Subscribe to Updates
Get the latest creative news from FooBar about art, design and business.
Author: kannadanewsnow09
ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು ಸ್ವಂತ ಮಕ್ಕಳು ಎಂದು ತಿಳಿದು ಉತ್ತಮ ಗುಣಮಟ್ಟದ ಪೂರಕ ಆಹಾರಗಳನ್ನು ಒದಗಿಸಬೇಕು. ಕಳಪೆ ಆಹಾರಗಳ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳಾಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಗುಣಮಟ್ಟಕ್ಕೆ ಅತೀ ಹೆಚ್ಚು ಆದ್ಯತೆ ನೀಡಬೇಕು. ಘಟಕದ ಪ್ರತಿಯೊಂದು ಉತ್ಪನ್ನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಯಾವುದಾದರೂ ಕಳಪೆ ಎಂದು…
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮಳೆಯಿಂದಾಗಿ ಮತ್ತೊಂದು ಬಲಿಯಾಗಿದೆ. ಕಂಬವನ್ನು ಮುಟ್ಟಿದ ಪರಿಣಾಮ, ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ಮಳೆಗೆ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಸಾವನ್ನಪ್ಪಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಯಿಂದಾಗಿ ಇದು ಎರಡನೇ ಬಲಿಯಾಗಿದೆ. ಮನೆಯಿಂದ ಪಾರ್ಸಲ್ ತೆಗೆದುಕೊಂಡು ಬರೋದಕ್ಕೆ ಹೊರ ಬಂದಿದ್ದಂತ ಪ್ರತೀಕ್ಷಾ ಶೆಟ್ಟಿ, ಮನೆ ಬಳಿಯ ಕಂಬವನ್ನು ಟಚ್ ಮಾಡಿದ್ದರಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/ramesh-babu-demands-judicial-probe-into-land-scam-against-r-ashoka/ https://kannadanewsnow.com/kannada/emergency-proposal-could-have-been-avoided-rahul-gandhi-meets-lok-sabha-speaker/
ಬೆಂಗಳೂರು : “ಕೆಂಪೇಗೌಡರು ಒಕ್ಕಲಿಗರಾದರೂ ಅವರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು. ವಿಶ್ವಮಾನ್ಯ ಬೆಂಗಳೂರನ್ನು ಕಟ್ಟಿದ ಅವರು ಎಲ್ಲಾ ಜಾತಿ, ಧರ್ಮಕ್ಕೂ ನಾಡಪ್ರಭುಗಳಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಕಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; “ನಾಡಪ್ರಭುಗಳ ಹೆಸರನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲೆಗಳಲ್ಲಿ ಕೆಂಪೇಗೌಡರ ಬಗ್ಗೆ ಚರ್ಚಾ ಸ್ಪರ್ಧೆ ನಡೆಸಲು ಹಾಗೂ ತಿಳುವಳಿಕೆ ನೀಡಲು ಪ್ರತಿ ತಾಲ್ಲೂಕಿಗೆ ಬಿಬಿಎಂಪಿಯಿಂದ ತಲಾ 1 ಲಕ್ಷ ಹಣ ಬಿಡುಗಡೆ ಮಾಡಲಾಗಿದೆ. ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದು ಪ್ರಧಾನ ಕಾರ್ಯದರ್ಶಿಗಳು ಮುಂದಿನ ದಿನಗಳಲ್ಲಿ ತಿಳಿಸಲಿದ್ದಾರೆ.” “ಸರ್ಕಾರದಿಂದ ಸುಮಾರು 25 ಕ್ಕೂ ಹೆಚ್ಚು ಜಯಂತಿಗಳನ್ನು ಆಚರಿಸಲಾಗುತ್ತದೆ. ಈಗ ನೀಡುತ್ತಿರುವ ಹಣ ಕಡಿಮೆಯಾಗುತ್ತಿದ್ದು ಆದ ಕಾರಣ ನಾಡಪ್ರಭುಗಳ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಪ್ರತಿ ತಾಲ್ಲೂಕು ಮಟ್ಟಕ್ಕೂ ಬಿಬಿಎಂಪಿಯಿಂದ 1 ಲಕ್ಷ ರೂಪಾಯಿ ನೀಡಲು ಸೂಚನೆ ನೀಡಲಾಗಿದೆ.” ನಾಡಪ್ರಭು…
