Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಮದ್ದೂರು ತಾಲೂಕಿನ ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಡಿ. 20 ರಂದು ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಎಂ.ಮಹೇಶ್ ಗುರುವಾರ ಹೇಳಿದರು. ಕೈಗಾರಿಕಾ ತರಭೇತಿ ಸಂಸ್ಥೆ ಮತ್ತು ಉದ್ಯೋಗ ಇಲಾಖೆ, ತರಭೇತಿ ಸಂಸ್ಥೆ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ನಡೆಯುವ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಅಧ್ಯಕ್ಷತೆ ವಹಿಸಲಿದ್ದು, ಇಲಾಖೆಯ ಆಯುಕ್ತರಾದ ಡಾ.ರಾಗಾ ಪ್ರಿಯ ಅವರು ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ ಎಂದು ಸುದ್ದಿಗೊಷ್ಠಿಯಲ್ಲಿ ತಿಳಿಸಿದರು. 2002 ರಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೈಗಾರಿಕಾ ತರಭೇತಿ ಸಂಸ್ಥೆ ಅಸ್ತಿತ್ವಕ್ಕೆ ಬಂದಿತು. ಈಗ ಸಂಸ್ಥೆಗೆ 25 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ 5 ಮಂದಿಗೆ ಸನ್ಮಾನಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಅಂಗವಾಗಿ ಹೊರ…
ಮಂಡ್ಯ.:- 2025-26ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಡಿಸೆಂಬರ್ 21 ರಿಂದ 24 ರವರೆಗೆ (ಗ್ರಾಮೀಣ ಪ್ರದೇಶದಲ್ಲಿ 3 ದಿನಗಳು & ನಗರ ಪ್ರದೇಶದಲ್ಲಿ 4 ದಿನಗಳು) ಹಮ್ಮಿಕೊಳ್ಳಲಾಗಿದೆ. 2025ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸೂಕ್ಷ್ಮ ಕ್ರಿಯಾ ಯೋಜನೆಯ ಅನುಸಾರ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ವರ್ಷದೊಳಪಟ್ಟ ಒಟ್ಟು 1,16,724 ಮಕ್ಕಳಿಗೆ ಲಸಿಕೆ ನೀಡಬೇಕಾಗಿದ್ದು, ಶೇ. 100 ರಷ್ಟು ಸಾಧನೆ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 723 ಪೋಲಿಯೋ ಬೂತ್ಗಳು, 1446 ತಂಡಗಳು, 2892 ಲಸಿಕಾ ಸಿಬ್ಬಂದಿಗಳು, 120 ವಾಹನಗಳನ್ನು ಹಾಗೂ 146 ಮೇಲ್ವಿಚಾರಕರುಗಳನ್ನು ನಿಯೋಜಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಸದರಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆಯನ್ನು ಡಿಸೆಂಬರ್ 21 ರ ಬೆಳಿಗ್ಗೆ 8.00 ಕ್ಕೆ “ಮಂಡ್ಯ ನಗರದ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ” ಜಿಲ್ಲಾ ಆಡಳಿತ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧ: 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿ.3.5.2025 ರಿಂದ ದಿನಾಂಕ: 9.5.2025 ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ ಪರೀಕ್ಷೋತ್ತರ ಕಾರ್ಯಗಳ ಪ್ರಕ್ರಿಯೆಯು ಪ್ರಗತಿಯಲ್ಲಿದೆ 20 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಮಂತ್ರಿಗಳ ಪರವಾಗಿ ಸಣ್ಣ ನಿರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ನಿರಾಣಿ ಹನುಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು ಪಾಸಾದ ಪರೀಕ್ಷೆಯ ಅಭ್ಯರ್ಥಿಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ತಿದ್ದುಪಡಿ ನಿಯಮಗಳನ್ವಯ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಬೆಳಗಾವಿ ಸುವರ್ಣಸೌಧ : ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ…
ಬೆಳಗಾವಿ ಸುವರ್ಣ ವಿಧಾನಸೌಧ : ಬರುವ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕುರಿತು ಮಾಹಿತಿಯನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 178935 ಹುದ್ದೆಗಳು ಮಂಜೂರಾಗಿದ್ದು ಈ ಪೈಕಿ 133345 ಹುದ್ದೆಗಳು ಭರ್ತಿಯಾಗಿದ್ದು, 45590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅವರು ವಿವರಿಸಿದರು. ರಾಜ್ಯದಲ್ಲಿ 5024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32010 ಹುದ್ದೆಗಳು…
ಬೆಳಗಾವಿ ಸುವರ್ಣವಿಧಾನಸೌಧ : ರಾಜ್ಯದಲ್ಲಿ ಕಳೆದ 2.5 ವರ್ಷದಲ್ಲಿ ಪೊಲೀಸರು 61299 ಸ್ವಯಂ ಪ್ರೇರಿತ ದೂರುಗಳನ್ನು ದಾಖಲು ಮಾಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ದಾಖಲು ಮಾಡಿರುವ ಸ್ವಯಂ ಪ್ರೇರಿತ ದೂರುಗಳಲ್ಲಿ 57646 ದೂರುಗಳಿಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಯಾವುದೇ ದೂರಗಳನ್ನು ಹಿಂಪಡೆದಿಲ್ಲ ಎಂದು ತಿಳಿಸಿದರು. ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸುವಾಗ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಂದರ್ಭ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡಿದ ಸಂದರ್ಭ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲಿ, ವಾರಸುದಾರರು ಯಾರೂ ಇಲ್ಲದೇ ಇರುವ ಪ್ರಕರಣಗಳಲ್ಲಿ, ದ್ವೇಷಭಾಷಣ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವ ಸಂದರ್ಭಗಳಲ್ಲಿ, ಕೆಲವು ಪ್ರಕರಣಗಳಲ್ಲಿ ಸಾರ್ವಜನಿಕರು ದೂರು ನೀಡಲು ಬಾರದೇ ಇದ್ದ ಸಂದರ್ಭಗಳಲ್ಲಿ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು ಎಂದರು. ಸಾರ್ವಜನಿಕರ ಪ್ರಾಣ ಮತ್ತು ಮಾನ ಕಾಪಾಡುವ ಸಂದರ್ಭಗಳಲ್ಲಿ…
ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಲಿಖಿತ ಉತ್ತರ ನೀಡಿದ್ದು, ರಾಜ್ಯದ ಅಬಕಾರಿ ವಹಿವಾಟಿನ ಕಂಪು ಮತ್ತು ಪರವಾನಗಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಾಯದ ಹರಿವು: ಕಳೆದ ವರ್ಷಕ್ಕೆ ಹೋಲಿಸಿದರೆ ಸಾಧನೆ 2024-25ನೇ ಸಾಲಿನಲ್ಲಿ ಒಟ್ಟು ಅಬಕಾರಿ ಆದಾಯ 34,636.11 ಕೋಟಿ ರೂ. ಆಗಿತ್ತು (ಇದರಲ್ಲಿ 28,852.53 ಕೋಟಿ ರೂ. ಮೌಲ್ಯದ ಹಾಟ್ ಡ್ರಿಂಕ್ಸ್ ಮತ್ತು ಬಿಯರ್ನಿಂದ 5,783.58 ಕೋಟಿ ರೂ. ಆದಾಯ ಬಂದಿತ್ತು). ಪ್ರಸಕ್ತ ಸಾಲಿನ ನವೆಂಬರ್ 2025ರ ಅಂತ್ಯಕ್ಕೆ ಹಾಟ್ ಡ್ರಿಂಕ್ಸ್’ನಿಂದ 20,614.08 ಕೋಟಿ ರೂ. ಹಾಗೂ ಬಿಯರ್ ಮಾರಾಟದಿಂದ 3,673.75 ಕೋಟಿ ರೂ. ಸಂಗ್ರಹವಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ. ಪರವಾನಗಿಗಳ ವಿವರ: ಸಿಎಲ್-2 ಮತ್ತು ಸಿಎಲ್-9…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿರುವುದಾಗಿ ತಿಳಿದು ಬಂದಿದೆ. ಅದನ್ನು ಪತ್ತೆ ಹಚ್ಚಿ ಓಡಿಸೋ ಕಾರ್ಯಾಚರಣೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಉಳವಿ ಹೋಬಳಿ ವ್ಯಾಪ್ತಿಗೆ ಜೋಡಿ ಕಾಡಾನೆಗಳು ಆಗಮಿಸಿ ರೈತರ ಬೆಳೆ ನಾಶ ಪಡಿಸಿದ್ದವು. ಅವುಗಳನ್ನು ದೂಗೂರಿನಿಂದ ಕಾನಹಳ್ಳಿ, ಕಣ್ಣೂರು ಮಾರ್ಗವಾಗಿ ಚಿಕ್ಕಲವತ್ತಿ ಕಡೆಗೆ ಓಡಿಸಲಾಗಿದೆ. ಮುಂದೆ ಅಂಬಲಗೋಡು ಡ್ಯಾಂ ಕಡೆಗೂ ಓಡಿಸೋ ಕಾರ್ಯಾಚರಣೆ ಮುಂದುವರೆದಿದೆ. ಮತ್ತೊಂದೆಡೆ ಸಾಗರ ತಾಲ್ಲೂಕಿನ ತ್ಯಾಗರ್ತಿ ಕಾಡಿನಲ್ಲಿ ಒಂಟಿ ಸಲಗವೊಂದು ಬಂದಿರುವುದಾಗಿ ಅರಣ್ಯ ಇಲಾಖೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಜೋಡಿ ಆನೆಗಳು ಇತ್ತಿಂದ ಅತ್ತ ತೆರಳಿದರೇ, ಅತ್ತಿಂದಲೇ ಇತ್ತ ಒಂಟಿ ಸಲಗ ಆಗಮಿಸಿರೋದಾಗಿ ಹೇಳಲಾಗುತ್ತಿದೆ. ಅಂದಹಾಗೆ ಕರ್ಜಿಕೊಪ್ಪದಲ್ಲಿ ಹುಚ್ಚಪ್ಪ ಎಂಬುವರ ಗದ್ದೆಯಲ್ಲಿ ಒಂಟಿ ಸಲಗ ಹಾದು ಹೋಗಿರುವಂತ ಹೆಜ್ಜೆ ಗುರುತು ಪತ್ತೆಯಾಗಿವೆ. ಅಲ್ಲಿಂದ ಕಣ್ಣೂರು, ತ್ಯಾಗರ್ತಿ ಪ್ರದೇಶಗಳಲ್ಲಿ ಒಂಟಿ ಸಲಗ ಅಲೆದಾಡುತ್ತಿರೋದಾಗಿ ಹೇಳಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆಯೂ ಅರಣ್ಯ ಇಲಾಖೆಯಿಂದ ಮನವಿ ಮಾಡಲಾಗಿದೆ.…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡಿದರೂ, ನಾಮಕಾವಸ್ಥೆಗೆ ಪರಿಶೀಲನೆ ಮಾಡಿ, ಪ್ರಕರಣ ಮುಚ್ಚಿ ಹಾಕಿರುವಂತ ಆರೋಪವು ಕ್ಯಾದಗಿಯ RFO ಹಾಗೂ ವಾಚರ್ ಉದಯ ನಾಯ್ಕ್ ವಿರುದ್ಧ ಕೇಳಿ ಬಂದಿದೆ. ಮೂಗರ್ಜಿಯನ್ನು ಗಂಭೀರವಾಗಿ ಪರಿಗಣಿಸದಂತ ಅರಣ್ಯ ಇಲಾಖೆಯು, ವಾಚರ್, ಮರ ಕಡಿತಲೆ ಮಾಡಿದವರಿಗೆ ಬೆಂಬಲವಾಗಿ ನಿಂತಿರುವುದಾಗಿ ಹೇಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲ್ಲೂಕಿನ ಕ್ಯಾದಗಿ ವಲಯ ಅರಣ್ಯಾಧಿಕಾರಿಗಳ ಸಮೀಪದ ಗ್ರಾಮವಾಗಿರುವಂತ ಹೊನ್ನೆಬಿಡಾರದಲ್ಲಿ ಬೃಹತ್ ಗಾತ್ರದ ಮರಗಳನ್ನು ಕಟ್ಟಿಂಗ್ ಮಿಷಿನ್ ಬಳಸಿ ಬಾಬು ನಾಯ್ಕ್ ಎಂಬುವರು ಕಡಿತಲೆ ಮಾಡಿದಂತ ಆರೋಪ ಕೇಳಿ ಬಂದಿದೆ. ಖುದ್ದು ಮರ ಕಡಿತಲೆ ಮಾಡೋದಕ್ಕೆ ಆ ಭಾಗದ ವಾಚರ್ ಉದಯ ನಾಯ್ಕ್ ಎಂಬಾತ ಸಾಥ್ ನೀಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ RFOಗೆ ಸಾರ್ವಜನಿಕರೊಬ್ಬರು ಮೂಗರ್ಜಿ ಬರೆದಿದ್ದಾರೆ. ಅದನ್ನು ಗೌಪ್ಯವಾಗಿಟ್ಟು ಸ್ಥಳಕ್ಕೆ ತೆರಳಿ ಲಕ್ಷಾಂತರ ಬೆಲೆ ಬಾಳುವಂತ ಕಡಿತಲೆ ಮಾಡಿದಂತ ಮರಗಳನ್ನು ವಶಕ್ಕೆ ಪಡೆಯೋದು ಬಿಟ್ಟು, ವಾಚರ್ ಉದಯ ನಾಯ್ಕ್ ಗೆ ದೂರು ಅರ್ಜಿಯ ವಿಷಯವನ್ನೇ ತಿಳಿಸಿದ್ದಾರೆ.…
ಬೆಳಗಾವಿ ಸುವರ್ಣ ವಿಧಾನಸೌಧ : ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ರಾಜ್ಯದ ಎಲ್ಲ ರೈತರ ತಾಕುಗಳ ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೇ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಘ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ…














