Author: kannadanewsnow09

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ: ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ (21*21*3ಮೀ), ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಲಾಸ್ಟಿಕ್ ಹೊದಿಕೆ, 20 ಹೆಚ್.ಪಿ ಕಡಿಮೆಯುಳ್ಳ ಟ್ರಾಕ್ಟರ್, ಟ್ರಾಕ್ಟರ್ ಚಾಲಿತ ಔಷಧಿ ಸಿಂಪರಣೆ ಉಪಕರಣಗಳು ಮತ್ತು ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ವಿತರಿಸಲಾಗುತ್ತದೆ.…

Read More

ಬೀದರ್: ರಾಜ್ಯದ ಬಿಜೆಪಿಯ ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ದೂರು ನೀಡಿದ್ದಾರೆ. ಬಿಜೆಪಿ ಮಾಜಿ ಸಚಿವ ಪ್ರಭು ಚವ್ಹಾಣ್ ಪತ್ರ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ಜೊತೆಗೆ 2 ವರ್ಷಗಳ ಹಿಂದೆ ಮದುವೆಗೆ ನಿಶ್ಚಿತಾರ್ಥ ನೆರವೇರಿತ್ತು. ಆ ಬಳಿಕ ಮದುವೆಯಾಗಲು ವಿಳಂಬ ಮಾಡಲಾಗಿತ್ತು. ಎರಡು ಮನೆಯ ಕುಟುಂಬಸ್ಥರು ಒಪ್ಪಿ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ನಿಶ್ಚಿತಾರ್ಥ ನೆರವೇರಿಸಿದ್ದರು. ಈ ಬಳಿಕ ಪ್ರತೀಕ್ ಯುವತಿಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದರು ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ನಿಶ್ಚಿತಾರ್ಥದ ಬಳಿಕ ದೈಹಿಕ ಸಂಪರ್ಕವನ್ನೂ ಬೆಳಸಿದಂತ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಪುತ್ರ ಪ್ರತೀಕ್ ಚೌವ್ಹಾಣ್ ಮದುವೆಯಾಗಲು ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ತಮಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ಸ್ವೀಕರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದಾಗಿ ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ. ತಾನು ಬೀದರ್ ಜಿಲ್ಲೆಯ ಹೊಕ್ರಾಣೆ…

Read More

ಬೆಂಗಳೂರು: ರಾಜ್ಯಾಧ್ಯಂತ ಪ್ರತಿ ಮನೆ ಮನೆಯಿಂದ ಕಸ ಸಂಗ್ರಹಕ್ಕೆ ಸ್ವಚ್ಛ ವಾಹಿನಿಯ ವ್ಯವಸ್ಥೆ ಮಾಡಲಾಗಿದೆ. ಈ ವಾಹನ ಕಸ ಸಂಗ್ರಹಣೆಗೆ ಬಾರದೇ ಇದ್ದರೇ ಜಸ್ಟ್ ಈ ನಂಬರ್ ಗೆ ಕರೆ ಮಾಡಿ. ನಿಮ್ಮ ಏರಿಯಾ, ಮನೆಯ ಬಳಿಗೂ ಬರಲಿದೆ. ನಿಮ್ಮ ಮನೆ ಬಾಗಿಲಿಗೆ ಕಸ ಸಂಗ್ರಹಕ್ಕಾಗಿ ಪ್ರತಿದಿನ ಸ್ವಚ್ಛ ವಾಹಿನಿ ಬರುತ್ತಿಲ್ಲವೇ? ಕಸದ ಸಮರ್ಪಕ ವಿಲೇವಾರಿಗೆ ತೊಂದರೆಯಾಗುತ್ತಿದೆಯೇ? ತಕ್ಷಣವೇ ಪಂಚಮಿತ್ರ ಸಹಾಯವಾಣಿ 8277506000 ಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕ ದೂರು ಸಲ್ಲಿಸಿ. https://twitter.com/KarnatakaVarthe/status/1945813544303550733 https://kannadanewsnow.com/kannada/the-state-cabinet-has-approved-the-construction-of-a-theme-park-in-the-premises-of-kittur-fort/ https://kannadanewsnow.com/kannada/life-style-are-you-not-getting-pregnant-then-these-could-also-be-the-reason/

