Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಶಿವಮೊಗ್ಗ: ಜಿಲ್ಲೆಯ ಸೊರಬದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮೇ 30, 2026ರ ಶನಿವಾರದಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿವಿಧ ಫೀಡರ್ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಸೊರಬ ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ಈ ಕೆಳಗಿನ ಫೀಡರ್ಗಳ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ: ಎಫ್-21: ಸೊರಬ ಪಟ್ಟಣ ಎಫ್-2: ಸಾರೆಕೊಪ್ಪ ಎಫ್-3: ಬಳ್ಳೀಬೈಲು ಎಫ್-4: ಓಟೂರು ಎಫ್-5: ಚಿಕ್ಕಾವಲಿ ಎಫ್-15: ಕಲ್ಲಂಬಿ ಎನ್ಜೆವೈ ಎಫ್-16: ಕಡಸೂರು ಎನ್ಜೆವೈ ಎಫ್-17: ಯಲವಳ್ಳ ಎಫ್-6: ಹಾಲಗಳಲೆ ಎಫ್-7: ತಲಚೆಬೈಲು ಎಫ್-8: ಕುಪ್ಪೆ ಎಫ್-9: ಬಿಳಾಗಿ ಎಫ್-10: ಮರ ಎಫ್-11: ಮಂಚಿ ಎಫ್-12: ಉರಗನಹಳ್ಳಿ ಎಫ್-13: ಆಂದಿಗೆ ಎಫ್-14: ಕೊಡಕಣಿ ಎಫ್-18: ನಿಸ್ರಾಣಿ ಎಫ್-20: ಹೆಗ್ಗೋಡು ಎನ್ಜೆವೈ ಎಫ್-23: ತಾವರೆಹಳ್ಳಿ ಎಫ್-24: ಕಕ್ಕರಸಿ ಎಫ್-25: ನಡಹಳ್ಳಿ…
ಬೆಂಗಳೂರು: ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮುಂದಿನ ಎರಡು ವರ್ಷಗಳ ಅವಧಿಗೆ ವಿದೇಶ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ. ಈ ಹಿಂದೆ ಪ್ರಕರಣವೊಂದರಲ್ಲಿ ಜಾಮೀನು ನೀಡುವಾಗ ವಿಧಿಸಲಾಗಿದ್ದ “ನ್ಯಾಯಾಲಯದ ಅನುಮತಿ ಇಲ್ಲದೆ ವಿದೇಶ ಪ್ರವಾಸ ಮಾಡುವಂತಿಲ್ಲ” ಎಂಬ ನಿಬಂಧನೆಯನ್ನು ಸಡಿಲಿಸಬೇಕು ಎಂದು ಕೋರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಬೆಂಗಳೂರಿನ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಧೀಶರಾದ ಕೆ.ಎನ್. ಶಿವಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಮುಖ ಮುಖ್ಯಾಂಶಗಳು: ಪ್ರವಾಸದ ಅವಧಿ ಮತ್ತು ದೇಶಗಳು: ಮುಂದಿನ ಎರಡು ವರ್ಷಗಳ ಅವಧಿಗೆ ಅಧಿಕೃತ ಹಾಗೂ ವೈಯಕ್ತಿಕ ಮತ್ತು ವ್ಯವಹಾರಿಕ ಕಾರಣಗಳಿಗಾಗಿ ಅಮೆರಿಕ (USA), ಯುರೋಪ್ ದೇಶಗಳು, ಯುನೈಟೆಡ್ ಕಿಂಗ್ಡಮ್ (UK), ಆಸ್ಟ್ರೇಲಿಯಾ, ರಷ್ಯಾ ಮತ್ತು ಅರಬ್ ರಾಷ್ಟ್ರಗಳಿಗೆ ಭೇಟಿ ನೀಡಲು ಕೋರ್ಟ್ ಅನುಮತಿಸಿದೆ. ಕಟ್ಟುನಿಟ್ಟಿನ ಷರತ್ತುಗಳು: ವಿದೇಶ ಪ್ರವಾಸ ಕೈಗೊಳ್ಳುವ ಮುನ್ನ ತಮ್ಮ ಪ್ರವಾಸದ ಸಂಪೂರ್ಣ…
ಶನಿ ದೋಷವನ್ನು ಅನುಭವಿಸುತ್ತಿರುವ ಮೇಷ, ಸಿಂಹ, ಕನ್ಯಾ, ಧನುಸ್ಸು, ಕುಂಭ ಹಾಗೂ ಮೀನ ರಾಶಿಯವರಿಗೆ ಶನಿ ದೋಷದಿಂದ ವಿಮುಕ್ತಿ ದೊರಕುವ ವಿಶೇಷ ಅವಕಾಶ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. 2026 ಮೇ 16, ಶನಿವಾರದಂದು ಬರುವ ಶನಿ ಜಯಂತಿ ಅತ್ಯಂತ ವಿಶೇಷವಾಗಿದೆ. ಶನಿ ಜಯಂತಿ ಶನಿವಾರ, ಮೇ 16, 2026 ಅಮಾವಾಸ್ಯೆ ತಿಥಿ ಆರಂಭ: ಮೇ 16, 2026 ಬೆಳಿಗ್ಗೆ 05:11 ಅಮಾವಾಸ್ಯೆ ತಿಥಿ ಮುಕ್ತಾಯ: ಮೇ 17, 2026 ರಾತ್ರಿ 01:30 ನಕ್ಷತ್ರ: ಭರಣಿ ಸಂಜೆ 5:31ರವರೆಗೆ, ನಂತರ ಕೃತ್ತಿಕಾ ಈ ಪವಿತ್ರ…
