Author: kannadanewsnow09

ನವದೆಹಲಿ: ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India – SBI) ನಿಷ್ಕ್ರಿಯ ಖಾತೆಗಳನ್ನು ಸಕ್ರಿಯಗೊಳಿಸುವ ಪ್ರಾಮುಖ್ಯತೆಯ ಬಗ್ಗೆ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದೆ. ಈ ಉಪಕ್ರಮಕ್ಕೆ ಮುಂಚಿತವಾಗಿ, ಎಸ್ಬಿಐ ತನ್ನ ರಾಷ್ಟ್ರೀಯ ವ್ಯವಹಾರ ವರದಿಗಾರರಿಗೆ ಗುರುಗ್ರಾಮದಲ್ಲಿ ಒಂದು ದಿನದ ಕಾರ್ಯಾಗಾರವನ್ನು ನಡೆಸಿತು. ಕಾರ್ಯಾಗಾರವು ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ) ಖಾತೆಗಳಿಗೆ ವಿಶೇಷ ಒತ್ತು ನೀಡುವ ಮೂಲಕ ನಿಷ್ಕ್ರಿಯ ಖಾತೆ ಸಕ್ರಿಯಗೊಳಿಸುವಿಕೆಯ ಮಹತ್ವವನ್ನು ಭಾಗವಹಿಸುವವರಿಗೆ ಸಂವೇದನಾಶೀಲಗೊಳಿಸುವತ್ತ ಗಮನ ಹರಿಸಿತು. ನಿಷ್ಕ್ರಿಯ ಖಾತೆ ಎಂದರೇನು? ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಯಾವುದೇ ವಹಿವಾಟುಗಳನ್ನು ನಡೆಸದಿದ್ದರೆ ಉಳಿತಾಯ ಅಥವಾ ಚಾಲ್ತಿ ಖಾತೆಯನ್ನು ನಿಷ್ಕ್ರಿಯ ಎಂದು ವರ್ಗೀಕರಿಸಲಾಗುತ್ತದೆ. ಅಂತಹ ಖಾತೆಗಳನ್ನು ಪುನಃ ಸಕ್ರಿಯಗೊಳಿಸಲು ಗ್ರಾಹಕರು ಮರು-ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಖಾತೆಗಳು ನಿಷ್ಕ್ರಿಯವಾಗುವುದನ್ನು ತಪ್ಪಿಸಲು ನಿಯಮಿತ ವಹಿವಾಟಿನ ಮಹತ್ವವನ್ನು ಎಸ್ಬಿಐ ಒತ್ತಿಹೇಳಿದೆ. ದಕ್ಷತೆಗಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಕಾರ್ಯಾಗಾರವು ಕೃತಕ ಬುದ್ಧಿಮತ್ತೆ (ಎಐ) ಮತ್ತು…

Read More

ಹಾವೇರಿ: ಶಿಗ್ಗಾವಿ ಸವಣೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಿದ್ದ 300 ಕೋಟಿ ರೂ. ಅನುದಾನದಲ್ಲಿ ಬಾಕಿ ಉಳಿದಿರುವ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಿ, ಸ್ಥಗಿತಗೊಂಡಿರುವ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಈಗ ತಾನೇ ನಡೆದ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯು ಜಯಶಾಲಿಯಾಗಿದ್ದು, ತಮಗೂ ಹಾಗೂ ತಮ್ಮ ಪಕ್ಷಕ್ಕೆ ಅಭಿನಂದನೆಗಳು. ನಮ್ಮ ಸರ್ಕಾರವಿದ್ದಾಗ ಹಲವಾರು ಯೋಜನೆ ಹಾಗೂ ಕಾಮಗಾರಿಗಳಿಗೆ ಸುಮಾರು ರೂ.300 ಕೋಟಿಗಳ ಅನುದಾನವನ್ನು ಮಂಜೂರು ಮಾಡಿದ್ದು ಅದರಲ್ಲಿ ಕೆಲವೊಂದು ಕಾಮಗಾರಿಗಳು ಸ್ಥಗಿತಗೊಳಿಸಲಾಗಿದ್ದು. ಕೆಲವೊಂದು ಕಾಮಗಾರಿಗಳನ್ನು ರದ್ದು ಮಾಡಲಾಗಿದೆ. ಈ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ನೀರಾವರಿ, ಮುಜರಾಯಿ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ಮತ್ತು ನಿಗಮಗಳಿಂದ ಕೈಗೊಳ್ಳಲಾಗಿತ್ತು. ಈ ಇಲಾಖೆಗಳಿಂದ ಕೈಗೊಂಡಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಈಗಾಲಾದರೂ ಅವುಗಳಿಗೆ…