Read More

ಬೆಂಗಳೂರು: ಬೆಳಗಾವಿಯ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 30 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ರೂ.30 ಕೋಟಿ ವೆಚ್ಚದ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. https://twitter.com/KarnatakaVarthe/status/1945837536917750138 ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ “ಎ” ಮತ್ತು “ಬಿ” ಖಾತಾ ನೀಡುವುದನ್ನು ನಿಯಂತ್ರಿಸಲು ಸಚಿವ ಸಂಪುಟ ನಿರ್ಣಯವನ್ನು ಕೈಗೊಂಡಿತು. ಮಲಪ್ರಭಾ ನದಿಗೆ ಅಡ್ಡಲಾಗಿರುವ ಮುನವಳ್ಳಿ ಆರ್‌ಬಿಸಿಗೆ ನವಿಲುತೀರ್ಥ ಆಣೆಕಟ್ಟಿನ ಚೈನೇಜ್. 0+098 ರಿಂದ ಚೈನೇಜ್ 0+433 ವರೆಗೆ ಅಕ್ವಾಡಕ್ಟ್ ಅನ್ನು ಎಂಎಸ್ ಪೈಪ್‌ನೊಂದಿಗೆ ನಿರ್ಮಿಸುವ ಕಾಮಗಾರಿಯನ್ನು ರೂ.19.05 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬAಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಇವರು ಹೊರಡಿಸಿರುವ ಮಾರ್ಗಸೂಚಿಯನ್ನು…

Read More

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ನಾಗರಿಕರಲ್ಲಿ ಸಂವಿಧಾನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಂವಿಧಾನದ ಬಗ್ಗೆ ವಿವಿಧ ಸೆಮಿನಾರ್‌ಗಳು, ಚರ್ಚೆಗಳು ಹಾಗೂ ಸಂಶೋಧನಾ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ರೂ.10 ಕೋಟಿ ವೆಚ್ಚದಲ್ಲಿ ಡಾ. ಬಿ. ಆರ್‌. ಅಂಬೇಡ್ಕರ್‌ ಸಂವಿಧಾನ ಪೀಠ ಸ್ಥಾಪಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.  https://twitter.com/KarnatakaVarthe/status/1945838442421842366 ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಯಳವಟ್ಟಿ ಗ್ರಾಮದಲ್ಲಿ 28.3 ಎಕರೆ ಪ್ರದೇಶದಲ್ಲಿ ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಳ ಬಹು ಉತ್ಪನ್ನಗಳ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮತ್ತು ಸಂರಕ್ಷಣಾ ಘಟಕವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಡಿ ರೂ.35.07 ಕೋಟಿಗಳ ಮೊತ್ತದಲ್ಲಿ Common Infrastructure for Industrial Parks (Food Park) ಮಾದರಿಯಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದ ಪರಂಪೋಕ ಸರ್ಕಾರಿ ಸರ್ವೆ ನಂ.124/*/1/ಪಿ2 ನಲ್ಲಿನ 194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ…

Read More

ಮಂಡ್ಯ : ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕೆ ವಿನಃ ಅನಗತ್ಯವಾಗಿ ತಮ್ಮ ಸಮುದಾಯದ ವ್ಯಕ್ತಿಗಳನ್ನು ಓಲೈಕೆ ಮಾಡಿಕೊಳ್ಳುವುದು ಸರಿಯಾದ ಕ್ರಮವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಗುರುವಾರ ಹೇಳಿದರು. ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಇತ್ತಿಚೆಗೆ ಕೆಲವು ಮಠಾಧೀಶರು ತಮ್ಮ ತಮ್ಮ ಸಮುದಾಯದ ವ್ಯಕ್ತಿಗಳಿಗಾಗಿ ರಾಜಕಾರಣದಲ್ಲಿ ಓಲೈಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಈ ದೇಶದ ಸಂವಿಧಾನ ಪ್ರಕಾರ ರಾಷ್ಟ್ರಪತಿಗಳಿಗೂ ಒಂದೇ ಕಾನೂನು ಜನಸಾಮಾನ್ಯರಿಗೆ ಒಂದೇ ಕಾನೂನು ಹೀಗಾಗಿ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡಬೇಕೆ ವಿನಃ ರಾಜಕಾರಣದಲ್ಲಿ ತಮ್ಮ ಸಾಮರ್ಥ್ಯ ತೋರಿಸಬಾರದು. ತಮ್ಮ ಸಮುದಾಯದ ವ್ಯಕ್ತಿಗಳ ಪರ ಓಲೈಕೆ ರಾಜಕಾರಣ ಹಾಗೂ ದ್ವೇಷ, ಅಸೂಯೆಯನ್ನು ಬದಿಗೊತ್ತಿ ಸಮಾಜಕ್ಕೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕೆಂದರು. ಇನ್ನು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವ ಬಗ್ಗೆ…

