Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಗುರುವಾರ ದೆಹಲಿಯ ವಿಜ್ಞಾನ ಭವನದಲ್ಲಿ 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನವನ್ನ ಉದ್ಘಾಟಿಸಿದರು. ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು ಮರಾಠಿ ಭಾಷೆ ಅಮೃತಕ್ಕಿಂತ ಸಿಹಿಯಾಗಿದೆ ಮತ್ತು ಈ ಭಾಷೆಯನ್ನ ಮಾತನಾಡಲು ಮತ್ತು ಅದರ ಹೊಸ ಪದಗಳನ್ನ ಕಲಿಯಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರೊಂದಿಗೆ ಶರದ್ ಪವಾರ್ ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಶರದ್ ಪವಾರ್ ಸಮ್ಮೇಳನಕ್ಕೆ ಬಂದಾಗ, ಪ್ರಧಾನಿ ಮೋದಿ ಅವರನ್ನ ಗೌರವದಿಂದ ಸ್ವಾಗತಿಸಿದರು. ಪ್ರಧಾನಿ ಮೋದಿ ಶರದ್ ಪವಾರ್ ಅವರ ಲೋಟದಲ್ಲಿ ನೀರು ತುಂಬಿಸಿದ ಪ್ರಧಾನಿ.! ಪ್ರಧಾನಿ ಮೋದಿಯವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಉದ್ಘಾಟನೆಯ ವಿಡಿಯೋ. ಈ ಸಮಯದಲ್ಲಿ, ಪ್ರಧಾನಿ ಮೋದಿ ಮತ್ತು ಶರದ್ ಪವಾರ್ ಅವರ ಕುರ್ಚಿಗಳನ್ನ ಪರಸ್ಪರ ಹತ್ತಿರ ಇರಿಸಲಾಗಿತ್ತು, ಶರದ್ ಪವಾರ್…
ಪ್ರಯಾಗ್ ರಾಜ್: ಮಹಾಕುಂಭಮೇಳದಲ್ಲಿ 57 ಕೋಟಿಗೂ ಹೆಚ್ಚು ಭಕ್ತರು ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದ ನಂತರವೂ ಅದರ ಪರಿಶುದ್ಧತೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಈ ಹಿಂದೆ ಕ್ಷಿಪಣಿ ಮನುಷ್ಯ ಡಾ.ಎಪಿಜೆ ಅಬ್ದುಲ್ ಕಲಾಂ ಅವರೊಂದಿಗೆ ವೈಜ್ಞಾನಿಕ ಚರ್ಚೆಯಲ್ಲಿ ತೊಡಗಿದ್ದ ಪದ್ಮಶ್ರೀ ವಿಜ್ಞಾನಿ ಡಾ.ಅಜಯ್ ಕುಮಾರ್ ಸೋಂಕರ್ ಅವರು ಗಂಗಾ ನೀರು ಸ್ನಾನಕ್ಕೆ ಮಾತ್ರವಲ್ಲ, ಕ್ಷಾರೀಯ ನೀರಿನಷ್ಟೇ ಶುದ್ಧವಾಗಿದೆ ಎಂದು ತಮ್ಮ ಪ್ರಯೋಗಾಲಯದಲ್ಲಿ ಸಾಬೀತುಪಡಿಸಿದ್ದಾರೆ. ಸಂದೇಹವಾದಿಗಳಿಗೆ ಸವಾಲು ಹಾಕಿದ ವಿಜ್ಞಾನಿ, ವೈಜ್ಞಾನಿಕ ಪುರಾವೆಗಳೊಂದಿಗೆ ಗಂಗಾನದಿಯ ಪರಿಶುದ್ಧತೆಯ ಬಗ್ಗೆ ಅನುಮಾನಗಳನ್ನು ನಿವಾರಿಸಿದರು. ಗಂಗಾ ನೀರನ್ನು ತನ್ನ ಮುಂದೆ ತಂದು ಪ್ರಯೋಗಾಲಯ ಪರೀಕ್ಷೆಯ ಮೂಲಕ ಅದರ ಪರಿಶುದ್ಧತೆಯನ್ನು ಪರಿಶೀಲಿಸುವಂತೆ ಸಣ್ಣ ಸಂದೇಹವಿರುವ ಯಾರಿಗಾದರೂ ಅವರು ಬಹಿರಂಗ ಸವಾಲು ಹಾಕಿದರು. ಮುತ್ತು ಕೃಷಿಯಲ್ಲಿ ಜಪಾನ್ ಪ್ರಾಬಲ್ಯಕ್ಕೆ ಸವಾಲೊಡ್ಡಲು ಹೆಸರುವಾಸಿಯಾದ ಡಾ.ಸೋಂಕರ್, ಮಹಾಕುಂಭ ನಗರದ ಸಂಗಮ್ ನೋಸ್ ಮತ್ತು ಅರೈಲ್ ಸೇರಿದಂತೆ ಐದು ಪ್ರಮುಖ ಸ್ನಾನ ಘಟ್ಟಗಳಿಂದ ಗಂಗಾನದಿಯ ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಈ ಮಾದರಿಗಳನ್ನು ನಂತರ ಅವರ…
