Author: kannadanewsnow09

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ( Health Department ) ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವಂತ ನೌಕರರನ್ನು ಖಾಯಂಗೊಳಿಸುವುದಾಗಿ ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ರಾಜ್ಯ ಕಾಂಗ್ರೆಸ್ ಸರ್ಕಾರ ( Congress Governement ) ಅಧಿಕಾರಕ್ಕೆ ಬಂದು ವರ್ಷವೇ ಕಳೆದರೂ, ಪ್ರಣಾಳಿಕೆಯ ಘೋಷಣೆಯ ಬಗ್ಗೆ ಸಿಎಂ ಸಿದ್ಧರಾಮಯ್ಯ( CM Siddaramaiah), ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಲೀ ಚಕಾರವೇ ಎತ್ತಿಲ್ಲ. ಹಾಗಾದ್ರೆ ಆರೋಗ್ಯ ಇಲಾಖೆಯ NHM ನೌಕರರನ್ನು ಖಾಯಂ ಯಾವಾಗ ಮಾಡ್ತೀರಿ ಸಾರ್ ಅಂತ ನೌಕರರು ಸಿಎಂ ಸಿದ್ಧರಾಮಯ್ಯ ಅವರಿಗೆ ಪ್ರಶ್ನಿಸಿದ್ದಾರೆ. ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ( National Health Mission- NHM) ಸಾವಿರಾರು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸ್ಟಾಫ್ ನರ್ಸ್ ಸೇರಿದಂತೆ ಸಮುದಾಯ ಆರೋಗ್ಯ ಅಧಿಕಾರಿಗಳು ಒಳಗೊಂಡು ವಿವಿಧ ವರ್ಗದಲ್ಲಿ NHM ಅಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ನೌಕರರನ್ನು ಖಾಯಂಗೊಳಿಸುವುದಾಗಿ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿತ್ತು. ಆದ್ರೇ ಈವರೆಗೂ…

Read More

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಾಗಿದ್ದಂತವರಿಗೆ ಸಿಹಿಸುದ್ದಿಯೊಂದು ಹೊರ ಬಿದ್ದಿದೆ. ಖಾಲಿ ಇರುವಂತ 3,815 ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತಿದೆ. ಈ ಕುರಿತಂತೆ ವಿಧಾನಪರಿಷತ್ತಿನಲ್ಲಿ ಸದಸ್ಯ ಶಶೀಲ್ ಜಿ ನಮೋಶಿ ಅವರು ಗೃಹ ಇಲಾಖೆಯಲ್ಲಿನ ಯಾವ ಯಾವ ಹುದ್ದೆಗಳ ಮತ್ತು ಎಷ್ಟು ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಯು ಅನುಮೋದನೆ ನೀಡಿದೆ ಅಂತ ಪ್ರಶ್ನಿಸಿದ್ದಾರೆ. ಇದಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಉತ್ತರಿಸಿದ್ದು, 2023-24 ಮತ್ತು 2024-25ನೇ ಸಾಲಿನಲ್ಲಿ ಡಿವೈಎಸ್ಪಿ ಸಿವಿಲ್ 10 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿ ಇರುತ್ತದೆ. 2021-22ನೇ ಸಾಲಿನಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಸಿವಿಲ್ 4000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಅಂತ ತಿಳಿಸಿದ್ದಾರೆ. 2021-22ನೇ ಸಾಲಿನಲ್ಲಿ ಕೆ ಎಸ್ ಆರ್ ಪಿಯ ಪಾಲೋಯರ್ಸ್ 250 ಹುದ್ದೆಗಳ ನೇಮಕಾತಿ ಪೂರ್ಣಗೊಂಡಿದೆ. 2022-23ನೇ ಸಾಲಿನ ಪಿಸಿ ಸಿವಿಲ್ 3000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. 2022-23ನೇ ಸಾಲಿನ ಎಪಿಸಿ ಸಿಎಆರ್, ಡಿಎಆರ್ 1500 ಹುದ್ದೆಗಳ ನೇಮಕಾತಿ…