Read More

ಮಂಗಳೂರು: ಮಂಗಳೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥವನ್ನು ವಿಧಾನಸಭೆಯ ಸಭಾಧ್ಯಕ್ಷರಾದಂತ ಯು.ಟಿ.ಖಾದರ್ ಉದ್ಘಾಟಿಸಿದರು. ಈ ವೇಳೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ ಸಮರ್ಪಕ ಹಾಗೂ ವೈಜ್ಞಾನಿಕವಾಗಿ ಚಾಲನಾ ನೈಪುಣ್ಯತೆಯನ್ನು ಪರೀಕ್ಷಿಸುವುದು ಪ್ರಸ್ತುತ ಅನಿವಾರ್ಯವಾಗಿದೆ. ಆದ್ದರಿಂದ ರಾಜ್ಯದ ಸಾರಿಗೆ ಇಲಾಖೆಯ ಪ್ರತಿಯೊಂದು ಅಧೀನ ಕಛೇರಿಗಳಿಗೂ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಜ್ಞಾನಭಾರತಿ, ಎಲೆಕ್ಟ್ರಾನಿಕ್ ಸಿಟಿ, ಮೈಸೂರು, ಕಲಬುರಗಿ, ಧಾರವಾಡ, ಶಿವಮೊಗ್ಗ, ಮತ್ತು ಹಾಸನ ಕಛೇರಿಗಳ ವ್ಯಾಪ್ತಿಯಲ್ಲಿ ರೂ.31.21 ಕೋಟಿಗಳ ವೆಚ್ಚದಲ್ಲಿ ಅತ್ಯಾಧುನಿಕ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಸಲಾಗಿದೆ. ಈಗಾಗಲೇ ಪ್ರಾದೇಶಿಕ/ಸಹಾಯಕ ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ: ಒಟ್ಟು ರೂ.36.00 ಕೋಟಿ ವೆಚ್ಚದಲ್ಲಿ ಧಾರವಾಡ ಪೂರ್ವ, ಕೊಪ್ಪಳ, ಚಿಂತಾಮಣಿ, ಶಿರಸಿ, ದಾಂಡೇಲಿ, ಭಾಲ್ಕಿ, ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು, ರೂ. 42.00 ಕೋಟಿ ವೆಚ್ಚದಲ್ಲಿ ಬೀದರ್, ಕಲಬುರಗಿ,…

Read More

ಬೆಂಗಳೂರು: ಪಿಎಸ್‌ ಐ ಪರೀಕ್ಷೆ ಬರೆದು ನ್ಯಾಯಬದ್ಧವಾಗಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದ ನಂತರವೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಜೆಡಿಎಸ್‌ ಬೆಂಬಲ ವ್ಯಕ್ತಪಡಿಸಿದೆ. ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ ಅವರು ಗುರುವಾರ ನಗರದ ಫ್ರೀಡಂ ಪಾರ್ಕ್‌ ಬಳಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಜಾಗಕ್ಕೆ ತೆರಳಿ , ಅವರಿಗೆ ಪಕ್ಷದ ಪರವಾಗಿ ಬೆಂಬಲ ವ್ಯಕ್ತಪಡಿಸಿದರು. ರಾಜ್ಯ ಸರಕಾರವು 2021ರಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 4 ವರ್ಷಗಳ ನಂತರ ಪರೀಕ್ಷೆ ನಡೆಸಿತ್ತು. 2024 ಡಿಸೆಂಬರ್‌ 26ರಂದು ಫಲಿತಾಂಶವನ್ನೂ ಪ್ರಕಟಿಸತ್ತು. ಅದಾದ ಮೇಲೆ ಪರೀಕ್ಷೆಯಲ್ಲಿ ಅರ್ಹರಾದ ಎಲ್ಲಾ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆದು 7 ತಿಂಗಳು ಕಳೆದರೂ ಇನ್ನೂ ನೇಮಕಾತಿ ಆದೇಶ ನೀಡದಿರುವುದು ಸರಿಯಲ್ಲ. ಕೂಡಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು. ಗೃಹ ಸಚಿವ ಪರಮೇಶ್ವರ್‌ ಅವರು…

