Author: kannadanewsnow09

ನವದೆಹಲಿ: ದೇಶದಲ್ಲಿ ಮತ್ತೊಂದು ಆತಂಕಕಾರಿ ಘಟನೆ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಚಾರ್ಟರ್ಡ್ ವಿಮಾನವೊಂದು ಇದ್ದಕ್ಕಿದ್ದಂತೆ ರಾಡಾರ್ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (DGCA) ಮೂಲಗಳು ತಿಳಿಸಿವೆ. ಜಾರ್ಖಂಡ್‌ನ ರಾಂಚಿ ವಿಮಾನ ನಿಲ್ದಾಣದಿಂದ ಉಡ್ಡಯನಗೊಂಡ ಕೆಲವೇ ಕ್ಷಣಗಳಲ್ಲಿ ಚಾರ್ಟರ್ಡ್ ವಿಮಾನವೊಂದು ರಾಡಾರ್ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (DGCA) ಮೂಲಗಳು ತಿಳಿಸಿವೆ. ​ಘಟನೆಯ ವಿವರಗಳು: ​ವೈದ್ಯಕೀಯ ಸೇವೆಗಾಗಿ ನಿಯೋಜನೆ: ಇದು ತುರ್ತು ವೈದ್ಯಕೀಯ ಸೇವೆಗಾಗಿ (Medical Flight) ಬಳಸಲಾಗುತ್ತಿದ್ದ ವಿಮಾನವಾಗಿದ್ದು, ರಾಂಚಿಯಿಂದ ಹೊರಟ ತಕ್ಷಣ ಮುಂದಿನ ನಿಯಂತ್ರಣ ಕೇಂದ್ರದೊಂದಿಗೆ (Control Station) ಯಶಸ್ವಿಯಾಗಿ ಸಂಪರ್ಕ ಸಾಧಿಸಿತ್ತು. ​ಸಂಪರ್ಕ ಕಡಿತ: ಮುಂದಿನ ಹಂತದ ಸಮನ್ವಯಕ್ಕಾಗಿ (Coordination) ವಿಮಾನವನ್ನು ಹಸ್ತಾಂತರಿಸಿದ ನಂತರ, ಇದ್ದಕ್ಕಿದ್ದಂತೆ ವಿಮಾನದೊಂದಿಗಿನ ಸಂಪರ್ಕ ಕಡಿತಗೊಂಡಿದೆ. ​ರಾಡಾರ್‌ನಿಂದ ಕಣ್ಮರೆ: ವಿಮಾನವು ರಾಂಚಿ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಯೊಂದಿಗೆ ಪುನಃ ಸಂಪರ್ಕ ಸಾಧಿಸಲು ವಿಫಲವಾಗಿದ್ದು, ಪ್ರಸ್ತುತ ರಾಡಾರ್‌ನಿಂದ ನಾಪತ್ತೆಯಾಗಿದೆ. ​ತಕ್ಷಣದ ಕ್ರಮಗಳು: ​ರಾಂಚಿ ವಿಮಾನ ನಿಲ್ದಾಣದ ಮೂಲಗಳ…

