Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಗಮಂಗಲ ಗಲಭೆಯ ನಂತ್ರ ಪೊಲೀಸ್ ಇಲಾಖೆ ಬೆಂಗಳೂರಲ್ಲಿ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿದೆ. ಈ ಹಿನ್ನಲೆಯಲ್ಲೇ ಬೆಂಗಳೂರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದೆ. ಇಂದು ಈದ್ ಮಿಲಾದ್ ವೇಳೆಯಲ್ಲಿ ಈ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ:16/09/2024 ರಂದು ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ, ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು, ನಡಿಗೆಯಲ್ಲಿ ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ರಸ್ತೆ ಖುದ್ದು ಸಾಬ್ ಇದ್ದಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ಹಬ್ಬದ ದಿನದಂದು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಲು ಸೂಚಿಸಲಾಗಿದೆ. 1. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ಆಡಚಣೆ ಉಂಟಾಗದಂತೆ ಸ್ವಯಂಸೇವಕರು…
ಬೆಂಗಳೂರು: ಸೆಪ್ಟೆಂಬರ್.16ರ ಇಂದು ಈದ್ ಮಿಲಾದ್ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಕೆಲ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ಪರ್ಯಾಯ ಮಾರ್ಗದ ರಸ್ತೆಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16/09/2024ರ ಇಂದು ಮುಸ್ಲಿಂ ಬಾಂಧವರು “ಈದ್-ಮಿಲಾದ್ ಹಬ್ಬವನ್ನು ಆಚರಣೆ ಮಾಡಲಿದ್ದು ಈ ಸಂಬಂಧ ನೃಪತುಂಗ ರಸ್ತೆಯಲ್ಲಿನ Y.M.C.A. ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು ಸೇರಲಿದ್ದಾರೆ. ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ ಎಂದು ತಿಳಿಸಿದೆ. ಈದ್-ಮಿಲಾದ್ ಮೆರವಣಿಗೆ ಮಾರ್ಗಗಳು: 1. ಜೆ.ಸಿ ನಗರ ದರ್ಗಾದಿಂದ ಹೊರಟು ಶಿವಾಜಿನಗರ ಕಂಟೋನ್ಮೆಂಟ್ ಕಡೆಗೆ ಸಾಗುವುದು. 2. ಯಲಹಂಕ ಓಲ್ಡ್ ಟೌನ್ ಮಸೀದಿಯಿಂದ ಯಲಹಂಕ ಓಲ್ಡ್ ಟೌನ್ ಮಸೀದಿಯವರೆಗೆ 3. ಹಳೇ ಬಸ್ ನಿಲ್ದಾಣದಿಂದ ಸಣ್ಣ ಅಮಾನಿಕೆರೆಯವರೆಗೆ 4. ಬೆಳ್ಳಳ್ಳಿ ಕ್ರಾಸ್ ನಿಂದ ನಾಗವಾರ ಸಿಗ್ನಲ್ ವರೆಗೆ…
