Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಮಾಲ್ವೆಯಲ್ಲಿ ಹೈಬ್ರಿಡ್ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಿಸಿದಂತ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು. ಈ ಸಂಬಂಧ ಸ್ಥಳಕ್ಕೆ ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಡಿ ಫಯಾಜುದ್ದೀನ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಈ ಘಟನೆ ಸಂಬಂಧ 9 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ಜೊತೆಗೆ ಈ ಮಾಹಿತಿ ಹಂಚಿಕೊಂಡಂತ ಅವರು, ಸಾಗರ ತಾಲ್ಲೂಕಿನ ಕಸಬಾ ಹೋಬಳಿಯ ಮಾಲ್ವೆ ಗ್ರಾಮದಲ್ಲಿ ಸಾಮಾಜಿಕ ಅರಣ್ಯದಲ್ಲಿ ಅಕ್ರಮವಾಗಿ ಹೈಬ್ರಿಡ್ ಅಕೇಶಿಯಾ ಮರ ಕಡಿತಲೆ ಘಟನೆ ಕಂಡು ಬಂದಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಸುಮಾರು 42 ಮರಗಳನ್ನು ಕಡಿತಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಸಂಬಂಧ 9 ಮಂದಿ ವಿರುದ್ಧ ನ್ಯಾಯಾಲಯದ ಅನುಮತಿಯನ್ನು ಪಡೆದು ಎಫ್ಐಆರ್ ದಾಖಲಿಸುವುದಾಗಿ ಹೇಳಿದರು. ಹೈಬ್ರಿಡ್ ಅಕೇಶಿಯಾ ಮರಗಳನ್ನು ನಾನು ನೆಟ್ಟು ಬೆಳಸಿದ್ದಾಗಿ ಪಕ್ಕದ ಜಮೀನಿನ ಮಾಲೀಕರು…

Read More

ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಇಂದು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಕಾನೂನು ಹೋರಾಟ ಮತ್ತು ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಿರುವ ಅನುಮೋದನೆಗಳ ಬಗ್ಗೆ ಮಾಹಿತಿ ನೀಡಿದರು. ೧. ಕೇಂದ್ರದ ವಿರುದ್ಧ ಕಾನೂನು ಹೋರಾಟ: ಮನರೇಗಾ ಮತ್ತು ಜೀರಾಂಜಿ ಕಾಯ್ದೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ‘ಜೀರಾಂಜಿ’ ಕಾಯ್ದೆಯ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ಸಂಪುಟ ನಿರ್ಧರಿಸಿದೆ. ಮನರೇಗಾ ಸಂಕಷ್ಟ: ಕೇಂದ್ರವು ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ಜೀರಾಂಜಿ ಯೋಜನೆಯನ್ನು ತಂದಿದೆ. ಆದರೆ ಮೇ ತಿಂಗಳು ಬಂದರೂ ಯೋಜನೆಯ ಅಧಿಸೂಚನೆ (Notification) ಹೊರಡಿಸಿಲ್ಲ. ಅನುಷ್ಠಾನದ ಗೊಂದಲ: ಹೊಸ ಯೋಜನೆ ಹೇಗೆ ಜಾರಿಯಾಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ, ಹಳೆಯ ಬಾಕಿ ಹಣವನ್ನೂ ಬಿಡುಗಡೆ ಮಾಡಿಲ್ಲ. ಮಳೆ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಬಡವರ ಕೂಲಿಯ ಬಗ್ಗೆ ಕೇಂದ್ರ ನಿರ್ಲಕ್ಷ್ಯ ವಹಿಸಿದೆ ಎಂದು…

