Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2026ರ (Biennial Election to Karnataka Legislative Council-2026) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಇಂದು ಮಧ್ಯಾಹ್ನ 1:00 ಗಂಟೆಯ ವೇಳೆಗೆ ಶೇಕಡಾ 95.50 ರಷ್ಟು ದಾಖಲೆಯ ಮತದಾನವಾಗಿದೆ. ಚುನಾವಣಾಧಿಕಾರಿಗಳ ಅಧಿಕೃತ ಪತ್ರದ ಮಾಹಿತಿಯ ಪ್ರಕಾರ, ಮತದಾನದ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ: ಒಟ್ಟು ಮತದಾರರ ಸಂಖ್ಯೆ (Total No. of Electors): 222 ಮಧ್ಯಾಹ್ನ 1:00 ಗಂಟೆಯವರೆಗೆ ಚಲಾವಣೆಯಾದ ಒಟ್ಟು ಮತಗಳು: 212 ಒಟ್ಟು ಮತದಾನದ ಶೇಕಡಾವಾರು ಪ್ರಮಾಣ: ಶೇ. 95.50% ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ. ವಿಶಾಲಾಕ್ಷಿ ಅವರು ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಅವರಿಗೆ ಅಧಿಕೃತವಾಗಿ ಪತ್ರ ಬರೆಯುವ ಮೂಲಕ ಈ ಗಂಟೆವಾರು ಮತದಾನದ ಪ್ರಗತಿ ವರದಿಯನ್ನು ಸಲ್ಲಿಸಿದ್ದಾರೆ. ಒಟ್ಟು 222 ಮತದಾರರಲ್ಲಿ ಈಗಾಗಲೇ 212 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದು, ಬಹುತೇಕ ಶಾಸಕರು ಮಧ್ಯಾಹ್ನದ ಒಳಗಾಗಿಯೇ ಮತದಾನ ಪ್ರಕ್ರಿಯೆಯಲ್ಲಿ…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಮತದಾನ ಪ್ರಕ್ರಿಯೆ ನಡುವೆ, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮತವನ್ನು ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಸಲ್ಲಿಸಿದ್ದ ದೂರನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ವಿಧಾನಸೌಧದಲ್ಲಿ ಮತದಾನ ನಡೆದ ಬಳಿಕ ಯತ್ನಾಳ್ ವಿರುದ್ಧ ಚುನಾವಣಾ ಅಕ್ರಮದ ಆರೋಪ ಹೊರಿಸಿದ್ದ ಕಾಂಗ್ರೆಸ್ ನಾಯಕರು, ಅವರು ನಿಯಮ ಉಲ್ಲಂಘಿಸಿ ಮತ ಚಲಾಯಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಯತ್ನಾಳ್ ಅವರ ಮತವನ್ನು ಅಸಿಂಧು (ರದ್ದು) ಗೊಳಿಸಬೇಕು ಎಂದು ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಅಧಿಕೃತವಾಗಿ ದೂರು ನೀಡಿದ್ದರು. ದೂರು ತಿರಸ್ಕಾರಕ್ಕೆ ಕಾರಣವೇನು? ಕಾಂಗ್ರೆಸ್ ನೀಡಿದ್ದ ದೂರನ್ನು ಕೂಲಂಕಷವಾಗಿ ಪರಿಶೀಲಿಸಿದ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ದೂರನ್ನು ವಜಾಗೊಳಿಸಿದ್ದಾರೆ. “ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾನದ ನಿಗದಿತ ಪ್ರದೇಶದಲ್ಲಿ (ವೋಟಿಂಗ್ ಕಂಪಾರ್ಟ್‌ಮೆಂಟ್) ತಮ್ಮ ಮತವನ್ನು ಬಹಿರಂಗಪಡಿಸುವ ಯಾವುದೇ ಹೇಳಿಕೆ ಅಥವಾ ನಡವಳಿಕೆ ತೋರಿಲ್ಲ. ಹಾಗಾಗಿ ನಿಯಮ ಉಲ್ಲಂಘನೆಯಾಗಿಲ್ಲ” ಎಂದು ಸ್ಪಷ್ಟಪಡಿಸಿರುವ ಅಧಿಕಾರಿ, ಯತ್ನಾಳ್ ಅವರ ಮತ ಸಿಂಧುವಾಗಿದೆ…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿರುವುದಾಗಿ ಯಶವಂತಪುರ ಕ್ಷೇತ್ರದ ಬಿಜೆಪಿ ಬಂಡಾಯ ಶಾಸಕ ಎಸ್.ಟಿ. ಸೋಮಶೇಖರ್ ಬಹಿರಂಗಪಡಿಸಿದ್ದಾರೆ. ಮತ್ತೊಂದೆಡೆ ಯಲ್ಲಾಪುರ ಕ್ಷೇತ್ರದ ಮತ್ತೊಬ್ಬ ಬಿಜೆಪಿ ಬಂಡಾಯ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ತಾವು “ಆತ್ಮಸಾಕ್ಷಿ ಮತ” ಚಲಾಯಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್, “ನಾನು ಕಾಂಗ್ರೆಸ್ ಅಭ್ಯರ್ಥಿ ಪರವಾಗಿಯೇ ಮತ ಚಲಾಯಿಸಿದ್ದೇನೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಂಡಿದ್ದೇನೆ,” ಎಂದು ಸ್ಪಷ್ಟಪಡಿಸಿದರು. ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲ: ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಸೋಮಶೇಖರ್, “ಬಿಜೆಪಿ ಅಥವಾ ಜೆಡಿಎಸ್ ನಾಯಕರು ಯಾರೂ ನನ್ನನ್ನು ಮತ ಕೇಳಲು ಸಂಪರ್ಕ ಮಾಡಿರಲಿಲ್ಲ. ಸಂಪರ್ಕಿಸದೇ ಇದ್ದಾಗ ಮತ ಹಾಕುವುದು ಹೇಗೆ? ಯಾರು ಮನವಿ ಮಾಡುತ್ತಾರೋ ಅವರಿಗೆ ಮತ ಹಾಕಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಕರೆ ಮಾಡಿ ಮತ ನೀಡುವಂತೆ ಕೋರಿದ್ದರು. ನಮ್ಮ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಿಕೊಟ್ಟರೆ ಮತ ಹಾಕುವುದಾಗಿ ನಾನು…

