Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಮ ಸಂಬಂಧ ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿಯನ್ನು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದರ ವಿಚಾರಣೆ ನಡೆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಹೊಳೆನರಸೀಪುರ ಠಾಣೆಯ ಮೊದಲ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. https://kannadanewsnow.com/kannada/bigg-boss-contestant-varthur-santhosh-faces-another-trouble-complaint-filed-against-him-for-unsafe-animal-trafficking/ https://kannadanewsnow.com/kannada/we-have-information-about-who-shared-prajwals-obscene-video-g-parameshwara/
ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿ, ಸಂಕಷ್ಟಕ್ಕೆ ಸಿಲುಕಿ, ಜೈಲು ಪಾಲಾಗಿದ್ದಂತ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅದೇ ಪ್ರಾಣಿಗಳನ್ನು ಅಸುರಕ್ಷಿತವಾಗಿ ಸಾಗಾಟ ಮಾಡಿದ ಆರೋಪದಲ್ಲಿ ಅಧಿಕಾರಿಯೊಬ್ಬರು ಅವರ ವಿರುದ್ಧ ದೂರು ನೀಡಿದ್ದಾರೆ. ಹೌದು ಬಿಗ್ ಬಾಸ್ ಸೆಲೆಬ್ರೆಟಿ ವರ್ತೂರು ಸಂತೋಷ್ ಅವರು ಪ್ರಾಣಿಗಳ ಸಾಗಾಟ ನಿಯಮವನ್ನು ಮೀರಿ, ಪ್ರಾಣಿಗಳನ್ನು ಅಸುರಕ್ಷಿತವಾಗಿ ಸಾಗಾಟ ಮಾಡಿದ್ದಾರೆ ಅಂತ ಪ್ರಾಣಿ ಕಲ್ಯಾಣಾಧಿಕಾರಿ ಹರೀಶ್ ಎಂಬುವರು ಪೊಲೀಸರಿಗೆ ವರ್ತೂರು ಸಂತೋಷ್ ವಿರುದ್ಧ ದೂರು ನೀಡಿದ್ದಾರೆ. ಪ್ರಾಣಿ ಕಲ್ಯಾಣಾಧಿಕಾರಿ ಹರೀಶ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ವರ್ತೂರು ಠಾಣೆಯ ಪೊಲೀಸರು ವರ್ತೂರು ಸಂತೋಷ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹಳ್ಳಿಕಾರ್ ರೇಸ್ ಮಾಡಲು ಟ್ರಕ್ ಒಂದರಲ್ಲಿ ಒಂಭತ್ತು ಹೋರಿಗಳನ್ನು ತುಂಬಿಕೊಂಡು ಸಾಟ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಟ್ರಕ್ ನಲ್ಲಿ ಕೆಲ ವಸ್ತುಗಳನ್ನು ಸಹ ತುಂಬಲಾಗಿತ್ತು. ಇವುಗಳೊಂದಿಗೆ…
ಬನ್ನೇರುಘಟ್ಟ : ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8 ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್…
ಬನ್ನೇರುಘಟ್ಟ : ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿಂದು ದಕ್ಷಿಣ ಭಾರತದ ಮೊದಲ ಹಾಗೂ ದೇಶದ ಅತಿ ದೊಡ್ಡ ಚಿರತೆ ಸಫಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು. ಸಂದರ್ಶಕರಿಗೊಂದು ಸಸಿ ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಿ, ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಪ್ರೇರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ…
ತುಮಕೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಪ್ರಕರಣ ಎನ್ನುವಂತೆ ಮಕ್ಕಳನ್ನು ಮಾರಾಟ ಮಾಡುತ್ತಿದ್ದಂತ ಗ್ಯಾಂಗ್ ಅನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಆಸ್ಪತ್ರೆಯ ಮ್ಯಾನೇಜರ್, ನರ್ಸ್, ಫಾರ್ಮಸಿಸ್ಟ್ ಗಳೇ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದದ್ದು ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ 6 ಆರೋಪಿಗಳನ್ನು ಗುಬ್ಬಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೌದು ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಅಪಹರಣ, ಮಾರಾಟ ಮಾಡುವಂತ ಗ್ಯಾಂಗ್ ಅನ್ನು ಗುಪ್ಪಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ. 11 ತಿಂಗಳ ರಾಕಿ ಎನ್ನುವಂತ ಮಗುವನ್ನು ಅಪಹರಣದ ಬೆನ್ನತ್ತಿದಂತ ಪೊಲೀಸರಿಗೆ, ಮಕ್ಕಳನ್ನು ಕಿಡ್ನ್ಯಾಪ್ ಮಾಡಿ, ಮಾರಾಟ ಮಾಡುವಂತ ಜಾಲವೇ ಪತ್ತೆಯಾಗಿದೆ. ಒಂದೇ ಗ್ಯಾಂಗ್ ನಿಂದ ಬರೋಬ್ಬರಿ 9 ಮಕ್ಕಳನ್ನು ಮಾರಾಟ ಮಾಡಿರೋದಾಗಿ ತಿಳಿದು ಬಂದಿದೆ. ಮಕ್ಕಳನ್ನು ಮಾರಾಟ ಮಾಡೋದಕ್ಕೆ ಅವಿವಾಹಿತೆಯರನ್ನೇ ಟಾರ್ಗೆಟ್ ಮಾಡಿ, ಅವರನ್ನು ಅಕ್ರಮ ಸಂಬಂಧದ ಮೂಲಕ ಗರ್ಭಧರಿಸುವಂತೆ ಮಾಡುತ್ತಿದ್ದಂತ ಗ್ಯಾಂಗ್ ಅವರಿಗೆ ಹುಟ್ಟಿದಂತ ಮಗುವನ್ನು ಮಕ್ಕಳು ಇಲ್ಲದವರಿಗೆ ಮಾರಾಟ ಮಾಡುತ್ತಿತ್ತಂತೆ. ಸದ್ಯ ಮಾರಾಟ ಮಾಡಲಾಗಿದ್ದಂತ 9 ಮಂದಿಯ ಪೈಕಿ…
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಲಿದೆ. 2028-29 ನೇ ಸಾಲಿನ 05 ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿವಾಗಿ ಚುನಾವಣಾ ಕಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸೇರಿದಂತೆ ಒಟ್ಟು 27 ಅಭ್ಯರ್ಥಿಗಳು ಅಂತಿಮ ಉಳಿದಿದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾರೆಲ್ಲ ಕಣದಲ್ಲಿ ಇದ್ದಾರೆ.? ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಶಿವಮೊಗ್ಗ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ ದುಗ್ಗಪ್ಪಗೌಡ, ಶಿವನಂಜಪ್ಪ.ಜೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಭದ್ರಾವತಿ ತಾಲ್ಲೂಕು ಕ್ಷೇತ್ರದಿಂದ ಹೆಚ್.ಎಲ್. ಷಡಾಕ್ಷರಿ, ಸಿ.ಹನುಮಂತಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ತೀರ್ಥಹಳ್ಳಿ ತಾ. ಕ್ಷೇತ್ರದಿಂದ ಬಸವಾನಿ ವಿಜಯದೇವ್, ಕೆ.ಎಸ್.ಶಿವಕುಮಾರ್, ಪ್ರಾ ಕೃ ಪ ಸ ಸಂಘ ನಿ ಸಾಗರ ತಾಲ್ಲೂಕು ಕ್ಷೇತ್ರದಿಂದ…
