Author: kannadanewsnow09

ಕ್ಯಾಲಿಫೋರ್ನಿಯಾ: ಖ್ಯಾತ ಅಂತರಾಷ್ಟ್ರೀಯ ಪಾಪ್ ಗಾಯಕಿ ಬ್ರಿಟ್ನಿ ಸ್ಪಿಯರ್ಸ್ (Britney Spears) ಅವರನ್ನು ಮದ್ಯಪಾನ ಮಾಡಿ ವಾಹನ ಚಲಾಯಿಸಿದ (DUI) ಶಂಕೆಯ ಮೇಲೆ ಕ್ಯಾಲಿಫೋರ್ನಿಯಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬುಧವಾರ ತಡರಾತ್ರಿ ಬ್ರಿಟ್ನಿ ಸ್ಪಿಯರ್ಸ್ ಚಲಾಯಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರು, ಅವರು ಅಮಲಿನಲ್ಲಿರುವುದನ್ನು ಗಮನಿಸಿ ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ಪೊಲೀಸ್ ಕೇಂದ್ರದಲ್ಲಿ ಅವರನ್ನು ವಿಚಾರಣೆಗೊಳಪಡಿಸಿ, ದಾಖಲೆಗಳನ್ನು ಪೂರೈಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಇನ್ನೂ ಅಧಿಕೃತವಾಗಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿಲ್ಲ. ಸದ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಖ್ಯಾತಿಯ ಹಿನ್ನೆಲೆ: 90ರ ದಶಕದ ಅಂತ್ಯದಲ್ಲಿ ‘…Baby One More Time’ ಮತ್ತು ‘Toxic’ ನಂತಹ ಜಗತ್ಪ್ರಸಿದ್ಧ ಹಾಡುಗಳ ಮೂಲಕ ಬ್ರಿಟ್ನಿ ಸ್ಪಿಯರ್ಸ್ ಜಾಗತಿಕವಾಗಿ ಮನೆಮಾತಾಗಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ ಅಪಾರ ಜನಪ್ರಿಯತೆ ಗಳಿಸಿರುವ ಅವರು, ಹಲವು ಬಾರಿ ವೈಯಕ್ತಿಕ ಕಾರಣಗಳಿಂದಾಗಿ ಸುದ್ದಿಯಲ್ಲಿದ್ದರು. ಇದೀಗ ಈ ಬಂಧನದ ಘಟನೆ ಅವರ ಅಭಿಮಾನಿಗಳಲ್ಲಿ ಮತ್ತು ಸಂಗೀತ ಲೋಕದಲ್ಲಿ ಭಾರಿ ಚರ್ಚೆಗೆ…

Read More

​ರಾಯಚೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಹೊರಹೊಮ್ಮುತ್ತಿರುವ ‘ಪ್ರಜಾ ಸಮರ’ ಪತ್ರಿಕೆಯು ಈಗ ತನ್ನದೇ ಆದ ನೂತನ ಮುದ್ರಣಾಲಯದೊಂದಿಗೆ ಹೊಸ ಆಯಾಮಕ್ಕೆ ತೆರೆದುಕೊಂಡಿದೆ. ನಗರದ ಹೊರವಲಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ, ಪತ್ರಿಕೆಯ ನೂತನ ಮುದ್ರಣ ಯಂತ್ರಕ್ಕೆ ಚಾಲನೆ ನೀಡುವ ಮೂಲಕ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಲೋಕಾರ್ಪಣೆ ಮಾಡಲಾಯಿತು. ​ಖ್ಯಾತ ಕವಿಗಳಾದ ಚಿದಾನಂದ ಸಾಲಿ ಅವರು ಮುದ್ರಣ ಯಂತ್ರಕ್ಕೆ ವಿಧಿವತ್ತಾಗಿ ಚಾಲನೆ ನೀಡಿ ಮಾತನಾಡಿ ತಂತ್ರಜ್ಞಾನದ ಇಂದಿನ ಯುಗದಲ್ಲಿ ಮುದ್ರಣ ಮಾಧ್ಯಮಗಳು ಎದುರಿಸುತ್ತಿರುವ ಸವಾಲುಗಳ ನಡುವೆಯೂ, ಸ್ವಂತ ಮುದ್ರಣಾಲಯ ಸ್ಥಾಪಿಸಿ ಪತ್ರಿಕೆಯನ್ನು ಮುನ್ನಡೆಸುತ್ತಿರುವುದು ಶ್ಲಾಘನೀಯ. ಪ್ರಜಾ ಸಮರ ಪತ್ರಿಕೆಯು ಜನಪರ ಕಾಳಜಿಯೊಂದಿಗೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು. ​ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾವಂತಗೇರಿ ಅವರು ಪತ್ರಿಕೆಯ ಬಿಡುಗಡೆ ನೆರವೇರಿಸಿ ಮಾತನಾಡಿ ನೌಕರರ ಸಮಸ್ಯೆಗಳಿರಲಿ ಅಥವಾ ಸಮಾಜದ ತಳಮಟ್ಟದ ಜನರ ಧ್ವನಿಯಾಗಿರಲಿ, ಪತ್ರಿಕೆಗಳು ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಪ್ರಜಾ ಸಮರ ಪತ್ರಿಕೆಯು ಆ ಜವಾಬ್ದಾರಿಯನ್ನು ಸಮರ್ಥವಾಗಿ…