Read More

ಬೆಂಗಳೂರು: ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ನಡಿದದ್ದಂತ ಬಹುಕೋಟಿ ಟೆಂಡರ್ ಅಕ್ರಮ ಸಂಬಂಧ ಡಿಎಸ್ಇಆರ್ ಟಿ ನಿರ್ದೇಶಕಿಯಾಗಿದ್ದಂತ ವಿ.ಸುಮಂಗಲಾ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ಶಿಕ್ಷಕರ ತರಬೇತಿ ಸಂಸ್ಥೆಗಳು ಹಾಗೂ ವಿವಿಧ ಕಚೇರಿಗಳಲ್ಲಿ ಅನುಪಯುಕ್ತವಾಗಿರುವ ಇ-ತ್ಯಾಜ್ಯ ವಸ್ತುಗಳ ಸಂಗ್ರಹಣೆ ಮತ್ತು ವಿಲೇ ಮಾಡುವ ಟೆಂಡರ್ ನ ಸಂಬಂಧ ಕಾರ್ಯಾದೇಶ ನೀಡಿರುವ M/s E-Pragathi Recycling Pvt Ltd ಸಂಸ್ಥೆಗೆ ತಾಂತ್ರಿಕ ಬಿಡ್ ನಲ್ಲಿ ಅರ್ಹತೆ ಇಲ್ಲದೇ ಇದ್ದರೂ LL ಎಂದು ಪರಿಗಣಿಸಿ ಕಾರ್ಯಾದೇಶ ನೀಡಲಾಗಿದೆ ಎಂದಿದ್ದಾರೆ. ಅನ್ನು ಈ ಸಂಸ್ಥೆಗೆ ಅನುಕೂಲ ಮಾಡಿಕೊಡಲು ಟೆಂಡರ್ ನಲ್ಲಿ Recycling Capacityಯನ್ನು 14000 MTvನಿಂದ 1206.5 MTvಗೆ ತಿದ್ದುಪಡಿ ಮಾಡಲಾಗಿದೆ. ಸದರಿ ಸಂಸ್ಥೆಯು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಗತ್ಯ ಪ್ರಮಾಣಪತ್ರವನ್ನು ಹೊಂದಿಲ್ಲದೇ ಇರುವುದಾಗಿ ಹಾಗೂ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ವರದಿಯಂತೆ ವೇತನ ಶಿಫಾರಸ್ಸುಗಳನ್ನು ಅನುಷ್ಟಾನಗೊಳಿಸುವ ಸಂಬಂಧ ಅಧಿಕೃತ ಆದೇಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದಿನಾಂಕ 29-07-2024ರಿಂದ ನಡೆಸಲು ಉದ್ದೇಶಿಸಲಾಗಿದ್ದಂತ ರಾಜ್ಯ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ಮುಂದೂಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರು ಪತ್ರಿಕಾ ಪ್ರಕಟನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 23-07-2024ರಂದು ರಾಜ್ಯ ವೇತನ ಆಯೋಗದ ವರದಿ ಅನುಷ್ಠಾನ ಹಾಗೂ ಎನ್ ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೆ ಸಂಬಂಧ ಸಂಘದ ಸಭೆ ನಡೆಯಿತು ಎಂದಿದ್ದಾರೆ. ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ದಿನಾಂಕ 22-07-2024ರಂದು ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಆದೇಶಿಸಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆಗಳನ್ನು ಸಲ್ಲಿಸಲು ನಿರ್ಣಯ ಕೈಗೊಳ್ಳಲಾಗಿದೆ ಅಂತ ತಿಳಿಸಿದ್ದಾರೆ. ಎನ್ ಪಿಎಸ್ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಮರುಸ್ಥಾಪಿಸುವ ಭಾಗವಾಗಿ ಸರ್ಕಾರದ ಉನ್ನತ ಅಧಿಕಾರಿಗಳ ತಂಡ ಓಪಿಎಸ್ ಜಾರಿಗೊಳಿಸಿರುವಂತ…

Read More

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜೊತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು. ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನ ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು.. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು. ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ…

