Author: kannadanewsnow09

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಲ್ಲಿ ಆನೇಕಲ್ ತಾಲ್ಲೂಕಿನ ಕಿತ್ತಗಾನಹಳ್ಳಿಯಲ್ಲಿ ಜ್ಯೋತಿ ಗ್ಯಾಸ್ ನಿಂದ ಎರಡು ದಿನಗಳ ಹಿಂದೆ ಸಿಲಿಂಡರ್ ಖರೀದಿಸಿ ತಂದಿದ್ದರು. ಈ ಗ್ಯಾಸ್ ಸಿಲಿಂಡರ್ ನಿಂದ ಅರ್ಧದಷ್ಟು ಗ್ಯಾಸ್ ಸೋರಿಕೆ ಆಗಿತ್ತು. ಗ್ಯಾಸ್ ಸೋರಿಕೆಯ ಬಗ್ಗೆ ತಿಳಿಯದಂತ ವ್ಯಕ್ತಿಯಗಳು ಬೆಂಕಿ ಹೊತ್ತಿಸಿದಾಗ ದಿಢೀರ್ ಸ್ಪೋಟಗೊಂಡಿದೆ. ಈ ಸ್ಪೋಟದಿಂದಾಗಿ ಇಡೀ ಮನೆಯೇ ಛಿದ್ರ ಛಿದ್ರವಾಗಿದೆ. ಅಲ್ಲದೇ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಈ ಘಟನೆ ಸಂಬಂಧ ಕಟ್ಟಡದ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಗ್ಯಾಸ್ ಸೋರಿಕೆಯಾಗಿ ಸ್ಪೋಟಗೊಂಡ ಬಗ್ಗೆ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/class-3-student-dies-of-cardiac-arrest-while-showing-notes-at-school/ https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/

Read More

ಚಾಮರಾಜನಗರ: ಶಾಲೆಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸುತ್ತಿದ್ದಂತ ಸಂದರ್ಭದಲ್ಲೇ 3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ ಉಂಟಾಗಿದೆ. ಇದರಿಂದ ಕುಸಿದು ಬಿದ್ದಂತ ವಿದ್ಯಾರ್ಥಿನಿಯ ಸಾವನ್ನಪ್ಪಿರುವಂತ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನದಗುಪ್ಪೆ ಗ್ರಾಮದ ತೇಜಸ್ವಿನಿ ಇಂದು ಶಾಲೆಗೆ ತೆರಳಿದ್ದರು. ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಂತ ಆಕೆ, ಇಂದು ನೋಟ್ಸ್ ತೋರಿಸಲು ತೆರಳಿದಂತ ಸಂದರ್ಭದಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾಳೆ. ಶಾಲೆಯಲ್ಲೇ ಕುಸಿದು ಬಿದ್ದಂತ 3ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿಯನ್ನು ಕೂಡಲೇ ಶಾಲಾ ಶಿಕ್ಷಕರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ತೇಜಸ್ವಿಯನ್ನು ಪರೀಕ್ಷಿಸಿದಂತ ವೈದ್ಯರು ಮಾರ್ಗಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮೃತ ತೇಜಸ್ವಿನಿ ಬನದಗುಪ್ಪಿ ಗ್ರಾಮ ಲಿಂಗರಾಜು ಹಾಗೂ ಶ್ರುತಿ ಎಂಬುವರ ದಂಪತಿಯ ಪುತ್ರಿಯಾಗಿದ್ದಾರೆ. ಆಕೆಯ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಊರಿಗೆ ಪೋಷಕರು ಕೊಂಡೊಯ್ಯುತ್ತಿದ್ದಾರೆ. ಈಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/ https://kannadanewsnow.com/kannada/what-is-hmpv-virus-what-are-its-symptoms-heres-the-information/