Read More

ಗುವಾಹಟಿ: ಅಸ್ಸಾಂನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ಭಾರತೀಯ ವಾಯುಪಡೆಯ (IAF) ಸುಖೋಯ್-30MKI (Su-30MKI) ಯುದ್ಧ ವಿಮಾನವೊಂದು ರೇಡಾರ್ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದೆ. ಘಟನೆ: ವಿಮಾನವು ಹಾರಾಟದ ನಡುವೆ ಇದ್ದಕ್ಕಿದ್ದಂತೆ ರೇಡಾರ್ ಸಂಪರ್ಕದಿಂದ ಕಡಿತಗೊಂಡಿದೆ. ತನಿಖೆ: ವಿಮಾನದ ನಿಖರವಾದ ಸ್ಥಳ ಮತ್ತು ಸ್ಥಿತಿಯನ್ನು ಪತ್ತೆಹಚ್ಚಲು ಭಾರತೀಯ ವಾಯುಪಡೆಯು ಈಗಾಗಲೇ ವಿಶೇಷ ತಂಡವೊಂದನ್ನು ಕಾರ್ಯಾಚರಣೆಗೆ ನಿಯೋಜಿಸಿದೆ. ತೀವ್ರ ಶೋಧ: ವಿಮಾನವು ನಾಪತ್ತೆಯಾದ ಸಂಭವನೀಯ ಪ್ರದೇಶಗಳಲ್ಲಿ ಪತ್ತೆ ಕಾರ್ಯ ಚುರುಕುಗೊಂಡಿದ್ದು, ವಾಯುಪಡೆಯ ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಿಮಾನದಲ್ಲಿದ್ದ ಪೈಲಟ್‌ಗಳ ಬಗ್ಗೆ ಮತ್ತು ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಸದ್ಯ ನಿರೀಕ್ಷಿಸಲಾಗುತ್ತಿದೆ. https://TWITTER.com/ANI/status/2029582123678712146

Read More

ಗುವಾಹಟಿ: ಭಾರತೀಯ ವಾಯುಪಡೆಯ ಸುಖೋಯ್-30 MKI (Su-30 MKI) ಯುದ್ಧ ವಿಮಾನವೊಂದು ರೇಡಾರ್ ಸಂಪರ್ಕದಿಂದ ನಾಪತ್ತೆಯಾಗಿದೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು (Defence PRO) ತಿಳಿಸಿದ್ದಾರೆ. ನಾಪತ್ತೆ: ತರಬೇತಿ ಹಾರಾಟದ ವೇಳೆಯಲ್ಲಿ ವಿಮಾನವು ಹಠಾತ್ತಾಗಿ ರೇಡಾರ್ ಸಂಪರ್ಕ ಕಳೆದುಕೊಂಡಿದೆ. ಕಾರ್ಯಾಚರಣೆ: ವಿಮಾನ ಪತ್ತೆಗಾಗಿ ಮತ್ತು ಘಟನೆಯ ಹಿಂದಿನ ನಿಖರ ಕಾರಣಗಳನ್ನು ತಿಳಿಯಲು ವಾಯುಪಡೆಯ ವಿಶೇಷ ತಂಡವು ಈಗಾಗಲೇ ಶೋಧ ಕಾರ್ಯವನ್ನು ಆರಂಭಿಸಿದೆ. ಸ್ಥಳ: ಗುವಾಹಟಿ ವಲಯದ ರೇಡಾರ್ ವ್ಯಾಪ್ತಿಯಿಂದ ವಿಮಾನವು ಹೊರಹೋಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ವಾಯುಪಡೆಯ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾಪತ್ತೆಯಾಗಿರುವಂತ ಯುದ್ಧ ವಿಮಾನದ ಹುಡುಕಾಟವನ್ನು ಮಾಡಲಾಗುತ್ತಿದೆ. https://TWITTER.com/ANI/status/2029582123678712146 https://kannadanewsnow.com/kannada/useful-information-for-the-public-keep-these-emergency-phone-numbers-on-your-mobile/ https://kannadanewsnow.com/kannada/transport-department-has-been-admitted-to-icu-due-to-corrupt-congress-governments-guarantee-woes-jds/

