Author: kannadanewsnow09

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಳೆ ಇಕ್ಕೇರಿಯ ಗಸಗಸೆಕೊಡ್ಲು ಗ್ರಾಮ ಜಯಂತ್ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರೋದಾಗಿ ತಿಳಿದು ಬಂದಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅಧಿಕಾರಿಗಳ ಬೈಗುಳ, ಆತ್ಮಹತ್ಯೆಗೆ ಯತ್ನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಳೆ ಇಕ್ಕೇರಿಯ ಸಮೀಪದ ಜಯಂತ್ ಗಸಗಸೆಕೊಡ್ಲು ಅವರು ತಮ್ಮ ಮನೆಯ ಸಮೀಪದಲ್ಲಿ ಕುಸಿಯುವ ಸ್ಥಿತಿಯಲ್ಲಿದ್ದಂತ ಮಣ್ಣುನ್ನು ಸಾಗಾಣಿಕೆಯನ್ನು ಮಾಡಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರ ವಿರುದ್ಧ ಅಕ್ರಮವಾಗಿ ಮಣ್ಣು ಸಾಗಾಣಿಕೆ ಆರೋಪ ಕೇಳಿ ಬಂದಿತ್ತು. ಇದೇ ವಿಚಾರವಾಗಿ ಅಧಿಕಾರಿಗಳನ್ನು ಸ್ಥಳೀಯ ಆಡಳಿತಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿದ್ದಂತ ವೇಳೆಯಲ್ಲಿ ಜಯಂತ್ ಅವರನ್ನು ತರಾಟೆಗೆ ತೆಗೆದುಕೊಂಡು, ಬೈದಿದ್ದರು ಎನ್ನಲಾಗುತ್ತಿದೆ. ಸ್ಥಿತಿ ಗಂಭೀರ, ಶಿವಮೊಗ್ಗದಲ್ಲಿ ಮುಂದುವರೆದ ಚಿಕಿತ್ಸೆ ಇಂದು ಮಧ್ಯಾಹ್ನ ಇದೇ ವಿಚಾರವಾಗಿ ಮನನೊಂದಂತ ಜಯಂತ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪುತ್ರ ಕೂಡಲೇ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ…

Read More

ಬೆಂಗಳೂರು; ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2026–27ನೇ ಸಾಲಿನ ಮೊದಲ ಕಂತಿನ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಹಾಗೂ ತಾಲೂಕು ಪಂಚಾಯಿತಿಗಳವಾರು ವಿವರಗಳನ್ನು ಪ್ರಕಟಿಸಿದೆ. ಈ ಅನುದಾನವನ್ನು ಏಪ್ರಿಲ್ 2026ರಿಂದ ಜೂನ್ 2026ರವರೆಗೆ ಬಳಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರು ನಗರಕ್ಕೆ ಒಟ್ಟು 9322.48 ಲಕ್ಷ ರೂಪಾಯಿಗಳಲ್ಲಿ 2337.13 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರಕ್ಕೆ 2733.08 ಲಕ್ಷ ರೂಪಾಯಿಗಳಲ್ಲಿ 683.27 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಗೆ 6279.09 ಲಕ್ಷ ರೂಪಾಯಿಗಳಲ್ಲಿ 1569.77 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಕೋಲಾರ ಜಿಲ್ಲೆಗೆ 3998.09 ಲಕ್ಷ ರೂಪಾಯಿಗಳಲ್ಲಿ 999.53 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ 8697.53 ಲಕ್ಷ ರೂಪಾಯಿಗಳಲ್ಲಿ 2174.49 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ತುಮಕೂರು ಜಿಲ್ಲೆಗೆ 7904.25 ಲಕ್ಷ ರೂಪಾಯಿಗಳಲ್ಲಿ 1976.06…

