Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾವೇರಿ ನದಿಗೆ ಅಡ್ಡಲಾಗಿ ಮೇಖೆದಾಟು ಬಳಿ ಅಣೆಕಟ್ಟು ನಿರ್ಮಿಸಲು ಮುಂದಾಗಿರುವ ಕರ್ನಾಟಕ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ಐತಿಹಾಸಿಕ ವಿರೋಧ ನಿರ್ಣಯವನ್ನು ಅಂಗೀಕರಿಸಲಾಗಿದೆ. ತಮಿಳುನಾಡು ಸರ್ಕಾರದ ಈ ಕ್ರಮವನ್ನು ನಟ, ರಾಜಕಾರಣಿ ಕಮಲ್ ಹಾಸನ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ​ಒಗ್ಗಟ್ಟು ಪ್ರದರ್ಶಿಸಿದ ತಮಿಳುನಾಡು ನಾಯಕರು ​ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥರಾದ ವಿಜಯ್ ಅವರು ವಿಧಾನಸಭೆಯಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ವಿಶೇಷ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಪಕ್ಷಾತೀತವಾಗಿ ತಮಿಳುನಾಡಿನ ಎಲ್ಲಾ ಶಾಸಕರು ಮತ್ತು ರಾಜಕೀಯ ಪಕ್ಷಗಳು ಒಮ್ಮತದ ಬೆಂಬಲ ಸೂಚಿಸಿ, ಸರ್ವಾನುಮತದಿಂದ ಅಂಗೀಕರಿಸಿವೆ. ​ಕಮಲ್ ಹಾಸನ್ ಟ್ವೀಟ್‌ನ ಮುಖ್ಯಾಂಶಗಳು: ​ಟ್ವಿಟರ್ (X) ಮೂಲಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಲ್ ಹಾಸನ್, ತಮಿಳುನಾಡು ಸರ್ಕಾರದ ನಡೆಯನ್ನು ಬೆಂಬಲಿಸಿ ಈ ಕೆಳಗಿನಂತೆ ಬರೆದುಕೊಂಡಿದ್ದಾರೆ: ​ನ್ಯಾಯಾಲಯದ ಆದೇಶ…

Read More

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆರ್ಥಿಕ ಹೊರೆಯ ಆತಂಕ ಎದುರಾಗಿದೆ. ರಾಜ್ಯದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ (KSRTC Bus Fare) ಹೆಚ್ಚಳಕ್ಕೆ ಸಾರಿಗೆ ನಿಗಮಗಳು ಪ್ರಸ್ತಾಪ ಇಟ್ಟ ಬೆನ್ನಲ್ಲೇ, ಖಾಸಗಿ ಬಸ್‌ಗಳ ಟಿಕೆಟ್ ದರ ಕೂಡ ಜೂನ್ 9 ರಿಂದಲೇ ಗಣನೀಯವಾಗಿ ಹೆಚ್ಚಳವಾಗಿದ್ದು ಪ್ರಯಾಣಿಕರು ಕಂಗಾಲಾಗಿದ್ದಾರೆ. ಸರ್ಕಾರಿ ಬಸ್ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಅಧಿಕೃತ ಮನವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಸಾರಿಗೆ ನಿಗಮಗಳು ಸರ್ಕಾರದ ಮುಂದೆ ಅಧಿಕೃತ ಪ್ರಸ್ತಾಪವನ್ನು ಮಂಡಿಸಿವೆ. ದರ ಹೆಚ್ಚಳದ ಬೇಡಿಕೆಗೆ ನಿಗಮಗಳು ನೀಡಿರುವ ಪ್ರಮುಖ ಕಾರಣಗಳು: ಇಂಧನ ದರ ಏರಿಕೆ: ಇತ್ತೀಚಿನ ದಿನಗಳಲ್ಲಿ ಡೀಸೆಲ್ ದರ ಗಣನೀಯವಾಗಿ ಏರಿಕೆಯಾಗಿರುವುದು. ವೇತನ ಬಾಕಿ ಹೊರೆ: ಸಾರಿಗೆ ಸಿಬ್ಬಂದಿಗಳ ಒಟ್ಟು ವೇತನ ಬಾಕಿ ಇರುವ ₹1,271…

