Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ ಸುವರ್ಣಸೌಧ: ನಾಳೆ ಸಾಗರ ಜಿಲ್ಲೆಗೆ ಒತ್ತಾಯಿಸಿ ಹೋರಾಟಗಾರರು ಸಾಗರ ಬಂದ್ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಕೇಳಿದಂತ ಪ್ರಶ್ನೆಗೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ನಮ್ಮದೇ ಸರ್ಕಾರ ರಾಜ್ಯದಲ್ಲಿದೆ. ಜಿಲ್ಲೆ ಮಾಡುವುದಾದರೇ ಅದು ಮೊದಲು ಸಾಗರವನ್ನು ಮಾಡಬೇಕು. ಅದಕ್ಕಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೂ ಪತ್ರ ಬರೆಯಲಾಗಿದೆ ಎಂದರು. ನಾಳೆ ಸಾಗರ ಜಿಲ್ಲಾ ಹೋರಾಟ ಸಮಿತಿಯಿಂದ ಸಾಗರ ಬಂದ್ ನಡೆಸಲಾಗುತ್ತಿದೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಸರ್ಕಾರದ ಮಟ್ಟದಲ್ಲಿ ಜಿಲ್ಲೆ ಮಾಡುವುದಕ್ಕೆ ಏನು ಬೇಕೋ ಅದರ ಸಹಕಾರವನ್ನು ನಾನು ನೀಡುತ್ತೇನೆ. ನಾಳೆಯ ಸಾಗರ ಬಂದ್ ಯಶಸ್ವಿಯಾಗಲಿ ಎಂಬುದಾಗಿ ತಿಳಿಸಿದರು. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/amid-sagar-bandh-tomorrow-shahi-garments-announces-holiday-for-employees/ https://kannadanewsnow.com/kannada/mla-gkb-demands-for-a-new-police-station-in-tumari-bakoda-sagar-in-the-house-home-minister-gives-this-reply/
ಮುಂಬೈ : ಜಿಯೋದಿಂದ “ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಗಳು” ಘೋಷಣೆ ಮಾಡಲಾಗಿದೆ. ಇದರ ಮೂಲಕ ಜಿಯೋ ಸಿಮ್ ಬಳಸುವ ಗ್ರಾಹಕರಿಗೆ ಈ ಹಿಂದೆಂದೂ ದೊರೆಯದಂಥ ಬೆನಿಫಿಟ್ ಗಳು ಸಿಗುತ್ತವೆ. ಏನು ಆ ಹೊಸ ವರ್ಷದ ಪ್ಲಾನ್ ಗಳು ಎಂಬ ಮಾಹಿತಿ ಹೀಗಿದೆ: ಹೀರೋ ಆ್ಯನುಯಲ್ ರೀಚಾರ್ಜ್ 3599: ಈ ಪ್ಲಾನ್ ನಲ್ಲಿ ಗ್ರಾಹಕರಿಗೆ ಅನ್ ಲಿಮಿಟೆಡ್ 5ಜಿ, ದಿನಕ್ಕೆ 2.5 ಜಿಬಿ ಡೇಟಾ ದೊರೆಯುತ್ತದೆ. ಇನ್ನು ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗಳು ದೊರೆಯುತ್ತವೆ ಮತ್ತು ಪ್ರತಿ ದಿನ 100 ಎಸ್ಸೆಮ್ಮೆಸ್ ಉಚಿತವಾಗಿ ಸಿಗುತ್ತದೆ. ಈ ಪ್ಲಾನ್ ವ್ಯಾಲಿಡಿಟಿ 365 ದಿನ ಇರುತ್ತದೆ. ಈ ಪ್ಲಾನ್ ನಲ್ಲಿ ವಿಶೇಷ ಆಫರ್ ಸಹ ಒಂದು ಒಳಗೊಂಡಿದೆ. ಅದೇನೆಂದರೆ, 18 ತಿಂಗಳ ಉಚಿತ ಪ್ರೊ ಪ್ಲಾನ್ ‘ಗೂಗಲ್ ಜೆಮಿನಿ’ಯದು ಸಿಗುತ್ತದೆ. ಇದರ ಮೌಲ್ಯ 35,100 ರೂಪಾಯಿ ಆಗಿದೆ. ಆದರೆ ಇದು ಉಚಿತವಾಗಿಯೇ ಒಂದೂವರೆ ವರ್ಷದ ಅವಧಿಗೆ ಜಿಯೋ ಸಿಮ್ ಬಳಕೆ…
