Author: kannadanewsnow09

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಗಲಾಟೆ ಮಾಸೋ ಮುನ್ನವೇ ಮತ್ತೊಂದು ದೃಶ್ ಕೃತ್ಯ ಎಸಗಲಾಗಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ಇಡಲಾಗಿದೆ. ಬಳ್ಳಾರಿಯ ಬ್ಯಾನರ್ ಗಲಾಟೆ ಮಾಸೋ ಮುನ್ನವೇ ಮತ್ತೊಂದು ಕೃತ್ಯವನ್ನು ಎಸಗಲಾಗಿದೆ. ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ. ಪೆಟ್ರೋಲ್ ಸುರಿದು ಮಾಡೆಲ್ ಹೌಸ್ ಗೆ ಬೆಂಕಿ ಇರಿಸಿರೋದಾಗಿ ಹೇಳಲಾಗುತ್ತಿದೆ. ಕೈ ಶಾಸಕ ಭರತ್ ರೆಡ್ಡಿ ಬೆಂಬಲಿಗರೇ ಇನ್ನು ಮಾಡಿರುವುದು ಎಂಬುದಾಗಿ ಬಳ್ಳಾರಿಯಲ್ಲಿ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಶಾಸಕ ಭರತ್ ರೆಡ್ಡಿ ವಿರುದ್ಧ ಸೋಮಶೇಖರ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಕಿ ಹಚ್ಚಿದಂತ ಘಟನಾ ಸ್ಥಳಕ್ಕೆ ಪೊಲೀಸರು ಕೂಡಲೇ ಬಂದಿದ್ದಾರೆ. ಇದನ್ನು ನಾವು ಬಿಡಲ್ಲ. ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದಿದ್ದಾರೆ. ಬ್ಯಾನರ್ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ. ಈ ಘಟನೆಯ ಕುರಿತಂತೆ ಬಳ್ಳಾರಿ ಎಸ್…

Read More

ಬಳ್ಳಾರಿ: ಜಿಲ್ಲೆಯ ಜಿ ಸ್ಕ್ರೈರ್ ಲೇಔಟ್ ನಲ್ಲಿ ಇರುವಂತ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ಇಡಲಾಗಿದೆ. ಬಳ್ಳಾರಿಯ ಬ್ಯಾನರ್ ಗಲಾಟೆ ಬಳಿಕ ಮತ್ತೊಂದು ಕೃತ್ಯ ಎಸಗಲಾಗಿದೆ. ಬಳ್ಳಾರಿಯ ಬ್ಯಾನರ್ ಗಲಾಟೆ ಮಾಸೋ ಮುನ್ನವೇ ಮತ್ತೊಂದು ಕೃತ್ಯವನ್ನು ಎಸಗಲಾಗಿದೆ. ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ. ಕೈ ಶಾಸಕ ಭರತ್ ರೆಡ್ಡಿ ಬೆಂಬಲಿಗರೇ ಇನ್ನು ಮಾಡಿರುವುದು ಎಂಬುದಾಗಿ ಬಳ್ಳಾರಿಯಲ್ಲಿ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಶಾಸಕ ಭರತ್ ರೆಡ್ಡಿ ವಿರುದ್ಧ ಸೋಮಶೇಖರ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಕಿ ಹಚ್ಚಿದಂತ ಘಟನಾ ಸ್ಥಳಕ್ಕೆ ಪೊಲೀಸರು ಕೂಡಲೇ ಬಂದಿದ್ದಾರೆ. ಇದನ್ನು ನಾವು ಬಿಡಲ್ಲ. ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದಿದ್ದಾರೆ.

Read More

ಬೆಂಗಳೂರು: ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‍ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ…

Read More

ಬೆಂಗಳೂರು: ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವಂತ 6 ರಿಂದ 12ನೇ ತರಗತಿ ವರೆಗಿನ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಚಿ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, KREIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು 19,64,507 ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ ಪ್ಯಾಡ್‌ಗಳನ್ನು ಒದಗಿಸಿದ್ದೇವೆ. ಮುಟ್ಟಿನ ಕಪ್‌ʼ ಯೋಜನೆಯಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಟ್ಟು 9,44,466 ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ಅನ್ನು ಒದಗಿಸಲು ಇಲಾಖೆ ಸಜ್ಜಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದಾರೆ. https://twitter.com/KarnatakaVarthe/status/2014679394934259929 ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಮತ್ತು…

