Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು:ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿರುವವರು ಟೀಕೆಯನ್ನು ಮುಕ್ತವಾಗಿ ಸ್ವೀಕರಿಸಬೇಕು. ಪ್ರತಿಬಂಧಕಾದೇಶ ಮೂಲಕ ವ್ಯಕ್ತಿಯೊಬ್ಬರನ್ನು ಮಾಧ್ಯಮಗಳ ಮುಂದೆ ಮಾತನಾಡದಂತೆ ತಡೆಯಲಾಗದು” ಎಂದಿರುವ ಬೆಂಗಳೂರಿನ ಸತ್ರ ನ್ಯಾಯಾಲಯವು, ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಅವರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಧ್ಯಮ ಗೋಷ್ಠಿ ನಡೆಸದಂತೆ ನಿರ್ಬಂಧಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ತೆರವುಗೊಳಿಸಿದೆ. ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತು ಲಕ್ಷ್ಮಣ್ ಅವರು ಸಲ್ಲಿಸಿದ್ದ ಮಧ್ಯಪ್ರವೇಶ ಅರ್ಜಿಗಳ ವಿಚಾರಣೆ ನಡೆಸಿದ ಬೆಂಗಳೂರಿನ 18ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎ ಹರೀಶ ಅವರು ಸಾಮಾನ್ಯ ಆದೇಶ (ಕಾಮನ್ ಆರ್ಡರ್) ಮಾಡಿದ್ದಾರೆ. ಲಕ್ಷ್ಮಣ್ ಅಥವಾ ಅವರ ಬೆಂಬಲಿಗರು ತಮ್ಮ ವಿರುದ್ಧ ಮಾಧ್ಯಮಗೋಷ್ಠಿ ನಡೆಸದಂತೆ ಹಾಗೂ ಯಾವುದೇ ಮಾಹಿತಿಯನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದಕ್ಕೆ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡುವಂತೆ ಕೋರಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾ ಮಾಡಲಾಗಿದೆ. ಅಂತೆಯೇ, 2024ರ ಜನವರಿ 29ರಂದು ನ್ಯಾಯಾಲಯವು ಮಾಡಿರುವ ಏಕಪಕ್ಷೀಯ ಮಧ್ಯಂತರ ಆದೇಶ ತೆರವು ಕೋರಿ…
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಕೆಇಎ ಕರೆಯಲಾಗಿತ್ತು. ಆದ್ರೇ ಕೆಲ ತಾಂತ್ರಿಕ ಕಾರಣಗಳಿಂದಾಗಿ ಈಗ ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಆನ್ ಲೈನ್ ಮೂಲಕ ದಿನಾಂಕ 04-03-2024ರಿಂದ ಅರ್ಜಿ ಸಲ್ಲಿಸಬಹುದೆಂದು 21-02-2024ರ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು ಎಂದಿದೆ. ಶುಲ್ಕ ಪಾವತಿಯ ಇಂಟರ್ ಫೇಸ್ ಅನ್ನು ಸಿದ್ಧ ಪಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಆದ್ದರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ ಎಂದು ತಿಳಿಸಿದೆ. ಇತ್ತೀಚಿನ ಮಾಹಿತಿಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪಡೆಯುವಂತೆ ಅಭ್ಯರ್ಥಿಗಳಿಗೆ ಸೂಚಿಸಿದೆ. https://twitter.com/KEA_karnataka/status/1765725940406231374 https://kannadanewsnow.com/kannada/school-girl-raped-on-international-womens-day/ https://kannadanewsnow.com/kannada/breaking-president-nominates-sudha-murthy-to-rajya-sabha/