Read More

ಬೆಂಗಳೂರು : ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರು. ಮುಖ್ಯಮಂತ್ರಿಯಾಗಿ, ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.‌ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ. ಸರ್ಕಾರದ ಪರವಾಗಿ ಪ್ರತಿ ವರ್ಷವೂ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವಿಸಿ ಅವರನ್ನು ಸ್ಮರಿಸಲಾಗುತ್ತಿದೆ ಎಂದರು. ವಿಧಾನಸೌಧವನ್ನು ಕಟ್ಟಿಸಿದಾಗ ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳಿದರು. ಏಕೀಕರಣ ಆಗಬೇಕು ಎಂದು ಬಲವಾಗಿ ನಂಬಿ ಕನ್ನಡ ಮಾತನಾಡುವವರು ಒಂದಾಗಿ ನಾಡಿನ ಸರ್ವತೋಮುಖ ಅಭಿವೃದ್ಧಿ ಆಗಬೇಕೆಂದು ಶ್ರಮಿಸಿ ಕಟಿಬದ್ಧರಾಗಿ ಕೆಲಸ ಮಾಡಿದರು ಎಂದರು. ನೆಹರೂ ಅವರೊಂದಿಗೆ ಅನ್ಯೋನ್ಯ ಸಂಬಂಧ ಕೆ.ಸಿ.ರೆಡ್ಡಿಯವರು ಮೊದಲನೇ ಮುಖ್ಯಮಂತ್ರಿಗಳಾಗಿದ್ದರೆ ಸ್ವಾತಂತ್ಯ್ರ ಬಂದ ನಂತರ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ನೆಹರೂ ಅವರು ಪ್ರಧಾನಮಂತ್ರಿಗಳಾಗಿದ್ದಾಗ ಇವರು ಮುಖ್ಯಮಂತ್ರಿಗಳಾಗಿದ್ದರು.…

Read More

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಜೆ ಡಿ ಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಎಂದರು. ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳಿದ್ದಾದರೆ ಮಾಧ್ಯಮಗಳು ಏಕಿರಬೇಕು ಎಂದು ಸಿಎಂ ಖಾರವಾಗಿ ಮಾಧ್ಯಮದವರನ್ನು ಪ್ರಶ್ನಿಸಿದರು. ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಸಮಾವೇಶ ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ…

