Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) 1003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ 03-03-2025 ರಂದು ಪ್ರಾರಂಭವಾಗುತ್ತದೆ ಮತ್ತು 02-04-2025 ರಂದು ಕೊನೆಗೊಳ್ಳುತ್ತದೆ. ಅಭ್ಯರ್ಥಿಯು ಎಸ್ಇಸಿಆರ್ ವೆಬ್ಸೈಟ್, secr.indianrailways.gov.in/ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಹುದ್ದೆ ಹೆಸರು: ಎಸ್ಇಸಿಆರ್ ಅಪ್ರೆಂಟಿಸ್ ಆನ್ಲೈನ್ ಫಾರ್ಮ್ 2025 ಪೋಸ್ಟ್ ದಿನಾಂಕ: 06-03-2025 ಒಟ್ಟು ಹುದ್ದೆ: 1003 ಸಂಕ್ಷಿಪ್ತ ಮಾಹಿತಿ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಉದ್ಯೋಗ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಎಸ್ಇಸಿಆರ್ ನೇಮಕಾತಿ 2025 ಅಧಿಸೂಚನೆ ಅವಲೋಕನ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ನೇಮಕಾತಿ ಪ್ರಕ್ರಿಯೆ, ಅರ್ಹತೆ ಮತ್ತು ಅರ್ಜಿ…
ಬೆಂಗಳೂರು: ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್ಟಿಪಿಗಳ ಗುಣಮಟ್ಟದ ಬಗ್ಗೆ ಕೇಂದ್ರ ಸರ್ಕಾರ ಜಲ್ ಹಿ ಅಮೃತ್ ಯೋಜನೆ ಅಡಿಯಲ್ಲಿ ಶ್ಲಾಘಿಸಿದೆ. 23 ಎಸ್ಟಿಪಿಗಳಿಗೆ ಕ್ಲೀನ್ ವಾಟರ್ ಕ್ರೆಡಿಟ್ನ ಅಡಿಯಲ್ಲಿ 5 ಸ್ಟಾರ್ ರೇಟಿಂಗ್ ನೀಡಿದ್ದು ಪ್ರೋತ್ಸಾಹ ಧನವಾಗಿ 103 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರು ಜಲಮಂಡಳಿ ಮತ್ತೊಂದು ಹೆಗ್ಗಳಿಕೆ ಪಾತ್ರವಾಗಿದೆ. ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 1,450 ಎಂ.ಎಲ್.ಡಿ ಯಷ್ಟು ನೀರನ್ನು ಸಂಸ್ಕರಿಸಲಾಗುತ್ತದೆ. ಇದಕ್ಕಾಗಿ ನಗರದ ವಿವಿಧ ಭಾಗಗಳಲ್ಲಿ 34 ಎಸ್ಟಿಪಿಗಳನ್ನು ನಿರ್ಮಿಸಲಾಗಿದೆ. ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಏಷ್ಯಾ ಖಂಡದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಎಸ್ಟಿಪಿಗಳಿಂದ ಸಂಸ್ಕರಿಸಲಾಗುವ ನೀರನ್ನು ಬೆಂಗಳೂರು ಕೆರೆಗಳಿಗೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಕೆರೆಗಳಿಗೆ ತುಂಬಿಸಲಾಗುತ್ತಿದೆ. ಜಲ್ ಹಿ ಅಮೃತ್ ಯೋಜನೆಯ ಅಡಿಯಲ್ಲಿ ದೇಶದ ನಗರಗಳಲ್ಲಿನ ಎಸ್ಟಿಪಿಗಳ ಗುಣಮಟ್ಟ ಪರಿಶೀಲನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಅವಕಾಶ ನೀಡಿತ್ತು. ಉತ್ತಮ ಮಾನದಂಡಗಳನ್ನು ಅಳವಡಿಸಿಕೊಳ್ಳುವ…
ಬೆಂಗಳೂರು: ಮೈಸೂರು ಎಕ್ಸ್ಪ್ರೆಸ್ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು, ಅಪಘಾತಗಳ ಹಿನ್ನೆಲೆಯಲ್ಲಿ ತೂಬಿನಕೆರೆ ಬಳಿ ಟೋಲ್ ಬೈಪಾಸ್ ಮಾಡುವ ಸ್ಥಳದಲ್ಲಿ ಟ್ರಕ್ಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೇಂದ್ರಗಳಲ್ಲಿ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ವೇಗೆ ಸಂಬಂಧಿಸಿದ ಆಗಮನ-ನಿರ್ಗಮನ ಪ್ರವೇಶದ್ವಾರಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ಮುಚ್ಚಿರುವುದು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ದಿನೇಶ್ ಗೂಳಿಗೌಡ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ಎನ್ಎಚ್ -275 ರ ಬೆಂಗಳೂರು – ಮೈಸೂರು ವಿಭಾಗದ ತೂಬಿನಕೆರೆ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ಟೋಲ್ ಪ್ಲಾಜಾವನ್ನು ಬೈಪಾಸ್ ಮಾಡುವ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು.…
