Author: kannadanewsnow09

ಬೆಂಗಳೂರು: ಕಟ್ಟಡ ಕಲ್ಲುಗಣಿ ಗುತ್ತಿಗೆ, ಲೈಸೆನ್ಸ್ ಪ್ರದೇಶಗಳಲ್ಲಿ ಹಾಗೂ ಸದರಿ ಗುತ್ತಿಗೆ, ಲೈಸೆನ್ಸ್ ಪ್ರದೇಶಗಳಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿ ಸಾಗಾಣಿಕೆ ಮಾಡಿರುವ ಉಪ ಖನಿಜದ ಪ್ರಮಾಣಕ್ಕೆ ವಿಧಿಸುವ ದಂಡವನ್ನು One Time Settlement( OTS) ಮೂಲಕ ಪಾವತಿಸಲು ಅವಕಾಶ ನೀಡಿದೆ. ಆ ಮೂಲಕ ಕಲ್ಲು ಗಣಿಗಾರಿಕೆ ಗುತ್ತಿಗೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕಟ್ಟಡ ಕಲ್ಲುಗಣಿ ಗುತ್ತಿಗೆ / ಲೈಸೆನ್ಸ್ ವುದೇಶಗಳಲ್ಲಿ ( (2006-07)ನೇ ಸಾಲಿನಿಂದ ಸಂಚಿತ ಆಡಿಟ್ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಉಪಖನಿಜವನ್ನು ತೆಗೆದು ರಾಜಧನವನ್ನು ಪಾವತಿಸದೇ, ಖನಿಜ ಸಾಗಾಣಿಕೆ ಪರವಾನಿಗೆ ಪಡೆಯದೇ ಕಟ್ಟಡ ಕಲ್ಲು ಸಾಗಾಣಿಕೆ ಮಾಡಿರುವ ಸಂಬಂಧ) ಹಾಗೂ ಕಟ್ಟಡ ಕಲ್ಲು ಗಣಿ ಗುತ್ತಿಗೆ / ಲೈಸೆನ್ಸ್ ಪದೇಶವನ್ನು ಒತ್ತುವರಿ ಮಾಡಿರುವ ಕಲ್ಲು ಗಣಿ ಗುತ್ತಿಗೆದಾರರು / ಲೈಸೆನ್ಸ್ ದಾರರುಗಳಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವಿಧಿಸಿರುವ ದಂಡವನ್ನು One Time Settlement (OTS) ಮೂಲಕ ಅನುಷ್ಠಾನಗೊಳಿಸಿ ಇತ್ಯರ್ಥಪಡಿಸಲು ಉಲ್ಲೇಖಿತ…

Read More

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಮಾರಾಟವಾಗುತ್ತಿದೆ ಎಂಬುದಾಗಿ ಸುದ್ದಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದವು. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಕೆಳಗಿನಂತೆ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟವಾಗುತ್ತಿದೆ ಎಂಬುದು ಸುಳ್ಳು. ಆ ರೀತಿಯ ಯಾವುದೇ ಪೂರಕ ಪುರಾವೆಗಳು ಇರೋದಿಲ್ಲ. ಇದು ತಪ್ಪು ಮಾಹಿತಿ. ವಿದ್ಯಾರ್ಥಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ದಾರಿ ತಪ್ಪಿಸೋ ಹುನ್ನಾರವಾಗಿದೆ. ಇಂತಹ ಸುಳ್ಳು ಸುದ್ದಿ ಹರಡೋರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವದಾಗಿ ತಿಳಿಸಿದೆ. ಸಾರ್ವಜನಿಕರು, ಮಕ್ಕಳ ಪಾಲಕ-ಪೋಷಕರು, ವಿದ್ಯಾರ್ಥಿಗಳು ಇವುಗಳಿಗೆ ಕಿವಿಗೊಡಬಾರದು. ವಿದ್ಯಾರ್ಥಿಗಳು ಪರೀಕ್ಷೆಯ ಕಾರಣ ವ್ಯಾಸಂಗದ ಕಡೆಗೆ ಗಮನ ಕೇಂದ್ರೀಕರಿಸಿ. ಪೋಷಕರು ಅವರಿಗೆ ಪ್ರೋತ್ಸಾಹಿಸಿ ಎಂದಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ kseab.karnataka.gov.in ಜಾಲತಾಣದಲ್ಲಿ ಮಕ್ಕಳ ಪರೀಕ್ಷಾ ಸಿದ್ಧತೆಗಾಗಿ ಅಗತ್ಯವಿರುವಂತ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ ಎಂಬುದಾಗಿ ತಿಳಿಸಿದೆ.…

Read More

ಮಂಡ್ಯ: ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ ಮತದಾರರ ಪಟ್ಟಿಯ ನೈಜತೆಯನ್ನು ಕಾಪಾಡಲು ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಮಾಡಲು ತಿಳಿಸಿದ್ದು ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ವಿಶೇಷ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ವಿಶೇಷ ಪರಿಷ್ಕರಣೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು. ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಿ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಮಾಡಬೇಕು ಎಂದು ಅವರು ತಿಳಿಸಿದರು. ಮತದಾರರ ಪಟ್ಟಿಯಲ್ಲಿರುವ ತಪ್ಪುಗಳನ್ನು ಸರಿಪಡಿಸಲು ಬೀದಿವಾರು ಮತ್ತು ಮನೆವಾರು ಮ್ಯಾಪಿಂಗ್ ಮಾಡುವಂತೆ ತಿಳಿಸಿದರು. ಮಂಡ್ಯ ಜಿಲ್ಲೆಯಲ್ಲಿ 15,83,368 ಮತದಾರರು ಇದ್ದು 12,92,681 ಮತದಾರರ ಮ್ಯಾಪಿಂಗ್ ಆಗಿದ್ದು 2,90,687 ಮತದಾರರ ಮ್ಯಾಪಿಂಗ್ ಆಗಬೇಕಾಗಿದ್ದು ಶೇ 81.64 ಸಾಧನೆ ಮಾಡಲಾಗಿದೆ ಎಂದು ಅವರು ತಿಳಿಸಿದರು ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ. ಸಿ. ಶಿವನಂದಾಮೂರ್ತಿ, ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ…

Read More

ಬೆಂಗಳೂರು: ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ತೀವ್ರ ವಿರೋಧದ ನಡುವೆಯೂ ದಲಿತರ ಒಳ ಮೀಸಲಾತಿ ವಿಧೇಯಕವನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಇಂದು ದಲಿತ ಸಮುದಾಯದ ಸಚಿವರಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಾಗಿತ್ತು. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ತಂದರು. ಮೀಸಲಾತಿ ಪೆಂಡಿಂಗ್ ನಿಂದ ನೇಮಕಾತಿ ವಿಳಂಬದ ಬಗ್ಗೆಯೂ ಪ್ರಸ್ತಾಪಿಸಿದ್ರು. ರಾಜ್ಯಪಾಲರಿಗೆ ದಲಿತ ಸಮುದಾಯದ ಸಚಿವರ ನಿಯೋಗವು ಸಂಪೂರ್ಣ ವಿವರಣೆಯನ್ನು ನೀಡಿತು. ಮುಂಬಡ್ತಿ, ನೇಮಕಾತಿಯಲ್ಲಿ ಇರುವ ಗೊಂದಲಗಳ ಬಗ್ಗೆಯೂ ವಿವರಣೆ ನೀಡಲಾಯಿತು. ಹೀಗಾಗಿ ಮತ್ತೊಮ್ಮೆ ಪರಿಶೀಲಿಸಿ ಕೆಲವು ಗೊಂದಲಗಳ ನಡುವೆಯೂ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ಸಹಿ ಹಾಕಿ, ಅಂಗೀಕಾರದ ಮುದ್ರೆಯನ್ನು ಒತ್ತಿದ್ದಾರೆ. ಮುಂದೇನು? ರಾಜ್ಯಪಾಲರ ಅಂಗೀಕಾರದ ನಂತರ ಸರ್ಕಾರವು ಈಗ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಬೇಕಿದೆ. ಇದರ ಬೆನ್ನಲ್ಲೇ ಒಳ ಮೀಸಲಾತಿ ಹಂಚಿಕೆಯನ್ನು ವೈಜ್ಞಾನಿಕವಾಗಿ ಜಾರಿಗೆ ತರಲು…