Read More

ಶಿವಮೊಗ್ಗ: ಕಾರ್ಮಿಕ ಇಲಾಖೆಯಲ್ಲಿ ಸಾಕಷ್ಟು ಅನುದಾನವಿದ್ದರೂ ನೈಜ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲತ್ತುಗಳು ಸರಿಯಾಗಿ ತಲುಪುತ್ತಿಲ್ಲ ಎಂದು ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಕೆ. ಸಂಜಯ್ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಕಲ್ಯಾಣಕ್ಕಾಗಿ ಇರುವ ಹಣವನ್ನು ಅನಗತ್ಯ ಕಿಟ್‌ಗಳು ಹಾಗೂ ಟೆಂಡರ್‌ಗಳ ಮೂಲಕ ಬೇರೆಡೆಗೆ ಡೈವರ್ಟ್ ಮಾಡಲಾಗುತ್ತಿದೆ. ಮಂಡಳಿಯ ದುಡ್ಡು ಕಾರ್ಮಿಕರ ಹಿತಕ್ಕಾಗಿಯೇ ಬಳಕೆಯಾಗಬೇಕು ಮತ್ತು ಯಾವುದೇ ಕಾರಣಕ್ಕೂ ಇಲಾಖೆಯಲ್ಲಿ ಖಾಸಗೀಕರಣ ಬೇಡ ಎಂಬ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು. ​ಸುದ್ದಿಗೋಷ್ಠಿಯಲ್ಲಿ ಅವರು ಪ್ರಸ್ತಾಪಿಸಿದ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ: ​ತರಬೇತಿ ಹೆಸರಿನಲ್ಲಿ ಕಣ್ಣೊರೆಸುವ ತಂತ್ರ ​ಇಲಾಖೆಯಿಂದ ನೀಡಲಾಗುತ್ತಿರುವ ಆರ್‌ಪಿಎಲ್ (RPL) ತರಬೇತಿ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ತರಬೇತಿ ನೀಡುವವರಿಗೇ ಸರಿಯಾದ ಮಾಹಿತಿ ಇಲ್ಲ. ​ನೈಜ ಕಾರ್ಮಿಕರನ್ನು…

