Author: kannadanewsnow09

ಶಿವಮೊಗ್ಗ: ಅಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ದೂರು ನೀಡಿದಂತ ವಕೀಲರೊಬ್ಬರನ್ನು ಕೊಲೆಗೆ ಯತ್ನಿಸಿದಂತ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ಆನಂದಪುರ ಠಾಣೆಯ ಪಿಎಸ್ಐ ಪ್ರವೀಣ್.ಎಸ್.ಪಿ ಅಂಡ್ ಟೀಂ ದೂರು ದಾಖಲಾದ ಕೆಲವೇ ಗಂಟೆಯಲ್ಲಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮ ಮರಳು ಸಾಗಾಟದ ಬಗ್ಗೆ ವಕೀಲ ದೂರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ ಸಿಡಿದೆದ್ದಿದ್ದಂತ ವಕೀಲ ಶರತ್ ಕುಮಾರ್ ಎಂಬುವರು, ರಾತ್ರಿಯ ವೇಳೆಯಲ್ಲಿ ಮರಳು ದಂಧೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು 112ಗೆ ಕರೆ ಮಾಡಿ ನೀಡಿದ್ದರು. ಈ ಮಾಹಿತಿಯನ್ನು ಆಧರಿಸಿ ಘಟನಾ ಸ್ಥಳಕ್ಕೆ ತೆರಳಿದ್ದಂತ ಪೊಲೀಸರು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಂತ ವಾಹನವನ್ನು ಈ ಹಿಂದೆ ಸೀಜ್ ಮಾಡಿದ್ದರು. ವಕೀಲ ಶರತ್ ಕುಮಾರ್ ಮೇಲೆ ದ್ವೇಷ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ದೂರು ನೀಡಿದವರು ಯಾರು ಎಂಬುದಾಗಿ ಆರೋಪಿ ದರ್ಶನ್ ಗೆ ಸುಳಿವು ಸಿಕ್ಕಿತ್ತು. ಹೀಗಾಗಿ…

Read More

ಶಿವಮೊಗ್ಗ: 110/11 ಕೆವಿವಿ ವಿದ್ಯುತ್ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ಫೀಡರ್‌ಗಳಿಗೆ ಜನವರಿ.18ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ, ದಿನಾಂಕ:18.01.2026 ರಂದು ಸೊರಬ ಪಟ್ಟಣದಲ್ಲಿ ಟೌನ್‌ ಫೀಡರ್‌ನ ಬೇರ್ಪಡಿಸುವ ಕಾಮಗಾರಿಯನ್ನು ತುರ್ತಾಗಿ ನಡೆಸಲಾಗುತ್ತಿದೆ. ಹೀಗಾಗಿ ಜನವರಿ.18ರಂದು ಸೊರಬ ಶಾಖಾ ವ್ಯಾಪ್ತಿಗೆ ಒಳಪಡುವ ಎಫ್-21 ಸೊರಬ ಪಟ್ಟಣ ಸೇರಿದಂತೆ ಎಫ್-2 ಸಾರೇಕೊಪ್ಪ, ಎಫ್-3 ಬಳ್ಳಿಬೈಲು, ಎಫ್-4 ಓಟೂರು, ಎಫ್-5 ಚಿಕ್ಕಾವಲಿ, ಎಫ್-6 ಹಾಲಗಳಲೆ, ಎಫ್-7 ತಳೇಬೈಲು, ಎಫ್-8 ಕುಪ್ಪೆ, ಎಫ್15 ಕಲ್ಲಂಬಿ ಎನ್‌ಜೆವೆ, ಎಫ್-16 ಕಡಸೂರು ಎನ್‌ಜೆವ್, ಎಫ್-17 ಯಲವಳ್ಳಿ ಎನ್‌ಜೆವ್ರ, ಎಫ್-9 ಬಿಳಾಗಿ, ಎಫ್10 ಕುಂದಗಸವಿ ಕರೆಂಟ್ ಇರೋದಿಲ್ಲ ಎಂದಿದೆ. ಎಫ್-11 ಮಂಚಿ, ಎಫ್-12 ಉರಗನಹಳ್ಳಿ, ಎಫ್-13 ಅಂಡಿಗೆ, ಎಫ್-14 ಕೊಡಕಣಿ, ಎಫ್-23 ತಾವರೆಹಳ್ಳಿ, ಎಫ್-24 ಕಕ್ಕರಸಿ, ಎಫ್25 ನಡಹಳ್ಳಿ ಮತ್ತು ಎಫ್26 ಸೊರಬ ಇಂಡಸ್ಟ್ರೀಯಲ್ ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ…

