Author: kannadanewsnow09

ಬೆಂಗಳೂರು: ಇಂದು ಸರ್ಕಾರಿ ವೈಧ್ಯಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ, ಬೇಡಿಕೆ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದರು. ಆದರೇ ಈ ಸಭೆಯಲ್ಲಿ ಮಾತುಕತೆ ವಿಫಲವಾಗಿದ್ದು, ನಿಗದಿಯಂತೆ ಮಾರ್ಚ್.11ರಂದು ಮುಷ್ಕರ ನಡಸಲಾಗುತ್ತಿದೆ ಎಂಬುದಾಗಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು, ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು, ಅಧಿಕಾರಿ ನೌಕರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು ಎಂದಿದೆ. ಇಂದಿನ ಸಭೆಯಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ವೈದ್ಯರು, ನೌಕರರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸುದೀರ್ಘವಾದಂತ ಚರ್ಚೆ ನಡೆಸಲಾಯಿತು. ಆದರೇ ಸಚಿವರು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟವಾದಂತ ಭರವಸೆಯನ್ನು ನೀಡಿರುವುದಿಲ್ಲ ಎಂದು ಹೇಳಿದೆ. ಈ ಹಿನ್ನಲೆಯಲ್ಲಿ ನಮ್ಮ ಸಂಘವು ಈ ಹಿಂದೆ ಕೈಗೊಂಡ ನಿರ್ಣಯದಂತೆ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಆಧುನಿಕ ಜೀವನಶೈಲಿಯಲ್ಲಿ ರಾಸಾಯನಿಕಯುಕ್ತ ಸಕ್ಕರೆಯ ಬಳಕೆಯಿಂದಾಗಿ ಮಧುಮೇಹ, ಬೊಜ್ಜು ಮುಂತಾದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ, ನಮ್ಮ ಹಿರಿಯರು ಬಳಸುತ್ತಿದ್ದ ಸಾಂಪ್ರದಾಯಿಕ ‘ಜೋನಿ ಬೆಲ್ಲ’ (Liquid Jaggery) ಮತ್ತೆ ಜನಪ್ರಿಯವಾಗುತ್ತಿದೆ. ಕೇವಲ ಸಿಹಿಗಾಗಿ ಮಾತ್ರವಲ್ಲದೆ, ಇದರಲ್ಲಿರುವ ಅದ್ಭುತ ಆರೋಗ್ಯಕರ ಗುಣಗಳು ಇದನ್ನು ‘ಆರೋಗ್ಯದ ಗಣಿ’ ಎಂದು ಕರೆಯುವಂತೆ ಮಾಡಿದೆ. ಜೋನಿ ಬೆಲ್ಲದ ಪ್ರಮುಖ ಆರೋಗ್ಯಕಾರಿ ಉಪಯೋಗಗಳು: ನೈಸರ್ಗಿಕ ಶಕ್ತಿ ವರ್ಧಕ: ಜೋನಿ ಬೆಲ್ಲದಲ್ಲಿರುವ ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳು ದೇಹಕ್ಕೆ ನಿಧಾನವಾಗಿ ಮತ್ತು ನಿರಂತರವಾಗಿ ಶಕ್ತಿಯನ್ನು ಒದಗಿಸುತ್ತವೆ. ಇದು ಆಯಾಸವನ್ನು ಕಡಿಮೆ ಮಾಡಿ, ದಿನವಿಡೀ ಲವಲವಿಕೆಯಿಂದ ಇರಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಗೆ ಸಹಕಾರಿ: ಊಟದ ನಂತರ ಒಂದು ಚಮಚ ಜೋನಿ ಬೆಲ್ಲ ಸೇವಿಸುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ. ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಿ, ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಳ: ಇದರಲ್ಲಿ ಸತು (Zinc) ಮತ್ತು ಸೆಲೆನಿಯಮ್‌ನಂತಹ ಖನಿಜಾಂಶಗಳು ಸಮೃದ್ಧವಾಗಿವೆ. ಇವು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ, ಸೋಂಕುಗಳ ವಿರುದ್ಧ…