Read More

ಚಾಮರಾಜನಗರ: ಜಿಲ್ಲೆಯಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾದಂತ 3ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವಂತ ಶಾಕಿಂಗ್ ಘಟನೆ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನದಗುಪ್ಪೆ ಗ್ರಾಮದ ಲಿಂಗರಾಜು ಮತ್ತು ಶ್ರುತಿ ದಂಪತಿಯ ಪುತ್ರಿ ತೇಜಸ್ವಿನಿ ಎಂಬುವರೇ ತೀವ್ರ ಹೃದಯಾಘಾತದಿಂದ ನಿಧನರಾದಂತ ಬಾಲಕಿಯಾಗಿದ್ದಾರೆ. ಇಂದು ಶಾಲೆಗೆ ತೆರಳಿದ್ದಂತ ತೇಜಸ್ವಿನಿ, ಶಿಕ್ಷಕರಿಗೆ ನೋಟ್ಸ್ ತೋರಿಸುತ್ತಿದ್ದಾಗಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಕುಸಿದು ಬಿದ್ದಂತ 3ನೇ ತರಗತಿ ವಿದ್ಯಾರ್ಥಿನಿ, ಬಟ್ಟೆಯಲ್ಲೇ ಮೂತ್ರ ವಿಸರ್ಜನೆ ಕೂಡ ಮಾಡಿಕೊಂಡಿದ್ದರು. ಶಾಲೆಯಲ್ಲೇ ಹೃದಯಾಘಾತಕ್ಕೆ ಒಳಗಾದಂತ ಆಕೆಯನ್ನು ಶಿಕ್ಷಕರು, ಶಾಲಾ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಆದರೇ ಮಾರ್ಗ ಮಧ್ಯೆದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು ಇದನ್ನು ದೃಢ ಪಡಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/another-milestone-in-karnataka-forest-department-garudakshi-online-fir-system-to-be-launched-tomorrow/ https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/

Read More

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಪೊಲೀಸ್ ಇಲಾಖೆಯಂತೆ ಅರಣ್ಯ ಇಲಾಖೆಯಿಂದ ಅರಣ್ಯ ಅಪರಾಧಗಳ ಸಂಬಂಧ ಆನ್ ಲೈನ್ ಎಫ್ಐಆರ್ ವ್ಯವಸ್ಥೆ ಇರಲಿಲ್ಲ. ಕೇವಲ ಮ್ಯಾನುಯೆಲ್ ಆಗಿ ಹಾಕಲಾಗುತ್ತಿತ್ತು. ಈಗ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಮತ್ತೊಂದು ಮೈಲುಗಲ್ಲು ಎನ್ನುವಂತೆ ಅರಣ್ಯ ಅಪರಾಧಗಳ ಆನ್ ಲೈನ್ ಎಫ್ಐಆರ್ ಗಾಗಿ ಗರುಡಾಕ್ಷಿ ಎನ್ನುವಂತ ವ್ಯವಸ್ಥೆ ನಾಳೆ ಲೋಕಾರ್ಪಣೆಗೊಳಲ್ಲಿದೆ. ಆ ಮೂಲಕ ಕರ್ನಾಟಕದಲ್ಲಿ ನಾಳೆಯಿಂದ ಗರುಡಾಕ್ಷಿ ಆನ್ ಲೈನ್ ಎಫ್ಐಆರ್ ವ್ಯವಸ್ಥೆ ಜಾರಿಗೊಳ್ಳಲಿದೆ. ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಲಿದ್ದಾರೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ. ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲಿ ಸಹ ಪ್ರಥಮ ವರ್ತಮಾನ…

Read More

ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ನಕ್ಸಲರು ಶರಣಾಗುವ ಸಾಧ್ಯತೆಯಿದೆ ನಕ್ಸಲರ…

Read More

ಬೆಂಗಳೂರು: ಚೀನಾದಲ್ಲಿ ಕಾಣಿಸಿಕೊಂಡಿರುವಂತ ಹೆಚ್ ಎಂ ಪಿ ವಿ ವೈರಸ್ ಕರ್ನಾಟಕದಲ್ಲೂ ಕಾಣಿಸಿಕೊಂಡಿದೆ. ಸೋಂಕಿತ ಮಗು ನಾರ್ಮಲ್ ಆಗಿದೆ. ಹೆಚ್ ಎಂ ಪಿ ವಿ ವೈರಸ್ ಜೀವಕ್ಕೆ ಅಪಾಯವಿಲ್ಲ. ಯಾರೂ ಆತಂಕ ಪಡಬೇಡಿ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕರ್ನಾಟಕದಲ್ಲಿ ಹೆಚ್ ಎಂ ಪಿ ಎಸ್ ವೈರಸ್ ನಿಯಂತ್ರಣ ಸಂಬಂಧ ಮಹತ್ವದ ಸಭೆ ನಡೆಸಿದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕರ್ನಾಟಕದಲ್ಲಿ 2 ಹೆಚ್ ಎಂ ಪಿಎಸ್ ಕೇಸ್ ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಮಗುವೊಂದಕ್ಕೂ ಕಾಣಿಸಿಕೊಂಡಿದ್ದು, ನಾರ್ಮಲ್ ಇದೆ ಎಂದರು. ಕೊರೋನಾ ವೈರಸ್ ಅಷ್ಟು ಹೆಚ್ ಎಂ ಪಿ ವಿ ವೈರಸ್ ಭಯಾನಕವಲ್ಲ. ಯಾರೂ ಆತಂಕ ಪಡಬೇಡಿ. ಇದು ಮಾರಣಾಂತಿಕವೂ ಅಲ್ಲ. ಮಾಸ್ಕ್ ಬಳಕೆಯ ಅವಶ್ಯಕತೆಯಿಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಮನವಿ ಮಾಡಿದರು. https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/ https://kannadanewsnow.com/kannada/what-is-hmpv-virus-what-are-its-symptoms-heres-the-information/

