Author: kannadanewsnow09

ಬೆಂಗಳೂರು : ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಲುಕಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡುತ್ತಾ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಆದರೆ ಈಗ ಬಿಜೆಪಿ ಶಾಸಕರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ. ಲೋಕಾಯುಕ್ತರ ತನಿಖೆ ನಡೆಯಲಿ ಎಂದು ತಿಳಿಸಿದರು. https://kannadanewsnow.com/kannada/cm-siddaramaiahs-good-news-for-the-states-theater-teachers/

Read More

ಬೆಂಗಳೂರು : ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಆ ಮೂಲಕ ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅವರು ಇಂದು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಹೊನ್ನಾರು ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನಿಂದ 26 ರ ವರೆಗೆ ಕಲಾಸಕ್ತರಿಗೆ ನಾಟಕಗಳನ್ನು ವೀಕ್ಷಿಸುವ ಸದವಕಾಶ ದೊರೆತಿದೆ. ನಾಟಕ ತಂಡಗಳು ಐವತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಅತ್ಯಂತ ಸೂಕ್ತವಾಗಿದೆ ಎಂದರು. ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ನಟನೆ ಎಲ್ಲರಿಗೂ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸಂದೇಶಗಳುಳ್ಳ ಸಿನಿಮಾಗಳು ವಿರಳ ಹಿಂದಿನ ಕಾಲದ ಸಿನಿಮಾಗಳಲ್ಲಿ ಸಂದೇಶಗಳಿರುತ್ತಿತ್ತು. ಇಂದಿನ ಸಿನಿಮಾಗಳಲ್ಲಿ ಸಮಾಜಕ್ಕೆ ಸಂದೇಶಗಳುಳ್ಳ ಸಿನಿಮಾಗಳು ವಿರಳ ಅಥವಾ ಇಲ್ಲವೇ ಇಲ್ಲ ಎಂಬಂತಾಗಿದೆ ಎಂದರು. ರಂಗಭೂಮಿ ಹಿನ್ನೆಲೆಯ…

Read More

ಬೆಂಗಳೂರು: ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ವಿಫಲವಾಗಿರುವ ರಾಹುಲ್ ಗಾಂಧಿ ಹೊರಗೆ ದೇಶದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಆರೋಪಿಸಿದರು. ನವದೆಹಲಿಯಲ್ಲಿ ನಡೆದ ಜಾಗತಿಕ ಎಐ ಶೃಂಗಸಭೆಗೆ ಅಡ್ಡಿ ಉಂಟು ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದ್ದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಮೇಣದಬತ್ತಿ ಅಂಟಿಸಿ ನಡೆಸಿದ ಪ್ರತಿಭಟನೆಯ ನೇತೃತ್ವವನ್ನು ಅವರು ವಹಿಸಿ ಮಾತನಾಡಿದರು. ಶನಿವಾರ ಸಂಜೆ ಫ್ರೀಡಂ ಪಾರ್ಕ್ ನಲ್ಲಿ ಈ ಪ್ರತಿಭಟನೆ ನಡೆಯಿತು. ಅಲ್ಲದೆ, ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿರುವುದರ ವಿರುಧ್ಧವೂ ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಸರಿಯಲ್ಲ, ಅವರು ದೇಶದ ಕೀರ್ತಿಗೆ ಧಕ್ಕೆ ತಂದಿದ್ದಾರೆ. ಇದು ಅಕ್ಷಮ್ಯ ಎಂದು ಅವರು ಕಿಡಿಕಾರಿದರು. ವಿವಿಧ ದೇಶಗಳ ಅಧ್ಯಕ್ಷರು, ಪ್ರಧಾನಿಗಳು ಹಾಗೂ ಜಗತ್ತಿನ ಖ್ಯಾತ ಐಟಿ, ಎಐ ಕಂಪನಿಗಳು ಭಾಗಿಯಾಗಿರುವ ಜಾಗತಿಕ ಶೃಂಗಸಭೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬನಿಯನ್…

