Author: kannadanewsnow09

ಚಿತ್ರದುರ್ಗ: ಕೊಪ್ಪಳದ ಬಳಿಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲೂ ಮಂಗಳವಾರ ಸಂಜೆ ಬಾಣಂತಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು ಹಲವು ಅನುಮಾನಗಳಿಗೂ ಕಾರಣವಾಗಿದೆ. ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಗೆ ಚಳ್ಳಕೆರೆ ತಾಲ್ಲೂಕಿನ ಜಾಗನೂರುಹಟ್ಟಿಯ ಟಿ.ಬಿ ರೋಜಾ(27) ಎಂಬುವರು ಡಿಲವರಿಗಾಗಿ ದಾಖಲಾಗಿದ್ದರು. ಇವರಿಗೆ ಅಕ್ಟೋಬರ್.30ರಂದು ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಆಗಿ ಗಂಡು ಮಗು ಜನಿಸಿತ್ತು. ಡಿಲವರಿ ಆದ 5 ದಿನಗಳ ಬಳಿಕ ಮನೆಗೆ ರೋಜಾ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಐದಾರು ಬಾರಿ ವಾಂತಿ ಕಾಣಿಸಿಕೊಂಡಿತ್ತು. ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂತಹ ಬಾಣಂತಿ ರೋಜಾ ಅವರಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಮಂಗಳವಾರ ಸಂಜೆ ಚಿಕಿತ್ಸೆ ಫಲಿಸದೇ ಅಸುನೀಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. https://kannadanewsnow.com/kannada/big-relief-for-common-man-prices-of-tomatoes-onions-soar/ https://kannadanewsnow.com/kannada/kea-recruitment-exams-scheduled-to-be-held-today-postponed-to-tomorrow/

Read More

ಬೆಂಗಳೂರು: ನಿನ್ನೆ ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನರಾದ ಹಿನ್ನಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ರಜೆ ಇರುವ ಕಾರಣ ಇಂದು ನಡೆಯಬೇಕಿದ್ದಂತ ಕೆಇಎ ನೇಮಕಾತಿ ಪರೀಕ್ಷೆಗಳನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 10-12-2024ರಂದು ಮಾಜಿ ಸಿಎಂ ಮತ್ತು ಕೇಂದ್ರ ಸಚಿವರಾಗಿದ್ದಂತ ಎಸ್ ಎಂ ಕೃಷ್ಣ ಅವರು ನಿಧನರಾಗಿರುವ ಕಾರಣ ದಿನಾಂಕ 11-12-2024ರಂದು ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದುದ್ದರಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 11-12-2024ರಂದು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 12-12-2024ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ.

Read More

ಬೆಂಗಳೂರು : ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. “ಪಿಎಮ್‌ ಸೂರ್ಯ ಘರ್‌ ಯೋಜನೆಗೆ ಈವರೆಗೆ 5.14 ಲಕ್ಷ ನೋಂದಣಿಯಾಗಿದ್ದು, ಈ ಪೈಕಿ ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್‌ಆರ್‌ ಇ ಪೋರ್ಟಲ್‌ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ” ಎಂದು ಬೆಸ್ಕಾಂ ಎಂಡಿ ವಿವರಿಸಿದರು. “ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಯೋಜನೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಮತ್ತು ನವೀಕರಿಸಬಹುದಾದ ಇಂಧನದ ರಾಷ್ಟ್ರೀಯ ಗುರಿ ಸಾಧಿಸಲು ಕೊಡುಗೆ ನೀಡುತ್ತೇವೆ” ಎಂದು‌ ಅವರು ಹೇಳಿದರು. “ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ 78,000ರೂ. ವರೆಗೆ ಸಹಾಯಧನ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ಗರಿಗೆದರಿದೆ. ಹಾಲಿ ಅಧ್ಯಕ್ಷ ಸಿಎಸ್ ಷಡಕ್ಷರಿ ಅವರು ಮತ್ತೊಂದು ಅವಧಿಗೆ ನೇಮಕ್ಕಾಗಿ ತಮ್ಮ ಉಮೇಧುವಾರಿಕೆಯನ್ನು ಸಲ್ಲಿಸಿದ್ದಾರೆ. 2024-2029ನೇ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಚುಕ್ಕಾಣಿ ಹಿಡಿಯಲು ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಸಿಎಸ್ ಷಡಕ್ಷರಿ ನಾಮಪತ್ರವನ್ನು ಸಲ್ಲಿಸಿದದಾರೆ. ಹಲವಾರು ಜಿಲ್ಲೆಗಳ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಈ ಚುನಾವಣೆಯಲ್ಲಿ ಭಾಗಿಯಾಗಲಿದ್ದಾರೆ. ಡಿಸೆಂಬರ್.27, 2024ರಂದು ಮತದಾನದಲ್ಲಿ ಪಾಲ್ಗೊಂಡು, ಮತ ಚಲಾಯಿಸಲಿದ್ದಾರೆ. ಡಿಸೆಂಬರ್.8ರಂದು ಬೆಂಗಳೂರಲ್ಲಿ ನಡೆದಿದ್ದ ಸಮಾಲೋಚನಾ ಸಭೆಯಲ್ಲಿ ಹಾಜರಿದ್ದಂತ 850ಕ್ಕೂ ಹೆಚ್ಚು ಮತದಾರರು ಅಧ್ಯಕ್ಷ ಸ್ಥಾನಕ್ಕೆ ಸಿಎಸ್ ಷಡಕ್ಷರಿ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದರು ಎನ್ನಲಾಗುತ್ತಿದೆ. ಆದರೇ ಡಿ.27ರಂದು ನಡೆಯಲಿರುವಂತ ಚುನಾವಣೆಯಲ್ಲಿ ಯಾರು ಗೆಲುವು ಎಂಬುದು ನಿರ್ಧಾರವಾಗಲಿದೆ. https://kannadanewsnow.com/kannada/good-news-for-bagar-hukum-cultivation-farmers-in-the-state-rejected-application-to-be-considered-for-reconsideration/ https://kannadanewsnow.com/kannada/big-relief-for-common-man-prices-of-tomatoes-onions-soar/