Read More

ಬೆಂಗಳೂರು: ರಾಜ್ಯದಲ್ಲಿ ನಿಯಮ ಪಾಲನೆ ಮಾಡಿದ್ರೆ ಮಾತ್ರವೇ ಖಾಸಗಿ ಬಸ್ ಗಳಿಗೆ ಸಾಮರ್ಥ್ಯ ಪ್ರಮಾಣಪತ್ರವನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪ್ರಯಾಣಿಕರ ಸುರಕ್ಷತಾ ಮಾನದಂಡಗಳನ್ನು ಪಾಲಿಸಿದರೆ ಮಾತ್ರ ಖಾಸಗಿ ಹವಾನಿಯಂತ್ರಿತ ಸ್ಲೀಪರ್ ಕೋಚ್ ಹಾಗೂ ಪ್ರವಾಸಿ ಬಸ್‌ಗಳಿಗೆ ವಾಹನ ಸಾಮರ್ಥ್ಯ ಪ್ರಮಾಣ ಪತ್ರ ನೀಡಲಾಗುವುದು. ರಾಜ್ಯದಲ್ಲಿ ಸಂಭವಿಸಿರುವ ಸ್ಲೀಪರ್ ಕೋಚ್ ಬಸ್‌ಗಳ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. https://twitter.com/KarnatakaVarthe/status/2014681183138070978 ರಾಜ್ಯದಲ್ಲಿ ಸಾರಿಗೆ ಇಲಾಖೆಯಿಂದ ‘ಖಾಸಗಿ ಬಸ್‌’ಗಳಿಗೆ ಸುರಕ್ಷತಾ ಮಾನದಂಡ ರಿಲೀಸ್: ಈ ನಿಯಮ ಪಾಲನೆ ಕಡ್ಡಾಯ ರಾಜ್ಯದಲ್ಲಿ ಖಾಸಗಿ ಬಸ್ ಗಳ ಅವಘಡ ತಪ್ಪಿಸಲು ಸರ್ಕಾರ ಮಹತ್ವದ ಕ್ರಮ ವಹಿಸಿದೆ. ಸಾರಿಗೆ ಇಲಾಖೆಯಿಂದ ಖಾಸಗಿ ಬಸ್ ಗಳಿಗೆ ಸುರಕ್ಷತಾ ಮಾನದಂಡಗಳನ್ನು ಬಿಡುಗಡೆ ಮಾಡಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯಿಂದ ಸುರಕ್ಷತಾ ಮಾನದಂಡ ಬಿಡುಗಡೆ ಮಾಡಲಾಗಿದ್ದು, ಖಾಸಗಿ ಬಸ್ ಗಳ ಚಾಲಕನ ಆಸನದ ಹಿಂಭಾಗದಲ್ಲಿ ತುರ್ತು…

Read More

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಬಸ್ ಗಳ ಅವಘಡ ತಪ್ಪಿಸಲು ಸರ್ಕಾರ ಮಹತ್ವದ ಕ್ರಮ ವಹಿಸಿದೆ. ಸಾರಿಗೆ ಇಲಾಖೆಯಿಂದ ಖಾಸಗಿ ಬಸ್ ಗಳಿಗೆ ಸುರಕ್ಷತಾ ಮಾನದಂಡಗಳನ್ನು ಬಿಡುಗಡೆ ಮಾಡಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯಿಂದ ಸುರಕ್ಷತಾ ಮಾನದಂಡ ಬಿಡುಗಡೆ ಮಾಡಲಾಗಿದ್ದು, ಖಾಸಗಿ ಬಸ್ ಗಳ ಚಾಲಕನ ಆಸನದ ಹಿಂಭಾಗದಲ್ಲಿ ತುರ್ತು ನಿರ್ಗಮನದ ದ್ವಾರದ ವ್ಯವಸ್ಥೆ ಇರಬೇಕು. ಸ್ಲೀಪರ್ ಬರ್ತ್ ಗಳಲ್ಲಿ ಸೈಡರ್ ಓಪನ್ ಕಡ್ಡಾಯ ಎಂಬುದಾಗಿ ಸೂಚಿಸಿದೆ. ಒಂದು ತಿಂಗಳ ಒಳಗಾಗಿ ಅಗ್ನಿ ಪತ್ತೆ ವ್ಯವಸ್ಥೆ ಅಳವಡಿಸಿಕೊಳ್ಳಬೇಕು. ಕನಿಷ್ಠ 10 ಕೆಜಿ ತೂಕದ ಅಗ್ನಿಶಾಮಕ ಉಪಕರಣಗಳನ್ನು ಬಸ್ ನಲ್ಲಿ ಇರಿಸಬೇಕು. ಬಸ್ ಕವಚ ನಿರ್ಮಾಣ ಸಂಸ್ಥೆಯ ಮಾನ್ಯತೆ ಪರಿಶೀಲನೆ ನಂತರವೇ ನೋಂದಣಿ ಪ್ರಕ್ರಿಯೆ ನಡೆಸುವಂತೆ ತಿಳಿಸಲಾಗಿದೆ. ಇನ್ನೂ ಚಾಸಿಸ್ ಗೆ ಅನಧಿಕೃತ ವಿಸ್ತರಣೆ ಮಾಡೋದಕ್ಕೆ ನಿರ್ಬಂಧ ಹೇರಲಾಗಿದೆ. ಅನುಮೋದಿತ ಪರೀಕ್ಷಾ ಸಂಸ್ಥೆಯಿಂದ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಸುರಕ್ಷತಾ ಮಾನದಂಡಗಳಲ್ಲಿ ತಿಳಿಸಿದೆ. https://twitter.com/KarnatakaVarthe/status/2014681772827803867 https://kannadanewsnow.com/kannada/uproar-by-bjp-members-in-legislative-council-proceedings-adjourned-to-tuesday/…

