Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಭರವಸೆ ನೀಡಿದರು. ಗಮನ ಸೆಳೆಯುವ ಸೂಚನೆ ಮೇಲೆ ಮಾತನಾಡಿದ ಶಾಸಕ ಜಗದೀಶ್ ಗುಡಗುಂಟಿ ಅವರು, ಜಮಖಂಡಿ, ಮುಧೋಳ ತಾಲೂಕಿನ 2035 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಯ ಮೊದಲ ಹಂತ ಆರಂಭಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “31 ಚೆಕ್ ಡ್ಯಾಂ, 4 ಕೆರೆಗಳನ್ನು ತುಂಬಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಗೆ ₹214 ಕೋಟಿ ರೂಪಾಯಿ ಅನುಮೋದನೆ ನೀಡಿದ್ದೇವೆ. ವೆಂಕಟೇಶ್ವರ ಏತ ನೀರಾವರಿ ಯೋಜನೆ ಮೂಲಕ ಸುಮಾರು 1648 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸಲಾಗುತ್ತಿದೆ. 387 ಎಕರೆ ಅಚ್ಚುಕಟ್ಟು ಪ್ರದೇಶ ಮಾತ್ರ ಬಾಕಿ ಉಳಿದಿದೆ. ಇದಕ್ಕೆ ಅಗತ್ಯವಾದ ಅಚ್ಚುಕಟ್ಟು ಪ್ರದೇಶಗಳನ್ನು ಉಲ್ಲಾಳ, ಹುಣಸಿಕಟ್ಟಿ ಮತ್ತು ಬಿಎಂ ಗುದ್ದಿ ಗ್ರಾಮಗಳಲ್ಲಿ ಗುರುತಿಸಿ, ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು…
ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯ ವಲಯದಲ್ಲಿನ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ.ಎನ್.ಜಿ ಹಾಗೂ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್.ಈ ಅವರ ಅಮಾನತು ಆದೇಶವನ್ನು ತೆರವುಗೊಳಿಸಲಾಗಿದೆ. ಈ ಕುರಿತಂತೆ ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದು, ಸಾಗರ ವಲಯದ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಸುಂದರಮೂರ್ತಿ ಎನ್.ಜಿ ಹಾಗೂ ಗಸ್ತು ಅರಣ್ಯ ಪಾಲಕ ಉಳ್ಳೂರು ಗಸ್ತು(ಪ್ರಭಾರ) ಇವರನ್ನು ಕರ್ತವ್ಯ ನಿರ್ಲಕ್ಷತನ ಹಾಗೂ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತ್ತು ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಈ ಮೂವರು ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ಅಮಾನತು ಆದೇಶವನ್ನು ಹಿಂಪಡೆದು, ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ (ವರ್ಗೀಕರಣ, ನಿಯಂತ್ರಣ, ಅಪೀಲು) 1957ರ ನಿಯಮ 10(5) (ಸಿ) ಅನ್ವಯ ಸೇವೆಗೆ ಪುನರ್ ನೇಮಕ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ…
ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಸೋಮವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿ ಕೆ ಶಿವಕುಮಾರ್ ಅವರು, “ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರನ್ನು ಅಭಿನಂದಿಸುತ್ತೇನೆ. ವಿರೋಧ ಪಕ್ಷಗಳ ನಾಯಕರು ತಮ್ಮದೇ ಆದ ಅಭಿಪ್ರಾಯ ತಿಳಿಸಿದ್ದಾರೆ. ಅವರು ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ. ಅವರಲ್ಲಿ ಕೆಲವರಿಗೆ ರಾಜಕೀಯ ಇಚ್ಚಾಶಕ್ತಿಯೂ ಇದೆ. ಅದರಲ್ಲಿ ತಪ್ಪಿಲ್ಲ. ಈಗಿರುವ ವ್ಯವಸ್ಥೆಯಲ್ಲಿಯೇ ಬೆಂಗಳೂರು ನಗರವನ್ನು ಮುನ್ನಡೆಸುವುದು ಅಸಾಧ್ಯ ಎಂದು ಅವರು ಆತ್ಮಸಾಕ್ಷಿ ಮೂಲಕ ಒಪ್ಪಿದ್ದಾರೆ. ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಆಡಳಿತಕ್ಕೆ ದೊಡ್ಡ ಸಮಸ್ಯೆ ಎಂಬ…
ಬೆಂಗಳೂರು: ಮಾರ್ಚ್, ಏಪ್ರಿಲ್ 2025ರಲ್ಲಿ ನಡೆಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು ವಿತರಣೆ ಮಾಡುತ್ತಿರುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಸುತ್ತೋಲೆಯಲ್ಲಿ ಮಾಹಿತಿ ನೀಡಿದ್ದು, 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ: 10.03.2025 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ನಲ್ಲಿ ಅಪ್ ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು. 1. ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ, ಡೌನ್ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆಗೆ ಸರಿ ಹೊಂದುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳುವುದು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆಯೊಂದಿಗೆ / ದಾಖಲೆಗಳೊಂದಿಗೆ ಕೂಡಲೇ ಮಂಡಲಿಗೆ ಕಳುಹಿಸಿಕೊಡುವುದು. 2. ಒಂದು ವೇಳೆ…
ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ ಯಾವುದೇ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುವಂತೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆರ್ ಟಿ ಓ ಗಳಿಗೆ ಖಡರ್ ವಾರ್ನಿಂಗ್ ನೀಡಿದ್ದಾರೆ. ಇಂದು ಸಾರಿಗೆ ಸಚಿವರು ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ದಿನಾಂಕ: 05-03-2025 ರಂದು ಬಿತ್ತರವಾಗಿದ್ದ ದೃಶ್ಯಾವಳಿಯಲ್ಲಿ ವಾಣಿಶ್ರೀ ಎಂ.ಎನ್ ಮೋಟಾರು ವಾಹನ ನಿರೀಕ್ಷಕರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂಬ ಸುದ್ದಿಗೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದರು. ಆ ಸಂಬಂಧ ತನಿಖೆ ನಡೆಸಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಡ್ಯ ಇವರು ವಾಣಿಶ್ರೀ ಎಂ.ಎನ್. ಮೋಟಾರು ವಾಹನ ನಿರೀಕ್ಷಕರು ಇವರಿಗೆ ಕಾರಣ ಕೇಳಿ ನೋಟಿಸ್ ಅನ್ನು ಜಾರಿ ಮಾಡಿರುತ್ತಾರೆ. ಸದರಿ ನೌಕರರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಯು ವಾಣಿಶ್ರೀ ಎಂ.ಎನ್ ಮೋಟಾರು ವಾಹನ ನಿರೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಮಂಡ್ಯ ಇವರ ವಿರುದ್ಧದ ಇಲಾಖಾ ವಿಚಾರಣೆಯನ್ನು…