ಬೆಂಗಳೂರು: ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ ಹೂಡಲು ತೀರ್ಮಾನಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಅವರು ಈ ಸಂಬಂಧ ಸಭೆ ನಡೆಸಿದರು. ಕಂಪನಿಯೊಂದಿಗೆ ಹೂಡಿಕೆ ಸಂಬಂಧ ಇತ್ತೀಚಿಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದು, ಕಾರ್ಯರೂಪಕ್ಕೆ ಬರುತ್ತಿರುವುದು ಸಂತಸದ ಸಂಗತಿ ಎಂದು ಸಚಿವರು ಹೇಳಿದ್ದಾರೆ. https://twitter.com/KarnatakaVarthe/status/1892926779150467243 ಕಂಪನಿಯು ಮೊದಲ ಹಂತದಲ್ಲಿ 5,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು, 5 ಗಿಗಾವ್ಯಾಟ್ ಸಾಮರ್ಥ್ಯದ ಉತ್ಪಾದನೆ ಮಾಡಲಿದೆ. ಒಟ್ಟು ಯೋಜನೆಯಿಂದ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದಾರೆ. ಎಮ್ವಿ ಎನರ್ಜಿ ಕಂಪನಿಯು ಬೆಂಗಳೂರಿನ ಐಟಿಐಆರ್ ವಲಯದಲ್ಲಿ 120 ಎಕರೆ ಜಮೀನನ್ನು ಕೇಳಿದೆ. ಇದನ್ನು ಸಕಾರಾತ್ಮಕವಾಗಿ…
ಬೆಂಗಳೂರು: ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಮುಖಂಡರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ್ ಬೊಮ್ಮಾಯಿಯವರು ಹಾಗೂ ಇತರೆ ವಿರೋಧ ಪಕ್ಷದ ಮುಖಂಡರುಗಳು ರಾಜ್ಯದ ಆರ್ಥಿಕತೆಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಆರ್ಥಿಕತೆ ಕುಸಿಯುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ. ಹಣಕಾಸಿನ ವ್ಯವಸ್ಥೆ ನೆಲ ಕಚ್ಚಿದೆ ಎಂದೆಲ್ಲ ಆರೋಪಿಸಿ ಮಾತನಾಡಿದ್ದಾರೆ. ಆ ಮೂಲಕ ಜನರನ್ನು ಸಶಕ್ತಗೊಳಿಸುತ್ತಿರುವ ನಮ್ಮ ಗ್ಯಾರಂಟಿ ಹಾಗೂ ಇನ್ನಿತರೆ ಯೋಜನೆಗಳನ್ನು ಟೀಕಿಸಿದ್ದಾರೆ. ವಾಸ್ತವವೇನೆಂದರೆ, ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸುತ್ತಿದ್ದಾಗ ನಮ್ಮ ಆರ್ಥಿಕ ವ್ಯವಸ್ಥೆಯನ್ನು ಪಾತಾಳಕ್ಕೆ ಕುಸಿಯುವಂತೆ ಮಾಡಿದ್ದರು. ಆದರೆ ವಿರೋಧ ಪಕ್ಷದಲ್ಲಿ ಕೂತು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತನಾಡುತ್ತಿದ್ದಾರೆ. ಬಿಜೆಪಿಯವರ ಅರಾಜಕ ಆರ್ಥಿಕ ನಿರ್ವಹಣೆಗಳಿಂದಾಗಿ ಪಾತಾಳದತ್ತ ಕುಸಿಯುತ್ತಿದ್ದ ರಾಜ್ಯದ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದನ್ನು ಸಹಿಸಿಕೊಳ್ಳಲಾಗದೆ ಅಥವಾ ಅರಿತುಕೊಳ್ಳಲಾರದೆ ಬಿಜೆಪಿಯವರು ಮಾತಾಡುತ್ತಿರುವುದು ದುರಂತವೆಂದು ಸರ್ಕಾರವು ಭಾವಿಸುತ್ತದೆ. ಬಿಜೆಪಿಯವರು ಮಾಡಿದ್ದ ಅವಾಂತರಗಳ…
ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರೊಂದಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮಾಜಿ ಪ್ರಧಾನಿಗಳು, ಸಚಿವರ ಜತೆ ಮುಖ್ಯವಾಗಿ ರಾಜ್ಯಕ್ಕೆ ಸಂಬಂಧಪಟ್ಟ ಅಂತಾರಾಜ್ಯ ನೀರಾವರಿ ವಿವಾದಗಳು, ರಾಜ್ಯ ಎದುರಿಸುತ್ತಿರುವ ಜಲ ಸಂಕಷ್ಟ, ರಾಜ್ಯದ ನೀರಾವರಿ ಯೋಜನೆಗಳಿಗೆ ತ್ವರಿತ ಅನುಮೋದನೆ ಮತ್ತು