Read More

ಉತ್ತರ ಕನ್ನಡ: ಮಕ್ಕಳು, ಮಹಿಳೆಯರು, ವಯೋವೃದ್ದರು ಹಾಗೂ ಸಾರ್ವಜನಿಕರಿಗೆ ಅತ್ಯಂತ ಅಗತ್ಯ ಮತ್ತು ಅವಶ್ಯಕ ಸೇವೆಗಳನ್ನು ಒದಗಿಸುವ ಸರಕಾರದ ಪ್ರಮುಖ ಇಲಾಖೆಗಳು, ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಇಲಾಖೆಯ ನೆರವು ಪಡೆಯಲು, ಇಲಾಖೆಯನ್ನು ಸುಲಭವಾಗಿ ಸಂಪರ್ಕಿಸಲು ಸಾಧ್ಯವಾಗುವಂತೆ ಸಹಾಯವಾಣಿ ಸಂಖ್ಯೆಗಳನ್ನು ಹೊಂದಿದ್ದು, ಅವುಗಳಲ್ಲಿ ಕೆಲವೇ ಕೆಲವು ಸಹಾಯವಾಣಿ ಸಂಖ್ಯೆಗಳ ಬಗ್ಗೆ ಮಾತ್ರ ಸಾರ್ವಜನಿಕರಿಗೆ ತಿಳಿದಿದ್ದು, ಇನ್ನೂ ಹಲವು ಪ್ರಮುಖ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಸಮರ್ಪಕ ಮಾಹಿತಿ ಇಲ್ಲವಾಗಿದೆ. ಈ ಎಲ್ಲಾ ಸಹಾಯವಾಣಿ ಸಂಖ್ಯೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಒಂದೇ ಕಡೆಗಳಲ್ಲಿ ಒದಗಿಸುವ ವಿನೂತನ ಮತ್ತು ಅತ್ಯಂತ ಉಪಯುಕ್ತ ಕಾರ್ಯವನ್ನು ಉತ್ತರ ಜಿಲ್ಲಾಡಳಿತ ಕೈಗೊಂಡಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಆಹಾರ ನಾಗರಿಕ ಸರಬರಾಜು ನಿಗಮ ನಿ. ಹಾಗೂ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉತ್ತರ ಕನ್ನಡ ವತಿಯಿಂದ, ಪ್ರಮುಖ ಎಲ್ಲಾ ಸರಕಾರಿ ಇಲಾಖೆಗಳ ಸಹಾಯವಾಣಿ ಸಂಖ್ಯೆಗಳನ್ನು ಒಳಗೊಂಡ ಜಾಗೃತಿ ಫಲಕಗಳನ್ನು…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವರ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಕುರಿತಂತೆ ನಡೆದಂತ ಚರ್ಚೆಯು ಅಪೂರ್ಣಗೊಂಡಿದೆ. ಹೀಗಾಗಿ ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಿ ನಿರ್ಧಾರವನ್ನು ಕೈಗೊಳ್ಳೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನಾಳೆಯ ರಾಜ್ಯ ಬಜೆಟ್ ಅಧಿವೇಶನ ಸೇರಿದಂತೆ ಇತರೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯನ್ನು ನಡೆಸಲಾಯಿತು. ಅಲ್ಲದೇ ಎಸ್ಸಿ, ಎಸ್ಟಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆಯೂ ಚರ್ಚೆ ನಡೆಸಲಾಯಿತು. ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತ ಚರ್ಚೆಯ ವೇಳೆಯಲ್ಲಿ ಸಹಮತವು ಸಂಪುಟದ ಸಹೋದ್ಯೋಗಿಗಳಲ್ಲಿ ಮೂಡಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಇಂದು ಕೂಡ ಎಸ್ಸಿ, ಎಸ್ಟಿ ಸಮುದಾಯದವರಿಗೆ ಒಳ ಮೀಸಲಾತಿ…