Read More

ಬೆಂಗಳೂರು: ಇಂದಿನ ಗ್ರಾಹಕರು ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿದ್ದು, ಪ್ಯಾಕ್ ಮಾಡಿದ ಆಹಾರಗಳಿಗಿಂತ ಯಾವುದೇ ರಾಸಾಯನಿಕಗಳಿಲ್ಲದ, ತಾಜಾ ಮತ್ತು ಸಾಂಪ್ರದಾಯಿಕ ಶೈಲಿಯ ಆಹಾರವನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಉತ್ತಮ ಗುಣಮಟ್ಟದ ಹಾಗೂ ತಾಜಾ ಆಹಾರಕ್ಕೆ ಕೊಂಚ ಹೆಚ್ಚಿನ ಹಣ ನೀಡಲೂ ಸಿದ್ಧರಿದ್ದಾರೆ. ಗ್ರಾಹಕರ ಈ ಬದಲಾದ ಬೇಡಿಕೆಗೆ ಸ್ಪಂದಿಸಿರುವ ಐಟಿಸಿ ತನ್ನ ಜನಪ್ರಿಯ ಬ್ರ್ಯಾಂಡ್ ‘ಆಶೀರ್ವಾದ್’ ಅಡಿಯಲ್ಲಿ ಹೊಸ ‘ರೆಡಿ-ಟು-ಈಟ್’ ಚಟ್ನಿ ಮತ್ತು ಸಾಂಬಾರ್ ಉತ್ಪನ್ನಗಳನ್ನು ಪರಿಚಯಿಸಿದೆ. ಗೃಹಿಣಿಯರು, ಬ್ಯಾಚುಲರ್‌ಗಳ ದೈನಂದಿನ ಅಡುಗೆಯ ಶ್ರಮವನ್ನು ಕಡಿಮೆ ಮಾಡಿ, ರುಚಿಕರ ಊಟಕ್ಕೆ ಸಹಾಯ ಮಾಡುವುದೇ ಇದರ ಉದ್ದೇಶವಾಗಿದೆ. ಏನು ಈ ಉತ್ಪನ್ನಗಳ ವಿಶೇಷತೆ? ಆಶೀರ್ವಾದ್‌ನ ಈ ಹೊಸ ಚಟ್ನಿ ಮತ್ತು ಸಾಂಬಾರ್‌ಗಳನ್ನು ಅತ್ಯಂತ ಎಚ್ಚರಿಕೆಯಿಂದ ಆಯ್ಕೆ ಮಾಡಿದ ಪದಾರ್ಥಗಳನ್ನು ಬಳಸಿ ತಯಾರಿಸಲಾಗಿದೆ. ರಾಸಾಯನಿಕ ಮುಕ್ತ: ಇದರಲ್ಲಿ ಯಾವುದೇ ರೀತಿಯ ಪ್ರಿಸರ್ವೇಟಿವ್‌ಗಳನ್ನು ಸೇರಿಸಿಲ್ಲ. ಕಡಿಮೆ ಬಳಕೆ ಅವಧಿ: ಇದರ ಎಕ್ಸ್‌ಪೈರಿ ದಿನಾಂಕ (ಬಳಕೆ ಅವಧಿ) ತುಂಬಾ ಕಡಿಮೆಯಿರುತ್ತದೆ. ಉತ್ಪನ್ನದ ತಾಜಾತನವನ್ನು ಇದು ಹೇಳುತ್ತದೆ. ಕೋಲ್ಡ್ ಚೈನ್…

Read More

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇತ್ತೀಚೆಗೆ ಮದ್ಯಪಾನದ ವ್ಯಸನದಿಂದ ಉಂಟಾದ ದುಷ್ಪರಿಣಾಮಗಳಿಂದಾಗಿ ಸಿಬ್ಬಂದಿಯೊಬ್ಬರು ಮೃತಪಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆಯು, ಇನ್ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ (ADGP) ರವಿ. ಎಸ್, ಭಾ.ಪೋ.ಸೇ ಅವರು ಜೂನ್ 17, 2026 ರಂದು ರಾಜ್ಯದ ಎಲ್ಲಾ ಕೆ.ಎಸ್.ಆರ್.ಪಿ ಮತ್ತು ಐ.ಆರ್.ಬಿ ಪಡೆಗಳ ಕಮಾಂಡೆಂಟ್‌ಗಳಿಗೆ ಅಧಿಕೃತ ಜ್ಞಾಪನ ಪತ್ರದ (ಸಂ: ಎಡಿಜಿಪಿ/ ಕೆ.ಎಸ್.ಆರ್.ಪಿ/ 9 /2026) ಮೂಲಕ ಕಠಿಣ ಸೂಚನೆಗಳನ್ನು ನೀಡಿದ್ದಾರೆ. ಆದೇಶದ ಹಿನ್ನೆಲೆ ಮತ್ತು ಜವಾಬ್ದಾರಿ: ಇತ್ತೀಚೆಗೆ ಕೆ.ಎಸ್.ಆರ್.ಪಿ ಸಿಬ್ಬಂದಿಯೊಬ್ಬರು ಮದ್ಯಪಾನದ ದುಶ್ಚಟಕ್ಕೆ ಬಲಿಯಾಗಿರುವುದು ಇಡೀ ಇಲಾಖೆಗೆ ವಿಷಾದನೀಯ ಸಂಗತಿಯಾಗಿದೆ. ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಎಡಿಜಿಪಿ ರವಿ ಅವರು, “ಪೊಲೀಸ್…