ಶಿವಮೊಗ್ಗ: ರಂಗಭೂಮಿ ಎನ್ನುವ ಪದದಲ್ಲಿ ಭೂಮಿ ಎನ್ನುವ ಪದವಿದೆ. ಭೂಮಿ ಎಂದರೆ ಹೆಣ್ಣು, ಫಲವತ್ತತೆ. ಹೀಗಾಗಿ ಹೆಣ್ಣು ರಂಗಭೂಮಿಯ ಅವಿಭಾಜ್ಯ ಅಂಗವೆಂದು ಖ್ಯಾತ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಅಭಿಪ್ರಾಯ ಪಟ್ಟರು. ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಇಂದಿರಾಗಾಂಧಿ ಮಹಿಳಾ ಕಾಲೇಜು ಮತ್ತು ಡಿಜಿಟಲ್ ಮೀಡಿಯಾ ಪ್ರೆಸ್ ಕ್ಲಬ್ ಜಂಟಿಯಾಗಿ ಆಯೋಜಿದ್ದ ರಂಗಭೂಮಿ ಮತ್ತು ಮಹಿಳೆ ಎಂಬ ವಿಶೇಷ ಉಪನ್ಯಾಸ ನೀಡುತ್ತಾ ಹೇಳಿದರು. ಗಂಡಾಳ್ವಿಕೆಯ ನೆಲೆಯಲ್ಲಿ ರಂಗಭೂಮಿ ಚಟುವಟಿಕೆ ನಡೆಯುತ್ತಿದ್ದ ಕಾಲಘಟ್ಟದಲ್ಲಿ ಹಲವು ಮಹಿಳಾ ಹೋರಾಟಗಾರರು, ಬರಹಗಾರರು ಸೌಂದರ್ಯ ಸ್ಪರ್ಧೆಯ ಸಮಯದಲ್ಲಿ ಸಿಡಿದು ವಿರೋಧಿಸಿದರು ಎಂದರು. ರಂಗಭೂಮಿ ಸಾಹಿತ್ಯ, ಪ್ರದರ್ಶನ ಮತ್ತು ತಾಂತ್ರಿಕ ಅಂಶವನ್ನು ಒಳಗೊಂಡಿರುತ್ತದೆ. ಇಲ್ಲಿ ಆಡುವವರು, ನೋಡುವವರು ಇರಬೇಕು. ಕೆಲವು ಮನುಷ್ಯರು ಹಲವು ಮನುಷ್ಯರ ಜೊತೆಗೆ ಮನುಷ್ಯರ ಕಥೆಗಳನ್ನ ಹೇಳುತ್ತಾರೆ. ಇವರು ರಂಗಭೂಮಿ ಜಗತ್ತಿನ ಎಲ್ಲ ಅವಸ್ಥೆಗಳನ್ನು ನೋಡಲು ಇರುವ ಒಂದು ಜಾತ್ಯಾತೀತ ಸ್ಪೇಸ್. ನಾಲ್ಕು ವೇದಗಳು ಜನ ಸಮಾನ್ಯರಿಗೆ ಅರ್ಥವಾಗದೆ ಇರುವ ಕಾರಣಕ್ಕೆ ನಾಟ್ಯವೇದದ ಹುಟ್ಟಿಗೆ ಕಾರಣವಾಯಿತು.…
ನವದೆಹಲಿ: ಇಂದು ಸಿಬಿಐ ಅಧಿಕಾರಿಗಳು ತಿಹಾರ್ ಜೈಲಿನಲ್ಲಿ ಇರುವಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತು. ಆ ಬಳಿಕ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ನಂತ್ರ, ಸಿಬಿಐ ಅಧಿಕಾರಿಗಳು ಸಿಎಂ ಅರವಿದ್ ಕೇಂಜ್ರಿವಾಲ್ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ. ಇಂದು ತಿಹಾರ್ ಜೈಲಿನಿಂದಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವಂತ ಸಿಬಿಐ ಅಧಿಕಾರಿಗಳು, ನಾಳೆ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಅಂದಹಾಗೇ ಈಗಾಗಲೇ ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣ ಸಂಬಂಧ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದಾರೆ. ಇಂದು ಮತ್ತೆ ಸಿಬಿಐ ವಿಚಾರಣೆಯ ನಂತ್ರ, ತಿಹಾರ್ ಜೈಲಿನಿಂದಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1805644274584965497 https://kannadanewsnow.com/kannada/state-government-issues-guidelines-for-transfer-of-government-employees-for-the-year-2024-25/ https://kannadanewsnow.com/kannada/anganwadi-workers-permanent-this-is-congress-govts-6th-guarantee-mla-belur-gopalakrishna/