Read More

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಸೌಂದರ್ಯ ಹೆಚ್ಚಿಸಲು ನೆಡಲಾಗಿರುವ ಅಲಂಕಾರಿಕ ಗಿಡಗಳು ಸರಿಯಾಗಿ ಪೋಷಣೆಯಾಗದೇ ಒಣಗಿದ್ದು, ಬಹಳ ಕೆಟ್ಟದಾಗಿ ಕಾಣುತ್ತಿವೆ. ಹೀಗಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲಾ ರಸ್ತೆಬದಿ ಹಾಗೂ ರಸ್ತೆ ವಿಭಜಕಗಳಲ್ಲಿನ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಬೇಕು, ಒಣಗಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. ಈ ಪ್ರಕ್ರಿಯೆಯನ್ನು ನಿರಂತರ ಪರಿಶೀಲಿಸಬೇಕು ಎಂದು ಶಿವಕುಮಾರ್ ಅವರು ಇತ್ತೀಚೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯು ದಿನಾಂಕ 02.03.2026 ರಂದು ಆದೇಶ ಹೊರಡಿಸಿದ್ದು, “ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ಬೆಳಸಲಾಗಿರುವ ಅಲಂಕಾರಿಕ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಿ, ಅವಕಾಶವಿರುವ ಕಡೆ ಹೊಸದಾಗಿ ಅಲಂಕಾರಿಕ ಗಿಡ, ಮರಗಳನ್ನು ಬೆಳೆಸಬೇಕು, ಈಗಾಗಲೇ ಒಣಗಿ ಬಿದ್ದಿರುವ ಕಸವನ್ನು ತೆಗೆದು ಸ್ವಚ್ಛಗೊಳಿಸಬೇಕು” ಎಂದು ಆದೇಶದಲ್ಲಿ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರಿಗೆ ಮೂರು ಕಾಡಾನೆಗಳು ಎಂಟ್ರಿಯಾಗಿವೆ. ಮೊನ್ನೆಯಷ್ಟೇ ಕಾನಹಳ್ಳಿಯಲ್ಲಿದ್ದಂತ ಈ ಆನೆಗಳು, ಈಗ ದೂಗೂರು ಕಾಡಿಗೆ ಆಗಮಿಸಿದ್ದಾವೆ. ಕಾಡಾನೆಗಳ ಆಗಮನದಿಂದ ರೈತರು ಬೆಳೆ ನಾಶದ ಆತಂಕಕ್ಕೆ ಒಳಗಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಎರಡು ಜೋಡಿ ಕಾಡಾನೆಗಳು ಉಳವಿ, ಕೈಸೋಡಿ, ಕಾನಹಳ್ಳಿ, ದೂಗೂರು, ಬರಗಿಗೆ ಬಂದಿದ್ದವು. ಅಲ್ಲಲ್ಲಿ ರೈತರ ಫಲಸು ತಿಂದು ನಾಶಪಡಿಸಿದ್ದವು. ಇದೀಗ ಮತ್ತೆ ಕಾಡಾನೆಗಳು ರಿಟರ್ನ್ ಆಗಿದ್ದಾವೆ. ಈಗ ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ಕಾಡಾನೆಗಳು ದೂಗೂರು ವ್ಯಾಪ್ತಿಯ ಕಾಡಲ್ಲಿ ಕಾಣಿಸಿಕೊಂಡಿರೋದಾಗಿ ಅರಣ್ಯ ಇಲಾಖೆಯ ಮೂಲಗಳ ಮಾಹಿತಿಯಾಗಿದೆ. ಕಳೆದ ಒಂದೆರಡು ದಿನಗಳ ಹಿಂದೆ ಕಾನಹಳ್ಳಿಯಲ್ಲಿ ರೈತರೊಬ್ಬರ ತೋಟಕ್ಕೆ ನುಗ್ಗಿದ್ದಂತ ಇವೇ ಕಾಡಾನೆಗಳು, ರೈತನ ಅಡಿಕೆ ಮರಗಳನ್ನು ಮುರಿದು ಹಾಕಿದ್ದರೇ, ಬೆಳೆಯನ್ನು ತಿಂದು ಹಾಕಿ ನಾಶ ಪಡಿಸಿದ್ದವು. ಅಡಿಕೆ, ಬಾಳಿ ಗಿಡಗಳ ನಾಶದಿಂದ ರೈತ ಕಂಗಾಲಾಗಿದ್ದನು. ಇದೀಗ ಕಾನಹಳ್ಳಿ ಕಡೆಯಿಂದ ಮೂರು ಕಾಡಾನೆಗಳು ದೂಗೂರಿಗೆ ಎಂಟ್ರಿಯಾಗಿವೆ. ದೂಗೂರು ಕಾಡಿನಲ್ಲಿ ಮೂರು ಕಾಡಾನೆಗಳು ಬೀಡು ಬಿಟ್ಟಿವೆ ಎನ್ನಲಾಗುತ್ತಿದೆ. ಆದರೇ…

Read More

ಬೆಂಗಳೂರು: ಗ್ರೇಟರ್ ಬೆಂಗಳೂರು ಜೆಡಿಎಸ್ ಸಂಘಟನೆಗೆ ಸಂಬಂಧಿಸಿದಂತೆ ಎಲ್ಲಾ 28 ವಿಧಾನಸಭೆ ಕ್ಷೇತ್ರಗಳ ಪ್ರಮುಖರ ಜತೆ ಮಹತ್ವದ ಸಭೆ ನಡೆಸಿದ ಪಕ್ಷದ ರಾಜ್ಯಾಧ್ಯಕ್ಷರು, ಕೇಂದ್ರ ಸಚಿವರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ಒಟ್ಟು 369 ವಾರ್ಡುಗಳಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಕೆಲ ನಿರ್ದಿಷ್ಟ ಸೂಚನೆಗಳನ್ನು ಕೊಟ್ಟರು. ಪಕ್ಷದ ರಾಜ್ಯದ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಸೇರಿದಂತೆ ಐದು ವಿಭಾಗಗಳ ನೂತನ ಅಧ್ಯಕ್ಷರು, ಎಲ್ಲಾ ವಿಧಾನಸಭೆ ಕ್ಷೇತ್ರಗಳ ನೂತನ ಅಧ್ಯಕ್ಷರ ಜತೆ ಸಚಿವರು ಸುದೀರ್ಘ ಮಾತುಕತೆ ನಡೆಸಿದರು. ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪಕ್ಷದ ಘಟಕವನ್ನು ಪುನಾರಚನೆ ಮಾಡಲಾಗಿದ್ದು, ಎಲ್ಲಾ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದಾದ ನಂತರ ನಡೆದ ಮೊದಲ ಸಭೆ ಇದಾಗಿದೆ. ವಾರ್ಡುವಾರು, ಮತಗಟ್ಟೆವಾರು ಸಂಘಟನೆ ಮಾಡುವ ಕೆಲ ಮಹತ್ವದ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ ಅವರು; ನಗರದ ಎಲ್ಲಾ ಭಾಗಗಳಲ್ಲಿ ಪಕ್ಷದ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಎಲ್ಲಾ ಮುಖಂಡರು ಸಕ್ರಿಯವಾಗಿ ಕೆಲಸ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನೇಮಕ ಮಾಡಲಾಗಿದ್ದಂತ 12 ನಗರಾಭಿವೃದ್ಧಿ ಪ್ರಾಧಇಕಾರದ ಅಧ್ಯಕ್ಷರನ್ನು ಮುಂದಿನ ಆದೇಶದವರೆಗೆ ಹಾಲಿ ಸ್ಥಳದಲ್ಲೇ ಮುಂದುವರೆಸಿ ಮಹತ್ವದ ಆದೇಶ ಮಾಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3)ರ ಅನ್ವಯ ಹಾಗೂ 3(4) ಅಡಿಯಲ್ಲಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರುಗಳನ್ನು ಈ ತಕ್ಷಣದಿಂದ ಜಾರಿ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಹಾಲಿ ಸ್ಥಳಗಳಲ್ಲಿ ಮುಂದುವರೆಸಿದೆ ಎಂದಿದ್ದಾರೆ. ಹೀಗಿದೆ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಮುಂದುವರೆಸಿದಂತ ಪಟ್ಟಿ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶಾಕಿರ ಸನದಿ ಮುಂದುವರೆಸಲಾಗಿದೆ. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಂಜನೇಯಲು ಜೆ.ಎಸ್ ಮುಂದುವರೆಸಲಾಗಿದೆ. ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ತಾಜ್ ಪೀರ್ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸದಾಶಿವ ಉಲ್ಲಾಳ್ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹೆಚ್.ಎಸ್ ಸುಂದರೇಶ್ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ…