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಗ್ಯಾರೆಂಟಿ ಯೋಜನೆ ಹಿನ್ನೆಲೆಯಲ್ಲಿ ಆದಾಯ ಕ್ರೋಡೀಕರಣಕ್ಕೆ ಹರಸಾಹಸಪಡುತ್ತಿರುವ ಕಾಂಗ್ರೆಸ್ ಸರ್ಕಾರ ಪೆಟ್ರೋಲ್-ಡೀಸೆಲ್ ದರ ಏರಿಕೆ ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಅದೇ ಹೊತ್ತಿಗೆ ಸರ್ಕಾರಿ ಸ್ವಾಮ್ಯದ KMF ಕೂಡಾ ಹಾಲಿನ ದರ ಏರಿಕೆ ಮಾಡಿ ವಿವಾದಕ್ಕೆ ಗುರಿಯಾಗಿದೆ. ಪೆಟ್ರೋಲ್ ದರ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಹೋರಾಟದ ಅಖಾಡದಲ್ಲಿರುವಾಗಲೇ ಹಾಲಿನ ದರ ಏರಿಕೆಯಾಗಿದ್ದು ಸರ್ಕಾರದ ಕ್ರಮವನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇದಕ್ಕೆ ಸಮಜಾಯಿಷಿ ನೀಡಿರುವ ಸಿಎಂ ಸಿದ್ದರಾಮಯ್ಯ, ಹಾಲಿನ ದರ ಏರಿಕೆಯಾಗಿಲ್ಲ, ಹಾಲಿನ ಪ್ರಮಾಣವಷ್ಟೇ ಹೆಚ್ಚಳವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಹಾಲಿನ ದರ ಏರಿಕೆಯು ಬಿಜೆಪಿ ನಾಯಕರ ತೀರ್ಮಾನವಾಗಿದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಹಾಲು ಉತ್ಪಾದಕರ ಒಕ್ಕೂಟದಲ್ಲಿ (ಕೆಎಂಎಫ್) ಬಿಜೆಪಿ ನಾಯಕರು ನಿರ್ದೇಶಕರಿದ್ದಾರೆ. ಬಿಜೆಪಿ ನಾಯಕರಿರುವ ನಿರ್ದೇಶಕರ ಮಂಡಳಿಯೇ ಹಾಲಿನವದರ ಏರಿಕೆಯ ತೀರ್ಮಾನ…
ಬೆಳಗಾವಿ: ಸರ್ಕಾರಿ ಅಧಿಕಾರಿಯಾಗಿದ್ದಂತ ಹೆಸ್ಕಾಂ ಸಹಾಯಕ ಎಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದಂತ ದೂರುದಾರೆ ಸೇರಿ 13 ಮಂದಿಗೆ ಕೋರ್ಟ್ 3 ವರ್ಷ 6 ತಿಂಗಳು ಶಿಕ್ಷೆ ವಿಧಿಸಿ ಆದೇಶಿಸಿದೆ. ಬೆಳಗಾವಿಯಲ್ಲಿ ಹೆಸ್ಕಾಂ ಸಹಾಯ ಅಧೀಕ್ಷಕ ಅಭಿಯಂತರರಾಗಿದ್ದಂತ ತುಕಾರಾಂ ಮಜ್ಜಿಗೆ ಎಂಬುವರ ವಿರುದ್ಧ ಸಿಂಧು ಎಂಬುವರು ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದರು. 11 ವರ್ಷಗಳ ಸುಧೀರ್ಘ ವಿಚಾರಣೆ ನಡೆಸಿದಂತ ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ದೂರುದಾರೆ ಸಿಂಧು ಸೇರಿದಂತೆ 13 ಮಂದಿ ದಾಖಲಿಸಿರೋದು ಸುಳ್ಳು ದೂರಾಗಿದೆ ಎಂಬುದಾಗಿ ಹೇಳಿದಂತ ನ್ಯಾಯಾಲಯವು, ಬಿ.ವಿ ಸಿಂಧು ಸೇರಿದಂತೆ 13 ಜನರಿಗೆ ನ್ಯಾಯಾಲಯವು 3 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ ತಲಾ 86,000 ದಂಡವನ್ನು ವಿಧಿಸಿ ಆದೇಶಿಸಿದೆ. ಅಂದಹಾಗೇ ನವೆಂಬರ್.19, 2014ರಂದು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಬಿ.ವಿ ಸಿಂಧು ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪದಡಿ ಹೆಸ್ಕಾಂ ಅಧಿಕಾರಿ ತುಕಾರಾಂ…