Read More

ರಾಮನಗರ: ನಾನು ಶಪಥ ಮಾಡ್ತೇನೆ‌. ರಾಮನಗರದಿಂದ ಜೆಡಿಎಸ್ ಖಾಲಿ ಮಾಡಿಸಿದ್ದೇನೆ ಅಂದವರಿಗೆ ಉತ್ತರ ಕೊಡ್ತೇನೆ. ಮುಂದಿನ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕು ಸ್ಥಾನವನ್ನು ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಗೆಲ್ಲುತ್ತೆ. ನಮ್ಮನ್ನ ಅಷ್ಟು ಸುಲಭವಾಗಿ ಜಿಲ್ಲೆಯಿಂದ ಖಾಲಿ ಮಾಡಿಸಲು ಸಾಧ್ಯವಿಲ್ಲ. ನನ್ನ, ನಿಖಿಲ್ ರಾಜಕೀಯ ಇಲ್ಲಿಂದಲೇ ಆರಂಭ, ಇಲ್ಲಿಯೇ ಅಂತ್ಯ. ಮುಂದಿನ ಚುನಾವಣೆಯಲ್ಲಿ ಇದೇ ಚನ್ನಪಟ್ಟಣದಲ್ಲಿ 25 ಸಾವಿರ ಲೀಡ್ ಬರುತ್ತೆ ಎಂದು ಸಚಿವರು ಶಪಥ ಮಾಡಿದರು. ಸಿಎಂ ಸಿದ್ದರಾಮಯ್ಯ ಹಾಸನದಲ್ಲಿ ಅಹಿಂದ ಸಮಾವೇಶ ವಿಚಾರಕ್ಕೆ ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಅಹಿಂದ ಸಮಾವೇಶ ಮಾಡ್ತಾರೆ. 17 ತಿಂಗಳಿನಿಂದ ಆ ಸಮುದಾಯಕ್ಕೆ ಏನು ರಕ್ಷಣೆ ಕೊಟ್ಟಿದ್ದಾರಾ.? ಅವರ ಸ್ವಾಭಿಮಾನ ಉಳಿಸುವ ಕೆಲಸ ಮಾಡಿದ್ದೀರಾ.? ಅವರ ಹಣವನ್ನ ಲೂಟಿ ಮಾಡಿರೋದೇ ಕೊಡುಗೆಯಾ‌.? ಎಂದು ಸಚಿವರು ಕಿಡಿಕಾರಿದರು. ವಾಲ್ಮೀಕಿ ನಿಗಮದ ಹಣ ದೋಚಿದ್ದು ಯಾರು.? ಈಗ ಬೋವಿ ಜನಾಂಗದ ಹಣ ಲೂಟಿ ಮಾಡ್ತಿಲ್ವಾ.? ನಿನ್ನೆ ಮಂಡ್ಯದಲ್ಲಿ ಅಬಕಾರಿ ಲಂಚಾವತಾರ ನೋಡಿಲ್ವಾ.? 20 ಲಕ್ಷ 40 ಲಕ್ಷ ಲಂಚ…

Read More

ಬೆಂಗಳೂರು: ಡಿಸೆಂಬರ್.5ರಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ವಾಭಿಮಾನಿ ಸಮಾವೇಶವನ್ನು ಮಾಡಲಾಗುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ರಾಜ್ಯದಲ್ಲಿ ಪ್ರತಿ ವಿಭಾಗವಾರು ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ. ಎಲ್ಲೆಲ್ಲಿ ಕಳೆದುಕೊಂಡಿದ್ದೇವೋ ಅಲ್ಲಲ್ಲೇ ಹುಡುಕುವ ಕೆಲಸ ಮಾಡಲಿದ್ದೇವೆ. ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಕೂಡ ಬರಲಿದೆ ಎಂದರು. ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಜನತೆಗೆ ಕೃತಜ್ಞತೆ ಸಲ್ಲಿಸಲು ಸಮಾವೇಶ ಮಾಡುತ್ತೇವೆ. ದೇಶದಲ್ಲಿ ಆಗುತ್ತಿರುವ ವಿಷಯಗಳ ಮೇಲೆ ಸಮಾವೇಶ ಮಾಡುತ್ತೇವೆ. ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು. ಯಾವುದೇ ಗೊಂದಲವಿಲ್ಲದೇ ಪಕ್ಷದ ಅಡಿಯಲ್ಲೇ ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ. ಕೆಲವರು ವೈಯಕ್ತಿಕವಾಗಿ ಮಾತನಾಡಬಹುದು. ಎಐಸಿಸಿ ನಾಯಕರ ಜೊತೆಗೆ ಮಾತನಾಡಿದ್ದೇವೆ. ಜನರ ಹಿತಕ್ಕಾಗಿ ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಸರ್ಕಾರದ ಬಗ್ಗೆ ಸುಳ್ಳು ಆರೋಪ ಮಾಡಿದ್ದಕ್ಕೆ ಜನ ಉತ್ತರ ಕೊಡ್ತಿದ್ದಾರೆ. ನನ್ನ ನೇತೃತ್ವದಲ್ಲೇ ಹಾಸನದಲ್ಲಿ ಡಿಸೆಂಬರ್.5ರಂದು ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ ಎಂದರು. ಡಿಸೆಂಬರ್.5ರಂದು…

