Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು(ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆಯಾಗಿದೆ. ಈ ಕಾಯ್ದೆಯಡಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನವನ್ನು ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಎಂಬುವರು ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನೋಟಿಸ್ ಆಧರಿಸಿ ಯಾವುದೇ ಭಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಅರ್ಜಿದಾರರ ಬಿಡದಿ ಜಮೀನುಸ್ವಾಧೀನಕ್ಕೆ ಅಡ್ಡಿಪಡಿಸದಂತೆಯೂ ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಅಲ್ಲದೇ ರಾಜ್ಯ ಸರ್ಕಾರ, ನಗರಾಭಿವೃದ್ಧಿ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ. 2025 ಮೇ 15ರಂದು ಕಾಯ್ದೆ ಜಾರಿಯಾಗುವ ಮುನ್ನವೇ ಭೂಸ್ವಾಧೀನ ಮಾಡಲಾಗಿತ್ತು. ಮಾರ್ಚ್.12ರಂದೇ ಭೂಸ್ವಾಧೀನಕ್ಕೆ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿತ್ತು. 11 ಸಾವಿರ ಎಕರೆ ಕಾನೂನು ಬಾಹಿರ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸದೇ ಭೂಸ್ವಾಧೀನ ಮಾಡಲಾಗುತ್ತಿದೆ. ಪರಿಸ ಅನುಮತಿ ಕೂಡ ಪಡೆದಿಲ್ಲ ಎಂಬುದಾಗಿ ಅರ್ಜಿದಾರರ ಪರ ವಕೀಲ ಸದಾನಂದ ಜಿ ಶಾಸ್ತ್ರಿ ವಾದಿಸಿದ್ದರು. ಈ ವಾದವನ್ನು…
ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು, ಶಿವಗಂಗೆ, ಸಿದ್ಧಗಂಗಾ ಮಠ, ದೇವರಾಯನದುರ್ಗ, ಗೊರವನಹಳ್ಳಿ, ವಿಧುರಾಶ್ವರ, ಘಾಟಿ ಸುಬ್ರಹ್ಮಣ್ಯ ಮಾರ್ಗದಲ್ಲಿ ಕೆ ಎಸ್ ಆರ್ ಟಿ ಸಿ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಶಿವಗAಗೆ-ಸಿದ್ಧಗAಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಮಾರ್ಗದಲ್ಲಿ ಅಶ್ವಮೇಧ ಕ್ಲಾಸಿಕ್ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಪ್ರತಿ ಶನಿವಾರ ಮತ್ತು ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ದಿನಾಂಕ: 26-07-2025 ರಿಂದ ಪ್ರಾರಂಭಿಸಿ ಈ ಕೆಳಕಂಡ ವೇಳಾಪಟ್ಟಿಯಂತೆ ಪ್ರಾರಂಭಿಸಲಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಮೇಲೆ ತಿಳಿಸಿರುವ ಪ್ಯಾಕೇಜ್ ಟೂರ್ ಸಾರಿಗೆ ಸೌಲಭ್ಯಕ್ಕಾಗಿ ಟಿಕೇಟ್ ಪಡೆಯಲು ಉಪಯೋಗಿಸುವ ವೆಬ್ ಸೈಟ್: www.ksrtc.in & www.ksrtc.karnataka.gov.in ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:080-26252625 /7760990100 /7760990560/ 7760990287. https://kannadanewsnow.com/kannada/kuwj-president-shivaananda-tagadur-made-a-request-to-the-cm-for-financial-assistance-to-community-based-centers/ https://kannadanewsnow.com/kannada/on-the-occasion-of-bhima-amavasya-a-special-decoration-for-the-deity-chaudeshwari-of-singadur-the-flowing-stream-of-devotees/
ಬೆಂಗಳೂರು: ರಾಜ್ಯದಲ್ಲಿ 24 ಸಮುದಾಯ ಬಾನುಲಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದಾವೆ. ಇವುಗಳು ಆರ್ಥಿಕ ಸಂಪನ್ಮೂಲದ ಕೊರತೆಯಿಂದ ಬಳಸುತ್ತಿರುವುದರಿಂದ, ಸರ್ಕಾರದಿಂದ ಆರ್ಥಿಕ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿಎಂ ಸಿದ್ಧರಾಮಯ್ಯಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಸುದ್ದಿಮನೆಯಲ್ಲಿ ಸಮುದಾಯ ಬಾನುಲಿ ಕೇಂದ್ರಗಳು, ಶಿಕ್ಷಣ, ಕೃಷಿ, ಆರೋಗ್ಯ, ಕಲೆ, ಸಂಸ್ಕೃತಿ ಭಾಷೆಯ ವಿಷಯ ಸೇರಿದಂತೆ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸುತ್ತಾ ಬರುತ್ತಿರುವುದು ತಮಗೂ ಕೂಡ ತಿಳಿದ ಸಂಗತಿಯಾಗಿದೆ ಎಂದಿದ್ದಾರೆ. ರಾಜ್ಯದಲ್ಲಿ 24 ಸಮುದಾಯ ಬಾನುಲಿ ಕೇಂದ್ರಗಳು ಆರ್ಥಿಕ ಸಂಪನ್ಮೂಲ ಕೊರತೆಯಿಂದ ನಿರ್ವಹಿಸುತ್ತಿದ್ದು ಆರ್ಥಿಕ ಸಂಪನ್ಮೂಲ ಕೊರತೆಯಿಂದ ಬಳಲುತ್ತಿವೆ. ಆದುದರಿಂದ ಈ ಬಗ್ಗೆ ಸರ್ಕಾರದ ಇಲಾಖೆಗಳ ಮೂಲಕ ಜಾಹೀರಾತು ನೆರವು ಕೊಡಿಸುವಂತೆ ಕರ್ನಾಟಕ ಸಮುದಾಯ ಬಾನುಲಿ ಕೇಂದ್ರಗಳ ಸಂಘ ವಿನಂತಿಸಿಕೊಂಡಿದ್ದು, ಅದರ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ ಎಂದಿದ್ದಾರೆ. ಸಮುದಾಯ ಬಾನುಲಿ ಕೇಂದ್ರಗಳನ್ನು…
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ನಟ ದರ್ಶನ್ ಅಭಿಮಾನಿಯಾಗಿದ್ದರು. ಈ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಜೊತೆಗೆ ಅವರು ವಿವಾಹೇತರ ಸಂಬಂಧ ಹೊಂದಿದ್ದರು. ಅವರು ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದರು. ಈ ಕಾರಣಕ್ಕೇ ರೇಣುಕಾಸ್ವಾಮಿ ಅಸಭ್ಯವಾಗಿ ಮೆಸೇಜ್ ಮಾಡಿದ್ದನು. ಇದರಿಂದ ಆಕ್ರೋಶಗೊಂಡು ಎ2 ಆರೋಪಿ ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನು ಬಳಸಿಕೊಂಡು ಹತ್ಯೆ ಮಾಡಿದ್ದಾರೆ ಎಂಬುದಾಗಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ವಾದಿಸಿದರು. ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಲಾಯಿತು. ಹೈಕೋರ್ಟ್ ನೀಡಿದ್ದಂತ ಜಾಮೀನು ಆದೇಶ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಾರ್ದಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ನಡೆಸಲಾಯಿತು. ಸುಮಾರು 1 ಗಂಟೆ ಸರ್ಕಾರದ ಪರವಾಗಿ ಸಿದ್ಧಾರ್ಥ್ ಲೂಥ್ರ ಅವರು ವಾದ ಮಂಡಿಸಿದರು. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬಂದು,…
ಮ್ಯಾಂಚೆಸ್ಟರ್ : ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗುರುವಾರ ನಡೆದ ಪಂದ್ಯದ ಮೊದಲ ದಿನದಂದು ಕಾಲ್ಬೆರಳಿನ ಮೂಳೆ ಮುರಿತದ ನಂತರ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪಿಂಗ್ ಕರ್ತವ್ಯದಿಂದ ಹೊರಗಿಡಲಾಯಿತು. ಆದರೆ ಕ್ರಂಚ್ ಆಟದ ಸಮಯದಲ್ಲಿ ತಂಡದ ಅವಶ್ಯಕತೆಗಳಿಗೆ ಅನುಗುಣವಾಗಿ ಬ್ಯಾಟಿಂಗ್ ಮಾಡಲು ಲಭ್ಯವಿರುತ್ತಾರೆ ಎಂಬುದಾಗಿ ಬಿಸಿಸಿಐ ದೃಢಪಡಿಸಿದೆ. ಬುಧವಾರ ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ ಅವರ ಬಲಗಾಲಿಗೆ ರಿವರ್ಸ್ ಸ್ವೀಪ್ ಮಾಡಲು ಪ್ರಯತ್ನಿಸುವಾಗ ಅವರ ಬಲಗಾಲಿಗೆ ಹೊಡೆತ ಬಿದ್ದ ನಂತರ ಸ್ಕ್ಯಾನ್ ಗೆ ಒಳಗಾದರು. ಮ್ಯಾಂಚೆಸ್ಟರ್ ಟೆಸ್ಟ್ನ ಮೊದಲ ದಿನದಂದು ಬಲಗಾಲಿಗೆ ಗಾಯವಾಗಿದ್ದ ರಿಷಭ್ ಪಂತ್, ಪಂದ್ಯದ ಉಳಿದ ಭಾಗಕ್ಕೆ ವಿಕೆಟ್ ಕೀಪಿಂಗ್ ಕರ್ತವ್ಯಗಳನ್ನು ನಿರ್ವಹಿಸುವುದಿಲ್ಲ. ಧ್ರುವ್ ಜುರೆಲ್ ವಿಕೆಟ್ ಕೀಪರ್ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ X ನಲ್ಲಿ ಪೋಸ್ಟ್ ಮಾಡಿದೆ. https://twitter.com/BCCI/status/1948333548781330538 ಗಾಯದ ಹೊರತಾಗಿಯೂ, ರಿಷಭ್ ಪಂತ್ 2 ನೇ ದಿನದಂದು ತಂಡವನ್ನು ಸೇರಿಕೊಂಡಿದ್ದಾರೆ ಮತ್ತು ತಂಡದ ಅವಶ್ಯಕತೆಗಳಿಗೆ ಅನುಗುಣವಾಗಿ ಬ್ಯಾಟಿಂಗ್ ಮಾಡಲು ಲಭ್ಯವಿರುತ್ತಾರೆ…
ಬೀದರ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವನ್ನೊಬ್ಬ ಕೀಚಕ ನಡೆಸಿದ್ದಾನೆ. ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪೈಶಾಚಿಕ ಕೃತ್ಯವನ್ನು ಮೆರೆದಿದ್ದಾನೆ. ಬೀದರ್ ಜಿಲ್ಲೆಯಲ್ಲಿ ನರ್ಸರಿ ಶಾಲೆಗೆ ತೆರಳಿದ್ದಂತ ವೇಳೆಯಲ್ಲಿ ಕಾಮುಕನೊಬ್ಬ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಿತ್ರಾಣವಾಗಿದ್ದಂತ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಕೀಚಕನ ಪೈಶಾಚಿಕ ಕೃತ್ಯ ಬೆಳೆಕಿಗೆ ಬಂದಿದೆ. ರಕ್ತಸ್ರಾವದಿಂದ ಬಳಲುತ್ತಿದ್ದಂತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬೀದರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/you-can-remove-stains-from-clothes-using-paracetamol-video-goes-viral-watch-video/ https://kannadanewsnow.com/kannada/on-the-occasion-of-bhima-amavasya-a-special-decoration-for-the-deity-chaudeshwari-of-singadur-the-flowing-stream-of-devotees/
ಕೆಎನ್ಎನ್ ಸ್ಪೋಟ್ಸ್ ಡೆಸ್ಕ್: ಭಾರತ ತಂಡವು ಜುಲೈ 2026 ರಲ್ಲಿ ಎಂಟು ಪಂದ್ಯಗಳ ವೈಟ್-ಬಾಲ್ ಸರಣಿಗಾಗಿ ಇಂಗ್ಲೆಂಡ್ಗೆ ಹಿಂತಿರುಗಲಿದೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಗುರುವಾರ (ಜುಲೈ 24) 2026 ರ ಬೇಸಿಗೆಯಲ್ಲಿ ಪುರುಷ ಮತ್ತು ಮಹಿಳಾ ತವರು ವೇಳಾಪಟ್ಟಿಯನ್ನು ಅನಾವರಣಗೊಳಿಸಿದಾಗ ದೃಢಪಡಿಸಿತು. ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ನ ಟೆಸ್ಟ್ ಪಂದ್ಯದ ನಂತರ ಭಾರತೀಯ ಪುರುಷರ ತಂಡವು ಐದು T20I ಮತ್ತು ಮೂರು ODI ಪಂದ್ಯಗಳನ್ನು ಆಡಲಿದ್ದು, ಬ್ಲಾಕ್ಬಸ್ಟರ್ ಸೀಮಿತ ಓವರ್ಗಳ ಲೆಗ್ ಅನ್ನು ಪ್ರಾರಂಭಿಸಲಿದೆ. ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರಸ್ತುತ 2-1 ರಿಂದ ಹಿನ್ನಡೆಯಲ್ಲಿರುವ ಭಾರತ ತಂಡವು ಜುಲೈ 1, 2026 ರಂದು ಡರ್ಹಾಮ್ನ ರಿವರ್ಸೈಡ್ ಮೈದಾನದಲ್ಲಿ T20I ಯೊಂದಿಗೆ ತಮ್ಮ ವೈಟ್-ಬಾಲ್ ಪ್ರವಾಸವನ್ನು ಪ್ರಾರಂಭಿಸಲಿದೆ. ಐದು ಪಂದ್ಯಗಳ T20I ಸರಣಿಯು ಮ್ಯಾಂಚೆಸ್ಟರ್, ನಾಟಿಂಗ್ಹ್ಯಾಮ್, ಬ್ರಿಸ್ಟಲ್ ಮತ್ತು ಸೌತಾಂಪ್ಟನ್ನಲ್ಲಿ ಮುಂದುವರಿಯಲಿದೆ, ನಂತರ ಬರ್ಮಿಂಗ್ಹ್ಯಾಮ್, ಕಾರ್ಡಿಫ್ ಮತ್ತು ಲಂಡನ್ನಲ್ಲಿ ODI ಪಂದ್ಯಗಳು ನಡೆಯಲಿದ್ದು, ಅಂತಿಮ…
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ಜಗದೀಶ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಬಿಕ್ಲು ಶಿವ ಹತ್ಯೆ ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂಬುದಾಗಿ ಜನಪ್ರತಿನಿಧಿಗಳ ನ್ಯಾಯಾಲಾಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅಭಿಪ್ರಾಯ ಪಟ್ಟರು. ಆ ಮೂಲಕ ಬಿಕ್ಲು ಶಿವ ಪ್ರಕರಣದಲ್ಲಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. https://kannadanewsnow.com/kannada/let-the-shortcomings-in-the-semiconductor-sector-not-repeat-in-quantum-mp-g-kumar-naik/ https://kannadanewsnow.com/kannada/you-can-remove-stains-from-clothes-using-paracetamol-video-goes-viral-watch-video/
ಬೆಂಗಳೂರು : 1 ಮಿಲಿಯನ್ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯಿಂದ 2021 ನೇ ಸಾಲಿನಲ್ಲಿ ಘೋಷಿಸಲಾಗಿದ್ದ ಸೆಮಿಕಾನ್ ಇಂಡಿಯಾ ಯೋಜನೆ ಉದ್ದೇಶಿತ ಗುರಿಯನ್ನು ತಲುಪುವಲ್ಲಿ ವಿಫಲವಾಗಿರುವುದು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವರಾದ ಜಿತಿನ್ ಪ್ರಸಾದ್ ಲೋಕಸಭೆಗೆ ನೀಡಿದ ತಮ್ಮ ಲಿಖಿತ ಉತ್ತರ ಮೂಲಕ ಸ್ಪಷ್ಟವಾಗಿದೆ, ಸೆಮಿಕಾನ್ ಇಂಡಿಯಾ ಯೋಜನೆಯ ಅನುಷ್ಠಾನದಲ್ಲಿ ಅಗಿರುವ ಲೋಪಗಳು ಕ್ವಾಂಟಮ್ ಮಿಷನ್ನಲ್ಲಿ ಮರುಕಳಿಸದೇ ಇರುವಂತೆ ಎಚ್ಚರವಹಿಸುವುದು ಬಹಳ ಅಗತ್ಯವಾಗಿದೆ ಎಂದು ರಾಯಚೂರು ಸಂಸದರಾದ ಜಿ ಕುಮಾರ ನಾಯಕ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಸೆಮಿಕಾನ್ ಇಂಡಿಯಾ ಯೋಜನೆಯ ಮೂಲಕ 27 ಸಾವಿರಕ್ಕೂ ಹೆಚ್ಚು ನೇರ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಸರ್ಕಾರ ತಮ್ಮ ಉತ್ತರದಲ್ಲಿ ಹೇಳಿಕೊಂಡಿದೆ. ಆದರೆ, 2021 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದ ಸಂಧರ್ಭದಲ್ಲಿ 1 ಮಿಲಿಯನ್ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಗುರಿಯನ್ನು ಇಟ್ಟುಕೊಳ್ಳಲಾಗಿತ್ತು. ಈಗ ತಮ್ಮ ಉತ್ತರದಲ್ಲಿ ನಮೂದಿಸಿರುವ ಉದ್ಯೋಗಾವಕಾಶಗಳ ಸಂಖ್ಯೆಯನ್ನು ನೋಡಿದಾಗ, ಯೋಜನೆ ಘೋಷಣೆಗಷ್ಟೇ ಸೀಮಿತವಾಗಿರುವುದು ಸ್ಪಷ್ಟವಾಗುತ್ತಿದೆ. ಭಾರತ…
ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ. ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಮಲೆ…