Author: kannadanewsnow09

ಬೆಂಗಳೂರು :ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದು ಕರೆ ನೀಡಿದರು. ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು ಎಂದು ಸ್ಮರಿಸಿದರು. ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನ ಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನೆರವಾಗಲಿ ಎಂದರು. ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ…

Read More

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ಹಗರಣದಲ್ಲಿ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದಂತ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಶಾಸಕ ವೀರೇಂದ್ರ ಪಪ್ಪಿ ವಿರುದ್ಧದ ಆನ್ ಲೈನ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಮಹತ್ವದ ಕ್ರಮ ವಹಿಸಿದೆ. ಮತ್ತೆ 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟಿಗೋಲನ್ನು ಜಾರಿ ನಿರ್ದೇಶನಾಲಯವು ಹಾಕಿಕೊಂಡಿದೆ. ಕೃಷಿ ಜಮೀನು, ನಿವೇಶನ ಸೇರಿದಂತೆ ಅನೇಕ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣದಿಂದ ಸಂಪಾದನೆ ಮಾಡಿದ ಆಸ್ತಿ ಎಂದು ಜಪ್ತಿ ಮಾಡಿರುವುದಾಗಿ ಇಡಿ ತಿಳಿಸಿದೆ. ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಆನ್ ಲೈನ್ ಬೆಟ್ಟಿಂಗ್ ಕೇಸ್ ಗಳು ಇವಾಗಿವೆ. ಈ ಬಗ್ಗೆ ಕೇಸ್ ದಾಖಲಿಸಿ ತನಿಖೆ ನಡೆಸಿದ್ದ ಇಡಿ ಆಧಿಕಾರಿಗಳು. ತನಿಖೆ ವೇಳೆ ವೀರೇಂದ್ರ, ಸಹಚರರು ಮಾಸ್ಟರ್ ಮೈಂಡ್ ಆಗಿದ್ದು ಎನ್ನಲಾಗಿದೆ. ವೀರೇಂದ್ರ ಪಪ್ಪಿ, ಸಹಚರರು ಮಾಸ್ಟರ್ ಮೈಂಡ್ ಎಂದು ಪತ್ತೆ. https://twitter.com/dir_ed/status/2016867012086288488

Read More

ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೋರ್ಟ್ ನಿರ್ಬಂಧ ವಿಧಿಸಿ ಆದೇಶಿಸಿದೆ. ಬೆಂಗಳೂರಿನ 27ನೇ ಸಿಟಿ ಸಿವಿಲ್ ಕೋರ್ಟ್ ಈ ಮಧ್ಯಂತರ ಆದೇಶ ಹೊರಡಿಸಿದೆ. ಶಾಸಕ ಬಸನಗೌಡ ಯತ್ನಾಳ್ ಸುಳ್ಳು, ನಿಂದನೀಯ ಆರೋಪ ಮಾಡುತ್ತಿದ್ದಾರೆ ಎಂಬುದಾಗಿ ಸಚಿವ ಶಿವಾನಂದ ಪಾಟೀಲ್ ಪರ ವಕೀಲೆ ವಿಜೇತಾ ಆರ್ ನಾಯ್ಕ್ ವಾದ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ಮಧ್ಯಂತರ ನಿರ್ಬಂಧಕಾಜ್ಞೆ ನೀಡಿ ಆದೇಶಿಸಿದೆ. https://kannadanewsnow.com/kannada/mega-awareness-fair-organized-in-bengaluru-on-plastic-waste-recycling-a-success/ https://kannadanewsnow.com/kannada/happiest-diagnostics-is-nabl-nationally-accredited/