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಯಾಗಿರುವಂತ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಶ್ರೀಧರ್ ಪೂಜಾರ್ ಗೆ ಬಿಗ್ ರಿಲೀಫ್ ನೀಡಿದೆ. ಇಂದು ಹೈಕೋರ್ಟ್ ನಲ್ಲಿ ಶ್ರೀಧರ್ ಪೂಜಾರ್ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ ಉಮಾ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ನ್ಯಾಯಪೀಠದ ಮುಂದೆ ಶ್ರೀಧರ್ ಪೂಜಾರ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದಿಸಿದರು. ಒಂದೇ ಕೇಸ್ ನಲ್ಲಿ ಎರಡು ಎರಡು ಬಾರಿ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣದ 4 ವರ್ಷಗಳ ಬಳಿಕ ಬಂಧಿಸೋದಕ್ಕೆ ಯತ್ನಿಸಲಾಗಿದೆ ಎಂಬುದಾಗಿ ವಾದಿಸಿದರು. ಈ ವಾದದ ಬಳಿಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಉಮಾ ಅವರು ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತ ಪಡಿಸಿದರು. ಅಲ್ಲದೇ ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುವಂತಿದೆ ಅಂತ ಹೇಳುವ ಮೂಲಕ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು. https://kannadanewsnow.com/kannada/cm-siddaramaiah-to-hold-meeting-with-mps-in-delhi-r-ashoka/ https://kannadanewsnow.com/kannada/ramesh-babu-demands-judicial-probe-into-land-scam-against-r-ashoka/
ಬೆಂಗಳೂರು: ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ದಿನ ಟೀಕಿಸಿ ಈಗ ಸಭೆ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಯಾವಾಗಲೂ ಸೌಹಾರ್ದತೆ ಇರಬೇಕು. ಅಧಿಕಾರ ಇಂದು ಬರುತ್ತದೆ, ಮುಂದೆ ಹೋಗುತ್ತದೆ. ಹೀಗೆ ಸಂಘರ್ಷ ಮಾಡಿಕೊಳ್ಳಲು ಇದು ಭಾರತ-ಪಾಕಿಸ್ತಾನ ಅಲ್ಲ. ಕರ್ನಾಟಕದಲ್ಲಿ ಯಾವುದೇ ಪಕ್ಷ ದೀರ್ಘವಾಗಿ ಆಡಳಿತ ನಡೆಸಿಲ್ಲ. ಇದು ಬದಲಾಗುತ್ತಲೇ ಇರುತ್ತದೆ. ಕೇಂದ್ರ ಸರ್ಕಾರ ನೀಡಿರುವ ಹಣವನ್ನೇ ಖರ್ಚು ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಜನರು ಬೆಲೆ ಏರಿಕೆಗಳಿಗೆ ತಯಾರಾಗಿರಬೇಕು. ಈ ಭ್ರಷ್ಟ, ದುಷ್ಟ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿಯೇ ಒಬ್ಬ ಸಚಿವರನ್ನು ಬೀಳಿಸಿದ್ದೇವೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಬೀಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಪೆಟ್ರೋಲ್ ದರ ಏರಿಕೆ,…