Read More

ಮಂಡ್ಯ : ರಾಜ್ಯದ ವಿವಿದೆಡೆ ಗುರುವಾರ ಬೆಳ್ಳಂಬೆಳಿಗ್ಗೆ ಹಲವೆಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಲಾಗಿತ್ತು. ಮಂಡ್ಯದ ಲೋಕೋಪಯೋಗಿ ಇಲಾಖೆಯ ಎಇಇ ಎಸ್‌. ಸತೀಶ್‌ ಅವರ ಮನೆ ಮೇಲೆ ಕೂಡ ದಾಳಿ ನಡೆದಿದ್ದು, ಆದಾಯಕ್ಕಿಂತ 3.01 ಕೋಟಿ ಅಕ್ರಮ ಆಸ್ತಿಗಳಿಸಿರುವುದು ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಗಿದೆ. ಸರ್ಕಾರಿ ಅಧಿಕಾರಿಯಾಗಿ ಇದುವರೆಗಿನ ಸತೀಶ್‌ ಅವರ ಒಟ್ಟು ಆದಾಯ 1.45 ಕೋಟಿ ಎಂದು ಅಂದಾಜಿಸಲಾಗಿದ್ದು, ಆದರೆ, ಸ್ಥಿರಾಸ್ತಿ 2.19 ಕೋಟಿ ಮತ್ತು ಚರಾಸ್ತಿ 2.26 ಕೋಟಿ ಸೇರಿದಂತೆ ಒಟ್ಟು 4.46 ಕೋಟಿ ಆಸ್ತಿ ಹೊಂದಿರುವುದು ತನಿಖೆಯಿಂದ ಬಯಲಾಗಿದೆ. ಲೋಕಾಯುಕ್ತ ಪೊಲೀಸರು ಸತೀಶ್‌ ಅವರಿಗೆ ಸೇರಿದ ಮನೆ, ಕಚೇರಿ ಮತ್ತು ಮಾವನ ಮನೆ ಸೇರಿದಂತೆ ನಾಲ್ಕು ಕಡೆ ಏಕಕಾಲದಲ್ಲಿ ದಾಳಿ ನಡೆಸಿದರು. 97 ಲಕ್ಷ ಮೌಲ್ಯದ 3 ನಿವೇಶನಗಳು, 1.06 ಕೋಟಿ ಮೌಲ್ಯದ 2 ಮನೆಗಳು, 16 ಲಕ್ಷ ಮೌಲ್ಯದ 6 ಎಕರೆ ಕೃಷಿ ಜಮೀನು ಪತ್ತೆಯಾಗಿದೆ. ಮನೆಯಲ್ಲಿ 6.70 ಲಕ್ಷ ನಗದು, 20…

Read More

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಎಂ.ಜಿ. ರಸ್ತೆಯಲ್ಲಿನ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಸಾರ್ವತ್ರಿಕ ಚುನಾವಣೆ ವಿಷಯವಾಗಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು (ಕೇಂದ್ರ) ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್‌ ಅವರು ಪರೀಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಅಹವಾಲು ಮತ್ತು ಆಕ್ಷೇಪಣೆ ಸಲ್ಲಿಸಲು ಸಂಬಂದಪಟ್ಟ ಕ್ಷೇತ್ರಗಳ ವ್ಯಾಪ್ತಿಗೊಳಪಡುವ ಮತದಾರರ ನೋಂದಣಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳ ಕಛೇರಿಗೆ ಮನವಿ ಸಲ್ಲಿಸಲು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2026 ಕ್ಕೆ ಸಂಬಂಧಿಸಿದಂತೆ ದಿನಾಂಕ: 19-01-2026 ರಂದು ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಚುರ ಪಡಿಸಲಾಗಿರುತ್ತದೆ. ಮುಂದುವರೆದು ಪರೀಷ್ಕೃತ ಕರಡು ಮತದಾರರ ಪಟ್ಟಿಯ ಪರಿಷ್ಕರಣೆ ಹಂತದಲ್ಲಿದ್ದು ಬೆಂಗಳೂರು ಪೂರ್ವ ನಗರ ಪಾಲಿಕೆಗೆ ಸಂಬಂಧಿಸಿದ ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ದಿನಾಂಕ:09-03-2026 ರಂದು ಪ್ರಕಟಿಸಲಾಗುವುದು ಎಂದು ಕೇಂದ್ರ ನಗರ…