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇಂದಿನ ಯುಗದಲ್ಲಿ ವೈವಾಹಿಕ ಜೀವನ ಮತ್ತು ಪತಿಯೊಂದಿಗೆ ಬದುಕುವುದು ಕೆಲವರಿಗೆ ನರಕವಾಗಿದೆ. ಜೀವನ ಎಂದರೆ ಸುಖವಾಗಿ ಬಾಳುವುದು. ಈ ಜೀವನ ಒಂದೇ ಒಂದು ಬಾರಿ. 24 ಗಂಟೆಗಳಲ್ಲಿ ಅರ್ಧದಷ್ಟು ಸಮಯವನ್ನು ನಿದ್ರೆಯಲ್ಲಿ ಕಳೆಯಲಾಗುತ್ತದೆ. ಇನ್ನುಳಿದ ಮುಕ್ಕಾಲು ಪಾಲು ದುಡಿಮೆಯೇ. ಉಳಿದ ಕಾಲದಲ್ಲಾದರೂ ನಮ್ಮ ಬದುಕನ್ನು ಸುಖವಾಗಿಡಬೇಕಲ್ಲವೇ? ನಿಮ್ಮ ಮನೆಯಲ್ಲಿ ನಿಮ್ಮ ಗಂಡ ಮತ್ತು ಹೆಂಡತಿ ಪರಸ್ಪರರ ಮುಖವನ್ನು ನೋಡಲು ಇಷ್ಟಪಡದಿದ್ದರೆ, ಈ ಸರಳ ಆಧ್ಯಾತ್ಮಿಕ ಪರಿಹಾರವು ನಿಮಗಾಗಿ ಆಗಿದೆ. ಇದರೊಂದಿಗೆ ಮಹಿಳೆಯರು ತಮ್ಮ ಮಾಂಗಲ್ಯದಲ್ಲಿ ಮಾಡಬಾರದ ಸಣ್ಣ ಪುಟ್ಟ ಆಧ್ಯಾತ್ಮಿಕ ತಪ್ಪುಗಳನ್ನೂ ನೋಡೋಣ . ದಾಂಪತ್ಯ ಏಕತೆಯ ಪರಿಹಾರ ಪತಿ-ಪತ್ನಿಯರು ಒಂದಾದರೆ ಮೊದಲು ಆಗುವುದು ಮದುವೆಯ ಮಾಂಗಲ್ಯ ಧಾರಣೆ ತಿರುಮಾಂಗಲ್ಯಂ. ತಾಳಿ ಕಟ್ಟಿದ ನಂತರವೇ ಈ ಸಂಬಂಧ ಆರಂಭವಾಗುತ್ತದೆ. ಈ ತಾಳಿ ದಾರ ಹಗ್ಗವನ್ನು ಬದಲಾಯಿಸುವಾಗ ಮಹಿಳೆಯರು ಮಾಡುವ ಒಂದು ಪ್ರಮುಖ ತಪ್ಪು…
ತುಮಕೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ದುರಂತಗಳು ಸಂಭವಿಸುತ್ತವೆ. ಇದೀಗ ಇಂತಹದ್ದೇ ಘಟನೆ ತುಮಕೂರಿನಲ್ಲಿ ನಡೆದಿದ್ದು, ಭಾನುವಾರದಂದು ಗಣೇಶ ಮೂರ್ತಿ ವಿಸರ್ಜನೆಯ ವೇಳೆ ತಂದೆ ಮಗ ಸೇರಿದಂತೆ ಒಟ್ಟು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಗಣೇಶ ವಿಸರ್ಜನೆ ವೇಳೆ ತಂದೆ ಮಗ ಸೇರಿ ಮೂವರ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನ ಹಟ್ಟಿ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತಂದೆ ರೇವಣ್ಣ (46) ಪುತ್ರ ಶರತ್ (26) ಹಾಗೂ ದಯಾನಂದ (29) ಮೃತ ದುರ್ದೈವಿಗಳು ಎಂದು ತಿಳಿದುಬಂದಿದ್ದು, ಸದ್ಯ ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ದಂಡಿನಯಿವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/one-killed-8-critical-as-two-groups-clash-during-funeral-in-raichur/ https://kannadanewsnow.com/kannada/state-government-employees-association-elections-when-will-the-polling-be-held-the-results-will-be-out-here-are-the-details/
ರಾಯಚೂರು: ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಅಂತ್ಯಸಂಸ್ಕಾರದ ವೇಳೆಯಲ್ಲೇ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಕೈಕೈ ಮಿಲಾಯಿಸಿ ಎರಡು ಗುಂಪುಗಳು ಬಡಿದಾಡಿಕೊಂಡ ಪರಿಣಾಮ, ಓರ್ವ ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ತಾಲ್ಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ 2 ಗುಂಪುಗಳ ನಡುವೆ ಗಲಾಟೆಯಾಗಿದೆ. ಭಾನುವಾರ ನಡೆದಂತ ಗಲಾಟೆಯಲ್ಲಿ ಭೀಮೇಶ ನಾಯಕ(38) ಎಂಬುವರು ಸಾವನ್ನಪ್ಪಿದ್ದಾರೆ. ರಾಮಲಮ್ಮ, ಅಲಾರಿ ನಾಯಕ್, ದೋಳಯ್ಯ ಸೇರಿದಂತೆ 8 ಮಂದಿ ಹೊಡೆದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಂದಹಾಗೇ ಮಿರ್ಜಾಪುರ ಗ್ರಾಮದ ಕರಿಯಮ್ಮ ಎಂಬುವರು ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲಾಗಿತ್ತು. ಈ ವೇಳೆ ಆಗಮಿಸಿದ್ದ ದೊಳಯ್ಯ ಹಾಗೂ ಗೋವಿಂದ ಎಂಬುವರು ಕುಟುಂಬಸ್ಥರ ಮಧ್ಯೆ ಜಗಳವಾಗಿದೆ. ಇದು ಗಲಾಟೆಗೆ ತಿರುಗಿ, ಕಟ್ಟಿಗೆ, ಕುಡುಗೋಲಿನಿಂದ ಹೊಡೆದಾಡಿಕೊಂಡಿದ್ದಾರೆ. https://kannadanewsnow.com/kannada/sandalwood-sexual-harassment-crucial-meeting-to-be-held-today-to-probe-the-matter/ https://kannadanewsnow.com/kannada/woman-seeks-divorce-from-husband-within-40-days-of-marriage-heres-why/
ಬೆಂಗಳೂರು: ಕನ್ನಡ ಚಿತ್ರರಂಗದಲ್ಲೂ ಕೇಳಿ ಬಂದಿರುವಂತ ಲೈಂಗಿಕ ಶೋಷಣೆ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆಗೆ ಸಮಿತಿಯೊಂದನ್ನು ರಚಿಸುವ ಸಂಬಂಧ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಮಹತ್ವದ ಸಭೆಯನ್ನು ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಂ ಸುರೇಶ್ ಅವರು, ರಾಜ್ಯ ಮಹಿಳಾ ಆಯೋಗದವರ ಮನವಿ ಮೇರೆಗೆ ಮಂಡಳಿಯಲ್ಲಿ ಇಂದು ಸಭೆಯನ್ನು ಕರೆಯಲಾಗಿದೆ. ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿದೆ ಎನ್ನಲಾಗಿರುವ ಲೈಂಗಿಕ ಶೋಷಣೆಯ ಬಗ್ಗೆ ಈ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ಇದುವರೆಗೂ ಲೈಂಗಿಕ ಶೋಷಣೆ ಕುರಿತು ಯಾವುದೇ ದೂರುಗಳು ಬಂದಿಲ್ಲ. ಒಂದು ವೇಳೆ ಬಂದರೇ ಅಂತಹವರ ವಿರುದ್ಧ ಮಂಡಳಿಯು ತನ್ನದೇ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದಂತ ಕ್ರಮಗಳನ್ನು ಕೈಗೊಳ್ಳಲು ನಾವು ಸಿದ್ಧರಿದ್ದೇವೆ ಎಂದರು. ಇಂದಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆಗೆ ಎಲ್ಲರಿಗೂ ಆಹ್ವಾನ ಕೊಟ್ಟಿದ್ದೇವೆ. ಈ ಸಭೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಭಾಗಿಯಾಗಲಿದ್ದಾರೆ. ಅಲ್ಲದೇ ಕನ್ನಡ ಚಿತ್ರೋದ್ಯಮದ ಗಣ್ಯರು ಭಾಗಿಯಾಗಲಿದ್ದಾರೆ…
