Subscribe to Updates
Get the latest creative news from FooBar about art, design and business.
Author: kannadanewsnow09
ಉತ್ತರ ಪ್ರದೇಶ: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಪಿಕಪ್ ವ್ಯಾನ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವು, 27 ಮಂದಿಗೆ ಗಾಯಗೊಂಡಿರುವಂತ ಘಟನೆ ನಡೆದಿದೆ. ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಪಿಕಪ್ ವ್ಯಾನ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಭಾನುವಾರ ವರದಿ ಮಾಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/important-information-for-school-teachers-revised-schedule-for-state-level-best-teacher-award-announced/ https://kannadanewsnow.com/kannada/breaking-fir-registered-against-accused-for-raping-woman-in-bengaluru-police-launch-massive-search/ https://kannadanewsnow.com/kannada/another-good-news-for-women-govt-to-provide-interest-free-loans-up-to-rs-5-lakh/
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕ್ರಿಯೆ ಕುರಿತಾದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಆಯ್ಕೆ ಸಮಿತಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್-ಲೈನ್ ಪೋರ್ಟಲ್ https://schooleducation.karnataka.gov.in/en ರ ಮೂಲಕ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ವಹಿಸಬೇಕಾದ ಕ್ರಮಗಳ ಕುರಿತು, ಸದರಿ ಪ್ರಕ್ರಿಯೆಗೆ ಸಂಬಂಧಿಸಿದ ವೇಳಾಪಟ್ಟಿಯ ಬಗ್ಗೆ ಹಾಗೂ ಈ ಪ್ರಶಸ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹರು ಮೇಲ್ಕಂಡಂತೆ ಅರ್ಜಿಗಳನ್ನು ಸಲ್ಲಿಸುವುದನ್ನು ಪ್ರೋತ್ಸಾಹಿಸಲು ಇಲಾಖಾಧಿಕಾರಿಗಳು ಜರುಗಿಸಬೇಕಾದ ಕ್ರಮಗಳ ಕುರಿತು ಈಗಾಗಲೇ ವಿಸೃತವಾಗಿ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಈ ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆಯನ್ನು ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕೈಗೊಳ್ಳಲು ಸರ್ಕಾರದ ಪತ್ರಗಳಂತೆ ತಾಲ್ಲೂಕು, ಜಿಲ್ಲಾ…
