Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.25 ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶಾಲೆಗಳ ವಿವರ: ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ. 7353346069. ಸಂಡೂರು ತಾಲ್ಲೂಕಿನ ತೋರಣಗಲ್ಲು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9480933730. ಕಂಪ್ಲಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9113280239. ಕುರುಗೋಡು ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ…
ಧಾರವಾಡ : ಧಾರವಾಡ ಜಿಲ್ಲೆಯ ರೈತ ಮಕ್ಕಳಿಗಾಗಿ 2025-26 ನೇ ಸಾಲಿಗೆ 10 ತಿಂಗಳ (ಮೇ 02, 2025 ರಿಂದ ಫೆಬ್ರವರಿ 28, 2026 ರವರೆಗೆ) ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮಹಿಳಾ-05 ಹಾಗೂ ಪುರುಷ–10, ಒಟ್ಟು–15 ಅಭ್ಯರ್ಥಿಗಳಿಗೆ ತೋಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಫಾರಂನ್ನು ಧಾರವಾಡ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್ಸೈಟ್ https://horticulturedir.karnataka.gov.in ನಲ್ಲಿ ಮಾರ್ಚ್ 31, 2025 ರೊಳಗಾಗಿ ಡೌನಲೋಡ್ ಮಾಡಿಕೊಂಡು, ಅರ್ಜಿ ಶುಲ್ಕದ ಬಾಬತ್ತು ಸಾಮಾನ್ಯ ಅಭ್ಯರ್ಥಿಗಳಗೆ ರೂ. 30 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 15 ಮೌಲ್ಯದ ಇಂಡಿಯನ್ ಪೆÇೀಸ್ಟಲ್ ಆರ್ಡರ್ (ಐಪಿಓ) ಅಥವಾ ಬ್ಯಾಂಕ್ ಡಿಮಾಂಡ್ ಡ್ರಾಫ್ಟ್ನ್ನು ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾಪಂಚಾಯತ) ಧಾರವಾಡ ಅವರ ಹೆಸರಿನಲ್ಲಿ ಪಡೆದು, ಭರ್ತಿ ಮಾಡಿದ ಅಗತ್ಯ ದಾಖಲಾತಿಗಳೊಂದಿಗೆ ಏಪ್ರಿಲ್ 1, 2025 ರೊಳಗಾಗಿ ಧಾರವಾಡ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ…
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಮಿಸ್ಟರಿಯ ನಂತ್ರ ನಟ ದರ್ಶನ್ ಮಾಧ್ಯಮಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಆದರೇ ಸೋಷಿಯಲ್ ಮೀಡಿಯಾದಲ್ಲಿ ಸಕ್ರೀಯವಾಗಿದ್ದಾರೆ. ಅವರು ಇನ್ಟಾಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಈಗ ಸಖತ್ ವೈರಲ್ ಆಗಿದೆ. ಜೊತೆಗೆ ತಮ್ಮ ಅಭಿಮಾನಿಗಳಿಗೆ ಎಚ್ಚರಿಕೆಯೋಪಾದಿಯ ತಿಳುವಳಿಕೆಯನ್ನು ಹೇಳಿದ್ದಾರೆ. ನಾಳೆಯಿಂದ ಮೈಸೂರಿನಲ್ಲಿ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ಮೈಸೂರಿನಲ್ಲಿ ಶೂಟಿಂಗ್ ಗೆ ಚಾಲನೆ ನೀಡಲಾಗುತ್ತಿದೆ. ಈ ಬೆನ್ನಲ್ಲೇ ಅಭಿಮಾನಿಗಳಿಗೆ ನಟ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ. ಈ ಬಗ್ಗೆ ತಮ್ಮ ಇನ್ಟಾ ಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ…