Read More

ಕೆಎನ್ಎನ್ ಸಿನಿಮಾ ಡೆಸ್ಕ್: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವರ್ಷಗಳ ಕಾಲ ತಮ್ಮ ಸಂಬಂಧವನ್ನು ಗೌಪ್ಯವಾಗಿಟ್ಟಿದ್ದ ನಂತರ, ಈ ನಟರು ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹವಾದರು. ವಿವಾಹಿತ ದಂಪತಿಗಳಾಗಿ ಅವರ ಮೊದಲ ಫೋಟೋಗಳು ಈಗ ಬಿಡುಗಡೆಯಾಗಿವೆ, ಇದು ಅಭಿಮಾನಿಗಳನ್ನು ಹುಚ್ಚೆಬ್ಬಿಸಿದೆ. ರಶ್ಮಿಕಾ ಮತ್ತು ವಿಜಯ್ ತಮ್ಮ ಅಧಿಕೃತ ಖಾತೆಗಳಲ್ಲಿ ತಮ್ಮ ಮದುವೆಯ ಮೊದಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ರಶ್ಮಿಕಾ ವಿವಾಹದ ಫೋಟೋಗಳ ಸರಣಿಯನ್ನು ಪೋಸ್ಟ್ ಮಾಡಿ, ವಿಜಯ್ ಅವರನ್ನು ತಮ್ಮ ಅನುಯಾಯಿಗಳಿಗೆ ಹೃದಯಸ್ಪರ್ಶಿ ಟಿಪ್ಪಣಿಯೊಂದಿಗೆ ಪರಿಚಯಿಸಿದರು. “ನಮಸ್ಕಾರ ನನ್ನ ಪ್ರಿಯರೇ, ಈಗ ನಿಮಗೆ ‘ನನ್ನ ಗಂಡ’ ಎಂದು ಪರಿಚಯಿಸುತ್ತಿದ್ದೇನೆ! ಶ್ರೀ ವಿಜಯ್ ದೇವರಕೊಂಡ!! ನಿಜವಾದ ಪ್ರೀತಿ ಹೇಗಿರುತ್ತದೆ ಎಂದು ನನಗೆ ಕಲಿಸಿದ ವ್ಯಕ್ತಿ, ಶಾಂತಿಯಿಂದ ಇರುವುದು ಹೇಗಿರುತ್ತದೆ ಎಂದು ನನಗೆ ತೋರಿಸಿದ ವ್ಯಕ್ತಿ,” ಎಂದು ಅವರು ಬರೆದಿದ್ದಾರೆ. ಸಂಬಂಧವು ಅವಳನ್ನು ಒಬ್ಬ ವ್ಯಕ್ತಿಯಾಗಿ ಹೇಗೆ ರೂಪಿಸಿತು ಎಂಬುದನ್ನು ಅವರು ವಿವರಿಸುತ್ತಾ ಹೋದರು. “ನಾನು ಯಾವಾಗಲೂ…

Read More

ಬೆಂಗಳೂರು: SC, ST ಒಳಮೀಸಲಾತಿ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ಮಸೂದೆ ರೂಪಿಸಿ, ಸದನದಲ್ಲಿ ಅಂಗೀಕರಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ಇಂತಹ ದಲಿತರ SC, ST ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಗೀಕಾರ ನೀಡಿದ್ದಾರೆ. ಕರ್ನಾಟಕದ ದಲಿತ ಸಮುದಾಯಗಳಲ್ಲಿ ದಶಕಗಳಿಂದ ಕೇಳಿಬರುತ್ತಿದ್ದ ‘SC, ST ಒಳ ಮೀಸಲಾತಿ’ (Internal Reservation) ಬೇಡಿಕೆಗೆ ಕೊನೆಗೂ ಸಾಂವಿಧಾನಿಕ ಮಾನ್ಯತೆ ಲಭಿಸಿದೆ. ರಾಜ್ಯ ಸರ್ಕಾರವು ಮಂಡಿಸಿದ್ದ ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕಾರ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಪಟ್ಟಿಯಲ್ಲಿರುವ ವಿವಿಧ ಉಪಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಲು ಇದ್ದ ದೊಡ್ಡ ಅಡೆತಡೆ ನಿವಾರಣೆಯಾದಂತಾಗಿದೆ. ಅಂತಿಮ ಮೊಹರು: ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದ್ದ ಈ ಮಹತ್ವದ ವಿಧೇಯಕಕ್ಕೆ ಈಗ ಕಾನೂನಿನ ಬಲ ಬಂದಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆ: ಇತ್ತೀಚೆಗಷ್ಟೇ…

