Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ನಮ್ಮ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆ ಮೂರು ವರ್ಷಗಳ ಅಭಿವೃದ್ಧಿ ಯೋಜನೆಗಳ ನೀಲನಕ್ಷೆಯನ್ನು ಹಾಕಿಕೊಂಡಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಎಲ್ಲರಿಗೂ, ಸುಲಭ ಹಾಗೂ ಸುಲಲಿತವಾಗಿ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು. ನಾಗರಿಕರ ಯೋಗ ಕ್ಷೇಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಡಾ. ಪಾಟೀಲ್…
ಬೆಂಗಳೂರು: ಸುಮಾರು 23 ದೇಶಗಳಲ್ಲಿ ತನ್ನ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಮಾರಾಟ ವ್ಯವಸ್ಥೆ ಹೊಂದಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತಕ್ಕೆ (ಕೆಎಸ್ಡಿಎಲ್) ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಮತ್ತು ಕರ್ನಾಟಕ-ಕೇರಳ ವ್ಯಾಪ್ತಿಯಲ್ಲಿನ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರಿಬ್ಬರೂ ಕೆಎಸ್ಡಿಎಲ್ ಇತಿಹಾಸ, ಕಾರ್ಯವಿಧಾನ, ಮಾರುಕಟ್ಟೆ ಜಾಲ, ಆದಾಯ, ಭವಿಷ್ಯದ ಯೋಜನೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡರು. ಕೆಎಸ್ಡಿಎಲ್ ಗೆ ಭೇಟಿ ನೀಡಿದ ಈ ಇಬ್ಬರು ಗಣ್ಯರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬರಮಾಡಿಕೊಂಡರು. ಜತೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸಿ ಎಸ್ ನಾಡಗೌಡ ಕೂಡ ಇದ್ದರು. ಈ ಸಂದರ್ಭದಲ್ಲಿ, ಕೆಎಸ್ಡಿಎಲ್ ಚರಿತ್ರೆಯನ್ನು ಕಟ್ಟಿಕೊಡುವ ಪ್ರಾತ್ಯಕ್ಷಿಕೆಯನ್ನು ಲಿಂಡಿ ಮತ್ತು ಅಯ್ಯರ್ ಇಬ್ಬರಿಗೂ ಪ್ರದರ್ಶಿಸಲಾಯಿತು. ಸಂಸ್ಥೆಯ ಉಗಮದ ಹಿನ್ನೆಲೆಯಲ್ಲಿ ಬ್ರಿಟನ್ನಿನ ಪಾತ್ರವಿರುವುದನ್ನು ಕೇಳಿ, ಇಬ್ಬರೂ ಅಚ್ಚರಿ ವ್ಯಕ್ತಪಡಿಸಿದರು. ಜತೆಯಲ್ಲೇ ಕೆಎಸ್ಡಿಎಲ್ ಉತ್ಪನ್ನಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಲಿಂಡಿ ಮತ್ತು ಅಯ್ಯರ್…
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸುವುದರ ಭಾಗವಾಗಿ ಪ್ರಸಕ್ತ ವರ್ಷದ ಸಿಇಟಿ ಅಭ್ಯರ್ಥಿಗಳು ಹಾಗೂ ಪೋಷಕರಿಗೆ ಸೀಟು ಹಂಚಿಕೆ ವಿಧಾನದ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಜೂನ್ 28ರಂದು ರಾಜ್ಯದ ಎಲ್ಲ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ‘ಯಜಿಸಿಇಟಿ-2025: ಸೀಟು ಹಂಚಿಕೆ ಮಂಥನ’ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, 8 ಅನುದಾನಿತ, 6 ವಿಟಿಯು ಸಂಯೋಜಿತ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ 9 ಜಿಲ್ಲೆಗಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪೋಷಕರು/ವಿದ್ಯಾರ್ಥಿಗಳ ಎಲ್ಲ ರೀತಿಯ ಅನುಮಾನಗಳಿಗೆ ಪರಿಹಾರ ಲಭ್ಯವಾಗಲಿದೆ. ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಚಿಕ್ಕಮಗಳೂರು, ಹುಬ್ಬಳ್ಳಿ (ಧಾರವಾಡ ಜಿಲ್ಲೆ), ಕೆ.ಜಿ.ಎಫ್ (ಕೋಲಾರ), ಮಂಗಳೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ, ಸುರಪುರ (ಯಾದಗಿರಿ)ದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಈ ಮಂಥನ ಕಾರ್ಯಕ್ರಮ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ. ಕೌನ್ಸೆಲಿಂಗ್ ಹೇಗೆ ನಡೆಯುತ್ತದೆ?…
ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರು ತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ ಮಾರ್ಗದಲ್ಲಿ KSRTCಯಿಂದ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರು ತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ” ಮಾರ್ಗದಲ್ಲಿ ಅಶ್ವಮೇಧ ಕ್ಲಾಸಿಕ್ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ & ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ದಿನಾಂಕ: 28-06-2025 ರಿಂದ ಪ್ರಾರಂಭಿಸಿ ಈ ಕೆಳಕಂಡ ವೇಳಾಪಟ್ಟಿಯಂತೆ ಪ್ರಾರಂಭಿಸಲಾಗುತ್ತದೆ ಎಂದಿದೆ. ಪ್ಯಾಕೇಜ್ ಟೂರ್ ಸಾರಿಗೆಯ ಪ್ರಯಾಣ ದರದ ವಿವರಗಳು ಅಶ್ವಮೇಧ ಕ್ಲಾಸಿಕ್ ಸಾರಿಗೆ ಪ್ರಯಾಣ ದರವು ವಯಸ್ಕರಿಗೆ ರೂ.600-00 (ಮುಂಗಡ ಬುಕಿಂಗ್ ಸೇರಿ) ಆಗಿದೆ. ಮಕ್ಕಳಿಗೆ (6 ರಿಂದ 12 ವರ್ಷ) ರೂ.450-00 (ಮುಂಗಡ ಬುಕಿಂಗ್ ಸೇರಿ) ದರ ನಿಗದಿ ಪಡಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಮೇಲೆ ತಿಳಿಸಿರುವ ಪ್ಯಾಕೇಜ್ ಟೂರ್ ಸಾರಿಗೆ ಸೌಲಭ್ಯಕ್ಕಾಗಿ ಟಿಕೇಟ್…
ಬೆಂಗಳೂರು: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದ 8ನೇ ಹಂತದಲ್ಲಿ ಕಮಲಮ್ಮ, ರಾಮಕೃಷ್ಣಪ್ಪ ಎನ್ನುವಂತ ವೃದ್ಧಾಶ್ರಮವಿದೆ. ಈ ವೃದ್ಧಾಶ್ರಮಕ್ಕೆ ಕೃಷ್ಣಮೂರ್ತಿ(81) ಹಾಗೂ ರಾಧಾ(74) ಎಂಬುವರನ್ನು ಮಕ್ಕಳು ಸೇರಿಸಿದ್ದಾರೆ. ಇದರಿಂದ ಮನನೊಂದಿರುವಂತ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊಸೆ ಮಾಡಿದ ಅಡುಗೆ ಇಷ್ಟವಿಲ್ಲ, ಹೊಂದಾಣಿಕೆಯಾಗದ ಕಾರಣ ಬೇರೆ ಮನೆ ಮಾಡಿಕೊಡುವಂತೆ ಮಗನಿಗೆ ವೃದ್ಧ ದಂಪತಿಗಳು ಕೇಳಿದ್ದರು. ಆದರೇ ಇದನ್ನು ಕೇಳದಂತ ಪುತ್ರ 2021ರಲ್ಲಿ ಬ್ಯಾಟರಾಯನಪುರದ ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಆ ಬಳಿಕ 2023ರಲ್ಲಿ ತಂದೆ ತಾಯಿಯನ್ನು ಮನೆಗೆ ವಾಪಾಸ್ ಕರೆದುಕೊಂಡು ಬಂದಿದ್ದರು. ಆದರೇ ವೃದ್ಧಾಶ್ರಮದಿಂದ ಬಂದ ನಂತ್ರ ಮನೆಯಲ್ಲಿ ಹೊಂದಾಣಿಕೆ ಆಗಿರಲಿಲ್ಲ. ಈ ಕಾರಣದಿಂದಾಗಿ ಮತ್ತೆ ಪುತ್ರ ಬೆಂಗಳೂರಿನ ಜೆಪಿ ನಗರದಲ್ಲಿರುವಂತ 8ನೇ ಹಂತದಲ್ಲಿನ ವೃದ್ಧಾಶ್ರಮಕ್ಕೆ ತಂದೆ ಕೃಷ್ಣಮೂರ್ತಿ, ತಾಯಿ ರಾಧಾ ಸೇರಿಸಿದ್ದರು. ಇದರಿಂದ ಮನನೊಂದಂತ ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/study-on-western-ghats-water-retention-capacity-under-the-leadership-of-pccf-minister-eshwar-khandre/ https://kannadanewsnow.com/kannada/cbse-approval-to-conduct-the-10th-grade-board-examination-twice-from-2026/
