Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಇ-ಖಾತಾದ್ದೇ ಸದ್ದು. ಅದರಲ್ಲೂ ನಮ್ಮದು ಎ-ಖಾತಾ, ನನ್ನದು ಬಿ-ಖಾತಾ ಎಂಬುದಾಗಿ ಮಾತುಗಳು ಕೇಳಿ ಬರುತ್ತಿದೆ. ಸಾರ್ವಜನಿಕರಾದಂತ ನಿಮಗೆ ಏನಿದು ಎ-ಖಾತಾ ಅಂದ್ರೆ? ಏನಿದು ಬಿ-ಖಾತಾ ಅಂದ್ರೆ ಅನ್ನೋದು ಕೆಲವರಿಗೆ ಗೊತ್ತಿದ್ದರೇ, ಮತ್ತೆ ಕೆಲವರಿಗೆ ಗೊತ್ತಿಲ್ಲ. ಅವರಿಗೆ ಮಾಹಿತಿಗಾಗಿ ಏನಿದರು ಎರಡರ ನಡುವಿನ ವ್ಯತ್ಯಾಸ ಅಂತ ಮುಂದೆ ಓದಿ. ಸಾರ್ವಜನಿಕರಿಗೆ ಸರಳವಾಗಿ ಎ, ಬಿ-ಖಾತಾ ನಡುವಿನ ವ್ಯತ್ಯಾಸವನ್ನು ಹೇಳಬಹುದಾದರೇ ಎ-ಖಾತಾ ಅಂದ್ರೆ ಡಿಸಿ ಕನ್ವರ್ಷನ್ ಲೇಔಟ್ ಆದರೇ, ಬಿ-ಖಾತಾ ಅಂದ್ರೆ ಕಂದಾಯ ಭೂಮಿ, ತಹಶೀಲ್ದಾರ್ ಲೇಔಟ್ ಆಗಿದೆ. ಎ-ಖಾತಾ ಮಾಲೀಕರಿಗೆ ಬ್ಯಾಂಕ್ ಮೂಲಕ ಶೀಘ್ರವೇ ಸಾಲ ಸೌಲಭ್ಯಗಳು ದೊರೆತದರೇ, ಬಿ-ಖಾತಾ ನಿವೇಶನಗಳಿಗೆ ಇದು ಸ್ವಲ್ಪ ಕಷ್ಟವೇ ಎಂದು ಹೇಳಲಾಗುತ್ತಿದೆ. ಆದರೂ ಬ್ಯಾಂಕ್ ಮ್ಯಾನೇಜರ್ ಮೇಲೆ ಇದು ನಿರ್ಧಾರವಾಗಿದೆ ಎಂಬುದಾಗಿಯೂ ತಿಳಿದು ಬಂದಿದೆ. ಒಟ್ಟಾರೆಯಾಗಿ ಎ-ಖಾತ ನಿವೇಶನ ಅಂದ್ರೆ ಅದು ಡಿಸಿ ಕನ್ವರ್ಷನ್ ಲೇಔಟ್. ಸರಳವಾಗಿ ಹೇಳುವುದಾದರೆ, ಆಸ್ತಿಯು ಸಂಪೂರ್ಣವಾಗಿ ಕಾನೂನುಬದ್ಧವಾಗಿದ್ದರೆ, ಅವುಗಳನ್ನು ಎ ಖಾತಾ ಎಂದು ವರ್ಗೀಕರಿಸಲಾಗುತ್ತದೆ. ಆಸ್ತಿ…
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಈ ಬಾರಿ ಬೇಸಿಗೆ ರಜೆಯಲ್ಲೂ ಬಿಸಿಯೂಟ ನೀಡುವುದಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2024-25 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಪಿ.ಎಂ.ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ PAB ಅನುಮೋದನೆಯಂತೆ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಅನುದಾನ ರೂ.2958.87 ಲಕ್ಷಗಳು ಸಂವಾದಿ ರಾಜ್ಯದ ಪಾಲಿನ ಅನುದಾನ ರೂ 1742.74 ಲಕ್ಷಗಳು ಹಾಗೂ ರಾಜ್ಯದ ಹೆಚ್ಚುವರಿ ಅನುದಾನ (Top-up) ರೂ.2692.17 ಲಕ್ಷಗಳು ಸೇರಿ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಉಲ್ಲೇಖಿತ (3) ರ ಆದೇಶದಂತೆ ಜಿಲ್ಲಾ ಮತ್ತು ತಾಲ್ಲೂಕುವಾರು ಈಗಾಗಲೇ ಸಲ್ಲಿಸಿರುವ ಅನುದಾನ ಬೇಡಿಕೆ ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಮೂಲಕ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 2024-25 ನೇ ಸಾಲಿನ ಆಯವ್ಯಯದಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25 ನೇ ಸಾಲಿನಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು ಎಂದು ಘೋಷಿಸಲಾಗಿರುತ್ತದೆ ಹಾಗೂ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ದಿನಾಂಕ:25.06.2024 ರಂದು ಆದೇಶವನ್ನು ಹೊರಡಿಸಲಾಗಿದೆ. ಈ ಸಂಬಂಧ ತಂತ್ರಾಂಶ ಅಭಿವೃದ್ಧಿಪಡಿಸಿ https://rdprtransfer.karnataka.gov.in ವೆಬ್ಸೈಟ್ನಲ್ಲಿ ಆರೋಹಿಸಲಾಗಿರುತ್ತದೆ. ಉಲ್ಲೇಖ (2) ಮತ್ತು (3) ರನ್ವಯ…
ಬೆಂಗಳೂರು: ಈಗಾಗಲೇ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮಾರ್ಚ್ 7ರ ಇಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 16ನೇ ರಾಜ್ಯ ಬಜೆಟ್ ( Karnataka Budget 2025-26 ) ಮಂಡಿಸಲಿದ್ದಾರೆ. ಮಾರ್ಚ್.7ರ ಇಂದು ಬೆಳಿಗ್ಗೆ 10.15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah ) ದಾಖಲೆಯ 16ನೇ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿಸಲಿದ್ದಾರೆ. ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ? ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ. ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಇಂದು ಸಿಎಂ ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವಿಶೇಷತೆಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4…
ಬೆಂಗಳೂರು: ನಗರದ ಸಬ್ ರಿಜಿಸ್ಟಾರ್ ಕಚೇರಿಯ ಮೇಲೆ ಲೋಕಾಯುತ್ತ ಹಾಗೂ ಉಪ ಲೋಕಾಯುಕ್ತ ಅಧಿಕಾರಿಗಳು ಖುದ್ದಾಗಿ ದಾಳಿ ನಡೆಸಿದ್ದಾರೆ. ನಗರದು ಹಣ ಪತ್ತೆಯಾಗಿದ್ದರೇ, ಹಲವು ಸಬ್ ರಿಜಿಸ್ಟಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕರಂತು ಪೋನ್ ಪೇ, ಜೀ ಪೇ ಮೂಲಕ ಲಕ್ಷ ಲಕ್ಷ ಲಂಚವನ್ನು ಪಡೆದಿರುವುದನ್ನು ಪತ್ತೆ ಹಚ್ಚಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಈ ದಿನ ಅಂದರೆ ವಿನಾಂಕ: 06.03.2025ರಂದು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ 25 ಉಪ ನೋಂದಣಾಧಿಕಾರಿಗಳ ಕಛೇರಿಗಳಿಗೆ ಏಕ ಕಾಲಕ್ಕೆ ಅನಿರೀಕ್ಷಿತ ತಪಾಸಣೆಯನ್ನು ನಡೆಸಲಾಯಿತು. ಈ ದಿನ ತಪಾಸಣೆ ನಡೆಸಲಾದ ಉಪನೋಂದಣಾಧಿಕಾರಿಗಳ ಕಛೇಲಿಗಳ ಪೈಕಿ ಅನೇಕ ಉಪ ನೋಂದಣಾಧಿಕಾರಿಗಳ ಕಛೇರಿಗಳಿಗೆ 2022ನೇ ಸಾಅನಲ್ಲಿಯೂ ಸಹಾ ತಪಾಸಣೆ ನಡೆಸಲಾಗಿತ್ತು ಎಂದಿದೆ. ಅನಿರೀಕ್ಷಿತ ತಪಾಸಣೆ ನಡೆಸಿದ ಪೊಲೀಸ್ ಹಾಗೂ ನ್ಯಾಯಾಂಗ ಅಧಿಕಾರಿಗಳ ತಂಡವು ಅನೇಕ ನ್ಯೂನ್ಯತೆಗಳನ್ನು ದಿನಾಂಕ: 19.07.2022ರ ಆದೇಶದ ರೀತ್ಯಾ ಪತ್ತೆ ಹಚ್ಚಿದ್ದರು. ಈ ನ್ಯೂನ್ಯತೆಗಳನ್ನು ಕಂದಾಯ…