ಬೆಂಗಳೂರು: ನಟಿ ರನ್ಯಾ ರಾವ್ ಅವರ ಅಕ್ರಮ ಚಿನ್ನ ಸಾಗಾಟ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ತನಿಖೆ ನಂತ್ರವೇ ಎಲ್ಲಾ ಮಾಹಿತಿ ಗೊತ್ತಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮೊದಲಿಗೆ ಸಿಐಡಿ ತನಿಖೆಗೆ ನಟಿ ರನ್ಯಾ ರಾವ್ ಪ್ರಕರಣ ವಹಿಸಲಾಗಿತ್ತು. ಆದರೇ ಪ್ರತ್ಯೇಕ ತನಿಖೆಗೆ ಸೂಚಿಸಿದ ಕಾರಣ ಸಿಐಡಿ ತನಿಖೆಯನ್ನು ಹಿಂಪಡೆಯಲಾಯಿತು ಎಂದರು. ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ತನಿಖೆ ನಡೆಯುತ್ತಿದೆ. ತನಿಖೆಯ ಬಗ್ಗೆ ನಮಗೇನೂ ಮಾಹಿತಿ ಕೊಟ್ಟಿಲ್ಲ. ತನಿಖೆಯ ನಂತ್ರ ಎಲ್ಲಾ ಮಾಹಿತಿ ಗೊತ್ತಾಗುತ್ತದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/jds-protests-against-greater-bengaluru-bill-urges-governor/ https://kannadanewsnow.com/kannada/breaking-shivamogga-woman-dies-of-electrocution-while-starting-motor/
ಬೆಂಗಳೂರು: ರಿಯಲ್ ಎಸ್ಟೇಟ್ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್ ಸರಕಾರವು ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್ ಆರೋಪ ಮಾಡಿದೆ. ಗ್ರೇಟರ್ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್ ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು; ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು. ಅಲ್ಲದೇ; ವಿಧಾನಮಂಡಲದಲ್ಲಿ ಕಾಂಗ್ರೆಸ್ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪಾಸ್ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ.…
ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲ್ಪಟ್ಟು, ಜೈಲುಪಾಲಾಗಿದ್ದಾರೆ. ಇತ್ತ ನಟಿ ರನ್ಯಾ ರಾವ್ ಅವರ ಕಾರು ಚಾಲಕ ದೀಪಕ್ ಎಂಬಾತ ಹಣ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದಂತ ದೀಪಕ್ ಎಂಬಾತನನ್ನು ಪೊಲೀಸರು ಹಣ ಡಬ್ಲಿಂಗ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ದೀಪಕ್ ಚಿಕ್ಕಮಗಳೂರಿನ ಹೊಸಮನೆ ಬಡವಾಣೆಯ ನಿವಾಸಿಯಾಗಿದ್ದಾನೆ. ಈತ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದನು. ಈತನ ವಿರುದ್ಧ ಹಣ ಡಬ್ಲಿಂಗ್ ಆರೋಪದಡಿ ಪ್ರಕರಣ ದಾಖಲಾಗಿದ್ದರಿಂದ ದೀಪಕ್ ನನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/belagavi-municipal-corporation-mangesh-elected-mayor-veena-elected-as-deputy-mayor/ https://kannadanewsnow.com/kannada/breaking-shivamogga-woman-dies-of-electrocution-while-starting-motor/