ನವದೆಹಲಿ : “ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ. ನಾವು ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಚಿವ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಒಳ್ಳೆಯದಾಗಲಿ, ಆಸೆ ಪಡುವುದರಲ್ಲಿ ತಪ್ಪಿಲ್ಲ. ಯಾರ್ಯಾರೋ ಏನೇನೋ ಆಸೆ ಪಡುತ್ತಾರೆ. ಮಹದೇವಪ್ಪ ಅವರು ಆಸೆಪಡುವುದರಲ್ಲಿ ತಪ್ಪಿಲ್ಲ” ಎಂದು ತಿಳಿಸಿದರು. ಖರ್ಗೆ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ, “ಅವರು ಎಐಸಿಸಿ ಅಧ್ಯಕ್ಷರು. ಅನೇಕರು ಅವರ…
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಕೀಚಕ ಕೃತ್ಯವೊಂದು ಬೆಳಕಿಗೆ ಬಂದಿದೆ. 7ನೇ ತರಗತಿ ಓದುತ್ತಿದ್ದಂತ ಅಪ್ರಾಪ್ತ ಬಾಲಕಿಯ ಮೇಲೆ ಸಂಬಂಧಿಕರೊಬ್ಬರೇ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕೆ ಶಾಲಾ ಬಾಲಕಿ 6 ತಿಂಗಳ ಗರ್ಭಿಣಿಯಾಗಿರೋ ಕೀಚಕ ಕೃತ್ಯ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಂತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರೋ ಆರೋಪ ಕೇಳಿ ಬಂದಿದೆ. 7ನೇ ತರಗತಿ ವಿದ್ಯಾರ್ಥಿನಿ ಓದುವ ವಯಸ್ಸಿನಲ್ಲಿ ಈಗ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಸಂಬಂಧಿಕ ಯುವಕನೇ ಬಾಲಕಿ ಮೇಲೆ ಅತ್ಯಾಚಾರ ನಡೆಸಿರೋದಾಗಿ ಆರೋಪಿಸಲಾಗುತ್ತಿದೆ. ಸಾರ್ವಜನಿಕರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿದಂತ ಇಲಾಖೆಯ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ಬಾಲ ಮಂದಿರಕ್ಕೆ ಕರೆದೊಯ್ದು ಆರೈಕೆ ಮಾಡುತ್ತಿದ್ದಾರೆ. ಈ ಕುರಿತಂತೆ ಚಿಕ್ಕಬಳ್ಳಾಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. https://kannadanewsnow.com/kannada/i-have-withdrawn-from-lok-sabha-elections-former-minister-mtb-nagaraj/ https://kannadanewsnow.com/kannada/bengaluru-water-crisis-residents-of-posh-gated-community-go-to-nearby-mall-to-use-washrooms/
ಬೆಂಗಳೂರು: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಹೊಸಕೋಟೆಯಲ್ಲಿ ಮಾತನಾಡಿದಂತ ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ನನಗೆ ಪಕ್ಷದ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದ್ದರು. ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ. ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂದು ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ. ಈಗಾಗಲೇ ನಮ್ಮ ವರಿಷ್ಠರು ಯಾರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬುದು ಗೊತ್ತಿದೆ. ಈ ಬಗ್ಗೆ ಪಕ್ಷದಿಂದ ಅಭಿಪ್ರಾಯ ಸಂಗ್ರಹಿಸಿ ಗೆಲ್ಲುವವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಕರ್ನಾಟಕದ ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ತಿಳಿಸಿದರು. https://kannadanewsnow.com/kannada/breaking-president-nominates-sudha-murthy-to-rajya-sabha/ https://kannadanewsnow.com/kannada/bengaluru-water-crisis-residents-of-posh-gated-community-go-to-nearby-mall-to-use-washrooms/ https://kannadanewsnow.com/kannada/ramzan-urdu-primary-high-school-timings-changed-in-the-state/
ಬೆಂಗಳೂರು: ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ:31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ( Standing Order ) ನ್ನು…
ಬೆಂಗಳೂರು: ನಗರದ ನೀರಿನ ಬಿಕ್ಕಟ್ಟಿನಿಂದಾಗಿ ಬೆಂಗಳೂರಿನ ಐಷಾರಾಮಿ ಪ್ಲಾಟ್ ಗಳ ನಿವಾಸಿಗಳು ಪ್ರತಿದಿನ ಹತ್ತಿರದ ಮಾಲ್ ಗೆ ವಾಶ್ ರೂಮ್ ಗಳನ್ನು ಬಳಸಲು ಹೋಗುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕನಕಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಫಾಲ್ಕನ್ ಸಿಟಿ ಬೆಂಗಳೂರಿನ ನೀರಿನ ಬಿಕ್ಕಟ್ಟಿನ ಭಾರವನ್ನು ಹೊತ್ತಿರುವ ಐಷಾರಾಮಿ ಗೇಟೆಡ್ ಸಮುದಾಯವಾಗಿದೆ. ಸೊಸೈಟಿಯ ನಿವಾಸಿಗಳು ಈಗಾಗಲೇ ನೀರಿನ ಬಳಕೆಯನ್ನು ಕಡಿಮೆ ಮಾಡಲು ಡಿಸ್ಪೋಸಬಲ್ ಪ್ಲೇಟ್ಗಳು ಮತ್ತು ಕಟ್ಲರಿಗಳನ್ನು ಬಳಸುತ್ತಿದ್ದರೆ, ಬಿಕ್ಕಟ್ಟಿನಿಂದಾಗಿ ಅನೇಕರು ಹತ್ತಿರದ ಫೋರಂ ಮಾಲ್ನಲ್ಲಿ ಅದರ ವಾಶ್ರೂಮ್ಗಳನ್ನು ಬಳಸಲು ಸಾಲುಗಟ್ಟಿ ನಿಂತಿದ್ದಾರೆ ಎನ್ನಲಾಗುತ್ತಿದೆ. ರೆಡ್ಡಿಟ್ ಪೋಸ್ಟ್ ನಿವಾಸಿಗಳ ದುಃಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತದೆ. ರೆಡ್ಡಿಟ್ ಬಳಕೆದಾರ ಮತ್ತು ಪ್ರೆಸ್ಟೀಜ್ ಫಾಲ್ಕನ್ ಸಿಟಿ ನಿವಾಸಿ “ಪರಿಚಿತ-ಕಲೆ -8675” ಸಮುದಾಯವು ನಿಯಮಿತವಾಗಿ, ದಿನದ 24 ಗಂಟೆಯೂ ನೀರು ಸರಬರಾಜು ಮಾಡಿ ಒಂದು ತಿಂಗಳಿಗಿಂತ ಹೆಚ್ಚು ಸಮಯವಾಗಿದೆ ಎಂದು ಹೇಳಿದ್ದಾರೆ. ರೆಡ್ಡಿಟ್ ಬಳಕೆದಾರರು ಹಲವಾರು ಬಾಡಿಗೆದಾರರು ತಮ್ಮ ಅಪಾರ್ಟ್ಮೆಂಟ್ಗಳನ್ನು ಖಾಲಿ ಮಾಡಿದ್ದಾರೆ ಮತ್ತು ಇತರರು ತಾತ್ಕಾಲಿಕ ವಸತಿಗಳಿಗೆ ಸ್ಥಳಾಂತರಗೊಂಡಿದ್ದಾರೆ…
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ( Rameshwaram Cafe bomb blast case ) ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency -NIA) ಕರ್ನಾಟಕದಾದ್ಯಂತ ಶಂಕಿತ ಬಾಂಬರ್ ನ ಹೆಜ್ಜೆಗುರುತುಗಳನ್ನು ಪತ್ತೆಹಚ್ಚುವಾಗ ಕೆಲವು ಪ್ರಮುಖ ಸುಳಿವುಗಳನ್ನು ಸಂಗ್ರಹಿಸಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಕಣ್ಗಾವಲು ಆಧಾರದ ಮೇಲೆ, ಶಂಕಿತ ಬಾಂಬರ್ ಅನ್ನು ಮೊದಲು ಸಿಲ್ಕ್ ಬೋರ್ಡ್ ಬಳಿ ಗುರುತಿಸಲಾಗಿದೆ ಎಂದು ತನಿಖಾ ಸಂಸ್ಥೆಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸಿಲ್ಕ್ ಬೋರ್ಡ್ ಬಳಿ ಸಂಗ್ರಹಿಸಿದ ಸಿಸಿಟಿವಿ ದೃಶ್ಯಾವಳಿಗಳು ಸ್ಥಳದಲ್ಲಿ ಬಾಂಬರ್ ಇರುವಿಕೆಯನ್ನು ದೃಢಪಡಿಸಿವೆ ಎಂದು ಮೂಲಗಳು ಸೂಚಿಸುತ್ತವೆ. ಆರೋಪಿಗಳು ಸಿಲ್ಕ್ ಬೋರ್ಡ್ ನಿಂದ ಬೆಳ್ಳಂದೂರು ಮೂಲಕ ಮಾರತ್ತಹಳ್ಳಿಗೆ ಪ್ರಯಾಣಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಂತರ ಮಾರತ್ ಹಳ್ಳಿಯಲ್ಲಿ ಬಸ್ಸಿನಿಂದ ಇಳಿದು ಅಲ್ಲಿಂದ ಆರ್ ಎಕ್ಸ್ ಡಿಎಕ್ಸ್ ಆಸ್ಪತ್ರೆಗೆ ಕುಂದಲಹಳ್ಳಿಗೆ ಮತ್ತೊಂದು ಬಸ್ ಹತ್ತಿದ್ದಾರೆ ಎಂಬುದನ್ನು ಪತ್ತೆ ಮಾಡಿವೆ. ಬಳ್ಳಾರಿ ಮತ್ತು ತುಮಕೂರಿನಲ್ಲಿ ಎನ್ಐಎಯಿಂದ ಮಹತ್ವದ…
ಬೆಂಗಳೂರು: ನಗರದಲ್ಲಿ ನೀರಿಗೆ ಬೇಸಿಗೆಯ ಈ ಹೊತ್ತಿನಲ್ಲಿ ಆಹಾಕಾರವೆದ್ದಿದೆ. ಟ್ಯಾಂಕರ್ ನೀರಿನ ಬೆಲೆ ಗಗನಕ್ಕೇರಿದ್ದರಿಂದ ಕಡಿವಾಣ ಹಾಕೋದಕ್ಕೆ ರಾಜ್ಯ ಸರ್ಕಾರ ದರ ನಿಗದಿ ಮಾಡಿದೆ. ಈ ನಡುವೆ ವಿಕಾಸ್ ವಿಕ್ಕಿಪೀಡಿಯಾ ಅವರ ಹೊಸ ಹಾಡೊಂದು ಈಗ ಟ್ರೆಂಡಿಂಗ್ ಹಾಗೂ ವೈರಲ್ ಆಗಿದೆ. ತೊಳೆಯೋಕೆ, ಕುಡಿಯೋಕೆ ನೀರಿಲ್ಲ. ಓ ನಲ್ಲ ನೀರಿಲ್ಲ ಎನ್ನುವಂತ ಹಾಡು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ಹಿಂದೆ ಪಿಜಿ ಲೈಫ್ ಬಗ್ಗೆ ಮಾಡಿದ್ದಂತ ವಿಕಾಸ್ ವಿಕ್ಕಿಪೀಡಿಯಾ ಅವರ ಹಾಡೊಂದು ಸಖತ್ ಸದ್ದು ಮಾಡಿತ್ತು. ಊಟ ಸರಿಯಿಲ್ಲ ಅಂದ್ರುನೂ ಪಿಜಿಯಲ್ಲಿ ತಿನ್ನುತ್ತೀವಿ ಅನ್ನುತ್ತೀವಿ ಅನ್ನೋ ವೀಡಿಯೋ ಸಖತ್ ವೈರಲ್ ಆಗಿತ್ತು. ರಾಜ್ಯಾದ್ಯಂತ ಜನರು ನೀರಿಲ್ಲದೇ ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಹಣ ಕೊಟ್ಟರೂ, ನೀರು ಸಿಗದಂತಾದ ಪರಿಸ್ಥಿತಿ ಕರ್ನಾಟಕದಲ್ಲಿ ಉದ್ಭವವಾಗಿದೆ. ಈ ಸ್ಥಿತಿಯನ್ನು ನೋಡಿರುವ ವಿಕಾಸ್ ವಿಕ್ಕಿಪೀಡಿಯಾ (Vikas Wikipedia) ಹೊಸದೊಂದು ಹಾಡು ರೆಡಿ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿರುವಂತ ಹಾಡಿನಲ್ಲಿ…
ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈ ನಂತ್ರ ಮತ್ತೆ ಮೂವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಉಂಟಾಗಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಮಹತ್ವದ ಮೈಲುಗಲ್ಲನ್ನು ತನಿಖಾ ತಂಡ ಎನ್ಐಎ ಸಾಧಿಸಿದೆ. ಈ ಪ್ರಕರಣ ಸಂಬಂಧ ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ. ಹೌದು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ನಾಲ್ವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು, ಮುಂಬೈ, ದೆಹಲಿಯಲ್ಲಿ ನಾಲ್ವರನ್ನು ವಶಕ್ಕೆ ಎನ್ಐಎ ಅಧಿಕಾರಿಗಳು ಪಡೆದಿದ್ದಾರೆ. ಮಿನಾಜ್ ಸೇರಿ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ಬಳ್ಳಾರಿ ಸೈಯದ್ ಸಮೀರ್, ಮುಂಬೈನ ಅನಾಸ್ ಇಕ್ಬಾಲ್ ಹಾಗೂ ದೆಹಲಿಯ ಶ್ಯಾನ್ ರೆಹಮಾನ್ @ ಹುಸೇನ್…