Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಖ್ಯಾತ ಹಿರಿಯ ನಟಿ ಮತ್ತು ಮಾಜಿ ರಾಜಕಾರಣಿ ಜಯಪ್ರದಾ ಅವರು ಇತ್ತೀಚೆಗೆ ತಮ್ಮ ಹಿರಿಯ ಸಹೋದರ ರಾಜಾ ಬಾಬು ಅವರನ್ನು ಕಳೆದುಕೊಂಡಿದ್ದಾರೆ. ಈ ಮೂಲಕ ಹಿರಿಯ ನಟಿ ಜಯಪ್ರದಾ ಅವರ ಸಹೋದರ ರಾಜಾ ಬಾಬು ಅವರು ಇನ್ನಿಲ್ಲವಾಗಿದ್ದಾರೆ. ಹಿರಿಯ ನಟಿ ಜಯಪ್ರದಾ ಅವರ ಹಿರಿಯ ಸಹೋದರ ರಾಜಾ ಬಾಬು ಅವರು ಫೆಬ್ರವರಿ 27, 2025 ರಂದು ಹೈದರಾಬಾದ್ನಲ್ಲಿ ನಿಧನರಾದರು. ಈ ಸುದ್ದಿಯನ್ನು ಸ್ವತಃ ಜಯಪ್ರದಾ ಭಾವನಾತ್ಮಕ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಹಂಚಿಕೊಂಡಿದ್ದಾರೆ. ತಮ್ಮ ಸಹೋದರನ ನಿಧನಕ್ಕೆ ಜಯಪ್ರದಾ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ಹೈದರಾಬಾದ್ನಲ್ಲಿ ಮಧ್ಯಾಹ್ನ 3:26ಕ್ಕೆ ನಿಧನರಾಗಿರುವುದಾಗಿ ತಿಳಿಸಿದ್ದಾರೆ. ಅವರು ತಮ್ಮ ಅನುಯಾಯಿಗಳು ಮತ್ತು ಹಿತೈಷಿಗಳನ್ನು ತಮ್ಮ ಪ್ರಾರ್ಥನೆಯಲ್ಲಿ ಇರಿಸಿಕೊಳ್ಳುವಂತೆ ವಿನಂತಿಸಿದರು. ಅವರ ಪೋಸ್ಟ್ ತ್ವರಿತವಾಗಿ ಗಮನ ಸೆಳೆಯಿತು, ಮತ್ತು ಅನೇಕ ಜನರು ಕಾಮೆಂಟ್ ಗಳಲ್ಲಿ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ. ರಾಜಾ ಬಾಬು ಸಾರ್ವಜನಿಕ ದೃಷ್ಟಿಯಲ್ಲಿ ವ್ಯಾಪಕವಾಗಿ ಪರಿಚಿತರಾಗಿರಲಿಲ್ಲ, ಆದರೆ ಅವರು ಜಯಪ್ರದಾ ಅವರ ಜೀವನದ ಪ್ರಮುಖ ಭಾಗವಾಗಿದ್ದರು.…
ಬೆಂಗಳೂರು: ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿಯೇ ಖಂಡಿಸಿದ್ದವು. ಈ ಬೆನ್ನಲ್ಲೇ ಇಂತಹ ಘಟನೆ ಖಂಡಿಸಿ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದಾವೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದೆ. ಅಲ್ಲದೇ ಕರ್ನಾಟಕದ ಬಸ್ ಗಳಿಗೆ ಮಸಿ ಕೂಡ ಬಳಿಯಲಾಗಿದೆ. ಈ ಎಲ್ಲವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದಾವೆ. ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲಿನ ಹಲ್ಲೆ, ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಖಂಡಿಸಿ ಮಾರ್ಚ್.22ರಂದು ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಘೋಷಿಸಿವೆ. ಈ ಸಂಬಂಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮಹತ್ವದ ಸಭೆ ಕೂಡ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಫಿಕ್ಸ್ ಆದಂತೆ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಬೇಕಿದೆ. https://kannadanewsnow.com/kannada/breaking-brutal-murder-in-chikkaballapur-miscreants-kill-bar-supplier-over-petty-issue/…