Read More

ನವದೆಹಲಿ : ಭಾರಿ ಮಳೆಯಿಂದಾಗಿ ತರಕಾರಿ ಉತ್ಪಾದನೆಗೆ ಅಡ್ಡಿಯುಂಟಾಗಿ, ಬೆಲೆ ಏರಿಕೆಯಾಗಿದ್ದ ಟೊಮೆಟೊ, ಈರುಳ್ಳಿ ಬೆಲೆ ಇಳಿಕೆಯಾಗಿದೆ. ಈ ಮೂಲಕ ಸಾಮಾನ್ಯ ಜನರಿಗೆ ರಿಲೀಫ್ ಸಿಕ್ಕಂತಾಗಿದೆ. ಅಂದ್ಹಾಗೆ, ಈ ಹಿಂದೆ 80 ರೂಪಾಯಿಗೆ ಕೆಜಿಯಿದ್ದ ಟೊಮೆಟೊ ಬೆಲೆ ಕೆ.ಜಿ.ಗೆ 20-30 ರೂ.ಗೆ ಇಳಿದಿದ್ದು, ಮಾರಾಟಗಾರರು 100 ರೂಪಾಯಿಗೆ 5 ಕೆಜಿಯಂತೆ ಮಾರಾಟ ಮಾಡುತ್ತಿದ್ದಾರೆ. ಇನ್ನು 100 ರೂಪಾಯಿಗೆ ಕೆ.ಜಿ ಇದ್ದ ಈರುಳ್ಳಿ ಕೂಡ ಹೆಚ್ಚಿದ ಪೂರೈಕೆಯಿಂದಾಗಿ ಬೆಲೆ ಕಡಿಮೆಯಾಗಿದೆ. ಕೊಯಂಬೇಡು ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕಡಿಮೆಯಾಗಿದೆ. ಈರುಳ್ಳಿ, ಟೊಮೆಟೊ, ಹಸಿರು ಮೆಣಸಿನಕಾಯಿ, ಬೀಟ್ರೂಟ್, ಆಲೂಗಡ್ಡೆ ಮತ್ತು ಇತರ ತರಕಾರಿಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಸೋರೆಕಾಯಿ, ಬೀನ್ಸ್, ಎಲೆಕೋಸು, ಕ್ಯಾರೆಟ್ ಮತ್ತು ನುಗ್ಗೆಕಾಯಿಗಳಂತಹ ವಿವಿಧ ತರಕಾರಿಗಳ ಬೆಲೆಗಳು ಇಳಿದಿವೆ. ಅಂದ್ಹಾಗೆ, ಈರುಳ್ಳಿ ಕೆ.ಜಿ.ಗೆ 100 ರೂ., ಟೊಮೆಟೊ ಕೆ.ಜಿ.ಗೆ 80 ರೂ. ಹೆಚ್ಚಿನ ಟೊಮೆಟೊ ಬೆಲೆಗಳು ಗ್ರಾಹಕರನ್ನು ಖರೀದಿಯನ್ನ ಕಡಿಮೆ ಮಾಡಲು ಒತ್ತಾಯಿಸಿತು. ಮನೆಗಳು ಮತ್ತು ರೆಸ್ಟೋರೆಂಟ್ ಗಳು ಬಳಕೆಯನ್ನು ಸೀಮಿತಗೊಳಿಸಿದವು, ಇದು ಟೊಮೆಟೊ…

