Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಮೊದಲ ದಿನವೇ 2.17 ಲಕ್ಷ ಗಣೇಶ ಮೂರ್ತಿಯನ್ನು ವಿವಿಧೆಡೆ ವಿಸರ್ಜಿಸಲಾಗಿತ್ತು. ನಿನ್ನೆ ಮತ್ತೆ ಮುಂದುವರೆದಿದ್ದು, ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 83,404 ಗಣೇಶ ಮೂರ್ತಿಯನ್ನು ವಿಸರ್ಜಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 08/09/2024 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 83404 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ ಎಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 12652 ಪಶ್ಚಿಮ ವಲಯ: 10828 ದಕ್ಷಿಣ ವಲಯ: 47055 ಬೊಮ್ಮನಹಳ್ಳಿ ವಲಯ: 2276 ದಾಸರಹಳ್ಳಿ ವಲಯ: 424 ಮಹದೇವಪುರ ವಲಯ: 2224 ಆರ್.ಆರ್.ನಗರ ವಲಯ: 3859 ಯಲಹಂಕ ವಲಯ: 4096 ಒಟ್ಟು: 83404 ಗಣೇಶ ಮೂರ್ತಿಯನ್ನು ಸೆ.8ರ ನಿನ್ನೆಯ ದಿನ ಬೆಂಗಳೂರಿನ ವಿವಿಧೆಡೆ ವಿಸರ್ಜಿಸಲಾಗಿದೆ ಎಂಬುದಾಗಿ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. https://kannadanewsnow.com/kannada/shivamogga-power-outages-in-these-areas-of-the-district-on-september-11/ https://kannadanewsnow.com/kannada/breaking-no-relief-for-actor-darshan-at-the-moment-court-order-extending-the-period-of-judicial-custody-for-3-days/ https://kannadanewsnow.com/kannada/bengaluru-belongs-to-kannadigas-post-sparks-debate-on-social-media-war-of-words/
ಶಿವಮೊಗ್ಗ : ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ. 11 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೆ.11ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಹಳ್ಳಿ, ಜ್ಯೋತಿನಗರ, ದೊಡ್ಡಿಬೀಲು, ವಿನಾಯಕನಗರ ಪವರ್ ಕಟ್ ಆಗಲಿದೆ ಎಂದಿದೆ. ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ. https://kannadanewsnow.com/kannada/another-good-news-for-our-metro-passengers-trial-run-on-reach-5-line-begins/ https://kannadanewsnow.com/kannada/court-adjourns-hearing-in-pocso-case-to-september-19/ https://kannadanewsnow.com/kannada/breaking-no-relief-for-actor-darshan-at-the-moment-court-order-extending-the-period-of-judicial-custody-for-3-days/
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ರೀಚ್ 5 ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ಆರಂಭ | Namma Metro