ಅಗತ್ಯ ಅನುದಾನ ನೀಡುವ ವಿಷಯಗಳ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದರು. ಮಾಜಿ ಪ್ರಧಾನಿಗಳ ಬೇಡಿಕೆಗಳ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಶಕ್ತಿ ಸಚಿವರು; ಈ ಬಗ್ಗೆ ತಾವೇ ಖುದ್ದು ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯದ ಜಲ ವಿವಾದಗಳ ಬಗ್ಗೆ ಸಚಿವರು ಮಾಜಿ ಪ್ರಧಾನಿಗಳಿಂದ ಸಾಕಷ್ಟು ಮಾಹಿತಿ ಪಡೆದುಕೊಂಡರು. ಅಲ್ಲದೆ; ಗೋದಾವರಿ – ಕೃಷ್ಣಾ – ಕಾವೇರಿ ನದಿಗಳ ಜೋಡಣೆಯ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಬೇಕು ಎಂದು ದೇವೇಗೌಡರು ಮಾಡಿರುವ ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿದರು.…
ಹುಬ್ಬಳ್ಳಿ: ಮಕ್ಕಳ ಆಹಾರ ಸಂಗ್ರಹ ಮಾಡಿದ್ದಂತ ಆರೋಪದಲ್ಲಿ ಪ್ರಮುಖ ಆರೋಪಿಯಾಗಿದ್ದಂತ ಬತುಲ್ ಕಿಲ್ಲೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. 2021ರ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬತುಲ್ ಸ್ಪರ್ಧಿಸಿದ್ದರು. ಇದೇ ಬತುಲ್ ಪತಿ ಫಾರೂಕ್ ಮಕ್ಕಳ ಆಹಾರವನ್ನು ಅಕ್ರಮವಾಗಿ ತನ್ನ ಗೋದಾಮಿನಲ್ಲಿ ಸಂಗ್ರಹಿಸಿದ್ದರು. ಅಧಿಕಾರಿಗಳು ದಾಳಿ ನಡೆಸಿದಂತ ವೇಳೆಯಲ್ಲಿ ಅಕ್ರಮವಾಗಿ ಮಕ್ಕಳ ಆಹಾರ ಸಂಗ್ರಹ ಮಾಡಿದ್ದು ಬೆಳಕಿಗೆ ಬಂದಿತ್ತು. ಕಳೆದ ವಾರ ನಡೆದಿದ್ದಂತ ರೈಡ್ ನ ಬಳಿಕ ಹುಬ್ಬಳ್ಳಿಯಿಂದ ಕಾಂಗ್ರೆಸ್ ನಾಯಕಿ ಬತುಲ್ ಪರಾರಿಯಾಗಿದ್ದರು. ಬತುಲ್ ಪತಿ ಫಾರೂಕ್ ಸೇರಿದಂತೆ ಮೂವರ ವಿರುದ್ಧ ಕೇಸ್ ದಾಖಲಾಗಿತ್ತು. ಇದೀಗ ಮಕ್ಕಳ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದಂತ ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಅಧ್ಯಕ್ಷ ಅಲ್ತಫ್ ಹಳ್ಳೂರು ಆದೇಶ ಹೊರಡಿಸಿದ್ದಾರೆ. https://kannadanewsnow.com/kannada/it-is-not-right-to-try-to-divide-bengaluru-by-vijayendra/ https://kannadanewsnow.com/kannada/shimoga-temporary-stoppage-of-trains-continues-at-arasalu-kunsi/
ಬೆಂಗಳೂರು: ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರಿಸಲಾಗಿದೆ. 1. ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು 24.02.2025 ರಿಂದ 23.08.2025 ರವರೆಗೆ ಜಾರಿಯಾಗುವಂತೆ ಮುಂದುವರಿಸಲಾಗಿದೆ. 2. ರೈಲು ಸಂಖ್ಯೆ 16206/16205 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ಮತ್ತು ಕುಂಸಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು 24.02.2025 ರಿಂದ 23.08.2025 ರವರೆಗೆ ಜಾರಿಯಾಗುವಂತೆ ಮುಂದುವರಿಸಲಾಗಿದೆ. https://kannadanewsnow.com/kannada/all-accused-arrested-for-gang-raping-woman-in-bengaluru/ https://kannadanewsnow.com/kannada/it-is-not-right-to-try-to-divide-bengaluru-by-vijayendra/
