Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಶಿಂಷಾ ಎಡ ದಂಡೆ ವ್ಯಾಪ್ತಿಯ ಕೆರೆ ಮತ್ತು ನಾಲೆಗಳ ಆಧುನಿಕರಣಕ್ಕೆ 127 ಕೋಟಿ ರೂ ಅನುದಾನ ಬಿಡುಗಡೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಕೆರೆ ಸೌಂದರ್ಯಕರಣ ಕಾಮಗಾರಿಗೆ ಅಂದಾಜು 4 ಕೋಟಿ ವೆಚ್ಚದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಸೋಮನಹಳ್ಳಿ ಕೆರೆಯನ್ನು ಸೌಂದರ್ಯಕರಣ ಮಾಡಲು 4 ಕೋಟಿ ವೆಚ್ಚದಲ್ಲಿ ಚಾಲನೆ ನೀಡಲಾಗಿದ್ದು, ಇದರಲ್ಲಿ ಏರಿ ಅಗಲೀಕರಣ, ವಾಕಿಂಗ್ ಪಾತ್, ಗ್ರಿಲ್ ಹಾಗೂ ವಿದ್ಯುತ್ ಕಂಬಗಳ ನಿರ್ಮಾಣ ಮಾಡಲಾಗುವುದು ಇದರ ಜೊತೆಗೆ ಇನ್ನು ಒಂದು ತಿಂಗಳೊಳಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ನೀಡಿ ಅದರಲ್ಲಿ ಒತ್ತುವರಿ ತೆರವು, ಹೂಳು ಎತ್ತುವುದು, ಹೊಸ ತೂಬುಗಳ ನಿರ್ಮಾಣ ಹಾಗೂ ಹೆಚ್ಚುವರಿ ನೀರು ತುಂಬಿಸಲು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು. ಕೆಸ್ತೂರು ಮತ್ತು ಸೋಮನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರೈತರಿಗೆ ಯಾವುದೇ ಶಾಶ್ವತ ನೀರಾವರಿ…
ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಮದ್ದೂರು ನಗರದಲ್ಲಿ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ಮಾಡಿದರು. ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ ಅನ್ನು ಸೇರಿಸಿರುವುದನ್ನು ವಿರೋಧಿಸಿ ಗೆಜ್ಜಲಗೆರೆ ಗ್ರಾಪಂ ಆವರಣದಲ್ಲಿ 53 ದಿನಗಳಿಂದ ಹಾಗೂ ಗೊರವನಹಳ್ಳಿ ಗ್ರಾಪಂ ಕಚೇರಿ ಎದುರು 34 ದಿನಗಳಿಂದ ಅನಿದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು. ನಗರದ ಶಿವಪುರ ಧ್ವಜ ಸತ್ಯಾಗ್ರಹ ಸೌಧದಿಂದ ಆರಂಭಗೊಂಡ ಪಂಜಿನ ಮೆರವಣಿಗೆಗೆ ರೈತ ನಾಯಕಿ ಸುನಂದ ಜಯರಾಮು ಚಾಲನೆ ನೀಡಿ ಮಾತನಾಡಿ, ಮದ್ದೂರು ನಗರಸಭೆಗೆ ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಹಾಗೂ ಗೊರವನಹಳ್ಳಿ ಗ್ರಾಪಂಗಳನ್ನು ಸೇರಿಸಿರುವುದು ಸರಿಯಲ್ಲ. ಈ ಕೂಡಲೇ ಈ ಪಂಚಾಯಿತಿಗಳನ್ನು ನಗರಸಭೆಯಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ನಾಲ್ಕು ಪಂಚಾಯತಿಗಳ ಗ್ರಾಮಸ್ಥರು ಒಗ್ಗೂಡಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು…
ಮಂಡ್ಯ : ಮದ್ದೂರು ನಗರದ ತಾಲೂಕು ಕಛೇರಿ ಪಕ್ಕದದಲ್ಲಿರುವ 22 ಮಳಿಗೆಗಳನ್ನು ಒಂದು ವಾರದೊಳಗೆ ಖಾಲಿ ಮಾಡಬೇಕೆಂದು ತಾಪಂ ಇಓ ರಾಮಲಿಂಗಯ್ಯ ಡೆಡ್ ಲೈನ್ ನೀಡಿದರು. ಮದ್ದೂರು ಪೋಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಶುಕ್ರವಾರ ತೆರಳಿ ಮಳಿಗೆಗಳನ್ನು ಖಾಲಿ ಮಾಡುವಂತೆ ಮಾಲೀಕರಿಗೆ ಸೂಚನೆ ನೀಡಿದರು. ಈ ವೇಳೆ ಮಾಲೀಕರು ಈ ರೀತಿ ಏಕಾಏಕಿ ಮಳಿಗೆಗಳನ್ನು ಖಾಲಿ ಮಾಡಿ ಎಂದರೆ ಎಲ್ಲಿಗೆ ಹೋಗೋದು ನಮಗೆ ಸಮಯಾವಕಾಶ ನೀಡುವಂತೆ ಅಧಿಕಾರಿಗಳು ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೋಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಈ ವೇಳೆ ಮಾತನಾಡಿದ ತಾಪಂ ಇಓ ರಾಮಲಿಂಗಯ್ಯ ಈಗಾಗಲೇ ಮಳಿಗೆಗಳ ಕರಾರು ಅವಧಿ ಮುಗಿದಿದ್ದು, ಈ ಮಳಿಗೆಗಳನ್ನು ಮರು ಹರಾಜು ಮಾಡಬೇಕೆಂದು ಹಲವು ಬಾರಿ ಮಳಿಗೆಗಳನ್ನು ಖಾಲಿ ಮಾಡುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಕಳೆದ ತಿಂಗಳು ಸಹ ಕೊನೆಯ ನೋಟೀಸ್ ನೀಡಿ ಒಂದು ವಾರದೊಳಗೆ ಖಾಲಿ ಮಾಡುವಂತೆ ಕೊನೆಯ ಸೂಚನೆ ನೀಡಲಾಗಿತ್ತು.…
ಬೆಂಗಳೂರು: ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. https://twitter.com/siddaramaiah/status/2022323778454220809 ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು.…
ಶಿವಮೊಗ್ಗ: ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಟಿಪ್ಪಣಿಯಿಂದಾಗಿ ಸಾಗರದ ಶರಾವತಿ ಮುಳುಗಡೆ ಸಂತ್ರಸ್ತರನ್ನು ಸಂಕಷ್ಟಕ್ಕೆ ದೂಡುವಂತಾಗಿತ್ತು. ಇಂತಹ ಸಾಗರದ ಯಡಮನೆ ಗ್ರಾಮಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿದರು. ಅಲ್ಲದೇ ಗ್ರಾಮಸ್ಥರಿಂದ ಮಾಹಿತಿ ಪಡೆದು, ಸರ್ಕಾರದ ಗಮನ ಸೆಳೆದು, ಪರಿಹಾರದ ಭರವಸೆಯನ್ನು ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಕಟ್ಟಿನಕಾರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಡಮನೆ ಗ್ರಾಮಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿದರು. ಈ ಗ್ರಾಮದಲ್ಲಿದ್ದಂತ 16 ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ಮನೆ, ಜಮೀನು ಖಾಲಿ ಮಾಡುವಂತೆ ನೋಟಿಸ್ ನೀಡಿದ್ದ ಹಿನ್ನಲೆಯಲ್ಲಿ ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಅವರನ್ನು ಭೇಟಿ ಮಾಡಿರು. ಮಾಜಿ ಸಚಿವ ಹರತಾಳು ಹಾಲಪ್ಪ ಬಳಿಯಲ್ಲಿ ಯಡಮನೆ ಗ್ರಾಮದ ಗ್ರಾಮಸ್ಥರು ತಮ್ಮ ಕಣ್ಣೀರಿನ ಕತೆಯನ್ನೇ ಬಿಚ್ಚಿಟ್ಟಿದರು. ಮನೆ, ಜಮೀನು, ಕೊಚ್ಚಿಗೆಯಯನ್ನು ಖಾಲಿ ಮಾಡಿರೋದು, ಹಾಳಾದ ಮನೆಯ ಸಂಪೂರ್ಣ ಚಿತ್ರಣವನ್ನೇ ಮಾಜಿ ಸಚಿವರ ಮುಂದಿಟ್ಟಿದರು. ಯಡಮನೆ ಗ್ರಾಮಸ್ಥರ ಸಂಕಷ್ಟ ಕೇಳಿದಂತ ಹಾಲಪ್ಪ…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ ಎನ್ನುವಂತ ನಕಲಿ ಪತ್ರವನ್ನು ಶೇರ್ ಮಾಡಿದಂತ ಶಾಸಕ ಸುನೀಲ್ ಕುಮಾರ್ ಕಾರ್ಕಳ, ಎಂಎಲ್ಸಿ ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಆಯುಕ್ತರಿಗೆ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ದೂರು ನೀಡಿದ್ದಾರೆ. ಕಾಂಗ್ರೆಸ್ ಎಂಎಲ್ಸಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ನೀಡಿರುವಂತ ದೂರಿನಲ್ಲಿ, ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಹೆಸರಿನಲ್ಲಿ ನಕಲಿ/ಕಟ್ಟುಕತೆ ವರ್ಗಾವಣೆ ಪತ್ರವನ್ನು ತಯಾರಿಸಿ (Dr ಅದನ್ನು ಈ ದಿನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆ ನಕಲಿ ಪತ್ರದ ಆಧಾರದ ಮೇಲೆ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ ಒಬ್ಬ ಶಾಸಕ ಸುನಿಲ್ ಕುಮಾರ್ (MLA) ಹಾಗೂ ಒಬ್ಬ ವಿಧಾನ ಪರಿಷತ್ ಸದಸ್ಯ ರವಿಕುಮಾರ್ (MLC) ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ದೂರು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ. ಪ್ರಸಾರವಾಗಿರುವ ಪತ್ರವು ಸಂಪೂರ್ಣ ಕೃತಕ ಹಾಗೂ ದುರುದ್ದೇಶದಿಂದ ಕೂಡಿರುತ್ತದೆ. ದಿನಾಂಕ ಇಲ್ಲದ…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಹಗಲು ಹೊತ್ತಿನಲ್ಲೇ ಕಳ್ಳತನಕ್ಕೆ ಇಳಿದಂತ ಕಳ್ಳನೊಬ್ಬನನ್ನು ಗ್ರಾಮಸ್ಥರು ರೆಡ್ ಹ್ಯಾಂಡ್ ಹಿಡಿದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೇ ಕಳ್ಳನನ್ನು ಊರ ತುಂಬೆಲ್ಲ ಮೆರವಣಿಗೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾನಲೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡಹಗಲೇ ಕಳ್ಳನೊಬ್ಬ, ಕಬ್ಬಳ್ಳಿ ಹುಚ್ಚಪ್ಪ ಎಂಬುವರ ಮನೆಯ ಕಿಟಕಿ ಮುರಿದು ಒಳಗೆ ಹೋಗಿದ್ದಾನೆ. https://youtu.be/Z-0067bOTR0 ಮನೆಯ ಒಳಗಡೆ ಶಬ್ದವಾಗುತ್ತಿದ್ದಂತ ಗಮನಿಸಿದಂತ ಗ್ರಾಮಸ್ಥರು, ಅನುಮಾನಗೊಂಡು ನೋಡಿದಾಗ ಕಳ್ಳನೊಬ್ಬ ನುಗ್ಗಿ, ಕಳ್ಳತನ ಮಾಡುತ್ತಿರೋದು ಕಂಡು ಬಂದಿದೆ. ಕೂಡಲೇ ಅಲರ್ಟ್ ಆದಂತ ಹೊಂಕೇರಿ ಗ್ರಾಮಸ್ಥರು, ಬಾಗಿಲಿ ತೆಗೆದು ಒಳಹೋಗಿ ಕಳ್ಳನನ್ನು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. ಅಂದಹಾಗೇ ಹೊಂಕೇರಿಯ ಕಬ್ಬಳ್ಳಿ ಹುಚ್ಚಪ್ಪ ಅವರ ಮನೆಗೆ ನುಗ್ಗಿದಂತ ಕಳ್ಳ, ಬೀರು ಮುರಿದಿದ್ದನು. ಅಲ್ಲದೇ ಅದರಲ್ಲಿ ಕಬ್ಬಳ್ಳಿ ಹುಚ್ಚಪ್ಪ ಅವರು ಬೆಲ್ಲ ಮಾರಿ ಇರಿಸಿದ್ದಂತ 50,000 ಹಣ, ಚಿನ್ನಾಭರಣ ದೋಚಿದ್ದನು ಎನ್ನಲಾಗಿದೆ. ಬಾಗಿಲು ಮೂಲಕ ಗ್ರಾಮಸ್ಥರು ಒಳಗೆ ನುಗ್ಗಿ ಹಿಡಿದಾಗ ಇದೆಲ್ಲವೂ ಸಿಕ್ಕಿದೆ.…
ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಬೆಂಗಳೂರಿನಿಂದ ಸೋಮನಾಥಪುರ, ತಲಕಾಡು, ಮಧ್ಯಂರಂಗ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ವಿಶೇಷ ಪ್ಯಾಕೇಜ್ ಟೂರ್ ಗಳನ್ನು ಘೋಷಣೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯು, ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ಯಾಕೇಜ್ಟೂರ್ ಸೇವೆಗಳನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ& ಭಾನುವಾರ) ರಾಜಹಂಸ ಮತ್ತುಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ. (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿಊಟವನ್ನು ಹೊರತುಪಡಿಸಿ) ಸದರಿ ಪ್ಯಾಕೇಜ್ಟೂರ್ಗೆ ಸಾರ್ವಜನಿಕ ಪ್ರಯಾಣಿಕರಿಂದಉತ್ತಮ ಪ್ರೋತ್ಸಾಹದೊರೆಯುತ್ತಿದೆ. ಪ್ಯಾಕೇಜ್ ಟೂರ್ಗಳ ವಿವರ ಮತ್ತು ಪ್ರಯಾಣದರ ಈ ಕೆಳಗಿನಂತಿದೆ. ಪ್ಯಾಕೇಜ್ ಟೂರ್ಗಳ ವಿವರ ಮತ್ತು ಪ್ರಯಾಣದರ ಬೆಂಗಳೂರು-ಗಗನಚುಕ್ಕಿ ಪ್ಯಾಕೇಜ್ ಟೂರ್ ನಲ್ಲಿ ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ ಪ್ರವಾಸಿ ತಾಣಗಳನ್ನು ರಾಜಹಂಸ ಬಸ್ ಮೂಲಕ ನೋಡಬಹುದಾಗಿದೆ. ವಯಸ್ಕರಿಗೆ ರೂ.750 ಹಾಗೂ ಮಕ್ಕಳಿಗೆ ರೂ.600 ಟಿಕೆಟ್ ದರ ನಿಗದಿ ಪಡಿಸಲಾಗಿದೆ. ಬೆಂಗಳೂರು-ಗಗನಚುಕ್ಕಿ ಪ್ಯಾಕೇಜ್ ಟೂರಿನಲ್ಲಿ ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯ ಸಿಬ್ಬಂದಿಗೆ ವಿಶೇಷ ರಜೆ ಮಂಜೂರು ಮಾಡಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯವಾಗಿ ರಜೆ ನೀಡಬೇಕು. ಅರ್ಜಿ ಸಲ್ಲಿಸಿದರೇ ಕಡ್ಡಾಯವಾಗಿ ರಜೆ ನೀಡಬೇಕು ಎಂಬುದಾಗಿ ಸೂಚಿಸಿದ್ದಾರೆ. ರಾಜ್ಯದ ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯ ಸಿಬ್ಬಂದಿಗಳಿಗೆ ಹುಬ್ಬುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ವಿಶೇಷ ರಜೆಯನ್ನು ಕಡ್ಡಾಯವಾಗಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/fir-registered-against-those-who-shared-cm-siddaramaiahs-fake-recommendation-letter/ https://kannadanewsnow.com/kannada/breaking-massive-corruption-in-rto-department-following-excise-fcs-issued-to-vehicles-without-inspection/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿದಂತ ಪತ್ರವೊಂದು ವೈರಲ್ ಆಗಿತ್ತು. ಇದೇ ಪತ್ರವನ್ನು ಶಾಸಕ ಸುನೀಲ್ ಕುಮಾರ್ ಕಾರ್ಕಳ ಕೂಡ ಶೇರ್ ಮಾಡಿ, ಸಿಎಂ ವಿರುದ್ಧ ಕಿಡಿಕಾರಿದ್ದರು. ಈ ಬೆನ್ನಲ್ಲೇ ನಕಲಿ ಶಿಫಾರಸ್ಸು ಪತ್ರ ಸಿದ್ಧಮಾಡಿ, ಹಂಚಿದವರ ವಿರುದ್ಧ ಸರ್ಕಾರ ಎಫ್ಐಆರ್ ದಾಖಲಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯವಾಗಿಸುವ ಬಿಜೆಪಿಯ ಸುಳ್ಳಿನ ಫ್ಯಾಕ್ಟರಿಯ ಮತ್ತೊಂದು ವಿಫಲ ಹುನ್ನಾರವಿದು. ಸುನೀಲ್ ಕುಮಾರ್ ಅವರೇ, ದಿನಾಂಕವಿಲ್ಲದ, ರೆಫರೆನ್ಸ್ ಸಂಖ್ಯೆಯಿಲ್ಲದ ಒಂದು ನಕಲಿ ಪತ್ರವನ್ನು ಹಿಡಿದು ಜನರಲ್ಲಿ ಗೊಂದಲ ಸೃಷ್ಟಿಸಲು ಹೊರಟಿರುವ ನಿಮಗೆ ಕನಿಷ್ಠ ಜ್ಞಾನವೂ ಇಲ್ಲವೇ? ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲು ನಮ್ಮ ನಿಯಮಗಳಲ್ಲಿ ಅವಕಾಶವೇ ಇಲ್ಲ ಎಂಬುದು ತಿಳಿಯದಷ್ಟು ಬೌದ್ಧಿಕ ದಿವಾಳಿತನವೇ? ಈ ನಕಲಿ ಪತ್ರದ ಬಗ್ಗೆ ನಮ್ಮ ಮುಖ್ಯಮಂತ್ರಿ…














