Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಫೆಂಗಲ್ ಚಂಡಮಾರುತ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಇಂದು ವರ್ಚ್ಯುವಲ್ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ 3/4 ದಿನಗಳ ಕಾಲ ಮಳೆ ಬರುವ ಮುನ್ಸೂಚನೆಯಿದ್ದು, ಗಾಳಿ ಕೂಡಾ ಹೆಚ್ಚಾಗಿ ಬರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮರ ಕಟಾವು ಮಾಡುವ ಎಲ್ಲಾ 28 ತಂಡಗಳನ್ನು ಸನ್ನದ್ಧರಾಗಿರಬೇಕು. ಮರಗಳು, ಮರದ ರೆಂಬೆ-ಕೊಂಬೆಗಳು ಬಿದ್ದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ತೆರಳಿ ತೆರವುಗೊಳಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು. ಆಯಾ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್ಗಳನ್ನು…
BREAKING: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೇ ಕೇಸ್: ನ್ಯಾಯಾಲಯಕ್ಕೆ ಎಸ್ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಜೆಪಿ ಶಾಸಕ ಮುನಿರತ್ನ ಬಿಡುಗಡೆಯಾಗಿದ್ದರು. ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿಯು ಜಾತಿ ನಿಂದನೆ ಕೇಸ್ ಸಂಬಂಧ ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ. ಬಿಜೆಪಿ ಶಾಸಕ ಮುನಿರತ್ನ ಅವರು ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ ಮಾಡಿದ ಸಂಬಂಧ ದೂರು ದಾಖಲಾಗಿತ್ತು. ಅವರು ಜಾತಿ ನಿಂದನೆ ಮಾಡಿರುವ ಆಡಿಯೋ ಕೂಡ ಅವರದ್ದೇ ಎಂಬುದಾಗಿ ಎಫ್ಎಸ್ಐ ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎನ್ನಲಾಗಿತ್ತು. ಇನ್ನೂ ರಾಜ್ಯ ಸರ್ಕಾರವು ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಈ ಪ್ರಕರಣ ತನಿಖೆ ನಡೆಸಿದ್ದಂತ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. https://kannadanewsnow.com/kannada/home-minister-g-parameshwara-warns-officials-of-negligence-in-taking-action-against-drugs/ https://kannadanewsnow.com/kannada/big-news-no-one-should-shed-tears-we-are-not-dead-we-have-lost-nikhil-kumaraswamy/
ಬೆಂಗಳೂರು ; ರಾಜ್ಯದ ಉಪ ಚುನಾವಣೆ ಮತ್ತು ಅನ್ಯ ರಾಜ್ಯಗಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಕ್ಫ್ ವಿವಾದ ಪ್ರಸ್ತಾಪಿಸುತ್ತಿದ್ದ ಬಿಜೆಪಿ ನಾಯಕರು ಚುನಾವಣೆ ನಂತರ ಯಾಕೆ ಮೌನವಾಗಿದ್ದಾರೆ ಎಂದು ವಸತಿ, ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಪ್ರಶ್ನಿಸಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಹುಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಅವರು ಚಾಲನೆ ನೀಡಿದರು. ಬಿಬಿಎಂಪಿ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಅಪ್ಪೋಡು ಹಾಗೂ ಬಿಬಿಎಂಪಿ ಮಾಜಿ ಸದಸ್ಯರಾದ ಕೋಕಿಲಾ ಚಂದ್ರಶೇಖರ್ ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಎಲ್ಲಾ ಕಡೆ ವಕ್ಫ್ ಎಂದು ಅನಗತ್ಯವಾಗಿ ಹುಯಿಲೆಬ್ಬಿಸಿದರು. ಚುನಾವಣೆ ಮುಗಿದ ನಂತರ ತೆಪ್ಪಗಾಗಿದ್ದಾರೆ ಎಂದರು. ಬಿಜೆಪಿಗೆ ಅಭಿವೃದ್ಧಿ ಬೇಕಾಗಿಲ್ಲ. ಹಿಂದು ಮುಸ್ಲಿಂ ಎಂದು ಸಂಘರ್ಷ ಮೂಡಿಸುವುದೇ ಅವರ ಕಾಯಕವಾಗಿದೆ. ಬಡವರ ಪರವಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಮಾತ್ರ.…