ಬೆಳಗಾವಿ: ಪಾಲಿಕೆ ಗದ್ದುಗೆ ಬಿಜೆಪಿ ಪಾಲಾಗಿದೆ. ಸತತ ಮೂರನೇ ಬಾರಿಗೆ ಮೇಯರ್ ಆಗಿ ಮಂಗೇಶ್, ಉಪ ಮೇಯರ್ ಆಗಿ ವೀಣಾ ಆಯ್ಕೆಯಾಗಿದ್ದಾರೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಗೆ ಭಾರೀ ಮುಖಭಂಗವೇ ಉಂಟಾಗಿದೆ. ಇಂದು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಈ ವೇಳೆಯಲ್ಲಿ ಚುನಾವಣಾಧಿಕಾರಿಗಳು ಕೈ ಎತ್ತುವ ಮೂಲಕ ಮತ ಚಲಾಯಿಸುವುದಕ್ಕೆ ಅವಕಾಶವನ್ನು ನೀಡಿದರು. ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಮಂಗೇಶ್ ಪರವಾಗಿ 40 ಮತಗಳು ಚಲಾವಣೆಗೊಂಡರೇ, ವಿರುದ್ಧವಾಗಿ ಐದು ಮತ ಚಲಾಯಿಸಲ್ಪಟ್ಟಿತು. ಇನ್ನೂ ಉಪ ಮೇಯರ್ ಚುನಾವಣೆಯಲ್ಲಿ ವೀಣಾ ಅವರಿಗೆ 40 ಮತ ಪರವಾಗಿ ಬಿದ್ದರೇ, 19 ಮತಗಳು ವಿರುದ್ಧವಾಗಿ ಬಿದ್ದಿದ್ದವು. ಆ ಮೂಲಕ ಮೇಯರ್ ಆಗಿ ಬಿಜೆಪಿಯ ಮಂಗೇಶ್, ಉಪ ಮೇಯರ್ ಆಗಿ ವೀಣಾ ಆಯ್ಕೆಯಾಗಿದ್ದಾರೆ. https://kannadanewsnow.com/kannada/woman-killed-in-wild-elephant-attack-minister-ishwar-khandre-holds-emergency-meeting-to-arrest-3-elephants/ https://kannadanewsnow.com/kannada/breaking-shivamogga-woman-dies-of-electrocution-while-starting-motor/
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬೇಲೂರು ತಾಲೂಕು ಕೋಗೋಡಿನ ತೋಟದಲ್ಲಿ ನಿನ್ನೆ ಮಹಿಳೆಯೊಬ್ಬರು ಆನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಚಿವರು, ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮರಾ ಸಹಿತ ಡ್ರೋನ್ ಖರೀದಿಸಿ ರಾತ್ರಿಯ ವೇಳೆ ಕೂಡ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ನೀಡಲು ಸೂಚಿಸಿದರು. ಆನೆಗಳ ಸಮಸ್ಯೆ ಹೆಚ್ಚಿರುವ ಪ್ರದೇಶದಲ್ಲಿ ತುರ್ತು ಸ್ಪಂದನೆಗಳಾಗಿ 2 ಹೆಚ್ಚುವರಿ ಜೀಪುಗಳು ಮತ್ತು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ, ಆನೆಗಳ ಸಂಚಾರದ ಮಾಹಿತಿ ಬಂದ ಕೂಡಲೇ ಸ್ಪಂದಿಸುವಂತೆ ಈಶ್ವರ ಖಂಡ್ರೆ…
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಸಚಿವರು, ಇತ್ತೀಚಿನ ಮಂಡಿಸಲಾದ 2025-26ನೇ ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750 ರೂಪಾಯಿ ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂಪಾಯಿ ಅನುದಾನ ಹೊರೆಯಾಗಿದೆ ಎಂದರು. ಎರಡೂ ಬಾರಿ ಹೆಚ್ಚಿಸಿದ್ದು ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯವರ ಗೌರವ ಧನವನ್ನು ಹೆಚ್ಚಳ ಮಾಡಿರುವುದು ನಮ್ಮ ಕಾಂಗ್ರೆಸ್ ಸರ್ಕಾರವೇ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ವೇಳೆಯ 2 ಸಾವಿರ ರೂಪಾಯಿ ಗೌರವ ಧನವನ್ನು ಹೆಚ್ಚಿಸಲಾಗಿತ್ತು. ಆದರೆ, ,ಕಳೆದ ಬಿಜೆಪಿ ಸರ್ಕಾರದ ನಾಲ್ಕು…
ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆಯೇ ತೀರಲಿದೆ. ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಇ-ಖಾತಾ ಸಮಸ್ಯೆ ಸರಿ ಪಡಿಸೋ ಸಂಬಂಧ ತಿದ್ದುಪಡಿ ವಿಧೇಯಕ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸಭೆಯು ವಿಧೇಯಕಕ್ಕೆ ಅಂಗೀಕಾರ ನೀಡಿದೆ. ಶುಕ್ರವಾರದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವಂತ ಇ-ಖಾತಾ ಸಮಸ್ಯೆ ಸರಿ ಪಡಿಸುವಂತ ತಿದ್ದುಪಡಿ ವಿಧೇಯಕವನ್ನು ರಾಜ್ಯದ ಉಭಯ ಸದನಗಳಲ್ಲಿ ಈ ಬಾರಿಯೇ ಮಂಡನೆ ಮಾಡೋ ಸಾಧ್ಯತೆ ಇದೆ. ಇದಕ್ಕೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆ ಕ್ಲಿಯರ್ ಆಗಲಿದೆ. ಗ್ರಾಮೀಣ ಭಾಗದ ಕಂದಾಯ ಭೂಮಿಯಲ್ಲಿನ ನಿವೇಶ, ಮನೆ ಸಕ್ರಮಕ್ಕೆ ಅವಕಾಶ ಸಿಗಲಿದೆ. ಆ ನಂತ್ರ ಇ-ಖಾತಾವೂ…