Read More

ನವದೆಹಲಿ: ಭಾರತೀಯ ಕ್ರಿಕೆಟ್‌ನ ‘ಮಿಸ್ಟರ್ 360’ ಖ್ಯಾತಿಯ ಸೂರ್ಯಕುಮಾರ್ ಯಾದವ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವೀಶಾ ಶೆಟ್ಟಿ ದಂಪತಿಗೆ ಇಂದು (ಮೇ 7, 2026) ಹೆಣ್ಣು ಮಗು ಜನಿಸಿದೆ. ಈ ಸಂತಸದ ಸುದ್ದಿಯನ್ನು ಸೂರ್ಯಕುಮಾರ್ ಅವರು ಅತ್ಯಂತ ಭಾವನಾತ್ಮಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾವನಾತ್ಮಕ ಪೋಸ್ಟ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮುದ್ದಾದ ಫೋಟೋವೊಂದನ್ನು ಹಂಚಿಕೊಂಡಿರುವ ಸೂರ್ಯಕುಮಾರ್, ಅದಕ್ಕೆ ಮನಮಿಡಿಯುವ ಅಡಿಬರಹ ನೀಡಿದ್ದಾರೆ. ಆಸ್ಪತ್ರೆಯ ಹಿನ್ನೆಲೆಯಲ್ಲಿ ಮಗುವಿನ ಪುಟ್ಟ ಕೈಯನ್ನು ಪೋಷಕರು ಹಿಡಿದಿರುವ ಫೋಟೋ ಇದಾಗಿದ್ದು, ಸೂರ್ಯಕುಮಾರ್ ಅವರ ಟ್ಯಾಟೂ ಇರುವ ಕೈ ಮಗುವನ್ನು ಅಕ್ಕರೆಯಿಂದ ಹಿಡಿದಿರುವುದು ಅಭಿಮಾನಿಗಳ ಗಮನ ಸೆಳೆಯುತ್ತಿದೆ. “ನಗು, ಸಂಭ್ರಮ ಮತ್ತು ಕನಸುಗಳೊಂದಿಗೆ – ನಮ್ಮ ಪುಟ್ಟ ಮಗಳನ್ನು ನಾವು ಸ್ವಾಗತಿಸುತ್ತಿದ್ದೇವೆ,” ಎಂದು ಅವರು ಬರೆದುಕೊಂಡಿದ್ದಾರೆ. https://twitter.com/surya_14kumar/status/2052384452958130247 ಹರಿದುಬಂದ ಶುಭಾಶಯಗಳ ಮಹಾಪೂರ ಈ ಸುದ್ದಿ ಹೊರಬೀಳುತ್ತಿದ್ದಂತೆಯೇ ಕ್ರಿಕೆಟ್ ಲೋಕದ ಗಣ್ಯರು, ಸಹ ಆಟಗಾರರು ಮತ್ತು ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ.…

Read More

ನವದೆಹಲಿ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ ಪತಿಗೆ ದೆಹಲಿ ಹೈಕೋರ್ಟ್ ವಿಶಿಷ್ಟ ಕಾರಣಕ್ಕಾಗಿ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿದೆ. ಘಟನೆ ನಡೆದು ದಶಕಗಳ ನಂತರ ಪತ್ನಿಯೇ ತನ್ನ ಪತಿಯನ್ನು ಕ್ಷಮಿಸಿ, ಆತನೊಂದಿಗೆ ಸಂಸಾರ ನಡೆಸುತ್ತಿರುವುದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಘಟನೆಯ ವಿವರ: ಈ ಪ್ರಕರಣವು 2000ನೇ ಇಸವಿಯ ನವೆಂಬರ್‌ನಲ್ಲಿ ನವದೆಹಲಿಯ ರಾಜಾಪುರಿಯಲ್ಲಿ ನಡೆದಿತ್ತು. ಸವಿತಾ ಎಂಬ ಮಹಿಳೆಗೆ ಆಕೆಯ ಪತಿ ರಾಜು, ಅತ್ತೆ ಮತ್ತು ಮೈದುನ ಸೇರಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಘಟನೆಯ ದಿನ ಅತ್ತೆ ಮತ್ತು ಮೈದುನ ಸವಿತಾಳ ಕೈಗಳನ್ನು ಹಿಡಿದುಕೊಂಡಿದ್ದರೆ, ಪತಿ ರಾಜು ಆಕೆಗೆ ಬೆಂಕಿ ಹಚ್ಚಿದ್ದನು. ಆ ಸಮಯದಲ್ಲಿ ಸವಿತಾ ಗರ್ಭಿಣಿಯಾಗಿದ್ದರು. ನ್ಯಾಯಾಲಯದ ನಡಾವಳಿ: ಕೆಳಹಂತದ ನ್ಯಾಯಾಲಯದ ತೀರ್ಪು: 2004ರಲ್ಲಿ ವಿಚಾರಣಾ ನ್ಯಾಯಾಲಯವು ಪತಿ ರಾಜು, ಅತ್ತೆ ಬಾರ್ದಿ ದೇವಿ ಮತ್ತು ಮೈದುನ ಶಂಭು ಅವರನ್ನು ಅಪರಾಧಿಗಳೆಂದು ಘೋಷಿಸಿ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಹೈಕೋರ್ಟ್‌ನಲ್ಲಿ ಕ್ಷಮೆ:…