Read More

ಶಿವಮೊಗ್ಗ: ಸರ್ಕಾರಿ ಆಸ್ಪತ್ರೆಯ ವೈದ್ಯರು ರೋಗಿಗಳಿಗೆ ಸೇವೆ ನೀಡುವುದು, ಅವರೊಂದಿಗೆ ಉತ್ತಮ ನಡೆ ತೋರಬೇಕು. ಅದ್ಯಾವುದೇ ರೋಗಿ ಆಗಿದ್ದರೂ ಪರೀಕ್ಷಿಸಿ, ಚಿಕಿತ್ಸೆ ನೀಡುವುದು ಕಡ್ಡಾಯ. ಆದರೇ ಸಾಗರದ ಸಾರ್ವಜನಿಕ ಆಸ್ಪತ್ರೆಯಲ್ಲೊಬ್ಬ ಇದಕ್ಕೆ ವ್ಯತಿರಿಕ್ತ ವೈದ್ಯನಿದ್ದಾನೆ. ರೋಗಿಗಳು ಬಂದಾಗ ತಾನು ತುಂಬಾ ಬ್ಯುಸಿ ಇದ್ದೇನೆ ಅನ್ನೋ ಥರ ಪೋಸ್ ಕೊಟ್ಟು, ಗಂಟೆಗಟ್ಟಲೇ ಸತಾಯಿಸಿ ಚಿಕಿತ್ಸೆ ಕೊಡ್ತಾನಂತೆ. ಅಲ್ಲದೇ ಆಡಳಿತ ವೈದ್ಯಾಧಿಕಾರಿ ಸೂಚಿಸಿದ್ರೂ ಅವರ ಮಾತಿಗೆ ಸೊಪ್ಪು ಕೂಡ ಹಾಕದೇ ದುರ್ವರ್ತನೆ ತೋರಿರೋ ಘಟನೆ ನಡೆದಿದೆ. ಸಾಗರದ ಸಾಮಾಜಿಕ ಕಾರ್ಯಕರ್ತ ಜಮೀನ್ ಸಾಗರ್ ಎಂಬುವರು ಶಾಲಾ ವಿದ್ಯಾರ್ಥಿಯೋರ್ವನಿಗೆ ಅನಾರೋಗ್ಯವಾಗಿತ್ತು. ಕೂಡಲೇ ಮಾನವೀಯತೆ ಎನ್ನುವಂತೆ ಸಮೀಪದಲ್ಲಿದ್ದಂತ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಕರ್ತವ್ಯದಲ್ಲಿದ್ದಂತ ಡಾ.ಗಣೇಶ್ ಗೆ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ. ಆದರೇ ಅನಾರೋಗ್ಯಕ್ಕೆ ಒಳಗಾಗಿದ್ದಂತ ವಿದ್ಯಾರ್ಥಿಗೆ ಚಿಕಿತ್ಸೆ ನೀಡಬೇಕಾಗಿದ್ದಂತ ಈ ವೈದ್ಯ ಮಾತ್ರ, ನಾನು ಬ್ಯುಸಿ ಇದ್ದೇನೆ. ಇನ್ನೂ ಲೇಟ್ ಆಗುತ್ತದೆ. ಹಾಗೆ, ಹೀಗೆ ಅಂತ ಕತೆ ಹೊಡೆದಿದ್ದಾರೆ. ಶಾಲಾ ವಿದ್ಯಾರ್ಥಿಯು ಅನಾರೋಗ್ಯದಿಂದ ನರಳುತ್ತಿದ್ದ ಕಾರಣ, ಕೂಡಲೇ…