Read More

ಬೆಂಗಳೂರು: ಟೌನ್ ಶಿಪ್ ನೆಪದಲ್ಲಿ ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಜೆಡಿಎಸ್ ಪಕ್ಷವು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿತು. ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಹೆಚ್ಎಂ ರಮೇಶ್ ಗೌಡ ಅವರ ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿಯಾದ ಪಕ್ಷದ ನಿಯೋಗವು, ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ ಇದ್ದು ಅದನ್ನು ರಿಯಲ್ ಎಸ್ಟೇಟ್ ಉದ್ದೇಶದ ಟೌನ್ಷಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ ಎಂದು ಮುಖ್ಯ ಕಾರ್ಯದರ್ಶಿಗೆ ದೂರಿತು. ಈಗಾಗಲೇ ಮೊದಲ ಹಂತದ ಭೂಸ್ವಾದಿನದ ನೋಟಿಫಿಕೇಶನ್ ಹೊರಟಿಸಿರುವ ರಾಜ್ಯ ಸರ್ಕಾರವು ಸಂಪೂರ್ಣವಾಗಿ ರೈತ ವಿರೋಧಿ ನಿಲುವು ತಳೆದಿದ್ದು, ಮುಂದಿನ ತಿಂಗಳು ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ಸರ್ಕಾರದ ನಿಲುವು ಹಾಗೂ ಭೂಸ್ವಾಧೀನ ಯೋಜನೆಯನ್ನು ಕೂಡಲೇ ಕೈ ಬಿಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ಪತ್ರವನ್ನು ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದೇವೆ ಎಂದು ಹೆಚ್.ಎಂ. ರಮೇಶ್ ಗೌಡ ಅವರು…

Read More

ಮಂಡ್ಯ : ನಗರ ಪ್ರದೇಶಗಳ ಮಕ್ಕಳಿಗೆ ಸಿಗುವ ಗುಣಮಟ್ಟದ ಶಿಕ್ಷಣದ ರೀತಿಯಲ್ಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ತಮ ಶಿಕ್ಷಣ ಸಿಗಬೇಕೆಂಬ ದೃಷ್ಟಿಯಿಂದ ತಾಲೂಕಿಗೆ 5 ( ಕರ್ನಾಟಕ ಪಬ್ಲಿಕ್ ಶಾಲೆ ) ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಅನುದಾನ ಮತ್ತು ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ನೂತನ ಕೆಪಿಎಸ್ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. ಈ ಹಿಂದೆ ತಾಲೂಕಿನಲ್ಲಿ ಒಂದು ಕೆಪಿಎಸ್ ಶಾಲೆ ಮಾತ್ರ ಇತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವರಾಗಿದ್ದ ಮಧು ಬಂಗಾರಪ್ಪ ಅವರ ಬಳಿ ಸಾಕಷ್ಟು ಮನವಿ ಮಾಡಿ ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು ಮಾಡಿಸಲಾಗಿದ್ದು, ಕೊಪ್ಪ, ಮದ್ದೂರು ನಗರ, ಕೆ.ಬೆಳ್ಳೂರು, ಅಣ್ಣೂರು, ಮಲ್ಲನಕುಪ್ಪೆ ಗ್ರಾಮದಲ್ಲಿ ಆದಷ್ಟು ಬೇಗ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು. ರಾಜ್ಯ ಸರ್ಕಾರ ಗ್ರಾಮೀಣ…