Read More

ಬೆಂಗಳೂರು: ಅತ್ಯುತ್ತಮ ಡಯಾಗ್ನಾಸ್ಟಿಕ್‌ ಸೇವೆ ನೀಡುತ್ತಿರುವ “ಹ್ಯಾಪಿಯೆಸ್ಟ್ ಡಯಾಗ್ನೋಸ್ಟಿಕ್ಸ್”, ರಾಷ್ಟ್ರೀಯ ಪರೀಕ್ಷಾ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ಮಾನ್ಯತಾ ಮಂಡಳಿಯಿಂದ (NABL) ಮಾನ್ಯತೆ ದೊರೆತಿದೆ. ಈ ಕುರಿತು ಮಾತನಾಡಿದ ಹ್ಯಾಪಿಯೆಸ್ಟ್ ಹೆಲ್ತ್‌ನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯತಂತ್ರ ಅಧಿಕಾರಿ ಅಶೋಕ್ ಸೂಟಾ, ಹ್ಯಾಪಿಯೆಸ್ಟ್ ಹೆಲ್ತ್‌ನ ಘಟಕವಾದ ಹ್ಯಾಪಿಯೆಸ್ಟ್ ಡಯಾಗ್ನೋಸ್ಟಿಕ್ಸ್ ಪ್ರಾರಂಭಗೊಂಡ ಎರಡೇ ವರ್ಷದಲ್ಲಿ ಈ ಮಾನ್ಯತೆ ಸಿಕ್ಕಿರುವುದು ಶ್ಲಾಘನಾರ್ಹ. ಮಾನ್ಯತೆ ಸಿಗುವ ಮೊದಲು ಸಹ ಎನ್‌ಎಬಿಎಲ್‌ ಅವರ ಮಾರ್ಗಸೂಚಿಗಳ ಪ್ರಕಾರವೇ ಸೇವೆ ನೀಡುತ್ತಿದ್ದೆವು. ಇದೀಗ ಇನ್ನಷ್ಟು ಗುಣಮಟ್ಟದ ಹಾಗೂ ಅತ್ಯಾಧುನಿಕ ಡಯಾಗ್ನಾಸ್ಟಿಕ್‌ ಸೇವೆ ನೀಡಲು ಸಹಕಾರಿಯಾಗಲಿದೆ ಎಂದು ಹೇಳಿದರು. ಹ್ಯಾಪಿಯೆಸ್ಟ್‌ ಡಯಾಗ್ನೋಸ್ಟಿಕ್‌ “ಸಂಕೀರ್ಣ ಜೈವಿಕ ಡೇಟಾವನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ, ಹಾಗೆಯೇ, ಮುಂದುವರಿದ ಪರೀಕ್ಷಾ ಅಗತ್ಯಗಳಿಗೆ ಗುಣಮಟ್ಟವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಹಕಾರಿಯಾಗಿದೆ. ಈ ಮೈಲಿಗಲ್ಲು ಆಣ್ವಿಕ, ಜೀನೋಮಿಕ್ ಮತ್ತು ತಡೆಗಟ್ಟುವ ರೋಗನಿರ್ಣಯಗಳಾಗಿ ವ್ಯವಸ್ಥಿತವಾಗಿ ವಿಸ್ತರಿಸಲು ನಮ್ಮ ಅಡಿಪಾಯವನ್ನು ಬಲಪಡಿಸುತ್ತದೆ, ಮುಂದಿನ ದಶಕದಲ್ಲಿ ಔಷಧವನ್ನು ಹೇಗೆ ಹೆಚ್ಚಾಗಿ ಅಭ್ಯಾಸ ಮಾಡಲಾಗುತ್ತದೆ ಎಂಬುದನ್ನು…

Read More

ಬೆಂಗಳೂರು: ಪ್ಲಾಸ್ಟಿಕ್‌ ತ್ಯಾಜ್ಯಗಳ ಕುರಿತು ಆಯೋಜಿಸಿದ್ದ ಜಾಗೃತಿ ಮೇಳದ ಭಾಗವಾಗಿ ಪ್ಲಾಸ್ಟಿಕ್‌ನಿಂದ ಮರು ತಯಾರಿಸಿದ ಪ್ಲಾಸ್ಟಿಕ್ ಸ್ಮಾರ್ಟ್ ವರ್ಕ್‌ಬುಕ್‌ಗಳನ್ನು ಹೆಗ್ಗನಹಳ್ಳಿಯ ಕೆಪಿಎಸ್ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿತರಿಸಲಾಯಿತು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (DIET), ಯಿಪ್ಪೀ! ಬೆಟರ್ ವರ್ಲ್ಡ್ ಇವರ ಸಹಯೋಗದಲ್ಲಿ “ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಮೆಗಾ ಜಾಗೃತಿ ಮೇಳ”ವನ್ನು ಆಯೋಜಿಸಲಾಗಿತ್ತು. ಹೆಗ್ಗನಹಳ್ಳಿಯ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ITC ಬೆಂಬಲದೊಂದಿಗೆ ಅಗಸ್ತ್ಯ ಇಂಟರ್ನ್ಯಾಷನಲ್ ಫೌಂಡೇಶನ್ ಸಹಯೋಗದಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲೆ ಪ್ರಣಿತಾ, ಮಕ್ಕಳಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯಗಳ ಮರುಬಳಕೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮೆಗಾ ಜಾಗೃತಿ ಮೇಳವನ್ನು ಆಯೋಜಿಸಲಾಗಿತ್ತು. ಇಂದು ಸಾಕಷ್ಟು ಪ್ಲಾಸ್ಟಿಕ್‌ ಉತ್ಪಾದನೆಯಾಗುತ್ತಿದ್ದು, ಅದರ ಸಂಸ್ಕರಣೆ ಸವಾಲಿನ ಕೆಲಸವಾಗಿದೆ. ಇಂದಿನ ಮಕ್ಕಳಿಗೆ ಪ್ಲಾಸ್ಟಿಕ್‌ ಕಡಿಮೆ ಬಳಕೆ, ಮರುಬಳಕೆ ಬಗ್ಗೆ ಜಾಗೃತಿ ಮೂಡಿಸಿದರೆ ಮಾತ್ರ ನಮ್ಮ ಮುಂದಿನ ಪೀಳಿಗೆ ಈ ಭೂಮಿಯನ್ನು ಆರೋಗ್ಯವಾಗಿಡಲು ಸಾಧ್ಯ ಎಂದು ಹೇಳಿದರು. ಈ…

Read More

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ಅಧೀನದಲ್ಲಿರುವ ಜನಪ್ರಿಯ ಪಾರಂಪರಿಕ ಪ್ರವಾಸಿ ತಾಣವಾದ ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ, ವೀಕ್ಷಕರ ಅನುಕೂಲಕ್ಕಾಗಿ ಡಿಜಿಟಲ್ ಕ್ಯೂಆರ್ ಆಧಾರಿತ ಪಾವತಿ ಸೌಲಭ್ಯವನ್ನು ಪರಿಚಯಿಸಲಾಗಿದೆ. 29 ಜನವರಿ 2026 ರಿಂದ ಮ್ಯೂಸಿಯಂಗೆ ಭೇಟಿ ನೀಡುವ ಪ್ರವಾಸಿಗರು ಮತ್ತು ಸಾರ್ವಜನಿಕರು ಪ್ರವೇಶ ಶುಲ್ಕ ಹಾಗೂ ಇತರ ಅನುಮತಿಸಲ್ಪಟ್ಟ ಸೇವೆಗಳಿಗಾಗಿ ಯುಪಿಐ / ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪಾವತಿ ವಿಧಾನವನ್ನು ಬಳಸಿಕೊಳ್ಳಬಹುದು. ಇದರಿಂದಾಗಿ ನಗದು ರಹಿತ, ಸುರಕ್ಷಿತ ಹಾಗೂ ಸುಲಭ ಪಾವತಿ ಅನುಭವವನ್ನು ಒದಗಿಸುವ ಉದ್ದೇಶ ಹೊಂದಿದ್ದು, ದೇಶದ ವಿವಿಧ ಭಾಗಗಳಿಂದ ಆಗಮಿಸುವ ಪ್ರವಾಸಿಗರಿಗೆ ವಿಶೇಷವಾಗಿ ಸಹಕಾರಿಯಾಗಲಿದೆ. ಡಿಜಿಟಲ್ ಪಾವತಿ ಸೌಲಭ್ಯದ ಪರಿಚಯವು ಡಿಜಿಟಲ್ ಇಂಡಿಯಾ ಯೋಜನೆಯತ್ತ ಭಾರತೀಯ ರೈಲ್ವೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತಿದ್ದು, ಪಾರಂಪರಿಕ ಹಾಗೂ ಪ್ರವಾಸಿ ತಾಣಗಳಲ್ಲಿ ವೀಕ್ಷಕರಿಗೆ ಉತ್ತಮ ಸೇವೆ ಮತ್ತು ಸುಲಭ ಪ್ರವೇಶವನ್ನು ಒದಗಿಸಲು ನೆರವಾಗುತ್ತದೆ. ಮೈಸೂರು ರೈಲ್ವೆ ಮ್ಯೂಸಿಯಂಗೆ ಭೇಟಿ ನೀಡುವ ಎಲ್ಲ ವೀಕ್ಷಕರು ಈ ಡಿಜಿಟಲ್ ಪಾವತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರಿನ ನೈರುತ್ಯ…

Read More

ಬೆಂಗಳೂರು: ನಗರದಲ್ಲಿ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರ ಕೇಸ್ ಸಂಬಂಧ ಲಂಚ ಪಡೆಯುವಾಗ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ವ್ಯಕ್ತಿಯೊಬ್ಬರನ್ನು ಚೀಟಿ ವ್ಯವಹಾರದ ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ 4 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಹಣ ಪಡೆಯುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ. https://kannadanewsnow.com/kannada/government-doctors-cannot-treat-inpatients-in-private-hospitals-minister-dinesh-gundu-rao/ https://kannadanewsnow.com/kannada/kalaburagi-pesticide-testing-laboratory-recognized-by-national-accreditation-board-minister-priyank-kharge/

Read More

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಿಳಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಹಭಾಗಿತ್ವದಲ್ಲಿ ವಿಕಲಚೇತನರಿಗಾಗಿ ವಿಶೇಷವಾಗಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ಇದು ರಾಜ್ಯ ಸರ್ಕಾರದ ವಿನೂತನ ಮತ್ತು ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ವಿಕಲಚೇತನರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಹಾಗೂ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಮೂಲಕ, ಮಾರುಕಟ್ಟೆ ಬೇಡಿಕೆಗೆ ಅನುಗುಣವಾದ ವೃತ್ತಿಪರ ತರಬೇತಿಯನ್ನು ರಾಜ್ಯದ ವಿಕಲಚೇತನರಿಗೆ ನೀಡಲಾಗುತ್ತಿದ್ದು, ಒಟ್ಟು 1,000 ಅಭ್ಯರ್ಥಿಗಳಿಗೆ…

Read More

ಬೆಂಗಳೂರು: ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಏಪ್ರಿಲ್ 1997 ರಲ್ಲಿ ಕೀಟನಾಶಕ ಕಾಯ್ದೆ, 1968 ರ ಅಡಿಯಲ್ಲಿ ಸ್ಥಾಪನೆಯಾದ ಕಲಬುರಗಿಯ ಪ್ರಯೋಗಾಲಯವು ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಾದ್ಯಂತ ರೈತರಿಗೆ ಸೇವೆ ಸಲ್ಲಿಸುತ್ತದೆ, ವಾರ್ಷಿಕ 1,280 ಕೀಟನಾಶಕ ಮಾದರಿಗಳ ಪರೀಕ್ಷಾ ಸಾಮರ್ಥ್ಯವನ್ನು ಹೊಂದಿದೆ ಎಂದು ತಿಳಿಸಿರುವ ಸಚಿವರು, ದೀರ್ಘಕಾಲದಿಂದ ರೈತರ ಸೇವೆಯಲ್ಲಿ ನಿರತವಾಗಿರುವ ಈ ಸಂಸ್ಥೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ ಪಡೆದಿರುವುದು ತಮಗೆ ಸಂತಸ ತಂದಿದೆ ಎಂದಿದ್ದಾರೆ. ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮಂಡಳಿಯಾದ NABL, ಭಾರತದ ಗುಣಮಟ್ಟ…

Read More

ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..! ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..? ಗುರು ಮತ್ತು ಗುರುವಾರದ ಅಧಿಪತಿಯನ್ನು ಭಗವಾನ್ ಮಹಾವಿಷ್ಣು ಎಂದು ಹೇಳಲಾಗುತ್ತದೆ. ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ವ್ಯಕ್ತಿಯ ಜಾತಕದಲ್ಲಿ ಗುರುದೋಷವಿದ್ದರೆ ಗುರುವಾರದಂದು ಶ್ರೀ ಹರಿ ನಾರಾಯಣ ಮತ್ತು ಬೃಹಸ್ಪತಿ ದೇವರನ್ನು ಪೂಜಿಸುವ ಸಂಪ್ರದಾಯ ಮತ್ತು ಪದ್ಧತಿಯಿದೆ. ಈ ದಿನ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ಮನೆಯಲ್ಲಿ ಹಣದ ಕೊರತೆ ಕೂಡ ಇರುವುದಿಲ್ಲ. ಈ ದಿನ ಭಗವಾನ್ ವಿಷ್ಣುವಿನ ಪೂಜೆಯ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದು ಕೂಡ ಶ್ರೇಯಸ್ಕರವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ…

Read More