ಉತ್ತರ ಪ್ರದೇಶ: ಆಗ್ರಾದಲ್ಲಿ ಮಹಿಳೆಯೊಬ್ಬರು ಮದುವೆಯಾದ ಕೇವಲ 40 ದಿನಗಳ ನಂತರ ಪತಿಯಿಂದ ವಿಚ್ಛೇದನ ಕೋರಿದ್ದಾರೆ. ಕಾರಣ ತನ್ನ ಪತಿ ಪ್ರತಿದಿನ ಸ್ನಾನ ಮಾಡುವುದಿಲ್ಲ ಎಂಬುದಾಗಿದೆ. ಮಹಿಳೆಯ ಪ್ರಕಾರ, ತನ್ನ ಪತಿ ತಿಂಗಳಿಗೆ ಒಂದು ಅಥವಾ ಎರಡು ಬಾರಿ ಮಾತ್ರ ಸ್ನಾನ ಮಾಡುತ್ತಾನೆ. ಇದರಿಂದ ಆತನ ದೇಹದಿಂದ ದುರ್ವಾಸನೆ ಬರುತ್ತದೆ. ಅವನ ಜೊತೆಗೆ ಸಂಸಾರ ನಡೆಸಲು ಆಗುತ್ತಿಲ್ಲ ಎಂದಿದ್ದಾರೆ. ಆಗ್ರಾದಲ್ಲಿರುವ ಕುಟುಂಬ ಸಲಹಾ ಕೇಂದ್ರವನ್ನು ಸಂಪರ್ಕಿಸಿದ ಮಹಿಳೆ, ಇಂತಹ ಕಳಪೆ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ವ್ಯಕ್ತಿಯೊಂದಿಗೆ ವಾಸಿಸಲು ಸಾಧ್ಯವಿಲ್ಲ ಎಂದು ದೂರಿದರು. ಅಧಿಕಾರಿಗಳು ಮಹಿಳೆಯ ಪತಿಯನ್ನು ಪ್ರಶ್ನಿಸಿದಾಗ, ಅವರ ಉತ್ತರವನ್ನು ಕೇಳಿ ಅವರು ಆಶ್ಚರ್ಯಚಕಿತರಾದರು. ಅವರು ಸಾಮಾನ್ಯವಾಗಿ ತಿಂಗಳಿಗೆ ಒಂದು ಅಥವಾ ಎರಡು ಬಾರಿ ಮಾತ್ರ ಸ್ನಾನ ಮಾಡುತ್ತಾರೆ. ವಾರಕ್ಕೊಮ್ಮೆ ತಮ್ಮ ದೇಹದ ಮೇಲೆ ಸ್ವಲ್ಪ ಗಂಗಾಜಲವನ್ನು (ಗಂಗಾ ನದಿಯ ನೀರು) ಸಿಂಪಡಿಸುತ್ತಾರೆ ಎಂದು ಅವರು ಹೇಳಿದರು. ಆದರೆ, 40 ದಿನಗಳ ದಾಂಪತ್ಯದಲ್ಲಿ, ಪತ್ನಿಯ ಒತ್ತಾಯದಿಂದಾಗಿ ಅವರು ಆರು ಬಾರಿ ಸ್ನಾನ ಮಾಡಿದ್ದರು…
ಹುಬ್ಬಳ್ಳಿ: ಪುಣೆ-ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್ ನಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಲಿದ್ದಾರೆ. ಇದು ಕರ್ನಾಟಕದ ಪಾಲಿನ 9ನೇ ವಂದೇ ಭಾರತ್ ರೈಲು ಆಗಿದ್ದು, ವಾರಕ್ಕೆ 3 ದಿನ ಸಂಚಾರ ನಡೆಸಲಿದೆ. ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿ ಮತ್ತು ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಮೋದಿ ಚಾಲನೆ ನೀಡಲಿದ್ದಾರೆ. ಸೆಪ್ಟೆಂಬರ್.18ರಿಂದ ವಾರಕ್ಕೆ ಮೂರು ದಿನಗಳು ಈ ರೈಲು ಸಂಚರಿಸಲಿದೆ. ಪ್ರತಿ ಬುಧವಾರ, ಶುಕ್ರವಾರ ಮತ್ತು ಭಾನುವಾರ ಎಸ್ ಎಸ್ ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ಹೊರಟು 5.15ಕ್ಕೆ ಧಾರವಾಡ, 6.55ಕ್ಕೆ ಬೆಳಗಾವಿ, 9.15ಕ್ಕೆ ಮೀರಜ್, 9.30ಕ್ಕೆ ಸಾಂಗ್ಲಿ, 10.35ಕ್ಕೆ ಸತಾರಾ ಹಾಗೂ 1.30ಕ್ಕೆ ಪುಣೆಯನ್ನು ತಲುಪಲಿದೆ. ಹೀಗಿದೆ ಟಿಕೆಟ್ ದರ ಎಕ್ಸಿಕ್ಯೂಟಿವ್ ಕ್ಲಾಸ್ ಗೆ ರೂ.2,780 ಟಿಕೆಟ್ ದರ ನಿಗದಿ ಪಡಿಸಲಾಗಿದೆ. ಕ್ಯಾಟರಿಂಗ್ ಇಲ್ಲದೇ ಚೇರ್ ಕಾರ್ ಗೆ ರೂ.1,185, ಎಕ್ಸಿಕ್ಯೂಟಿವ್ ಕ್ಲಾಸ್ ಗೆ…