Read More

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತೀಯ ಅಂಧರ ಕ್ರಿಕೆಟ್ ಸಂಘಕ್ಕೆ (CABI) ಸಮಗ್ರ ಬೆಂಬಲ ಚೌಕಟ್ಟನ್ನು ಘೋಷಿಸಿದ್ದು, ಭಾರತೀಯ ಕ್ರಿಕೆಟ್‌ನಾದ್ಯಂತ ಒಳಗೊಳ್ಳುವಿಕೆ ಮತ್ತು ಸಮಾನ ಅವಕಾಶಗಳಿಗೆ ತನ್ನ ಬದ್ಧತೆಯನ್ನು ಬಲಪಡಿಸಿದೆ. ಈ ಉಪಕ್ರಮವು ಮೂಲಸೌಕರ್ಯವನ್ನು ಬಲಪಡಿಸುವುದು, ಮಾನ್ಯತೆಯನ್ನು ಸುಧಾರಿಸುವುದು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ದೃಷ್ಟಿಹೀನ ಕ್ರಿಕೆಟಿಗರಿಗೆ ಲಾಜಿಸ್ಟಿಕಲ್ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಕಳೆದ ದಶಕದಲ್ಲಿ ಜಾಗತಿಕ ವೇದಿಕೆಯಲ್ಲಿ ನಿರಂತರವಾಗಿ ಉತ್ತಮ ಸಾಧನೆ ಮಾಡಿರುವ ಭಾರತದ ಅಂಧರ ಕ್ರಿಕೆಟ್ ತಂಡಗಳ ಗಮನಾರ್ಹ ಸಾಧನೆಗಳನ್ನು ಗುರುತಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗುಣಮಟ್ಟದ ಸೌಲಭ್ಯಗಳ ಪ್ರವೇಶ, ಅಂತರರಾಷ್ಟ್ರೀಯ ಸ್ಪರ್ಧೆ ಮತ್ತು ವೃತ್ತಿಪರ ಪಂದ್ಯ ಪರಿಸರಗಳಂತಹ ಪ್ರಮುಖ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುವ ಮೂಲಕ ಪುರುಷ ಮತ್ತು ಮಹಿಳಾ ರಾಷ್ಟ್ರೀಯ ತಂಡಗಳಿಗೆ ಬೆಂಬಲ ವಿಸ್ತರಿಸಲಾಗುವುದು ಎಂದು ಬಿಸಿಸಿಐ ಹೇಳಿದೆ. ಈ ಉಪಕ್ರಮವು ಜಯ್ ಶಾ ಅವರು ಬಿಸಿಸಿಐ ಗೌರವ ಕಾರ್ಯದರ್ಶಿಯಾಗಿದ್ದಾಗ ಪ್ರತಿಪಾದಿಸಿದ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯಲ್ಲಿ ಅವರ…

Read More

ಬೆಂಗಳೂರು: ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರವು ದೊಡ್ಡ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರದಂದು ನ್ಯೂಸ್ ಫಸ್ಟ್ ಸುದ್ದಿವಾಹಿನಿ ಆಯೋಜಿಸಿದ್ದ ಎಲೆಕ್ಟ್ರಿಕ್ ವಾಹನಗಳ ಇವಿ ಎವರೆಡಿ 2026 ಬೃಹತ್ ಮೇಳವನ್ನು ಉದ್ಘಾಟಿಸಿ ಮಾತಾಡಿದರು ಕೇಂದ್ರ ಸಚಿವರು. ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ವಿಪುಲ ಅವಕಾಶಗಳಿವೆ. ಅನೇಕ ದೊಡ್ಡ ಕಂಪನಿಗಳು ರಾಜ್ಯವನ್ನು ಕಾರ್ಯಕ್ಷೇತ್ರ ಮಾಡಿಕೊಂಡಿವೆ. ಎಲೆಕ್ಟ್ರಾನಿಕ್ಸ್, ಆಟೋಮೋಟಿವ್ ಎಂಜಿನಿಯರಿಂಗ್ ಮತ್ತು ಸ್ಟಾರ್ಟ್ಅಪ್‌ಗಳಲ್ಲಿ ಬೆಂಗಳೂರಿನ ಬಲವಾದ ನೆಲೆಯು ಇವಿ ವಾಹನಗಳ ನಾವೀನ್ಯತೆ ಮತ್ತು ಉತ್ಪಾದನೆಗೆ ಜಾಗತಿಕ ಕೇಂದ್ರವಾಗಿ ರಾಜ್ಯವು ಹೊರಹೊಮ್ಮಲು ಸಹಕಾರಿ ಆಗಿದೆ ಎಂದು ಅವರು ಒತ್ತಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಎಲೆಲೆಕ್ಟ್ರಿಕ್ ವಾಹನಗಳ ಚಲನಶೀಲತೆಯ ಪರಿವರ್ತನಾತ್ಮಕ ವೇಗವನ್ನು ಪಡೆದುಕೊಳ್ಳುತ್ತಿದ್ದು, ಜಾಗತಿಕ ಸ್ಪರ್ಧೆಗೆ…