Read More

ನಿಮ್ಮ ಲೈಂಗಿಕ ಜೀವನವನ್ನು (Sex Life) ನೈಸರ್ಗಿಕವಾಗಿ ಸುಧಾರಿಸಲು ಮತ್ತು ನಿಮ್ಮ ಒಟ್ಟಾರೆ ಜೀವನದ ಉತ್ಸಾಹವನ್ನು ಹೆಚ್ಚಿಸಲು ಕೆಲವು ಸರಳ ಹಾಗೂ ಪರಿಣಾಮಕಾರಿ ಸಲಹೆಗಳು ಇಲ್ಲಿವೆ. ಇವು ಕೇವಲ ದೈಹಿಕ ಬದಲಾವಣೆಗಳಲ್ಲದೆ, ಮಾನಸಿಕ ಆರೋಗ್ಯವನ್ನೂ ಒಳಗೊಂಡಿವೆ. ನೈಸರ್ಗಿಕವಾಗಿ ಲೈಂಗಿಕ ಜೀವನ ಸುಧಾರಿಸಲು 6 ಅದ್ಭುತ ಸಲಹೆಗಳು 1. ನಿಯಮಿತ ವ್ಯಾಯಾಮ ಮತ್ತು ಯೋಗ ವ್ಯಾಯಾಮವು ಕೇವಲ ದೇಹದ ತೂಕ ಇಳಿಸಲು ಮಾತ್ರವಲ್ಲ, ಅದು ರಕ್ತಪರಿಚಲನೆಯನ್ನು ಉತ್ತಮಗೊಳಿಸುತ್ತದೆ. ರಕ್ತದ ಹರಿವು ಸರಿಯಾಗಿದ್ದಾಗ ಕಾಮದ್ರವ್ಯಗಳು ಮತ್ತು ಅಂಗಾಂಗಗಳ ಕಾರ್ಯಕ್ಷಮತೆ ಹೆಚ್ಚುತ್ತದೆ. ಕೇಗಲ್ ವ್ಯಾಯಾಮ (Kegel Exercises): ಇದು ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಶ್ರೋಣಿಯ ಸ್ನಾಯುಗಳನ್ನು (Pelvic Muscles) ಬಲಪಡಿಸಲು ಸಹಾಯ ಮಾಡುತ್ತದೆ. 2. ಒತ್ತಡ ನಿಯಂತ್ರಣ (Stress Management) ಮಾನಸಿಕ ಒತ್ತಡವು ಲೈಂಗಿಕ ಆಸಕ್ತಿಯನ್ನು (Libido) ಕುಂಠಿತಗೊಳಿಸುವ ಪ್ರಮುಖ ಅಂಶವಾಗಿದೆ. ಅತಿಯಾದ ಒತ್ತಡದಿಂದ ದೇಹದಲ್ಲಿ ‘ಕಾರ್ಟಿಸೋಲ್’ ಹಾರ್ಮೋನ್ ಹೆಚ್ಚಾಗಿ, ಲೈಂಗಿಕ ಹಾರ್ಮೋನ್‌ಗಳ ಮಟ್ಟ ಕಡಿಮೆಯಾಗುತ್ತದೆ. ದಿನಕ್ಕೆ 10-15 ನಿಮಿಷಗಳ ಕಾಲ ಧ್ಯಾನ (Meditation) ಅಥವಾ…

Read More

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ಬದಲಾಯಿಸಿ ವಿಬಿಜಿ ರಾಮ್ ಜಿ ಎಂದು ನಾಮಕರಣ ಮಾಡುವ ಮೂಲಕ ಜನಪರ, ಬಡವರ ಪರವಾಗಿದ್ದ ಕಾರ್ಯಕ್ರಮವನ್ನು ಬುಡಮೇಲು ಮಾಡುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ನರೇಗಾ ಬಚಾವ್ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 20 ವರ್ಷಗಳ ಹಿಂದೆ ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಬಡವರು, ಕಾರ್ಮಿಕರಿಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹೆಸರಿನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತಂದಿತ್ತು. ಅಂದಿನಿಂದ ಇಂದಿನವರೆಗೆ ಕೋಟ್ಯಂತರ ಬಡಜನರು ಇದರ ಸದುಪಯೋಗ ಮಾಡಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿದ್ದರು. ಆದರೆ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮನರೇಗಾ ಹೆಸರನ್ನು ಬದಲಿಸಿ ವಿಬಿಜಿ ರಾಮ್ ಜಿ ಹೆಸರಿನಲ್ಲಿ ಯೋಜನೆಯನ್ನು ಜಾರಿಗೆ ತರಲು ಹೊರಟಿದೆ ಎಂದು…