ಯಾದಗಿರಿ: ರಾಜ್ಯದಲ್ಲಿ ಪಿಎಸ್ಐ ಪರಶುರಾಂ ದಿಢೀರ್ ಸಾವು, ಕೋಲಾಹಲವನ್ನೇ ಸೃಷ್ಠಿಸಿತ್ತು. ಈಗ ಅವರ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸರ ಕೈ ಸೇರಿದೆ. ಅದರಲ್ಲಿ ಪಿಎಸ್ಐ ಪರಶುರಾಂ ಸಾವಿಗೆ ಹೃದಯಾಘಾತವೇ ಕಾರಣ ಎಂಬುದಾಗಿ ಬಹಿರಂಗವಾಗಿದೆ. ಯಾದಗಿರಿಯ ನಗರ ಠಾಣೆಯ ಕಾನೂನು ಸುವ್ಯವಸ್ಥೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಕುರಿತು ಹಲವು ಊಹಾಪೋಹಗಳು ಎದ್ದಿದ್ದವು. ಈಗ ಇವುಗಳಿಗೆ ತೆರೆ ಬಿದ್ದಿದೆ. ಪಿಎಸ್ಐ ಪರಶುರಾಮ್ ಅವರದ್ದು ಆತ್ಮಹತ್ಯೆಯಲ್ಲ, ಹೃದಯಾಘಾತದಿಂದಾದ ಸಾವು ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿಯಿಂದ ತಿಳಿದು ಬಂದಿದೆ. ಪಿಎಸ್ಐ ಪರಶುರಾಂ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾದ ಹಿನ್ನಲೆಯಲ್ಲಿ ಅವರ ಮೃತದೇಹದ ವಿವಿಧ ಅಂಗಾಂಗಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಈ ಪರೀಕ್ಷೆಯಲ್ಲಿ ಪರಶುರಾಂ ದೇಹದಲ್ಲಿ ಯಾವುದೇ ವಿಷಕಾರಿ ಅಂಶ ಕಂಡುಬಂದಿಲ್ಲ. ಅವರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ. https://kannadanewsnow.com/kannada/census-to-be-conducted-soon-no-decision-yet-on-caste-census-sources/ https://kannadanewsnow.com/kannada/state-government-employees-association-elections-when-will-the-polling-be-held-the-results-will-be-out-here-are-the-details/
ನವದೆಹಲಿ: ದಶಮಾನದ ಜನಗಣತಿ ನಡೆಸಲು ಸರಕಾರವು ಸಿದ್ಧತೆಗಳನ್ನು ಆರಂಭಿಸಿದೆ, ಆದರೆ ಈ ಪ್ರಕ್ರಿಯೆಯ ಭಾಗವಾಗಿ ಜಾತಿಯ ಕಾಲಂ ಸೇರಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಮೂಲಗಳು ರವಿವಾರ ತಿಳಿಸಿವೆ. ಅನಾಮಧೇಯತೆಯ ಷರತ್ತಿನ ಮೇಲೆ ಮಾತನಾಡಿದ ಮೂಲವೊಂದು, ದಶಮಾನದ ಗಣತಿಯನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಹೇಳಿದರು. ಭಾರತವು 1881 ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸುತ್ತದೆ. ಈ ದಶಕದ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020 ರಂದು ಪ್ರಾರಂಭವಾಗಬೇಕಿತ್ತು ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಬೇಕಾಯಿತು. ಕಳೆದ ವರ್ಷ ಸಂಸತ್ತು ಜಾರಿಗೆ ತಂದ ಮಹಿಳಾ ಮೀಸಲಾತಿ ಕಾಯ್ದೆಯ ಅನುಷ್ಠಾನವೂ ದಶಮಾನದ ಜನಗಣತಿಯ ನಿರ್ವಹಣೆಗೆ ಸಂಬಂಧಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಾಯ್ದಿರಿಸುವ ಕಾನೂನು ಜಾರಿಗೆ ಬಂದ ನಂತರ ದಾಖಲಾದ ಮೊದಲ ಜನಗಣತಿಯ ಸಂಬಂಧಿತ ಅಂಕಿಅಂಶಗಳ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಕೈಗೊಂಡ ನಂತರ ಜಾರಿಗೆ ಬರಲಿದೆ. ದಶಮಾನದ ಜನಗಣತಿಯಲ್ಲಿ ಜಾತಿಯ ಕಾಲಂ…