ಲಂಡನ್: ʼಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸಲು ಮತ್ತು ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ ಸ್ಥಾಪಿಸಲು ಟೆಸ್ಕೊ ಉದ್ದೇಶಿಸಿದ್ದು, ಇದರಿಂದ 16,500 ಉದ್ಯೋಗಗಳು ಸೃಷ್ಟಿಯಾಗಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ಇನ್ವೆಸ್ಟ್ ಕರ್ನಾಟಕದ ಅಂತರರಾಷ್ಟ್ರೀಯ ರೋಡ್ಷೋದ ಭಾಗವಾಗಿ ಸಚಿವರು ಲಂಡನ್ನಲ್ಲಿ ಎರಡನೆ ದಿನ ರೋಲ್ಸ್ ರಾಯ್ಸ್, ಮೆಗೆಲ್ಲನ್ ಏರೋಸ್ಪೇಸ್, ಟೆಸ್ಕೊ ಮತ್ತು ಪಿಯರ್ಸನ್ ಕಂಪನಿಗಳ ಮುಖ್ಯಸ್ಥರ ಜೊತೆ ಸಮಾಲೋಚನೆ ನಡೆಸಿದ ನಂತರ ಈ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ತನ್ನ ವಹಿವಾಟು ವಿಸ್ತರಿಸಲು 1,500 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ಉದ್ದೇಶಿಸಿರುವ ಟೆಸ್ಕೊ ಗ್ರೂಪ್, ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ ಸ್ಥಾಪಿಸಲಿದೆ. ಇದರಿಂದ 16,500 ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ಕರ್ನಾಟಕದ ವೈಮಾಂತರಿಕ್ಷ- ರಕ್ಷಣೆ, ವಾಹನ ತಯಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳನ್ನು ಸಚಿವರು ಇಂಗ್ಲೆಂಡ್ನ ಉನ್ನತ ಜಾಗತಿಕ ಕಂಪನಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ರಾಜ್ಯದಲ್ಲಿನ ಸದೃಢ ಮೂಲಸೌಲಭ್ಯ, ಉದ್ಯಮ ಪೂರಕ ವಾತಾವರಣ ಮತ್ತು ʼಕ್ವಿನ್ ಸಿಟಿʼ ಯೋಜನೆಗಳಂತಹ…
ಮಂಗಳೂರು : ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಗಳೂರಿನ ಅತ್ತಾವರದಲ್ಲಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯಗಳು ಹಾಗೂ ಸುಬ್ರಹ್ಮಣ್ಯ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಬಹಳ ಸವಾಲುಗಳಿವೆ. ಸಮಾಜಕ್ಕೆ ಅತ್ಯಂತ ಅಪಾಯಕಾರಿ ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡಬಾರದು. ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು. ಪಕ್ಷವು ಚುನಾವಣಾ ಪ್ರಣಾಳಿಕೆಯನ್ನು ಬರೆಯುವ ಜವಾಬ್ದಾರಿಯನ್ನು ನನಗೆ ವಹಿಸಿದ್ದರು. ಪ್ರತಿ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಮಂಗಳೂರಿಗೆ ಆಗಮಿಸಿದ್ದಾಗ ವಿದ್ಯಾರ್ಥಿಗಳು, ಸಾರ್ವಜನಿಕರು ಭೇಟಿ ಮಾಡಿದ್ದರು. ಮಕ್ಕಳನ್ನು ಓದಿಸಲು ಬೇರೆ ಕಡೆ ಕಳುಹಿಸುವ ಪರಿಸ್ಥಿತಿ ಬಂದಿದೆ. ಉದ್ಯಮಗಳಿಗೆ ಹೂಡಿಕೆ ಮಾಡಲು ಬರುತ್ತಿಲ್ಲ…