Read More

ಮಂಡ್ಯ : ಮದ್ದೂರು ನಗರದ ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಉಗ್ರ ನರಸಿಂಹ ಸ್ವಾಮಿಯ ಭವ್ಯ ಬ್ರಹ್ಮೋತ್ಸವವು ಗುರುವಾರ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತಾಧಿಗಳು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಪರಭವ ನಾಮ ಸಂವತ್ಸರದ ವೈಶಾಖ ಮಾಸ ಬಹುಳ ಪಂಚಮಿ ಪೂರ್ವಾಷಾಡ ನಕ್ಷತ್ರದಲ್ಲಿ ನಡೆದ ರಥೋತ್ಸವಕ್ಕೆ ಸಾಕ್ಷಿಯಾಗಲು ನಾಡಿನ ವಿವಿಧೆಡೆಯಿಂದ ಹಾಗೂ ನೆರೆರಾಜ್ಯಗಳಿಂದ ಸಾವಿರಾರು ಭಕ್ತ ಸಾಗರವೇ ಹರಿದು ಬಂದಿತ್ತು. ಸಹಸ್ರಾರು ಭಕ್ತಾದಿಗಳು ಗೋವಿಂದ… ಗೋವಿಂದ… ಎಂಬ ನಾಮಸ್ಮರಣೆಯ ನಡುವೆ ರಥವು ಕೋಟೆ ಬೀದಿಯ ಪ್ರಮುಖ ಬೀದಿಗಳಲ್ಲಿ ಎಳೆದು ಭಕ್ತರು ರಥಕ್ಕೆ ಹಣ್ಣು-ಜವನ ಎಸೆದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ರಥೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷ ಅಭಿಷೇಕ, ಪೂಜೆ ಹಾಗೂ ಅಲಂಕಾರಗಳನ್ನು ನೆರವೇರಿಸಲಾಯಿತು. ನಂತರ ಸಕಲ ಮಂಗಳ ವಾದ್ಯಗಳೊಂದಿಗೆ ಉತ್ಸವ ಮೂರ್ತಿಯನ್ನು ಅಲಂಕೃತ ಮಹಾರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವದ ಅಂಗವಾಗಿ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಭಕ್ತರಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಾಗೂ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಶಾಸಕ…