Read More

ಬೆಂಗಳೂರು: ನಗರದಲ್ಲಿ ನಿವೃತ್ತ ಐಐಎಸ್ಸಿ ಪ್ರೊಫೇಸರ್ ಕುಟುಂಬದ ಮೂವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಇಂದು ನಿವೃತ್ತ ಐಐಎಸ್ಸಿ ಪ್ರೊಫೆಸರ್ ಕುಟುಂಬದ ಮೂವರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್, ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಅವರಿದ್ದಂತ ಪೀಠವು ತೀರ್ಪು ಪ್ರಕಟಿಸಿದೆ. ಐಐಎಸ್ಸಿ ನಿವೃತ್ತ ಪ್ರೊಫೆಸರ್ ಪುರುಷೋತ್ತಮ್ ಲಾಲ್ ಸಚ್ ದೇವ್, ಪತ್ನಿ ರೀಟಾ, ಪುತ್ರ ಮುನ್ನಾ ಎಂಬುವರನ್ನು ಮನೆ ಕೆಲಸದ ವಲಸೆ ಕಾರ್ಮಿಕ ದಂಪತಿಗಳು ಸೇರಿದಂತೆ ನಾಲ್ವರು ಹತ್ಯೆ ಮಾಡಿದ್ದರು. ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕರಾದಂತ ದೀಪಕ್ ಹಲ್ದಾರ್, ಸುಚಿತ್ರಾ ಹಲ್ವಾರ್, ಮೊಹಮ್ಮದ್ ಸರ್ಬಲ್ ಹಾಗೂ ಬಿದನ್ ಶಿಕಾರಿಯಿಂದ ಪ್ರೊಫೆಸರ್ ಕುಟುಂಬ ಹತ್ಯೆ ಮಾಡಲಾಗಿತ್ತು. ಈ ಹತ್ಯೆಯನ್ನು ಹಣ, ಚಿನ್ನಾಭರಣಕ್ಕಾಗಿ ಮಾಡಲಾಗಿತ್ತು. ಇಂತಹ ನಾಲ್ವರು ಅಪರಾಧಿಗಳಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. https://kannadanewsnow.com/kannada/west-bengal-governor-cv-ananda-bose-resigns-ahead-of-assembly-polls/ https://kannadanewsnow.com/kannada/transport-department-has-been-admitted-to-icu-due-to-corrupt-congress-governments-guarantee-woes-jds/ https://kannadanewsnow.com/kannada/how-many-marks-are-required-to-pass-sslc-puc-here-is-the-official-information-from-the-board/

Read More

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದೆ. ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಸಿ.ವಿ. ಆನಂದ್ ಬೋಸ್ ಅವರು ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಲೋಕಭವನದ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಆನಂದ್ ಬೋಸ್ ಅವರು ದೆಹಲಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜೀನಾಮೆಯ ನಂತರ ಸುದ್ದಿಸಂಸ್ಥೆ ಪಿಟಿಐ (PTI) ಜೊತೆ ಮಾತನಾಡಿದ ಬೋಸ್, “ನಾನು ರಾಜ್ಯಪಾಲರ ಕಚೇರಿಯಲ್ಲಿ ಸಾಕಷ್ಟು ಸಮಯವನ್ನು ಕಳೆದಿದ್ದೇನೆ” ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಮಮತಾ ಬ್ಯಾನರ್ಜಿ ಆಘಾತ ರಾಜ್ಯಪಾಲರ ಈ ದಿಢೀರ್ ನಿರ್ಧಾರಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಅವರು, “ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ. ಆನಂದ್ ಬೋಸ್ ಅವರ ಹಠಾತ್ ರಾಜೀನಾಮೆಯ ಸುದ್ದಿ ಕೇಳಿ ನನಗೆ ಆಘಾತವಾಗಿದೆ ಮತ್ತು ಆತಂಕವಾಗಿದೆ. ಅವರ ಈ ನಿರ್ಧಾರದ ಹಿಂದಿರುವ ಕಾರಣಗಳು ಈ ಕ್ಷಣದಲ್ಲಿ ನನಗೆ ತಿಳಿದಿಲ್ಲ” ಎಂದು…

Read More