ಉತ್ತರಾಖಂಡ: ಇಲ್ಲಿನ ಬದರೀನಾಥದ ಬಳಿಯಲ್ಲಿ ಭಾರೀ ಹಿಮಪಾತ ಉಂಟಾಗಿದೆ. ಈ ಪರಿಣಾಮ ಹಿಮದಡಿ 57ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಅವರ ರಕ್ಷಣೆಗಾಗಿ ವಿಪತ್ತು ನಿರ್ವಹಣಾ ತಂಡದಿಂದ ಕಾರ್ಯಾಚರಣೆ ಮುಂದುವರೆದಿದೆ. ಉತ್ತರಾಖಂಡದ ಬದರೀನಾಥ್ ಧಾಮದಲ್ಲಿ ಭಾರೀ ಹಿಮಪಾತ ಸಂಭವಿಸಿದ ನಂತರ 57 ಕ್ಕೂ ಹೆಚ್ಚು ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರಾಜ್ಯದ ಮಾನಾದಿಂದ ಘಸ್ಟೋಲಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಸುಮಾರು 57 ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿದ್ದರು. ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಲು ಸ್ಥಳಕ್ಕೆ ಧಾವಿಸಿ 16 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಿವೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ವಿನೋದ್ ಸುಮನ್ ಮಾಹಿತಿ ನೀಡಿದರು. ಕಳೆದ 48 ಗಂಟೆಗಳಲ್ಲಿ ಈ ಪ್ರದೇಶದಲ್ಲಿ ಭಾರಿ ಹಿಮಪಾತವಾದ ನಂತರ ಹಿಮನದಿ ನದಿಗೆ ಕುಸಿದಿದೆ. ಹಿಮನದಿಯ ಬಳಿಯ ನಿರ್ಮಾಣ ಸ್ಥಳಗಳು ಗಮನಾರ್ಹ ಹಾನಿಯನ್ನು ಅನುಭವಿಸಿವೆ. https://kannadanewsnow.com/kannada/b-y-vijayendra-meets-cm-siddaramaiah-seeks-more-funds-for-bengalurus-development/ https://kannadanewsnow.com/kannada/breaking-brutal-murder-in-chikkaballapur-miscreants-kill-bar-supplier-over-petty-issue/
ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕೆಂದು ಹಾಗೂ ಬಜೆಟ್ನಲ್ಲಿ 6ರಿಂದ 8 ಸಾವಿರ ಕೋಟಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ ನೀಡಿ ಹೆಚ್ಚು ಒತ್ತು ಕೊಡಬೇಕೆಂದು ಕೋರಿರುವುದಾಗಿ ವಿವರಿಸಿದರು. ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಅವರು, ಮೆಟ್ರೋ ಪ್ರಯಾಣ ದರ ಜಾಸ್ತಿ ಆಗಿದ್ದು ಅದನ್ನು ಕಡಿಮೆ ಮಾಡುವ ಕುರಿತಂತೆ ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು. ಅಭಿವೃದ್ಧಿಗೆ ಅನುದಾನ ಮಾತ್ರವಲ್ಲದೆ, ಮೊದಲ ಬಾರಿ ಗೆದ್ದ ಶಾಸಕರಿಗೆ ಅನುದಾನ ಕೊಡುವಂತೆ ಮನವಿಯಲ್ಲಿ ತಿಳಿಸಲಾಗಿದೆ ಎಂದರು. ಹಿಂದೆ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಪ್ರತಿಸಾರಿಯೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಸಂಬಂಧಿಸಿ ಬಿಬಿಎಂಪಿಗೆ…
