Author: kannadanewsnow09

ನವದೆಹಲಿ: ಮಧ್ಯಪ್ರದೇಶದಲ್ಲಿ ಕನಿಷ್ಠ 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ ತಯಾರಕರು, ಔಷಧವನ್ನು ತಯಾರಿಸಲು ಗುಣಮಟ್ಟದ ತಪಾಸಣೆ ಇಲ್ಲದೆ ಫಾರ್ಮಾ-ಗ್ರೇಡ್ ಬದಲಿಗೆ ಕೈಗಾರಿಕಾ ದರ್ಜೆಯ ಕಚ್ಚಾ ವಸ್ತುಗಳನ್ನು ಬಳಸಿದ್ದಾರೆ ಎಂದು ED ತನಿಖೆಯಲ್ಲಿ ಕಂಡುಬಂದಿದೆ. ತಮಿಳುನಾಡು ಔಷಧ ನಿಯಂತ್ರಣ ವಿಭಾಗದ ಅಧಿಕಾರಿಗಳು ಆರೋಪಿ ಕಂಪನಿಯ ಮಾಲೀಕ ಜಿ ರಂಗನಾಥನ್ ಅವರೊಂದಿಗೆ “ಆಗಾಗ್ಗೆ ಸಂಪರ್ಕದಲ್ಲಿದ್ದಾರೆ” ಎಂದು ಫೆಡರಲ್ ತನಿಖಾ ಸಂಸ್ಥೆ ಹೇಳಿಕೊಂಡಿದೆ – ಚೆನ್ನೈ ಮೂಲದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ – ಆದರೆ ಕಂಪನಿಯ ಕಡ್ಡಾಯ ವಾರ್ಷಿಕ ತಪಾಸಣೆಗಳನ್ನು “ನಡೆಸಲಾಗಿಲ್ಲ”. ರಂಗನಾಥನ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ ಚೆನ್ನೈನಲ್ಲಿರುವ ಎರಡು ಫ್ಲಾಟ್‌ಗಳನ್ನು ಮುಟ್ಟುಗೋಲು ಹಾಕಿಕೊಂಡ ಜಾರಿ ನಿರ್ದೇಶನಾಲಯ ಬುಧವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಇದನ್ನು ತಿಳಿಸಿದೆ. ಸ್ವತ್ತುಗಳು ತಮಿಳುನಾಡಿನ ರಾಜಧಾನಿಯ ಕೋಡಂಬಾಕಂನಲ್ಲಿವೆ ಮತ್ತು 2.04 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. https://twitter.com/dir_ed/status/1996130632427266098 ಅಕ್ಟೋಬರ್‌ನಲ್ಲಿ ಮಧ್ಯಪ್ರದೇಶ ಪೊಲೀಸರು ರಂಗನಾಥನ್ ಅವರನ್ನು ಬಂಧಿಸಿದ್ದರು. “ಸ್ರೇಸನ್ ಫಾರ್ಮಾ ತನ್ನ ಉತ್ಪಾದನಾ ವೆಚ್ಚವನ್ನು ನಿಗ್ರಹಿಸಲು…

Read More

ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಮುರಳಿ ಗೋವಿಂದರಾಜು ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಶಶಿ ನಂಬಿಯಾರ್, ಉಷಾ ನಂಬಿಯಾರ್, ವರುಣ್ ನಂಬಿಯಾರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಡೆತ್ ನೋಟ್ ಬರೆದಿಟ್ಟಿದ್ದಂತ ಮುರಳಿ ಗೋವಿಂದರಾಜು ಎಂಬುವರು, ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. https://kannadanewsnow.com/kannada/the-movement-of-these-trains-on-the-mysore-south-western-railway-division-has-been-cancelled-and-restricted/ https://kannadanewsnow.com/kannada/deputy-lokayukta-justice-veerappa-orders-removal-of-encroachments-on-cauvery-river-banks/