Read More

ಬೆಂಗಳೂರು: ರಾಜ್ಯದ ಎಂಜಿನಿಯರ್ ಗಳನ್ನು ಮನೆಹಾಳರು ಎಂದು ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಆರ್ ಅಶೋಕ್ ಅವರು ಜರೆದಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಖಂಡಿಸಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ಅವರಿಂದ ಹಿಡಿದು ಈಗಿನವರವರೆಗೂ ರಾಜ್ಯದ ಪ್ರಗತಿಯಲ್ಲಿ ಇಂಜಿನಿಯರ್ ಗಳ ಕೊಡುಗೆ ಗಣನೀಯವಾದದ್ದು. ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಇಂಜಿನಿಯರ್ ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಇಲ್ಲದೆ ರಾಜ್ಯ ಮತ್ತು ದೇಶದ ಪ್ರಗತಿಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಅಂತಹ ಪ್ರಗತಿಯ ರುವಾರಿಗಳನ್ನು ಮನೆಹಾಳರು ಎಂದು ಅಶೋಕ್ ಅವರು ಕರೆದಿರುವುದು ಸರಿಯಲ್ಲ ಎಂದು ಶಿವಕುಮಾರ್ ಅವರು ಹೇಳಿದ್ದಾರೆ. ಅಶೋಕ್ ಅವರು ತಕ್ಷಣವೇ ಇಂಜಿನಿಯರ್ ಗಳ ಕ್ಷಮಾಪಣೆ ಕೇಳಬೇಕು. ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ. ದೂರವಾಣಿ ಕರೆ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಶೋಕ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಇಂಜಿನಿಯರ್ ಗಳನ್ನು…

Read More

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ನೀಡಿದ್ದು, ದಿನಾಂಕ 26-07-2024ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ಸಚಿವ ಸಂಪುಟ ಸಭೆಯನ್ನು ಅದೇ ದಿನ ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಗಿದೆ ಅಂತ ತಿಳಿಸಿದ್ದಾರೆ. ನಾಳೆ ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಮಹತ್ವದ ನಿರ್ಣಯಗಳಿಗೆ ಅಂಗೀಕಾರ, ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ. https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/ https://kannadanewsnow.com/kannada/from-august-1-it-will-be-mandatory-for-health-department-employees-to-record-real-time-attendance-system-attendance/

Read More

ಇಂದಿನ ದಿನಗಳಲ್ಲಿ ಹಣ ಮಾಡುವುದೊಂದೇ ಹಲವರ ಗುರಿಯಾಗಿದೆ. ಕಷ್ಟಪಟ್ಟು ಹಣ ಸೇರಿಸುವ, ಪ್ರಗತಿ ಬಯಸಿದವರೂ ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ಸಂಪಾದಿಸಲಾಗದೆ, ದುಡಿದ ಹಣವನ್ನು ಸೇರಿಸಲಾಗದೆ, ದುಂದುವೆಚ್ಚ, ಹಣದ ಕೊರತೆಯಿಂದ ಬಳಲುತ್ತಿದ್ದಾರೆ. ವ್ಯಾಲೆಟ್‌ಗಳು ಅಥವಾ ಪರ್ಸ್ ನಲ್ಲಿ ಹಣವನ್ನು ಇಡಲು ಪ್ರತಿಯೊಬ್ಬರೂ ಬಳಸುವ ಪ್ರಮುಖ ವಸ್ತುವಾಗಿದೆ. ಹೋಮ್ ಬ್ಯೂರೋ ವ್ಯವಹಾರದ ಗಲ್ಲ ಪೆಟ್ಟಿಗೆ ಕೂಡ ಇದರ ಪಕ್ಕದಲ್ಲಿದೆ. ಹಣವನ್ನು ಇಡಲು ಬಳಸುವ ಈ ಮನಿ ಪರ್ಸ್‌ನಲ್ಲಿ ಒಂದೇ ಒಂದು ವಸ್ತುವನ್ನು ಇರಿಸುವ ಮೂಲಕ ನಮ್ಮ ಹಣದ ಹರಿವನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ. ಆಧ್ಯಾತ್ಮದ ಕುರಿತಾದ ಈ ಪೋಸ್ಟ್‌ನಲ್ಲಿ ಇದರ ಅರ್ಥ ಮತ್ತು ಅದನ್ನು ಹೇಗೆ ಇಟ್ಟುಕೊಳ್ಳುವುದು ಎಂದು ನಾವು ತಿಳಿದುಕೊಳ್ಳಬಹುದು . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಒದಗಿಸುವುದಾಗಿ ಘೋಷಣೆ ಮಾಡಲಾಗಿತ್ತು. ಅದರಂತೆ 46,829 ಶಾಲೆ, 1234 ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುತ್ತಿರುವುದಾಗಿ ತಿಳಿಸಿದೆ. ರಾಜ್ಯದ ಎಲ್ಲ 46,829 ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ 1,234 ಪದವಿಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್‌ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ. ಶಾಲೆಗಳಿಗೆ ಉಚಿತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು 2024-25ನೇ ಸಾಲಿನ ಬಜೆಟ್‌ ಘೋಷಣೆಯ ಭಾಗವಾಗಿ ಉಚಿತವಾಗಿ ವಿದ್ಯುತ್‌ ಸೌಲಭ್ಯ ಕಲ್ಪಿಸಲು ₹25 ಕೋಟಿ ಅನುದಾನ ನೀಡಲಾಗಿದೆ. ಎಲ್ಲ ಶಾಲೆಗಳು ಆಯಾ ವ್ಯಾಪ್ತಿಯ ವಿದ್ಯುತ್‌ ಸರಬರಾಜು ಕಂಪನಿಯ ಕಚೇರಿಗಳಿಗೆ ಆರ್‌ಆರ್‌ ಸಂಖ್ಯೆ ಹಾಗೂ ಬಳಕೆದಾರರ ಐಡಿಗಳನ್ನು ನೀಡಿ ಜುಲೈ 31ರ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. https://twitter.com/KarnatakaVarthe/status/1816455765407793569 https://kannadanewsnow.com/kannada/nipah-virus-outbreak-in-kerala-health-department-issues-guidelines-mandates-adherence-to-it/ https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/