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು…
ಬೆಂಗಳೂರು: ಗ್ರೇಟರ್ ಬೆಂಗಳೂರು ರಚಿಸುವ ಮೂಲಕ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಖಂಡಿತ ಸರಿಯಲ್ಲ ಎಂಬುದು ಎಲ್ಲರ ಒಮ್ಮತದ ಅಭಿಪ್ರಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದ್ದಾರೆ. ಈ ತೀರ್ಮಾನದ ಕುರಿತ ಸಾಧಕ- ಬಾಧಕಗಳ ವಿಷಯದಲ್ಲಿ ನಗರದ ಪ್ರಮುಖರ ಜೊತೆ ಚರ್ಚೆ ಮಾಡಿದ್ದೇವೆ ಎಂದರು. ಬೆಂಗಳೂರನ್ನು ಒಡೆಯುವುದು ನಗರದ ಅಭಿವೃದ್ಧಿಯ ದೃಷ್ಟಿಯಿಂದಲೂ ಒಳ್ಳೆಯದಲ್ಲ ಎಂದ ಅವರು, ಯಾವುದೇ ಕಾರಣಕ್ಕೆ ಇದಕ್ಕೆ ಅವಕಾಶ ಕೊಡಬಾರದು ಎಂದು ಸಭೆಯಲ್ಲಿ ಚರ್ಚೆ ಆಗಿದೆ ಎಂದು ವಿವರಿಸಿದರು. ಮಾರ್ಚ್ 3ರಿಂದ ಅಧಿವೇಶನ ಆರಂಭ ಆಗಲಿದೆ. ಬಜೆಟ್ ಮಂಡನೆ ಆಗಲಿದೆ. ಸದನದಲ್ಲಿ ಯಾವ ವಿಚಾರ ಕೈಗೆತ್ತಿಕೊಳ್ಳಬೇಕು, ಯಾವ ವಿಷಯಗಳನ್ನು ಚರ್ಚಿಸಬೇಕೆಂಬ ನಿಟ್ಟಿನಲ್ಲಿ ಕೂಡ ನಮ್ಮೆಲ್ಲ ಶಾಸಕರು, ವಿಪಕ್ಷ ನಾಯಕರು ಚರ್ಚೆ ಮಾಡಿದ್ದೇವೆ ಎಂದು…
ಶಿವಮೊಗ್ಗ: ಜಿಲ್ಲೆಯ ಸಾಗರದ ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ನಡೆಯಿತು. ಇಂದಿನ ಅಧ್ಯಕ್ಷೀಯ ಚುನಾವಣೆಯಲ್ಲಿ ವಕೀಲ ಗಿರೀಶ್ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲರ ಸಂಘಕ್ಕೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರ ಹುದ್ದೆಗೆ ರವೀಶ್ ಕುಮಾರ್.ಡಿ, ಹೆಚ್.ಎನ್ ದಿವಾಕರ್ ಹಾಗೂ ಬಿ.ಗಿರೀಶ್ ಗೌಡ ಸ್ಪರ್ಧಿಸಿದ್ದರು. ಬಿ.ಗಿರೀಶ್ ಗೌಡ 87 ಮತಗಳನ್ನು ಪಡೆಯುವ ಮೂಲಕ ಪ್ರತಿ ಸ್ಪರ್ದಿ ರವೀಶ್ ಕುಮಾರ್.ಡಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೂ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಕುಮಾರ್.ಡಿ, ವಾಸು.ಬಿ ಹಾಗೂ ಶೇಖರಪ್ಪ ಕಣದಲ್ಲಿದ್ದರು. ಶೇಖರಪ್ಪ ಅವರು 83 ಮತಗಳನ್ನು ಗಳಿಸುವ ಮೂಲಕ ಸತೀಶ್ ಕುಮಾರ್.ಡಿ ವಿರುದ್ಧ ಗೆಲುವು ಸಾಧಿಸಿದರು. ಖಜಾಂಚಿ ಸ್ಥಾನಕ್ಕೆ ನಡೆದಂತ ಚುನಾವಣೆಯಲ್ಲಿ ಪರಿಮಳ.ಎ ಅವರು 90 ಮತಗಳನ್ನು ಪಡೆದು, ಪ್ರತಿ ಸ್ಪರ್ಧಿ ಪ್ರಕಾಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಹೀಗಿದೆ ಸಾಗರ ವಕೀಲರ ಸಂಘದ ಚುನಾವಣೆಯ ಫಲಿತಾಂಶದ ಅಂಕಿ ಅಂಶಗಳ ವಿವರ ಅಧ್ಯಕ್ಷೀಯ ಚುನಾವಣೆ 1.ಎಂ. ಬಿ. ಗಿರೀಶ ಗೌಡ,…