Read More

ಮೈಸೂರು: ಮಾಗಡಿ ರಸ್ತೆಯ ಪ್ರಮುಖ ಅಪಧಮನಿ ರಸ್ತೆಯ ತ್ರಿಪಥ ಜೋಡಣೆಗೆ ಸಂಬಂಧಿಸಿದಂತೆ ಬಿಡಿಎ ಹೆಜ್ಜಾಳ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ತಾತ್ಕಾಲಿಕ ಗಿರ್ಡರ್ ಅಳವಡಿಕೆ ಮತ್ತು ಉಡಾವಣಾ ಕಾರ್ಯಗಳನ್ನು ಸುಗಮಗೊಳಿಸಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಅನ್ನು ಗಮನದಲ್ಲಿಟ್ಟುಕೊಂಡು, ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುತ್ತದೆ, ಭಾಗಶಃ ರದ್ದುಗೊಳಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗುತ್ತದೆ: ರೈಲುಗಳ ರದ್ದತಿ ರೈಲು ಸಂಖ್ಯೆ.66580 ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು, 04.12.2025 ರಂದು ರದ್ದುಗೊಳ್ಳುತ್ತದೆ. ರೈಲು ಸಂಖ್ಯೆ.66579 ಕೆಎಸ್ಆರ್ ಬೆಂಗಳೂರು – ಅಶೋಕಪುರಂ ಮೆಮು, 05.12.2025 ರಂದು ರದ್ದುಗೊಳ್ಳುತ್ತದೆ. ರೈಲು ಸಂಖ್ಯೆ.66554 ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು, 05.12.2025 ರಂದು ಪ್ರಾರಂಭವಾಗುವ ಪ್ರಯಾಣವನ್ನು ಅಶೋಕಪುರಂ ಮತ್ತು ಪಾಂಡವಪುರ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ ಮತ್ತು ಅದು ಅಶೋಕಪುರಂ ಬದಲಿಗೆ ಪಾಂಡವಪುರದಿಂದ ಹೊರಡುತ್ತದೆ. ರೈಲಿನ ನಿಯಂತ್ರಣ ರೈಲು ಸಂಖ್ಯೆ 16021 ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸ್‌ಪ್ರೆಸ್, 04.12.2025 ಮತ್ತು 05.02.2026 ರಂದು ಪ್ರಾರಂಭವಾಗುವ ಪ್ರಯಾಣವನ್ನು ಮಾರ್ಗಮಧ್ಯೆ…

Read More

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಬೆಳಗಾವಿ ಚಳಿಗಾಲದ ಅಧಿವೇಶನ ವರದಿ ಮಾಡಲು ಆಗಮಿಸುವ ಮಾಧ್ಯಮದವರಿಗೆ ಉತ್ತಮ ದರ್ಜೆಯ ವಸತಿ, ಊಟ ಮತ್ತು ಆರೋಗ್ಯ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಶಾಸಕ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಮಂಡಲದ ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ದಿನೇಶ್‌ ಗೂಳಿಗೌಡ ಅವರು, ಕಳೆದ 19 ವರ್ಷಗಳಿಂದ ಬೆಳಗಾವಿ ಅಧಿವೇಶನಕ್ಕಾಗಿ ಬೆಂಗಳೂರಿನಿಂದ ಆಗಮಿಸುತ್ತಿರುವ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. 19 ವರ್ಷದ ಹಳೆಯ ವ್ಯವಸ್ಥೆ ಬದಲಾವಣೆಗೆ ಮನವಿ 2006ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದರೂ, ಇಂದಿಗೂ ಖಡೇ ಬಜಾರ್ ವ್ಯಾಪ್ತಿಯ ಕೀರ್ತಿ, ಶ್ರೀನಿವಾಸ ಸೇರಿದಂತೆ ಇನ್ನಿತರ ಹಳೆಯ ಹೋಟೆಲ್‌ಗಳಲ್ಲೇ ಪತ್ರಕರ್ತರಿಗೆ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಬೆಳಗಾವಿಯಲ್ಲಿ ಉತ್ತಮ ದರ್ಜೆಯ ಹೋಟೆಲ್‌ಗಳು ನಿರ್ಮಾಣವಾಗಿದ್ದರೂ ಹಳೆಯ ಹೋಟೆಲ್‌ಗಳನ್ನೇ ಬಳಸಲಾಗುತ್ತಿದೆ. ಬೆಂಗಳೂರಿನ…

Read More

ಮಂಡ್ಯ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತರಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕೊಪ್ಪದ ಗ್ರಾಪಂ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಹಾಗೂ 140 ಕೋಟಿ ರೂ.ಗಳ ವಿವಿಧ ಕಾಮಗಾರಿಗಳ ಶಂಕು ಸ್ಥಾಪನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಿದಷ್ಟು ಇನ್ಯಾವುದೇ ರಾಜ್ಯಗಳಲ್ಲಿ ನೀಡಿಲ್ಲ ಎಂದು ಹೇಳಿದರು. ಪಂಚ ಗ್ಯಾರಂಟಿಗಳ ಮೂಲಕ ಪ್ರತಿ ತಾಲೂಕಿಗೆ ವಾರ್ಷಿಕ 250 ರೂ.ಕೋಟಿ ಅನುದಾನವನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸಹ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ. ಮುಂದಿನ 2028ರ ಚುನಾವಣೆಯಲ್ಲೂ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದರು. ಕೃಷಿ ಇಲಾಖೆ…