Read More

ಕಾಶಿಗೆ ಹೋದರೇ, ತರಕಾರಿ ಅಥವಾ ಹಣ್ಣನ್ನು ತ್ಯಾಗ ಮಾಡಬೇಕು ಎಂದು ಅನಾದಿ ಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದರ ನಿಜಾರ್ಥವು ಇಂತಿದೆ: ಕಾಶಿಗೆ ಹೋದಾಗ,ಕಾಯನ್ನೋ,ಫಲವನ್ನೋ ಬಿಡಬೇಕು ಎಂದು ನಮ್ಮ ಹಿರಿಯರು ಏಕೆ ಹೇಳುತ್ತಾರೆ? ಅದರ ಮರ್ಮವೇನು,ಅಂದರೆ,ರಹಸ್ಯವೇನು? ಹಾಗೆ,ಅಧ್ಯಯನ ಮಾಡಿದರೆ, ನಮ್ಮ ಶಾಸ್ತ್ರಗಳಲ್ಲಿ,ಅಂದರೆ,ವೇದ,ಉಪನಿಷತ್ತು,ಪುರಾಣ,ಸ್ಮೃತಿಗಳಲ್ಲಿ ಎಲ್ಲೂ ಈ ಸಂಗತಿ(ಅಂದರೆ,ಒಂದು ಕಾಯನ್ನು ಮತ್ತು ಒಂದು ಹಣ್ಣನ್ನು ಬಿಡಬೇಕು,ಎಂಬುದನ್ನು) ಹೇಳಿಲ್ಲವಲ್ಲ ಎಂಬುದನ್ನು ಕಂಡುಕೊಂಡೆವು ನಾವು. ಶಾಸ್ತ್ರವು ಹೇಳಿದ ವಿಷಯವನ್ನು,ಆಡುಭಾಷೆಯಲ್ಲಿ,ತಿರುಚಿ ಆದ ಪ್ರಮಾದ ನೋಡಿ ಹೀಗಿದೆ: ಕಾಶೀ ಕ್ಷೇತ್ರದ ವಿಷಯದಲ್ಲಿ ಶಾಸ್ತ್ರಗಳು ಹೇಳುತ್ತಿರುವುದು – ಕಾಶೀ ಕ್ಷೇತ್ರಕ್ಕೆ ಹೋಗಿ,ಗಂಗಾ ಸ್ನಾನ ಮಾಡಿ,ಅಲ್ಲಿ,ಅಂದರೆ,ಆ ಗಂಗೆಯಲ್ಲಿ,ಕಾಯಾಪೇಕ್ಷೆ ಮತ್ತು ಫಲಾಪೇಕ್ಷೆಯನ್ನು ತ್ಯಾಗ ಮಾಡಿ,ಅಂದರೆ,ತೊರೆದು,ನಂತರ,ಭಕ್ತಿಯಿಂದ ವಿಶ್ವನಾಥನ ದರುಶನ ಮಾಡಬೇಕು ಎಂದು. ಇಲ್ಲಿ ಕಾಯಾಪೇಕ್ಷೆ ಅಂತರ ತನ್ನ ಅಥವ ಇತರರ ದೇಹದ ಮೇಲಿನ ಅಪೇಕ್ಷೆ ಹಾಗು ಫಲಾಪೇಕ್ಷೆ ಅಂದರೆ,ಮಾಡಿದ ಕರ್ಮಂಗಳಿಂದ ಉಂಟಾಗುವ ಫಲಗಳ ಅಪೇಕ್ಷೆ ಬಿಡಬೇಕು ಎಂಬುದು ಶಾಸ್ತ್ರವಚನಾರ್ಥವು. ಇವೆರಡನ್ನೂ ಮಾಡಿದ ಕ್ಷಣವೇ,ಜೀವನ್ಮುಕ್ತಿಯು ದೊರೆಯುವುದು ನಿಶ್ಚಿತವಾಗುವುದು,ಆಗ ಕಾಶಿಯ ವಿಶ್ವನಾಥನ ದರುಶನದಿಂದ, ನಿಜಫಲವು (ಅಂದರೆ,ಮುಕ್ತಿಯೇ) ಸಿಗುವುದು ಎಂದರ್ಥವು. ಕಾಲ ಕಳೆದಂತೆ,ಈ…