Read More

ಮಂಡ್ಯ: ರಾಜ್ಯ ಬಿಜೆಪಿಯಲ್ಲಿ ಸದ್ಯ ನಾಯಕತ್ವದ ತೀವ್ರ ಕೊರತೆ ಎದ್ದು ಕಾಣುತ್ತಿದ್ದು, ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮುಂಬರುವ ದಿನಗಳಲ್ಲಿ ವಿರೋಧ ಪಕ್ಷದ ಹಲವು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವುದು ನಿಶ್ಚಿತ ಎಂದು ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಭವಿಷ್ಯ ನುಡಿದಿದ್ದಾರೆ. ಮದ್ದೂರು ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿರುವುದನ್ನು ಉಲ್ಲೇಖಿಸಿ ಮೈತ್ರಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಆಮಿಷವಿಲ್ಲದೇ ಗೆದ್ದ ‘ಕೈ’ ಅಭ್ಯರ್ಥಿಗಳು; ಮೈತ್ರಿಗೆ ಮುಖಭಂಗ ವಿಧಾನ ಪರಿಷತ್ ಚುನಾವಣೆಯ ಗೆಲುವಿನ ಕುರಿತು ಮಾತನಾಡಿದ ಶಾಸಕರು, “ನಮ್ಮ ಪಕ್ಷದ ಅಭ್ಯರ್ಥಿಗಳು ಬಿಜೆಪಿ ಅಥವಾ ಜೆಡಿಎಸ್ ಶಾಸಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮತಯಾಚನೆ ಮಾಡಿರಲಿಲ್ಲ. ಯಾವುದೇ ರೀತಿಯ ಆಸೆ-ಆಮಿಷಗಳನ್ನೂ ಒಡ್ಡಿರಲಿಲ್ಲ. ಸಂಪೂರ್ಣ ಗೌಪ್ಯ ಮತದಾನದ ಮೂಲಕವೇ ಈ ಚುನಾವಣೆ ನಡೆದಿದೆ. ಆದರೂ ವಿಪಕ್ಷಗಳ ಶಾಸಕರು ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ ಎಂದರೆ ಅದಕ್ಕೆ ಅವರ ಪಕ್ಷದಲ್ಲಿರುವ…

Read More

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ದೊಡ್ಡ ರಿಲೀಫ್ ನೀಡಿದೆ. ಯೋಜನೆಗಳ ಮುಂದುವರಿಕೆ ಹಾಗೂ ಪರಿಷ್ಕರಣೆಗಾಗಿ ಫಲಾನುಭವಿಗಳು ಮತ್ತೆ ಸಾಲಿನಲ್ಲಿ ನಿಂತು ಮರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂಬ ಮಹತ್ವದ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ. ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುವ ಬದಲು, ಸದ್ಯ ಸೌಲಭ್ಯ ಪಡೆಯುತ್ತಿರುವವರ ಪಟ್ಟಿಯನ್ನೇ ಮರುಪರಿಶೀಲನೆ ನಡೆಸಲು ಆಡಳಿತ ಮಂಡಳಿ ನಿರ್ಧರಿಸಿದೆ. 3 ದಿನಗಳಲ್ಲಿ ಪರಿಶೀಲನಾ ಮಾರ್ಗಸೂಚಿ ಸಿದ್ಧಕ್ಕೆ ಆದೇಶ ಪ್ರಸ್ತುತ ಇರುವ ಫಲಾನುಭವಿಗಳ ಅರ್ಹತೆಯನ್ನು ತಳಮಟ್ಟದಲ್ಲಿ ಹೇಗೆ ಮತ್ತು ಯಾರು ಪರಿಶೀಲಿಸಬೇಕು ಎಂಬುದರ ಕುರಿತು ಕೇವಲ ಮೂರು ದಿನಗಳ ಒಳಗೆ ಸಮಗ್ರ ನೀತಿ-ನಿಯಮಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದೆ. ಸರ್ಕಾರದ ಕಟ್ಟುನಿಟ್ಟಿನ ನಿಲುವು: ಸೌಲಭ್ಯಕ್ಕೆ ಅರ್ಹರಾಗಿರುವ ಯಾವುದೇ ಒಬ್ಬ ಬಡ ಕುಟುಂಬಕ್ಕೂ ಯೋಜನೆಯಿಂದ ವಂಚಿತವಾಗಬಾರದು.…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಫಲಾನುಭವಿಗಳು ಮತ್ತೊಮ್ಮೆ ಮರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಕ್ರವಾರ ಗ್ಯಾರಂಟಿ ಸಮಿತಿ ಹಾಗೂ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ, ಹೊಸದಾಗಿ ಮರು ಅರ್ಜಿ ಪಡೆಯುವ ಬದಲಾಗಿ, ಪ್ರಸ್ತುತ ಇರುವ ಫಲಾನುಭವಿಗಳ ಪಟ್ಟಿಯನ್ನೇ ಮರುಪರಿಶೀಲನೆ (Re-verification) ಮಾಡಲು ತೀರ್ಮಾನಿಸಲಾಗಿದೆ. ಮೂರೇ ದಿನದಲ್ಲಿ ವರದಿ ನೀಡಲು ಸಿಎಂ ಗಡುವು ಈಗಿರುವ ಫಲಾನುಭವಿಗಳ ಮರುಪರಿಶೀಲನೆಯನ್ನು ಯಾರು ಮಾಡಬೇಕು ಮತ್ತು ಯಾವ ಮಾನದಂಡಗಳ ಆಧಾರದ ಮೇಲೆ ಮಾಡಬೇಕು ಎಂಬುದನ್ನು ಮುಂದಿನ ಮೂರು ದಿನಗಳ ಒಳಗಾಗಿ ಅಂತಿಮಗೊಳಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಕಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಟ್ಟುನಿಟ್ಟಿನ ಆದೇಶ: “ಯೋಜನೆಯ ಮರುಪರಿಶೀಲನೆ ನೆಪದಲ್ಲಿ ಒಬ್ಬೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ,…

Read More

ಬೆಂಗಳೂರು: ಬಿಜೆಪಿಯ “ನಾನೂ ಕರಸೇವಕ, ನನ್ನನ್ನೂ ಬಂಧಿಸಿ” ಅಭಿಯಾನದ ಪೋಸ್ಟರ್ ಅನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ಸಮಾಧಾನ ಸಿಕ್ಕಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಈ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್‌ನಿಂದ ಪ್ರಕರಣ ರದ್ದು: ನ್ಯಾಯಪೀಠದ ಆದೇಶ ಫೋರ್ಜರಿ ಹಾಗೂ ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಖಾಸಗಿ ದೂರನ್ನು ರದ್ದುಗೊಳಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಉಪಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿ ಆದೇಶಿಸಿದೆ. ವಿಚಾರಣೆಯ ವೇಳೆ ಡಿ.ಕೆ.ಶಿವಕುಮಾರ್ ಅವರ ಪರವಾಗಿ ವಕೀಲ ಹೆಚ್.ವಿ. ಪ್ರವೀಣ್ ಗೌಡ ಅವರು ವಾದ ಮಂಡಿಸಿ, “ಡಿ.ಕೆ.ಶಿವಕುಮಾರ್ ಅವರು ಸ್ವತಃ ಈ ಪೋಸ್ಟ್ ಅನ್ನು ಹಂಚಿಕೊಂಡಿಲ್ಲ” ಎಂದು ನ್ಯಾಯಾಲಯದ ಗಮನಕ್ಕೆ…