Read More

ಮಂಡ್ಯ : ಮದ್ದೂರು ನಗರದ ಪ್ರವಾಸಿ ಮಂದಿರದ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮಂಗಳವಾರ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸೂಚನೆ ಬೆನ್ನಲ್ಲೆ ಮದ್ದೂರು ಶಾಸಕ ಕೆ.ಎಂ.ಉದಯ್ ಅವರು ಶನಿವಾರ ಸಾರ್ವಜನಿಕರ ಸಭೆಯನ್ನು ಆಯೋಜಿಸಿದ್ದಾರೆ. ಡಿಸೆಂಬರ್ 6 ಶನಿವಾರದಂದು ಮಧ್ಯಾಹ್ನ 3.30 ಗಂಟೆಗೆ ಮದ್ದೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸಭೆ ಕರೆಯಲಾಗಿದ್ದು, ಸಭೆಗೆ ಮದ್ದೂರು ಪೇಟೆಬೀದಿಯ ವರ್ತಕರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡಗಳ ಮಾಲೀಕರು, ನಗರದ ನಾಗರೀಕರು, ಜನಪ್ರತಿನಿಧಿಗಳು ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದ ಆಸಕ್ತ ಸಾರ್ವಜನಿಕರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಶಾಸಕ ಕೆ.ಎಂ.ಉದಯ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/great-news-for-the-states-anganwadi-and-asha-workers-central-government-agrees-to-fulfill-their-demand/ https://kannadanewsnow.com/kannada/deputy-lokayukta-justice-veerappa-orders-removal-of-encroachments-on-cauvery-river-banks/

Read More

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, 9 ಬಿಇಓ ಕಚೇರಿ ಸೇರಿದಂತೆ ಬೆಂಗಳೂರಿನ 12 ಕಡೆಯಲ್ಲಿ ಶಿಕ್ಷಣ ಇಲಾಖೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಿಢೀರ್ ದಾಳಿ ನಡೆಸಿ, ಭ್ರಷ್ಟಾಚಾರ ಕುರಿತಂತೆ ದಾಖಲೆಗಳನ್ನು ಪರಿಶೀಲನೆಯನ್ನು ಲೋಕಾಯುಕ್ತ ಪೊಲೀಸರು ಮಾಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/it-will-now-be-mandatory-to-put-retail-selling-price-on-pan-masala-packs-central-government-orders/ https://kannadanewsnow.com/kannada/deputy-lokayukta-justice-veerappa-orders-removal-of-encroachments-on-cauvery-river-banks/

Read More

ಶಿವಮೊಗ್ಗ: ಸಾಗರದ ಅರಣ್ಯಾಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ, ಶ್ರೀಗಂಧದ ಮರ ಕಡಿಯುತ್ತಿದ್ದ ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ತೆರಳಿ ಮಾಲು ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಸಾಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬರದಳ್ಳಿ ಗ್ರಾಮದ ಸರ್ವೆ ನಂ.70ರಲ್ಲಿ ಶ್ರೀಗಂಧದ ಮರ ಕಡಿತಲೆ ಮಾಡುತ್ತಿದ್ದ ಮಾಹಿತಿಯನ್ನು ಸಾರ್ವಜನಿಕರೊಬ್ಬರು ಅರಣ್ಯ ಇಲಾಖೆಗೆ ನೀಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ ಆರ್ ಎಫ್ ಓ ಅಣ್ಣಪ್ಪ ಅವರು ಡಿಎಫ್ಓ ಮೋಹನ್ ಕುಮಾರ್ ಅವರ ಗಮನಕ್ಕೆ ತಂದಿದ್ದಾರೆ. ಈ ವಿಷಯವನ್ನು ತಿಳಿದಂತ ಡಿಎಫ್ಓ ಮೋಹನ್ ಕುಮಾರ್, ಎಸಿಎಫ್ ರವಿ ಅವರು ಕೂಡಲೇ ಸ್ಥಳಕ್ಕೆ ತೆರಳಿ ಮಾಲು ಸಹಿತ ಆರೋಪಿಯನ್ನು ಬಂಧಿಸುವಂತೆ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಸಾಗರ ವಲಯದ ಆರ್ ಎಫ್ ಓ ಅಣ್ಣಪ್ಪ ಅಂಡ್ ಟೀಂ ಇಂದು ಮಧ್ಯಾಹ್ನ 2 ಗಂಟೆಗೆ ಸ್ಥಳಕ್ಕೆ ತೆರಳಿದೆ. ಶ್ರೀಗಂಧದ ಮರ ಕಡಿತಲೆ ಮಾಡುತ್ತಿದ್ದ ಆರೋಪಿಯನ್ನು ಶ್ರೀಗಂಧದ ಮರದ ತುಂಡುಗಳ ಸಹಿತ ಬಂಧಿಸುವಲ್ಲಿ…