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐಟಿ ವಿಭಾಗವು National Informatics Centre(NIC) ಸಹಯೋಗದೊಂದಿಗೆ, ನಗರ ಪಾಲಿಕೆಗಳಡಿ ಕಾರ್ಯನಿರ್ವಹಿಸುವ ಜಿಪಿಎಸ್ ತಂಡದ ವಿಶೇಷ ಮನೆ-ಮನೆ ಭೇಟಿ ಮೂಲಕ ಆಸ್ತಿ ತೆರಿಗೆ ಮರುಪರಿಶೀಲನೆ ಕಾರ್ಯವನ್ನು 2ನೇ ಹಂತದಲ್ಲಿ ಯಶಸ್ವಿಯಾಗಿ ನಡೆಸಿದೆ. ಈ ಹಂತದಲ್ಲಿ ಸುಮಾರು 13,600 ಆಸ್ತಿಗಳ ಮಾಲೀಕರು ಕಳೆದ ಸರಾಸರಿ 5 ವರ್ಷಗಳಿಂದ ಕಡಿಮೆ ತೆರಿಗೆ ಪಾವತಿಸಿರುವುದು ಪತ್ತೆಯಾಗಿದೆ. ಪ್ರತಿ ವರ್ಷಕ್ಕೆ ಪ್ರತ್ಯೇಕವಾಗಿ ನೀಡಲಾದ ನೋಟಿಸ್‌ಗಳನ್ನು ಒಳಗೊಂಡಂತೆ ಒಟ್ಟು ಸುಮಾರು 67,000 ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ. ಈ ಮರುಪರಿಶೀಲನೆಯಿಂದ ಸುಮಾರು 318 ಕೋಟಿ ರೂ.ಗಳ ತೆರಿಗೆ ತಪ್ಪು ಪಾವತಿ(evasion) ಪತ್ತೆಯಾಗಿದೆ. ಮೊದಲ ಮತ್ತು ಎರಡನೇ ಹಂತಗಳನ್ನು ಸೇರಿಸಿ ಒಟ್ಟು 23,600 ಆಸ್ತಿಗಳಿಂದ 688 ಕೋಟಿ ರೂ.ಗಳ ವಸೂಲಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ನೋಟಿಸ್ ಮತ್ತು ಪಾವತಿ ಮಾಹಿತಿ: * ಸಂಬಂಧಿತ ನಾಗರಿಕರಿಗೆ ಶೋ ಕಾಸ್ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದ್ದು, SMS ಹಾಗೂ IVRS ಮುಖಾಂತರವೂ ಮಾಹಿತಿ ಕಳುಹಿಸಲಾಗಿದೆ. * ನೋಟಿಸ್ ಪಡೆದ ನಾಗರಿಕರು 15 ದಿನಗಳೊಳಗಾಗಿ ಆನ್‌ಲೈನ್…

Read More

ಮಂಡ್ಯ :  ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಜರುಗಿದೆ. ಮದ್ದೂರು ತಾಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ಜರುಗಿದ್ದು, ಯುವತಿಯ ತಂದೆ ಚನ್ನೇಗೌಡನಿಗೂ ಸಣ್ಣ ಪುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಎಂಬ ಯುವಕ ಪಕ್ಕದ ಮನೆಯ ಯುವತಿ ಕಾವ್ಯ ಎಂಬ ಯುವತಿಯನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಕಳೆದ ಗುರುವಾರದಂದು ಯುವತಿಯ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದಾರೆ. ಈ ಘಟನೆಯಿಂದ ಕುಪಿತಗೊಂಡಿದ್ದ ಯುವತಿಯ ತಂದೆ ಚನ್ನೇಗೌಡ ಶನಿವಾರ ಬೆಳಿಗ್ಗೆ ಯುವಕನ ಮನೆಗೆ ಬೆಂಕಿ ಹಚ್ಚುವ ವೇಳೆ ಯುವಕನ ಮನೆಯಲ್ಲಿ ಯಾರು ಇಲ್ಲದ ಪರಿಣಾಮ ಹೆಚ್ಚಿನ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣವೇ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಸ್ಥಳಕ್ಕೆ ಮದ್ದೂರು ಅಗ್ನಿಶಾಮಕ ದಳದವರು ಆಗಮಿಸುವಷ್ಟರಲ್ಲಿ ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್…