ಬೆಂಗಳೂರು : “ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆಯ ವಿರುದ್ಧ ಸೋಮವಾರ (ಆ. 19) ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ” ಎಂದರು. “ಪ್ರಕರಣ ಅಲ್ಲದಿದ್ದರೂ ಸಹ ಇದನ್ನು ಬೇಕಂತಲೇ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಮುಖಂಡರಿಗೆ ತಿಳಿಸಿದ್ದೇವೆ. ಕಿಡಿಗೇಡಿಗಳು ಒಳನುಸುಳಿ ಗಲಭೆ ಎಬ್ಬಿಸಿ ಕಲ್ಲು ಎಸೆಯುವ ಕೆಲಸ ಮಾಡಬಹುದು ಇದರ ಬಗ್ಗೆಯೂ ಎಚ್ಚರದಿಂದ ಇರಿ ಎಂದು ಸೂಚನೆ ನೀಡಿದ್ದೇವೆ. ನಮ್ಮದು ಗಾಂಧಿ ಮಾರ್ಗದ ಶಾಂತಿಯುತ ಪ್ರತಿಭಟನೆ” ಎಂದು ಹೇಳಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಭೇಟಿಯ ಬಗ್ಗೆ ಪ್ರಶ್ನಿಸಿದಾಗ “ಪ್ರಸ್ತುತ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಹಾಗೂ ಸಂದರ್ಭದ ಬಗ್ಗೆ ಅವರಿಗೆ ವಿವರಣೆ ನೀಡಿದ್ದೇವೆ” ಎಂದು ತಿಳಿಸಿದರು.…
ಬೆಂಗಳೂರು: ನಾನು ಯಾವ ತಪ್ಪು ಮಾಡಿದ್ದೇನೆ ಅಂತ ರಾಜೀನಾಮೆ ನೀಡಬೇಕು.? ನನ್ನ ವಿರುದ್ಧ ದೂರು ನೀಡಿದಂತ ನಂತ್ರ ತನಿಖೆಯಾಗಿಲ್ಲ, ಅಕ್ರಮದ ಬಗ್ಗೆ ವರದಿಯೂ ಇಲ್ಲ. ಹೀಗಿದ್ದೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿದೆ. ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನ್ಯಾಯ-ಸತ್ಯದ ಪರವಾಗಿ ನಿಂತು ಪ್ರಜಾಪ್ರಭುತ್ವ ಉಳಿವಿನ ಹೋರಾಟಕ್ಕೆ ಗಟ್ಟಿಯಾಗಿ ನಿಂತಿರುವ ಕ್ಯಾಬಿನೆಟ್, ಸಂಸದರು, ರಾಜ್ಯಸಭಾ ಸದಸ್ಯರುಗಳು, ಶಾಸಕರುಗಳು, ಇಡಿ ಪಕ್ಷ, ಹೈ ಕಮಾಂಡ್ ಮತ್ತು ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಧನ್ಯವಾದ ಹೇಳಿದರು. ರಾಜ್ಯಪಾಲರ ತೀರ್ಮಾನ ಅಸಂವಿಧಾನಿಕ, ಕಾನೂನುಬಾಹಿರ ಎಂದು ಸಚಿವ ಸಂಪುಟ ಖಂಡಿಸಿದೆ. ಸಂವಿಧಾನಬಾಹಿರ ಎಂದು ನಿರ್ಧರಿಸಿದೆ. ರಾಜ್ಯಪಾಲರು ರಾಷ್ಟ್ರಪತಿ, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ರಾಜ್ಯಪಾಲರ ಈ ಧೋರಣೆಯನ್ನು ಸಚಿವ ಸಂಪುಟ ತೀವ್ರವಾಗಿ ಖಂಡಿಸಿದೆ ಎಂದರು. *ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ…