ಮಂಡ್ಯ : ಕಂದಾಯ ಇಲಾಖೆಯಿಂದ ನೀಡುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ ಲಗತ್ತಿಸಬೇಕೆಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮದ್ದೂರು ತಾಲೂಕು ಕಛೇರಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ ತಾಲೂಕು ಕಛೇರಿಗೆ ಆಗಮಿಸಿದ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ, ಸೋಮನಹಳ್ಳಿ ಅಂದಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರ ಪಡೆಯಲು ರಾಜ್ಯ ಸರ್ಕಾರ ನ್ಯಾಯಾಲಯದ ಪ್ರಮಾಣ ಪತ್ರ ಲಗತ್ತಿಸಬೇಕೆಂದು ಆದೇಶ ಹೊರಡಿಸಿದೆ. ಆದರೆ, ಈ ಆದೇಶದಿಂದ ಜನಸಾಮಾನ್ಯರಿಗೆ 500 ರೂಪಾಯಿಗೂ ಹೆಚ್ಚು ಖರ್ಚಾಗಲಿದೆ. ಇದರಿಂದ ಜನ ಸಾಮಾನ್ಯರಿಗೆ ಸಾಕಷ್ಟು ಆರ್ಥಿಕವಾಗಿ ಹೊರೆಯಾಗಲಿದ್ದು, ಈ ಹಿಂದೆ ಇದ್ದಂತೆ ಕೆಲವು ದಾಖಲೆಗಳನ್ನು ನೀಡಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ…
ಮಳವಳ್ಳಿ: ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಕೇಂದ್ರ ಬೃಹತ್ ಉಕ್ಕು ಮತ್ತು ಬೃಹತ್ ಕೈಗಾರಿಕಾ ಇಲಾಖೆ ಸಚಿವರು ಹಾಗೂ ಮಂಡ್ಯ ಜಿಲ್ಲೆಯ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದರು. ಅವರು ಇಂದು ಶ್ರೀ ಶಿವರಾತ್ರಿಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066 ನಾನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಳವಳ್ಳಿ ಏಷ್ಯಾ ಖಂಡಕ್ಕೆ ಮೊದಲು ವಿದ್ಯುತ್ ಕಲ್ಪಿಸಿದ ಮೊದಲ ಸ್ಥಳವಾಗಿದ್ದು ಮಳವಳ್ಳಿ ಅನೇಕ ಪ್ರಾಕೃತಿಕ ಸೌಂದರ್ಯವನ್ನು ಹೊಂದಿದೆ. ಕಳೆದ ಬಾರಿ ಸುತ್ತೂರು ಜಾತ್ರೆಗೆ ತೆರಳಿದ್ದಾಗ ಮಠದ ಸ್ವಾಮೀಜಿಗಳೊಂದಿಗೆ ನಮ್ಮ ಜಿಲ್ಲೆಯಲ್ಲಿ ಸುತ್ತೂರು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ಮಾಡಲು ಮನವಿ ಸಲ್ಲಿಸಿದ್ದೆ ಎಂದು ಹೇಳಿದರು. ಸುತ್ತೂರು ಮಠಕ್ಕೂ ನಮ್ಮ ಕುಟುಂಬಕ್ಕೂ 1962 ರಿಂದಲೂ ನಂಟು ಇದೆ. ಮಾಜಿ ಪ್ರಧಾನಿ ಮಂತ್ರಿ ಹೆಚ್.ಡಿ ದೇವೆಗೌಡ ಅವರು ರಾಜಕೀಯ ಪ್ರವೇಶ ಮಾಡಿದಾಗಿನಿಂದಲ್ಲೂ ಸುತ್ತೂರು ಮಠದ ಆಶಿರ್ವಾದ ನಮ್ಮ ಕುಟುಂಬದ ಮೇಲೆ ಇದೆ. ನಮ್ಮ ತಂದೆ…
ಮಳವಳ್ಳಿ : “ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ತಾಣ ಮತ್ತು ದೇಶದ ಅತ್ಯಂತ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ. ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಈ ಮಠವು ಸಾಮಾಜಿಕ ಮತ್ತು ಧಾರ್ಮಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿದೆ” ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಆದಿ ಜಗದ್ ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಭಾಗವಹಿಸಿ ಅವರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. “ಆದಿ ಜಗದ್ ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮಿಜಿ ಭಾರತೀಯ ಸಂತ ಪರಂಪರೆಯ ಪ್ರಕಾಶಮಾನವಾದ ಸ್ತಂಭವಾಗಿದ್ದರು. ಅವರ ಇಡೀ ಜೀವನವು ಕಠಿಣತೆ, ತ್ಯಾಗ, ಕರುಣೆ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಮೀಸಲಾಗಿತ್ತು. ಅವರ ಆಧ್ಯಾತ್ಮಿಕ ಅಭ್ಯಾಸದ ಮೂಲ ಉದ್ದೇಶ ಮಾನವರಲ್ಲಿ ಮಾನವೀಯತೆಯನ್ನು ಜಾಗೃತಗೊಳಿಸುವುದಾಗಿತ್ತು” ಎಂದರು. “ಶಿವಯೋಗ ಸಂಪ್ರದಾಯದ ಮೂಲಕ, ಅವರು ಆತ್ಮಸಾಕ್ಷಾತ್ಕಾರ, ಶಿಸ್ತು ಮತ್ತು ಸೇವೆಯನ್ನು ಸಾಮಾಜಿಕ…
ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ವಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕಾರ್ಯಕ್ರಮ ಇದಾಗಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಸುತ್ತೂರು ಜಗತ್ ಗುರು ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು. ಇಂದು ವಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ನಾನ ಜಿಲ್ಲೆಗಳಲ್ಲಿ ನಡೆದುಕೊಂಡು ಬರುತ್ತಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಸಾವಿರಾರು ವರ್ಷಗಳ ಹಿಂದೆ ಎರಡು ರಾಜ ಮನೆತನಗಳ ನಡುವೆ ಇದಂತಹ ವೈಷಮ್ಯವನ್ನು ಹೋಗಲಾಡಿಸಿ ಸಮಾರಸ್ಯದ, ಪ್ರೀತಿಯ, ಸ್ನೇಹದ ಬೀಜವನ್ನು ಬಿತ್ತಿ ನಾಡಿಗೆ ಕಲ್ಯಾಣ ತಂದವರು ಎಂದು ಹೇಳಿದರು. ಅವರ ಹಾದಿಯಲ್ಲಿ ಬಂದಂತಹ ಎಲ್ಲಾ ಸುತ್ತೂರು…
ಮಂಡ್ಯ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ಜನ್ಮದಿನದ ಅಂಗವಾಗಿ ಮದ್ದೂರು ನಗರದ ವಿವಿಧ ದೇವಾಲಯಗಳ ಅರ್ಚಕರುಗಳು ಮಂಗಳವಾರ ಮಂತ್ರಾಕ್ಷತೆ ಮತ್ತು ಫಲ ತಾಂಬೂಲ ನೀಡಿ ಆಶೀರ್ವದಿಸಿದರು. ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿನ ಶ್ರೀ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ ಅವರು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಸಾವಿರಾರು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೈಕಾರ ಹಾಕಿ ಬೃಹತ್ ಹೂವಿನ ಹಾರಗಳನ್ನು ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ, ಸಚಿವ ಕುಮಾರಸ್ವಾಮಿ ಅವರಿಗೆ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ಪ್ರದೀಪ ಆಚಾರ್ಯ, ಸಹ ಅರ್ಚಕ ಸುರೇಶ ಆಚಾರ್ಯ, ಶ್ರೀ ಉಗ್ರ ನರಸಿಂಹ ಸ್ವಾಮಿ ದೇಗುಲದ ಅರ್ಚಕ ಪ್ರಶಾಂತ್, ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಅರ್ಚಕ ರಾಘವೇಂದ್ರ ಅವರುಗಳ ತಂಡ ಕುಮಾರಸ್ವಾಮಿ ಅವರಿಗೆ ಶೇಷ ವಸ್ತ್ರ, ತೀರ್ಥ ಪ್ರಸಾದ…
ಬೆಳಗಾವಿ ಸುವರ್ಣಸೌಧ: ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು ರೂಪಿಸುವದರಿಂದ ತಡೆಗಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ. ಯಾಕೆಂದರೆ ಯಾರೂ ಒತ್ತಾಯ ಪೂರ್ವಕವಾಗಿ ಮಾಡಿಕೊಳ್ಳುತ್ತಿಲ್ಲ. ತಂತ್ರಜ್ಞಾನದ ಸಹಾಯವನ್ನೂ ಪಡೆದುಕೊಳ್ಳುತ್ತಿದ್ದಾರೆ. ಓರಲ್ ಔಷಧದ ಸೇವನೆಯಿಂದಲೂ ನಡೆಯುತ್ತಿದೆ. ಈಗಂತೂ ಅಲ್ಟ್ರಾಸೌಂಡ್ ಪೋರ್ಟೆಬಲ್ ಸ್ಕಾನಿಂಗ್ ಯಂತ್ರದಿಂದ ಅತ್ಯಂತ ಸಣ್ಣ ಸ್ಥಳದಲ್ಲಿಯೂ ಪರೀಕ್ಷೆ ನಡೆಸಬಹುದಾಗಿದೆ. ಪ್ರತಿ ಜಿಲ್ಲೆಯ ಡೇಟಾ ಪರಿಶೀಲನೆ ನಡೆಸಿ, ಹೆಚ್ಚು ಗಂಡುಮಕ್ಕಳು ಜನಿಸುವ ಆಸ್ಪತ್ರೆಗಳ ಮೇಲೆ ನಿಗಾ ಇಟ್ಟಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಜಾಗೃತಿ ಮೂಡಿಸುತ್ತಿದ್ದೇವೆ. ಮಾಹಿತಿ ನೀಡಿದವರ ವಿವರ ಗೌಪ್ಯವಾಗಿಟ್ಟು ಬಹುಮಾನವನ್ನು ನೀಡುತ್ತಿದ್ದೇವೆ. ಪ್ರತಿ ಜಿಲ್ಲೆಗೂ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡುತ್ತಿದ್ದೇವೆ. ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗುಪ್ತ ಕಾರ್ಯಾಚರಣೆ ಸಹ ನಡೆಸುತ್ತಿದ್ದೇವೆ.…
ಬೆಳಗಾವಿ ಸುವರ್ಣಸೌಧ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಸ್ಥಳ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ತುಮರಿ- ಬ್ಯಾಕೋಡು ಭಾಗದಲ್ಲಿ ಹೊಸದಾಗಿ ಪೊಲೀಸ್ ಠಾಣೆಯನ್ನು ಆರಂಭಿಸುವಂತೆ ಸದನದಲ್ಲೇ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪಟ್ಟು ಹಿಡಿದರು. ಇದಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪುನರ್ ಪರಿಶೀಲನೆ ನಡೆಸಲಾಗುವುದು ಎಂಬುದಾಗಿ ಉತ್ತರಿಸಿದೆ. ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಈಗಾಗಲೇ ಶರಾವತಿ ನದಿಗೆ ಸೇತುವೆ ಕಟ್ಟಿರುವ ಹಿನ್ನೆಲೆಯಲ್ಲಿ ಸಿಗಂದೂರು ಚೌಡೇಶ್ವರಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಕೋಡು ಉಪಠಾಣೆ ಕಾರ್ಯ ನಿರ್ವಹಿಸುತ್ತಿದೆ. ಸದರಿ ಉಪ ಠಾಣೆಯಲ್ಲಿ ಮೇಲ್ದರ್ಜೆಗೆ ಏರಿಸಿ ಹೊಸ ಪೊಲೀಸ್ ಠಾಣೆ ಆರಂಭಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್, ಶರಾವತಿ ನದಿಗೆ ಸೇತುವೆ ಆಗಿರುವ ಹಿನ್ನೆಲೆಯಲ್ಲಿ…
ಬೆಳಗಾವಿ ಸುವರ್ಣಸೌಧ: ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಅನುಷ್ಠಾನಗೊಳಿಸಲಾಗಿದ್ದು, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಖಾಸಗಿ ಶಾಲೆಗಳಿಗೆ ನಿಯಮದಂತೆ ದಂಡ ವಿಧಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೊಂದಣಿ ಮಾಡುವಾಗ, ಕನ್ನಡ ಭಾಷೆ ಕಲಿಕಾ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಲು ಇಲಾಖಾ ನಿಯಮಗಳನ್ನು ರೂಪಿಸಲಾಗಿದ್ದು, ಅದರಂತೆ ಷರತ್ತುಗಳಿಗೆ ಒಳಪಡಿಸಿ, ನೊಂದಣಿಯನ್ನು ನೀಡಲಾಗುತ್ತಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವ ಸಂದರ್ಭದಲ್ಲಿಯೂ ಸಹ ಕನ್ನಡ ಭಾಷೆ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ಮಾನ್ಯತೆಯನ್ನು ನೀಡಲಾಗುತ್ತಿದೆ ಎಂದರು. ಉಚಿತ ಹಾಗೂ ಕಡ್ಡಾಯ ಶಿಕ್ಷಣ ನಿಯಮದಡಿ ರಾಜ್ಯದಲ್ಲಿ…