Read More

ಪಶ್ಚಿಮ ಬಂಗಾಳ : ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಪಶ್ಚಿಮ ಬಂಗಾಳದ ಬಿರ್ಭುಮ್‌ನಲ್ಲಿ ತನ್ನ ನೆರೆಹೊರೆಯವರೊಂದಿಗೆ ಜಗಳವಾಡುತ್ತಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಹಸಿನ್ ಜಹಾನ್ ತನ್ನ ನೆರೆಹೊರೆಯ ಮಹಿಳೆಯರೊಂದಿಗೆ ತೀವ್ರ ವಾಗ್ವಾದದಲ್ಲಿ ಭಾಗಿಯಾಗಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಈ ವೀಡಿಯೋ ಸಂಬಂಧ ಕ್ರಿಕೆಟಿಗ ಮೊಹಮ್ಮದ್ ಶಮಿಯಿಂದ ಬೇರ್ಪಟ್ಟ ಪತ್ನಿ ಹಸಿನ್ ಜಹಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಹಸಿನ್ ಜಹಾನ್ ಮತ್ತು ಅವರ ಮಗಳು ಅರ್ಷಿ ಜಹಾನ್ ಭೂ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ನೆರೆಹೊರೆಯವರೊಂದಿಗೆ ದೈಹಿಕ ಜಗಳವಾಡಿದ್ದಾರೆ ಎಂದು ವರದಿಗಳಿವೆ. ಹಸಿನ್ ಅಕ್ರಮವಾಗಿ ಭೂಮಿಯನ್ನು ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ನೆರೆಹೊರೆಯವರು ಅವಳನ್ನು ವಿರೋಧಿಸಿದಾಗ, ವಾದವು ಉಲ್ಬಣಗೊಂಡು ದೈಹಿಕ ಜಗಳವಾಗಿ ಮಾರ್ಪಟ್ಟಿದೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದರಲ್ಲಿ ಹಸಿನ್ ಜಹಾನ್ ತನ್ನ ನೆರೆಹೊರೆಯವರೊಂದಿಗೆ…

Read More

ನವದೆಹಲಿ: ಇಂದು ನವೀಕರಿಸಿದ ಆಕಾಶ್ ವೆಪನ್ ಸಿಸ್ಟಮ್ ಪರೀಕ್ಷೆಯು ಯಶಸ್ವಿಯಾಗಿದೆ. ಆ ಮೂಲಕ ದೇಶದ ರಕ್ಷಣೆಗೆ ಮತ್ತಷ್ಟು ಬಲ ಬಂದಂತೆ ಆಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಡಿ ಆರ್ ಡಿ ಓ, ಆಕಾಶ್ ವೆಪನ್ ಸಿಸ್ಟಮ್‌ನ ನವೀಕರಿಸಿದ ರೂಪಾಂತರವಾದ ಆಕಾಶ್ ಪ್ರೈಮ್, ಲಡಾಖ್ ಸೆಕ್ಟರ್‌ನಲ್ಲಿ ಹೆಚ್ಚಿನ ಎತ್ತರದಲ್ಲಿ ಪ್ರಯೋಗಗಳ ಸಮಯದಲ್ಲಿ ಎರಡು ವೈಮಾನಿಕ ಹೈ ಸ್ಪೀಡ್ ಮಾನವರಹಿತ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿತು ಎಂದಿದೆ. ಶಸ್ತ್ರಾಸ್ತ್ರ ವ್ಯವಸ್ಥೆಯನ್ನು 4500 ಮೀಟರ್‌ಗಿಂತ ಹೆಚ್ಚಿನ ಎತ್ತರದಲ್ಲಿ ಕಾರ್ಯನಿರ್ವಹಿಸಲು ಕಸ್ಟಮೈಸ್ ಮಾಡಲಾಗಿದೆ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಆರ್‌ಎಫ್ ಸೀಕರ್ ಸೇರಿದಂತೆ ಇತ್ತೀಚಿನ ನವೀಕರಣಗಳನ್ನು ಹೊಂದಿದೆ ಎಂಬುದಾಗಿ ತಿಳಿಸಿದೆ. https://twitter.com/DRDO_India/status/1945784767414464899 https://kannadanewsnow.com/kannada/explosive-twist-in-the-murder-case-of-rowdy-sheeter-biklu-shiva-in-bengaluru/ https://kannadanewsnow.com/kannada/life-style-are-you-not-getting-pregnant-then-these-could-also-be-the-reason/

Read More