ಬೆಂಗಳೂರು; ನಗರದ ಸಂಚಾರ ದಟ್ಟಣೆಯನ್ನು ನೀಗಿಸಿ, ಉದ್ಯೋಗಿಗಳಿಗೆ ಸಕಾಲದಲ್ಲಿ ಕಚೇರಿ ತಲುಪಿ ಕೆಲಸ ಮಾಡುವಂತಾಗುತ್ತಿರುವುದು ನಮ್ಮ ಮೆಟ್ರೋ ಸೇವೆಯಿಂದಲೇ ಆಗಿದೆ. ಈಗಾಗಲೇ ಹಸಿರು, ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ನಡೆಯುತ್ತಿದೆ. ಈಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ರಿಚ್-5 ಮಾರ್ಗದಲ್ಲಿ ಪ್ರಾಯೋಗಿಕ ಪರೀಕ್ಷಾರ್ಥ ಸಂಚಾರ ಆರಂಭಿಸಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಎಕ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಆರ್ಡಿಎಸ್ಒ ಅಧಿಕಾರಿಗಳು, ಇಂದಿನಿಂದ ರೀಚ್ 5 ಮಾರ್ಗದಲ್ಲಿ ಬೊಮ್ಮನಹಳ್ಳಿಯಿಂದ ಆರ್ವಿ-ರಸ್ತೆ ನಡುವೆ, ಆಸಿಲೇಷನ್ ಮತ್ತುಇಬಿಡಿ ಪ್ರಯೋಗಗಳನ್ನ ಪ್ರಾರಂಭಿಸಿದೆ ಎಂದಿದೆ. ಈ ಪ್ರಾಯೋಗಿಕ ಸಂಚಾರ ಸುಮಾರು 12-14 ದಿನಗಳವರೆಗೆ ನಡೆಸಲಾಗುವುದು. ಆರ್ಡಿಎಸ್ಒ ಪ್ರಾಯೋಗಿಕ ವರದಿಯನ್ನು ಸಲ್ಲಿಸಿದ ನಂತರ ರೈಲ್ವೆ ಮಂಡಳಿಯಿಂದ ತಾಂತ್ರಿಕ ಮಂಜೂರಾತಿ ಪಡೆಯಲಾಗುವುದು ಎಂಬುದಾಗಿ ತಿಳಿಸಿದೆ. https://twitter.com/OfficialBMRCL/status/1833028575986950155 https://kannadanewsnow.com/kannada/court-adjourns-hearing-in-pocso-case-to-september-19/ https://kannadanewsnow.com/kannada/applications-invited-under-pradhan-mantri-krishi-sinchai-yojana/ https://kannadanewsnow.com/kannada/bengaluru-belongs-to-kannadigas-post-sparks-debate-on-social-media-war-of-words/
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯರಪ್ಪ ಅವರಿಗೆ ಮತ್ತೆ ತಾತ್ಕಾಲಿಕ ರಿಲೀಫ್ ಅನ್ನು ಕೋರ್ಟ್ ನೀಡಿದೆ. ಇಂದು ಅವರ ವಿರುದ್ಧದ ಪೋಸ್ಕೋ ಕೇಸ್ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.19ಕ್ಕೆ ಹೈಕೋರ್ಟ್ ಮುಂದೂಡಿದೆ. ಇಂದು ಕರ್ನಾಟಕ ಹೈಕೋರ್ಟ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ವಕೀಲ ಅಶೋಕ್ ನಾಯಕ್ ಅವರು ಸೆ.3ರಂದು ಪ್ರೊ.ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು. ಇನ್ನೂ ಪೋಕ್ಸೋ ಕೇಸ್ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕ ಸದಸ್ಯ ಪೀಠವು ವಿಚಾರಣೆಯನ್ನು ಮುಂದೂಡಿದೆ. ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಸಂಬಂಧ ಪ್ರಕರಣ ರದ್ದು…
ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಿದೆ. ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿ ಅಳವಡಿಸಿದ ಪ್ರತಿ ಫಲಾನುಭವಿಗೆ ಮೊದಲ 2 ಹೆ. ಪ್ರದೇಶದವರೆಗೆ ಶೇ. 90% ಮತ್ತು 3 ಹೆ. ಪ್ರದೇಶಕ್ಕೆ ಶೇ. 45% ರಷ್ಟು ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ. ಇಲಾಖೆಯಿಂದ ಅನುಮೋದಿತ ಕಂಪನಿಗಳ ಮೂಲಕವೇ ರೈತರು ಸೂಕ್ಷ್ಮ ನೀರಾವರಿ ಘಟಕವನ್ನು ಅಳವಡಿಸಿಕೊಲ್ಳುವುದು. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಶಿಕಾರಿಪುರ ಕಚೇರಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯುವುದು. 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಪರಿಶಿಷ್ಟ ಜಾತಿ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಹೆಸರು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೂಪ್-ಸಿ ಹಾಗೂ ಡಿ ವೃಂದದ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ ನೌಕರರಿಗೆ ತಿಂಗಳಿಗೆ ನೀಡುತ್ತಿದ್ದಂತ ವೈದ್ಯಕೀಯ ಭತ್ಯೆಯನ್ನು 200 ರೂ.ನಿಂದ 500 ರೂ.ವರೆಗೆ ಹೆಚ್ಚಳ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ರಾಜ್ಯದ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರಿಗೆ ನೀಡಲಾಗುವ ತಿಂಗಳ ವೈದ್ಯಕೀಯ ಭತ್ಯೆಯನ್ನು ₹200 ರಿಂದ ₹500ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರುವವರೆಗೆ ಈ ವೈದ್ಯಕೀಯ ಸೌಲಭ್ಯ ಮುಂದುವರೆಯಲಿದೆ ಎಂದು ತಿಳಿಸಿದೆ. https://twitter.com/KarnatakaVarthe/status/1833076006929748466 https://kannadanewsnow.com/kannada/bengaluru-belongs-to-kannadigas-post-sparks-debate-on-social-media-war-of-words/ https://kannadanewsnow.com/kannada/breaking-no-relief-for-actor-darshan-at-the-moment-court-order-extending-the-period-of-judicial-custody-for-3-days/
ಬೆಂಗಳೂರು: ಟೆಕ್ ಕ್ಯಾಪಿಟಲ್ ಕನ್ನಡಿಗರಿಗೆ ಸೇರಿದ್ದು ಎಂದು ಎಕ್ಸ್ ಪೋಸ್ಟ್ ವೈರಲ್ ಆದ ನಂತರ ಬೆಂಗಳೂರಿನಲ್ಲಿ ‘ಹೊರಗಿನವರು-ಒಳಗಿನವರು’ ಚರ್ಚೆ ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಾರಂಭವಾಗಿದೆ. ಈ ಪೋಸ್ಟ್ ಎಕ್ಸ್ ನಾದ್ಯಂತ ಆಕ್ರೋಶವನ್ನು ಸೃಷ್ಟಿಸಿತು, ಅನೇಕ ಟೆಕ್ಕಿಗಳು, ಉದ್ಯಮಿಗಳು ಮತ್ತು ಎಲ್ಲಾ ವಿಭಾಗಗಳ ಜನರಲ್ಲಿ ಬಿಸಿ ಬಿಸಿ ಚರ್ಚೆಯನ್ನು ಹುಟ್ಟು ಹಾಕಿದೆ. ಮಂಜು ಎಂಬ ಬಳಕೆದಾರರು ಎಕ್ಸ್ ಪೋಸ್ಟ್ನಲ್ಲಿ, “ಬೆಂಗಳೂರಿಗೆ ಬರುವ ಪ್ರತಿಯೊಬ್ಬರಿಗೂ, ನೀವು ಕನ್ನಡ ಮಾತನಾಡದಿದ್ದರೆ ಅಥವಾ ಕನ್ನಡ ಮಾತನಾಡಲು ಪ್ರಯತ್ನಿಸದಿದ್ದರೆ ನಿಮ್ಮನ್ನು ಬೆಂಗಳೂರಿನಲ್ಲಿ ಹೊರಗಿನವರಂತೆ ಪರಿಗಣಿಸಲಾಗುತ್ತದೆ. ಅದನ್ನು ಬರೆಯಿರಿ, ಅದನ್ನು ಸುತ್ತಲೂ ಹಂಚಿಕೊಳ್ಳಿ. ನಾವು ತಮಾಷೆ ಮಾಡುತ್ತಿಲ್ಲ. ಬೆಂಗಳೂರು ಕನ್ನಡಿಗರಿಗೆ ಸೇರಿದ್ದು ಎಂದು ಒತ್ತಿ ಹೇಳಿದ ಅವರು, ಜಾಗತಿಕ ನಗರದಲ್ಲಿ ಇತರ ಭಾಷೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹೇಳಿದರು. https://twitter.com/ManjuKBye/status/1831926183438774774 ಈ ಪೋಸ್ಟ್ ಎಕ್ಸ್ ನಲ್ಲಿ ಸಖತ್ ವೈರಲ್ ಆಗಿದ್ದು, ಇದಕ್ಕೆ ಹಲವರು ತಮ್ಮ ಅಭಿಪ್ರಾಯವನ್ನು ಪರ – ವಿರೋಧವಾಗಿ ಹಂಚಿಕೊಂಡಿದ್ದಾರೆ. ಆ ಬಗ್ಗೆ ಈ ಕೆಳಗಿದೆ. ಈ ಪೋಸ್ಟ್ಗೆ ಪ್ರತಿಕ್ರಿಯಿಸಿರುವ…