ಬೆಂಗಳೂರು: ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ದುರಸ್ಥಿ ಕಾರ್ಯ ಯಶಸ್ವಿಯಾಗಿದೆ. ಸಂಪೂರ್ಣ ಗೇಟ್ ದುರಸ್ಥಿ ಕಾರ್ಯ ನಡೆದು, ಮುಕ್ತಾಯಗೊಂಡಿದೆ. ಹೀಗಾಗಿ ತುಂಗಭದ್ರಾ ಡ್ಯಾಂನಿಂದ ಹೊರ ಹರಿಯುತ್ತಿದ್ದಂತ ನೀರು ಸಂಪೂರ್ಣ ಬಂದ್ ಆಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದಿದ್ದರಿಂದ ಈವರೆಗೆ 35 ಟಿಎಂಸಿ ನೀರು ತುಂಗಭದ್ರಾ ಡ್ಯಾಂನ 19ನೇ ಗೇಟ್ ಕೊಟ್ಟಿ ಹೋಗಿದ್ದರಿಂದ ಹೊರ ಹೋಗಿದೆ. ಆದರೂ 65 ಸಾವಿರ ಕ್ಯೂಸೆಕ್ಟ್ ಒಳ ಹರಿವು ಡ್ಯಾಂಗೆ ಇದೆ. ಹೀಗಾಗಿ ರೈತರ ಬೆಳೆಗಳಿಗೆ ಯಾವುದೇ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದರು. ಇನ್ನೂ ಸತತ ಮೂರು ದಿನಗಳಿಂದ ತುಂಗಭದ್ರಾ ಡ್ಯಾಂನ 19ನೇ ಸಾಪ್ಟ್ ಗೇಟ್ ಅಳವಡಿಕೆ ಕಾರ್ಯದಲ್ಲಿ ತಂತ್ರಜ್ಞರು ತೊಡಗಿದ್ದರು. ಇಂದು ಐದು ಎಲಿಮೆಂಟ್ ಅಳವಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಟಾಪ್ ಲಾಗ್ ಗೇಟ್ ಐದು ಎಲಿಮೆಂಟ್ ಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ತುಂಗಭದ್ರಾ ಡ್ಯಾಂನ…
ಬೆಂಗಳೂರು: ವಿಪಕ್ಷಗಳು ಗ್ಯಾರಂಟಿಗೆ ವಿರುದ್ಧವಾಗಿರುವಂತ, ಪ್ರಧಾನ ಮಂತ್ರಿಗಳೇ ವಿರೋಧ ವ್ಯಕ್ತ ಪಡಿಸಿದ್ದರು. ಅಮಿತ್ ಶಾ ಕೂಡ ವಿರೋಧಿಸಿದ್ದರು. ನಾವು ಬಡವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ನುಡಿದಂತೆ ನಡೆಯುತ್ತಿದ್ದೇವೆ. ಆದರೇ ಬಿಜೆಪಿ-ಜೆಡಿಎಸ್ ಇದಕ್ಕೆ ವಿರೋಧಿಗಳಾಗಿದ್ದಾರೆ. ನನ್ನ ತೇಜೋವಧೆ ಸಾಧ್ಯವಿಲ್ಲ. ಈ ಪ್ರಯತ್ನ ಯಶಸ್ವಿಯಾಗಲ್ಲ. ಯಾಕೆಂದ್ರೆ ಈ ನಾಡಿನ ಜನತೆಯ ಆಶೀರ್ವಾದ ನನಗಿದೆ, ನಮ್ಮ ಪಕ್ಷಕ್ಕಿತೆ. ಈ ಕುಟಿಲ ಪ್ರಯತ್ನ ಭ್ರಮೆಯಾಗಿದೆ. ನಮ್ಮ ಸರ್ಕಾರ 7 ಕೋಟಿ ಕನ್ನಡಿಗರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವಂತದ್ದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಚಿವ ಸಂಪುಟ ಹಾಗೂ ಪಕ್ಷ ಸಾಲಿಡಾರಿಟಿಯನ್ನು ವ್ಯಕ್ತ ಪಡಿಸಿದೆ. ಹೈಕಮಾಂಡ್ ಕೂಡ ನನ್ನ ಜೊತೆಗೆ ಇರ್ತೇವೆ ಎಂದು ದೂರವಾಣಿ ಮೂಲಕ ಮಾತನಾಡಿದ್ದಾರೆ. ಅವರಿಗೆ, ಶಾಸಕ ಮಿತ್ರರಿಗೆ, ಕಾರ್ಯಕರ್ತರಿಗೆ ಎಲ್ಲಾ ಲೋಕಸಭಾ, ರಾಜ್ಯಸಭಾ ಸದಸ್ಯರಿಗೆ ನಾನು ಈ ಸಂದರ್ಭದಲ್ಲಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು. ರಾಜ್ಯಪಾಲರು ತೆಗೆದುಕೊಂಡಿರುವ ತೀರ್ಮಾನ, ನನ್ನನ್ನ ಪ್ರಾಸಿಕ್ಯೂಸ್ ಮಾಡಬೇಕು ಎಂದು ಮುಡಾ…