ಲಕ್ಷ್ಮೀ ದೇವಿಯ ಅನುಗ್ರಹವನ್ನು ಸಂಪೂರ್ಣವಾಗಿ ಪಡೆದವರಿಗೆ ಮಾತ್ರ ಸಂಪತ್ತಿನ ಶುಭವು ದೊರೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸಂಪತ್ತಿನ ಶಕುನವಿದ್ದಾಗ ಮಾತ್ರ ಮನೆ ಎಲ್ಲಾ ರೀತಿಯ ಸಂಪತ್ತಿನಿಂದ ತುಂಬಿರುತ್ತದೆ. ಆ ಮೂಲಕ ನಾವು ಸಾರ್ಥಕ ಜೀವನವನ್ನು ಹೊಂದಬಹುದು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಅಂತಹ ಸಂಪತ್ತನ್ನು ಪಡೆಯಲು ಸರಳವಾದ ಪರಿಹಾರವನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,…
ಬೆಂಗಳೂರು: ಮಾಜಿ ಸಚಿವರಾದ ಬಿ.ಸುಬ್ಬಯ್ಯ ಶೆಟ್ಟಿ ಅವರ ನಿಧನರಾಗಿದ್ದಾರೆ. ಈ ಮೂಲಕ ಮಾಜಿ ಸಚಿವ ಬಿ.ಸುಬ್ಬಯ್ಯ ಶೆಟ್ಟಿ ಇನ್ನಿಲ್ಲವಾಗಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾಜಿ ಸಚಿವ ಬಿ.ಸುಬ್ಬಯ್ಯ ಶೆಟ್ಟಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಬದ್ಧತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿಗಳನ್ನು ರಾಜಕೀಯ ಜೀವನದುದ್ದಕ್ಕೂ ವ್ರತದಂತೆ ಪಾಲಿಸಿಕೊಂಡು ಬಂದಿದ್ದ ಸುಬ್ಬಯ್ಯ ಶೆಟ್ಟಿಯವರು ಅಪರೂಪದ ಮುತ್ಸದ್ದಿ ರಾಜಕಾರಣಿ ಎಂದಿದ್ದಾರೆ. ದೇವರಾಜ ಅರಸು ಅವರ ಸಂಪುಟದಲ್ಲಿ ಭೂ ಸುಧಾರಣಾ ಸಚಿವರಾಗಿದ್ದ ಸುಬ್ಬಯ್ಯ ಶೆಟ್ಟಿಯವರು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ ಕಾಯ್ದೆ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಕ್ಕೆ ಬರಲು ಕಾರಣಿಕರ್ತರು. ಸುಬ್ಬಯ್ಯ ಶೆಟ್ಟಿಯವರನ್ನು ಕಳೆದುಕೊಂಡ ಪತ್ನಿ, ಮಕ್ಕಳು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. https://twitter.com/siddaramaiah/status/1899080884268994780 https://kannadanewsnow.com/kannada/tata-capital-finance-fined-for-not-stopping-loan-recovery-despite-full-repayment/ https://kannadanewsnow.com/kannada/it-is-mandatory-for-doctors-to-perform-duties-in-government-hospitals-from-9-am-to-4-pm-minister-dr-sharanprakash-patil/
ಧಾರವಾಡ: ಪೂರ್ತಿ ಮರುಪಾವತಿ ಮಾಡಿದರೂ ಸಾಲ ವಸೂಲಾತಿ ನಿಲ್ಲಿಸದ ಧಾರವಾಡದ ಟಾಟಾ ಕ್ಯಾಪಿಟಲ್ ಫೈನಾನ್ಸ್ಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಆಯೋಗ ಆದೇಶ ಮಾಡಿದೆ. ಧಾರವಾಡ ದಯಲಿಗಾರ ಓಣಿ ನಿವಾಸಿ ಅಫ್ರೀನ್ ದಫೇದಾರ ರವರು ದ್ವೀಚಕ್ರ ವಾಹನ ಖರೀದಿಸಲು ಧಾರವಾಡದ ಟಾಟಾಕ್ಯಾಪಿಟಲ್ ಫೈನಾನ್ಸ್ ನಿಂದ ದಿ:21/09/2019ರಂದು ರೂ.70,635 ಸಾಲ ಪಡೆದಿದ್ದರು. ಸಾಲ ಮರುಪಾವತಿ ನಿಯಮದಂತೆ ತಿಂಗಳಿಗೆ ರೂ.2,571 ರಂತೆ ಅವರು 42 ಕಂತುಗಳಲ್ಲಿ ದಿ:03/09/2019 ರಿಂದ ದಿ:03/04/2024ರವರೆಗೆ ಸಾಲ ಮರುಪಾವತಿ ಮಾಡಿದ್ದರು. ಪೂರ್ತಿ ಸಾಲ ಮರುಪಾವತಿಯಾಗಿದೆ ಮತ್ತು ದೂರುದಾರರಿಂದ ಯಾವುದೇ ಹಣ ಬರುವುದು ಬಾಕಿ ಇಲ್ಲಅಂತಾ ದಿ:17/04/2023ರಂದು ಎದುರುದಾರ ಫೈನಾನ್ಸ್ ನವರು ಆರ್.