Read More

ಉತ್ತಂಗರೈ : “ತಮಿಳುನಾಡಿನಲ್ಲಿ ಮಹಿಳೆಯರಿಗೆ ಪ್ರಸ್ತುತ 1 ಸಾವಿರ ಹಣ ನೀಡುತ್ತಿದ್ದು, ಈ ಚುನಾವಣೆ ಬಳಿಕ ಕರ್ನಾಟಕ ಮಾದರಿಯಂತೆ 2 ಸಾವಿರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ತಮಿಳುನಾಡಿನ ಉತ್ತಂಗರೈ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಪ್ಪುಸ್ವಾಮಿ ಅವರ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಚುನಾವಣೆ ಪ್ರಚಾರ ಭಾಷಣ ಮಾಡಿದರು. “1.31 ಕೋಟಿ ಕುಟುಂಬದ ಮಹಿಳೆಯರಿಗೆ ಇದರಿಂದ ಪ್ರಯೋಜನವಾಗಲಿದೆ. ವಿದ್ಯುತ್ ಮೀಟರ್ ಇಲ್ಲದೆ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲಾಗುವುದು. ಕುಟುಂಬದ ಅಗತ್ಯ ವಸ್ತುಗಳ ಖರೀದಿಗೆ 8 ಸಾವಿರ ನೀಡುವ ಭರವಸೆ ನೀಡಲಾಗಿದೆ. ವೃದ್ಧಾಪ್ಯ ವೇತನ ಸೇರಿದಂತೆ ಪಿಂಚಣಿ ಹಣಗಳ ಹೆಚ್ಚಳ ಮಾಡಲಾಗುವುದು” ಎಂದರು. ದಕ್ಷಿಣ ಭಾರತ ವಿಭಜಿಸುವ ಬಿಜೆಪಿ “ಸ್ಟಾಲಿನ್ ಅವರು ಮತ್ತೆ ತಮಿಳುನಾಡಿನ‌ ಮುಖ್ಯಮಂತ್ರಿಯಾಗಲಿದ್ದಾರೆ. ಅಣ್ಣಾ ಡಿಎಂಕೆಗೆ ಯಾವುದೇ ಅವಕಾಶವಿಲ್ಲ. ತನ್ನ ಅಸ್ತಿತ್ವ ಕಳೆದುಕೊಂಡಿರುವ ಅದು ಬಿಜೆಪಿ ಸೇರಿ ಛಿದ್ರವಾಗಿ ಹೋಗಿದೆ. ಇವರುಗಳು ದಕ್ಷಿಣ ಭಾರತವನ್ನ ಭಾಗ ಮಾಡಬೇಕು…

