Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಕರಕುಶಲ ವಸ್ತುಗಳು ಹಾಗೂ ವೈವಿಧ್ಯಮಯ ಆಹಾರ ಖಾದ್ಯಗಳನ್ನೊಳಗೊಂಡ ಬಹುನಿರೀಕ್ಷಿತ “ಅವ್ವಸಂತೆ-20” ಮೇಳವು ಮೇ.30ರ ಶನಿವಾರದಂದು ಪಟ್ಟಣದ ಬ್ರಾಸಂ ಸಭಾಂಗಣದಲ್ಲಿ ಆಯೋಜನೆಗೊಂಡಿದೆ ಎಂದು ಜೀವನ್ಮುಖಿ ಸಂಸ್ಥೆಯ ಎಂ.ವಿ.ಪ್ರತಿಭಾ ತಿಳಿಸಿದರು. ಇಂದು ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೀವನ್ಮುಖಿ ಸಂಸ್ಥೆ ಹಾಗೂ ಹೆಗಡೋದಿನ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ಮಹಿಳೆಯರ ಸಾರಥ್ಯದಲ್ಲೇ ಈ ವಿಶಿಷ್ಟ ಕರಕುಶಲ ಹಾಗೂ ಆಹಾರ ಮೇಳ ನಡೆಯಲಿದೆ ಎಂದರು. ಮಹಿಳಾ ಆರ್ಥಿಕ ಸಬಲೀಕರಣಕ್ಕೆ ವೇದಿಕೆ “ಕಳೆದ ಐದು ವರ್ಷಗಳಿಂದ ಜೀವನ್ಮುಖಿ ಸಂಸ್ಥೆಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿ ನಿರಂತರವಾಗಿ ಶ್ರಮಿಸುತ್ತಿದೆ. ‘ಅವ್ವಸಂತೆ’ಯ ಮೂಲಕ ಮಹಿಳಾ ಸ್ವಸಹಾಯ ಸಂಘಟನೆಗಳು ಹಾಗೂ ಕರಕುಶಲಕರ್ಮಿಗಳು ತಯಾರಿಸಿದ ವಿಶಿಷ್ಟ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲಾಗುತ್ತಿದೆ. ಈವರೆಗೆ ಇಂತಹ 19 ಸಂತೆಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಈ ಬಾರಿ ಹೆಮ್ಮೆಯ 20ನೇ ಅವ್ವಸಂತೆ ನಡೆಯುತ್ತಿದೆ. ಇದರಲ್ಲಿ ರಾಜ್ಯದ…

Read More

ಮಂಡ್ಯ : ನಾಡಪ್ರಭು ಕೆಂಪೇಗೌಡರು ಕಟ್ಟಿರುವ ಸರ್ವೆ ಜನಾಂಗದ ಶಾಂತಿಯ ತೋಟವಾಗಿರುವ ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಬಣ್ಣಿಸಿದರು. ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನ ಆವರಣದಲ್ಲಿ ಬುಧವಾರ ಚುಂಚಶ್ರೀ ಗೆಳೆಯರ ಬಳಗ, ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘದ ವತಿಯಿಂದ ನಡೆದ ಎಸ್.ಎಂ.ಕೃಷ್ಣ ರವರ 94 ನೇ ಜನ್ಮ ದಿನೋತ್ಸವ ಮತ್ತು ಸಂಸ್ಮರಣೆ ಹಾಗೂ ಎಸ್.ಎಂ.ಕೃಷ್ಣ ಆಡಳಿತ ಸೇವಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭದ ಅಭಿನಂದನಾ ಭಾಷಣ ಮಾಡಿ ಅವರು ಮಾತನಾಡಿದರು. ದಿ.ಎಸ್.ಎಂ.ಕೃಷ್ಣ ರವರು ನಮ್ಮ ಮಂಡ್ಯ ಜಿಲ್ಲೆಯು ಕಂಡಂತಹ ಮಹಾನ್ ಮೇರು ನಾಯಕರಾಗಿದ್ದವರು. ಪ್ರಜಾಪ್ರಭುತ್ವದಲ್ಲಿ ನಾಲ್ಕು ಸದನಗಳಿವೆ ಈ ಎಲ್ಲಾ ಸದನಗಳಲ್ಲೂ ನಿಷ್ಪಕ್ಷಪಾತವಾಗಿ ಆಡಳಿತ ನಡೆಸಿ ಯಾವುದೇ ಒಂದು ಕಪ್ಪು ಚುಕ್ಕೆ ಬರೆದ ರೀತಿ ಕಾರ್ಯ ನಿರ್ವಹಿಸಿ ಅಜಾತಶತ್ರು ಎನಿಸಿಕೊಂಡವರು. ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಬೆಂಗಳೂರನ್ನು ವಿಶ್ವದ ಭೂಪಟದಲ್ಲಿ ಗುರುತಿಸುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.…