ಬೆಂಗಳೂರು: ರಾಜ್ಯ ಸರ್ಕಾರದ ಸಭೆ, ಸಮಾರಂಭಗಳ ಆಯೋಜನೆಯಲ್ಲಿ ಕಡ್ಡಾಯವಾಗಿ ಶಿಷ್ಟಾಚರಗಳನ್ನು ಪಾಲಿಸಬೇಕು. ಒಂದು ವೇಳೆ ಪಾಲಿಸದೇ ಇದ್ದರೇ ಅಂತಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಆದೇಶ ಹೊರಡಿಸಿದ್ದು, ಅದರಲ್ಲಿ ಸರ್ಕಾರದ ಸಭೆ ಸಮಾರಂಭಗಳಿಗೆ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಅನುಸರಿಸಬೇಕಾದ ಶಿಷ್ಠಚಾರದ ಕುರಿತು ಸಮಗ್ರವಾದ ಮಾಹಿತಿಯನ್ನು, ಸರ್ಕಾರದ ಉಲ್ಲೇಖಿತ ಸುತ್ತೋಲೆಗಳನ್ವಯ ಹೊರಡಿಸಿದ್ದು ಇರುತ್ತದೆ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಕಡ್ಡಾಯವಾಗಿ ಸದರಿ ಮಾನದಂಡಗಳನ್ನು ಅನುಸರಿಸಲು ಈಗಾಗಲೇ ಆಯುಕ್ತಾಲಯ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಇರುತ್ತದೆ. ಆದರೂ ಸಹ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಷ್ಟಾಚಾರವನ್ನು ಸಮರ್ಪಕವಾಗಿ ಪಾಲನೇ ಮಾಡದೇ ಇರುವ ಕುರಿತು ಪ್ರಕರಣಗಳು ಹಕ್ಕು ಬಾಧ್ಯತಾ ಸಮಿತಿಯಲ್ಲಿ ದಾಖಲಾಗುತ್ತಿವೆ. ಸರ್ಕಾರವು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲು ಅವಕಾಶಗಳಿರುತ್ತವೆ ಎಂದು ತಿಳಿಸಿದ್ದಾರೆ.…
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಮೂಲಕ 1.5 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತಿರುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಹೊಸ ಪ್ರವಾಸೋದ್ಯಮ ನೀತಿಯ ಅಳವಡಿಕೆ ಮೂಲಕ ಮುಂದಿನ 5 ವರ್ಷಗಳಲ್ಲಿ ₹8,000 ಕೋಟಿ ನೇರ ಹೂಡಿಕೆಯ ಆಕರ್ಷಣೆ ಹಾಗೂ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ಪ್ರವಾಸೋದ್ಯಮ ನೀತಿಯ ಅನುಷ್ಠಾನಕ್ಕೆ ₹1,350 ಕೋಟಿ ಬಜೆಟ್ ಅನುದಾನವನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1895146889353535531 https://kannadanewsnow.com/kannada/woman-injured-as-bmtc-bus-runs-over-her-in-bengaluru/ https://kannadanewsnow.com/kannada/state-government-employees-note-heres-all-you-need-to-know-about-the-registration-for-the-computer-literacy-test/
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಂತ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ರಸ್ತೆ ದಾಟುತ್ತಿದ್ದಂತ ಮಹಿಳೆಯೊಬ್ಬರ ಮೇಲೆಯೇ ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯನ್ನು ಲಿಂಗಮ್ಮ ಎಂಬುದಾಗಿ ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವಂತ ಲಿಂಗಮ್ಮ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/let-a-thousand-people-oppose-i-trust-you-dcm-d-k-shivakumar/ https://kannadanewsnow.com/kannada/vehicle-collides-with-pedestrians-in-israel-several-injured-suspected-of-terrorist-attack/