ಬೆಂಗಳೂರು: ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಯನ್ನು ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿದಾಯದ ಭಾಷಣ ಮಾಡಿದರು. ಅವರು ಏನು ಹೇಳಿದರು ಅಂತ ಮುಂದೆ ಓದಿ.. ಎಲ್ಲರಿಗೂ ನಮಸ್ಕಾರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ. ಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ ಮತದಾರ ದೇವರು. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ. ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ…
ಬೆಂಗಳೂರು: ಇಂದು ರಾಜ್ಯಪಾಲರ ಕಾರ್ಯದರ್ಶಿಯನ್ನು ಭೇಟಿಯಾಗಿರುವಂತ ಸಿದ್ಧರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಆ ಮೂಲಕ ದಾಖಲೆಯ 2,902 ದಿನಗಳ ಆಡಳಿತ ಅಂತ್ಯಗೊಂಡಂತೆ ಆಗಿದೆ. ಕರ್ನಾಟಕ ರಾಜಕಾರಣದಲ್ಲಿ ಹೊಸ ಇತಿಹಾಸ: ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ರಾಜ್ಯದಲ್ಲಿ ಅತಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಾಯಕರ ಪಟ್ಟಿಯಲ್ಲಿ ಮಾಜಿ ಸಿಎಂ ಡಿ. ದೇವರಾಜ ಅರಸು ಅವರ ದಾಖಲೆಯನ್ನು ಮೀರಿಸಿ ಸಿದ್ದರಾಮಯ್ಯ ಅವರು ಪ್ರಥಮ ಸ್ಥಾನಕ್ಕೇರಿದ್ದಾರೆ. ದಾಖಲೆಯ ದಿನಗಳ ವಿವರ: ಸಿದ್ದರಾಮಯ್ಯ ಅವರು ತಮ್ಮ ಎರಡು ಅವಧಿಗಳ (2013-2018 ಮತ್ತು 2023 ರಿಂದ ಪ್ರಸ್ತುತ) ಆಡಳಿತದಲ್ಲಿ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಈ ಹಿಂದೆ ಡಿ. ದೇವರಾಜ ಅರಸು ಅವರು ಒಟ್ಟು 7 ವರ್ಷ 239 ದಿನಗಳ ಕಾಲ (ಒಟ್ಟು 2,792 ದಿನಗಳು) ಸಿಎಂ ಆಗಿ ಆಡಳಿತ…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಇದೇ ಮೇ 31 ರಂದು ಭಾನುವಾರ ನಡೆಯಲಿರುವ ಐಪಿಎಲ್ 2026ರ ಮಹಾ ಫೈನಲ್ ಪಂದ್ಯಾವಳಿಯನ್ನು ಸಾಗರದ ಕ್ರೀಡಾ ಪ್ರೇಮಿಗಳು ಒಟ್ಟಾಗಿ ಸಂಭ್ರಮಿಸಲು ಬೃಹತ್ ಎಲ್ಇಡಿ (LED) ಪರದೆಯ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಗಾಂಧಿ ಮೈದಾನದಲ್ಲಿ ಲೈವ್ ಹಬ್ಬ ಸಾಗರದ ನಗರಸಭೆ ಆವರಣದಲ್ಲಿರುವ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಈ ಬೃಹತ್ ಪರದೆಯನ್ನು ಅಳವಡಿಸಲಾಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂನಲ್ಲೇ ಕುಳಿತು ಪಂದ್ಯ ವೀಕ್ಷಿಸುವಂತಹ ಅದ್ಭುತ ಅನುಭವವನ್ನು ಇಲ್ಲಿ ಪಡೆಯಬಹುದಾಗಿದೆ. ಅಭಿಮಾನಿಗಳ ಮನಗೆದ್ದ ಶಾಸಕರು ಪ್ರತಿ ವರ್ಷ ಐಪಿಎಲ್ ಫೈನಲ್ ಪಂದ್ಯದ ವೇಳೆ ಯುವಕರು ಹಾಗೂ ಕ್ರಿಕೆಟ್ ಪ್ರೇಮಿಗಳಲ್ಲಿ ಇರುವ ಉತ್ಸಾಹವನ್ನು ಮನಗಂಡು, ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಈ ಬಾರಿ ಪ್ರತಿ ವರ್ಷದಂತೆ ಸಾಗರದಲ್ಲೇ ದೊಡ್ಡ ಮಟ್ಟದ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಮೂಲಕ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಸಾಗರ ತಾಲ್ಲೂಕಿಗೆ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ಅವರನ್ನು ನೇಮಿಸಿ ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯಲ್ಲಿ ಮಹತ್ತರ ಆಡಳಿತಾತ್ಮಕ ಬದಲಾವಣೆ ಮಾಡಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ ಒಟ್ಟು 27 ತಹಶೀಲ್ದಾರ್ (ಗ್ರೇಡ್-1 ಮತ್ತು ಗ್ರೇಡ್-2) ವೃಂದದ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಸ್ಥಳನಿಯುಕ್ತಿಗೊಳಿಸಿ ಸರ್ಕಾರ ಬುಧವಾರ (ಮೇ 27, 2026) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಕೆ. ನರಸಿಂಹಮೂರ್ತಿ ಅವರ ಡಿಜಿಟಲ್ ಸಹಿಯೊಂದಿಗೆ ಈ ಆದೇಶ ಹೊರಬಿದ್ದಿದ್ದು, ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣವೇ ನಿಯೋಜಿತ ಸ್ಥಳಗಳಲ್ಲಿ ಅಧಿಕಾರ ವಹಿಸಿಕೊಂಡು, ಸಿಟಿಸಿ ವರದಿಯನ್ನು ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇನ್ನೂ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕರಾಗಿದ್ದಂತ ಡಾ.ಪ್ರತಿಭಾ.ಆರ್ ಅವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಆಗಿ ಖಾಲಿ ಹುದ್ದೆಗೆ ನೇಮಕ…
ಬೆಂಗಳೂರು: ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯಲ್ಲಿ ಮಹತ್ತರ ಆಡಳಿತಾತ್ಮಕ ಬದಲಾವಣೆ ಮಾಡಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ ಒಟ್ಟು 27 ತಹಶೀಲ್ದಾರ್ (ಗ್ರೇಡ್-1 ಮತ್ತು ಗ್ರೇಡ್-2) ವೃಂದದ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಸ್ಥಳನಿಯುಕ್ತಿಗೊಳಿಸಿ ಸರ್ಕಾರ ಬುಧವಾರ (ಮೇ 27, 2026) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಕೆ. ನರಸಿಂಹಮೂರ್ತಿ ಅವರ ಡಿಜಿಟಲ್ ಸಹಿಯೊಂದಿಗೆ ಈ ಆದೇಶ ಹೊರಬಿದ್ದಿದ್ದು, ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣವೇ ನಿಯೋಜಿತ ಸ್ಥಳಗಳಲ್ಲಿ ಅಧಿಕಾರ ವಹಿಸಿಕೊಂಡು, ಸಿಟಿಸಿ ವರದಿಯನ್ನು ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. 📋 ವರ್ಗಾವಣೆಗೊಂಡ ತಹಶೀಲ್ದಾರ್ಗಳ ಸಂಪೂರ್ಣ ವಿವರ ಇಲ್ಲಿದೆ: ಕ್ರ.ಸಂ. ಅಧಿಕಾರಿಯ ಹೆಸರು (ಶ್ರೀ/ಶ್ರೀಮತಿ) ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳ PDF ವರ್ಗಾಯಿಸಲಾದ ಹೊಸ ಹುದ್ದೆ / ಸ್ಥಳ PDF 1 ಪೃಥ್ವಿ ಸಾನಿಕಂ ತಹಶೀಲ್ದಾರ್ ಗ್ರೇಡ್-1, ಮುಲ್ಕಿ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ ತಹಶೀಲ್ದಾರ್ ಗ್ರೇಡ್-1, ಬೆಳ್ತಂಗಡಿ ತಾಲ್ಲೂಕು, ದಕ್ಷಿಣ ಕನ್ನಡ…
ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ
ಬೆಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗುತ್ತಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ವಿದ್ಯಾರ್ಥಿ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಿದೆ. ಸರ್ಕಾರದ ಆದೇಶದಂತೆ ಈ ಬಾರಿ ಸಂಪೂರ್ಣ ಗಣಕೀಕೃತ (Computerised) ವ್ಯವಸ್ಥೆಯಡಿ ‘ಸೇವಾ ಸಿಂಧು’ ಪೋರ್ಟಲ್ ಮೂಲಕವೇ ಬಸ್ ಪಾಸ್ಗಳನ್ನು ವಿತರಿಸಲಾಗುವುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ. ಬಸ್ ಪಾಸ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಅನುಸರಿಸಬೇಕಾದ ಪ್ರಮುಖ ನಿಯಮಗಳು, ದರ ಹಾಗೂ ಹೆಲ್ಪ್ಲೈನ್ ವಿವರಗಳು ಈ ಕೆಳಗಿನಂತಿವೆ: ಅರ್ಜಿ ಸಲ್ಲಿಕೆ ಹೇಗೆ? (ಪ್ರಮುಖ ದಿನಾಂಕಗಳು) ಆನ್ಲೈನ್ ಅರ್ಜಿ: ವಿದ್ಯಾರ್ಥಿಗಳು ಮೇ 29, 2026ರಿಂದ ‘ಸೇವಾ ಸಿಂಧು’ ಪೋರ್ಟಲ್ನ ಅಧಿಕೃತ ಲಿಂಕ್ https://sevasindhuservices.karnataka.gov.in/buspassservices/ ಮೂಲಕ ಉಚಿತವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಒನ್/ಗ್ರಾಮ ಒನ್: ಆನ್ಲೈನ್ ಬಳಸಲು ಬಾರದವರು ಕರ್ನಾಟಕ-ಒನ್, ಗ್ರಾಮ-ಒನ್ ಅಥವಾ ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ರೂ. 30/-…
ಶಿವಮೊಗ್ಗ: 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಜೂನ್ 1ರಿಂದ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸದಾನಂದ ಸ್ವಾಮಿ ಅವರು ಕರೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಅಜಿತ ಸಭಾಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಮುಖ್ಯ ಶಿಕ್ಷಕರ ಶೈಕ್ಷಣಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಆರಂಭಕ್ಕೂ ಮುನ್ನವೇ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವರ್ಗದವರು ಶಾಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಗುಣಾತ್ಮಕ ಶಿಕ್ಷಣ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿ ಮುಖ್ಯಶಿಕ್ಷಕರ ಜವಾಬ್ದಾರಿಗಳನ್ನು ನೆನಪಿಸಿದ ಬಿಇಒ, “ಮುಖ್ಯಶಿಕ್ಷಕರಿಗೆ ಶೈಕ್ಷಣಿಕವಾಗಿ ವಿಶೇಷ ಜವಾಬ್ದಾರಿಗಳಿವೆ. ಸ್ಥಳೀಯ ಸಮುದಾಯದ ಸಹಭಾಗಿತ್ವವನ್ನು ಬಳಸಿಕೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ತಮ್ಮ ತಮ್ಮ ಶಾಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಪ್ರತಿ ಶಾಲೆಯಲ್ಲೂ…