Read More

ಶಿವಮೊಗ್ಗ: ರಸಗೊಬ್ಬರ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳ ನಿರಂತರ ಏರಿಕೆಯನ್ನು ತೀವ್ರವಾಗಿ ಖಂಡಿಸಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಮತ್ತು ಸಂಯುಕ್ತ ರೈತ ಸಂಘದ ವತಿಯಿಂದ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ತಕ್ಷಣವೇ ಕೃಷಿ ಬಿಕ್ಕಟ್ಟು ಬಗೆಹರಿಸುವಂತೆ ಒತ್ತಾಯಿಸಿದರು. ಸರ್ಕಾರಗಳ ರೈತ ವಿರೋಧಿ ನೀತಿ ಬಯಲಾಗಿದೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, “ಕೇಂದ್ರ ಸರ್ಕಾರದ ರೈತವಿರೋಧಿ ಧೋರಣೆ ಹಂತಹಂತವಾಗಿ ಬಯಲಿಗೆ ಬರುತ್ತಿದೆ. ಚುನಾವಣೆಗೂ ಮುನ್ನ ಬಿಜೆಪಿ ನೀಡಿದ್ದ ಭರವಸೆಗಳೆಲ್ಲಾ ಪೊಳ್ಳು ಎಂಬುದು ಈಗ ಸಾಬೀತಾಗಿದೆ. ಸ್ವಾಮಿನಾಥನ್ ವರದಿ ಜಾರಿ, ಬೆಂಬಲಬೆಲೆ ಮತ್ತು ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತ ರಾಜ್ಯ ಸರ್ಕಾರವೂ ಸಹ ಎಪಿಎಂಸಿ ಕಾಯ್ದೆ ಹಿಂಪಡೆಯುವುದು ಸೇರಿದಂತೆ ತಾನು ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ.…

Read More

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಅಧಿಕೃತಗೊಳ್ಳುತ್ತಿದ್ದಂತೆ, ಇಷ್ಟು ದಿನಗಳ ಕಾಲ ರಾಜಕೀಯ ವಲಯದಲ್ಲಿದ್ದ ಆತಂಕ ಈಗ ಸಿಎಂ ಕಚೇರಿಯ ನೌಕರರಲ್ಲಿ ಭಾವುಕತೆಯ ಅಲೆಯನ್ನೇ ಸೃಷ್ಟಿಸಿದೆ. ಇಂದು ಸಂಜೆ ಜಾತಿಗಣತಿ ವರದಿ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡು ಸಿಬ್ಬಂದಿ ಕಣ್ಣೀರು ಹಾಕಿದ ಅಪರೂಪದ ಹಾಗೂ ಆಘಾತಕಾರಿ ಘಟನೆ ಜರುಗಿದೆ. ‘ರಾಜೀನಾಮೆ ನೀಡಬೇಡಿ ಸರ್ ಪ್ಲೀಸ್’ ಎಂದು ಕಣ್ಣೀರಿಟ್ಟ ಸಿಬ್ಬಂದಿ: ಇಂದು ಸಂಜೆ ನಿಗದಿಯಂತೆ ಹಿಂದುಳಿದ ವರ್ಗಗಳ ಆಯೋಗದಿಂದ ಜಾತಿಗಣತಿ ವರದಿ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಆಗಮಿಸಿದರು. ಸಿಎಂ ಬರುತ್ತಿದ್ದಂತೆ ಅಲ್ಲಿ ನೆರೆದಿದ್ದ ಮುಖ್ಯಮಂತ್ರಿ ಕಚೇರಿಯ ನೌಕರರು ಹಾಗೂ ಪ್ರಮುಖವಾಗಿ ಗುತ್ತಿಗೆ (Contract) ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ ಸಿದ್ದರಾಮಯ್ಯ ಅವರನ್ನು ನೋಡಿ ತಡೆಯಲಾರದೆ ಕಣ್ಣೀರು ಹಾಕಲು ಆರಂಭಿಸಿದರು. “ಸರ್, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ನೀಡಬೇಡಿ ಸರ್ ಪ್ಲೀಸ್…” ಎಂದು ಸಿಬ್ಬಂದಿ ಕಣ್ಣೀರಿಡುತ್ತಾ ಮುಖ್ಯಮಂತ್ರಿಗಳ ಮುಂದೆ…