ಶಿವಮೊಗ್ಗ: ಜಿಲ್ಲೆಯ ಜನರು ಬೆಚ್ಚಿ ಬೀಳುವಂತೆ ವ್ಯಕ್ತಿಯೊಬ್ಬನನ್ನು ಹಾಡ ಹಗಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಾಡ ಹಗಲೇ ನಡೆದಂತ ಭೀಕರ ಮರ್ಡರ್ ನಿಂದ ಶಿವಮೊಗ್ಗ ಜನತೆ ಬೆಚ್ಚಿ ಬಿದ್ದಿದ್ದಾರೆ. ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ ಎಂಬುದಾಗಿ ಗುರುತಿಸಲಾಗಿದೆ. ಈ ಹತ್ಯೆಯಯನ್ನು ಹಳೆಯ ವೈಷಮ್ಯ, ದ್ವೇಷದ ಕಾರಣ ಮಾಡಲಾಗಿದೆ ಎಂಬುದಾಗಿ ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ಇಂದು ಹಾಡ ಹಗಲೇ ಬೊಮ್ಮನಕಟ್ಟೆ ಬಡವಾಣೆಯಲ್ಲಿದ್ದಂತ ರಾಜೇಶ್ ಶೆಟ್ಟಿ ಮೇಲೆ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಬರ್ಬರವಾಗಿ ಕೊಚ್ಚಿ ಕೊಲೆಗೈದು ಪರಾರಿಯಾಗಿದೆ ಎಂಬುದಾಗಿ ಸ್ಥಳೀಯರು ಹೇಳಿದ್ದಾರೆ. ಇನ್ನೂ ಈ ವಿಷಯ ತಿಳಿದು ಸ್ಥಳಕ್ಕೆ ವಿನೋಬನಗರ ಠಾಣೆಯ ಪೊಲೀಸರು ದೌಡಾಯಿಸಿ, ಪರಿಶೀಲಿಸಿ, ಮೃತ ದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-farmers-in-the-state-minister-krishna-byre-gowda-launches-simplified-podi-repair-work/ https://kannadanewsnow.com/kannada/big-news-no-one-should-shed-tears-we-are-not-dead-we-have-lost-nikhil-kumaraswamy/
ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕು ಬಾಗೀವಾಳು ಗ್ರಾಮದಲ್ಲಿ ಪೋಡಿ ದುರಸ್ಥಿ ಸರಳೀಕೃತ ಕಾರ್ಯಕ್ಕೆ ಇಂದು ರೈತರ ಹೊಲದಲ್ಲೇ ಅಧೀಕೃತವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು. “ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ. ಕಳೆದ ಒಂದು ವರ್ಷಗಳಿಂದ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸತತ ಸಭೆ ನಡೆಸಿ, ಚರ್ಚಿಸಿ ಕೊನೆಗೂ ನಮೂನೆ 1 ರಿಂದ 5…
ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಐವಿ ದ್ರಾವಣ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಅನ್ನ ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್ ಗಳ ದ್ರಾವಣವನ್ನ ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಆ ಬಳಿಕ ಕಂಪನಿಯವರು ಹೈ ಕೋರ್ಟ್ ನಿಂದ ಆದೇಶ ಪಡೆದ ಹಿನ್ನೆಲೆಯಲ್ಲಿ ಸೆಂಟ್ರಲ್ ಡ್ರಗ್ ಲ್ಯಾಬರೋಟರಿಯಲ್ಲಿ ಟೆಸ್ಟಿಂಗ್ ನಡೆದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂತು.…
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದರು. ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರಪ್ರದೇಶದಲ್ಲಿ ಮೌಲ್ವಿ ಸರ್ಕಾರಕ್ಕೆ ಬೆದರಿಕೆ ಹಾಕುತ್ತಾನೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡಲ್ಲ ಎಂದು ಕೆಲವರು…
ದೆಹಲಿ : ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು. ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು. ನಬಾರ್ಡ್ 4.5% ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ…













