ ವೇಳೆಯಲ್ಲಿ ಸಿಗರೇಟ್ ತುಂಡುಗಳು ಬಿದ್ದಿರುವುದು ಕಂಡು ಬಂದಿದೆ. ರೀಲ್ಸ್ ವೇಳೆ ಸಿಗರೇಟ್ ತಾಗಿ ಬೆಂಕಿ ಹೊತ್ತಿಕೊಂಡಿರಬಹುದು.…

Read More

ಬೆಂಗಳೂರು: ವಿಶೇಷ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ವಿವಾದದ ಬಳಿಕ, ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇರಿಸಿದೆ. ರಾಜ್ಯಪಾಲರ ಆಕ್ಷೇಪಕ್ಕೆ ಅವಕಾಶ ನೀಡದಂತೆ ಗಣರಾಜ್ಯೋತ್ಸವ ಭಾಷಣ ಸಿದ್ಧಪಡಿಸಿತ್ತು. ಇದನ್ನು ರಾಜ್ಯಪಾಲರ ಒಪ್ಪಿಗೆಯ ಮುದ್ರೆಗೆ ಕಳುಹಿಸಿ ಕೊಡಲಾಗಿತ್ತು. ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ. ಜನವರಿ.26, 2026ರ ಗಣರಾಜ್ಯೋತ್ಸವ ಸಂಬಂಧ ರಾಜ್ಯದ ಜನತೆ ಉದ್ದೇಶಿಸಿ ಭಾಷಣ ಮಾಡುವಂತ ಭಾಷಣವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ನಿನ್ನೆ ಲೋಕಭವನಕ್ಕೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಣರಾಜ್ಯೋತ್ಸವ ಭಾಷಣ ಪರಿಶೀಲಿಸಿದ್ದು, ಭಾಷಣ ಓದೋದಕ್ಕೆ ಓಕೆ ಮಾಡಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂಬುದಾಗಿ ಸರ್ಕಾರದ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಅಂದಹಾಗೇ ಜನವರಿ.26ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವಂತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿರುವಂತ ಗಣರಾಜ್ಯೋತ್ಸವದ ಭಾಷಣ ಮಾಡಲಿದ್ದಾರೆ. https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/ https://kannadanewsnow.com/kannada/friend-kills-siblings-over-financial-issues-three-arrested-by-honnavar-police/