Read More

ಬೆಂಗಳೂರು: ರಾಜ್ಯ ಸರ್ಕಾರವು ಮೂವರು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಜಂಟಿ ಮತ್ತು ಹೆಚ್ಚುವರಿ ಉಸ್ತುವಾರಿಗಳೊಂದಿಗೆ ಹೊಸ ಹುದ್ದೆಗಳಿಗೆ ನೇಮಿಸಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳು ಮತ್ತು ಅವರ ಹೊಸ ಹುದ್ದೆಗಳ ವಿವರ ಈ ಕೆಳಗಿನಂತಿದೆ: 1. ಸುಬೋಧ್ ಯಾದವ್, ಐಎಎಸ್ (KN: 1999) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR-ಆಡಳಿತ ಸುಧಾರಣೆ) ಪ್ರಧಾನ ಕಾರ್ಯದರ್ಶಿಯಾಗಿದ್ದ ಸುಬೋಧ್ ಯಾದವ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಇದರೊಂದಿಗೆ, ಈ ಹಿಂದೆ ಈ ಹುದ್ದೆಯ ಹೆಚ್ಚುವರಿ ಉಸ್ತುವಾರಿ ಹೊಂದಿದ್ದ ಸಲ್ಮಾ ಕೆ. ಫಹೀಮ್ ಅವರನ್ನು ಮುಕ್ತಗೊಳಿಸಲಾಗಿದೆ. ಹೆಚ್ಚುವರಿ ಜವಾಬ್ದಾರಿ: ಸುಬೋಧ್ ಯಾದವ್ ಅವರು ತಮ್ಮ ಹಳೆಯ ಹುದ್ದೆಯಾದ ‘ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಆಡಳಿತ ಸುಧಾರಣೆ) ಪ್ರಧಾನ ಕಾರ್ಯದರ್ಶಿ’ ಹುದ್ದೆಯ ಸಮಾನವರ್ತಿ (Concurrent Charge) ಉಸ್ತುವಾರಿಯನ್ನೂ ಮುಂದುವರಿಸಲಿದ್ದಾರೆ. 2. ಖುಷ್ಬೂ ಜಿ. ಚೌಧರಿ, ಐಎಎಸ್ (KN: 2008)…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ಚೂರಿಯಿಂದ ಇರಿದು ಕೊಲೆ ಮಾಡಿದ ಮುಖ್ಯ ಆರೋಪಿ ಮಂಜು ಯಾನೆ ಟೀಪುಡಿ ಮಂಜು ಹಾಗೂ ಕೊಲೆ ಕೃತ್ಯವನ್ನು ಕೌಟಂಬಿಕ ಕಲಹವೆಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮೃತನ ಪತ್ನಿ ಚೈತ್ರಾ ಬಂಧಿತ ಆರೋಪಿಗಳಾಗಿದ್ದಾರೆ. ಸಾಗರ ಪಟ್ಟಣದ ಜೆ.ಪಿ. ನಗರದ ನಿವಾಸಿ ಪರಶುರಾಮ್ (40) ಕೊಲೆಯಾದ ದುರ್ದೈವಿ. ಈ ಕುರಿತಂತೆ ಮೇ 26 ರಂದು ಪೊಲೀಸ್ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ. ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ಮಂಜು ಹಾಗೂ ಚೈತ್ರಾ ನಡುವೆ ಅನೈತಿಕ ಸಂಬಂಧವಿತ್ತು. ಈ ವಿಷಯ ಪರಶುರಾಮ್‌ಗೆ ತಿಳಿದು, ದಂಪತಿ ನಡುವೆ ಆಗಾಗ್ಗೆ ಭೀಕರ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ಮೇ 15 ರ ರಾತ್ರಿ ಕೂಡ…