ನವದೆಹಲಿ : ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋದ 5 ಜಿ ನೆಟ್ವರ್ಕ್, ಮಹಾ ಕುಂಭ ಮೇಳದಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಓಕ್ಲಾ ಬಿಡುಗಡೆ ಮಾಡಿದ ವರದಿಯ ಪ್ರಕಾರ, ರಿಲಯನ್ಸ್ ಜಿಯೋದ ನೆಟ್ವರ್ಕ್ ವೇಗವು ಮಹಾಕುಂಭದಲ್ಲಿ ಅತ್ಯಂತ ವೇಗವಾಗಿತ್ತು, ಇದು 5 ಜಿ ನೆಟ್ವರ್ಕ್ ಲಭ್ಯತೆಯಲ್ಲಿ ಅದರ ಪ್ರತಿಸ್ಪರ್ಧಿ ಭಾರ್ತಿ ಏರ್ಟೆಲ್ ಅನ್ನು ಹಿಂದಿಕ್ಕಿದೆ. ಮಹಾಕುಂಭದಲ್ಲಿ 5 ಜಿ ನೆಟ್ವರ್ಕ್ನ ವೇಗವು 4 ಜಿಗಿಂತ ಸುಮಾರು 9 ಪಟ್ಟು ವೇಗವಾಗಿದೆ ಎಂದು ಓಕ್ಲಾ ತನ್ನ ವರದಿಯಲ್ಲಿ ಹೇಳಿದೆ. ಜನವರಿ ಆರಂಭದಿಂದ ಫೆಬ್ರವರಿ ಅಂತ್ಯದವರೆಗೆ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭ ಮೇಳ ನಡೆಯಿತು. 5ಜಿ ನೆಟ್ವರ್ಕ್ ಕಾರ್ಯಕ್ಷಮತೆಯಲ್ಲಿ ಜಿಯೋ ಅಗ್ರಸ್ಥಾನದಲ್ಲಿದೆ. ಜಿಯೋದ ಸರಾಸರಿ ಡೌನ್ಲೋಡ್ ವೇಗ 201.87 ಎಂಬಿಪಿಎಸ್ ಆಗಿದ್ದರೆ, ಏರ್ಟೆಲ್ 165.23 ಎಂಬಿಪಿಎಸ್ ಹೊಂದಿದೆ. ಮಹಾಕುಂಭದಲ್ಲಿ ರಿಲಯನ್ಸ್ ಜಿಯೋದ 5 ಜಿ ನೆಟ್ವರ್ಕ್ನ ಸರಾಸರಿ ಡೌನ್ಲೋಡ್ ವೇಗವು ಏರ್ಟೆಲ್ಗಿಂತ ಸುಮಾರು 36 ಎಂಬಿಪಿಎಸ್ ಹೆಚ್ಚಾಗಿದೆ. ಜಿಯೋ ಮತ್ತು ಏರ್ಟೆಲ್…
ಬೆಂಗಳೂರು : “ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆಗಳ ಭೂಸ್ವಾಧೀನ ಸಮಸ್ಯೆ ನಿವಾರಿಸುವ ಕುರಿತು ಸಂತ್ರಸ್ತ ರೈತರೊಂದಿಗಿನ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಪರಿಹಾರ ತಾರತಮ್ಯ ಪರಿಹರಿಸುವುದಕ್ಕೆ ರೈತರು ಸಹ ಒಪ್ಪಿಕೊಂಡಿದ್ದಾರೆ. ಅವರಿಗೂ ಅನ್ಯಾಯವಾಗದ ರೀತಿಯಲ್ಲಿ ನಾವು ಗಮನ ಹರಿಸುತ್ತೇವೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಾವು ಗಮನ ಹರಿಸುತ್ತೇವೆ” ಎಂದರು. “ಭೂ ಸ್ವಾಧೀನ ಪರಿಹಾರ ವಿಚಾರದಲ್ಲಿ ತಾರತಮ್ಯವಾಗಿರುವ ಕಾರಣಕ್ಕೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ರೈತರು ತಡೆ ಒಡ್ಡಿದ್ದರು. ಏಕೆಂದರೆ ಹಳೇ ದರದ ಪ್ರಕಾರ ಕೆಲವರಿಗೆ ₹4 ಲಕ್ಷ ಪರಿಹಾರ ಸಿಕ್ಕಿದೆ. ಅದೇ ಸರ್ವೇ ನಂಬರ್…
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶಾಲಾ ಗ್ರಂಥಾಲಯಗಳಿಗೆ 25 ಕೋಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದ 24,347 ಶಾಲೆಗಳಲ್ಲಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸುವ ಸಲುವಾಗಿ ₹20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. https://kannadanewsnow.com/kannada/karnataka-tulu-sahitya-akademi-announces-datti-nidhi-pustakapuraskar-for-the-year-2022-2023/ https://kannadanewsnow.com/kannada/peoples-tax-money-in-congress-workers-pockets-mlas-powers-curtailed-r-ashoka/
ಬೆಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2022ನೇ ಹಾಗೂ 2023ನೇ ಸಾಲಿನ ಪುಸ್ತಕ ಪ್ರಶಸ್ತಿ ಹಾಗೂ ದತ್ತಿ ನಿಧಿ ಪುಸ್ತಕ ಪುರಸ್ಕಾರ ಪ್ರಕಟಗೊಂಡಿದೆ. ನಾಲ್ವರು ಲೇಖಕರಿಗೆ ವಾರ್ಷಿಕ ಪುಸ್ತಕ ಬಹುಮಾನ ಹಾಗೂ 6 ಲೇಖಕರಿಗೆ ವಾರ್ಷಿಕ ದತ್ತಿ ನಿಧಿ ಪುಸ್ತಕ ಬಹುಮಾನವನ್ನು ಪ್ರಕಟಿಸಲಾಗಿದೆ. 