Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣದ ಅವಧಿಯನ್ನು ಡಿಸೆಂಬರ್ 31, 2025ರವರೆಗೆ ಸರ್ಕಾರ ವಿಸ್ತರಿಸಿ ಆದೇಶಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಡ್ತಿ, ಮುಂಬಡ್ತಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಉತ್ತೀರ್ಣರಾಗುವಂತ ಅವಧಿಯನ್ನು ದಿನಾಂಕ 31-12-2025ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪಿಎಂ ಪೋಷಣ್ ನಿರ್ದೇಶಕರು ನೆನಪೋಲೆಯನ್ನು ರಾಜ್ಯ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಪ್ರತಿ ವರ್ಷದಂತ ಪಿ ಎಂ ಪೋಷಣ್ (ಮಧ್ಯಾಹ್ನ ಬಿಸಿಯೂಟ ಯೋಜನ) ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪ್ರತಿ ಶೈಕ್ಷಣಿಕ ವರ್ಷದ ಕೆಲಸದ ದಿನಗಳನ್ನು ಲೆಕ್ಕಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳನ್ನು(ಕನ್ನಡ ರಾಜ್ಯೋತ್ಸವ) ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿರುತ್ತದೆ ಹಾಗೂ ಪಿ ಎಂ ಪೋಷಣ್ ಯೋಜನ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನ ಮಾಡಲು (ಯೋಜನಾ ಅನುಮೋದನಾ ಮಂಡಳಿ) ಪಿಎಬಿ ಯಿಂದ ಅನುಮೋದನೆಯನ್ನು ಪಡೆಯಲಾಗಿರುತ್ತದೆ ಎಂದಿದ್ದಾರೆ. ಆದ್ದರಿಂದ ಎಲ್ಲಾ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಬಿಸಿಯೂಟ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಸೂಚಿಸಲಾಗಿರುತ್ತದ. ಆದ್ದರಿಂದ 2025 ಜನವರಿ 26 ಗಣರಾಜ್ಯೋತ್ಸವ…
ಅಗೋರಿಗಳಿಗೆ ನಾಗಸಾಧುಗಳು ಕಾಡಿನಲ್ಲಿ ಒಬ್ಬರೇ ಎಲ್ಲವನ್ನು ತ್ಯಜಿಸಿ ಈ ಲೋಕಕ್ಕೆ ಸಂಬಂಧವಿಲ್ಲದಂತೆ ಒಬ್ಬರೇ ಅಗೋರ ತಂತ್ರಗಳಿಂದ ಜೀವನ ನಡೆಸುತ್ತಿರುತ್ತಾರೆ ಯಾವುದೇ ವಾಚ್ ಇಲ್ಲದೆ ಫೋನ್ ಗಳಿಲ್ಲದೆ ಯಾವುದೇ ಜನರ ಸಂಪರ್ಕಕ್ಕೆ ಇಲ್ಲದೆ ಸರಿಯಾದ ಸಮಯಕ್ಕೆ ಬನದ ಹುಣ್ಣಿಮೆಯಂದು ಪ್ರಾರಂಭವಾಗುವ ಮಹಾ ಕುಂಭಮೇಳಕ್ಕೆ ಬರುವರು ಹೇಗೆ ಯಾವ ಕಾಲದಿಂದ ಈ ಯಂತ್ರ, ಮಂತ್ರ ,ತಂತ್ರ ಗಳುಇವೆ. 1) ಸತ್ಯ ಯುಗ ಅಂದರೆ ಸ್ವರ್ಣ ಭೂಮಿ (ಬಂಗಾರ) ಯುಗದಲ್ಲಿ ಈ ಮಂತ್ರಕ್ಕಾಗಿ ಹಾಹೋಕಾರವಿತ್ತು. 2) ತ್ರೇತಾಯುಗದಲ್ಲಿ ಅಂದರೆ ದೈವ ಭೂಮಿ (ಬೆಳ್ಳಿ) ಯುಗದಲ್ಲಿ ಈ ಮಂತ್ರಗಳು ತುಂಬಾ ಪ್ರಸಿದ್ಧಿಯಾಗಿದವು. 3) ದ್ವಾಪರ ಯುಗದಲ್ಲಿ ,ರಾಕ್ಷಸ ಭೂಮಿ (ತಾಮ್ರ) ಯುಗದಲ್ಲಿ ಈ ಮಂತ್ರ ಗಳು ತಂತ್ರ ಗಳು ಹೇಚ್ಚಾಗಿ ಊಪಯೋಗಿಸುತ್ತಿದ್ದರು. 4)ಕಲಿಯುಗದಲ್ಲಿ ( ಕಪಣಯುಗ)ದಲ್ಲಿ ಈ ಯಂತ್ರ, ಮಂತ್ರ, ತಂತ್ರ ಗಳನ್ನು ಕಲಿಯಲು ಮುಖ್ಯವಾಗಿ ನಂಬಿಕೆ ಇಲ್ಲ ಹಾಗೂ ಸಮಯವಿಲ್ಲ. ಯಾರಾದರೂ ಗೊತ್ತಿರುವವರು ತೀಳಿಸಿದರೆ ಗೊತ್ತಿರದವರು ಅದನು ತೀರುವು ಮುರುವು ಮಾಡಿ ಹೇಳುವರು ಸತ್ಯ ವಾಗಿ…