Read More

ಬೆಳಗಾವಿ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು. https://twitter.com/KarnatakaVarthe/status/1866357481666212181 ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000…

Read More

ನವದೆಹಲಿ : ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಪದವಿಪೂರ್ವ (CUET UG) 2025ರಿಂದ ಗಮನಾರ್ಹ ಬದಲಾವಣೆಗಳಿಗೆ ಒಳಗಾಗುತ್ತಿದೆ. ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಅವರ ಪ್ರಕಾರ, ವಿದ್ಯಾರ್ಥಿಗಳು ಈಗ 12ನೇ ತರಗತಿಯಲ್ಲಿ ಅಧ್ಯಯನ ಮಾಡದಿದ್ದರೂ ಸಹ ಪರೀಕ್ಷೆಗೆ ಯಾವುದೇ ವಿಷಯವನ್ನ ಆಯ್ಕೆ ಮಾಡಬಹುದು. ಈ ಕ್ರಮವು ಉನ್ನತ ಶಿಕ್ಷಣದಲ್ಲಿ ಕಠಿಣ ಶಿಸ್ತಿನ ಗಡಿಗಳನ್ನ ಮುರಿಯುವ ಗುರಿ ಹೊಂದಿದೆ. 2025ರಿಂದ, CUET UGಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೋಡ್ನಲ್ಲಿ ಪ್ರತ್ಯೇಕವಾಗಿ ನಡೆಸಲಾಗುವುದು, ಇದು 2024 ರಲ್ಲಿ ಬಳಸಿದ ಹೈಬ್ರಿಡ್ ಮಾದರಿಯಿಂದ ದೂರ ಸರಿಯುತ್ತದೆ. ಲಭ್ಯವಿರುವ ವಿಷಯಗಳ ಸಂಖ್ಯೆಯನ್ನ 63 ರಿಂದ 37ಕ್ಕೆ ಇಳಿಸಲಾಗಿದ್ದು, ಜನರಲ್ ಆಪ್ಟಿಟ್ಯೂಡ್ ಟೆಸ್ಟ್ (GAT) ಅಂಕಗಳ ಆಧಾರದ ಮೇಲೆ ಕೈಬಿಡಲಾದ ವಿಷಯಗಳಿಗೆ ಪ್ರವೇಶವನ್ನ ನೀಡಲಾಗಿದೆ. ವಿದ್ಯಾರ್ಥಿಗಳು ಈಗ ಪರೀಕ್ಷೆಗೆ ಐದು ವಿಷಯಗಳನ್ನು ಆಯ್ಕೆ ಮಾಡಬಹುದು, ಇದು ಹಿಂದಿನ ಆರು ಮಿತಿಯಿಂದ ಕಡಿಮೆಯಾಗಿದೆ. ಹೆಚ್ಚುವರಿಯಾಗಿ, ಪರೀಕ್ಷೆಯ ಅವಧಿಯನ್ನು ಪ್ರತಿ ವಿಷಯಕ್ಕೆ 60 ನಿಮಿಷಗಳಿಗೆ ಪ್ರಮಾಣೀಕರಿಸಲಾಗಿದೆ, ಮತ್ತು ಎಲ್ಲಾ ಪ್ರಶ್ನೆಗಳು ಕಡ್ಡಾಯವಾಗಿರುತ್ತವೆ,…