ಬೆಂಗಳೂರು : ಬೆಂಗಳೂರು ಹಾಗೂ ಧಾರವಾಡದ ನಿವಾಸಿಗಳು ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತಿರುವುದು ಇತ್ತೀಚಿನ ಸಮೀಕ್ಷೆಯಲ್ಲಿ ಸ್ಪಷ್ಟವಾಗಿದೆ. ಅವರು ಕೊನೇ ಮೈಲಿ ವಿತರಣಾ ವ್ಯವಸ್ಥೆ ವಿಚಾರಕ್ಕೆ ಬಂದಾಗ ಬ್ಯಾಟರಿ ಚಾಲಿತ ವಾಹನಗಳನ್ನು ಹೆಚ್ಚು ಆಯ್ಕೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯಕ್ಕೆ ಬದ್ಧರಾಗಿದ್ದಾರೆ. ಸಮೀಕ್ಷೆಯ ಪ್ರಕಾರ, ಶೇಕಡಾ 80.1ರಷ್ಟು ಮಂದಿ ಪರಿಸರಕ್ಕೆ ವಿಷಕಾರಿ ಅನಿಲ ಹೊರಸೂಸುವುದನ್ನು ತಪ್ಪಿಸುವ ನಿಟ್ಟಿನಲ್ಲಿ ತಮ್ಮ ಬದ್ಧತೆ ಪ್ರದರ್ಶಿಸಿದ್ದಾರೆ. ಎರಡೂ ನಗರಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಶೇಕಡಾ 96ರಷ್ಟು ಮಂದಿ ಕೊನೇ ಮೈಲಿ ಸಾರಿಗೆಯಾಗಿ ಎಲೆಕ್ಟ್ರಿಕ್ ವಾಹನಗಳನ್ನೇ ಆಯ್ಕೆ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಅದರ ಮೂಲಕ ವಾಯುಮಾಲಿನ್ಯ ತಡೆಗಟ್ಟಬಹುದು ಎಂಬುದನ್ನು ಬಲವಾಗಿ ನಂಬಿದ್ದಾರೆ. ಕೊನೇ ಮೈಲಿ ವಿತರಣೆ ವ್ಯವಸ್ಥೆ ಎಂದರೆ, ವಿತರಣಾ ಕೇಂದ್ರದಿಂದ ಗ್ರಾಹಕರ ಬಾಗಿಲಿಗೆ ಸರಕುಗಳನ್ನು ಸಾಗಿಸುವ ಸಾರಿಗೆ ಜಾಲವಾಗಿದೆ. ವಾಸ್ತವವೇನೆಂದರೆ 2024ರ ವೇಳೆಗೆ ಕೊನೆಯ ಮೈಲಿ ವಿತರಣಾ ವಲಯವೊಂದೇ ಹಸಿರುಮನೆ ಪರಿಣಾಮಕ್ಕೆ ಕಾರಣವಾಗುವ ಅನಿಲವಾದ ಇಂಗಾಲದ ಡೈಆಕ್ಸೈಡ್ ಅನ್ನು 500,000 ಟನ್ನಷ್ಟು ವಾತಾವರಣಕ್ಕೆ ಬಿಡುಗಡೆ ಮಾಡಲಿದೆ ಎಂಬುದು…
ಮಂಡ್ಯ : ಮದ್ದೂರು ಪಟ್ಟಣದ ಪೇಟೆ ಬೀದಿಯ ಅಗಲೀಕರಣ ಸಂಬಂಧ ಸೆ.10 ರಂದು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಪಟ್ಟಣದ ಪೇಟೆ ಬೀದಿಯನ್ನು ಶಾಸಕ ಕೆ.ಎಂ.ಉದಯ್ ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪಟ್ಟಣದ ಪೇಟೆ ಬೀದಿ ಕಿರಿದಾಗಿರುವ ಕಾರಣ ವಾಹನ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಶಾಸಕ ಕೆ.ಎಂ.ಉದಯ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ವರದಿ ನೀಡುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ರಸ್ತೆಯನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಇನ್ನೊಂದು ತಿಂಗಳೊಳಗೆ ರಸ್ತೆ ಕಾಮಗಾರಿ ಸಂಬಂಧ ಡಿಪಿಆರ್ ಸಿದ್ಧವಾಗಲಿದೆ ಎಂದು ಹೇಳಿದರು. ಪಟ್ಟಣದ ಪೇಟೆ ಬೀದಿಯು ಕೆಲವು ಕಡೆ 20,40 ಹಾಗೂ 60 ಅಡಿಗಳು ಇದ್ದು ಶಾಸಕ ಕೆ.ಎಂ.ಉದಯ್ ಅವರು 100 ಅಡಿಗೆ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಸಂಬಂಧ ಅಧಿಕಾರಿಗಳ…
ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು. ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು. ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್…