Read More

ಬೆಂಗಳೂರು; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಲು ಈ ಬಾರಿಯ ಸಿಟಿಇ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ (Dress Code) ಮತ್ತು ನಿಯಮಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳ ಸುಲಭ ಓದಿಗಾಗಿ ಈ ಪ್ರಮುಖ ನಿಯಮಗಳನ್ನು ಇಲ್ಲಿ ಸಂಕ್ಷಿಪ್ತವಾಗಿ ನೀಡಲಾಗಿದೆ: ಪರೀಕ್ಷಾ ವೇಳಾಪಟ್ಟಿ ಮತ್ತು ಮಾಹಿತಿ ದಿನಾಂಕ: ಏಪ್ರಿಲ್ 22 (ಕನ್ನಡ ಭಾಷಾ ಪರೀಕ್ಷೆ), ಏಪ್ರಿಲ್ 23 ಮತ್ತು 24. ಅಭ್ಯರ್ಥಿಗಳ ಸಂಖ್ಯೆ: ಸುಮಾರು 3.30 ಲಕ್ಷ ವಿದ್ಯಾರ್ಥಿಗಳು. ಕೇಂದ್ರಗಳು: ರಾಜ್ಯಾದ್ಯಂತ 745 ಪರೀಕ್ಷಾ ಕೇಂದ್ರಗಳು. ಭದ್ರತೆ: ಪ್ರತಿ ಕೇಂದ್ರದಲ್ಲೂ ಸಿಸಿ ಕ್ಯಾಮರಾ ಮತ್ತು ಸ್ಕ್ಯಾನಿಂಗ್ ವ್ಯವಸ್ಥೆ ಇರಲಿದೆ. ಪ್ರಮುಖ ವಸ್ತ್ರಸಂಹಿತೆ (Dress Code) ವಿಭಾಗ ಪುರುಷ ಅಭ್ಯರ್ಥಿಗಳು ಮಹಿಳಾ ಅಭ್ಯರ್ಥಿಗಳು ಮೇಲಂಗಿ ಅರ್ಧ ತೋಳಿನ ಶರ್ಟ್ ಅಥವಾ ಟಿ-ಶರ್ಟ್ (ಕಾಲರ್ ಇಲ್ಲದಿದ್ದರೆ ಉತ್ತಮ). ಅರ್ಧ ತೋಳಿನ ಸರಳ ಬಟ್ಟೆಗಳು. ಕಸೂತಿ, ಹೂವು ಅಥವಾ ದೊಡ್ಡ ಬಟನ್ ಇರಬಾರದು. ಕೆಳಂಗಿ ಸರಳ ಪ್ಯಾಂಟ್ (ಜೀನ್ಸ್ ಅಥವಾ ಕುರ್ತಾ ಪೈಜಾಮ ನಿಷೇಧಿಸಲಾಗಿದೆ). ಸರಳ ಪ್ಯಾಂಟ್/ಉಡುಪು…

Read More

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಹಾಗೂ ಅವರ ಪತ್ನಿ ಸಂಗೀತಾ ಅವರ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ಜೂನ್ 15ಕ್ಕೆ ಮುಂದೂಡಿದೆ. ಸುಮಾರು 25 ವರ್ಷಗಳ ದಾಂಪತ್ಯ ಜೀವನದ ನಂತರ ಈ ದಂಪತಿಗಳು ಬೇರ್ಪಡುತ್ತಿರುವುದು ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಸಂಗೀತಾ ಅವರು ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ವಿಜಯ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ ಎನ್ನಲಾಗಿದೆ. ಸುದ್ದಿಯ ಮುಖ್ಯಾಂಶಗಳು: ವಿಚಾರಣೆ ಮುಂದೂಡಿಕೆ: ಸೋಮವಾರ (ಏಪ್ರಿಲ್ 20) ನ್ಯಾಯಾಧೀಶರಾದ ಶಶಿಕಲಾ ಅವರ ಮುಂದೆ ಈ ಪ್ರಕರಣ ವಿಚಾರಣೆಗೆ ಬಂದಿತ್ತು. ಅಲ್ಪ ಸಮಯದ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಜೂನ್ 15ಕ್ಕೆ ನಿಗದಿಪಡಿಸಿದೆ. ಸಂಗೀತಾ ಅವರ ಆರೋಪ: ವಿಜಯ್ ಅವರು ಬೇರೊಬ್ಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಸಂಗೀತಾ ಅವರು ತಮ್ಮ ಅರ್ಜಿಯಲ್ಲಿ ದೂರಿದ್ದಾರೆ. 2021ರಿಂದ ಈ ವಿಚಾರವಾಗಿ ತಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ವಿಜಯ್ ಅವರು ಭಾವನಾತ್ಮಕವಾಗಿ ದೂರವಾಗಿದ್ದಾರೆ ಎಂದು ಅವರು…