Read More

ಭಟ್ಕಳ: ಇಲ್ಲಿನ ಮುರುಡೇಶ್ವರಕ್ಕೆ ಶಾಲಾ ಪ್ರವಾಸಕ್ಕೆ ತೆರಳಿದ್ದಂತ 7 ವಿದ್ಯಾರ್ಥಿನಿಯರು ಅರಬ್ಬಿ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಇವರಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದರೇ, ಮೂವರನ್ನು ರಕ್ಷಿಸಲಾಗಿದ್ದರೇ, ಮತ್ತೆ ಮೂವರು ನಾಪತ್ತೆಯಾಗಿರುವ ಘಟನೆ ಮಂಗಳವಾರದಂದು ನಡೆದಿದೆ. ಮಂಗಳವಾರದಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಮುರಾರ್ಜಿ ದೇಸಾಯಿ ಶಾಲೆಯ ಶಾಲಾ ವಿದ್ಯಾರ್ಥಿನಿಯರನ್ನು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಕರೆದೊಯ್ಯಲಾಗಿತ್ತು. ಇಲ್ಲಿನ ಸಮುದ್ರದಲ್ಲಿ ಆಟವಾಡುತ್ತಿದ್ದಂತ ಸಂದರ್ಭದಲ್ಲಿ ಅಲೆಗಳ ಹೊಡೆತದಿಂದ 7 ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದಾರೆ. ಇವರಲ್ಲಿ ಲೈಫ್ ಗಾರ್ಡ್ ಸಿಬ್ಬಂದಿ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೇ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಶ್ರವಂತಿ ಗೋಪಾಲಪ್ಪ(15) ಎಂದು ಗುರುತಿಸಲಾಗಿದೆ. ಉಳಿದ ಮೂವರು ವಿದ್ಯಾರ್ಥಿನಿಯರಾದ ಯಶೋಧಾ, ವೀಕ್ಷಣಾ ಹಾಗೂ ಲಿಪಿಕಾ ಎಂಬುವರನ್ನು ರಕ್ಷಇಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನುಳಿದಂತ ದೀಕ್ಷಿತಾ, ಲಾವಣ್ಯ ಹಾಗೂ ಮತ್ತೊಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಕಾರ್ಯಾಚರಣೆಯನ್ನು ಇಂದು ಮುಂದುವರೆಸಲಾಗುತ್ತದೆ ಎನ್ನಲಾಗುತ್ತಿದೆ. https://kannadanewsnow.com/kannada/people-of-bengaluru-notice-power-outages-in-these-areas-today-tomorrow-tomorrow/ https://kannadanewsnow.com/kannada/kpsc-announces-schedule-for-various-recruitment-competitive-exams-heres-the-complete-information/

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗದ ದೇವರಬೀಸನಹಳ್ಳಿ ಮತ್ತು ಆಡುಗೋಡಿ ಉಪಕೇಂದ್ರ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 11.12.2024ರ ಬುಧವಾರದ ಇಂದು ಮತ್ತು 12.12.2024ರ ಗುರುವಾರದ ನಾಳೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು, ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) “ಬೆಳ್ಳಂದೂರು, ಆರ್ ಎಮ್ ಜೆಡ್, ಎಕ್ಸೊಸ್ಪೇಸ್ ಎಕೋವರ್ಲ್ಡ, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್ ಪೋರ್ಟ್ ಆಫೀಸ್, ಶೋಭ ಅಪಾರ್ಟಮೆಂಟ್, ಹೊರ ವರ್ತುಲ ರಸ್ತೆ, 5ನೇ ಇಂಡಸ್ಟ್ರಿಯಲ್ ಲೇಔಟ್, ಕೋರಮಂಗಲ, ಮಡಿವಾಳ ವೆಂಕಟೇಶ್ವರ ಬಡಾವಣೆ, ಚಿಕ್ಕ ಆಡುಗೋಡಿ, ಜೋಗಿ ಕಾಲೋನಿ, ಈಸ್ಟ್ ಲ್ಯಾಂಡ್ ಹೊಲ್ಡಿಂಗ್ ಬಿಲ್ಡಿಂಗ್, ಸೈಂಟ್ ಜಾನ್ ಸ್ಟಾಫ್ ಕ್ವಾಟ್ರಸ್, ಮಾರುತಿನಗರ, ಆಡುಗೋಡಿ 7ನೇ ಮತ್ತು 8ನೇ ಬ್ಲಾಕ್, ಸಿ.ಎ.ಆರ್. ಪೊಲೀಸ್ ಕ್ವಾಟ್ರಸ್, ಆಡುಗೊಡಿ ಮುಖ್ಯ ರಸ್ತೆ, ಸೈಂಟ್ ಜಾನ್ ಆಸ್ಪತ್ರೆ, ಮಡಿವಾಳ, ಮಾರುತಿ ನಗರ,…

Read More

ಬೆಂಗಳೂರು: ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಗೌರವಾರ್ಥ ಇಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ನಮ್ಮ ಮೆಟ್ರೋ ಕಚೇರಿಗೂ ಸರ್ಕಾರಿ ರಜೆಯನ್ನು ಘೋಷಿಸಿದೆ. ಆದರೇ ನಮ್ಮ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂಬುದಾಗಿ ಬಿಎಂ ಆರ್ ಸಿ ಎಲ್ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ(BMRCL), ಮೆಟ್ರೋ ಕಾರ್ಯಾಚರಣೆಗಳು ಅತ್ಯಗತ್ಯ ಸೇವೆಯಾಗಿದೆ. ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾಳೆ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಮೆಟ್ರೋ ಚಲಿಸುತ್ತದೆ ಎಂಬುದಾಗಿ ತಿಳಿಸಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ಇಂದು ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೆ ರಜೆ ಘೋಷಣೆ ರಾಜ್ಯ ಸರ್ಕಾರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ. ಈ ಸಂಬಂಧ ಕಚೇರಿ…

Read More