Read More

ನವದೆಹಲಿ: ದೇಶಾದ್ಯಂತ ಅತ್ಯಂತ ಜನಪ್ರಿಯ ಸಾಮಾಜಿಕ ಜಾಲತಾಣವಾಗಿರುವ ವಾಟ್ಸ್ಅಪ್ (WhatsApp) ಮೆಸೆಂಜರ್‌ನ ಡೆಸ್ಕ್‌ಟಾಪ್ ಆವೃತ್ತಿಯಾದ ‘ವಾಟ್ಸ್ಅಪ್ ವೆಬ್’ (WhatsApp Web) ಸೇವೆ ದಿಢೀರ್ ಕೈಕೊಟ್ಟಿದೆ. ಶುಕ್ರವಾರ ಮಧ್ಯಾಹ್ನದಿಂದಲೇ ದೇಶದ ವಿವಿಧ ಭಾಗಗಳಲ್ಲಿ ಈ ತಾಂತ್ರಿಕ ಅಡಚಣೆ ಕಾಣಿಸಿಕೊಂಡಿದ್ದು, ಕಚೇರಿ ಕೆಲಸಗಳಿಗಾಗಿ ಕಂಪ್ಯೂಟರ್ ಹಾಗೂ ಲ್ಯಾಪ್‌ಟಾಪ್‌ಗಳಲ್ಲಿ ವಾಟ್ಸ್ಅಪ್ ಬಳಸುವ ಲಕ್ಷಾಂತರ ಬಳಕೆದಾರರು ತೀವ್ರ ಪರದಾಡುವಂತಾಗಿದೆ. ಲಾಗಿನ್ ಆಗದೆ ನಿಂತುಹೋದ ಸೇವೆ; ಕಚೇರಿ ಕೆಲಸಗಳಿಗೆ ಬ್ರೇಕ್ ಸಾಮಾನ್ಯವಾಗಿ ಕಚೇರಿಗಳಲ್ಲಿ ಫೈಲ್‌ಗಳು, ಲಿಂಕ್‌ಗಳು ಹಾಗೂ ಪ್ರಮುಖ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳಲು ವಾಟ್ಸ್ಅಪ್ ವೆಬ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ ಇಂದು ಮಧ್ಯಾಹ್ನದಿಂದ ಕರಡು ಪ್ರತಿ ಅಥವಾ ಕ್ಯೂಆರ್ ಕೋಡ್ (QR Code) ಸ್ಕ್ಯಾನ್ ಮಾಡಿದರೂ ‘ಪೇಜ್ ಲೋಡ್’ ಆಗುತ್ತಿಲ್ಲ. ಇನ್ನು ಕೆಲವು ಬಳಕೆದಾರರಿಗೆ ಸಂದೇಶಗಳು ಸಾಗದ ಹಾಗೂ ‘ಕನೆಕ್ಟಿಂಗ್’ ಎಂಬ ಪ್ರದರ್ಶನ ಮಾತ್ರ ಕಾಣಿಸುತ್ತಿದೆ. ಇದರಿಂದಾಗಿ ದೈನಂದಿನ ಕಚೇರಿ ಕೆಲಸ-ಕಾರ್ಯಗಳಿಗೆ ಭಾರಿ ಹಿನ್ನಡೆಯಾಗಿದೆ. ಡೌನ್‌ಡಿಟೆಕ್ಟರ್‌ನಲ್ಲಿ ಹರಿದುಬಂದ ದೂರುಗಳ ಮಹಾಪೂರ ಜಾಗತಿಕ ವೆಬ್‌ಸೈಟ್‌ಗಳ ಏರಿಳಿತಗಳನ್ನು ಗಮನಿಸುವ ‘ಡೌನ್‌ಡಿಟೆಕ್ಟರ್’…

Read More

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಕೆ.ಆರ್. ನಂದಿನಿ ಅವರ ಸರ್ಕಾರಿ ಕಾರಿಗೆ ಮತ್ತೊಂದು ಕಾರು ರಭಸವಾಗಿ ಡಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಸಿಇಒ ಅವರ ಅಧಿಕೃತ ವಾಹನ ಜಖಂಗೊಂಡಿದ್ದು, ಅದೃಷ್ಟವಶಾತ್ ಅಧಿಕಾರಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯಾಹ್ನದ ಊಟ ಮುಗಿಸಿ ಹೊರಡುವಾಗ ನಡೆದ ಅವಘಡ ಜಿ.ಪಂ. ಸಿಇಒ ಕೆ.ಆರ್. ನಂದಿನಿ ಅವರು ಮಧ್ಯಾಹ್ನ ತಮ್ಮ ನಿವಾಸಕ್ಕೆ ಊಟಕ್ಕೆ ಬಂದಿದ್ದರು. ಊಟ ಮುಗಿಸಿ ಮರಳಿ ಕಚೇರಿ ಕರ್ತವ್ಯಕ್ಕೆ ಹಾಜರಾಗಲು ತಮ್ಮ ಸರ್ಕಾರಿ ನಿವಾಸದ ಮುಂಭಾಗದಲ್ಲೇ ಕಾರು ಹತ್ತಿ ಹೊರಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ನಿವಾಸದ ಮುಂದೆಯೇ ನಿಯಂತ್ರಣ ತಪ್ಪಿ ಬಂದ ಮತ್ತೊಂದು ಕಾರು ಸಿಇಒ ಅವರ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದೆ. ರಭಸಕ್ಕೆ ಸ್ಫೋಟಗೊಂಡ ಟೈರ್; ಮುಂಭಾಗ ಜಖಂ ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಸಿಇಒ ಅವರ ಸರ್ಕಾರಿ ಕಾರಿನ ಟೈರ್ ಸ್ಥಳದಲ್ಲೇ ಭೀಕರವಾಗಿ ಸ್ಫೋಟಗೊಂಡಿದೆ. ಅಲ್ಲದೆ ಕಾರಿನ ಮುಂಭಾಗದ ಭಾಗಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ…

Read More