Read More

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಗಲಾಟೆ ಬಳಿಕ ಮತ್ತೊಂದು ಘಟನೆ ಎನ್ನುವಂತೆ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ನಿನ್ನೆ ಬಿದ್ದಿತ್ತು. ಆದರೇ ಇದೊಂದು ಸಿಗರೇಟ್ ನಿಂದ ಬೆಂಕಿ ತಗುಲಿರುವಂತ ಶಂಕೆ ಇರುವುದಾಗಿ ಎಸ್ಪಿ ತಿಳಿಸಿದ್ದಾರೆ. ಅಲ್ಲದೇ ಈ ಸಂಬಂಧ 8 ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನಾ ಡಿ ಪನ್ನೇಕರ್ ಅವರು, ರೆಡ್ಡಿ ಮಾಡೆಲ್ ಹೌಸ್ ಗೆ ರೀಲ್ಸ್, ಪೋಟೋ ಶೂಟ್ ಗೆ ಹುಡುಗರು ಬಂದಿದ್ದರೆಂಬ ಮಾಹಿತಿ ಇದೆ. ಪೋಟೋ ಶೂಟ್ ಗೆ ಮನೆಯ ಮೊದಲ ಮಹಡಿಗೆ ಹೋಗಿದ್ರು. ಈ ವೇಳೆ ಸಿಗರೇಟ್ ಕಿಡಿಯಿಂದ ಮಾಡೆಲ್ ಗೆ ಬೆಂಕಿ ಬಿದ್ದಿರುವಂತ ಸಾಧ್ಯತೆ ಇದೆ. ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು. ಬಳ್ಳಾರಿಯ ರೆಡ್ಡಿ ಮಾಡೆಲ್ ಹೌಸ್ ನಲ್ಲಿ ಸ್ಥಳ ಪರಿಶೀಲನೆ ವೇಳೆಯಲ್ಲಿ ಸಿಗರೇಟ್ ತುಂಡುಗಳು ಬಿದ್ದಿರುವುದು ಕಂಡು ಬಂದಿದೆ. ರೀಲ್ಸ್ ವೇಳೆ ಸಿಗರೇಟ್ ತಾಗಿ ಬೆಂಕಿ ಹೊತ್ತಿಕೊಂಡಿರಬಹುದು.…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಘಟಕ–08, ಯಶವಂತಪುರದಲ್ಲಿ ದಿನಾಂಕ 24-01-2026 ರಂದು ರಾಷ್ಟ್ರೀಯ ಚಾಲಕರ ದಿನಾಚರಣೆಯನ್ನು ಸಂಸ್ಥೆಯ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಸಾರ್ವಜನಿಕ ಸಾರಿಗೆಯ ಪ್ರಮುಖ ಅಂಗವಾಗಿರುವ ಚಾಲಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾದ ವಿ.ಎಸ್. ಆರಾಧ್ಯ, ವ್ಯವಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಕೆ.ಬಿ., ಭಾ.ಆ.ಸೇ., ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ. ಪ್ರಭಾಕರ ರೆಡ್ಡಿ, ಹಾಗೂ ಉತ್ತರ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ್ ಎಸ್.ಆರ್. ರವರು ಉಪಸ್ಥಿತರಿದ್ದರು. ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್. ಆರಾಧ್ಯ ಅವರು, ಎಲ್ಲಾ ಚಾಲಕ ಮಿತ್ರರಿಗೆ ರಾಷ್ಟ್ರೀಯ ಚಾಲಕರ ದಿನಾಚರಣೆಯ ಶುಭಾಶಯಗಳನ್ನು ಸಲ್ಲಿಸಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಭಾರತದ ಇತಿಹಾಸದಲ್ಲಿಯೇ ಒಂದು ಮಾದರಿ ಮಹಾನಗರ ಸಾರಿಗೆ ಸಂಸ್ಥೆಯಾಗಿ ಗುರುತಿಸಿಕೊಂಡಿರುವುದು ಚಾಲಕರು ಹಾಗೂ ನಿರ್ವಾಹಕರ ಶಿಸ್ತು, ನಿಷ್ಠೆ ಮತ್ತು ಪ್ರಾಮಾಣಿಕ…

Read More

ಬೆಂಗಳೂರು: ನಗರದಲ್ಲಿ ಹಿಟ್ ಅಂಡ್ ರನ್ ಗೆ ಮತ್ತೊಂಬು ಬಲಿಯಾಗಿದೆ. ಬೆಂಗಳೂರಿನ ಕೆ ಆರ್ ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿಯಲ್ಲಿ ನಡೆದಂತ ಭೀಕರ ಅಪಘಾತದಲ್ಲಿ ಸ್ವಿಗ್ಗಿ ಡಿಲವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತನನ್ನ ನೇಪಾಳ ಮೂಲದ ಸುರೇಂದರ್ ಬಹದ್ದೂರ್(38) ಎಂಬುದಾಗಿ ತಿಳಿದು ಬಂದಿದೆ. ಸ್ವಿಗ್ಗಿಯಲ್ಲಿ ಸುರೇಂದರ್ ಬಹದ್ದೂರ್ ಕೆಲಸ ಮಾಡುತ್ತಿದ್ದರು. ಡೆಲಿವರಿ ಕೊಡಲು ಹೋಗುವಾಗ ಬೈಕ್ ಗೆ ಕಾರು ಡಿಕ್ಕಿಯಾಗಿ ಈ ಅಫಘಾತ ಸಂಭವಿಸಿದೆ. ಸ್ವಿಗ್ಗಿ ಆರ್ಡರ್ ತೆಗೆದುಕೊಂಡು ಕೊಡೋದಕ್ಕೆ ತೆರುವಾಗ ಕಾರೊಂದು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಸುರೇಂದರ್ ಬಹದ್ದೂರ್ ಸಾವನ್ನಪ್ಪಿದರೂ ಕಾರು ಚಾಲಕ ಪರಾರಿಯಾಗಿದ್ದಾನೆ. ಕಾರು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೆ ಆರ್ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/there-are-10365-transgenders-in-the-state-gender-minority-survey-report/ https://kannadanewsnow.com/kannada/karnataka-sslc-preparatory-exam-2-schedule-announced/

Read More