ನವದೆಹಲಿ: ಭಾರತದ ದಾಖಲೆಯ ಗೋಲ್ ಸ್ಕೋರರ್ ಮತ್ತು ಮಾಜಿ ನಾಯಕ ಸುನಿಲ್ ಛೆಟ್ರಿ ತಮ್ಮ ನಿವೃತ್ತಿ ಕರೆಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಫಿಫಾ ಮಾರ್ಚ್ ಅಂತರರಾಷ್ಟ್ರೀಯ ವಿಂಡೋದಲ್ಲಿ ರಾಷ್ಟ್ರೀಯ ತಂಡಕ್ಕೆ ಕಾಣಿಸಿಕೊಂಡಿದ್ದಾರೆ. ಎಎಫ್ಸಿ ಏಷ್ಯನ್ ಕಪ್ 2027 ರ ಅರ್ಹತಾ ಸುತ್ತಿನ ಮೂರನೇ ಸುತ್ತಿನಲ್ಲಿ ಭಾರತ ಮಾರ್ಚ್ 25 ರಂದು ಬಾಂಗ್ಲಾದೇಶವನ್ನು ಎದುರಿಸಲಿದೆ. 2024ರ ಜೂನ್ನಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದರು. ದಾಖಲೆಯ 19 ವರ್ಷಗಳ ಕಾಲ ರಾಷ್ಟ್ರೀಯ ಬಣ್ಣಗಳನ್ನು ಧರಿಸಿದ ನಂತರ ದಂತಕಥೆ ಛೆಟ್ರಿ ತಮ್ಮ ಅಪ್ರತಿಮ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದರು. 2024ರ ಮೇ 16ರಂದು ಫಿಫಾ ವಿಶ್ವಕಪ್ ಕ್ವಾಲಿಫೈಯರ್ನಲ್ಲಿ ಕುವೈತ್ ವಿರುದ್ಧ ಆಡಿದ ಬಳಿಕ ನಿವೃತ್ತಿ ಘೋಷಿಸುವುದಾಗಿ ಛೆಟ್ರಿ ಘೋಷಿಸಿದ್ದರು. ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಛೆಟ್ರಿ ಮರಳಿದ್ದಾರೆ ಎಂದು ಘೋಷಿಸಿತು. https://twitter.com/IndianFootball/status/1897669852841844780 ಛೆಟ್ರಿ ಅವರ ಪ್ರತಿಷ್ಠಿತ ವೃತ್ತಿಜೀವನದಲ್ಲಿ ಅವರು ಅನೇಕ ದಾಖಲೆಗಳನ್ನು ಗಳಿಸಿದ್ದಾರೆ. ತಮ್ಮ ನಾಯಕನು ತಂಡವನ್ನು…
ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.8 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕರಿಯಣ್ಣ ಜಿಲ್ಡಿಂಗ್ ಸುತ್ತ ಮುತ್ತ, 100 ಅಡಿ ರಸ್ತೆ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ವೀರ ಸಾವರ್ಕರ್ ಬಿಲ್ಡಿಂಗ್, ಕೆಎಚ್ಬಿ ಕ್ವಾಟ್ರಸ್, ಸವಿ ಬೇಕರಿ ಎದುರು, ಆರಾಧ್ಯ ಕಣ್ಣಿನ ಆಸ್ಪತ್ರೆ, ಪಿ & ಟಿ ಕಾಲೋನಿ, ವಿನೋಬ ನಗರ, ಪೋಲಿಸ್ ಚೌಕಿ, ಹುಚ್ಚುರಾಯ ಕಾಲೋನಿ, ವೀರಣ್ಣ ಲೇಔಟ್, ಅರವಿಂದ ನಗರ, ಮೇದಾರ ಕೇರಿ, ಕನಕ ನಗರ, ದೇವರಾಜ ಅರಸು ಬಡಾವಣೆ, ಶಾರದಮ್ಮ ಲೇಔಟ್, ಖಾಜಿ ಗಾರ್ಡನ್, ಮೈತ್ರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ-ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/do-you-know-how-much-illegal-assets-were-found-in-the-possession-of-8-corrupt-officials-in-todays-lokayukta-raid/ https://kannadanewsnow.com/kannada/bengaluru-2965-people-fined-rs-6-50-lakh-for-travelling-without-tickets-in-bmtc-buses/
ಬೆಂಗಳೂರು: ನಗರದ ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತನಿಖಾ ತಂಡದ ಅಧಿಕಾರಿಗಳು ದಂಡಾಸ್ತ್ರ ಪ್ರಯೋಗಿಸಿದ್ದಾರೆ. ಟಿಕೆಟ್ ರಹಿತವಾಗಿ ಪ್ರಯಾಣಿಸಿದಂತ 2,965 ಮಂದಿಗೆ 6.50 ಲಕ್ಷ ದಂಡವನ್ನು ಜನವರಿಯಲ್ಲಿ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ಸಂಸ್ಥೆಯ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಜನವರಿ-2025 ರ ಮಾಹೆಯಲ್ಲಿ ಒಟ್ಟು 19,781 ಟ್ರಿಪ್ಗಳನ್ನು ತಪಾಸಿಸಿ 2965 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 6,50,395/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1757 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 325 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 32,500/- ಅನ್ನು ಮೋಟಾರು ವಾಹನ…
ಬೆಂಗಳೂರು: ಇಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-2, ಕೋಲಾರ-1, ಕಲಬುರಗಿ-1, ದಾವಣಗೆರೆ-1, ತುಮಕೂರು-1, ಬಾಗಲಕೋಟೆ-1 ಮತ್ತು ವಿಜಯಪುರ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಇಂದಿನ ಲೋಕಾಯುಕ್ತ ದಾಳಿಯಲ್ಲಿ ಭ್ರಷ್ಟ ಅಧಿಕಾರಿಗಳ ಬಳಿ ಸಿಕ್ಕ ಅಕ್ರಮ ಆಸ್ತಿ ಪಾಸ್ತಿ ಎಷ್ಟು ಅಂತ ಮುಂದೆ ಪುಲ್ ಡೀಟೆಲ್ಸ್ ಇದೆ ಓದಿ. ಈ ದಿನ ದಿನಾಂಕ: 06.03.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 40 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ. 1) ಟಿ. ಡಿ. ನಂಜುಂಡಪ್ಪ, ಮುಖ್ಯ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮೀಣಾಭಿವೃದ್ಧಿ ಭವನ, ಆನಂದ ರಾವ್ ಸರ್ಕಲ್, ಬೆಂಗಳೂರು.…
ಬೆಂಗಳೂರು: “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ ಸಮರ್ಥಿಸಿಕೊಂಡರು. “ನಿಮ್ಮ (ಬಿಜೆಪಿ) ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ, ನಿಮ್ಮ ಪರಿಕಲ್ಪನೆ ಮೇಲೆ ನೀವು ಈ ಹೊಸ ವಿವಿಗಳನ್ನು ಸ್ಥಾಪಿಸಿದ್ದೀರಿ. ನಾವು ಖಾಸಗಿ ವಿವಿ ಮಾಡಬೇಕಾದರೂ ಕೆಲವು ಮಾನದಂಡಗಳನ್ನು ನಿಗದಿ ಮಾಡಿದ್ದೇವೆ. ವಿದ್ಯಾರ್ಥಿಗಳಿಗೂ ವಿವಿಗಳಿಗೂ ಏನು ಸಂಬಂಧ? ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಅದೇ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸುತ್ತಾರೆ. ಆದರೆ ಮೈಸೂರು ವಿವಿ, ಮಂಡ್ಯ ವಿವಿ, ಚಾಮರಾಜನಗರ ವಿವಿಗಳನ್ನೇ ಉದಾಹರಣೆಯಾಗಿ ತೆಗೆದುಕೊಡು ನೋಡುವುದಾಗರೆ,…