Read More

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯರಿಂದ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಲಾಯಿತು. ವಿಪಕ್ಷಗಳ ಸದಸ್ಯರಿಂದ ಗದ್ದಲ ಕೋಲಾಹಲವನ್ನೇ ಎಬ್ಬಿಸಲಾಯಿತು. ಈ ಹಿನ್ನಲೆಯಲ್ಲಿ ಸದನದ ಕಲಾಪವನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ. ಇಂದು ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಉಭಯ ಸದನಗಳಲ್ಲಿ ಅಬಕಾರಿ ಇಲಾಖೆಯ ಲಂಚಾವತಾರದ ಬಗ್ಗೆ ವಿಪಕ್ಷಗಳ ಸದಸ್ಯರಿಂದ ಭಾರೀ ಆಕ್ರೋಶವೇ ವ್ಯಕ್ತವಾಯಿತು. ಈ ವಿಷಯದ ಕುರಿತಂತೆ ಚರ್ಚೆಗೆ ಅವಕಾಶವನ್ನು ನೀಡುವಂತೆ ಒತ್ತಾಯಿಸಿದ್ದಲ್ಲದೇ, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೂ ಆಗ್ರಹಿಸಲಾಯಿತು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ವಿಚಾರವಾಗಿ ವಿಧಾನ ಪರಿಷತ್ತಿನಲ್ಲಿ ಗದ್ದಲ, ಕೋಲಾಹಲವನ್ನೇ ವಿಪಕ್ಷಗಳ ಸದಸ್ಯರು ನಡೆಸಿದರು. ಚರ್ಚೆಯ ಜೊತೆಗೆ ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸುವಂತೆಯೂ ಒತ್ತಾಯಿಸಿ ಧರಣಿ ನಡೆಸಿದರು. ಹೀಗಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿಕೆ ಮಾಡಿದರು. https://kannadanewsnow.com/kannada/law-is-the-same-for-all-excise-minister-should-resign-and-face-investigation-r-ashok-demands/ https://kannadanewsnow.com/kannada/minister-ishwar-khandre-gave-this-stern-instruction-to-control-forest-fires-before-the-onset-of-summer-in-the-state/

Read More

ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ ಆಗಿದೆ. ಅಬಕಾರಿ ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದಂತ ಅವರು, ಅಬಕಾರಿ ಸಚಿವರ ಭ್ರಷ್ಟಾಚಾರದ ವಿಚಾರವಾಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಸಚಿವರು ಇನ್ನೂ ಅಧಿಕಾರ ಅನುಭವಿಸುತ್ತಿದ್ದಾರೆ ಎಂದು ಗುಡುಗಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಮೊದಲು ರಾಜೀನಾಮೆ, ಆಮೇಲೆ ತನಿಖೆ ಎಂದಾದರೆ ಕಾಂಗ್ರೆಸ್‌ ಸಚಿವರ ವಿಚಾರದಲ್ಲೂ ಅದೇ ನಿಯಮ ಪಾಲಿಸಬೇಕು. ಅಬಕಾರಿ ಸಚಿವರು ಮೊದಲು ರಾಜೀನಾಮೆ ನೀಡಲಿ, ಆಮೇಲೆ ತನಿಖೆ ಎದುರಿಸಲಿ ಎಂಬುದಾಗಿ ಒತ್ತಾಯಿಸಿದರು. https://twitter.com/RAshokaBJP/status/2014679890214453347 https://kannadanewsnow.com/kannada/a-jaish-terrorist-was-killed-in-an-encounter-in-jammu-and-kashmir/ https://kannadanewsnow.com/kannada/minister-ishwar-khandre-gave-this-stern-instruction-to-control-forest-fires-before-the-onset-of-summer-in-the-state/