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಕೇವಲ ಸಚಿವ ನಾಗೇಂದ್ರರ ರಾಜೀನಾಮೆ ಪರಿಹಾರವಲ್ಲ. ಸಚಿವ ಶರಣಪ್ರಕಾಶ ಪಾಟೀಲ್ ಅವರು ನಾಗೇಂದ್ರರ ಜೊತೆ ಇದ್ದಾರೆ. ಹಗರಣದಲ್ಲಿ ನಿಗಮದ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದು, ಇವರೆಲ್ಲರೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇರುವ ಮೂವರಲ್ಲಿ ಕದ್ದವರು ಯಾರು ಎಂಬಂತಾಗಿದೆ ಪರಿಸ್ಥಿತಿ. ಒಬ್ಬರ ಮೇಲೆ ಇನ್ನೊಬ್ಬರು ಬೆಟ್ಟು ತೋರಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಮೊತ್ತದ ಬೃಹತ್ ಹಗರಣದಲ್ಲಿ ಭಾಗಿಯಾದ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಈಗಾಗಲೇ ಎಸ್ಟಿ ಮೋರ್ಚಾ ರಾಜ್ಯಾದ್ಯಂತ ಹೋರಾಟ ಮಾಡುತ್ತಿದೆ ಎಂದು ವಿವರಿಸಿದರು. 187 ಕೋಟಿ ಹಣದಲ್ಲಿ ಬಹಳಷ್ಟು ಮೊತ್ತ ದುರ್ಬಳಕೆ ಆಗಿದೆ. 89 ಕೋಟಿ ಹಣವನ್ನು ಲೀಲಾಜಾಲವಾಗಿ ಬಳಸಿಕೊಂಡಿದೆ. 700ಕ್ಕೂ ಅಧಿಕ ಖಾತೆಗಳಿಗೆ…
ನವದೆಹಲಿ: ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ( Ayushman Bharat health insurance scheme ) 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಅಧ್ಯಕ್ಷ ದ್ರೌಪದಿ ಮುರ್ಮು ( President Droupadi Murmu ) ಗುರುವಾರ ಹೇಳಿದ್ದಾರೆ. ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (Ayushman Bharat-Pradhan Mantri Jan Arogya Yojana -AB-PMJAY) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಅಧ್ಯಕ್ಷ ಮುರ್ಮು ಹೇಳಿದರು. ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ ಕಾರ್ಯವೂ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದರು. ಇದಲ್ಲದೆ, ಸರ್ಕಾರವು ಈ ಪ್ರದೇಶದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಈಗ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವೃದ್ಧರು ಸಹ ಇದರ ವ್ಯಾಪ್ತಿಗೆ ಬರುತ್ತಾರೆ ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತಾರೆ” ಎಂದು ರಾಷ್ಟ್ರಪತಿ ಹೇಳಿದರು.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು, ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ರಾಜ್ಯ ಸರ್ಕಾರದ ಪರವಾಗಿ ಎಲ್ಲರೂ ಈ ಯೋಜನೆಗಳನ್ನು ಮಂಜೂರು ಮಾಡಿಸುವುದು, ಹಣ ಬಿಡುಗಡೆ ಮಾಡಿಸುವುದು, ಸಂಪನ್ಮೂಲ ಹೆಚ್ಚು ಮಾಡಲು ಪ್ರಯತ್ನ ಪಡಬೇಕೆಂದು ತಿಳಿಸಲು ನೂತನ ಸಂಸದರನ್ನು ಭೇಟಿ ಮಾಡಲಾಗುವುದು ಎಂದರು. ಕೇಂದ್ರ ಸಚಿವರ ಭೇಟಿ ವಿಶೇಷವಾಗಿ ನಮ್ಮ ಸಚಿವರೂ ಕೂಡ ಜೊತೆಗೂಡಿದ್ದು, ಪ್ರಧಾನಮಂತ್ರಿ ಭೂಸಾರಿಗೆ ಸಚಿವರು,ರೈಲ್ವೆ, ನೀರಾವರಿ , ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಲಿರುವುದಾಗಿ ಹೇಳಿದರು. ಗೃಹಸಚಿವರು…