ಟಿ.ಓ ಕಚೇರಿಗೆ ಮಾಹಿತಿ ನೀಡಿದ್ದರು. ಪೂರ್ತಿ ಸಾಲ ಮರುಪಾವತಿ ಆಗಿದ್ದರೂ ದಿ:17/04/2023ರ ನಂತರ ದಿ:08/10/2024ರವರೆಗೆ ದೂರುದಾರರ ಕೆನರಾ ಬ್ಯಾಂಕಿನ ಎಸ್.ಬಿ. ಖಾತೆಯಿಂದ ಪ್ರತಿ ತಿಂಗಳು ಈ.ಸಿ.ಎಸ್. ಮರುಪಾವತಿ ಆಗುತ್ತಿತ್ತು. ಅದನ್ನು ನಿಲ್ಲಿಸುವಂತೆ ಹಲವುಬಾರಿ ದೂರುದಾರರು ಎದುರುದಾರರಿಗೆ ವಿನಂತಿಸಿದಳು. ವಕೀಲರ ಮೂಲಕ ಕಾನೂನು ಬದ್ಧ ನೋಟಿಸನ್ನು ಕೊಡಿಸಿದಳು. ಆದರೂ…
ಆಸ್ಟ್ರೇಲಿಯಾ: ಮಕ್ಕಳು ಸತ್ತ ಹಾವನ್ನೇ ಸ್ಕಿಪ್ಪಿಂಗ್ ಆಟಕ್ಕೆ ಹಗ್ಗವಾಗಿ ಬಳಸಿರುವ ಮನಕಲಕುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸೆಂಟ್ರಲ್ ಕ್ವೀನ್ಸ್ಲ್ಯಾಂಡ್ನ ರಾಕ್ಹ್ಯಾಂಪ್ಟನ್ನಿಂದ ಸುಮಾರು ಎರಡು ಗಂಟೆಗಳ ಪ್ರಯಾಣದ ದೂರದಲ್ಲಿರುವ ಆಸ್ಟ್ರೇಲಿಯಾದ ವೂರಬಿಂಡಾದಿಂದ ಬಂದ ಈ ವಿಡಿಯೋದಲ್ಲಿ, ಸತ್ತ ಹಾವಿನ ಮೇಲೆ ಹಾರುತ್ತಿರುವಾಗ ಮಕ್ಕಳು ನಗುತ್ತಿರುವುದನ್ನು ವಯಸ್ಕರು ಮೇಲ್ವಿಚಾರಣೆ ಮಾಡುತ್ತಿರುವಂತೆ ಧ್ವನಿಸುತ್ತಿರುವುದನ್ನು ರೆಕಾರ್ಡ್ ಮಾಡಲಾಗಿದೆ. ಅದನ್ನು ನನಗೆ ತೋರಿಸಿ, ಅದು ಏನೆಂದು ನನಗೆ ತೋರಿಸಿ” ಎಂದು ಕ್ಯಾಮೆರಾ ಹಿಂದೆ ಇರುವ ವೀಡಿಯೊದಲ್ಲಿರುವ ಮಹಿಳೆ ಹೇಳುವುದನ್ನು ಕೇಳಿಸುತ್ತದೆ. ಮಕ್ಕಳು ಹಾರಿ ನಗುತ್ತಿದ್ದಂತೆ, ಹುಡುಗರಲ್ಲಿ ಒಬ್ಬರು ಅದು ಕಪ್ಪು ತಲೆಯ ಹೆಬ್ಬಾವು ಎಂದು ಹೇಳಿದರು. ಮಕ್ಕಳು ತಮ್ಮ ಸಂತೋಷಕ್ಕಾಗಿ ಬಳಸಲು ಪ್ರಾರಂಭಿಸುವ ಮೊದಲು ಹೆಬ್ಬಾವು ಸತ್ತಿದೆಯೇ ಎಂಬುದು ಸ್ಪಷ್ಟವಾಗಿಲ್ಲ. https://twitter.com/clowndownunder/status/1898892150513049705 ವೀಡಿಯೊ ವೈರಲ್ ಆಗಿ, ಸಾಮಾಜಿಕ ಮಾಧ್ಯಮದಲ್ಲಿ ನೂರಾರು ವೀಕ್ಷಣೆಗಳನ್ನು ಆಕರ್ಷಿಸುತ್ತಿದ್ದಂತೆ, ಪರಿಸರ, ಪ್ರವಾಸೋದ್ಯಮ, ವಿಜ್ಞಾನ ಮತ್ತು ನಾವೀನ್ಯತೆ ಇಲಾಖೆ ಎಚ್ಚರಿಕೆ ನೀಡಿದೆ. “ಈ ಅನುಚಿತ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಮತ್ತು ಘಟನೆಯ ಬಗ್ಗೆ…
ಧಾರವಾಡ : ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಒo-ಎo-ಏiಣ (ಮೊಬೈಲ್, ಟ್ರೈಪಡ್, ಮಯರಲೆಸ್ ಮೈಕ್, ಸೇರಿರುವ ಮೊಬೈಲ್ ಜರ್ನಲಿಸಂ ಕಿಟ್) ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಕೆಲವು ಷರತ್ತುಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ…