Read More

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಸೇರಿಸಲಾಗುತ್ತಿದೆ. ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಲ್ಲಾ ದಿನಗಳಲ್ಲಿಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ಈ ವಿಷಯವನ್ನು ತಮ್ಮ ಗೌರವಾನ್ವಿತ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರವನ್ನು ನೀಡಲು ಕೋರಿದೆ. https://kannadanewsnow.com/kannada/video-of-elephant-lifting-man-by-its-trunk-in-kerala-goes-viral-my-jhum/ https://kannadanewsnow.com/kannada/minister-shivraj-thangadgi-good-news-for-the-backward-communities-of-the-state/

Read More

ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದರೆ ಭವಿಷ್ಯದಲ್ಲಿ 500ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ ಉಚಿತ ವಸತಿ ಸಹಿತ ತರಬೇತಿ ಕೊಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಭರವಸೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ನೀಡಲಾಗುವ ಉಚಿತ ವಸತಿ ಸಹಿತ ಐಎಎಸ್ ಮತ್ತು ಕೆಎಎಸ್ ತರಬೇತಿ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ದೆಹಲಿಯಲ್ಲಿ ತರಬೇತಿ ಕೇಂದ್ರ ತೆರೆಯಬೇಕೆಂದು ನಿರ್ಧಾರ ಮಾಡಲಾಗಿತ್ತು. ಆದರೆ ಸ್ಥಳ ಸಿಗದ ಕಾರಣ, ಬೆಂಗಳೂರಿನಲ್ಲಿ ತರಬೇತಿ ಕೇಂದ್ರ ತೆರೆಯಲಾಗಿದೆ. ಪ್ರಸ್ತುತ 150 ಮಂದಿ ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ ಸಹಿತ ಪರೀಕ್ಷೆಗೆ ಹತ್ತು ತಿಂಗಳು ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು. ಸರ್ಕಾರ ನಿಮ್ಮ ಜವಾಬ್ದಾರಿ ತೆಗೆದುಕೊಂಡಿದೆ. ಇಷ್ಟು ಮೊತ್ತದ ಹಣವನ್ನು ಈ‌ ಕಾರ್ಯಕ್ರಮಕ್ಕೆ ವ್ಯಯಿಸಲು ಸರ್ಕಾರಕ್ಕೆ ಕಷ್ಟ ಆಗುವುದಿಲ್ಲ. ನೀವು…

Read More

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಸೇರಿಸಲಾಗುತ್ತಿದೆ. ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಲ್ಲಾ ದಿನಗಳಲ್ಲಿಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ಈ ವಿಷಯವನ್ನು ತಮ್ಮ ಗೌರವಾನ್ವಿತ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರವನ್ನು ನೀಡಲು ಕೋರಿದೆ. https://kannadanewsnow.com/kannada/yediyurappa-bommai-didnt-you-give-urdu-advertisements-cm-questions-with-evidence/ https://kannadanewsnow.com/kannada/video-of-elephant-lifting-man-by-its-trunk-in-kerala-goes-viral-my-jhum/

Read More