Read More

ಶಿವಮೊಗ್ಗ: ಸ್ಥಳೀಯ ಉಪವಿಭಾಗೀಯ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಸಿಬ್ಬಂದಿಗಳ ತೀವ್ರ ಕೊರತೆ ಮತ್ತು ಕನಿಷ್ಠ ಮೂಲಭೂತ ಸೌಲಭ್ಯಗಳ ಲೋಪವನ್ನು ಖಂಡಿಸಿ, ನಾಗರೀಕ ವೇದಿಕೆ ವತಿಯಿಂದ ಮಂಗಳವಾರ ವೈದ್ಯಾಧಿಕಾರಿಗಳಿಗೆ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು. ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವೇದಿಕೆ ಎಚ್ಚರಿಸಿದೆ. ಶಾಸಕರ ಘೋಷಣೆಗಳು ಕೇವಲ ಕಾಗದದ ಮೇಲಿವೆ: ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ನಾಗರೀಕ ವೇದಿಕೆಯ ಅಧ್ಯಕ್ಷರಾದ ಎಂ. ರಾಜಶೇಖರ್, “ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಬಡ ರೋಗಿಗಳು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಸ್ಥಳೀಯ ಶಾಸಕರು ಪ್ರತಿ ಸಭೆಯಲ್ಲೂ ವೈದ್ಯರ ನೇಮಕ ಹಾಗೂ ಆಸ್ಪತ್ರೆಗೆ ಕೋಟ್ಯಂತರ ಅನುದಾನ ಬರುತ್ತಿದೆ ಎಂದು ಹೇಳುತ್ತಾರೆಯೇ ವಿನಃ, ಅದ್ಯಾವುದೂ ಇಂದಿನವರೆಗೂ ಅನುಷ್ಠಾನಕ್ಕೆ ಬಂದಂತೆ ಕಾಣುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಬಡ ರೋಗಿಗಳು: ಆಸ್ಪತ್ರೆಯ ದುಸ್ಥಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ರಾಜಶೇಖರ್, “ಇಲ್ಲಿನ ಎಕ್ಸ್‌ರೇ ಯಂತ್ರಗಳು ಅತ್ಯಂತ ಹಳೆಯದಾಗಿದ್ದು, ನಿಖರವಾದ ವರದಿ ಬರುತ್ತಿಲ್ಲ. ಆಸ್ಪತ್ರೆಗೆ ಹೊಸ ತಂತ್ರಜ್ಞಾನದ ಸಿ.ಟಿ. ಸ್ಕ್ಯಾನಿಂಗ್…

Read More

ಬೆಂಗಳೂರು: ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 06269 ಮೈಸೂರು – ಎಸ್ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯವನ್ನು 26.05.2026 ರಿಂದ 15.06.2026 ರವರೆಗೆ ಪರಿಷ್ಕರಿಸಲಾಗಿದೆ. ಅದರಂತೆ, ರೈಲು (06269) ಈಗಿರುವ 00:35/00:45 ಗಂಟೆಗಳ ಸಮಯಕ್ಕೆ ಬದಲಾಗಿ 00:20/00:30 ಗಂಟೆಗೆ ಕೆಎಸ್ಆರ್ ಬೆಂಗಳೂರಿಗೆ ಆಗಮಿಸಿ/ನಿರ್ಗಮಿಸಲಿದೆ. II. ರೈಲುಗಳ ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಪುಣೆ ವಿಭಾಗದ ದೌಂಡ್-ಮನ್ಮಾಡ್ ರೈಲು ಮಾರ್ಗದ ವಿಸಾಪುರ-ರಂಜನ್ಗಾಂವ್ ರೋಡ್-ಸರೋಲಾ ನಿಲ್ದಾಣಗಳ ನಡುವೆ ಹಳಿ ದ್ವಿಗುಣಗೊಳಿಸುವ (ಡಬ್ಲಿಂಗ್) ಕಾಮಗಾರಿ ಸಲುವಾಗಿ, ಮಧ್ಯ ರೈಲ್ವೆಯು ಈ ಕೆಳಗಿನ ರೈಲು ಸೇವೆಗಳ ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ ಎಂದು ಸೂಚಿಸಿದೆ. ಅದರ ವಿವರಗಳು ಈ ಕೆಳಗಿನಂತಿವೆ: ಈ ರೈಲುಗಳ ಮಾರ್ಗ ಬದಲಾವಣೆ: 1. ಮೇ 27 ಮತ್ತು 29, 2026 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12627 ಕೆಎಸ್ಆರ್ ಬೆಂಗಳೂರು – ನವದೆಹಲಿ ಕರ್ನಾಟಕ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲು ಸೋಲಾಪುರ, ಕುರ್ದುವಾಡಿ, ಲಾತೂರ್ ರೋಡ್, ಪರ್ಭಣಿ, ಅಂಕೈ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಬಹುನಿರೀಕ್ಷಿತ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ”ಯನ್ನು (ಜಾತಿ ಜನಗಣತಿ ವರದಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಸ್ವೀಕರಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್. ನಾಯಕ್ ಅವರು ಮುಖ್ಯಮಂತ್ರಿಗಳಿಗೆ ವರದಿಯನ್ನು ಹಸ್ತಾಂತರಿಸಿದರು. ಹಿರಿಯ ಸಚಿವರು ಹಾಗೂ ಗಣ್ಯರ ಉಪಸ್ಥಿತಿ: ವರದಿ ಸ್ವೀಕರಿಸುವ ಸಂದರ್ಭದಲ್ಲಿ ಸರ್ಕಾರದ ಪ್ರಮುಖ ಸಚಿವರುಗಳು ಹಾಗೂ ಶಾಸಕರು ಉಪಸ್ಥಿತರಿದ್ದು, ಈ ಮಹತ್ವದ ಕ್ಷಣಕ್ಕೆ ಸಾಕ್ಷಿಯಾದರು. ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ. ಮಹದೇವಪ್ಪ, ಎಂ.ಸಿ. ಸುಧಾಕರ್, ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಶಾಸಕರುಗಳಾದ ಕೋನರೆಡ್ಡಿ, ನರೇಂದ್ರಸ್ವಾಮಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು ಉಪಸ್ಥಿತರಿದ್ದರು. ಆಯೋಗದ ಪದಾಧಿಕಾರಿಗಳ ಹಾಜರಾತಿ: ವರದಿ ಸಲ್ಲಿಕೆಯ ವೇಳೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ. ಸಿ.ಎಂ. ಕುಂದಗೋಳ, ಡಾ.…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಯೋಗದ ಕಾರ್ಯದರ್ಶಿಯವರು ಈ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪರೀಕ್ಷೆಗಳು ಒಟ್ಟು ಮೂರು ಹಂತಗಳಲ್ಲಿ ಜುಲೈ 17 ರಿಂದ ಆಗಸ್ಟ್ 08 ರವರೆಗೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆಯ ಪ್ರಮುಖ ವಿವರಗಳು: ಪ್ರಥಮ ಹಂತದ ಪರೀಕ್ಷೆಗಳು: ಜುಲೈ 17, 2026 ರಿಂದ ಜುಲೈ 19, 2026 ರವರೆಗೆ (ಜಿಲ್ಲಾ ಕೇಂದ್ರಗಳಲ್ಲಿ). ದ್ವಿತೀಯ ಹಂತದ ಪರೀಕ್ಷೆಗಳು: ಜುಲೈ 21, 2026 ರಿಂದ ಜುಲೈ 31, 2026 ರವರೆಗೆ (ವಿಭಾಗೀಯ ಕೇಂದ್ರಗಳಾದ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗದಲ್ಲಿ ನಡೆಯಲಿವೆ. ಜುಲೈ 25 ಮತ್ತು 26 ರ ಪರೀಕ್ಷೆಗಳನ್ನು ಹೊರತುಪಡಿಸಿ). ತೃತೀಯ ಹಂತದ ಪರೀಕ್ಷೆಗಳು: ಆಗಸ್ಟ್ 03, 2026 ರಿಂದ ಆಗಸ್ಟ್ 08, 2026 ರವರೆಗೆ (ಕೇವಲ ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಯಲಿವೆ). ಇಲಾಖಾ ಪರೀಕ್ಷೆಗಳ ವಿವರವಾದ ವೇಳಾಪಟ್ಟಿ 1. ಪ್ರಥಮ…

Read More