Read More

ನವದೆಹಲಿ: ಮಹಿಳಾ ಮೀಸಲಾತಿ ವಿಷಯವಾಗಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಭಾಷಣವು ‘ಮಾದರಿ ನೀತಿ ಸಂಹಿತೆ’ಯ (MCC) “ಸ್ಪಷ್ಟ ಮತ್ತು ಬಹಿರಂಗ” ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸುಮಾರು 700ಕ್ಕೂ ಹೆಚ್ಚು ಗಣ್ಯರು ಸೋಮವಾರ ಚುನಾವಣಾ ಆಯೋಗದ ಮೊರೆ ಹೋಗಿದ್ದಾರೆ. ದೂರಿನ ಪ್ರಮುಖ ಅಂಶಗಳು: ಸರ್ಕಾರಿ ಯಂತ್ರದ ದುರ್ಬಳಕೆ: ನೀತಿ ಸಂಹಿತೆ ಜಾರಿಯಲ್ಲಿರುವಾಗ ಪ್ರಧಾನಿಯವರು ಅಧಿಕೃತ ಸರ್ಕಾರಿ ಯಂತ್ರ ಹಾಗೂ ಸಮೂಹ ಮಾಧ್ಯಮಗಳನ್ನು “ಚುನಾವಣಾ ಪ್ರಚಾರ ಮತ್ತು ಪಕ್ಷಪಾತದ ಪ್ರಚಾರ”ಕ್ಕಾಗಿ ಬಳಸಿಕೊಂಡಿದ್ದಾರೆ. ಇದು ಗಂಭೀರ ನಿಯಮ ಬಾಹಿರ ಕೃತ್ಯ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಸಮಾನತೆಯ ಆರೋಪ: ಇಂತಹ ಕ್ರಮಗಳು ಆಡಳಿತಾರೂಢ ಪಕ್ಷಕ್ಕೆ “ಅನಗತ್ಯ ಅನುಕೂಲ” ಮಾಡಿಕೊಡುತ್ತವೆ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯವಿರುವ ಸಮಾನ ಅವಕಾಶದ (Level playing field) ಆಶಯಕ್ಕೆ ಧಕ್ಕೆ ತರುತ್ತವೆ ಎಂದು ದೂರಲಾಗಿದೆ. ದಾಖಲೆಗಳ ತೆರವು: ಒಂದು ವೇಳೆ ಈ ಭಾಷಣಕ್ಕೆ ಚುನಾವಣಾ ಆಯೋಗದ ಪೂರ್ವಾನುಮತಿ ಇಲ್ಲದಿದ್ದರೆ, ಕೂಡಲೇ…

Read More

ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುವಂತೆ (Recusal) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಸೋಮವಾರ ವಜಾಗೊಳಿಸಿದ್ದಾರೆ. ಕೇಜ್ರಿವಾಲ್ ಅವರ ವಾದಗಳು ಯಾವುದೇ ಸಾಕ್ಷ್ಯವನ್ನು ಹೊಂದಿಲ್ಲ, ಬದಲಿಗೆ ಕೇವಲ ನ್ಯಾಯಾಧೀಶರ ವಿಶ್ವಾಸಾರ್ಹತೆಯ ಮೇಲೆ ಕಳಂಕ ತರುವ ಪ್ರಯತ್ನವಾಗಿವೆ ಎಂದು ಅವರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಒತ್ತಡಕ್ಕೆ ಮಣಿಯುವುದಿಲ್ಲ: ನ್ಯಾಯಾಧೀಶರ ಖಡಕ್ ಉತ್ತರ ತಮ್ಮ ವಿರುದ್ಧದ ಹಿತಾಸಕ್ತಿ ಸಂಘರ್ಷದ ಆರೋಪಗಳನ್ನು ತಳ್ಳಿಹಾಕಿದ ನ್ಯಾಯಮೂರ್ತಿ ಶರ್ಮಾ, “ವಿಚಾರಣೆಯಿಂದ ಹಿಂದೆ ಸರಿಯುವುದು (Recusal) ಬಹಳ ಸುಲಭದ ಹಾದಿಯಾಗಿತ್ತು. ಆದರೆ ಅದು ಕರ್ತವ್ಯ ಲೋಪವಾಗುತ್ತಿತ್ತು. ಆಧಾರರಹಿತ ಆರೋಪಗಳ ಮೂಲಕ ನ್ಯಾಯಾಧೀಶರ ಮೇಲೆ ಒತ್ತಡ ಹೇರಬಹುದು ಎಂಬ ತಪ್ಪು ಸಂದೇಶ ರವಾನೆಯಾಗುತ್ತಿತ್ತು,” ಎಂದು ಅಭಿಪ್ರಾಯಪಟ್ಟರು. “ನನ್ನ ಪ್ರಮಾಣ ವಚನವು ಸಂವಿಧಾನಕ್ಕೆ ಬದ್ಧವಾಗಿದೆ. ನ್ಯಾಯವು ಒತ್ತಡಕ್ಕೆ ಬಾಗಬಾರದು ಎಂಬುದನ್ನು ನಾನು ಕಲಿತಿದ್ದೇನೆ. ಭಯ ಅಥವಾ ತಾರತಮ್ಯವಿಲ್ಲದೆ ನಾನು ಕಾರ್ಯನಿರ್ವಹಿಸುತ್ತೇನೆ,” ಎಂದು ಅವರು ತಮ್ಮ ತೀರ್ಪಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಕೇಜ್ರಿವಾಲ್ ವಾದಗಳೇನಿತ್ತು?…