ಬೆಂಗಳೂರು: ಇಡೀ ಸಚಿವ ಸಂಪುಟ ಸಭೆ ರಾಜ್ಯಪಾಲರ ನಿರ್ಧಾರವನ್ನು ಖಂಡನೆ, ಸಿಎಂ ಬೆಂಬಲಕ್ಕೆ ನಿಲ್ಲಲು ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವುದಿಲ್ಲ. ನೀಡದಂತೆ ಅವರ ಬೆಂಬಲಕ್ಕೆ ಇಡೀ ಸಂಪುಟ ಸಭೆ ನಿಂತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇಂದು ತುರ್ತು ಸಚಿವ ಸಂಪುಟ ಸಭೆಯನ್ನು ನಡೆಸಲಾಯಿತು. ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇದನ್ನು ಖಂಡಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿ ಈ ಅನುಮತಿಯನ್ನು ನೀಡಲಾಗಿದೆ ಎಂದರು. ಇಡೀ ಕ್ಯಾಬಿನೇಟ್ ಮತ್ತು ಪಕ್ಷ ಎರಡು ಸೇರಿ ನಾವೆಲ್ಲ ಒಗ್ಗಟ್ಟಿನಿಂದ ಕರ್ನಾಟಕ ಮುಖ್ಯಮಂತ್ರಿ ಪರವಾಗಿ ಇದ್ದೇವೆ. ನಾವು ಯಾವ ಕಾರಣಕ್ಕೂ, ಯಾವುದೇ ಒತ್ತಡಕ್ಕೆ ಮಣಿದು ರಾಜೀನಾಮೆಯನ್ನು ಕೊಡುವ ಸಂದರ್ಭವಿಲ್ಲ. ಎಐಸಿಸಿಯ ಹೈಕಮಾಂಡ್ ನಿಂದ ಹಿಡಿದು ಕೆಳ ಹಂತದ ಕಾರ್ಯಕರ್ತರು ಕೂಡ ಇದೇ ನಿರ್ಧಾರವನ್ನು ಹೊಂದಿದ್ದಾರೆ ಎಂದರು. https://kannadanewsnow.com/kannada/kpcc-president-dk-shivakumar-orders-protests-at-district-headquarters-across-the-state-on-august-19/ https://kannadanewsnow.com/kannada/foxconn-to-set-up-2nd-largest-iphone-manufacturing-facility-in-karnataka-creates-40000-jobs/
ಕೊಪ್ಪಳ: ಜಿಲ್ಲೆಯ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿತ್ತು. ಆ ಬಳಿಕ ಇಂದು ಕೊಚ್ಚಿ ಹೋಗಿದ್ದಂತ ಗೇಟ್ ಪತ್ತೆ ಕೂಡ ಆಗಿತ್ತು. ಇದರ ನಡುವೆ ಸತತ 3 ದಿನಗಳ ಗೇಟ್ ದುರಸ್ಥಿ ಕಾರ್ಯದರ ಬಳಿಕ ಐದು ಎಲಿಮಂಟ್ ಗೇಟ್ ಗಳನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ಡ್ಯಾಂನಿಂದ ಹೊರ ಬಿಡಲಾಗುತ್ತಿತ್ತು. ಇತರೆ ಗೇಟ್ ಮೇಲಿನ ಒತ್ತಡ ತಡೆಯುವುದಕ್ಕಾಗಿ ಎಲ್ಲಾ ಗೇಟ್ ಗಳನ್ನು ಓಪನ್ ಮಾಡಿ ನದಿಗೆ ನೀರು ಹೊರ ಬಿಡಲಾಗಿತ್ತು. ಸತತ ಮೂರು ದಿನಗಳಿಂದ ಸಾಪ್ಟ್ ಗೇಟ್ ಅಳವಡಿಕೆ ಕಾರ್ಯದಲ್ಲಿ ತಂತ್ರಜ್ಞರು ತೊಡಗಿದ್ದರು. ಇಂದು ಐದು ಎಲಿಮೆಂಟ್ ಅಳವಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಟಾಪ್ ಲಾಗ್ ಗೇಟ್ ಐದು ಎಲಿಮೆಂಟ್ ಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ತುಂಗಭದ್ರಾ ಡ್ಯಾಂನ 19ನೇ ಗೇಟ್ ಸಂಪೂರ್ಣ ದುರಸ್ಥಿ ಕಾರ್ಯ ಮುಕ್ತಾಯಗೊಂಡಿದ್ದು, ಲೀಕೇಜ್ ಬಿಟ್ಟರೇ ಹೊರ ಹರಿವು ಬಹುತೇಕ ಬಂದ್ ಮಾಡುವಲ್ಲಿ ಸಿಬ್ಬಂದಿಗಳು ಇಂದು ಯಶಸ್ವಿಯಾಗಿದ್ದಾರೆ.…
ಬೆಂಗಳೂರು: ಟೊಯೊಟಾ ಕಿರ್ಲೊಸ್ಕರ್ ಮೋಟರ್ಸ್ ಲಿಮಿಟೆಡ್ನ (ಟಿಕೆಎಂಎಲ್) ಇನೊವಾ ಹೈಕ್ರಾಸ್ ಕಾರಿನ ಬೇಡಿಕೆ ಪೂರೈಸಲು ಅಗತ್ಯವಾದ ಬಿಡಿಭಾಗಗಳನ್ನು ತಯಾರಿಸಲು ಬಿಡದಿಯಲ್ಲಿ ₹450 ಕೋಟಿ ವೆಚ್ಚದಲ್ಲಿ ಟೊಯೊಟೆಟ್ಸು ಇಂಡಿಯಾ ಆಟೊ ಪಾರ್ಟ್ಸ್ ಪ್ರೈವೇಟ್ ಲಿಮಿಟೆಡ್ ಘಟಕ ಸ್ಥಾಪಿಸಲು ಶನಿವಾರ ಇಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ₹2,280.52 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಟ್ಟು 20 ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ರಾಜ್ಯದಲ್ಲಿ 3,457 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ʼಸಮಿತಿಯು ಅನುಮೋದಿಸಿದ ಯೋಜನೆಗಳಲ್ಲಿ ಮುಂಬೈನ ಐಎಲ್ವಿ ಸೌತ್ ವೇರ್ಹೌಸಿಂಗ್ ಪಾರ್ಕ್ಸ್ ಪ್ರೈವೇಟ್ ಲಿಮಿಟೆಡ್ನ ₹423 ಕೋಟಿ ಮೊತ್ತದ ಕೈಗಾರಿಕಾ ಪಾರ್ಕ್, ಬೆಳಗಾವಿಯ ಮೃಣಾಲ್ ಷುಗರ್ಸ್ ಲಿಮಿಟೆಡ್ ಧಾರವಾಡ ಜಿಲ್ಲೆಯಲ್ಲಿ ₹386.86 ಕೋಟಿ ವೆಚ್ಚದ ಸಕ್ಕರೆ ಕಾರ್ಖಾನೆ ಸ್ಥಾಪನೆ, ಅಯೊಮಾ ಆಟೊಮೋಟಿವ್ ಫಾಸ್ಟನರ್ಸ್ (ಇಂಡಿಯಾ)…
ಶಿವನ ಅಂಶವೇ ತಿರುನೀರು. ಜೀವನದ ನಿಜವಾದ ಅರ್ಥವನ್ನು ವ್ಯಕ್ತಪಡಿಸುವ ಈ ನಿರಾಭರಣ ಹಣೆಯು ನಿಷ್ಪ್ರಯೋಜಕ ಹಣೆಯಾಗಿದೆ. ಜೀವನದ ನಿಜವಾದ ಅರ್ಥವೆಂದರೆ ನಾವೆಲ್ಲರೂ ಅಂತಿಮವಾಗಿ ಕೈಬೆರಳೆಣಿಕೆಯ ಬೂದಿಯಾಗಿ ಬದಲಾಗುತ್ತೇವೆ. ಅದನ್ನು ಅರಿತುಕೊಳ್ಳಲು ನಾವು ಈ ತಿರುನೀರವನ್ನು ನಮ್ಮ ಹಣೆಯ ಮೇಲೆ ಪ್ರತಿದಿನ ಹಚ್ಚುತ್ತೇವೆ. ನೀರಿಲ್ಲದ ಹಣೆಯು ಕೊಳಕು ಎಂದು ಅವರು ಹೇಳುತ್ತಾರೆ. ಇಷ್ಟೆಲ್ಲಾ ವಿಶೇಷತೆಗಳಿಂದ ಕೂಡಿದ ಶಿವನ ಜಲವನ್ನು ಬಳಸಿ ಇಂದು ಪರಿಹಾರವನ್ನು ನೋಡಲಿದ್ದೇವೆ. ಬಹಳಷ್ಟು ಜನರಲ್ಲಿ ಭಯದ ಸ್ವಭಾವ ಇರುತ್ತದೆ. ಅವರು ಧೈರ್ಯದಿಂದ ವರ್ತಿಸುವುದಿಲ್ಲ. ಜೀವ ಭಯದಲ್ಲಿ ಹಿಂದೆ ಸರಿಯುತ್ತಾರೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ…