Author: kannadanewsnow09

ಬೆಂಗಳೂರು: ನೈರುತ್ಯ ರೈಲ್ವೆಯಿಂದ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದಲ್ಲದೇ ಕೆಲ ರೈಲುಗಳ ಸಂಚಾರದ ಸಮಯವನ್ನು ಮರು ನಿಗದಿ ಮಾಡಲಾಗಿದೆ. ಹಾಗೆ ರೈಲಿನ ನಿಯಂತ್ರಣ ಕೂಡ ಮಾಡಲಾಗಿದೆ. I. ಹಳ್ಳಿಗುಡಿ ಹಾಲ್ಟ್: ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಸಿಂಧನೂರು ನಿಲ್ದಾಣಗಳ ನಡುವೆ ಪ್ರದಿದಿನ ಸಂಚರಿಸುವ ಪ್ಯಾಸೆಂಜರ್ ಸ್ಪೆಷಲ್ ರೈಲುಗಳಿಗೆ (ರೈಲು ಸಂಖ್ಯೆ 07381/07382) ಹಳ್ಳಿಗುಡಿ ಹಾಲ್ಟ್ ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ಸೌಲಭ್ಯವನ್ನು ಸೆಪ್ಟೆಂಬರ್ 1, 2024 ರಿಂದ ಫೆಬ್ರವರಿ 28, 2025 ರವರೆಗೆ ಅಸ್ತಿತ್ವದಲ್ಲಿರುವ ಸಮಯದೊಂದಿಗೆ ಆರು ತಿಂಗಳವರೆಗೆ ಮುಂದುವರಿಸಲಾಗುತ್ತಿದೆ. II. ರೈಲುಗಳ ಸಂಚಾರ ಭಾಗಶಃ ರದ್ದು ಅರಸೀಕೆರೆ ಯಾರ್ಡ್‌ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು, ಸಮಯ ಮರುನಿಗದಿ & ನಿಯಂತ್ರಿಸಲಾಗುತ್ತಿದೆ, ಅವುಗಳ ಈ ಕೆಳಗಿನಂತಿವೆ: • ಭಾಗಶಃ ರದ್ದು: 1. ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ-ಅರಸಿಕೆರೆ ಡೈಲಿ ಎಕ್ಸ್‌ಪ್ರೆಸ್…

Read More

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ಆಗಸ್ಟ್.20ರ ನಾಳೆ ಹಾಗೂ ಆಗಸ್ಟ್.21ರ ನಾಡಿದ್ದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ( BESCOM ) ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.20ರ ನಾಳೆಯಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ತಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಆಗಸ್ಟ್.20ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಲಕ್ಕಸಂದ್ರ, ಬಿಗ್ ಬಜಾರ್, ಸರ್ಜಾವುರಿಯ ಟವರ್, ಮಡಿವಾಳ, ಒರಾಕಲ್, ನಿಮ್ಹಾನ್ಸ್ ಅಡ್ಮಿನ್ ಬ್ಲಾಕ್, ಕೋರಮಂಗಲದ 3ನೇ ಹಂತ, 4ನೇ ಹಂತ, 5ನೇ ಹಂತ, 6, 7, 8ನೇ ಹಂತ, ಶ್ರೀನಿಧಿ ಲೇಔಡ್, ದೊಡ್ಡಕಲ್ಲಸಂದ್ರ, ಕೋಣನಕುಂಟೆ, ತಲಘಟ್ಟಪುರ, ಸೆಂಟ್ ಜಾನ್ಸ್ ಆಸ್ಪತ್ರೆ, ಹಳೆ ಮಡಿವಾಳ, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಆಕ್ಸೆಂಚರ್, ಕಬೆಂಗಳೂರು ಡೈರಿ,…

Read More

ಬೆಂಗಳೂರು: ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು PMFBY ಅಡಿಯಲ್ಲಿ ಶೀಘ್ರವಾಗಿ ಇಥ್ಯರ್ಥ ಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ‌. ನೀವು ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾಗಿ ನೇಮಕವಾಗಿರುವುದಕ್ಕೆ ತುಂಬು ಹೃದಯದ ಅಭಿನಂದನೆಗಳು ನಿಮಗೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಇರುವ ಅಪಾರ ಜ್ಞಾನದ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಕರ್ನಾಟಕದ ನನ್ನ ಲೋಕಸಭಾ ಕ್ಷೇತ್ರ ಹಾವೇರಿ ಜಿಲ್ಲೆಯ ರೈತರು 2023-24ನೇ ಸಾಲಿನ ಖಾರಿಫ್ ಹಂಗಾಮಿನಲ್ಲಿ ಅಸಮರ್ಪಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವರ್ಷ ಕಳೆದರೂ ಅವರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ದೊರೆಕಿಲ್ಲ. ಹಾವೇರಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರವನ್ನು ವಿತರಿಸಲು ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿ…