Read More

ಶಿವಮೊಗ್ಗ: ನಾಳೆ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುತ್ತಿದ್ದು, ಮಾನ್ಯ ಮುಖ್ಯಮಂತ್ರಿಗಳ ‘ಅಮೃತ ನಗರೋತ್ಥಾನ’ ಯೋಜನೆಯಡಿ (ಹಂತ-4) ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ. ಇದರ ಭಾಗವಾಗಿ ಸಾಗರ ನಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ನಡೆಯಲಿದೆ. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ವಿವರ: ದಿನಾಂಕ: 21-04-2026 (ಮಂಗಳವಾರ) ಸಮಯ: ಬೆಳಿಗ್ಗೆ 10:30 ಗಂಟೆಗೆ ಸ್ಥಳ: ಜೋಸೆಫ್ ನಗರ, (ಮಚಾಡೊ ಆಟೋ ಸರ್ಕಲ್) ಸಾಗರ. ಈ ಭಾಗದ ದಶಕಗಳ ಬೇಡಿಕೆಯಾಗಿದ್ದ ಸುಸಜ್ಜಿತ ಚರಂಡಿ ವ್ಯವಸ್ಥೆಗೆ ಈಗ ಚಾಲನೆ ಸಿಗುತ್ತಿರುವುದು ಸ್ಥಳೀಯ ನಿವಾಸಿಗಳಲ್ಲಿ ಸಂತಸ ತಂದಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು, ವಾರ್ಡಿನ ಪ್ರಮುಖರು, ಸಾಗರ ನಗರಸಭೆಯ ಅಧಿಕಾರಿಗಳು ಸೇರಿದಂತೆ ಇತರೆ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ. https://kannadanewsnow.com/kannada/negligence-in-basavannas-jayanti-celebrations-protest-in-front-of-maddur-taluk-office/ https://kannadanewsnow.com/kannada/complaint-to-election-commission-against-pm-modis-speech-alleging-violation-of-model-code-of-conduct/