Read More

ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್‌ನ ಟೆಲಿಕಾಂ ಅಂಗವಾದ ಜಿಯೋ ಪ್ಲಾಟ್‌ಫಾರ್ಮ್ಸ್ 2025-26ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (Q3), ಅಂದರೆ ಅಕ್ಟೋಬರ್ ನಿಂದ ಡಿಸೆಂಬರ್ ಅಂತ್ಯದ ತನಕದ ಅವಧಿಗೆ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಜಿಯೋದ ಇಬಿಐಟಿಡಿಎ (EBITDA) ವರ್ಷದಿಂದ ವರ್ಷಕ್ಕೆ ಶೇಕಡಾ 16.4ರಷ್ಟು ಹೆಚ್ಚಾಗಿ 19,303 ಕೋಟಿ ರೂಪಾಯಿಗೆ ತಲುಪಿದೆ. ಇನ್ನು ನಿವ್ವಳ ಲಾಭ ಶೇಕಡಾ 11.2ರಷ್ಟು ಹೆಚ್ಚಾಗಿ 7,629 ಕೋಟಿ ರೂಪಾಯಿಗೆ ತಲುಪಿದೆ. ಈ ತ್ರೈಮಾಸಿಕದಲ್ಲಿ, ಜಿಯೋ 89 ಲಕ್ಷ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಂಡಿದ್ದು, 2025ರ ಡಿಸೆಂಬರ್ ವೇಳೆಗೆ ಕಂಪನಿಯ ಒಟ್ಟು ಚಂದಾದಾರರ ಸಂಖ್ಯೆಯನ್ನು 51.53 ಕೋಟಿಗೆ ಹೆಚ್ಚಿಸಿಕೊಂಡಿದೆ. ತಲಾ ಡೇಟಾ ಬಳಕೆ ತಿಂಗಳಿಗೆ 40.7 ಜಿ.ಬಿ.ಯಷ್ಟಿದ್ದರೆ, ಒಟ್ಟು ಡೇಟಾ ದಟ್ಟಣೆ ವರ್ಷದಿಂದ ವರ್ಷಕ್ಕೆ ಶೇ 34ರಷ್ಟು ಹೆಚ್ಚಾಗಿ 62.3 ಬಿಲಿಯನ್ (6230 ಕೋಟಿ) ಜಿಬಿಗೆ ತಲುಪಿದೆ. ಜಿಯೋದ ಕಾರ್ಯಕ್ಷಮತೆ ಬಗ್ಗೆ ಪ್ರತಿಕ್ರಿಯಿಸಿದ ರಿಲಯನ್ಸ್ ಜಿಯೋ ಇನ್ಫೋಕಾಮ್ ಅಧ್ಯಕ್ಷ ಆಕಾಶ್ ಅಂಬಾನಿ, “ವಿಶ್ವದ ಅತ್ಯುತ್ತಮ ತಂತ್ರಜ್ಞಾನ ಪ್ಲಾಟ್ ಫಾರ್ಮ್…

Read More

ನವದೆಹಲಿ: ಅಧಿಕೃತ ಮೂಲಗಳ ಪ್ರಕಾರ, ಸರ್ಕಾರ ಶುಕ್ರವಾರ 242 ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟ ವೆಬ್‌ಸೈಟ್‌ಗಳ ಲಿಂಕ್‌ಗಳನ್ನು ನಿರ್ಬಂಧಿಸಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಸರ್ಕಾರವು ನೈಜ ಹಣದ ಗೇಮಿಂಗ್ ಅಪ್ಲಿಕೇಶನ್‌ಗಳ ಮೇಲಿನ ನಿಷೇಧವನ್ನು ಅನುಸರಿಸಿ ಈ ಆದೇಶ ಹೊರಡಿಸಲಾಗಿದೆ. ಭಾರತ ಸರ್ಕಾರ ಇಂದು (ಶುಕ್ರವಾರ) 242 ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟ ವೆಬ್‌ಸೈಟ್ ಲಿಂಕ್‌ಗಳನ್ನು ನಿರ್ಬಂಧಿಸಿದೆ. ಇಲ್ಲಿಯವರೆಗೆ, 7,800 ಕ್ಕೂ ಹೆಚ್ಚು ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟ ವೆಬ್‌ಸೈಟ್‌ಗಳನ್ನು ತೆಗೆದುಹಾಕಲಾಗಿದೆ, ಆನ್‌ಲೈನ್ ಗೇಮಿಂಗ್ ಕಾಯ್ದೆ ಅಂಗೀಕಾರದ ನಂತರ ಜಾರಿ ಕ್ರಮಗಳಲ್ಲಿ ಗಮನಾರ್ಹ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕ್ರಮವು ಬಳಕೆದಾರರನ್ನು ವಿಶೇಷವಾಗಿ ಯುವಕರನ್ನು ರಕ್ಷಿಸಲು ಮತ್ತು ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ವೇದಿಕೆಗಳಿಂದ ಉಂಟಾಗುವ ಆರ್ಥಿಕ ಮತ್ತು ಸಾಮಾಜಿಕ ಹಾನಿಯನ್ನು ತಡೆಯಲು ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/good-news-for-nhm-and-asha-workers-in-the-state-pending-salaries-to-be-released-soon/ https://kannadanewsnow.com/kannada/government-orders-appointment-of-administrative-officers-for-gram-panchayats-whose-terms-have-expired-in-the-state/

Read More

ಮಂಡ್ಯ : ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತರಲು ಹೊರಟಿರುವ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಹಿಂಪಡೆದು, ಹಿಂದಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಮುಂದುವರೆಸುವವರೆಗೂ ಕಾಂಗ್ರೆಸ್ ಪಕ್ಷದಿಂದ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಬೋರನದೊಡ್ಡಿ, ನಿಡಘಟ್ಟ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣ ಮಾಡಿರುವ ನೂತನ ಮಳಿಗೆಗಳನ್ನು ಉದ್ಘಾಟನೆ ಮಾಡಿ ಶುಕ್ರವಾರ ಮಾತನಾಡಿದರು. ಗ್ರಾಮೀಣ ಪ್ರದೇಶದಿಂದ ನಗರದತ್ತ ಕೃಷಿ ಕೂಲಿ ಕಾರ್ಮಿಕರು ವಲಸೆ ತಡೆಯುವುದು, ಸಮಾನ ಕೂಲಿ, ಆರ್ಥಿಕ ಚೈತನ್ಯದಿಂದ ಗ್ರಾಮ ಸ್ವರಾಜ್ಯ ಕಾಣುವ ಉದ್ದೇಶದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನೇತೃತ್ವದ ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಕಾಯ್ದೆಯನ್ನು ಜಾರಿಗೊಳಿಸಿದ್ದರು. ಈ ಯೋಜನೆಯಿಂದಾಗಿ ಸಾವಿರಾರು ಕೆರೆ ಕಟ್ಟೆ, ರಸ್ತೆ, ಚರಂಡಿ, ಕಾಲುವೆಗಳು, ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಕೃಷಿ ಚಟುವಟಿಕೆಗಳಿಗೂ ಕಾಯ್ದೆ ಅನುಕೂಲವಾಗುತ್ತಿತ್ತು ಎಂದರು.…