Read More

ತೆಲಂಗಾಣ: ಇಲ್ಲಿನ ಮುಲುಗು ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. https://twitter.com/PTI_News/status/1863082123361493124 ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಎಟುರ್ನಗರಂ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಮುಲುಗು ಎಸ್ಪಿ ಶಬರೀಶ್ ತಿಳಿಸಿದ್ದಾರೆ. “ಎಟುರ್ನಗರಂ ಅರಣ್ಯ ಪ್ರದೇಶದಲ್ಲಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ” ಎಂದು ಎಸ್ಪಿ ಶಬರೀಶ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Read More

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಲು ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್.ಎನ್.ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ 2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಅವದಿಯನ್ನು ದಿನಾಂಕ:30.11.2024ರವರೆಗೆ ವಿಸ್ತರಿಸಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ, ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ಪುನ: ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ ಹಾಗೂ ಇನ್ನು ಕೆಲವು ಶಾಲೆಗಳು ಶಾಲಾ ಸಂಕೇತ ಪಡೆಯುತ್ತಿರುವ ಕಾರ್ಯವು ಚಾಲ್ತಿಯಲ್ಲಿರುವ ಸಂಬಂಧ ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ಈ…

Read More

ಬೆಂಗಳೂರು: ನಗರದ ಹೃದಯ ಭಾಗವಾಗಿದ್ದಂತ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಟ್ರಾನ್ಸ್ ಫಾರ್ಮರ್ ಹಾಳಾಗಿದ್ದರಿಂದ ಪವರ್ ಕಟ್ ಆಗಿತ್ತು. ಈಗ ಬೆಸ್ಕಾಂ ಇಲಾಖೆಯಿಂದ ದುರಸ್ಥಿಗೊಳಿಸಲಾಗಿದ್ದು, ಮರಳಿ ಕರೆಂಟ್ ಬಂದಿರುವುದಾಗಿ ಬಿಎಂಟಿಸಿ ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿಯು, ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿನ ಟ್ರಾನ್ಸ್ ಫಾರ್ಮರ್ ಸುಟ್ಟು ಹೋಗಿದ್ದರಿಂದಾಗಿ ವಿದ್ಯುತ್ ಸ್ಥಗಿತ ಉಂಟಾಗಿತ್ತು. ಆದರೇ ಜನರೇಟರ್ ಬಳಸಿ ವಿದ್ಯುತ್ ಅನ್ನು ಬಿಎಂಟಿಸಿ ನಿಲ್ದಾಣದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿತ್ತು. ನಿಮ್ಮ ಕನ್ನಡ ನ್ಯೂಸ್ ನೌ ಆ ಬಗ್ಗೆ ಬೆಂಗಳೂರಿನ ‘ಮೆಜೆಸ್ಟಿಕ್’ನಲ್ಲೇ ವಿದ್ಯುತ್ ಕಡಿತ: ಕತ್ತಲಲ್ಲಿ ‘BMTC ಬಸ್ ನಿಲ್ದಾಣ’ದಲ್ಲಿ ಪ್ರಯಾಣಿಕರ ಪರದಾಟ ಎಂಬುದಾಗಿ ವರದಿಯನ್ನು ಪ್ರಕಟಿಸಿತ್ತು. ಈ ಸುದ್ದಿಯ ನಂತ್ರ ಬಿಎಂಟಿಸಿಯಿಂದ ತ್ವರಿತ ಕಾರ್ಯದ ನಂತ್ರ, ಬೆಸ್ಕಾಂ ಇಲಾಖೆಯಿಂದ ಟ್ರಾನ್ಸ್ ಫಾರ್ಮಾರ್ ಬದಲಿಸಿ, ವಿದ್ಯುತ್ ಮರು ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಪವರ್ ಮತ್ತೆ ಬಂದಂತೆ ಆಗಿದೆ. https://kannadanewsnow.com/kannada/hunsagi-rail-action-committee-urges-union-railway-minister-to-implement-alamatti-yadgir-railway-line-project/ https://kannadanewsnow.com/kannada/here-is-a-rare-principal-in-the-state-his-cleanliness-work-has-been-greatly-appreciated/

Read More