Read More

ಬೆಂಗಳೂರು: ನಿನ್ನೆ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ನಾ.ಡಿಸೋಜ ಅವರು ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ನಾರ್ಬಟ್ ಡಿಸೋಜ ಹೆಸರಾಂತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರು. ಶಿವಮೊಗ್ಗ ಜಿಲ್ಲೆಯ ಇವರು ದಿನಾಂಕ 05-01-2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಇನ್ನೂ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. https://kannadanewsnow.com/kannada/what-is-hmpv-virus-what-are-its-symptoms-heres-the-information/ https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/

Read More

ಬೆಂಗಳೂರು: ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಹ್ಯೂಮನ್ ಮೆಟಾಪ್ನ್ಯುಮೋವೈರಸ್ (Human Metapneumovirus -HMPV) ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಪ್ರಕರಣ ಪತ್ತೆಯಾಗಿದ್ದು, ಆಸ್ಪತ್ರೆಯು ಶಂಕಿತ ಸೋಂಕನ್ನು ಆರೋಗ್ಯ ಅಧಿಕಾರಿಗಳಿಗೆ ವರದಿ ಮಾಡಿದೆ. ಹಾಗಾದ್ರೆ HMPV ವೈರಸ್ ಸೋಂಕು ಅಂದರೇನು? ಅದರ ಲಕ್ಷಣಗಳು ಏನು ಅಂತ ಮುಂದೆ ಓದಿ. ಎಚ್ಎಂಪಿವಿ ವೈರಸ್ ಎಂದರೇನು? ಹ್ಯೂಮನ್ ಮೆಟಾಪ್ನ್ಯುಮೋವೈರಸ್ (Human Metapneumovirus -HMPV) ಉಸಿರಾಟದ ವೈರಸ್ ಆಗಿದ್ದು, ಇದು ಸಾಮಾನ್ಯವಾಗಿ ಸೌಮ್ಯ ಮತ್ತು ಮಧ್ಯಮ ಫ್ಲೂ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ಈ ವೈರಸ್ ಚಳಿಗಾಲ ಮತ್ತು ವಸಂತಕಾಲದ ಆರಂಭದಲ್ಲಿ ಹೆಚ್ಚು ಪ್ರಚಲಿತದಲ್ಲಿದೆ ಮತ್ತು ಪ್ರಾಥಮಿಕವಾಗಿ ಸೋಂಕಿತ ವ್ಯಕ್ತಿಗಳೊಂದಿಗೆ ನೇರ ಸಂಪರ್ಕದಿಂದ ಅಥವಾ ಕಲುಷಿತ ಮೇಲ್ಮೈಗಳಿಂದ ಹರಡುತ್ತದೆ. ಸಾಮಾನ್ಯ ರೋಗಲಕ್ಷಣಗಳಲ್ಲಿ ಕೆಮ್ಮು, ಜ್ವರ, ಗಂಟಲು ನೋವು, ಮೂಗು ಸೋರುವಿಕೆ ಅಥವಾ ಕಟ್ಟುವಿಕೆ, ಮತ್ತು ಕೆಲವು ಸಂದರ್ಭಗಳಲ್ಲಿ, ಉಬ್ಬಸ ಅಥವಾ ಉಸಿರಾಟದ ತೊಂದರೆ ಸೇರಿವೆ. ಕೆಲವು ವ್ಯಕ್ತಿಗಳು, ವಿಶೇಷವಾಗಿ ತುಂಬಾ ಚಿಕ್ಕವರು, ವಯಸ್ಸಾದವರು, ಅಥವಾ…

Read More

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯದ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದಿದ್ದಾರೆ. ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದೆ. ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿರುತ್ತಾರೆ. ಎಐಯುಟಿಯುಸಿ ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿಕೊಡಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಆರೋಗ್ಯ…

Read More

ಶಿವಮೊಗ್ಗ: ಕನ್ನಡ ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು ನಾ.ಡಿಸೋಜ ಅವರದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ. ಎರಡೂ ಒಂದೇ. ಬರೆದಂತೆ ಬದುಕಿದವರು. ಬದುಕಿದಂತೆ ಬರೆದವರು ಎಂದಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬಸ್ತರಿಗೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.

Read More