Read More

ಕಿತ್ತೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರಿಗೆ ಸೇವೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ನೂತನ ಬಸ್ ಘಟಕವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿದರು. ಸಮಗ್ರ ಸಾರಿಗೆ ಅಭಿವೃದ್ಧಿಯ ಗುರಿಯೊಂದಿಗೆ ಈ ಭಾಗದ ಪ್ರಯಾಣಿಕರಿಗೆ ಸುಸಜ್ಜಿತ ಸೇವೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ನೂತನ ಘಟಕದ ವಿಶೇಷತೆಗಳು: ವೆಚ್ಚ ಮತ್ತು ವಿಸ್ತೀರ್ಣ: ಒಟ್ಟು ₹5.27 ಕೋಟಿ ವೆಚ್ಚದಲ್ಲಿ, 4 ಎಕರೆ ವಿಸ್ತೀರ್ಣದಲ್ಲಿ ಈ ಆಧುನಿಕ ಬಸ್ ಘಟಕವನ್ನು ನಿರ್ಮಿಸಲಾಗಿದೆ. ಕಾರ್ಯಾಚರಣೆ: ಪ್ರಸ್ತುತ ಈ ಘಟಕವು 15 ವಾಹನಗಳ ಬಲವನ್ನು ಹೊಂದಿದ್ದು, 15 ವೇಗದೂತ ಅನುಸೂಚಿಗಳ (Schedules) ಮೂಲಕ ಕಾರ್ಯಾಚರಣೆ ಆರಂಭಿಸಿದೆ. ವ್ಯಾಪ್ತಿ: ಈ ಘಟಕದ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತ ಬಸ್ ನಿಲ್ದಾಣವೂ ಒಳಗೊಂಡಿದೆ. ಸಾರಿಗೆ ಸಂಸ್ಥೆಯ ಇತರೆ ಅಭಿವೃದ್ಧಿ ಕಾಮಗಾರಿಗಳು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ಪಟ್ಟು ಸಡಿಲಿಸಿರುವ ರಾಜ್ಯಪಾಲ ಆರ್.ಎನ್. ರವಿ, ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವ ಮೂಲಕ ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಡಳಿತಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಸಂವಿಧಾನದ ಅಧಿಕಾರ ಚಲಾವಣೆ ಭಾರತದ ಸಂವಿಧಾನದ ವಿಧಿ 174 (2)(b) ರ ಅಡಿಯಲ್ಲಿ ತಮಗೆ ನೀಡಲಾದ ಅಧಿಕಾರವನ್ನು ಬಳಸಿದ ರಾಜ್ಯಪಾಲರು, ಪಶ್ಚಿಮ ಬಂಗಾಳ ವಿಧಾನಸಭೆಯನ್ನು ಮೇ 7, 2026 ರಿಂದ ಜಾರಿಗೆ ಬರುವಂತೆ ವಿಸರ್ಜಿಸಿರುವುದಾಗಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಹಿನ್ನೆಲೆ ಮತ್ತು ವಿವಾದ ಬಂಗಾಳ ಸರ್ಕಾರದ ಅವಧಿಯು ನಿನ್ನೆಯೇ ಮುಕ್ತಾಯಗೊಂಡಿದ್ದರೂ, ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ್ದರು. ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಜಯವನ್ನು “ಅಪವಿತ್ರ” ಎಂದು ಕರೆದಿದ್ದ ಅವರು, ಈ ಕೆಳಗಿನ ಆರೋಪಗಳನ್ನು ಮಾಡಿದ್ದರು: ಬಿಜೆಪಿಯು ಇವಿಎಂ (EVM) ಅಕ್ರಮ ಮತ್ತು ಮತಗಳ ಲೂಟಿ ಮೂಲಕ ಗೆದ್ದಿದೆ. ಚುನಾವಣಾ ಆಯೋಗವು…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ರಾಜ್ಯ ಸಚಿವ ಸಂಪುಟವನ್ನು ರಾಜ್ಯಪಾಲರು ಅಧಿಕೃತವಾಗಿ ವಿಸರ್ಜಿಸಲಾಗಿದ್ದು, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಸಂಪುಟ ವಿಸರ್ಜನೆ: ರಾಜ್ಯಪಾಲರ ನಿರ್ದೇಶನದಂತೆ ಪಶ್ಚಿಮ ಬಂಗಾಳದ ಹಾಲಿ ಸಚಿವ ಸಂಪುಟವನ್ನು ವಿಸರ್ಜಿಸಲಾಗಿದೆ. ರಾಜೀನಾಮೆ ಸಲ್ಲಿಕೆ: ಚುನಾವಣಾ ಫಲಿತಾಂಶಗಳ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಈಗ ಸಂಪುಟ ವಿಸ್ತರಣೆಯ ನಂತ್ರ ಇನ್ನೂ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿರದಂತೆ ಆಗಿದೆ. ಚುನಾವಣಾ ಫಲಿತಾಂಶದ ಪ್ರಭಾವ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ಮುಂದಿನ ನಡೆ: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಲಿದ್ದು, ಬಿಜೆಪಿ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿರುವ ಮುನ್ಸೂಚನೆಗಳಿವೆ. ದಶಕಗಳ ಕಾಲ ಬಂಗಾಳವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಈ ಮೂಲಕ ದೊಡ್ಡ…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಳು ಮುಕ್ತಾಯಗೊಂಡ ಬೆನ್ನಲ್ಲೇ, ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (Special Intensive Revision – SIR) ಸಂಬಂಧಿಸಿದ ಮೇಲ್ಮನವಿ ನ್ಯಾಯಮಂಡಳಿಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಮುಖ ಅಂಶಗಳು: ರಾಜೀನಾಮೆಗೆ ಕಾರಣ: ವೈಯಕ್ತಿಕ ಕಾರಣಗಳನ್ನು ನೀಡಿ ನ್ಯಾಯಮೂರ್ತಿ ಶಿವಜ್ಞಾನಂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಹಿನ್ನೆಲೆ: ಸುಪ್ರೀಂ ಕೋರ್ಟ್ ಮಾರ್ಚ್‌ನಲ್ಲಿ ನೀಡಿದ್ದ ನಿರ್ದೇಶನದಂತೆ, ಭಾರತೀಯ ಚುನಾವಣಾ ಆಯೋಗವು (ECI) ನೇಮಕ ಮಾಡಿದ್ದ 19 ನಿವೃತ್ತ ನ್ಯಾಯಮೂರ್ತಿಗಳಲ್ಲಿ ಶಿವಜ್ಞಾನಂ ಕೂಡ ಒಬ್ಬರಾಗಿದ್ದರು. ಮತದಾರರ ಪಟ್ಟಿಯಿಂದ ಹೆಸರು ಕಡಿತಗೊಂಡವರ ಮೇಲ್ಮನವಿಗಳನ್ನು ಆಲಿಸುವುದು ಈ ನ್ಯಾಯಮಂಡಳಿಯ ಜವಾಬ್ದಾರಿಯಾಗಿತ್ತು. ಚುನಾವಣಾ ಪ್ರಭಾವ: ಈ ಚುನಾವಣಾ ಪೂರ್ವ ಪ್ರಕ್ರಿಯೆಯಲ್ಲಿ ಸುಮಾರು 34 ಲಕ್ಷ ಜನರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಕೆಲವೇ ಕೆಲವು ಜನರಿಗೆ ನ್ಯಾಯಮಂಡಳಿಯಿಂದ ಪರಿಹಾರ…