ಕಲಬುರಗಿ: ಪ್ರಸಕ್ತವಾಗಿ ನೆಟೆರೋಗದಿಂದ ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆ ತೊಗರಿ ಸಂಪೂರ್ಣವಾಗಿ ಹಾಳಾಗಿ ರೈತ ಕಂಗಾಲಾಗಿದ್ದರೂ ರಾಜ್ಯ ಸರ್ಕಾರ ಪರಿಹಾರ ನೀಡಲು ಮೀನಾ ಮೇಷ ಮಾಡುತ್ತಿರುವುದು ರೈತ ವಿರೋಧಿ ಧೋರಣೆಗೆ ಹಿಡಿದ ಕನ್ನಡಿಯಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ನೆಟೆರೋಗದಿಂದ ಶೇ ಅರ್ಧದಷ್ಟು ಅಂದರೆ ಸರಿಸುಮಾರು ಮೂರು ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಸಂಪೂರ್ಣ ತೊಗರಿ ಹಾನಿಯಾಗಿದೆ. ಜತೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿದೆ. ಇಂತಹ ಸಮಯದಲ್ಲಿ ತುರ್ತಾಗಿ ನೆರವಿಗೆ ಬರುವುದು ಬಿಟ್ಟು ಖುರ್ಚಿ ಉಳಿಸಿಕೊಳ್ಳುವಲ್ಲಿ ಮಗ್ನವಾಗಿರುವುದು ನಾಚಿಗೇಡಿತನ ಸಂಗತಿಯಾಗಿದೆ. ಈಗಲಾದರೂ ತನ್ನ ಧೋರಣೆಯಿಂದ ಹೊರ ಬಂದು ಪರಿಹಾರ ನೀಡಬೇಕೆಂದು ತೇಲ್ಕೂರ ಆಗ್ರಹಿಸಿದ್ದಾರೆ. ಎರಡು ವರ್ಷಗಳ ಹಿಂದೆ ನೆಟೆರೋಗದಿಂದ ತೊಗರಿ ಬೆಳೆ ಹಾನಿಯಾದಾಗ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಹಾರ ಮಂಜೂರಾತಿ ನೀಡಿದ್ದನ್ನು ಇಲ್ಲಿ ಅವಲೋಕಿಸಬಹುದಾಗಿದೆ. ಆವಾಗ ಯಾವುದೇ ನಿಟ್ಟಿನಲ್ಲಿ ಸಮೀಕ್ಷೆ ಹಾಗೂ ವರದಿ ಎಂದು ಸಮಯ…
ಬೆಂಗಳೂರು: ನಗರದ ಬಸವನಗುಡಿಯಲ್ಲಿನ ಬಿಎಂಎಸ್ ಕಾಲೇಜಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಬಿಎಂಎಸ್ ಕಾಲೇಜಿನ ಬಹುಮಹಡಿ ಕಟ್ಟಡದಿಂದ ವಿದ್ಯಾರ್ಥಿ ಅಕ್ಷಯ್ ರೆಡ್ಡಿ ಎಂಬಾತ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಕ್ಷಯ್ ರೆಡ್ಡಿ ಬಿಎಂಎಸ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಏರೋಸ್ಪೇಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದನಂತೆ. ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ತನಿಖೆಯ ನಂತ್ರ ಖಚಿತ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/heart-attack-on-the-rise-among-youth-student-dies-after-collapsing-while-returning-home-from-college/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/
ತುಮಕೂರು: ರಾಜ್ಯದಲ್ಲಿ ಯುವಜನತೆಯಲ್ಲಿ ಹೃದಯಾಘಾತದ ಪ್ರಕರಮಗಳು ಹೆಚ್ಚಾಗುತ್ತಿವೆ. ಇಂದು ಕಾಲೇಜಿನಿಂದ ಮನೆಗೆ ಬರುವಾಗಲೇ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ಸರ್ಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಮೈಥಿಲಿ(19) ಇಂದು ಕಾಲೇಜು ಮುಗಿಸಿ ಮನೆಗೆ ಮರಳುತಿದ್ದಾಗಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೈಥಿಲಿ ಕಾಲೇಜಿನಿಂದ ಮನೆಗೆ ತೆರಳುತ್ತಿದಾಗ ಹೃದಯಾಘಾತ ಉಂಟಾಗಿದೆ. ಈ ಕಾರಣದಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯೋ ಸಂದರ್ಭದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-relief-for-cm-siddaramaiah-in-kickback-case-court-accepts-lokayukta-b-report/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಹಿಂದೆ ಸಿಎಂ ಆಗಿದ್ದಂತ ಸಂದರ್ಭದಲ್ಲಿ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬುದಾಗಿ ದಾಖಲಾಗಿದ್ದಂತ ಖಾಸಗಿ ದೂರಿನ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ ರಿಪೋರ್ಟ್ ಅನ್ನು ಕೋರ್ಟ್ ಅಂಗೀಕರಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬುದಾಗಿ ಬಿಜೆಪಿಯ ಎನ್ ಆರ್ ರಮೇಶ್ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದಂತ ಲೋಕಾಯುಕ್ತ ಪೊಲೀಸರು, ಸಿಎಂ ಸಿದ್ಧರಾಮಯ್ಯ ಅವರು ಕಿಕ್ ಬ್ಯಾಕ್ ಪಡೆದಿಲ್ಲ ಎಂಬುದಾಗಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವಂತ ಬಿ ರಿಪೋರ್ಟ್ ಅಂಗೀಕರಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ವಿರುದ್ಧದ ಕಿಕ್ ಬ್ಯಾಕ್ ಕೇಸಲ್ಲಿ ಬಿಗ್…
ಬೆಂಗಳೂರು: ಜ.16ರಂದು 2025ನೇ ಸಾಲಿನ ಇಂಜಿನಿಯರಿಂಗ್, ಯೋಗ ಸೇರಿದಂತೆ ವಿವಿಧ ಕೋರ್ಸ್ ಗಳ ವ್ಯಾಸಂಗಕ್ಕಾಗಿ ಸಿಇಟಿ 2025ರ ಪರೀಕ್ಷೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿತ್ತು. ಈ ಬೆನ್ನಲ್ಲೇ ಯುಜಿ ಸಿಇಟಿ 2025ರ ಪರೀಕ್ಷೆಗೆ ಪಠ್ಯಕ್ರಮವನ್ನು ಪ್ರಕಟಿಸಿದೆ. 2025ನೇ ಸಾಲಿನ ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ್ ಮತ್ತು ಫಾರ್ಮ್-ಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗೂ ಬಿಎಸ್ಸಿ ನರ್ಸಿಂಗ್ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 16-04-2025 ಮತ್ತು 17-04-2025ರಂದು ನಡೆಸಲು ನಿಗದಿಪಡಿಸಲಾಗಿದೆ ಎಂಬುದಾಗಿ ತಿಳಿಸಿತ್ತು. ಹೀಗಿದೆ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿ ದಿನಾಂಕ 16-04-2025ರ ಬುಧವಾರ ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ. ಮಧ್ಯಾಹ್ನ 2.30ರಿಂದ 3.50ರವರೆಗೆ ರಾಸಾಯನಶಾಸ್ತ್ರ. ದಿನಾಂಕ 17-04-2025ರ ಗುರುವಾರದಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಗಣಿತ ಶಾಸ್ತ್ರ. ಮಧ್ಯಾಹ್ನ 2.30ರಿಂದ 3.50ರವರೆಗೆ ಜೀವಶಾಸ್ತ್ರ ಪರೀಕ್ಷೆ. ಇನ್ನೂ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು…
ದಕ್ಷಿಣ ಕನ್ನಡ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನ ತಾಲೂಕು ಆಸ್ಪತ್ರೆಗಳಲ್ಲಿಯೇ ನೀಡುವ ಮೂಲಕ ಜನರ ಸಮೀಪಕ್ಕೆ ಆರೋಗ್ಯ ಸೇವೆಗಳನ್ನ ಒದಗಿಸುತ್ತ ಮುಂಬರುವ ಬಜೆಟ್ ನಲ್ಲಿ ಮಹತ್ವದ ಯೋಜನೆ ಘೋಷಣೆಯಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈ ನಿಟ್ಟಿನಲ್ಲಿ ಪ್ರಸ್ತುತ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಸಂಖ್ಯೆಯನ್ನ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ರಾತ್ರಿ ವೇಳೆಯಲ್ಲಿಯೂ ಆಸ್ಪತ್ರೆಗಳಿಗೆ ಬರುವ ಜನರಿಗೆ ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ. ಅಲ್ಲದೇ ತಜ್ಞ ವೈದ್ಯರಿಗೆ ಬೇಕಾಗುವ ಎಲ್ಲ ವೈದ್ಯಕೀಯ ಪರಿಕರಿಗಳನ್ನ ಸರ್ಕಾರ ತಾಲೂಕು ಆಸ್ಪತ್ರೆಗಳಲ್ಲಿಯೂ…