ಬೆಂಗಳೂರು : ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ (Carrying Capacity)ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿದ್ದು, ಜೀವಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು. ಈ ನಿಟ್ಟಿನಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರನ್ನೊಳಗೊಂಡ ಸಮಿತಿಯನ್ನು 10 ದಿನಗಳ ಒಳಗಾಗಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು. 368 ವೃಕ್ಷ ರಕ್ಷಣೆಗೆ ಕ್ರಮ: ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿರುವ ಜೀವವೈವಿಧ್ಯ ತಾಣದ 368 ವಿವಿಧ…
ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ QpiAI ಸಂಸ್ಥೆಯ ಕಾರ್ಲೆ ಟೌನ್ SEZ (Karle Town SEZ) ಆಫೀಸ್ಗೆ ಭೇಟಿ ನೀಡಿ, ಭಾರತದಲ್ಲಿ ನಿರ್ಮಿತವಾದ ಅತ್ಯಾಧುನಿಕ ಕ್ವಾಂಟಮ್ ಕಂಪ್ಯೂಟರ್ – QpiAI Indus ಅನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ತಜ್ಞರು ಮಾಡಿದ ಡೆಮೊನ್ಸ್ಟ್ರೇಷನ್ನಲ್ಲಿ QpiAI Indus ನ ತಂತ್ರಜ್ಞಾನ ಸಾಮರ್ಥ್ಯಗಳನ್ನು ವಿವರಿಸಿದರು. ಇದು ಭಾರತೀಯ ಕ್ವಾಂಟಮ್ ಸಂಶೋಧನೆಯಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, ಆರೋಗ್ಯ, ಹಣಕಾಸು, ರಾಷ್ಟ್ರದ ಭದ್ರತೆ, ವೈಜ್ಞಾನಿಕ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಅಪಾರವಾಗಿ ಬಳಸಬಹುದಾದ ತಂತ್ರಜ್ಞಾನವಾಗಿದೆ ಎಂದು ತಿಳಿಸಿದರು. ಭೇಟಿಯ ನಂತರ ಸಚಿವ ಎನ್ ಎಸ್ ಭೋಸರಾಜು ಮಾತನಾಡಿ, “ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು…
ಬೆಂಗಳೂರು: ರಾಜ್ಯ ಸರ್ಕಾರವು ಕಷ್ಟದಲ್ಲಿರುವಂತ ಕಲಾವಿದರಿಗೆ ಮನಮಿಡಿದಿದೆ. ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಷ್ಟಪರಿಸ್ಥಿತಿಯಲ್ಲಿರುವ ಸಾಹಿತಿ/ಕಲಾವಿದರ ಮಾಸಾಶನ ಹಾಗೂ ವಿಧವಾ ಮಾಸಾಶನ ಪಾವತಿ ಮಾಡಲು 2025-26ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2205-00-102-1-18-251ರಡಿ ಹಂಚಿಕೆ ಮಾಡಿರುವ ರೂ.4392.82 ಲಕ್ಷಗಳಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗಿನ ಮೊದಲನೇ ಕಂತಿನ ಅನುದಾನ ರೂ.10,98,21,000/-ಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ. 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374 ರಲ್ಲಿನ ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ. 2025-26ನೇ…