Read More

ಬೆಂಗಳೂರು: “ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು ಉದ್ಯೋಗದಲ್ಲಿದ್ದು ಸಂಬಳ ಪಡೆಯುತ್ತಿದ್ದರೂ ಸಹ, ವಿವಾಹದ ನಂತರ ಪತಿಯ ಮನೆಯಲ್ಲಿ ಆಕೆ ಅನುಭವಿಸುತ್ತಿದ್ದ ಜೀವನಮಟ್ಟವನ್ನು ಕಾಪಾಡಿಕೊಳ್ಳಲು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ” ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣದ ಹಿನ್ನೆಲೆ: ಅರ್ಜಿದಾರ ಪತಿ ಮತ್ತು ಪತ್ನಿ ಇಬ್ಬರೂ ಈ ಮೊದಲೇ ವಿಚ್ಛೇದನ ಪಡೆದವರಾಗಿದ್ದು, 2021ರಲ್ಲಿ ಮರು ವಿವಾಹವಾಗಿದ್ದರು. ಆದರೆ, ದಾಂಪತ್ಯದಲ್ಲಿ ಮೂಡಿದ ಭಿನ್ನಾಭಿಪ್ರಾಯದಿಂದಾಗಿ 2022ರಲ್ಲಿ ಪತ್ನಿಯು ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 20 ಸಾವಿರ ರೂಪಾಯಿ ಮಧ್ಯಂತರ ಜೀವನಾಂಶ ನೀಡುವಂತೆ ಪತಿಗೆ ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿಯು ಹೈಕೋರ್ಟ್ ಮೆಟ್ಟಿಲೇರಿದ್ದರು. ಪತಿಯ ವಾದವೇನಿತ್ತು? ತಾವು 2023ರಲ್ಲಿ ಕೆಲಸ ಕಳೆದುಕೊಂಡಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದೇನೆ ಎಂದು ಪತಿ ವಾದಿಸಿದ್ದರು. ತಂದೆ-ತಾಯಿಯ ಪಿಂಚಣಿ ಹಾಗೂ ಹಳೆಯ ಉಳಿತಾಯದ…

Read More