Read More

ನವದೆಹಲಿ: ಚುನಾವಣಾ ಕಣ ರಂಗೇರುತ್ತಿರುವ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷಗಳ ವಿರುದ್ಧ ವೀಕ್ಷಣಾ ಪ್ರಹಾರ ನಡೆಸಿದ್ದ ಪ್ರಧಾನಿಯವರ ಈ ಕ್ರಮವು ‘ಮಾದರಿ ನೀತಿ ಸಂಹಿತೆ’ಯ (MCC) ಗಂಭೀರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸುಮಾರು 700ಕ್ಕೂ ಹೆಚ್ಚು ಗಣ್ಯರು ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ದೂರಿನ ಸಾರಾಂಶವೇನು? ಕಳೆದ ಎರಡು ದಿನಗಳ ಹಿಂದೆ ಪ್ರಧಾನಿ ಮೋದಿ ಅವರು ಮಹಿಳಾ ಮೀಸಲಾತಿ ಕುರಿತು ಮಾತನಾಡುತ್ತಾ ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ್ದರು. ಈ ಭಾಷಣವು ಕೇವಲ ಆಡಳಿತ ಪಕ್ಷದ ಪ್ರಚಾರದಂತಿತ್ತು ಎಂದು ದೂರುದಾರರು ಪ್ರತಿಪಾದಿಸಿದ್ದಾರೆ. ದೂರಿನಲ್ಲಿರುವ ಪ್ರಮುಖ ಅಂಶಗಳು ಇಲ್ಲಿವೆ: ಸರ್ಕಾರಿ ಯಂತ್ರದ ದುರ್ಬಳಕೆ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಪ್ರಧಾನಿಯವರು ಸರ್ಕಾರಿ ವೇದಿಕೆಗಳು ಮತ್ತು ಸಮೂಹ ಮಾಧ್ಯಮಗಳನ್ನು ಪಕ್ಷಪಾತದ ಪ್ರಚಾರಕ್ಕಾಗಿ ಬಳಸಿಕೊಂಡಿದ್ದಾರೆ. ಇದು ಅಧಿಕಾರದಲ್ಲಿರುವ ಪಕ್ಷಕ್ಕೆ ಅನುಚಿತ ಲಾಭವನ್ನು ನೀಡುತ್ತದೆ. ಸಮಾನ ಅವಕಾಶದ ಕೊರತೆ: ಮುಕ್ತ ಮತ್ತು…

Read More

ಹುಬ್ಬಳ್ಳಿ: ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಎಷ್ಟು ವರದಾನವೋ, ಅಷ್ಟೇ ಶಾಪವಾಗಿಯೂ ಪರಿಣಮಿಸುತ್ತಿದೆ. ಸಣ್ಣದೊಂದು ವಿಡಿಯೋ ಎಡಿಟಿಂಗ್ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ “ಹಾವಿನ ಮಳೆ”ಯಾಗುತ್ತಿದೆ ಎಂಬ ಸುಳ್ಳು ಸುದ್ದಿಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿದೆ. ಘಟನೆಯ ಹಿನ್ನೆಲೆ: ಏನಿದು ಹಾವಿನ ಮಳೆಯ ವಿಡಿಯೋ? ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್‌ನಲ್ಲಿ ai_jackie_07 ಎಂಬ ಹೆಸರಿನ ಅಕೌಂಟ್ ಹೊಂದಿರುವ ಕಿಡಿಗೇಡಿಯೊಬ್ಬ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಆ ವಿಡಿಯೋದಲ್ಲಿ ಆಕಾಶದಿಂದ ನೂರಾರು ಹಾವುಗಳು ಮಳೆಯಂತೆ ಬೀಳುತ್ತಿರುವುದನ್ನು ತೋರಿಸಲಾಗಿದೆ. “ಹುಬ್ಬಳ್ಳಿ ಒಳಗ ಹಾವಿನ ಮಳೆ ಆಗತೈತಿ” ಎಂಬ ಒಕ್ಕಣೆಯೊಂದಿಗೆ ಹಂಚಿಕೊಳ್ಳಲಾದ ಈ ವಿಡಿಯೋ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ನೂರಾರು ಹಾವುಗಳು ಆಕಾಶದಿಂದ ಬೀಳುತ್ತಿರುವ ಈ ವಿಡಿಯೋವನ್ನು ಎಡಿಟಿಂಗ್ ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದರೂ, ಸಾಮಾನ್ಯ ಜನರು ಮತ್ತು ಗ್ರಾಮೀಣ ಭಾಗದ ಮಂದಿ ಇದನ್ನು ನೋಡಿ ಆತಂಕಕ್ಕೊಳಗಾಗಿದ್ದಾರೆ. ಮಳೆಗಾಲದ ಈ ಸಮಯದಲ್ಲಿ…

Read More