Read More

ಬೆಂಗಳೂರು: ಸಾಮಾಜಿಕ ನ್ಯಾಯದ ನೆಪದಲ್ಲಿ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಯನ್ನು ಎಳೆದು ತರುವುದು ಸರಿಯಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಟೀಕಿಸಿದರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಸಿದ್ದರಾಮಯ್ಯ ಅವರು ಒಂದು ಸಮುದಾಯದ ಬೆಂಬಲದಿಂದ ಅಷ್ಟೇ ಸಿಎಂ ಆಗಿದ್ದಲ್ಲ. ರಾಜ್ಯದ ಎಲ್ಲಾ ಸಮುದಾಯಗಳು ಬೆಂಬಲಿಸಿವೆ ಎಂಬುದನ್ನು ಮರೆಯಬಾರದು. ಅವರು ಮೊದಲು ಹಣಕಾಸು ಸಚಿವರಾದಾಗ, ಡಿಸಿಎಂ ಆದಾಗ ಯಾವೆಲ್ಲಾ ಸಮುದಾಯಗಳು ಬೆಂಬಲ ನೀಡಿದ್ದವು ಎಂಬುದು ಅವರಿಗೆ ಗೊತ್ತಿಲ್ಲವೇ? ಅವರಿಗೆ ರಾಜಕೀಯ ಶಕ್ತಿ ತುಂಬಿದವರು ಅವರ ಸಮುದಾಯಕ್ಕೆ ಸೇರಿದವರೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ತಮ್ಮ ಜಾತಿಯನ್ನು ಎಳೆದು ತರುವ ಮೂಲಕ ಸಿದ್ದರಾಮಯ್ಯನವರು ಕಾಂಗ್ರೆಸ್ ನವರಿಗೆ ಸಂದೇಶ ಕೊಟ್ಟಿದ್ದಾರೋ? ಅಥವಾ ಸಿಎಂ ಸ್ಥಾನ ತೆಗೆಯಲು ನಿಂತಿರುವವರಿಗೆ ಸಂದೇಶ ಕೊಟ್ಡಿದ್ದಾರೋ ಗೊತ್ತಿಲ್ಲ. ಇಂತಹ ಸಮಯದಲ್ಲಿ ಅವರು ತಾವು ಹುಟ್ಟಿದ ಸಮಾಜವನ್ನು ಎಳೆದು ತರುವುದು ಯಾವ ಮಟ್ಟಕ್ಕೆ ಸರಿ? ಇದು ಅವರ ಹೃದಯದ ಭಾವನೆ ಇದೆ ಎಂತಹುದು…

Read More

ಬೆಂಗಳೂರು : “ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲೇವಡಿ ಮಾಡಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಬಿಜೆಪಿ ಶಾಸಕ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. “ಬಿಜೆಪಿಯವರು ಭ್ರಷ್ಟಾಚಾರಿಗಳಾಗಿರುವುದಿಲ್ಲವಲ್ಲವೇ. ನಿಮಗೆ ಯಾರೋ ತಪ್ಪು ಮಾಹಿತಿ ನೀಡಿರಬೇಕು. ಲೋಕಾಯುಕ್ತದವರು ಏನು ಹೇಳುತ್ತಾರೆ ಕಾದು ನೋಡೋಣ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ” ಎಂದು ನಯವಾಗಿ ಹರಿಹಾಯ್ದರು. ಎಐ ಸಮ್ಮೇಳನದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ದೇಶ ವಿರೋಧಿ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಮ್ಮ ಪಕ್ಷದ ಹಿರಿಯ ನಾಯಕರ ನಿಲುವು ಏನೆಂದು ತಿಳಿದು, ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

Read More

ಶಿವಮೊಗ್ಗ : ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ ತಿಳಿಸಿದರು. ಇಂದು ಶಿವಮೊಗ್ಗದ ಸಾಗರದ ನಗರದಲ್ಲಿ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಮಹಾಸಭೆ ಮತ್ತು ಶೈಕ್ಷಣಿಕ ಕರ‍್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಸಂಘಗಳು ಉತ್ತಮವಾಗಿ ಕೆಲಸ ಮಾಡಿದೆ. ಸಾಗರ ತಾಲ್ಲೂಕಿನಲ್ಲಿ ಹಾಲಿ ಅಧ್ಯಕ್ಷ ಮಾಲತೇಶಪ್ಪ ಅವರ ನೇತೃತ್ವದಲ್ಲಿ ಸಂಘವು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಉತ್ತಮ ಕೆಲಸ ಮಾಡಿದ ಅಧ್ಯಕ್ಷರನ್ನು, ಸಂಘವನ್ನು ಅಭಿನಂದಿಸುವುದು ಎಲ್ಲರ ಕರ್ತವ್ಯ. ಸಂಘಟನೆ ಪ್ರಾರಂಭವಾಗಿ 55 ವರ್ಷವಾಗಿದ್ದು, ರಾಜ್ಯದಲ್ಲಿ ಶಿಕ್ಷಕರ ಸಂಘವು ಉತ್ತಮ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾಲಕಾಲಕ್ಕೆ ಶೈಕ್ಷಣಿಕ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಕುರಿತು ಇಂತಹ ಕರ‍್ಯಾಗಾರಗಳ ಮೂಲಕ ಚಿಂತನ ಮಂಥನ ಅಗತ್ಯ ಎಂದು ಹೇಳಿದರು. ಹಿರಿಯ…