ಬೆಂಗಳೂರು: ನನ್ನ ಕ್ಷೇತ್ರದಲ್ಲಿ ನನಗೆ ಮತ ಹಾಕಿರುವವರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಹೆಚ್ಚಾಗಿದ್ದಾರೆ. ನನ್ನ ಕ್ಷೇತ್ರದಲ್ಲಿ ಶೇಕಡಾ 99 ರಷ್ಟು ಬ್ರಾಹ್ಮಣ ಸಮುದಾಯದವರು ನನಗೆ ಮತ ಹಾಕುತ್ತಾರೆ. ಹೀಗಾಗಿ ಬ್ರಾಹ್ಮಣರೆಲ್ಲರೂ ಬಿಜೆಪಿಗೇ ಮತ ಹಾಕುತ್ತಾರೆ ಎಂದು ಹೇಳಲು ಸಾಧ್ಯವೇ? ನಾನು ಎಂದಿಗೂ ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ. ನೀತಿ ಮೇಲೆ ರಾಜಕಾರಣ ಮಾಡುತ್ತೇನೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. “ಕಾಂಗ್ರೆಸ್ ಪಕ್ಷ ಎಂದರೆ ಎಲ್ಲಾ ಧರ್ಮಗಳ ಸಮಾಗಮ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವುದು ನಮ್ಮ ಪಕ್ಷದ ಸಿದ್ಧಾಂತ. ನಾವು ಅಧಿಕಾರ, ಸ್ಥಾನಮಾನ ನೀಡುವಾಗ ಎಲ್ಲರನ್ನು ಪರಿಗಣಿಸಿಯೇ ನೀಡುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಹಾಗೆಂದು ನಾವು ಧಾರ್ಮಿಕ ದತ್ತಿ ಇಲಾಖೆ ಮುಚ್ಚಿದ್ದೇವೆಯೇ? ಬಿಜೆಪಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಬೋರ್ಡ್ ಮುಚ್ಚಲಿಲ್ಲ ಯಾಕೆ? ಅವರು ಬೇರೆಯವರಿಗೆ ಟಿಕೆಟ್ ನೀಡದೆ ಇರಬಹುದು.…
ಪೂರ್ವಜರ ಆರಾಧನೆಯನ್ನು ಅತ್ಯಂತ ವಿಶೇಷವಾದ ಆರಾಧನೆ ಎಂದು ಪರಿಗಣಿಸಲಾಗಿದೆ. ಕುಲದೇವತೆಯ ಕೃಪೆಯಿಂದಲೇ ನಮ್ಮ ಜೀವನದಲ್ಲಿ ಪ್ರತಿಯೊಂದು ಶುಭ ಕಾರ್ಯಗಳು ನಡೆಯುತ್ತವೆ ಎಂಬುದು ಹಲವರ ಅನುಭವಕ್ಕೆ ಬಂದಿರುವ ಸತ್ಯ. ಆದುದರಿಂದಲೇ ಇಂದಿನ ಕಾಲದಲ್ಲಿ ಕುಲದೇವತಾ ಆರಾಧನೆಯು ಬಹಳ ವಿಶೇಷವಾಗಿದೆ. ಅಂತಹ ಕುಲದೇವತೆಗೆ ನಾವು ಮಾಡುವ ಪ್ರತಿಯೊಂದು ರೀತಿಯ ಪೂಜೆಯು ವಿಭಿನ್ನ ಪ್ರಯೋಜನಗಳನ್ನು ಹೊಂದಿದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಯಶಸ್ಸನ್ನು ಸಾಧಿಸಲು ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಕುಲದೈವವನ್ನು ಯೋಚಿಸಿ ಬೆಳಗಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಡೆತಡೆಗಳನ್ನು…
ಬೆಂಗಳೂರು: “ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ ನಿಲುವಿನ ಬಗ್ಗೆ ಚರ್ಚೆಯಾಗುತ್ತಿದೆಯಲ್ಲಾ ಎಂದು ಕೇಳಿದಾಗ, “ನಾನು ನೊಣವಿನಕೆರೆ ಮಠಕ್ಕೆ ಹೋಗುತ್ತೇನೆ. ಅದಕ್ಕೆ ನಮ್ಮವರು, ‘ನೀವು ನಮ್ಮ ಮಠಕ್ಕೆ ಬರುವುದಿಲ್ಲ, ಅಲ್ಲಿಗೆ ಹೋಗುತ್ತೀರಲ್ಲಾ’ ಎಂದು ಕೇಳುತ್ತಾರೆ. ನನ್ನ ನಂಬಿಕೆ ಇದ್ದ ಕಡೆ ನಾನು ಹೋಗುತ್ತೇನೆ. ನನಗೆ ಎಲ್ಲಿ ಒಳ್ಳೆಯದಾಗುತ್ತದೆ ಎಂದು ಅನಿಸುತ್ತದೆಯೋ ಅಲ್ಲಿಗೆ ಹೋಗುತ್ತೇನೆ. ನನ್ನ ನಂಬಿಕೆ ನನ್ನದು” ಎಂದು ಹೇಳಿದರು. “ನನ್ನ ಕ್ಷೇತ್ರದಲ್ಲಿ ನನಗೆ ಮತ ಹಾಕಿರುವವರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಹೆಚ್ಚಾಗಿದ್ದಾರೆ. ನನ್ನ ಕ್ಷೇತ್ರದಲ್ಲಿ ಶೇಕಡಾ 99 ರಷ್ಟು ಬ್ರಾಹ್ಮಣ ಸಮುದಾಯದವರು ನನಗೆ ಮತ ಹಾಕುತ್ತಾರೆ. ಹೀಗಾಗಿ ಬ್ರಾಹ್ಮಣರೆಲ್ಲರೂ ಬಿಜೆಪಿಗೇ ಮತ ಹಾಕುತ್ತಾರೆ ಎಂದು ಹೇಳಲು…