Read More

ಬೆಂಗಳೂರು: ಕೇರಳ ರಾಜ್ಯದಲ್ಲಿ ನೀಫಾ ವೈರಸ್ ಆರ್ಭಟ ಹೆಚ್ಚಾಗಿದೆ. ಕೇರಳದ ನೆರೆಯ ರಾಜ್ಯವಾಗಿರುವಂತ ಕರ್ನಾಟಕ್ಕಕೂ ನೀಫಾ ವೈರಸ್ ಹರಡುವ ಆತಂಕ ಹೆಚ್ಚಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ನೀಫಾ ವೈರಸ್ ನಿಯಂತ್ರಣ ಸಂಬಂಧ ಮಾರ್ಗಸೂಚಿ ಪ್ರಕಟಿಸಲಾಗಿದೆ. ಆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ದಿನಾಂಕ 21-07-2024 ರಂದು ನಿಪಾ ವೈರಸ್ ಪುಕರಣ ಪತ್ತೆಯಾಗಿದೆ. AES ರೋಗಲಕ್ಷಣಗಳನ್ನು ಹೊಂದಿದ್ದ ಮಲಪ್ಪುರಂನ 14 ವರ್ಷದ ಬಾಲಕ ಪೆರಿಂತಲ್ಮನ್ಮಾದಲ್ಲಿನ ಆರೋಗ್ಯ ಕೇಂದ್ರದಲ್ಲಿ ತೋರಿಸಿಕೊಂಡು ಹೆಚ್ಚಿನ ಚಿಕಿತ್ಸೆಗೆ ಕೋಝಿಕ್ಕೋಡ್‌ನ ಉನ್ನತ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸುವ ಮೊದಲು ಸಾವನ್ನಪ್ಪಿದ್ದಾನೆ. ರೋಗಿಯ ಮಾದರಿಗಳನ್ನು ಎನ್‌ಐವಿ, ಪುಣೆಗೆ ಕಳುಹಿಸಲಾಗಿ, ನಿವಾ ವೈರಸ್ ಸೋಂಕು ದೃಢಪಟ್ಟಿದೆ ಎಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರವು ಮಲಪ್ಪುರಂನಲ್ಲಿ ರೋಗವನ್ನು ತಡೆಗಟ್ಟಲು ತಕ್ಷಣದ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸೂಚಿಸಿದೆ. ಪ್ರಕರಣದ ತನಿಖೆ, ಸಾಂಕ್ರಾಮಿಕ ರೋಗಗಳ ಸಂಬಂಧಗಳ ಗುರುತಿಸುವಿಕೆ ಮತ್ತು ತಾಂತ್ರಿಕ…

Read More