Read More

ಬೆಂಗಳೂರು : ರಾಜ್ಯ ಕಂದಾಯ ಇಲಾಖೆಯ ತಹಶೀಲ್ದಾರ್‌ಗಳ ವಲಯದಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಂಬಡ್ತಿ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಕ್ಕಿದ್ದು, ಒಟ್ಟು 232 ಅಧಿಕಾರಿಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರವು ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಮತ್ತು ನೌಕರರ ಅರ್ಹತೆಯನ್ನು ಗೌರವಿಸುವ ಸರ್ಕಾರದ ದೃಢ ಸಂಕಲ್ಪವನ್ನು ಬಿಂಬಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು, ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿರುವುದಾಗಿ ತಿಳಿಸಿದ್ದಾರೆ. ಅಧಿಕಾರಿಗಳ ಮಾನಸಿಕ ಒತ್ತಡಕ್ಕೆ ಸಿಕ್ಕಿತು ಮುಕ್ತಿ: ಕಳೆದ ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಇಲಾಖೆಯ ಹಲವಾರು ದಕ್ಷ ಮತ್ತು ನಿಷ್ಠಾವಂತ ಅಧಿಕಾರಿಗಳು ತಮಗೆ ಸಿಗಬೇಕಾಗಿದ್ದ ನ್ಯಾಯಬದ್ಧ ವೃತ್ತಿ ಪ್ರಗತಿ (Promotion) ಕಾಣದೆ ತೀವ್ರ ನಿರಾಶೆ ಹಾಗೂ ಮಾನಸಿಕ ಒತ್ತಡ ಅನುಭವಿಸುತ್ತಿದ್ದರು. ಇಂತಹ ಸಮರ್ಥ ಅಧಿಕಾರಿಗಳ ಸುದೀರ್ಘ ಕಾಯುವಿಕೆಗೆ ಈಗ ಪಾರದರ್ಶಕ ನಿರ್ಧಾರದ ಮೂಲಕ ಮುಕ್ತಿ ನೀಡಲಾಗಿದೆ. “ಸರ್ಕಾರವು…

Read More

ಬೆಂಗಳೂರು: ರಾಜ್ಯದ ಹಿರಿಯ ಮುಖಂಡರು, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ದಕ್ಷ ಕಾರ್ಯವೈಖರಿ ಮತ್ತು ಜನಸ್ನೇಹಿ ರಾಜಕಾರಣಕ್ಕೆ ಇದೀಗ ಮತ್ತೊಂದು ಹೊಸ ದಾಖಲೆ ಸೇರ್ಪಡೆಯಾಗಿದೆ. ಅಧಿಕಾರದ ಅವಧಿಯಲ್ಲಿ ಕೇವಲ ಕಚೇರಿಗಷ್ಟೇ ಸೀಮಿತವಾಗದೆ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಅವರು ಕೈಗೊಂಡಿರುವ ಅಧಿಕೃತ ಪ್ರವಾಸಗಳ ಅಂಕಿ-ಅಂಶಗಳು ಇವರ ಕಾರ್ಯದಕ್ಷತೆಗೆ ಕೈಗನ್ನಡಿಯಾಗಿವೆ. ಉಸ್ತುವಾರಿ ಜಿಲ್ಲೆಯಲ್ಲಿ ಸಕ್ರಿಯ: 54 ಬಾರಿ ಅಧಿಕೃತ ಪ್ರವಾಸ ರಾಮಲಿಂಗಾ ರೆಡ್ಡಿ ಅವರು ತಮ್ಮ ಉಸ್ತುವಾರಿ ಜಿಲ್ಲೆಯಾದ ಬೆಂಗಳೂರು ದಕ್ಷಿಣ ಜಿಲ್ಲೆಗೆ ದಿನಾಂಕ: 20.05.2023 ರಿಂದ 22.05.2026ರ ವರೆಗಿನ ಅವಧಿಯಲ್ಲಿ ಒಟ್ಟು 54 ಬಾರಿ ಅಧಿಕೃತ ಕಾರ್ಯ ನಿಮಿತ್ತ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸಗಳ ಸಂದರ್ಭದಲ್ಲಿ ಜಿಲ್ಲೆಯ ವಿವಿಧೆಡೆ ಪ್ರಗತಿ ಪರಿಶೀಲನಾ ಸಭೆಗಳು, ಸಾರ್ವಜನಿಕ ಸಮಾರಂಭಗಳು, ಇಲಾಖಾ ಕಾರ್ಯಕ್ರಮಗಳು ಹಾಗೂ ಖುದ್ದು ಸ್ಥಳ ಪರಿವೀಕ್ಷಣೆಗಳನ್ನು ನಡೆಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ವೇಗ ನೀಡಿದ್ದಾರೆ. ರಾಜ್ಯಾದ್ಯಂತ 141 ಬಾರಿ ಪ್ರವಾಸ: ಜನಸಾಮಾನ್ಯರ ಮೆಚ್ಚುಗೆ ತಮ್ಮ ಉಸ್ತುವಾರಿ ಜಿಲ್ಲೆಯಷ್ಟೇ ಅಲ್ಲದೆ, ಮಾನ್ಯ…