ಸಿಕ್ಕೀಂ: ಸಿಕ್ಕಿಂನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಭಾರತೀಯ ಫುಟ್ಬಾಲ್ ಐಕಾನ್ ಬೈಚುಂಗ್ ಭುಟಿಯಾ ಮಂಗಳವಾರ ರಾಜಕೀಯವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್ಡಿಎಫ್) ಉಪಾಧ್ಯಕ್ಷ ಬೈಚುಂಗ್ ಅವರು ಬರ್ಫಂಗ್ ಕ್ಷೇತ್ರದಲ್ಲಿ ಎಸ್ಕೆಎಂನ ರಿಕ್ಷಲ್ ದೋರ್ಜಿ ಭುಟಿಯಾ ವಿರುದ್ಧ ಸೋತಿದ್ದಾರೆ. 2014 ರಲ್ಲಿ ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಅವರನ್ನು ಡಾರ್ಜಿಲಿಂಗ್ ಲೋಕಸಭಾ ಸ್ಥಾನಕ್ಕೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದಾಗ ಅವರು ರಾಜಕೀಯಕ್ಕೆ ಸೇರಿದರು. 2018 ರಲ್ಲಿ, ಅವರು ಹಮ್ರೊ ಸಿಕ್ಕಿಂ ಪಕ್ಷವನ್ನು ರಚಿಸುವ ಮೂಲಕ ತಮ್ಮ ರಾಜ್ಯದ ರಾಜಕೀಯ ರಂಗಕ್ಕೆ ಧುಮುಕಿದರು. ಕಳೆದ ವರ್ಷ ಅವರು ತಮ್ಮ ಪಕ್ಷವನ್ನು ಪವನ್ ಚಾಮ್ಲಿಂಗ್ ನೇತೃತ್ವದ ಎಸ್ಡಿಎಫ್ನೊಂದಿಗೆ ವಿಲೀನಗೊಳಿಸಿದ್ದರು. “ಮೊದಲನೆಯದಾಗಿ, ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಪಿಎಸ್ ತಮಾಂಗ್ ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್ಕೆಎಂ) ಅನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಸಿಕ್ಕಿಂನ ಜನರು ಅವರಿಗೆ ಅದ್ಭುತ ಜನಾದೇಶವನ್ನು ನೀಡಿದ್ದಾರೆ ಮತ್ತು ಎಸ್ಕೆಎಂ ಸರ್ಕಾರವು ಅವರ ಭರವಸೆಗಳನ್ನು ಈಡೇರಿಸಲು ಮತ್ತು ಸಿಕ್ಕಿಂ…
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಭೆಯ ನಂತರ ಪ್ರಕಟಿಸಿದರು. “ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡುವ ನಿರ್ಧಾರವನ್ನು ತಿಳಿಸುವ ಮೂಲಕ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದಿದ್ದೇನೆ” ಎಂದು ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ‘ಜೈ ಸಂವಿಧಾನ್’ (ಸಂವಿಧಾನಕ್ಕೆ ಜೈ) ಕರೆ ನೀಡಿದ ರಾಹುಲ್ ಗಾಂಧಿ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂವಿಧಾನದ ಕೈಯಲ್ಲಿ, ಅನೇಕ ವಿರೋಧ ಪಕ್ಷದ ಸಂಸದರು ಸೋಮವಾರ ಲೋಕಸಭೆಗೆ ಮೆರವಣಿಗೆಯೊಂದಿಗೆ ಸಂಸತ್ತಿನಲ್ಲಿ ತಮ್ಮ ಚುನಾವಣಾ ಪುನರುಜ್ಜೀವನದ ಹೇಳಿಕೆಯಲ್ಲಿ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಕೆಳಮನೆಯ ಮೊದಲ ಅಧಿವೇಶನದ ಎರಡನೇ ದಿನವಾದ ಮಂಗಳವಾರ 18 ನೇ ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಪುನರಾರಂಭವಾಯಿತು.…