Read More

ಬೆಂಗಳೂರು: ಶೀಘ್ರವೇ ದೇಶದ ಮೊದಲ KHIR ಸಿಟಿ ಆರಂಭಿಸಲಾಗುತ್ತದೆ. ದೊಡ್ಡಬಳ್ಳಾಪುರ-ದಾಬಸ್ ಪೇಟೆ ಮಧ್ಯೆ 2 ಸಾವಿರ ಎಕರೆಯಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ದೇಶದ ಮೊದಲ ಕೆಎಚ್‌ಐಆರ್‌ ಸಿಟಿ ಶೀಘ್ರದಲ್ಲಿ ಆರಂಭವಾಗಲಿದೆ. ದೊಡ್ಡಬಳ್ಳಾಪುರ – ದಾಬಸ್‌ಪೇಟೆ ಮಧ್ಯೆ 2 ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಜೀವ ವಿಜ್ಞಾನ, ಅಡ್ವಾನ್ಸ್‌ಡ್‌ ಮ್ಯಾನುಫ್ಯಾಕ್ಚರಿಂಗ್‌, ಸೆಮಿ ಕಂಡಕ್ಟರ್‌ ಸೇರಿ ಆಯ್ದ ವಲಯಗಳಲ್ಲಿ ಜಾಗತಿಕ ಮಟ್ಟದ ಪ್ರತಿಷ್ಠಿತ ವಿವಿಗಳು, ಕಂಪನಿಗಳ ಕ್ಯಾಂಪಸ್‌ಗಳಿಗೆ ಉದ್ದೇಶಿತ ಕೆಎಚ್‌ಐಆರ್‌ ಸಿಟಿಯಲ್ಲಿ ಅವಕಾಶ ನೀಡಲಾಗುತ್ತಿದೆ. ರಾಜ್ಯದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳು ಎತ್ತರಕ್ಕೆ ಬೆಳೆಯಲು ಇದರಿಂದ ಸಾಧ್ಯವಾಗಲಿದೆ. ಮುಖ್ಯವಾಗಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮಬೇಕು ಎಂಬುದು ಈ ಯೋಜನೆಯ ಆಶಯ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. https://twitter.com/KarnatakaVarthe/status/1825433970739175622 https://kannadanewsnow.com/kannada/good-news-for-namma-metro-passengers-train-trial-run-between-nagasandra-madavara-begins/ https://kannadanewsnow.com/kannada/breaking-nwkrtc-bus-overturns-in-haveri-13-passengers-seriously-injured-hospitalised/

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಂತಸದ ಸುದ್ದಿ ಎನ್ನುವಂತೆ ನಾಗಸಂದ್ರದಿಂದ ಮಾದಾವರ ಮಧ್ಯ ಮೆಟ್ರೋ ರೈಲು ಪರೀಕ್ಷಾ ಸಂಚಾರ ಆರಂಭಗೊಂಡಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ – ಮಾದಾವರ ಮಧ್ಯೆ ಮೆಟ್ರೋ ರೈಲು ಪರೀಕ್ಷಾ ಸಂಚಾರ ಆರಂಭವಾಗಿದೆ. ಗಂಟೆಗೆ ಕನಿಷ್ಟ 5 ಕಿ.ಮೀ ನಿಂದ ಗರಿಷ್ಠ 35 ಕಿ.ಮೀ. ವೇಗದವರೆಗೆ ರೈಲು ಸಂಚರಿಸಿತು ಎಂದಿದೆ. ಪ್ರಾಥಮಿಕ ಹಂತದ ಪರೀಕ್ಷೆ ಆರಂಭವಾಗಿದೆ. ಸುಮಾರು 15 ದಿನ ಈ ಪರೀಕ್ಷೆ ನಡೆದ ಬಳಿಕ 45 ದಿನಗಳು ಸಿಗ್ನಲಿಂಗ್‌, ದೂರಸಂಪರ್ಕ, ವಿದ್ಯುತ್‌ ಸರಬರಾಜು ವ್ಯವಸ್ಥೆಗಳೊಂದಿಗೆ ಸಿಸ್ಟಂ ಸಂಯೋಜನೆ, ಸಾಮರ್ಥ್ಯ ಪರಿಶೀಲನೆ ಸಹಿತ ಪ್ರಮುಖ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಈ ಬಳಿಕ ಗುಣಮಟ್ಟ ತಪಾಸಣಾ ಸಂಸ್ಥೆಗಳು ಸುರಕ್ಷತಾ ಪರೀಕ್ಷೆ ನಡೆಸಿ ವರದಿ ನೀಡಲಿವೆ. ವರದಿ ಸ್ವೀಕರಿಸಿ ರೈಲ್ವೆ ಮಂಡಳಿಯು ಅನುಮತಿ ನೀಡಿದ ಮೇಲೆ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಈ ವರ್ಷದ ಅಂತ್ಯದೊಳಗೆ ವಾಣಿಜ್ಯ…