Read More

ಹಿಂದಿನ ಕಾಲದಲ್ಲಿ ಬಾಲಕ ವರ್ಗ- ಮೊದಲನೇ ವರ್ಗ- ಎರಡನೇ ವರ್ಗ ಹೀಗೆ ಶಿಕ್ಷಣ ಕ್ರಮವಿತ್ತು. ಶ್ರೀಧರರು ಎರಡನೇ ವರ್ಗಕ್ಕೆ ಬಂದಾಗ, ನಡುವೆ ಆರೋಗ್ಯಕೆಟ್ಟು ಹಾಸಿಗೆ ಹಿಡಿದರು. ಬಹಳ ದಿವಸ ಶಾಲೆ ತಪ್ಪಿ ಅಭ್ಯಾಸ ಹಿಂದೆ ಉಳಿಯಿತು. ತೇರ್ಗಡೆ ಆಗುವುದು ಕಷ್ಟ. ತಾಯಿಯ ಬಳಿ ಇದನ್ನು ಹೇಳಿದಾಗ,‌ ಮಗು ನೀನು ಈ ವರ್ಷ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದರೆ ಅದ್ಧೂರಿಯಾಗಿ ನಿನ್ನ ಉಪನಯನ ಮಾಡಿ, ಜರಿಯ ಟೋಪ್ಪಿಗೆ ಹಾಕಿ ಕುದುರೆ ಮೇಲೆ ಹತ್ತಿಸಿ ಮೆರವ ಣಿಗೆ ಮಾಡಿಸುವೆ ಎಂದು ಶ್ರೀಧರ ರಲ್ಲಿ ಉತ್ಸಾಹ ತುಂಬಿದಳು. ಶ್ರೀಧರರು ಯೋಚಿಸ ತೊಡಗಿದರು “ರಾಮನಾಮ ದಿಂದ ಮಾರುತಿ ಸಮುದ್ರವನ್ನೇ ದಾಟಿದ ಎಂದ ಮೇಲೆ ರಾಮನಾಮದಿಂದ ನಾನು ಎರಡನೇ ವರ್ಗವನ್ನು ಸಹಜವಾಗಿ ದಾಟುವೆನು” ಹೀಗೆ ನಿಶ್ಚಯ ಮಾಡಿ ರಾಮನಾಮ ಜಪ ಮಾಡುತ್ತಾ ಏಕಾಗ್ರ ಚಿತ್ತದಿಂದ ಅಭ್ಯಾಸಮಾಡ ತೊಡಗಿದರು. ಪರೀಕ್ಷೆ ದಿನ ಬಂದಿತು. ಅದು ರಾಮ ನಾಮದ ಪರೀಕ್ಷೆಯೇ ಆಗಿತ್ತು. ಪರೀಕ್ಷಕರು ಶ್ರೀಧರರಿಗೆ ಅನೇಕ ಪ್ರಶ್ನೆ ಕೇಳಿದರು. ಪ್ರಧಾನ ಗುರುಗಳು…

Read More

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವ ಇಲ್ಲದ ಆರು ಪಿ.ಜಿ ಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರಾದ ರಾಜೇಂದ್ರ ಚೊಳನ್ ರವರ ಆದೇಶದಂತೆ ಇಂದು 204 ಪೇಯಿಂಗ್ ಗೆಸ್ಟ್ ವಸತಿಗೃಹ ಉದ್ದಿಮೆಗಳನ್ನು ಆರೋಗ್ಯಾಧಿಕಾರಿಯಾದ ಡಾ.ಶಿವಕುಮಾರ್ ಅವರ ನೇತೃತ್ವದಲ್ಲಿ ಚಿಕ್ಕಪೇಟೆ ಮತ್ತು ಶಿವಾಜಿನಗರ ಆರೋಗ್ಯ ವೈದ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ತಪಾಸಣೆ ನಡೆಸಿದ್ದು, ಶುಚಿತ್ವ ಕಾಪಾಡದ 6 ಪಿ.ಜಿ. ಗಳಿಗೆ ಬೀಗ ಮುದ್ರೆ ಹಾಕುವುದರ ಜೊತೆಗೆ ನ್ಯೂನ್ಯತೆಗಳಿರುವ ಪಿ.ಜಿ ಗಳಿಗೆ 1.96 ಲಕ್ಷ ರೂ. ದಂಡ ವಿಧಿಸಲಾಗಿದೆ. ಶಿವಾಜಿನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪೇಯಿಂಗ್ ಗೆಸ್ಟ್ ವಸತಿಗೃಹಗಳಲ್ಲಿ (PGs) ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು FSSAI ನ ಆಹಾರ…

Read More

ಬೆಂಗಳೂರು : ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 2026ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಗೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಇಂದು ಜಿ.ಬಿ.ಎ ಕೇಂದ್ರ ಕಛೇರಿ ಸಭಾಂಗಣ–01 ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು. ಮೈದಾನದಲ್ಲಿ ಸುಮಾರು 100 ಲೋಡ್‌ ಗಳಷ್ಟು ಭಗ್ನಾವಶೇಷಗಳು ಇರುವುದರಿಂದ ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಮೈದಾನ ಪ್ರದೇಶ ಧೂಳು ಹಬ್ಬದಂತೆ ನೀರು ಹಾಕಿ ರೋಲಿಂಗ್ ಮಾಡಬೇಕು. ನಾಗರಿಕರಿಗೆ ಅನುಕೂಲವಾಗುವಂತೆ ತಾತ್ಕಾಲಿಕ ಶೌಚಾಲಯಗಳನ್ನು ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದ ದಿನ ಅತಿಥಿ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ನಾಗರಿಕರಿಗೆ ಸರಿಯಾದ ರೀತಿಯಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕು. ಬಿಸಿಲಿನ ಹಿನ್ನೆಲೆಯಲ್ಲಿ ಸಮರ್ಪಕ ಪೆಂಡಾಲ್ ವ್ಯವಸ್ಥೆಯನ್ನು ಕಲ್ಪಿಸಬೇಕು.…

Read More

ಶಿವಮೊಗ್ಗ: ಶಿವಮೊಗ್ಗ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಇ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿನಗರ, ಆಲ್ಕೋಳ ವೃತ್ತ, ಸಾಗರರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್,…

Read More

ಬೆಂಗಳೂರು: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಆಕ್ಟಿವಿಟಿ ಪಾಯಿಂಟ್ ಅನ್ನು ಆನ್ ಲೈನ್ ನಲ್ಲಿ ನಿರ್ವಹಣೆ ಮಾಡುವುದಕ್ಕಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಎಐಸಿಟಿಇ ಆಕ್ಟಿವಿಟಿ ಪಾಯಿಂಟ್ಸ್ ಟ್ರಾಕಿಂಗ್ ಸಿಸ್ಟಂ”(ಎಪಿಟಿಎಸ್) ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಸರ್.ಎಂ.ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆಯೋಜಿಸಿದ್ದ ಮೊಬೈಲ್ ಆ್ಯಪ್ ಕಾರ್ಯಾಗಾರದಲ್ಲಿ ವಿಟಿಯು ಕುಲಪತಿ ಡಾ.ಎಸ್.ವಿದ್ಯಾಶಂಕರ್ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಕುಲಪತಿ ಡಾ.ಎಸ್.ವಿದ್ಯಾಶಂಕರ್, “ಆಕ್ಟಿವಿಟಿ ಪಾಯಿಂಟ್ ಗಾಗಿ ಸುಳ್ಳು ಪ್ರಮಾಣ ಪತ್ರಗಳನ್ನು ನೀಡುವುದನ್ನು ಬಿಟ್ಟುಬಿಡಿ. ಇನ್ಮುಂದೆ ಇದು ನಡೆಯುವುದಿಲ್ಲ. ಎಲ್ಲವೂ ಮೊಬೈಲ್ ಆ್ಯಪ್ ಮೂಲಕ ಟ್ರ್ಯಾಕ್ ಆಗಲಿದೆ. ಕೇವಲ ಕಾಟಾಚಾರಕ್ಕಾಗಿ ಚಟುವಟಿಕೆಯಲ್ಲಿ ಭಾಗವಹಿಸುವುದು ಬಿಟ್ಟು ಬಿಡಿ. ಯಾವುದೋ ಎನ್ ಜಿಒಗಳ ಮೂಲಕ ಪ್ರಮಾಣ ಪತ್ರಗಳನ್ನು ತರುವುದು ಬಿಡಿ. ಈ ಆ್ಯಪ್ ಮೂಲಕ ರಿಯಲ್ ಟೈಮ್ ಡೇಟಾ ನಮಗೆ ಸಿಗಲಿದೆ” ಎಂದರು. “ವಿದ್ಯಾರ್ಥಿಗಳು ಜೀವನದಲ್ಲಿ ಪ್ರಾಮಾಣಿಕತೆಯನ್ನು ರೂಢಿಸಿಕೊಳ್ಳಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಪಠ್ಯೇತರ…

Read More