Read More

ಮುಂಬಯಿ: ಪತ್ರಕರ್ತರ ವೃತ್ತಿಯೇ ಸವಾಲಿನದ್ದು. ಅದನ್ನು ಧೈರ್ಯ ಮತ್ತು ನಿಷ್ಠೆಯಿಂದ ಎದುರಿಸುವ ಶಕ್ತಿಯನ್ನು ರೂಢಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು. ಮುಂಬಯಿ ಅಂಧೇರಿ ಪೂರ್ವದ ಕ್ಲಬ್ ಹೌಸ್‌ನ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮಹಾರಾಷ್ಟ್ರ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರ ಸಂಘಟನೆ ಕ್ರೀಯಾಶೀಲಗೊಳಿಸಲು ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಸಂಘಟಿತ ಶಕ್ತಿಯ ಮೂಲಕ ಮಾತ್ರ ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎನ್ನುವ ನಂಬಿಕೆ ನಮ್ಮದು. ಹೋರಾಟದ ಮೂಲಕವೇ ಹಲವು ಬೇಡಿಕೆಗಳನ್ನು ಈಡೇರಿಸಿಕೊಳ್ಳಲಾಗಿದ್ದು, ಸರ್ಕಾರವೂ ಅದಕ್ಕೆ ಸ್ಪಂಧಿಸಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗ ಪತ್ರಕರ್ತರು ಒಗ್ಗೂಡಿ ಕೆಲಸ ಮಾಡಬೇಕು. ನಿಮ್ಮ ಜೊತೆಗೆ ಸದಾ ನಾವಿರುತ್ತೇವೆ ಎಂದು ಹೇಳಿದರು. ಪತ್ರಕರ್ತರ ಹಕ್ಕುಗಳು, ಭದ್ರತೆ, ಕಲ್ಯಾಣ ಯೋಜನೆಗಳಿಗಾಗಿ ಸಂಘ ಬದ್ಧವಾಗಿ ಕೆಲಸ ಮಾಡುತ್ತಿದೆ. ಹೊರ ನಾಡಿಗೂ ಕೆಯುಡಬ್ಲೂೃಜೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಎಲ್ಲರೂ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.…

Read More

ಶಿವಮೊಗ್ಗ: ಮಂಗಳವಾರ ನಡೆಯಲಿರುವ ಕಾಮದಹನ ಕಾರ್ಯಕ್ರಮದ ಸಂದರ್ಭದಲ್ಲಿ ಡಾಂಬರ್ ರಸ್ತೆಗಳ ಮೇಲೆಯೇ ಕಾಮದಹನ ನಡೆಸುವುದರಿಂದ ಸಾರ್ವಜನಿಕ ರಸ್ತೆಗಳು ಹಾನಿಗೊಳಗಾಗುವ ಸಾಧ್ಯತೆ ಇರುವುದರಿಂದ ರಸ್ತೆ ಮೇಲ್ಮೈ ಮೇಲೆ ಕಾಮದಹನ ಮಾಡಬಾರದು ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಪರಶುರಾಮ ಕೆ.ಎಂ. ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು ಇತ್ತೀಚಿನ ದಿನಗಳಲ್ಲಿ ಡಾಂಬರ್ ರಸ್ತೆಗಳ ಮೇಲೆ ಕಾಮದಹನ ನಡೆಸುವ ಘಟನೆಗಳು ಗಮನಕ್ಕೆ ಬಂದಿವೆ. ಬೆಂಕಿಯ ತೀವ್ರ ಉಷ್ಣದಿಂದ ಡಾಂಬರ್ ಕರಗುವುದು. ಮೇಲ್ಮೈ ಬಿರುಕು ಬಿಟ್ಟಿರುವುದು ಹಾಗೂ ರಸ್ತೆ ಹಾಳಾಗುವುದು ಸಾಮಾನ್ಯ. ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವುದಲ್ಲದೆ ಅಪಘಾತಗಳ ಸಂಭವವೂ ಹೆಚ್ಚಾಗುತ್ತದೆ ಎಂದು ತಿಳಿಸಿದ್ದಾರೆ. ರಸ್ತೆ ದುರಸ್ತಿ ಕಾರ್ಯಕ್ಕೆ ಸಾರ್ವಜನಿಕರ ಹಣವೇ ಬಳಸಲಾಗುವುದರಿಂದ ಇಂಥಹ ಅನಾವಶ್ಯಕ ಹಾನಿಯನ್ನು ತಪ್ಪಿಸಲು ಭಕ್ತಾದಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಕಾಮದಹನವನ್ನು ರಸ್ತೆ ಬದಿಯ ಖಾಲಿ ಜಾಗಗಳಲ್ಲಿ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಮಾತ್ರ ನಡೆಸಬೇಕು ಎಂದು ವಿನಂತಿಸಿ ಸಾರ್ವಜನಿಕರು ಪರಸ್ಪರ ಸಹಕಾರ ನೀಡಿ ಸಾರ್ವಜನಿಕ ಆಸ್ತಿಯ…