Read More

ಬೆಂಗಳೂರು : ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್ ಪಾಸ್‌ಗೆ ಸಂಬಂಧಿಸಿದಂತೆ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರಯಾಣಿಕರಿಗೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲವಾಗುವಂತೆ, ಕೆ-ರೈಡ್ ರೈಲ್ವೆ ಕಲ್ಪಿಸಿದ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್ ನಿರ್ಮಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಶುಕ್ರವಾರ ಚರ್ಚಿಸಿ, ಸ್ಥಳ ಪರಿಶೀಲಿಸಿದರು. “ಈ ಪ್ರದೇಶದಲ್ಲಿ ಸುಗಮ ವಾಹನ ಸಂಚಾರಕ್ಕೆ ಬೇಕಾದ ವ್ಯವಸ್ಥೆಯಲ್ಲಿ ಯಾವುದೇ ತೊಡಕುಗಳು ಆಗಬಾರದು” ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಸಚಿವರು, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಆಗುತ್ತಿರುವ ರಸ್ತೆ, ಪಾರ್ಕ್‌, ನೀರಿನ ಸಂಪರ್ಕ ಮತ್ತು ಒಳಚರಂಡಿ ವ್ಯವಸ್ಥೆ, ಅಂಡರ್‌ಪಾಸ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದರಲ್ಲದೆ, ಎಲ್ಲಾ ಕೆಲಸಗಳನ್ನು ತ್ವರಿತ ಹಾಗೂ ಸಮರ್ಪಕವಾಗಿ ನಿರ್ವಹಿಸಬೇಕು. ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಜತೆಯಲ್ಲಿದ್ದ ಅಧಿಕಾರಿಗಳಿಗೆ ತಾಕೀತು ಮಾಡಿದರು.…

Read More

ನವದೆಹಲಿ: ಭಾರತದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಫೆಬ್ರವರಿ 21 ರ ಶನಿವಾರದಂದು ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರನ್ನು ಆತ್ಮೀಯ ಸಮಾರಂಭದಲ್ಲಿ ವಿವಾಹವಾದರು. ಈ ವಿವಾಹವು ಖಾಸಗಿ ಸ್ಥಳದಲ್ಲಿ ನಡೆಯಿತು, ಆಪ್ತ ಸ್ನೇಹಿತರು ಮತ್ತು ಕುಟುಂಬದವರು ಹಾಜರಿದ್ದರು. ಆ ಮೂಲಕ ನೂತನ ದಾಂಪತ್ಯಕ್ಕೆ ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಹಾಗೂ ಗೆಳತಿ ಸೋಫಿ ಶೈನ್ ಕಾಲಿಟ್ಟಿದ್ದಾರೆ. ಈ ದಂಪತಿಗಳು ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದರು ಮತ್ತು ಮೇ 2025 ರಲ್ಲಿ ತಮ್ಮ ಬಾಂಧವ್ಯವನ್ನು ಸಾರ್ವಜನಿಕಗೊಳಿಸಿದರು. ಈ ವರ್ಷದ ಆರಂಭದಲ್ಲಿ ಅವರು ತಮ್ಮ ನಿಶ್ಚಿತಾರ್ಥವನ್ನು ಘೋಷಿಸಿದ್ದರು, ಇದು ಅವರ ಮದುವೆಯನ್ನು ವ್ಯಾಪಕವಾಗಿ ನಿರೀಕ್ಷಿಸುವಂತೆ ಮಾಡಿತು. https://twitter.com/AlmostTopper/status/2025209271722672146 ಸಾರ್ವಜನಿಕರ ದೃಷ್ಟಿಯಲ್ಲಿ ಸಂಬಂಧ ಧವನ್ ಮತ್ತು ಸೋಫಿ 2025 ರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಸಮಯದಲ್ಲಿ ಮೊದಲು ಒಟ್ಟಿಗೆ ಕಾಣಿಸಿಕೊಂಡರು, ಅಭಿಮಾನಿಗಳ ಗಮನ ಸೆಳೆದರು. ನಂತರ ಅವರು ಮಾಧ್ಯಮ ಸಮಾವೇಶದಲ್ಲಿ ಕಾಣಿಸಿಕೊಂಡರು, ಅಲ್ಲಿ ಧವನ್ ವಿಚ್ಛೇದನದ ನಂತರ ಮತ್ತೆ…

Read More