Read More

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಪೊಲೀಸರು ಬುಧವಾರ ರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 100 ಕೆಜಿ ತೂಕದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ: ಕಾರು ಜಪ್ತಿ ಒರಿಸ್ಸಾದಿಂದ ತುಮಕೂರು ಮಾರ್ಗವಾಗಿ ಮಂಡ್ಯ ಜಿಲ್ಲೆಗೆ ಕಾರೊಂದರಲ್ಲಿ ಅಪಾರ ಪ್ರಮಾಣದ ಗಾಂಜಾ ತರಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿಯನ್ನಾಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಕೆಸ್ತೂರು ಪೊಲೀಸರು, ಗ್ರಾಮದ ಬಳಿ ಶಂಕಿತ ಕಾರನ್ನು ಅಡ್ಡಗಟ್ಟಿ ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ಗಾಂಜಾ ಸೊಪ್ಪು ಇರುವುದು ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರು ಗಾಂಜಾ ಸಹಿತ ಕಾರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ, ವಿಚಾರಣೆ ಚುರುಕು ಬೃಹತ್ ಪ್ರಮಾಣದ ಗಾಂಜಾ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಮಂಡ್ಯ ಎಸ್ಪಿ ಶೋಭಾ ರಾಣಿ, ಮಳವಳ್ಳಿ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ನಾರಾಯಣಿ ಹಾಗೂ ಕೆಸ್ತೂರು ಪಿಎಸ್ಐ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಲಖನೌನ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ ಅಫ್ಘಾನಿಸ್ತಾನ ವಿರುದ್ಧ 170 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಬೃಹತ್ ಗೆಲುವಿನೊಂದಿಗೆ ಮೂರು ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತ ತಂಡ 2-0 ಅಂತರದಿಂದ ಏಕದಿನ ಸರಣಿಯನ್ನ ತನ್ನದಾಗಿಸಿಕೊಂಡಿದೆ. ಗಿಲ್-ಕಿಶನ್ ರನ್ ಮಳೆ: ಭಾರತಕ್ಕೆ 402 ರನ್‌ಗಳ ಬೃಹತ್ ಮೊತ್ತ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಬ್ಯಾಟ್ಸ್​​ಮನ್​​​ಗಳು ಮೈದಾನದ ಮೂಲೆ ಮೂಲೆಗೂ ರನ್​​​ಗಳ ಮಳೆಯನ್ನೇ ಸುರಿಸಿದರು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ನಾಯಕ ಶುಬ್​ಮನ್ ಗಿಲ್ ಮತ್ತು ಇಶಾನ್ ಕಿಶನ್ ಅಫ್ಘಾನ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಶುಬ್​ಮನ್ ಗಿಲ್ ಕೇವಲ 110 ಎಸೆತಗಳಲ್ಲಿ 154 ರನ್ ಚಚ್ಚಿದರೆ, ಮತ್ತೊಂದೆಡೆ ಸಿಡಿಲಮರಿ ಆಟ ಆಡಿದ ಇಶಾನ್ ಕಿಶನ್​ ಕೇವಲ 79 ಎಸೆತಗಳಲ್ಲಿ 125…

Read More