ಹುಬ್ಬಳ್ಳಿ: ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲು ಸೇವೆಗಳ ತಾತ್ಕಾಲಿಕ ನಿಲುಗಡೆಯನ್ನು ಜುಲೈ 1ರಿಂದ ಡಿಸೆಂಬರ್ 31, 2025 ರವರೆಗೆ ಆರು ತಿಂಗಳ ಅವಧಿಗೆ ವಿಸ್ತರಿಸಿದೆ. ಬೀರೂರು ನಿಲ್ದಾಣದಲ್ಲಿ: ರೈಲು ಸಂಖ್ಯೆ 16587/16588 ಯಶವಂತಪುರ–ಬಿಕಾನೇರ್–ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿನ ನಿಲುಗಡೆಯು ವಿಸ್ತರಿಸಿದ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ಮುಂದುವರಿಯುತ್ತದೆ. ರಾಮಗಿರಿ ನಿಲ್ದಾಣದಲ್ಲಿ: ಕೆಳಗಿನ ರೈಲುಗಳು ಪ್ರಾಯೋಗಿಕ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ರಾಮಗಿರಿ ನಿಲ್ದಾಣದಲ್ಲಿ ನಿಲುಗಡೆಯನ್ನು ಮುಂದುವರಿಸುತ್ತವೆ: 1. ರೈಲು ಸಂಖ್ಯೆ 17325/17326 ಬೆಳಗಾವಿ – ಮೈಸೂರು – ಬೆಳಗಾವಿ ವಿಶ್ವಮಾನವ ದೈನಂದಿನ ಎಕ್ಸ್ಪ್ರೆಸ್. 2. ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ದೈನಂದಿನ ಎಕ್ಸ್ಪ್ರೆಸ್. https://kannadanewsnow.com/kannada/if-the-elections-are-held-now-karnataka-congress-faces-a-humiliating-defeat-bjps-position-doubles-survey/ https://kannadanewsnow.com/kannada/entrepreneur-sunita-timmengowda-had-a-special-darshan-and-arati-at-tirupati/
ಕೆಎನ್ಎನ್ ಡಿಜಿಟಲ್ ಡೆಸ್ಕ್: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಕೇವಲ ಎರಡು ವರ್ಷಗಳಲ್ಲಿ, ರಾಜ್ಯದಲ್ಲಿ ರಾಜಕೀಯ ಗಾಳಿ ನಾಟಕೀಯವಾಗಿ ಬದಲಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡಿದ್ದ ರಾಜ್ಯವು ಈಗ ಅದನ್ನು ಅಗಾಧವಾಗಿ ತಿರಸ್ಕರಿಸುತ್ತಿದೆ. ಜನಸಂಖ್ಯಾಶಾಸ್ತ್ರ, ಸಮುದಾಯಗಳು ಮತ್ತು ಪ್ರದೇಶಗಳಲ್ಲಿ ಬೆಳೆಯುತ್ತಿರುವ ಈ ಅಸಮಾಧಾನವನ್ನು ಪೀಪಲ್ಸ್ ಪಲ್ಸ್ – ಕೊಡೆಮೊ ಸಮೀಕ್ಷೆಯು ಬಹಿರಂಗಪಡಿಸುತ್ತದೆ. ಇದು ಕಾಂಗ್ರೆಸ್ ಸರ್ಕಾರದ ಆಳವಾದ ವೈಫಲ್ಯಗಳು ಮತ್ತು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಹೆಚ್ಚುತ್ತಿರುವ ಬೆಂಬಲದ ಅಲೆಯನ್ನು ಬಹಿರಂಗಪಡಿಸುತ್ತದೆ. ಈ ಮೂಲಕ ಈಗ ಚುನಾವಣೆ ನಡೆದ್ರೆ ಕಾಂಗ್ರೆಸ್ ಸೋಲು ಖಚಿತ, ಬಿಜೆಪಿ ಹೆಚ್ಚು ಸ್ಥಾನ ಪಡೆದು ಗೆಲುವು ನಿಶ್ಚಿತ ಎಂಬುದಾಗಿ ಎತ್ತಿ ತೋರಿಸಿದೆ. 2023 ರ ಚುನಾವಣಾ ಫಲಿತಾಂಶಗಳಿಗಿಂತ ನಾಟಕೀಯವಾಗಿ ಹಿಮ್ಮುಖವಾಗಿ, ಇಂದು ಚುನಾವಣೆ ನಡೆದರೆ ಬಿಜೆಪಿಯ ಸ್ಥಾನಗಳ ಸಂಖ್ಯೆ ದ್ವಿಗುಣಗೊಳ್ಳುವ ಸಾಧ್ಯತೆಯಿದೆ ಎಂದು ಸಮೀಕ್ಷೆಯು ಬಹಿರಂಗಪಡಿಸಿದೆ. ಈ ಸ್ಪೋಟಕ ಬದಲಾವಣೆಯು ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳಲ್ಲಿ ಈಡೇರಿಸದ ಭರವಸೆಗಳು, ಗಗನಕ್ಕೇರುತ್ತಿರುವ ಬೆಲೆಗಳು ಮತ್ತು…