Read More

ಮಂಡ್ಯ : ಸಮಾಜದಲ್ಲಿ ಈಗಲೂ ಆಚರಣೆಯಲ್ಲಿರುವ ಅಸ್ಪೃಶ್ಯತೆ ನಿರ್ಮೂಲನೆಗೆ ಪ್ರತಿಯೊಬ್ಬರು ದೃಢ ಸಂಕಲ್ಪ ಮಾಡಬೇಕೆಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಕಿ ಮತ್ತು ಬಲವರ್ಧನ ಸಮಿತಿಯ ಸಂಚಾಲಕಿ ಪಿ.ಯಶೋಧ ರವರು ಕರೆ ನೀಡಿದರು. ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸೋಮವಾರ ತಾಲ್ಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಸೇರಿದಂತೆ ಹಲವು ಇಲಾಖೆಗಳ ವತಿಯಿಂದ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಅನ್ವಯ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರ ಕುರಿತು ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಅಸ್ಪೃಶ್ಯತೆ ಆಚರಣೆ ಇಂದಿಗೂ ಜೀವಂತವಾಗಿರುವುದು ವಿಷಾದನೀಯ. ಜನಾಂದೋಲನದ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಾಗ ಮಾತ್ರ ಅಸ್ಪೃಶ್ಯತೆ ತೊಲಗಿಸಲು ಸಾಧ್ಯ. ಸಾಮಾಜಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕ ಮಾನೋಭಾವದಿಂದ ನೋಡಿದಾಗ ಅಸ್ಪೃಶ್ಯತೆ, ಜಾತಿ ಪದ್ಧತಿ ಹಾಗೂ ತಾರತಮ್ಯ ಹೋಗಲಾಡಿಸಬಹುದು ಎಂದು ಅಭಿಪ್ರಾಯಪಟ್ಟರು. ಭಾರತದ ಉಪ ಖಂಡಗಳಲ್ಲಿ ಮಾತ್ರ ಈ ರೀತಿಯ ಅಸ್ಪೃಶ್ಯತೆ ಆಚರಣೆಯಲ್ಲಿದ್ದು, ಕೇವಲ ಹುಟ್ಟುವಿನಿಂದ…

Read More

ಮಂಡ್ಯ: ಜಿಲ್ಲೆಯಲ್ಲಿ ಸಾರಿಗೆ ಬಸ್ ಒಂದು ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್ ಏರಿದೆ. ರಸ್ತೆ ಬದಿಯಲ್ಲಿನ ರೈಲಿಂಗ್ಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದಂತ 60ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳ ಬಳಿಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ರೈಲಿಂಗ್ಸ್ ಗೆ ಡಿಕ್ಕಿಯನ್ನು ಕೆ ಎಸ್ ಆರ್ ಟಿ ಸಿ ಬಸ್ ಹೊಡೆದಿದೆ. ಆ ಬಳಿಕ ಬಸ್ ನಿಂತಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ 60ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿರುವುದಾಗಿ ತಿಳಿದು ಬಂದಿದೆ. ಕೆ.ಆರ್.ಪೇಟೆಯಿಂದ ಭೇರ್ಯ ಕಡೆಗೆ 60.ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಬಸ್‌ ಇದಾಗಿದೆ. ಧಿಡೀರ್ ಬಸ್ ಬ್ರೇಕ್ ಫೇಲ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರೈಲಿಂಗ್ಸ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು…

Read More

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಶಿಕ್ಷಕರ ಗೌರವಧನ ಪಾವತಿಗಾಗಿ ಅನುದಾನ ಬಿಡುಗಡೆಗೊಳಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಡಿಸೆಂಬರ್-2025 ರಿಂದ ಮಾರ್ಚ್-2026 ರವರೆಗೆ (4 ತಿಂಗಳು) ಗೌರವಧನ ಪಾವತಿಸಲು ಲೆಕ್ಕಶೀರ್ಷಿಕೆ: 2202-02-197-1-01-300 (2202- 00-102-0-62-324) ರಡಿ ರೂ.4375.75 ಲಕ್ಷಗಳನ್ನು ಹಾಗೂ ಲೆಕ್ಕಶೀರ್ಷಿಕೆ:2515-00- 197-1-10-300 (2515-00-102-0-63-005) ರಡಿ ರೂ.373.75 ಲಕ್ಷಗಳನ್ನು ಬಿಡುಗಡೆ ಮಾಡಿ ಹೊರಡಿಸಿರುವ ಸಂಖ್ಯೆ: ಆಇ 298 323-6/2026, ದಿನಾಂಕ:16.02.2026ರ ಸರ್ಕಾರಿ ಆದೇಶದ ಪ್ರತಿಯನ್ನು ಕಡತದಲ್ಲಿರಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲು ಕಡತ ಹಿಂದಿರುಗಿಸಿದೆ ಎಂದಿದೆ. ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಡಿಸೆಂಬರ್-2025 ರಿಂದ ಮಾರ್ಚ್-2026ರವರೆಗೆ (4 ತಿಂಗಳು) ಗೌರವಧನ…

Read More

ಶಿವಮೊಗ್ಗ: ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ KRDCL ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಸಾoತ್ಯದೊಳಗೆ ಜನಸಂಚಾರಕ್ಕೆ ಮುಕ್ತ ಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅವರು ಇಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿಂನೀರಿನ ಲಾಂಚ್ ನಲ್ಲಿ ಪ್ರಯಾಣಿಸಿ, ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿದರು. ನಂತರ ಮಾತನಾಡಿದ ಅವರು ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಅಗತ್ಯವಿರುವ 56.14 ಕೋಟಿ ರೂ ಅನುದಾನವನ್ನು ಬಿಡುಗಡೆಗೊಳಿಸಿ, ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದ ಅವರು ಮೇ ಮಾಹೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಳಿಸಲಾಗುವುದು ಎಂದರು. ಈ ಸೇತುವೆಯ ನಿರ್ಮಾಣದಿಂದಾಗಿ ಶರಾವತಿ ಸಂತ್ರಸ್ತ ಗ್ರಾಮಗಳಿರುವ ಆರು ಪಂಚಾಯಿತಿಗಳ ನಿವಾಸಿಗಳಿಗೆ ಹಾಗೂ ಸಾಗರ…

Read More

ಇಂದು ಜಗತ್ತಿನಾದ್ಯಂತ, ವಿಶೇಷವಾಗಿ ಅಮೆರಿಕದಂತಹ ದೇಶಗಳಲ್ಲಿ ಮರಣಕ್ಕೆ ಪ್ರಮುಖ ಕಾರಣ ಹೃದಯ ಸಂಬಂಧಿ ಕಾಯಿಲೆಗಳು. ಸಾಮಾನ್ಯವಾಗಿ ಹೃದಯವನ್ನು ಕಾಪಾಡಿಕೊಳ್ಳಲು ಕಠಿಣ ಆಹಾರ ಪಥ್ಯ (Diet) ಮಾಡಬೇಕು ಎಂಬ ಭಯ ಅನೇಕರಲ್ಲಿದೆ. ಆದರೆ, “ನಿಮ್ಮ ಇಡೀ ಆಹಾರ ಕ್ರಮವನ್ನು ಬದಲಿಸುವ ಅಗತ್ಯವಿಲ್ಲ, ಸಣ್ಣ ಮತ್ತು ಸರಳ ಬದಲಾವಣೆಗಳೇ ನಿಮ್ಮ ಜೀವ ಉಳಿಸಬಲ್ಲವು” ಎನ್ನುತ್ತಾರೆ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕ ಮ್ಯಾಥ್ಯೂ ಲ್ಯಾಂಡ್ರಿ. ಹೃದಯಾಘಾತದ ಭೀತಿಯೇ? ಇಂದೇ ಈ 5 ಆಹಾರ ಬದಲಾವಣೆಗಳನ್ನು ರೂಢಿಸಿಕೊಳ್ಳಿ 1. ನಾರಿನಂಶವಿರುವ (Fiber) ಆಹಾರಗಳನ್ನು ಹೆಚ್ಚಿಸಿ ಓಟ್ಸ್, ಬಾರ್ಲಿ, ಮತ್ತು ದ್ವಿದಳ ಧಾನ್ಯಗಳಲ್ಲಿರುವ ‘ದ್ರವ ರೂಪದ ನಾರು’ (Soluble Fiber) ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ (LDL) ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ದಿನಕ್ಕೆ ಕನಿಷ್ಠ ಒಂದು ಬಾರಿಯಾದರೂ ಇಡೀ ಧಾನ್ಯಗಳ ಸೇವನೆ ಇರಲಿ. 2. ಆರೋಗ್ಯಕರ ಕೊಬ್ಬನ್ನು ಆರಿಸಿ (Healthy Fats) ಸಾಚುರೇಟೆಡ್ ಫ್ಯಾಟ್ ಇರುವ ಬೆಣ್ಣೆ ಅಥವಾ ತುಪ್ಪದ ಬದಲಾಗಿ, ಹೃದಯಕ್ಕೆ ಹಿತವಾದ ಅನ್‌ಸಾಚುರೇಟೆಡ್ ಫ್ಯಾಟ್ ಬಳಸಿ. ಆಲಿವ್ ಎಣ್ಣೆ…

Read More