2022ನೇ ಸಾಲಿನ ತುಳು ಕವನ ವಿಭಾಗದ ಪುಸ್ತಕ ಬಹುಮಾನಕ್ಕೆ ರಾಜೇಶ್ ಶೆಟ್ಟಿ ದೋಟ ಅವರ ‘ಮುಗದಾರಗೆ’ ಕವನ ಸಂಕಲನ, 2023ನೇ ಸಾಲಿನ ತುಳು ಕವನ ವಿಭಾಗಕ್ಕೆ ರಘು ಇಡ್ಕಿದು ಅವರ ‘ಎನ್ನ ನಲಿಕೆ’ ಕವನ ಸಂಕಲನ, 2023ನೇ ಸಾಲಿನ ತುಳು ಕಾದಂಬರಿ ಬಹುಮಾನಕ್ಕೆ ರಾಜಶ್ರೀ ಟಿ. ರೈ ಪೆರ್ಲ ಅವರ ‘ಮುಸ್ರಾಲೋ ಪಟ್ರೊ’ ಕಾದಂಬರಿ, 2023ನೇ ಸಾಲಿನ ತುಳು ಅನುವಾದ ವಿಭಾಗದ ಪುಸ್ತಕ ಬಹುಮಾನಕ್ಕೆ ಕುಶಲಾಕ್ಷಿ ವಿ. ಕುಲಾಲ್ ಅವರ ‘ತಗೊರಿ ಮಿತ್ತ್ದ ಮಣ್ಣ್ ‘ ಅನುವಾದ ಕೃತಿ ಆಯ್ಕೆಯಾಗಿದೆ. ಈ ಪುಸ್ತಕ ಪ್ರಶಸ್ತಿಯು ₹25 ಸಾವಿರ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. 2022ನೇ…
ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್ ಫೀಸ್ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ ಎಂದರು. ಸರ್ಕಾರದ ಹಣ ಬಡವರಿಗೆ ತಲುಪಬೇಕು. ಅಂಗನವಾಡಿಯಲ್ಲಿ…
ನವದೆಹಲಿ: ಕೆನಡಾದೊಂದಿಗಿನ ದೀರ್ಘಕಾಲದ ವ್ಯಾಪಾರ ಯುದ್ಧದ ಗಮನಾರ್ಹ ಉಲ್ಬಣದಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಕೆನಡಾದ ಎಲ್ಲಾ ಆಮದುಗಳ ಮೇಲೆ 50% ಕ್ಕೆ ದ್ವಿಗುಣ ಸುಂಕವನ್ನು ವಿಧಿಸಲು ತಮ್ಮ ವಾಣಿಜ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. ಒಂಟಾರಿಯೊ ಯುಎಸ್ಗೆ ನೀಡುವ ವಿದ್ಯುತ್ ಮೇಲೆ 25% ಸುಂಕವನ್ನು ವಿಧಿಸಿದ ನಂತರ ಅವರ ಪ್ರತಿಕ್ರಿಯೆ ಬಂದಿದೆ. ಕೆನಡಾದ ಒಂಟಾರಿಯೊದಲ್ಲಿ, ಅಮೆರಿಕಕ್ಕೆ ಬರುವ “ವಿದ್ಯುತ್”ದ ಮೇಲೆ 25% ಸುಂಕವನ್ನು ವಿಧಿಸುವುದರ ಆಧಾರದ ಮೇಲೆ, ವಿಶ್ವದ ಯಾವುದೇ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರಗಳಲ್ಲಿ ಒಂದಾದ ಕೆನಡಾದಿಂದ ಯುನೈಟೆಡ್ ಸ್ಟೇಟ್ಸ್ಗೆ ಬರುವ ಎಲ್ಲಾ ಉಕ್ಕು ಮತ್ತು ಅಲ್ಯೂಮಿನಿಯಂ ಮೇಲೆ 50% ಕ್ಕೆ ಹೆಚ್ಚುವರಿಯಾಗಿ 25% ಸುಂಕವನ್ನು ಸೇರಿಸಲು ನಾನು ನನ್ನ ವಾಣಿಜ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ” ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಹೇಳಿದರು. https://kannadanewsnow.com/kannada/actress-ranya-rao-gold-smuggling-how-to-play-smoke-without-fire/ https://kannadanewsnow.com/kannada/the-state-government-has-announced-the-annual-film-awards-for-the-year-2020-prajwal-devaraj-best-actor/
ಚಿಕ್ಕಮಗಳೂರು: ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ; ಈ ಸರಕಾರದ ಆಡಳಿತವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಬಾಳೆಹೊನ್ನೂರಿನಲ್ಲಿ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು. ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡದ ಕಾರಣ ಶಾಸಕರು ಒಂದುರೀತಿ ಅಸಹಾಯಕರಾಗಿದ್ದಾರೆ. ಕ್ಷೇತ್ರಗಳಲ್ಲಿ ಓಡಾಡಲಾಗದ ಸ್ಥಿತಿ ಇದೆ ಎಂಬ ಭಾವನೆಯನ್ನು ಆಡಳಿತ ಪಕ್ಷದ ಶಾಸಕರೂ ತೋಡಿಕೊಂಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಬಗೆಗಿನ ಪ್ರಶ್ನೆಗೆ ಉತ್ತರ ನೀಡಿದ ಅವರು, ಬಹಳ ಪ್ರಮುಖ ಪತ್ರಿಕೆಗಳಲ್ಲೂ ಈ ವಿಷಯ ಪ್ರಕಟಗೊಂಡಿದೆ. ಬೆಂಕಿ ಇಲ್ಲದೆ…