Read More

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವೈದ್ಯಕೀಯ/ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಆಯೋಜಿಸಲಾಗಿದ್ದ ಮೂಲ ದಾಖಲಾತಿ ಪರಿಶೀಲನೆ ನೇರ ಸಂದರ್ಶನದಲ್ಲಿ ಭಾಗವಹಿಸಿದ್ದ ವೈದ್ಯಾಧಿಕಾರಿಗಳು, ಶೂಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು (ಪಿಹೆಚ್‌ಸಿಓ), ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲೂಕು ಆಶಾ ಮೇಲ್ವಿಚಾರಕರು, ನೇತ್ರ ಸಹಾಯಕರರು ಈ ಎಲ್ಲಾ ಅಭ್ಯರ್ಥಿಗಳ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸೂಚನೆ ಫಲಕದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳ ಆಕ್ಷೇಪಣೆ ಇದ್ದಲ್ಲಿ ಲಿಖಿತ ರೂಪದಲ್ಲಿ ಆ.26 ರೊಳಗಾಗಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಎನ್.ಹೆಚ್.ಎಂ. ವಿಭಾಗಕ್ಕೆ ಸಲ್ಲಿಸುವಂತೆ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/shivamogga-power-outages-in-these-areas-of-the-district-on-august-20/ https://kannadanewsnow.com/kannada/cbi-to-condut-lie-detector-test-on-main-accused-arrested-in-kolkata-rape-and-murder-case/

Read More

ಕೊಲ್ಕತ್ತಾ: ಕೊಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಸಿಬಿಐ ನಿರ್ಧಾರಿಸಿತ್ತು. ಇದಕ್ಕೆ ಇಂದು ಕೊಲ್ಕತ್ತಾ ಹೈಕೋರ್ಟ್ ಅನುಮತಿ ಕೂಡ ನೀಡಿದೆ. ಕೋಲ್ಕತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗಳ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಕಲ್ಕತ್ತಾ ಹೈಕೋರ್ಟ್ ಸೋಮವಾರ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ವರದಿಗಳು ತಿಳಿಸಿವೆ. ಕೊಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಸುಳ್ಳು ಪತ್ತೆ ಪರೀಕ್ಷೆಗೆ ಕೋರ್ಟ್ ಅನುಮತಿ ಬೆನ್ನಲ್ಲೇ, ನಾಳೆ ಸುಳ್ಳು ಪತ್ತೆ ಪರೀಕ್ಷೆಗೆ ಆರೋಪಿಯನ್ನು ಸಿಬಿಐ ಒಳಪಡಿಸುವಂತ ಸಾಧ್ಯತೆ ಇದೆ. https://kannadanewsnow.com/kannada/shivamogga-power-outages-in-these-areas-of-the-district-on-august-20/ https://kannadanewsnow.com/kannada/breaking-nwkrtc-bus-overturns-in-haveri-13-passengers-seriously-injured-hospitalised/

Read More

ಶಿವಮೊಗ್ಗ : ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಆ.20 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಕುರಿತು ಮೆಸ್ಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಶಿವಮೊಗ್ಗ ನಗರದ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರ್, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ ಕರೆಂಟ್ ಇರೋದಿಲ್ಲ. ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಆನಂದರಾವ್ ಬಡಾವಣೆ, ಗಾರ್ಡನ್ ಏರಿಯಾ, ಸಿಟಿ ಸೆಂಟ್ರಲ್ ಮಾಲ್, ರಾಯಲ್ ಆರ್ಕೇಡ್, ಸರ್ಕಾರಿ ಮತ್ತು ಖಾಸಗಿ ಬಸ್‌ನಿಲ್ದಾಣ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ…

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪರವಾಗಿ ಮನು ಸಿಂಘ್ವಿ ವಾದಿಸಿದರು. ಇದಕ್ಕೆ ರಾಜ್ಯಪಾಲರ ಪರವಾಗಿ ತುಷಾರ್ ಮೆಹತಾ ಅವರು ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದರು. ಜೊತೆಗೆ ವಾದಿಸಲು ಕಾಲಾವಕಾಶ ನೀಡುವಂತೆಯೂ ಕೋರಿದರು. ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದಂತ ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆಯನ್ನು ಆಗಸ್ಟ್.29ರವರೆಗೆ ಮುಂದೂಡುವಂತೆ ಹೈಕೋರ್ಟ್ ಸೂಚಿಸಿದೆ. ಇಂದು ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಸಿಎಂ ಸಿದ್ಧರಾಮಯ್ಯ ಪರವಾಗಿ ವಾದ ಆರಂಭಿಸಿದಂತ ಹಿರಿಯ ವಕೀಲ ಮನು ಸಿಂಘ್ವಿ ಅವರು, ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶವನ್ನು ನೀಡುವಂತಿಲ್ಲ ಎಂಬುದಾಗಿ ಹೇಳಿದರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತ ಮಧ್ಯಪ್ರದೇಶದ ತೀರ್ಪುಗಳನ್ನು ಉಲ್ಲೇಖಿಸಿದರು. ರಾಜ್ಯಪಾಲರಿಗೆ ಸಲಹೆ ನೀಡುವ ಸಂಬಂಧದ ಕ್ಯಾಬಿನೆಟ್ ಸಭೆಯಲ್ಲೂ…

Read More

ನವದೆಹಲಿ: ಆಗಾಗ್ಗೆ ತಮ್ಮ ವಿಲಕ್ಷಣ ಹೇಳಿಕೆಗಳಿಂದ ವೈರಲ್ ಆಗುವ ಆಧ್ಯಾತ್ಮಿಕ ಗುರು ಅನಿರುದ್ಧಾಚಾರ್ಯ ಅವರು ಅತ್ಯಾಚಾರಕ್ಕೆ ಮಹಿಳಾ ಸಂಘಟನೆಗಳನ್ನು ದೂಷಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ಜನರಲ್ಲಿ ವ್ಯಾಪಕ ಆಕ್ರೋಶ ಮತ್ತು ಆಕ್ರೋಶ ಹೆಚ್ಚುತ್ತಿರುವ ಸಮಯದಲ್ಲಿ ಅನಿರುದ್ಧಾಚಾರ್ಯ ಅವರ ಹೇಳಿಕೆ ಬಂದಿದೆ. ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಪುರುಷ ದೃಷ್ಟಿಯನ್ನು ದೂಷಿಸಬೇಕು ಎಂದು ಆಧ್ಯಾತ್ಮಿಕ ನಾಯಕ ಸ್ಪಷ್ಟವಾಗಿ ಹೇಳುತ್ತಿರುವುದನ್ನು ತೋರಿಸುತ್ತದೆ. ಮಹಿಳೆಯರು ಉಡುಗೆ ತೊಡಲು ಆಯ್ಕೆ ಮಾಡುವ ವಿಧಾನದಲ್ಲೂ ದೋಷವಿದೆ. “ಕ್ಯಾ ಹಮ್ ಪುರ ದೋಶ್ ನಜರೋನ್ ಕೋ ದೇಡೆ?” ಎಂದು ಅವರು ಕೇಳುತ್ತಾರೆ. ಮಹಿಳೆಯ ಸಣ್ಣ ಉಡುಗೆಯು ಒಳ್ಳೆಯ ಹುಡುಗನನ್ನು ಸಹ ಪ್ರಚೋದಿಸುತ್ತದೆ. ನಂತರ ಅವನು ತನ್ನ ಸುತ್ತಲಿನ ಇನ್ನೊಬ್ಬ ಮಹಿಳೆಗೆ ಕಿರುಕುಳ ನೀಡುತ್ತಾನೆ ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಾ ಹೋಗುತ್ತಾನೆ. ಕಾಲ್ಪನಿಕ ಘಟನೆಯನ್ನು ವಿವರಿಸಿದ ನಂತರ,…

Read More