Read More

ನವದೆಹಲಿ: ಜಿಎಸ್‌ಟಿ ಪರಿಹಾರ ಸೆಸ್ ಮುಗಿದ ನಂತರ ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಹೆಚ್ಚಿನ ಅಬಕಾರಿ ಸುಂಕ ವಿಧಿಸುವ ಕಾನೂನನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ. ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ಅನ್ನು ಕೆಳಮನೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು. ಈ ಮಸೂದೆ ಜಾರಿಗೆ ಬಂದ ನಂತರ, ಸಿಗರೇಟ್, ಜಗಿಯುವ ತಂಬಾಕು, ಸಿಗಾರ್, ಹುಕ್ಕಾ, ಜರ್ದಾ ಮತ್ತು ಪರಿಮಳಯುಕ್ತ ತಂಬಾಕಿನಂತಹ ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ ಪ್ರಸ್ತುತ ವಿಧಿಸಲಾಗುತ್ತಿರುವ ಜಿಎಸ್‌ಟಿ ಪರಿಹಾರ ಸೆಸ್ ಅಸ್ತಿತ್ವದಲ್ಲಿಲ್ಲದ ನಂತರ ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲಿನ ಕೇಂದ್ರ ಅಬಕಾರಿ ಸುಂಕದ ದರವನ್ನು ಹೆಚ್ಚಿಸಲು ಸರ್ಕಾರಕ್ಕೆ ಹಣಕಾಸಿನ ಅವಕಾಶ ನೀಡುತ್ತದೆ. ಪ್ರಸ್ತುತ, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಶೇ. 28 ರಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜೊತೆಗೆ ವಿವಿಧ ದರಗಳಲ್ಲಿ ಸೆಸ್ ವಿಧಿಸಲಾಗುತ್ತದೆ. ತಯಾರಿಸದ ತಂಬಾಕಿನ ಮೇಲೆ ಶೇ. 60-70 ರಷ್ಟು ಅಬಕಾರಿ ಸುಂಕವನ್ನು ವಿಧಿಸಲು ಮಸೂದೆ ಪ್ರಸ್ತಾಪಿಸಿದೆ. ಸಿಗಾರ್ ಮತ್ತು…

Read More

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಎಐಸಿಸಿ ಅಧ್ಯಕ್ಷರಿಗಿಂತ ದೊಡ್ಡವರು ಮತ್ತು ಹೈಕಮಾಂಡ್ ಎಂಬುದು ಇದೀಗ ಸ್ಪಷ್ಟಗೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಕಾಂಗ್ರೆಸ್ಸಿನ ಪರಿಸ್ಥಿತಿ; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ವೇಣುಗೋಪಾಲರನ್ನು ಭೇಟಿ ಮಾಡಿದ್ದಾರೆ. ಯಾವುದೋ ಒಬ್ಬ ವ್ಯಕ್ತಿಯ ಕೈಯಲ್ಲಿ ಹೈಕಮಾಂಡಿನ ಶಕ್ತಿ ಇದೆ ಎಂದು ತಿಳಿಸಿದರು. ಕಾಂಗ್ರೆಸ್ ಸರಕಾರದ ಒಳಗೆ ನಡೆದಿರುವ ಗೊಂದಲಕ್ಕೆ ಎಐಸಿಸಿ ಅಧ್ಯಕ್ಷರೇ ಬೆಂಗಳೂರಿಗೆ ಬಂದು 3-4 ದಿನಗಳ ಕಾಲ ಎಲ್ಲರನ್ನೂ ಕರೆದು ಮಾತುಕತೆ ಮಾಡಿದ್ದರು; ಇದನ್ನು ಪರಿಹರಿಸಲು ನನಗೆ ಅಸಾಧ್ಯ; ನನಗೆ ಬಹಳ ಬೇಸರವಾಗಿದೆ. ನಾನು ಇದನ್ನು ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿ ಇಲ್ಲಿಂದ ಹೊರಟುಹೋಗಿದ್ದರು ಎಂದು ವಿವರಿಸಿದರು. ಎಐಸಿಸಿ ಅಧ್ಯಕ್ಷರೇ ಹೈಕಮಾಂಡ್ ಇರುವಾಗ ಇವರು ಯಾಕೆ ಹೀಗೆ ಮಾತನಾಡಿದರೆಂದು ರಾಜ್ಯದ ಜನರಿಗೆ ಗೊಂದಲವಾಗಿತ್ತು ಎಂದರು. ಸಿಎಂ, ಡಿಸಿಎಂ ಪೈಪೋಟಿ- ಸಮಸ್ಯೆ…

Read More