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಎನ್‌ಕೌಂಟರ್ ನಡೆದಿದ್ದು, ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಅಧಿಕಾರಿಗಳ ಪ್ರಕಾರ, ಭಯೋತ್ಪಾದಕ ಜೈಶ್‌ಗೆ ಸೇರಿದವನಾಗಿದ್ದು, ಆತನನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಬಿಲ್ಲಾವರ್‌ನ ಸಾಮಾನ್ಯ ಪ್ರದೇಶದಲ್ಲಿ ಸೇನೆ ಮತ್ತು ಸಿಆರ್‌ಪಿಎಫ್‌ನ ಸಮನ್ವಯದೊಂದಿಗೆ ಜೆಕೆಪಿ ತಂಡವು ಈ ಕಾರ್ಯಾಚರಣೆಯನ್ನು ನಡೆಸಿತು. ಈ ಬೆಳವಣಿಗೆಯನ್ನು ದೃಢಪಡಿಸಿದ ಐಜಿಪಿ ಜಮ್ಮು, “ಕಥುವಾ ಜಿಲ್ಲೆಯ ಬಿಲ್ಲಾವರ್‌ನ ಸಾಮಾನ್ಯ ಪ್ರದೇಶದಲ್ಲಿ ಸೇನೆ ಮತ್ತು ಸಿಆರ್‌ಪಿಎಫ್‌ನೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಜೈಶ್ ಭಯೋತ್ಪಾದಕನನ್ನು ಸಣ್ಣ ಜೆಕೆಪಿ ತಂಡವು ತಟಸ್ಥಗೊಳಿಸಿದೆ” ಎಂದು ಹೇಳಿದರು. ಕಾರ್ಯಾಚರಣೆಯ ವಿವರಗಳನ್ನು ರೈಸಿಂಗ್ ಸ್ಟಾರ್ ಕಾರ್ಪ್ಸ್ X ನಲ್ಲಿ ಪೋಸ್ಟ್ ಮಾಡಿ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಜನವರಿ 23, 26 ರಂದು ಕಥುವಾದ ಪರ್ಹೆತಾರ್ ಸಾಮಾನ್ಯ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಪ್ರದೇಶವನ್ನು ಸುತ್ತುವರಿಯಲಾಯಿತು ಮತ್ತು ಸಂಪರ್ಕವನ್ನು…

Read More

ಬೆಂಗಳೂರು: ಹೆಣ್ಣು ಮಕ್ಕಳಿಗೆ ಗೌರವ, ಮಾನ್ಯತೆ ನೀಡಬೇಕಾದದ್ದು ನಮ್ಮ ಕರ್ತವ್ಯ. ಇಂದು ಹೆಣ್ಣು ಎಲ್ಲ ರಂಗದಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದಾಳೆ ಎನ್ನುವುದು ಅತ್ಯಂತ ಸಂತಸದ ವಿಷಯ. ಸಮಾಜದಲ್ಲಿ ಇನ್ನೂ ಬದಲಾವಣೆ ಆಗಬೇಕಾದ ಅಗತ್ಯ ಇದೆ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಣ್ಣು ಬ್ರೂಣ ಹತ್ಯೆ ತಡಗಟ್ಟುವಲ್ಲಿ ನಮ್ಮ ಇಲಾಖೆ ಗಮನಾರ್ಹ ಕಾರ್ಯ ಮಾಡಿದೆ. ಕಟ್ಟುನಿಟ್ಟಿನ ಕಾನೂನು ರೂಪಿಸಿದೆ. ಪ್ರಸಕ್ತ 1000:947 ಪುರುಷ, ಸ್ತ್ರೀ ಅನುಪಾತ ಇದೆ. ಇದನ್ನು ಸರಿಪಡಿಸದಿದ್ದರೆ, ಸಾಮಾಜಿಕ ಸಮಸ್ಯೆ ಉಂಟಗುತ್ತದೆ. ಕೇವಲ ಕಾನೂನು ಕ್ರಮಗಳಿಂದ ಮಾತ್ರವಲ್ಲದೇ, ಸಾಮಾಜಿಕ ಜಾಗೃತಿಯೂ ಮುಖ್ಯ. ಎಷ್ಟೋ ಕಡೆ ಹೆಣ್ಣುಮಕ್ಕಳೇ ಈ ಕೆಟ್ಟ ಕಾರ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಹೆಣ್ಣಿಗೆ ಸ್ವಾವಲಂಬನೆ, ಸ್ವಾತಂತ್ರ್ಯ ನೀಡಲು ನಾವು ಬೆಂಬಲಿಸುತ್ತಾ, ಅವರ ಭವಿಷ್ಯ ಉಜ್ವಲಗೊಳಿಸೋಣ ಎಂದರು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ (RBSK)ಕಾರ್ಯಕ್ರಮದಡಿಯಲ್ಲಿ 6 ವರ್ಷದೊಳಗಿನ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಹಾಗೂ ಸರ್ಕಾರಿ ಮತ್ತು ಸರ್ಕಾರಿ…

Read More