Read More

ಮಂಡ್ಯ : ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕುಮ್ಮಕ್ಕಿನಿಂದಲೇ ಮಾಜಿ ಸಂಸದ ಪ್ರಜ್ಜಲ್ ರೇವಣ್ಣ ಜೈಲಿಗೆ ಹೋಗಿದ್ದು ಎಂದು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ, ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮುಂದೆ ರಾಜಕೀಯವಾಗಿ ಯಾರು ಬೆಳೆಯಬಾರದು. ಹೀಗಾಗಿ ಅವರ ಅಣ್ಣನ ಮಗ ಪ್ರಜ್ಜಲ್ ರೇವಣ್ಣ ಅವರನ್ನೆ ಜೈಲಿಗೆ ಹಾಕಿಸಿದರು. ನಿಖಿಲ್ ಕುಮಾರಸ್ವಾಮಿಗೆ ಜನತೆ ಮೂರು ಬಾರಿ ತಿರಸ್ಕಾರ ಮಾಡಿದ್ದಾರೆ. ಹೀಗಾಗಿ ಪ್ರಜ್ಜಲ್ ಜನಪ್ರಿಯತೆ ಸಹಿಸದೆ ಕುಮಾರಸ್ವಾಮಿ ಅವರು ಚುನಾವಣಾ ವೇಳೆ ಪೆನ್ ಮತ್ತು ಡ್ರೈವ್ ಗಳನ್ನು ಸೃಷ್ಟಿಸಿ ಜೈಲಿಗೆ ಹಾಕಿಸಿದರು. ಮಾಜಿ ಪ್ರಧಾನಿ ದೇವೇಗೌಡರು ಮನಸ್ಸು ಮಾಡಿದ್ದರೆ ಹೊರಗೆ ತರಬಹುದಿತ್ತು. ಆದರೆ, ಕುಮಾರಸ್ವಾಮಿ ಕುಮ್ಮಕ್ಕಿನಿಂದ ಪ್ರಜ್ಜಲ್ ರೇವಣ್ಣ ಜೈಲಿನಿಂದ ಹೊರ ಬರಲು ಆಗುತ್ತಿಲ್ಲ ಎಂದು ಕುಟುಕಿದರು. ಜಿಲ್ಲಾ ಮತ್ತು ತಾಲೂಕಿನ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವ ಹೋರಾಟಗಾರರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಹೋರಾಟ…

Read More

ಬೆಂಗಳೂರು: ಕಾಂತಾರ ಚಾಪ್ಟರ್-1ರ ಪಾತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಸಂಬಂಧ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲಾಯಿತು. ಯುದ್ಧದಿಂದಾಗಿ ಇಂಗ್ಲೇಂಡ್ ನಲ್ಲೇ ರಣವೀರ್ ಸಿಂಗ್ ಪರ ವಕೀಲರು ಉಳಿದಿದ್ದರು. ವಿಮಾನವಿಲ್ಲದೇ ಭಾರತಕ್ಕೆ ವಾಪಾಸಾಗುತ್ತಿಲ್ಲವೆಂದು ಸಜನ್ ಪೂವಯ್ಯ ಹೇಳಿಕೆ ನೀಡಿದರು. ನಟ ರಣವೀರ್ ಸಿಂಗ್ ಗೆ ನೋಟಿಸ್ ನೀಡಿದ್ದೇವೆ. ಸಮಯ ಕೇಳಿದ್ದಾರೆ ಎಂಬುದಾಗಿ ಸರ್ಕಾರದ ಪರ ಹೆಚ್ಚುವರಿ ಎಸ್ ಪಿ ಪಿ ಬಿಎನ್ ಜಗದೀಶ್ ನ್ಯಾಯಾಲಯದ ಗಮನಕ್ಕೆ ತಂದರು. ಹೀಗಾಗಿ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶವನ್ನು ಮಾರ್ಚ್.9ರವರೆಗೆ ಹೈಕೋರ್ಟ್ ವಿಸ್ತರಿಸಿ ಆದೇಶಿಸಿದೆ. https://kannadanewsnow.com/kannada/historic-decision-to-fill-56000-vacant-posts-in-the-state-minister-madhu-bangarappa/ https://kannadanewsnow.com/kannada/114907-applications-approved-under-e-asset-software-across-the-state/

Read More